Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಇಂದು ಪುನೀತ್ ರಾಜ್ ಕುಮಾರ್ ಅವರ 50ನೇ ಹುಟ್ಟು ಹಬ್ಬ. ಇಂದಿನ ಪುನೀತ್ ರಾಜ್ ಕುಮಾರ್ ಜನ್ಮದಿನಕ್ಕೆ ಸಿಎಂ ಸಿದ್ಧರಾಮಯ್ಯ ಅವರು ನಿಷ್ಕಲ್ಮಷ ಮನಸಿನ ಹಸನ್ಮುಖಿ ವ್ಯಕ್ತಿಯಾಗಿದ್ದ ಅಪ್ಪುವಿಗೆ ನನ್ನ ನಮನಗಳು ಅಂತ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ನಟನೆಯ ಜೊತೆಗೆ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಪುನೀತ್ ರಾಜ್‍ಕುಮಾರ್ ನೂರಾರು ದುರ್ಬಲ ಜೀವಗಳಿಗೆ ಬದುಕಿನ ಹಾದಿ ತೋರಿದ್ದರು. ಬಡವ, ಬಲ್ಲಿದನೆನ್ನದೆ ಸರ್ವರನ್ನೂ ಪ್ರೀತಿಸುತ್ತಿದ್ದ, ಸದಾ ಹಸನ್ಮುಖಿಯಾಗಿದ್ದ ಅಪ್ಪುವಿನ ಜೀವನ ಯುವಜನರಿಗೆ ಸಂದೇಶದಂತಿದೆ. ಅಪ್ಪುವಿನ ಜನ್ಮದಿನದ ಸಂದರ್ಭದಲ್ಲಿ ಅವರಿಗೆ ನನ್ನ ನಮನಗಳು ಎಂದಿದ್ದಾರೆ. https://twitter.com/siddaramaiah/status/1901495562739830933 https://kannadanewsnow.com/kannada/another-death-due-to-monkey-disease-in-karnataka-woman-dies-in-chikkamagaluru/ https://kannadanewsnow.com/kannada/moral-policing-in-belagavi-district-man-attacked-by-group-of-youths-four-arrested/

Read More

ಬೆಳಗಾವಿ: ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿಯೊಂದು ನಡೆದಿದ್ದಾಗಿ ತಿಳಿದು ಬಂದಿದೆ. ಅನ್ಯಕೋಮಿನ ವ್ಯಕ್ತಿಯೊಬ್ಬರ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವುದಾಗಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ದಾಖಲಾಗಿದೆ. ಅಲ್ಲಾವುದ್ದೀನ್ ಫೀರ್ ಜಾಧೆ ಎಂಬುವರ ಮೇಲೆ ನಮ್ಮ ಸಮಾಜದ ಯುವತಿ ಜೊತೆಗೆ ಏಕೆ ಮಾತನಾಡುತ್ತೀಯ ಅಂತ ಹೇಳಿ ಯುವಕರ ಗುಂಪೊಂದು ಹಲ್ಲೆ ಮಾಡಲಾಗಿದೆ. ಅಲ್ಲಾವುದ್ದೀನ್ ಹರಿದ ಬಟ್ಟೆಯಲ್ಲೇ ಠಾಣೆಗೆ ತೆರಳಿ ದೂರು ನೀಡಿದ್ದರ ಪರಿಣಾಮ ಪ್ರಕರಣ ದಾಖಲಾಗಿದೆ. ಬೆಳಗಾವಿ ಗ್ರಾಮಾಂತರ ಠಾಣೆಯ ಪೊಲೀಸರು ಗ್ಯಾಂಗ್ ವಿರುದ್ಧ ದೂರು ದಾಖಲಿಸಿಕೊಂಡು, ತಡರಾತ್ರಿಯೇ ನಾಲ್ವರು ಯುವಕನ್ನು ಬಂಧಿಸಿದ್ದಾರೆ. ಸಂತೋಷ್ ಜಾಧ್ ಸಮಿತ್, ವೀರೇಶ್, ಜಯ ಎಂಬುದಾಗಿ ಗುರುತಿಸಲಾಗಿದೆ. ಪರಾರಿಯಾಗಿರುವಂತ ಮತ್ತಿಬ್ಬರಿಗಾಗಿ ಪೊಲೀಸರು ಹುಟುಕಾಟವನ್ನು ಮುಂದುವರೆಸಿದ್ದಾರೆ. https://kannadanewsnow.com/kannada/another-death-due-to-monkey-disease-in-karnataka-woman-dies-in-chikkamagaluru/ https://kannadanewsnow.com/kannada/pfi-joins-list-of-67-banned-terror-outfits-home-ministry-updates-list-of-67-banned-terror-outfits/

Read More

ಚಿಕ್ಕಮಗಳೂರು: ಮಂಗನಕಾಯಿಲೆ ಮಲೆನಾಡಿನಲ್ಲಿ ಉಲ್ಬಣಗೊಳ್ಳುತ್ತಿದೆ. ಇಂದು ಮಂಗನಕಾಯಿಲೆಯಿಂದ ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಲ್ಲಿ ಮಂಗನಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಚಿಕ್ಕಮಗಳೂರಿನ ಎನ್ ಆರ್ ಪುರ ತಾಲ್ಲೂಕಿನ ಕಟ್ಟಿನಮನೆ ಗ್ರಾಮ ನಿವಾಸಿ ಕಮಲಾ (65) ಎಂಬುವರೇ ಸಾವನ್ನಪ್ಪಿದಂತ ಮಹಿಳೆಯಾಗಿದ್ದಾರೆ. ಮಂಗನಕಾಯಿಲೆಯಿಂದ ಬಳಲುತ್ತಿದ್ದಂತ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಕಮಲಾ ಸಾವನ್ನಪ್ಪಿದ್ದಾರೆ. ಮೃತ ಕಮಲಾ ಅವರು ಚಿಕ್ಕಮಗಳೂರಿನ ಎನ್ ಆರ್ ಪುರದ ಮೇಲ್ಪಾಲ್ ಗ್ರಾಮದಲ್ಲಿನ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಂತ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಕಮಲಾ ಅವರನ್ನು ಮಂಗನಕಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಿದಾಗ ಅದು ದೃಢಪಟ್ಟಿತ್ತು. ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. https://kannadanewsnow.com/kannada/pfi-joins-list-of-67-banned-terror-outfits-home-ministry-updates-list-of-67-banned-terror-outfits/ https://kannadanewsnow.com/kannada/no-property-registration-without-e-khata-state-govt/

Read More

ಬೆಂಗಳೂರು: ನಗರದ ಸಂಚಾರಿ ಪೊಲೀಸರು ಅಮಾನವೀಯ ನಡೆಯನ್ನು ತೋರಿದ್ದಾರೆ. ಬೈಕ್ ಸವಾರನೊಬ್ಬನಿಗೆ ಬೂಟು ಕಾಲಿನಿಂದ ಮೂರ್ಛೆ ಹೋಗುವಂತೆ ಥಳಿಸಿದಂತ ಘಟನೆ ವಿಜಯನಗರ ಸಂಚಾರಿ ಠಾಣೆಯಲ್ಲಿ ನಡೆದಿದೆ. ಬೆಂಗಳೂರಿನ ವಿಜಯನಗರ ಟ್ರಾಫಿಕ್ ಪೊಲೀಸರ ವಿರುದ್ಧ ಬೈಕ್ ಸವಾರನೊಬ್ಬ ಈ ಗಂಭೀರ ಆರೋಪವನ್ನು ಮಾಡಿದ್ದಾನೆ. ವಿಜಯನಗರ ಸಂಚಾರ ಠಾಣೆಯ ಎಸ್ಐ ಶಾಂತರಾಮ್ ಹಾಗೂ ಸಿಬ್ಬಂದಿ ಸಿದ್ಧಿಕಿ ಎಂಬುವರು ತಮಗೆ ಬೂಟು ಕಾಲಿನಿಂದ ಒದ್ದು ಥಳಿಸಿದ್ದಾಗಿ ಆರೋಪಿಸಿದ್ದಾನೆ. ವಿಜಯನಗರ ಸಂಚಾರಿ ಠಾಣೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿಯ ಥಳಿತದಿಂದ ಬೈಕ್ ಸವಾರ ಮೂರ್ಛೆ ಹೋಗಿ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸಂಚಾರಿ ಪೊಲೀಸರ ಈ ಅಮಾನವೀಯ ಕೃತ್ಯಕ್ಕೆ ಸಾರ್ವಜನಿಕರು ವ್ಯಾಪಕ ಆಕ್ರೋಶ ಹೊರ ಹಾಕಿದ್ದಾರೆ. https://kannadanewsnow.com/kannada/pfi-joins-list-of-67-banned-terror-outfits-home-ministry-updates-list-of-67-banned-terror-outfits/ https://kannadanewsnow.com/kannada/sensex-gains-280-points-nifty-closes-at-22450/

Read More

ನವದೆಹಲಿ: ಭಾರತದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ನಿಷೇಧವನ್ನು ಎದುರಿಸುತ್ತಿರುವ 67 ಭಯೋತ್ಪಾದಕ ಸಂಘಟನೆಗಳು ಮತ್ತು ಕಾನೂನುಬಾಹಿರ ಸಂಘಗಳ ಗುಂಪನ್ನು ಗೃಹ ಸಚಿವಾಲಯದ (ಎಂಎಚ್ಎ) ನವೀಕರಿಸಿದ ಪಟ್ಟಿಯಲ್ಲಿ ಹೆಸರಿಸಲಾಗಿದೆ. ಗೃಹ ಸಚಿವಾಲಯ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಯುಎಪಿಎ ಸೆಕ್ಷನ್ 35 ರ ಅಡಿಯಲ್ಲಿ ಅಧಿಕೃತವಾಗಿ ಭಯೋತ್ಪಾದಕ ಸಂಘಟನೆಗಳು ಎಂದು ವರ್ಗೀಕರಿಸಲಾದ ಮತ್ತು ಕಾಯ್ದೆಯ ಮೊದಲ ಶೆಡ್ಯೂಲ್ನಲ್ಲಿ ಸೇರಿಸಲಾದ 45 ಸಂಘಟನೆಗಳ ಹೆಸರುಗಳಿವೆ. ಉಳಿದ 22 ಗುಂಪುಗಳನ್ನು ಯುಎಪಿಎ ಸೆಕ್ಷನ್ 3 (1) ರ ಅಡಿಯಲ್ಲಿ ಕಾನೂನುಬಾಹಿರ ಸಂಘಗಳು ಎಂದು ವರ್ಗೀಕರಿಸಲಾಗಿದೆ. ಈ ಸಂಘಟನೆಗಳಲ್ಲಿ ಅನೇಕವು ಭಾರತದಾದ್ಯಂತ ಉಗ್ರಗಾಮಿತ್ವ, ಪ್ರತ್ಯೇಕತಾವಾದ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗಿವೆ. ಎಂಎಚ್ಎ ಅಂತಹ ಪಟ್ಟಿಯನ್ನು ನವೀಕರಿಸುತ್ತಲೇ ಇರುತ್ತದೆ. ಈ ನಿಷೇಧಿತ ಸಂಘಟನೆಗಳ ಘೋಷಣೆಯು ತನ್ನ ಗಡಿಯೊಳಗೆ ಭಯೋತ್ಪಾದನೆ ಮತ್ತು ಉಗ್ರಗಾಮಿ ಚಟುವಟಿಕೆಗಳನ್ನು ನಿಗ್ರಹಿಸುವ ಭಾರತದ ನಿರಂತರ ಪ್ರಯತ್ನಗಳ ಭಾಗವಾಗಿದೆ. ಯುಎಪಿಎ ಅಡಿಯಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳು ಆಸ್ತಿ ಮುಟ್ಟುಗೋಲು ಮತ್ತು ಕಾನೂನುಬಾಹಿರ…

Read More

1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು 2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಕೆಲವೊಮ್ಮೆ ಪರಿಸ್ಥಿತಿಗಳು ಹೇಗೆ ಬರುತ್ತಿದೆ ಎಂದರೆ ತಗೊಂಡ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ…

Read More

ನವದೆಹಲಿ: ಬಿಎಸ್ಇ ಸೆನ್ಸೆಕ್ಸ್ ಮತ್ತು ಎನ್ಎಸ್ಇ ನಿಫ್ಟಿ 50 ಸೂಚ್ಯಂಕಗಳು ಸೋಮವಾರ ಬೆಳಿಗ್ಗೆ ಸಕಾರಾತ್ಮಕವಾಗಿಯೇ ಪ್ರಾರಂಭವಾದವು. ಬಿಎಸ್ಇ ಸೆನ್ಸೆಕ್ಸ್ 280 ಪಾಯಿಂಟ್ಗಳ ಏರಿಕೆಯೊಂದಿಗೆ 74,100 ಮಟ್ಟದಲ್ಲಿ 73,830 ಕ್ಕೆ ಪ್ರಾರಂಭವಾಯಿತು. ಎನ್ಎಸ್ಇ ನಿಫ್ಟಿ 50 ಸೂಚ್ಯಂಕವು 80 ಪಾಯಿಂಟ್ಸ್ ಏರಿಕೆಗೊಂಡು 22,480 ಮಟ್ಟಕ್ಕೆ ತಲುಪಿದೆ. ಸಕಾರಾತ್ಮಕ ಸ್ಥೂಲ ಅಂಶಗಳು ದಲಾಲ್ ಸ್ಟ್ರೀಟ್ ನಲ್ಲಿ ಮಾರುಕಟ್ಟೆ ಭಾವನೆಯನ್ನು ಹೆಚ್ಚಿಸಲು ಸಹಾಯ ಮಾಡಿದ ನಂತರ ಬೆಂಚ್ ಮಾರ್ಕ್ ಷೇರು ಮಾರುಕಟ್ಟೆ ಸೂಚ್ಯಂಕಗಳು ಸೋಮವಾರ ಏರಿಕೆ ಕಂಡವು. ಬಿಎಸ್ಇ ಸೆನ್ಸೆಕ್ಸ್ 362.75 ಪಾಯಿಂಟ್ಸ್ ಏರಿಕೆಗೊಂಡು 74,191.66 ಕ್ಕೆ ತಲುಪಿದ್ದರೆ, ಎನ್ಎಸ್ಇ ನಿಫ್ಟಿ 50 121 ಪಾಯಿಂಟ್ಸ್ ಏರಿಕೆಗೊಂಡು 22,518.20 ಕ್ಕೆ ತಲುಪಿದೆ. ಜಿಯೋಜಿತ್ ಫೈನಾನ್ಷಿಯಲ್ ಸರ್ವೀಸಸ್ನ ಮುಖ್ಯ ಹೂಡಿಕೆ ತಂತ್ರಜ್ಞ ಡಾ.ವಿ.ಕೆ.ವಿಜಯಕುಮಾರ್ ಮಾತನಾಡಿ, ಹತ್ತಿರದ ಮಾರುಕಟ್ಟೆ ಪ್ರವೃತ್ತಿಯು ಸಕಾರಾತ್ಮಕ ಪಕ್ಷಪಾತದೊಂದಿಗೆ ಸ್ಥಿರವಾಗಿರುವ ಸಾಧ್ಯತೆಯಿದೆ. https://kannadanewsnow.com/kannada/girls-should-not-blindly-believe-that-they-will-not-file-false-sexual-assault-cases-hc/ https://kannadanewsnow.com/kannada/gram-panchayat-member-arrested-on-charges-of-sexual-assault/

Read More

ಕೇರಳ: ಯಾವುದೇ ಮಹಿಳೆ ಲೈಂಗಿಕ ದೌರ್ಜನ್ಯದ ಬಗ್ಗೆ ಸುಳ್ಳು ಆರೋಪ ಮಾಡುವುದಿಲ್ಲ ಎಂಬ ಕಲ್ಪನೆಯು ಇತ್ತೀಚಿನ ವರ್ಷಗಳಲ್ಲಿ ತನ್ನ ಸಂಪೂರ್ಣ ಸಿಂಧುತ್ವವನ್ನು ಕಳೆದುಕೊಂಡಿದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇಂತಹ ಅನೇಕ ಆರೋಪಗಳು ನೈಜವಾಗಿದ್ದರೂ, ಅವುಗಳಲ್ಲಿ ಒಂದಷ್ಟು ಪ್ರಕರಣಗಳು ಕಪೋಲಕಲ್ಪಿತವಾಗಿದೆ. ಆಗಾಗ್ಗೆ ವೈಯಕ್ತಿಕ ದ್ವೇಷ ಅಥವಾ ಬಲವಂತದ ಲಾಭಗಳಿಗಾಗಿ ಅಸ್ತ್ರವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮೇ 30, 2014 ಮತ್ತು ಏಪ್ರಿಲ್ 20, 2019 ರ ನಡುವೆ ಮದುವೆಯ ಸುಳ್ಳು ಭರವಸೆಯೊಂದಿಗೆ ಮಹಿಳೆಯನ್ನು ದಾರಿ ತಪ್ಪಿಸುವ ಮೂಲಕ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿದ ಆರೋಪದ ಮೇಲೆ ಪಟ್ಟಾಂಬಿಯ ಯುವಕನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಾಗ ನ್ಯಾಯಮೂರ್ತಿ ಎ ಬದರುದ್ದೀನ್ ಈ ಹೇಳಿಕೆ ನೀಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪ್ರತಿ ಪ್ರಕರಣದ ಸಂದರ್ಭಗಳನ್ನು ಕೂಲಂಕಷವಾಗಿ ಪರಿಶೀಲಿಸದೆ ಇಂತಹ ಆರೋಪಗಳನ್ನು ಮುಖಬೆಲೆಗೆ ಸ್ವೀಕರಿಸಬಾರದು ಎಂದು ನ್ಯಾಯಪೀಠ ಒತ್ತಿ ಹೇಳಿದೆ. ಸುಳ್ಳು ಆರೋಪಗಳನ್ನು ಕೆಲವೊಮ್ಮೆ ವೈಯಕ್ತಿಕ ಅಂಕಗಳನ್ನು ಇತ್ಯರ್ಥಪಡಿಸಲು ಅಥವಾ ಕಾನೂನುಬಾಹಿರ ಬೇಡಿಕೆಗಳನ್ನು ಪೂರೈಸಲು…

Read More

ಚಿತ್ರದುರ್ಗ: ಗ್ರಾಮ ಪಂಚಾಯ್ತಿ ಸದಸ್ಯನ ವಿರುದ್ಧ ಜಾತಿ ನಿಂದನೆ, ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಈ ಸಂಬಂಧ ದೂರು ಕೂಡ ದಾಖಲಾಗಿದ್ದು, ಪೊಲೀಸರು ಗ್ರಾಮ ಪಂಚಾಯ್ತಿ ಸದಸ್ಯನನ್ನು ಬಂಧಿಸಿದ್ದಾರೆ. ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಗ್ರಾಮ ಪಂಚಾಯ್ತಿ ಸದಸ್ ದೇವರಾಜ ವಿರುದ್ಧ, ಸಿರಿಗೆರೆ ಗ್ರಾಮ ಪಂಚಾಯ್ತಿ ಕ್ಲರ್ ಜಯರಾಮ್ ಎಂಬುವರು ಜಾತಿ ನಿಂದನೆ, ಲೈಂಗಿಕ ದೌರ್ಜನ್ಯದ ಆರೋಪದಡಿ ದೂರು ನೀಡಿದ್ದಾರೆ. ಗ್ರಾಮ ಪಂಚಾಯ್ತಿ ಅಧ್ಯಕ್ಷೆ, ಪಿಡಿಓಗೆ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಕ್ಲರ್ಕ್ ಜಯರಾಮ್ ನೀಡಿರುವಂತ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ದೂರು ಆಧರಿಸಿ ಭರಮಸಾಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಗ್ರಾಮ ಪಂಚಾಯ್ತಿ ಸದಸ್ಯ ದೇವರಾಜ ಎಂಬುವರನ್ನು ಬಂಧಿಸಿದ್ದಾರೆ. https://kannadanewsnow.com/kannada/fake-currency-racket-busted-in-karnataka-four-accused-including-pc-arrested/ https://kannadanewsnow.com/kannada/fire-breaks-out-in-copra-godown-copra-worth-lakhs-of-rupees-gutted/

Read More

ರಾಯಚೂರು: ರಾಜ್ಯದಲ್ಲೇ ಬಹುದೊಡ್ಡ ಖೋಟಾನೋಟು ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ಈ ದಂಧೆಯಲ್ಲಿ ತೊಡಗಿದ್ದಂತ ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರಿನ ಪಶ್ಚಿಮ ಠಾಣೆಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ನಗರದಲ್ಲಿ ದಾಳಿಯನ್ನು ನಡೆಸಿ, ಖೋಟಾ ನೋಟು ದಂಧೆಯಲ್ಲಿ ತೊಡಗಿದ್ದಂತ ಅಡ್ಡೆಯನ್ನು ಪತ್ತೆ ಹಚ್ಚಿದ್ದಾರೆ. ಈ ದಾಳಿಯ ವೇಳೆಯಲ್ಲಿ ಲಕ್ಷಾಂತರ ಮೌಲ್ಯದ ಖೋಟಾ ನೋಟು, ಅದಕ್ಕೆ ಬಳಸುತ್ತಿದ್ದಂತ ಪೂರಕ ವಸ್ತುಗಳಾದ ವೈಟ್ ಪೇಪರ್ ಜಪ್ತಿ ಮಾಡಿದ್ದಾರೆ. ಈ ದಾಳಿಯಲ್ಲಿ  ರಾಯಚೂರು ಸಶಸ್ತ್ರ ಮೀಸಲು ಪಡೆಯ ಕಾನ್ಸ್ ಸ್ಟೇಬಲ್ ಮರಿಲಿಂಗ, ರಮೇಶ್ ಆದಿ, ಶಿವಲಿಂಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಈ ದಾಳಿಯನ್ನು ನಡೆಸಲಾಗಿದೆ. https://kannadanewsnow.com/kannada/fire-breaks-out-in-copra-godown-copra-worth-lakhs-of-rupees-gutted/ https://kannadanewsnow.com/kannada/no-property-registration-without-e-khata-state-govt/

Read More