Subscribe to Updates
Get the latest creative news from FooBar about art, design and business.
Author: kannadanewsnow09
ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾಗಿರುವಂತ ನಂದಿನಿ ಗಿರಿಧಾಮವನ್ನು ಹೊಸ ವರ್ಷದಂದು ಬಂದ್ ಮಾಡಲಾಗುತ್ತಿದೆ. ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಡಿಸಿ, ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಡಿಸೆಂಬರ್.31ರ ಸಂಜೆ 6ರಿಂದ ಜನವರಿ 1ರ ಬೆಳಿಗ್ಗೆ 7 ಗಂಟೆಯವರೆಗೆ ಪ್ರವಾಸಿಗರು, ಸಾರ್ವಜನಿಕರ ಪ್ರವೇಶಕ್ಕೆ ನಂದಿನಿ ಗಿರಿಧಾಮಕ್ಕೆ ಪ್ರವೇಶ ನಿಷೇಧಿಸಲಾಗಿದೆ ಎಂದಿದ್ದಾರೆ. ಇನ್ನೂ ನಂದಿಗಿರಿಧಾಮದ ಮೇಲಿರುವಂತ ಅತಿಥಿ ಗೃಹಗಳ ಬುಕ್ಕಿಂಕ್ ಕೂಡ ರದ್ದುಗೊಳಿಸಲಾಗಿದೆ. ನಂದಿ ಗಿರಿಧಾಮದ ಅತಿಥಿ ಗೃಹಗಳಿಗೆ ಬುಕ್ಕಿಂಗ್ ಅನ್ನು ಜನವರಿ.1ರಂದು ಬೆಳಿಗ್ಗೆ 7ರ ನಂತ್ರವೇ ಅವಕಾಶ ನೀಡಲಾಗಿದೆ. ಅಲ್ಲಿಯವರೆಗೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. https://kannadanewsnow.com/kannada/good-news-for-those-who-were-expecting-to-open-a-new-pu-college-in-the-state-applications-invited/ https://kannadanewsnow.com/kannada/arent-andolana-seers-veerashaiva-lingayats-asked-samaj-leader-rajkumar-patil-telkur/
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಹೊಸದಾಗಿ ಪಿಯು ಕಾಲೇಜು ತೆರೆಯಲು ಇಚ್ಚೆ ಇದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪದವಿ ಪೂರ್ವದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿಯಮಗಳು 2024ರ ನಿಯಮ 5 ರನ್ವಯ 2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ/ಟ್ರಸ್ಟಕಂಪನಿ/ non-profit motive limited-liability partnership ರವರುಗಳು ಅರ್ಜಿಗಳನ್ನು ಆನ್-ಲೈನ್ (online)ಮೂಲಕ “ಅರ್ಜಿ ನಮೂನೆ” (Form-1 ಮತ್ತು Form-lll) ರಲ್ಲಿ ದಿನಾಂಕ:30-12-2024 ಸಂಜೆ 05:00 ರಿಂದ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಇಲಾಖೆಯ ವೆಬ್ಸೈಟ್ https://pue.karnataka.gov.in/ ಇಲ್ಲಿಗೆ ಭೇಟಿ ನೀಡಿ ಪಡೆಯಬಹುದಾಗಿದೆ. 2023-24 ಮತ್ತು 2024-25ನೇ ಶೈಕ್ಷಣಿಕ…
ಕಲಬುರಗಿ: ಕೊಲೆ ಬೆದರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಪಾಂಚಾಳ್ ಅವರ ಡೆತ್ ನೋಟನಲ್ಲಿ ವಿರಶೈವ ಲಿಂಗಾಯತ ಸಮಾಜದ ಆದೋಲ ಶ್ರೀಗಳಿಗೆ ಜೀವ ಬೆದರಿಕೆ ಇದೆ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಜೀವ ಬೇದರಿಕೆ ಇರುವ ಆಂದೋಲ ಶ್ರೀಗಳು ವೀರಶೈವ ಲಿಂಗಾಯತ ಸಮಾಜದರು ಇದಾರೋ ಏನು ಇಲವೂ? ಎಂನ್ನೂವುದು ವಿರಶೈವ ಮಹಾಸಭೆ ಉತ್ತರಿಸಬೇಕು ಎಂದು ಮಾಜಿ ಶಾಸಕ ಹಾಗೂ ಸಮಾಜದ ಮುಖಂಡ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ವಿರಶೈವ ಲಿಂಗಾಯತ ಸಮಾಜದ ಮುಖಂಡರಾದ ಚಂದು ಪಾಟೀಲರಿಗೆ ಜೀವ ಬೆದರಿಕೆ ಇರುವ ಕಾರಣ ವಿರಶೈವ ಲಿಂಗಾಯತ ಮಹಾಸಬೆ ಅವರಿಗೆ ಸೂಕ್ತ ಬದ್ರತೆ ನಿಡಲು ಮನವಿ ಮಾಡಿರುವುದು ಸ್ವಾಗತಾರ್ಹ ಧನ್ಯವಾದಗಳು ಇದು ಸಮಾಜದ ಸಂಘಟನೆಯ ಕೆಲಸ ಕೂಡ ಹೌದು, ಆದರೆ ಅವರ ಜೊತೆಗೆ ಬೆದರಿಕೆ ಇರುವ ಆಂದೋಲಾ ಶ್ರೀಗಳಿಗೂ ಭದ್ರತೆ ನೀಡಲು ಮನವಿ ಮಾಡಬೇಕಿತ್ತು ಯಾಕೆ ಮಾಡಿಲ್ಲಾ ತಿಳಿಯುತ್ತಿಲ್ಲಾ ಮಹಾಸಬೆಯವರಿಗೆ ಈ ವಿಷಯ ಗೋತ್ತಿಲ್ವಾ ಅಥವಾ…
ಬೆಂಗಳೂರು: ದಿನಾಂಕ 01.01.2025 ರಿಂದ ಜಾರಿಗೆ ಬರುವಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಕೆಲವು ರೈಲ್ವೆ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ಆ ಬದಲಾವಣೆಯ ನೂತನ ಟೈಂ ಟೇಬಲ್ ಈ ಕೆಳಗಿನಂತಿದೆ. ಹೊಸ ರೈಲ್ವೆ ವೇಳಾಪಟ್ಟಿ 01.01.2025 ರಿಂದ ಜಾರಿಗೆ ಬಂದಿದ್ದೂ, ಭಾರತೀಯ ರೈಲ್ವೆಯಾದ್ಯಂತ ಮೈಸೂರು ಮತ್ತು ಇತರ ನಿಲ್ದಾಣಗಳಿಂದ ಹೊರಡುವ/ಆಗಮಿಸುವ ಹಲವಾರು ರೈಲುಗಳ ಆಗಮನ ಮತ್ತು ನಿರ್ಗಮನ ಸಮಯವನ್ನು ಪರಿಷ್ಕರಿಸಲಾಗಿದೆ. ಎಲ್ಲಾ ಪ್ರಯಾಣಿಕರು ರೈಲು ಪ್ರಯಾಣವನ್ನು ಪ್ರಾರಂಭಿಸುವ ಮೊದಲು ಈ ಕೆಳಗೆ ನೀಡಿರುವ ‘ವೆಬ್ ಸೈಟ್ ಲಿಂಕ್’ನ ಸಹಾಯದಿಂದ ಹೊಸ ರೈಲು ವೇಳಾಪಟ್ಟಿಯನ್ನು ದಯಮಾಡಿ ಪರಿಶೀಲಿಸಲು ವಿನಂತಿಸಲಾಗಿದೆ. 01.01.2025 ರಿಂದ ಮೈಸೂರು ಮತ್ತು ಇತರ ನಿಲ್ದಾಣಗಳಿಗೆ ನಿರ್ಗಮಿಸುವ ಮತ್ತು ಆಗಮಿಸುವ ರೈಲುಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುವ ರೈಲುಗಳ ಪಟ್ಟಿಯನ್ನು ಪ್ರಯಾಣಿಸುವ ಯಾತ್ರಿಕರ ಮಾಹಿತಿಗಾಗಿ ಈ ಕೆಳಗೆ ಪಟ್ಟಿ ಮಾಡಲಾಗಿದೆ. 1. ಮೈಸೂರಿನಿಂದ ಸಾಯಿನಗರ ಶಿರಡಿಗೆ ಹೊರಡುವ ರೈಲು ಸಂಖ್ಯೆ 16217 ದಿನಾಂಕ 06.01.2025 ರಿಂದ ಬೆಳಿಗ್ಗೆ 05:00 ಗಂಟೆಗೆ ಮೈಸೂರಿನಿಂದ ಹೊರಡಲಿದೆ. 2.…
ಧಾರವಾಡ: ಜಿಲ್ಲೆಯಲ್ಲಿ ಕಬ್ಬು ಕಟಾವು ವಿಚಾರಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಈ ಮಾರಾಮಾರಿಯಲ್ಲಿ ಜಗಳ ಬಿಡಿಸಲು ಹೋದಂತ ಓರ್ವ ಮಹಿಳೆಯನ್ನೇ ಕೊಲೆ ಮಾಡಲಾಗಿದೆ. ಧಾರವಾಡದ ಕಲಘಟಗಿ ತಾಲ್ಲೂಕಿನ ಕರುವಿನಕೊಪ್ಪದಲ್ಲಿ ಕಬ್ಬು ಕಟಾವು ವಿಚಾರಕ್ಕೆ ಎರುಡ ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಈ ಸಂದರ್ಭದಲ್ಲಿ ಅಲ್ಲೇ ಇದ್ದಂತ ಅನುಸೂಯ(40) ಎಂಬ ಮಹಿಳೆ ಜಗಳ ಬಿಡಿಸೋದಕ್ಕೆ ತೆರಳಿದ್ದಾರೆ. ಆದರೇ ಆಕೆಯನ್ನು ಕೊಲೆ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇದಲ್ಲದೇ ಸಚಿನ್ ಪಾಟೀಲ್, ಬಸವರಾಜ, ಮೈಲಾರಪ್ಪ ಎಂಬುವರು ಈ ಮಾರಾಮಾರಿಯಲ್ಲಿ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/murdeshwar-beach-open-for-tourists-for-new-year-dc/ https://kannadanewsnow.com/kannada/bigg-news-here-is-the-complete-list-of-state-general-holiday-days-for-the-year-2025-holiday-list-2025/
ಬೆಂಗಳೂರು: ವರಾಹಿ ಜ್ಯುವೆಲ್ಲರ್ ಮಾಲಕಿ ವನಿತಾಗೆ ವಂಚನೆ ಆರೋಪದ ಪ್ರಕರಣದಲ್ಲಿ ಆರೋಪಿ ಐಶ್ವರ್ಯ ಹಾಗೂ ಪತಿ ಹರೀಶ್ ಅವರಿಗೆ ಜನವರಿ 6ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಈ ಪ್ರಕರಣ ಸಂಬಂಧ ಬೆಂಗಳೂರಿನ 4ನೇ ಎಸಿಎಂಎಂ ನ್ಯಾಯಾಲಯವು ವಿಚಾರಣೆ ನಡೆಸಿತು. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಲು ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಈ ಹಿನ್ನಲೆಯಲ್ಲಿ ವಂಚಕಿ ಐಶ್ವರ್ಯ ಹಾಗೂ ಅವರ ಪತಿ ಹರೀಶ್ ಗೆ ಜನವರಿ 6ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಅಂದಹಾಗೇ ವರಾಹಿ ಜ್ಯುವೆಲ್ಲರಿ ಮಾಲಕಿ ವನಿತಾ ಅವರು ವಂಚನೆ ಪ್ರಕರಣವನ್ನು ದಾಖಲಿಸಿದ್ದರು. ಈ ಸಂಬಂಧ ಚಂದ್ರಾಲೇಔಟ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇಬ್ಬರು ಆರೋಪಿಗಳನ್ನು ಚಂದ್ರಾಲೇಔಟ್ ಠಾಣೆಯ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಇಂದು ಇಬ್ಬರಿಗೆ ಜನವರಿ.6ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. https://kannadanewsnow.com/kannada/217-mothers-died-in-four-months-in-karnataka-report/ https://kannadanewsnow.com/kannada/murdeshwar-beach-open-for-tourists-for-new-year-dc/
ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾಗಿರುವಂತ ಮುರುಡೇಶ್ವರ ಬೀಚ್ ಗೆ ಹೊಸ ವರ್ಷದಿಂದ ತೆರೆಯಲಾಗುತ್ತಿದೆ. ಪ್ರವಾಸಿಗರಿಗೆ ವಿಧಿಸಿದ್ದಂತ ನಿರ್ಬಂಧವನ್ನು ತೆರವುಗೊಳಿಸುತ್ತಿರುವುದಾಗಿ ಡಿಸಿ ಲಕ್ಷ್ಮೀ ಪ್ರಿಯಾ ತಿಳಿಸಿದ್ದಾರೆ. ಇಂದು ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹೊಸ ವರ್ಷಕ್ಕೆ ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಕಡಿಮೆ ಸ್ಥಳದಲ್ಲಿ ನಾವು ಸ್ವಿಮ್ಮಿಂಗ್ ಜೋನ್ ಮಾಡಿದ್ದೇವೆ. ನಾಳೆಯಿಂದ ಎಷ್ಟು ಜನ ಬರ್ತಾರೆಂದು ನೋಡಿ ವಿಸ್ತರಣೆ ಮಾಡುತ್ತೇವೆ. ಸ್ವಿಮ್ಮಿಂಗ್ ಜೋನ್ ಮತ್ತಷ್ಟು ವಿಸ್ತರಣೆ ಮಾಡಲಾಗುತ್ತದೆ ಎಂದರು. ಜಿಲ್ಲೆಗೆ ಬರುವಂತೆ ಪ್ರವಾಸಿಗರ ರಕ್ಷಣೆಯೇ ನಮ್ಮ ಆದ್ಯತೆಯಾಗಿದೆ. ಸದ್ಯ ಕಡಲ ತೀರದಲ್ಲಿ ಸುರಕ್ಷತೆ ಕ್ರಮವನ್ನು ಕೈಗೊಂಡಿದ್ದೇವೆ. ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವಂತೆಯೂ ತಿಳಿಸಲಾಗಿದೆ ಎಂದರು. ಅಂದಹಾಗೇ ಕಳೆದ 20 ದಿನಗಳಿಂದ ಮುರ್ಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿತ್ತು. ಕಾರಣ ನಾಲ್ವರು ವಿದ್ಯಾರ್ಥಿಗಳು ಸಮುದ್ರಪಾಲಾದ ಘಟನೆ ನಂತ್ರವಾಗಿತ್ತು. ಈಗ ನಾಳೆಯಿಂದ ಮುರ್ಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗುತ್ತಿದೆ. https://kannadanewsnow.com/kannada/217-mothers-died-in-four-months-in-karnataka-report/ https://kannadanewsnow.com/kannada/bigg-news-here-is-the-complete-list-of-state-general-holiday-days-for-the-year-2025-holiday-list-2025/
ಈ ಇಂಗ್ಲಿಷ್ ತಿಂಗಳ ಕೊನೆಯ ಅಮಾವಾಸ್ಯೆ ನಾಳೆ ಬರಲಿದೆ. ಡಿಸೆಂಬರ್ 30-12-2024 ಸೋಮವಾರದಂದು ಅಮವಾಸಿ. ಈ ದಿನ ಪೂರ್ವಜರ ಪೂಜೆಯನ್ನು ಮಾಡಬೇಕು. ಕುಲದೇವತೆಯ ಪೂಜೆಯನ್ನೂ ಮಾಡಬೇಕು. ಈ ದಿನವನ್ನು ತಪ್ಪಿಸಿಕೊಳ್ಳಬೇಡಿ. ಇದರ ಹೊರತಾಗಿ ಈ ಅಮಾವಾಸ್ಯೆಯಂದು ನಾವು ಮಾಡಬಹುದಾದ ಸರಳ ಪರಿಹಾರವು ನಿಮ್ಮ ಜೀವನದಲ್ಲಿ ವಸಂತವನ್ನು ತರುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ…
ಬೆಂಗಳೂರು: ಈ ವರ್ಷದ ನವೆಂಬರ್ ವರೆಗೆ ಕರ್ನಾಟಕದಲ್ಲಿ 348 ತಾಯಂದಿರ ಸಾವುಗಳು ವರದಿಯಾಗಿದ್ದು, ಆಗಸ್ಟ್ ಮತ್ತು ನವೆಂಬರ್ ನಡುವೆ ಗಮನಾರ್ಹ ಏರಿಕೆಯಾಗಿದ್ದು, ಈ ಸಾವುಗಳಲ್ಲಿ 217 ಸಾವುಗಳು ಸಂಭವಿಸಿವೆ. ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿಯ ಪ್ರಕಾರ, ವಿಶೇಷವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದೆ, ಅಲ್ಲಿ 179 ಸಾವುಗಳು ದಾಖಲಾಗಿವೆ ಮತ್ತು ಖಾಸಗಿ ಸೌಲಭ್ಯಗಳಲ್ಲಿ 38 ಸಾವುಗಳು ಸಂಭವಿಸಿವೆ. ರಾಜ್ಯದ ಆರೋಗ್ಯ ವ್ಯವಸ್ಥೆಯು ಈಗ ಪರಿಶೀಲನೆಯಲ್ಲಿದೆ, ತಜ್ಞರು ರಿಂಗರ್ಸ್ ಲ್ಯಾಕ್ಟೇಟ್ನಂತಹ ಕೆಲವು ಐವಿ ದ್ರವಗಳ ಬಳಕೆಯನ್ನು ಮೀರಿದ ವ್ಯವಸ್ಥಿತ ಸಮಸ್ಯೆಗಳನ್ನು ಗುರುತಿಸಿದ್ದಾರೆ, ಇದು ಬಳ್ಳಾರಿಯಲ್ಲಿ ಸಾವಿನ ನಂತರ ಈ ಹಿಂದೆ ದೂಷಿಸಲ್ಪಟ್ಟಿದೆ ಎಂದು ವರದಿ ತಿಳಿಸಿದೆ. ಆಗಸ್ಟ್ ಮತ್ತು ನವೆಂಬರ್ ನಡುವೆ, ರಾಜ್ಯವು ಪ್ರತಿ ತಿಂಗಳು 50 ಕ್ಕೂ ಹೆಚ್ಚು ತಾಯಂದಿರ ಸಾವುಗಳಿಗೆ ಸಾಕ್ಷಿಯಾಗಿದೆ, ಇದು ವೈದ್ಯಕೀಯ ವೃತ್ತಿಪರರಲ್ಲಿ ಕಳವಳವನ್ನು ಹುಟ್ಟುಹಾಕಿದೆ. ತಾಯಂದಿರ ಸಾವಿನ ವರದಿಗಳ ನಂತರ ರಿಂಗರ್ಸ್ ಲ್ಯಾಕ್ಟೇಟ್ ಅನ್ನು ಪರಿಶೀಲಿಸಲಾಗಿದ್ದರೂ, ತಜ್ಞರು ಸಮಸ್ಯೆಯನ್ನು ಸರಳೀಕರಿಸುವುದರ ವಿರುದ್ಧ ಎಚ್ಚರಿಕೆ…
ಶಿವಮೊಗ್ಗ : ಶಿವಮೊಗ್ಗ ನಗರದ ಸವಳಂಗ ರಸ್ತೆಯ ಫ್ಲೈ ಓವರ್ನ ಅಂಡರ್ ಪಾಸ್ನಲ್ಲಿ ಡಿ.30 ರಂದು ಅಬಕಾರಿ ದಾಳಿ ನಡೆಸಿ 180 ಮಿ.ಲಿ.ನ ಮ್ಯಾಕ್ಡೋವೆಲ್ಸ್ ನಂ-1 ವಿಸ್ಕಿಯ 170 ಬಾಟಲಿಗಳು ಅಂದಾಜು ಮೌಲ್ಯ ರೂ.1,35,000 ದ ಒಟ್ಟು 30,600 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ದಾವಣಗೆರೆ ವಿಭಾಗ, ದಾವಣಗೆರೆ ಹಾಗೂ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರ ನಿರ್ದೇಶನದ ಮೇರೆಗೆ ಅಬಕಾರಿ ಉಪ ಅಧೀಕ್ಷಕರು, ಶಿವಮೊಗ್ಗ ಉಪ ವಿಭಾಗ ಇವರ ಮಾರ್ಗದರ್ಶನದಲ್ಲಿ ಶಿವಮೊಗ್ಗ ವಲಯ-1 ರ ಅಬಕಾರಿ ನಿರೀಕ್ಷಕ ಹನುಮಂತಪ್ಪ ಡಿ.ಎನ್ ಇವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಎ-1 ಹರೀಶ, ಎ-2 ಶಿವು ಚನ್ನಗಿರಿ ತಾಲ್ಲೂಕು ಇವರು ಮದ್ಯವನ್ನು ನೋಂದಣಿ ಸಂಖ್ಯೆ ಕೆಎ 17 ಹೆಚ್ಕ್ಯು 0728 ದ್ವಿಚಕ್ರ ವಾಹನದಲ್ಲಿ ಸಾಗಾಣಿಕೆ ಮಾಡುವಾಗ ಜಪ್ತಿ ಮಾಡಿ ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಲಾಗಿರುತ್ತದೆ. ಈ ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ನಿರೀಕ್ಷಕ ಚಂದ್ರಪ್ಪ ಎಸ್.ಡಿ,…












