Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…
ಬೆಂಗಳೂರು: ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು. ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಸಚಿವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ ಇತ್ಯಾದಿಗಳನ್ನು ತಂಡದ ಸದಸ್ಯರಿಗೆ ವಿವರಿಸಿ, ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಅತ್ಯಂತ ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ತಂಡಕ್ಕೆ ಸಲಹೆ ನೀಡಿದರು. ನಾಳೆಯೂ ಈ ತಂಡ ನೆಲಮಂಗಲ- ಕುಣಿಗಲ್ ರಸ್ತೆಯ ಸ್ಥಳ ಪರಿಶೀಲನೆ ನಡೆಸಲಿದೆ. ಉದ್ದೇಶಿತ ಎರಡನೆಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಮಿಸಲು ಸರಕಾರ ತೀರ್ಮಾನಿಸಿದೆ. ಸ್ಥಳ ಪರಿಶೀಲನೆಯ ಬಳಿಕ ಪ್ರಾಧಿಕಾರದ ಅಭಿಪ್ರಾಯ ಏನೆಂಬುದನ್ನು ತಿಳಿದುಕೊಂಡು, ಅಂತಿಮ ನಿರ್ಧಾರವನ್ನು…
ಬೆಂಗಳೂರು: ನಗರದಲ್ಲಿ ಚಿನ್ನಾಭರಣ, ಬೆಳ್ಳಿಯ ವಸ್ತು, ಕಾರು ಹಾಗೂ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 25 ಗ್ರಾಂ ಚಿನ್ನಾಭರಣ, 124 ಗ್ರಾಂ ಬೆಳ್ಳಿಯ ವಸ್ತುಗಳು, 3 ಕಾರುಗಳು, 6 ದ್ವಿ-ಚಕ್ರ ವಾಹನಗಳು ಹಾಗೂ 6000/-ನಗದು ವಶ, ಒಟ್ಟು ಮೌಲ್ಯ 34.27 ಲಕ್ಷ ಆಗಿದೆ. ಎಸ್.ಜೆ ಪಾರ್ಕ್ ಪೊಲೀಸ್ ಠಾಣಾ ಸರಹದ್ದಿನ, ಎಸ್.ಜೆ.ಪಿ ರಸ್ತೆಯ ಶಾಂತಪ್ಪ ಲೇನ್ನಲ್ಲಿ ಪಿರಾದುದಾರರು ಹಾರ್ಡ್ವೇರ್ ಅಂಗಡಿಯೊಂದನ್ನು ಇಟ್ಟುಕೊಂಡಿದ್ದರು. ಪಿರಾದುದಾರರು ದಿನಾಂಕ:11/03/2025 ರಂದು ಎಸ್.ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:10/03/2025 ರಂದು ರಾತ್ರಿ ಅಂಗಡಿಗೆ ಬೀಗ ಹಾಕಿಕೊಂಡು ಮನೆಗೆ ಹೋಗಿರುತ್ತಾರೆ. ಮಾರನೇಯ ದಿನ, ದಿನಾಂಕ:11/03/2025 ರಂದು ಬೆಳಿಗ್ಗೆ ಬಂದು ನೋಡಲಾಗಿ ಅಂಗಡಿಯ ಬಾಗಿಲ ಬೀಗ ಮುರಿದಿರುವುದು ಕಂಡು ಬಂದಿರುತ್ತದೆ. ಅಂಗಡಿಯ ಒಳಗೆ ಹೋಗಿ ನೋಡಲಾಗಿ, ವ್ಯಾಪಾರ ಮಾಡಿ ಡ್ರಾಯರ್ನಲ್ಲಿಟ್ಟಿದ್ದ 7000/-ನಗದನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಎಸ್.ಜೆ.ಪಾರ್ಕ್ ಪೊಲೀಸ್…
ಉತ್ತರ ಕನ್ನಡ: ಜಿಲ್ಲೆಯಲ ಮನೆಯೊಂದರಲ್ಲಿ 500 ರೂಪಾಯಿ ಮುಖಬೆಲೆಯ ಬರೋಬ್ಬರಿ 14 ಕೋಟಿ ನಕಲಿ ನೋಟು ಪತ್ತೆಯಾಗಿದೆ. ಈ ನಕಲಿ ನೋಟುಗಳನ್ನು ಕಂಡಂತ ಪೊಲೀಸರೇ ಶಾಕ್ ಆಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬುವರ ಮನೆಯಲ್ಲಿ 500 ರೂ ಮೌಲ್ಯದ 14 ಕೋಟಿ ನಕಲಿ ನೋಟುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬುವರ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ 14 ಕೋಟಿ ಮೌಲ್ಯದ ನಕಲಿ ನೋಟು ಪತ್ತೆಯಾಗಿದ್ದಾವೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವಂತ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/woman-arrested-for-stealing-diamonds-jewellery-diamonds-worth-rs-10-lakh/ https://kannadanewsnow.com/kannada/the-health-department-has-released-shocking-information-about-the-quality-of-medicines-being-sold-in-the-state/ https://kannadanewsnow.com/kannada/2nd-puc-exam-2-schedule-announced-heres-what-you-need-to-know/
ಬೆಂಗಳೂರು: ಮನೆಗೆಲಸ ಮಾಡುತ್ತಿದ್ದಂತ ಮನೆಯಲ್ಲಿ ವಜ್ರ, ಚಿನ್ನಾಭರಣ ಕಳವು ಮಾಡಿದಂತ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 10 ಲಕ್ಷ ಮೌಲ್ಯದ 128 ಗ್ರಾಂ ಚಿನ್ನಾಭರಣ, ವಜ್ರವನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದು, ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣಾ ಸರಹದ್ದಿನ ವೆಂಕಟೇಶ್ವರ ಲೇಔಟ್ನಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:25/03/2025 ರಂದು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:13/03/2025 ರಂದು ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಓರ್ವ ಮಹಿಳೆಯನ್ನು ಮನೆಕೆಲಸಕ್ಕೆಂದು ನೇಮಕ ಮಾಡಿಕೊಂಡಿದ್ದು, ಮನೆ ಕೆಲಸದಾಕೆಯು ದಿನಾಂಕ:15/03/2025 ರಂದು ಪಿರಾದುದಾರರ ಮನೆಯ ಬೀರುವಿನಲ್ಲಿಟ್ಟಿದ್ದ 128 ಗ್ರಾಂ ಚಿನ್ನಾಭರಣಗಳು ಮತ್ತು ವಜ್ರದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ ಎಂದಿದೆ. ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ದಿನಾಂಕ:25/03/2025 ರಂದು ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಮನೆಕೆಲಸದಾಕೆಯು ವಾಸವಿರುವ ಮನೆಯಲ್ಲಿ ನೋಟೀಸ್…
ಅಯೋಧ್ಯೆ: ಮಂಗಳವಾರ ಮಧ್ಯಾಹ್ನ ರೈಲ್ವೆ ಇಲಾಖೆಗೆ ಬಾಂಬ್ ಬೆದರಿಕೆ ಬಂದ ನಂತರ ಜೌನ್ಪುರದಿಂದ ಅಯೋಧ್ಯೆಗೆ ತೆರಳುತ್ತಿದ್ದ ರೈಲಿನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ಜೌನ್ಪುರ-ಅಯೋಧ್ಯಾ ಕ್ಯಾಂಟ್ ಸೂಪರ್ಫಾಸ್ಟ್ ರೈಲಿಗೆ ಬಾಂಬ್ ಬೆದರಿಕೆ ಬಂದಿದ್ದು, ಇದರಿಂದಾಗಿ ರೈಲು ಜಂಗ್ಘೈ ನಿಲ್ದಾಣದಲ್ಲಿ ಸ್ಥಗಿತಗೊಂಡಿತು. ವರದಿಗಳ ಪ್ರಕಾರ, ಅಪರಿಚಿತ ವ್ಯಕ್ತಿ ಕರೆ ಮಾಡಿ, ರೈಲಿನಲ್ಲಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ತಿಳಿಸಿದ್ದನು. ಹೀಗಾಗಿ ಕೆಲ ಕಾಲ ಆತಂಕಕ್ಕೂ ಕಾರಣವಾಗಿತ್ತು. ರೈಲ್ವೆ ಅಧಿಕಾರಿಗಳು ಮತ್ತು ಬಾಂಬ್ ಸ್ಕ್ವಾಡ್ ತನಿಖೆಗಾಗಿ ಸ್ಥಳಕ್ಕೆ ಧಾವಿಸಿದರು. ರೈಲು ಈಗಾಗಲೇ ಜೌನ್ಪುರ ನಿಲ್ದಾಣದಿಂದ ಹೊರಟಿದ್ದರಿಂದ, ಅಧಿಕಾರಿಗಳು ತ್ವರಿತವಾಗಿ ಜಂಗ್ಘೈ ನಿಲ್ದಾಣಕ್ಕೆ ಮಾಹಿತಿಯನ್ನು ರವಾನಿಸಿದರು. ಅಲ್ಲಿ ರೈಲು ನಿಲ್ಲಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 10ನೇ ಕೋಚ್ ಅನ್ನು ಸ್ಥಳಾಂತರಿಸಲಾಯಿತು ಮತ್ತು ಪ್ರಯಾಗ್ರಾಜ್ನಿಂದ ಬಾಂಬ್ ಸ್ಕ್ವಾಡ್ಗೆ ಎಚ್ಚರಿಕೆ ನೀಡಲಾಯಿತು. ತಂಡವು ಸುಮಾರು ನಾಲ್ಕು ಗಂಟೆಗಳ ಕಾಲ ರೈಲಿನ ಸಂಪೂರ್ಣ ಶೋಧ ನಡೆಸಿತು. ಅಧಿಕಾರಿಗಳ ಪ್ರಕಾರ, ಹುಡುಕಾಟದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಸಿಗಲಿಲ್ಲ ಮತ್ತು ಅಂತಿಮವಾಗಿ ರೈಲನ್ನು…
ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆ, 2025 ಅಧಿಕೃತವಾಗಿ ಏಪ್ರಿಲ್ 8, 2025 ರಿಂದ ಜಾರಿಗೆ ಬಂದಿದೆ. ದಿ ಗೆಜೆಟ್ ಆಫ್ ಇಂಡಿಯಾದಲ್ಲಿ ಪ್ರಕಟವಾದ ಅಧಿಸೂಚನೆಯ ಮೂಲಕ ಕೇಂದ್ರ ಸರ್ಕಾರವು ಈ ಕಾಯ್ದೆಯನ್ನು ಔಪಚಾರಿಕಗೊಳಿಸಿತು. “ವಕ್ಫ್ (ತಿದ್ದುಪಡಿ) ಕಾಯ್ದೆ, 2025 (2025 ರ 14) ರ ಸೆಕ್ಷನ್ 1 ರ ಉಪ-ವಿಭಾಗ (2) ರ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಲು, ಕೇಂದ್ರ ಸರ್ಕಾರವು ಈ ಮೂಲಕ 2025 ರ ಏಪ್ರಿಲ್ 8 ನೇ ದಿನವನ್ನು ಸದರಿ ಕಾಯ್ದೆಯ ನಿಬಂಧನೆಗಳು ಜಾರಿಗೆ ಬರುತ್ತಿವೆ ಎಂದು ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. https://twitter.com/PTI_News/status/1909594964633256220 2025 ರ ವಕ್ಫ್ (ತಿದ್ದುಪಡಿ) ಕಾಯ್ದೆಗೆ ರಾಷ್ಟ್ರಪತಿ ಮತ್ತು ಸಂಸತ್ತಿನ ಒಪ್ಪಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಯ ಕೆಲವು ದಿನಗಳ ನಂತರ ಮತ್ತು ಸಂಸತ್ತು ಅಂಗೀಕರಿಸಿದ ನಂತರ ಇದು ಬಂದಿದೆ. ಮಸೂದೆಯು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮೂರು ದಿನಗಳ ಕಾಲ ತೀವ್ರ ಚರ್ಚೆಗೆ ಒಳಗಾಯಿತು ಮತ್ತು ಅನುಮೋದನೆ ಪಡೆಯಿತು. ಆದಾಗ್ಯೂ, ಹೊಸ…
ಶಿವಮೊಗ್ಗ: ರೈತರೊಬ್ಬರಿಂದ ಜಮೀನು ಸಮತಟ್ಟು ಮಾಡೋದಕ್ಕೆ ಅನುಮತಿ ನೀಡಲು 3000 ಲಂಚ ಸ್ವೀಕರಿಸುತ್ತಿದಾಗಲೇ ತಾಳಗುಪ್ಪ ಆರ್ ಐ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಹಿಡಿದಿದ್ದಾರೆ. ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದಾರೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ತಾಳಗುಪ್ಪ ಹೋಬಳಿಯ ಶಿರೂರು ಗ್ರಾಮದ ಮುಂಡಿಗೆಹಳ್ಳಿಯ ರೈತ ಹೆಚ್.ಎಸ್ ಕೃಷ್ಣಮೂರ್ತಿ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಈ ದೂರಿನಲ್ಲಿ ತಮ್ಮ ಶಿರೂರು ಗ್ರಾಮದ ಸರ್ವೆ ನಂಬರ್.125ರಲ್ಲಿ ತಗ್ಗು ಉಬ್ಬುಗಳಿಂದ ಕೂಡಿದ್ದಂತ ಎರಡು ಎಕರೆ ಜಮೀನಿನನ್ನು ಸಮತಟ್ಟ ಮಾಡುತ್ತಿದ್ದಾಗ, ಆರ್.ಐ ಮಂಜುನಾಥ್ ಸ್ಥಳಕ್ಕೆ ಬಂದು ಕೆಲಸ ನಿಲ್ಲಿಸುವಂತೆ ಒತ್ತಾಯಿಸಿದರು. ಅಲ್ಲದೇ ಲಂಚದ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾಗಿ ತಿಳಿಸಿದ್ದಾರೆ. ದಿನಾಂಕ 20-03-2025ರಂದು ಆರ್ ಐ ಮಂಜುನಾಥ್ ಅವರಿಗೆ ಲಂಚದ ಹಣವಾಗಿ ಪೋನ್ ಪೇ ಮೂಲಕ ರೂ.2500, ದಿನಾಂಕ 02-04-2025ರಂದು 500 ಹಣವನ್ನು ಪಡೆದಿರುತ್ತಾರೆ. ಮತ್ತೆ ರೂ.3000 ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಅವರ ವಿರುದ್ಧ ಕ್ರಮ…
ಬೆಂಗಳೂರು: ಏಪ್ರಿಲ್.10, 2025ರಂದು ಮಹಾವೀರ ಜಯಂತಿಯ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಈ ಕುರಿತಂತೆ ಬಿಬಿಎಂಪಿಯ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ: 10-04-2025 ಗುರುವಾರದಂದು “ಮಹಾವೀರ ಜಯಂತಿ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/people-are-talking-about-slapping-cm-siddaramaiah-by-vijayendra/ https://kannadanewsnow.com/kannada/the-health-department-has-released-shocking-information-about-the-quality-of-medicines-being-sold-in-the-state/
ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು 20 ತಿಂಗಳಾಗಿದೆ. 50 ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮಾಡಿರುವ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ ಮಾಡಬೇಕೆಂದು ರಾಜ್ಯದ ಜನತೆ ಚರ್ಚೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ಜನಾಕ್ರೋಶ ಯಾತ್ರೆಯ ಎರಡನೇ ದಿನವಾದ ಇಂದು ಇಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದ ಕೇಂದ್ರ ಸರಕಾರಕ್ಕೆ ಕಪಾಳಮೋಕ್ಷ ಮಾಡಬೇಕೆಂದು ದುರಹಂಕಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೆ ಕೊಟ್ಟಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಜನವಿರೋಧಿ ಕಾಂಗ್ರೆಸ್ಸಿಗರು, ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ ಮಾಡಬೇಕೇ? ಕೇಂದ್ರದಲ್ಲಿ ಮೂರನೇ ಬಾರಿಗೆ ಸರಕಾರ ಬಂದು, ಬಡವರಿಗೆ ಉಜ್ವಲ ಸೇರಿ ಅನೇಕ ಜನಪರ ಯೋಜನೆಗಳನ್ನು ಕೊಟ್ಟಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಸರಕಾರಕ್ಕೆ ಕಪಾಳಮೋಕ್ಷ ಮಾಡಬೇಕೇ ಎಂದು ಅವರು ಪ್ರಶ್ನೆಯನ್ನು ಮುಂದಿಟ್ಟರು. ನಮ್ಮ ನೀರು ನಮ್ಮ ಹಕ್ಕು ಎಂದು ಮೊಸಳೆಕಣ್ಣೀರು ಸುರಿಸಿ ಪಾದಯಾತ್ರೆ ಮಾಡಿ ನಿಮ್ಮ ಮತ ಪಡೆದು ಅಧಿಕಾರಕ್ಕೆ ಬಂದ…













