Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಡಿಜಿಟಲ್ ಡೆಸ್ಕ್: ಫ್ರೆಂಚ್ ಫ್ರೈಸ್ ತಿನ್ನುವುದು ದಿನಕ್ಕೆ 25 ಸಿಗರೇಟ್ ಸೇದುವುದಕ್ಕೆ ಸಮ ಎಂಬುದಾಗಿ ಶಾಂಕಿಂಗ್ ಮಾಹಿತಿಯನ್ನು ಹೃದ್ರೋಗ ತಜ್ಞರು ಹಂಚಿಕೊಂಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಫ್ರೆಂಚ್ ಫ್ರೈಸ್ ವಿಶ್ವದಾದ್ಯಂತ ಅತ್ಯಂತ ಜನಪ್ರಿಯ ಮತ್ತು ಪ್ರೀತಿಯ ತಿಂಡಿಗಳಲ್ಲಿ ಒಂದಾಗಿದೆ. ಬರ್ಗರ್ ಗಳಿಗೆ ಸೈಡ್ ಡಿಶ್ ಆಗಿ ಅಥವಾ ತಮ್ಮದೇ ಆದ ರೀತಿಯಲ್ಲಿ ಆನಂದಿಸಲಿ, ಅವು ಅನೇಕರಿಗೆ ಆರಾಮದಾಯಕ ಆಹಾರವಾಗಿ ಮಾರ್ಪಟ್ಟಿವೆ. ಅವುಗಳ ಗರಿಗರಿಯಾದ ವಿನ್ಯಾಸ ಮತ್ತು ಉಪ್ಪಿನ ರುಚಿ ಅವುಗಳನ್ನು ತಡೆಯಲಾಗದಂತೆ ಮಾಡುತ್ತದೆ. ಆದರೆ ಈ ರುಚಿಕರವಾದ ಔತಣದ ಹಿಂದೆ ಗಂಭೀರ ಆರೋಗ್ಯ ಕಾಳಜಿ ಇದೆ. ಇತ್ತೀಚಿನ ಅಧ್ಯಯನಗಳು ಮತ್ತು ತಜ್ಞರ ಅಭಿಪ್ರಾಯಗಳು ಫ್ರೆಂಚ್ ಫ್ರೈಗಳನ್ನು ಆಗಾಗ್ಗೆ ಸೇವಿಸುವುದರಿಂದ ತೂಕ ಹೆಚ್ಚಾಗುವುದು ಮಾತ್ರವಲ್ಲದೆ ಹೃದಯದ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮಗಳನ್ನು ಬೀರುತ್ತದೆ ಮತ್ತು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಬಹಿರಂಗಪಡಿಸಿದೆ. ಫ್ರೆಂಚ್ ಫ್ರೈಗಳೊಂದಿಗಿನ ಪ್ರಮುಖ ಕಾಳಜಿಯೆಂದರೆ ಅವುಗಳನ್ನು ತಯಾರಿಸುವ ವಿಧಾನ. ಸಾಮಾನ್ಯವಾಗಿ, ಅವುಗಳನ್ನು ಹೆಚ್ಚಿನ ತಾಪಮಾನದಲ್ಲಿ ಎಣ್ಣೆಯಲ್ಲಿ ಡೀಪ್…
ಬೆಂಗಳೂರು: ಬೆಂಗಳೂರಿನ ನಾಗಸಂದ್ರದಿಂದ ಮಾಧವರ ಮೆಟ್ರೋ ನಿಲ್ದಾಣಗಳ ನಡುವೆ ಹೊಸ ಮಾರ್ಗದಲ್ಲಿನ ಸುರಕ್ಷತಾ ಪರಿಶೀಲನೆ ಯಶಸ್ವಿಯಾಗಿದೆ. ಹೀಗಾಗಿ ಶೀಘ್ರವೇ ಈ ಮಾರ್ಗದಲ್ಲೂ ನಮ್ಮ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ. ಇಂದು ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದು 03.10.2024 ರಂದು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (ದಕ್ಷಿಣ ವೃತ್ತ) ಹಾಗೂ ಅವರ ತಂಡ ಇಂದು ನಡೆಸಿದ ನಾಗಸಂದ್ರದಿಂದ ಮಾಧವರ ಮೆಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದ ಶಾಸನಬದ್ಧ ಸುರಕ್ಷತಾ ಪರಿಶೀಲನೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದಿದೆ. https://kannadanewsnow.com/kannada/imd-predicts-widespread-rainfall-in-the-state-till-october-9/ https://kannadanewsnow.com/kannada/breaking-jailed-actor-darshan-has-swelling-in-the-back-of-his-back-doctors-instruct-him-to-undergo-a-scan/
ಬೆಂಗಳೂರು: ರಾಜ್ಯಾಧ್ಯಂತ ನೂರಾರು ಸ್ವಚ್ಛತಾ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಶ್ರೆಯೋಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಅವುಗಳು ಯಾವುವು ಎನ್ನುವ ಬಗ್ಗೆ ಮುಂದಿದೆ ಮಾಹಿತಿ ಓದಿ. ನಗರ, ಗ್ರಾಮಗಳನ್ನು ಸ್ವಚ್ಛಗೊಳಿಸಿ, ಕಸ ವಿಲೇವಾರಿ ಮಾಡುವಲ್ಲಿ ಶ್ರಮಿಸುತ್ತಿರುವ ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಹಾಗೂ ಅವರ ಜೀವನಮಟ್ಟ ಸುಧಾರಿಸಲು ಸರ್ಕಾರವು ಹಲವು ಸೌಲಭ್ಯಗಳನ್ನು ನೀಡಿದೆ. ಸ್ವಚ್ಛತಾ ಕಾರ್ಮಿಕರಿಗಾಗಿ ಸರ್ಕಾರದಿಂದ ರೂಪಿಸಿದಂತ ಯೋಜನೆಗಳ ಪಟ್ಟಿ ಹೀಗಿದೆ ಉಚಿತ ವಿದ್ಯುತ್ ವಸತಿ ಸೌಲಭ್ಯ ಆರೋಗ್ಯ ವಿಮೆ ಅಡುಗೆ ಅನಿಲ ಬ್ಯಾಂಕಿಂಗ್ ಪ್ರತಿರಕ್ಷಣೆ ವೈಯಕ್ತಿಕ ಶೌಚಾಲಯ ಗೃಹ ನಳ ಸಂಪರ್ಕ ಜೀವ ವಿಮೆ ಕ್ರೆಡಿಟ್ ಆಕ್ಸೆಸ್ ಇಂತಹ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದ್ದು, ಸಫಾಯಿ ಕರ್ಮಚಾರಿಗಳ ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆ ಎಂಬುದಾಗಿ ತಿಳಿಸಿದೆ. https://twitter.com/KarnatakaVarthe/status/1841813795355636152 https://kannadanewsnow.com/kannada/imd-predicts-widespread-rainfall-in-the-state-till-october-9/ https://kannadanewsnow.com/kannada/breaking-jailed-actor-darshan-has-swelling-in-the-back-of-his-back-doctors-instruct-him-to-undergo-a-scan/ https://kannadanewsnow.com/kannada/yellow-board-taxi-auto-drivers-in-the-state-applications-invited-for-vidyanidhi-scheme/
ಬೆಂಗಳೂರು: ಅಕ್ಟೋಬರ್.9ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ನೀಡಲಾಗಿದೆ. ಈ ಕುರಿತು ಹವಾಮಾನ ಇಲಾಖೆ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಅಕ್ಟೋಬರ್ 9ರವರೆಗೆ ಕಾರವಾಳಿಯ ಕೆಲ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ಅಕ್ಟೋಬರ್ 4, 5ರಂದು ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳಊರು, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿರುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/yellow-board-taxi-auto-drivers-in-the-state-applications-invited-for-vidyanidhi-scheme/ https://kannadanewsnow.com/kannada/fir-filed-against-union-minister-hd-kumaraswamy/
ಬೆಂಗಳೂರು: ರಾಜ್ಯದಲ್ಲಿನ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಗ್ರಾಮ-ಒನ್, ಕರ್ನಾಟಕ-ಒನ್ ಮೂಲಕ ಸೇವಾ ಸಿಂಧು ವೆಬ್ಸೈಟ್ ಮೂಲಕ ಚಾಲಕರು, ಪೋಷಕರು ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು http://shp.karnataka.gov.in/bcwd ವೆಬ್ಸೈಟ್ ಮೂಲಕ ಅಕ್ಟೋಬರ್ 30, 2024 ರೋಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770004, 8050770005 ಅಥವಾ https://bcwd.Karnataka.gov.in ವೆಬ್ಸೈಟ್ಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ…
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಲ್ಸಿ ರಮೇಶ್ ಗೌಡ ಅವರ ವಿರುದ್ಧ ಉದ್ಯಮಿಯೊಬ್ಬರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಗೆ ತೇರಳಿದ್ದಂತ ಉದ್ಯಮಿ ವಿಜಯ್ ತಾತ ಎಂಬುವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಲ್ಸಿ ರಮೇಶ್ ಗೌಡ ವಿರುದ್ಧ ಜೀವ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಲ್ಸಿ ರಮೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. https://kannadanewsnow.com/kannada/officials-should-respond-to-peoples-aspirations-minister-madhu-s-bangarappa/ https://kannadanewsnow.com/kannada/breaking-jailed-actor-darshan-has-swelling-in-the-back-of-his-back-doctors-instruct-him-to-undergo-a-scan/
ಶಿವಮೊಗ್ಗ : ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು ನಗರ ಪ್ರದೇಶದ ಸಾರ್ವಜನಿಕರಿಗೆ ಅಧಿಕಾರಿಗಳು ಸಕಾಲದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಸಾಗರ ಸಮೀಪದ ತಾಳಗುಪ್ಪದಲ್ಲಿ ಏರ್ಪಡಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಸಮಾನ ದೃಷ್ಟಿಕೋನದಿಂದ ಗಮನಿಸುವುದಾಗಿ ತಿಳಿಸಿದ ಅವರು ತಾಳಗುಪ್ಪ ಹಾಗೂ ಸುತ್ತಮುತ್ತಲ ಗ್ರಾಮೀಣ ಪ್ರದೇಶಗಳ ಜನರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದರು. ಜನರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರ ಬದ್ದವಾಗಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ. ಜನರ ಆಶೋತ್ತರಗಳಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಿ, ಅನುಸ್ತಾನಗೊಳಿಸುತ್ತಿದೆ ಎಂದರು. ಜನಸಾಮಾನ್ಯರಿಗೆ ಸರ್ಕಾರದ ವಿವಿಧ ಇಲಾಖೆಗಳ ಸೌಲಭ್ಯ ನೀಡುವ ಸಂದರ್ಭಗಳಿದ್ದಲ್ಲಿ ಜನಪ್ರತಿನಿದಿಗಳ ಸೂಚನೆಗಾಗಿ ಕಾಯದೆ ಸೌಲಭ್ಯ ಗಳನ್ನು ವಿತರಿಸಿವಂತೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಇನ್ನಷ್ಟು ವೇಗ ಹೆಚ್ಚಿಸುವಂತೆ ಅವರು ಸೂಚಿಸಿದರು. 94ಸಿ…
ಹಾವೇರಿ: ಚಲಿಸುತ್ತಿದ್ದಂತ ಸಾರಿಗೆ ಬಸ್ ನ ಎರಡು ಚಕ್ರಗಳು ಕಳಚಿ ಬಿದ್ದ ಕಾರಣ, ಭಾರೀ ಅನಾಹುತವೇ ಆಗಬೇಕಿದ್ದದ್ದು ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿರುವಂತ ಘಟನೆ ಹಾವೇರಿಯ ನಾಗನೂರಿನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ನಾಗನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಾರಿಗೆ ಬಸ್ಸಿನ ಎರಡು ಚಕ್ರಗಳು ದಿಢೀರ್ ಕಳಚಿ ಬಿದ್ದಿದ್ದಾವೆ. ಈ ಪರಿಣಾಮ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಕೂಡಲೇ ಸಮಯ ಪ್ರಜ್ಞೆಯನ್ನು ಮೆರೆದಂತ ಚಾಲಕ ಬಸ್ ನಿಲ್ಲಿಸಿ, ಮುಂದಾಗಲಿದ್ದಂತ ಭಾರೀ ಅನಾಹುತವನ್ನೇ ತಪ್ಪಿಸಿದ್ದಾರೆ. ಅಂದಹಾಗೇ ಹುಬ್ಬಳ್ಳಿ ಕಡೆಯಿಂದ ಹಾವೇರಿಗೆ ಸಾರಿಗೆ ಬಸ್ ತೆರಳುತ್ತಿತ್ತು. ಈ ವೇಳೆಯಲ್ಲಿ ನಾಗನೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಾರಿಗೆ ಬಸ್ಸಿನ 2 ಚಕ್ರಗಳು ಕಳಚಿ ಬಿದ್ದಿದ್ದವು. ಇದರಲ್ಲಿ 40 ಪ್ರಯಾಣಿಕರಿದ್ದರು. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಈ ಸಂಬಂಧ ಹಾವೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/fir-filed-against-union-minister-hd-kumaraswamy/ https://kannadanewsnow.com/kannada/breaking-jailed-actor-darshan-has-swelling-in-the-back-of-his-back-doctors-instruct-him-to-undergo-a-scan/
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರು ಅಮೃತಹಳ್ಳಿ ಠಾಣೆಯಲ್ಲಿ ಉದ್ಯಮಿಗೆ ಜೀವ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೂ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ತಾತ ಅವರು ದೂರು ನೀಡಿದ್ದಾರೆ. ಈ ದೂರು ಆಧರಿಸಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಸ್ಸಿ ರಮೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ. ದೂರಿನಲ್ಲಿ ಏನಿದೆ.? ಆಗಸ್ಟ್.24, 2024ರಂದು ರಾತ್ರಿ ನನ್ನ ಮನೆಗೆ ರಮೇಶ್ ಗೌಡ ಆಗಮಿಸಿದ್ರು. ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಚರ್ಚಿಸಿದ್ರು. ಊಟ ಕೂಡ ಮಾಡಿದ್ರು. ಈ ವೇಳೆ ಹೆಚ್.ಡಿ ಕುಮಾರಸ್ವಾಮಿಗೆ ಕರೆ ಮಾಡಿ, ತಾನು ವಿಜಯ್ ತಾತ ಮನೆಯಲ್ಲಿ ಇರುವ ಬಗ್ಗೆ ತಿಳಿಸಿ ನನಗೆ ಪೋನ್ ಕೊಟ್ಟರು. ಅವರು ಕುಶಲೋಪರಿ ವಿಚಾರಿಸಿ, ಆ ಬಳಿಕ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ ಬಗ್ಗೆ ಮಾತನಾಡಿದರು.…
ಹರಿಯಾಣ: ಜನವರಿಯಲ್ಲಿ ಬಿಜೆಪಿಗೆ ಸೇರಿದ್ದ ಮಾಜಿ ಲೋಕಸಭಾ ಸಂಸದ ಅಶೋಕ್ ತನ್ವರ್ ಅವರು ಸಾರ್ವತ್ರಿಕ ಚುನಾವಣೆಯಲ್ಲಿ ‘ಕಮಲ’ ಚಿಹ್ನೆಯ ಮೇಲೆ ಸ್ಪರ್ಧಿಸಿ ವಿಫಲರಾಗಿದ್ದರು. ಹರಿಯಾಣದ ಮಹೇಂದ್ರಗಢದಲ್ಲಿ ಇಂದು ನಡೆದ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರ್ಯಾಲಿಯಲ್ಲಿ ತನ್ವರ್ ಮತ್ತೆ ಕಾಂಗ್ರೆಸ್ಗೆ ಸೇರಿದರು. ಸಿರ್ಸಾದ ಮಾಜಿ ಕಾಂಗ್ರೆಸ್ ಸಂಸದರಾಗಿರುವ ತನ್ವರ್ ಅವರು ಪಕ್ಷವನ್ನು ತೊರೆದಾಗ 2014 ರಿಂದ 2019 ರವರೆಗೆ ಹರಿಯಾಣ ಕಾಂಗ್ರೆಸ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. 2021 ರಲ್ಲಿ, ಅವರು ತೃಣಮೂಲ ಕಾಂಗ್ರೆಸ್ಗೆ ಸೇರಿದರು ಮತ್ತು ಮುಂದಿನ ವರ್ಷ ಎಎಪಿಗೆ ಸೇರಿದರು. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿರ್ಧಾರವನ್ನು ವಿರೋಧಿಸಿ ತನ್ವರ್ ಅವರು ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಎಎಪಿಯನ್ನು ತೊರೆದರು. ಎಎಪಿಯಿಂದ ಹೊರಬಂದ ನಂತರ, ಅವರು ಬಿಜೆಪಿಗೆ ಸೇರಿದರು ಮತ್ತು ಶಿರಾದಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದರು ಆದರೆ ಕಾಂಗ್ರೆಸ್ನ ಕುಮಾರಿ ಸೆಲ್ಜಾ ವಿರುದ್ಧ ಸೋತರು. “ಕಾಂಗ್ರೆಸ್ ಯಾವಾಗಲೂ ಸಮಾಜದ ತುಳಿತಕ್ಕೊಳಗಾದ ಮತ್ತು ವಂಚಿತ ವರ್ಗಗಳ ಪರವಾಗಿ…














