Author: kannadanewsnow09

ಬೆಂಗಳೂರು: ರಾಜ್ಯದ ಎಲ್ಲಾ ಪ್ರಾದೇಶಿಕ RTO ಕಛೇರಿಯ ವ್ಯಾಪ್ತಿಗಳಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ನಿರ್ಮಿಸಲು ಕ್ರಮವಹಿಸಲಾಗುತ್ತಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬುಧವಾರದಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯು ಸಾರಿಗೆ ಆಯುಕ್ತರ ಕಚೇರಿಯಲ್ಲಿ ನಡೆಯಿತು. ಹೀಗಿದೆ ಸಭೆಯಲ್ಲಿ ಪ್ರಮುಖ ಹೈಲೈಟ್ಸ್ ವಾರ್ಷಿಕ ರಾಜಸ್ವ ಗುರಿ- ರೂ.13000‌ ಕೋಟಿ ಜುಲೈ 2024ರ ಅಂತ್ಯಕ್ಕೆ ಸಂಗ್ರಹಿಸಬೇಕಾದ ರಾಜಸ್ವ- ರೂ 4325 ಕೋಟಿ ಜುಲೈ 2024ರ ಅಂತ್ಯಕ್ಕೆ ಸಂಗ್ರಹಿಸಿರುವ ರಾಜಸ್ವ- 3534 ಶೇಕಡಾವಾರು-82% * ರಾಜಸ್ವ ಸಂಗ್ರಹಣೆಯ ಗುರಿಯನ್ನು ಶೇಕಡ 100 ರಷ್ಟು ಸಾಧಿಸಲು ಪ್ರವರ್ತನ ಚಟುವಟಿಕೆಗಳೂ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ಕ್ರಮಕೈಗೊಂಡು ಕಾರ್ಯನಿರ್ವಹಿಸಲು ಸೂಚಿಸಲಾಯಿತು. * ಪ್ರಸ್ತುತ ಇಲಾಖೆಗೆ ಹೊಸದಾಗಿ 85 ಮೋಟಾರು ವಾಹನ ನಿರೀಕ್ಷಕರು ನೇಮಕಗೊಂಡಿದ್ದು, ಇವರನ್ನು ಬಳಸಿಕೊಂಡು ಪ್ರವರ್ತನ ಚಟುವಟಿಕೆಗಳನ್ನು ಹೆಚ್ಚಿಸುವುದು. * ಇಲಾಖೆಗೆ ಪ್ರವರ್ತನ ಕಾರ್ಯಗಳಿಗೆ ರಸ್ತೆ ಸುರಕ್ಷತಾ ನಿಧಿಯಿಂದ ಹೊಸ…

Read More

ಆಯುರ್ವೇದವು ಮೂರು ಡೈನಾಮಿಕ್ ಪಾಥೋಫಿಸಿಯೋಲಾಜಿಕಲ್ (ದೋಶ) ಘಟಕಗಳನ್ನು ಎಲ್ಲಾ ದೇಹದ ಕಾರ್ಯಗಳಿಗೆ ಆಧಾರವಾಗಿ ಹೇಳುತದೆ. ಮೂರು ದೋಷಗಳನ್ನು ಕ್ರಮವಾಗಿ ವಾತ, ಪಿತ್ತ ಮತ್ತು ಕಫ ಎಂದು ಕರೆಯಲಾಗುತ್ತದೆ. ಆಯುರ್ವೇದದಲ್ಲಿ, ಒಬ್ಬರ ಮೂಲಭೂತ “ದೇಹದ ಸಂವಿಧಾನ(bodily constitution)” ವನ್ನು “ಪ್ರಕೃತಿ” ಎಂದು ಕರೆಯಲಾಗುತ್ತದೆ. ಗರ್ಭಧಾರಣೆಯ ಸಮಯದಲ್ಲಿ ಮೂರು ದೋಷಗಳ ಸ್ಥಿರ ಪ್ರಮಾಣದ ವಿಶಿಷ್ಟ ಸಂಯೋಜನೆಯಿಂದಾಗಿ ಪ್ರಕೃತಿ ಉಂಟಾಗುತ್ತದೆ. ದೋಷಗಳ ನಡುವಿನ ಅಸಮತೋಲನ ಅಥವಾ ತೊಂದರೆಗೊಳಗಾದ ಪರಸ್ಪರ ಕ್ರಿಯೆಗಳು ರೋಗದ ಪ್ರಮುಖ ಕಾರಣವೆಂದು ಪರಿಗಣಿಸಲಾಗಿದೆ. ವಿಷಪೂರಿತ ದೋಷಗಳು (vitiated Doshas) ನಿರ್ದಿಷ್ಟ ಅಂಗಗಳ (weak ಧಾತುಗಳು) ಗಳೊಂದಿಗೆ ಸಂವಹನ (combined) ನಡೆಸಿದಾಗ ನಿರ್ದಿಷ್ಟ ಅನಾರೋಗ್ಯವು ಪ್ರಕಟವಾಗುತ್ತದೆ. ಇದಕ್ಕೆ ವಿರುದ್ಧವಾಗಿ, ರೋಗಕಾರಕ ಅಂಶಗಳು ತಂಬಾಕು, ಗುಟ್ಕಾ etc(pathogenic factors) ದೋಷಗಳ ಅಸಹಜತೆಯನ್ನು ಪ್ರಚೋದಿಸಬಹುದು (Triggers) ಮತ್ತು ಧಾತುಗಳನ್ನು ದುರ್ಬಲಗೊಳಿಸಬಹುದು. ಆದ್ದರಿಂದ ,ಕ್ಯಾನ್ಸರ್ನಂತಹ ತೀವ್ರವಾದ ಕಾಯಿಲೆಗಳು ಇಡೀ ದೇಹದ ಮೇಲೆ ಪರಿಣಾಮ ಬೀರುತ್ತವೆ ಮತ್ತು ಸಾಮಾನ್ಯವಾಗಿ ಎಲ್ಲಾ ಮೂರು Vitiated ದೋಷಗಳನ್ನು ಒಳಗೊಂಡಿರುತ್ತದೆ. ಆಯುರ್ವೇದವು ಕ್ಯಾನ್ಸರ್ ಅನ್ನು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದ್ದು, ಹುದ್ದೆಗಾಗಿ ಕಾಯುತ್ತಿರುವ ಸತ್ಯವತಿ ಜಿ., ಐಎಎಸ್ (ಕೆಎನ್: 2004) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ಶಿವಕುಮಾರ್ ಕೆ.ಬಿ., ಐಎಎಸ್ (ಕೆ.ಬಿ., 2010) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾಗಿ ನೇಮಿಸಲಾಗಿದೆ. ಶಿವಕುಮಾರ್ ಕೆ.ಬಿ., ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಡಾ.ರಾಮ್ ಪ್ರಸಾತ್ ಮನೋಹರ್ ವಿ., ಐಎಎಸ್…

Read More

ಚಿಕ್ಕಬಳ್ಳಾಪುರ: ಜಿಲ್ಲೆ ಚಿಂತಾಮಣಿ ಬಳಿಯಲ್ಲಿ ಟಿಟಿ ವಾಹನ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾಗಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿಯಲ್ಲಿ ಟಿಟಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದಲ್ಲಿ ಶ್ರೀನಿವಾಸಲು(50), ಪುಷ್ಪ (14) ಹಾಗೂ ಶ್ರೀಕಾಂತ್ (30) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಈ ಅಪಘಾತದಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂದಹಾಗೇ ಬೆಂಗಳೂರಿನಿಂದ ಆಂಧ್ರಪ್ರದೇಶದ ಕೆಡೆಗೆ ಕಾರು ತೆರಳುತ್ತಿತ್ತು. ಆಂಧ್ರದ ಬೋಯಿಕೊಂಡದಿಂದ ಬೆಂಗಳೂರು ಕಡೆಗೆ ಟಿಟಿ ವಾಹನ ಬರುತ್ತಿತ್ತು. ಈ ಎರಡರ ನಡುವೆ ಅಪಘಾತ ಉಂಟಾಗಿ ಈ ದುರ್ಘಟನೆ ನಡೆದಿದೆ. https://kannadanewsnow.com/kannada/reliance-jio-hikes-prices-for-prepaid-plans/ https://kannadanewsnow.com/kannada/the-process-of-transformation-has-begun-in-jammu-and-kashmir-under-the-bjp-central-government/ https://kannadanewsnow.com/kannada/govt-advertisement-for-digital-media-knn-congratulates-ksdmf-president-general-secretary/

Read More

ನವದೆಹಲಿ: ಟೆಲಿಕಾಂ ದೈತ್ಯ ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳ ಬೆಲೆಯನ್ನು ಪರಿಷ್ಕರಿಸಿದೆ. ಈ ಮೂಲಕ ಜಿಯೋ ಪ್ರೀಪೇಯ್ಡ್ ಬಳಕೆದಾರರಿಗೆ ಬಿಗ್ ಶಾಕ್ ನೀಡಲಾಗಿದೆ. ದಿ ಹಿಂದೂ ವರದಿಯ ಪ್ರಕಾರ, ನೆಟ್ಫ್ಲಿಕ್ಸ್ ಒಳಗೊಂಡ ಪರಿಷ್ಕೃತ ರಿಲಯನ್ಸ್ ಜಿಯೋ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳ ಬೆಲೆ ಈಗ 1,299 ಮತ್ತು 1,799 ರೂ. ಈ ಹಿಂದೆ, ಈ ಯೋಜನೆಗಳನ್ನು ಕ್ರಮವಾಗಿ ₹ 1,099 ಮತ್ತು ₹ 1,499 ಎಂದು ಪಟ್ಟಿ ಮಾಡಲಾಗಿತ್ತು. ₹ 1,299 ಯೋಜನೆ ನೆಟ್ಫ್ಲಿಕ್ಸ್ ಮೊಬೈಲ್ ಚಂದಾದಾರಿಕೆಯನ್ನು ಒಳಗೊಂಡಿದ್ದರೆ, ₹ 1,799 ಯೋಜನೆ ನೆಟ್ಫ್ಲಿಕ್ಸ್ ಬೇಸಿಕ್ ಚಂದಾದಾರಿಕೆಯನ್ನು ನೀಡುತ್ತದೆ. 1,299 ರೂ.ಗಳ ಯೋಜನೆಯೊಂದಿಗೆ, ಬಳಕೆದಾರರು ಒಂದೇ ಮೊಬೈಲ್ ಸಾಧನ ಅಥವಾ ಟ್ಯಾಬ್ಲೆಟ್ನಲ್ಲಿ ನೆಟ್ಫ್ಲಿಕ್ಸ್ ವಿಷಯವನ್ನು ಆನಂದಿಸಬಹುದು, ಗರಿಷ್ಠ ವೀಡಿಯೊ ರೆಸಲ್ಯೂಶನ್ 480 ಪಿ. ಮತ್ತೊಂದೆಡೆ, 1,799 ರೂ.ಗಳ ಯೋಜನೆಯು ಸ್ಮಾರ್ಟ್ಫೋನ್ಗಳು, ಟ್ಯಾಬ್ಲೆಟ್ಗಳು, ಸ್ಮಾರ್ಟ್ ಟಿವಿಗಳು ಮತ್ತು ಲ್ಯಾಪ್ಟಾಪ್ಗಳು ಸೇರಿದಂತೆ ವಿವಿಧ ಸಾಧನಗಳಲ್ಲಿ ನೆಟ್ಫ್ಲಿಕ್ಸ್ಗೆ ಪ್ರವೇಶವನ್ನು ಒದಗಿಸುತ್ತದೆ. ಈ ಎರಡೂ ಜಿಯೋ…

Read More

ಬೆಂಗಳೂರು: ಕರ್ನಾಟಕ ಡಿಜಿಟಲ್ ಮೀಡಿಯಾ ಜಾಹೀರಾತು ಮಾರ್ಗಸೂಚಿ-2024 ಅನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಮೂಲಕ ಡಿಜಿಟಲ್ ಮೀಡಿಯಾಗಳಿಗೂ ಸರ್ಕಾರಿ ಜಾಹೀರಾತು ನೀಡುವ ಕೆಲಸ ಶೀಘ್ರವೇ ಆಗಲಿದೆ. ಇದಕ್ಕೆ ಕಾರಣವಾಗಿದ್ದೇ, ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯ ವೇದಿಕೆ(KSDMF) ಆಗಿದೆ. ಕೆ ಎಸ್ ಡಿ ಎಂ ಎಫ್ ನ ಅಧ್ಯಕ್ಷರಾದಂತ ಬಿ.ಸಮೀವುಲ್ಲಾ ಬೆಲಗೂರು ಹಾಗೂ ಪ್ರಧಾನ ಕಾರ್ಯದರ್ಶಿ ಶಿವ ಕುಮಾರ್ ಬೆಸಗರಹಳ್ಳಿ ಅವರ ಸತತ ಓಡಾಟ, ಪರಿಶ್ರಮದ ಫಲವಾಗಿ ಸರ್ಕಾರದಿಂದ ಅಧಿಕೃತ ಆದೇಶ ಹೊರ ಬಿದ್ದಿದೆ. ಬಿ.ಸಮೀವುಲ್ಲಾ ಬೆಲಗೂರು ಕರ್ನಾಟಕ ಪತ್ರಿಕಾ ಮಾಧ್ಯಮದಲ್ಲಿ ಚಿರಪರಿಚಿತ ಹೆಸರು. ಈಟಿವಿ, ವಿಜಯ ಕರ್ನಾಟಕ, ಅಭಿಮಾನಿ ಪ್ರಕಾಶನ, ಸುದ್ದಿ ಟಿವಿ, ಸ್ವರಾಜ್ ಟಿವಿ, ಈ ಸಂಜೆ, ಉದಯ ನ್ಯೂಸ್ ಸೇರಿದಂತೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದಂತ ಇವರು, ಈಗ ದಿ ಪೋಸ್ಟ್ ಯೂಟ್ಯೂಬ್ ಚಾನಲ್ ಪ್ರಾರಂಭಿಸಿ ಡಿಜಿಟಲ್ ಮಾಧ್ಯಮಕ್ಕೆ ಕಾಲಿಟ್ಟಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದಂತ ಇವರು, ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ವೇದಿಕೆ(KSDMF)ನ ಅಧ್ಯಕ್ಷರಾಗಿರುವಂತ…

Read More

ಬೆಂಗಳೂರು: ನಗರದಲ್ಲಿ ಇಂದು ಬೆಚ್ಚಿ ಬೀಳಿಸುವಂತ ಕೃತ್ಯ ನಡೆಸಲಾಗಿದೆ. ಬೆಂಗಳೂರಿನ ಏರ್ ಪೋರ್ಟ್ ನಲ್ಲಿಯೇ ಪತ್ನಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಂತ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 1ರಲ್ಲೇ ಟ್ರಾಲಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದಂತ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಂತ ಟ್ರಾಲಿ ಆಪರೇಟರ್ ಒಬ್ಬನನ್ನು ಆಕೆಯ ಪತಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವುದಾಗಿ ಹೇಳಲಾಗುತ್ತಿದೆ. ಸ್ಥಳಕ್ಕೆ ಏರ್ ಪೋರ್ಟ್ ಠಾಣೆಯ ಪೊಲೀಸರು ಆಗಮಿಸಿದ್ದು, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/bengaluru-wifes-throat-slit-on-suspicion-of-murder/ https://kannadanewsnow.com/kannada/the-process-of-transformation-has-begun-in-jammu-and-kashmir-under-the-bjp-central-government/

Read More

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸುವಂತ ಮತ್ತೊಂದು ಭೀಕರ ಮರ್ಡರ್ ನಡೆದಿದೆ. ಪತ್ನಿಯ ಶೀಲ ಶಂಕಿಸಿ ಪತಿಯೊಬ್ಬ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬೆಂಗಳೂರಿನ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ಇಂದು ಪತ್ನಿಯ ಶೀಲ ಶಂಕಿಸಿದಂತ ಪತಿಯೊಬ್ಬ ಕುರ್ಚಿಗೆ ಕಟ್ಟಿಹಾಕಿ, ಕತ್ತು ಕೊಯ್ದು ಮರ್ಡರ್ ಮಾಡಿದ್ದಾನೆ. ನವ್ಯ(24) ಎಂಬಾಕೆಯನ್ನು ಕತ್ತು ಕೊಯ್ದು ಬರ್ಬರವಾಗಿ ಮನೆಯಲ್ಲಿ ಹತ್ಯೆ ಮಾಡಿದಂತ ಪತಿ ಕಿರಣ್ ಪರಾರಿಯಾಗಿದ್ದಾನೆ. ಮೂರು ವರ್ಷಗಳ ಹಿಂದೆ ಕಿರಣ್ ಹಾಗೂ ನವ್ಯ ಮದುವೆಯಾಗಿದ್ದರು. ಕಿರಣ್ ಕೋರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರೇ, ನವ್ಯ ಖಾಸಗಿ ಶಾಲೆಯೊಂದರಲ್ಲಿ ನೃತ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಪತ್ನಿಯ ಮರ್ಡರ್ ಸುದ್ದಿ ತಿಳಿದಂತ ಕೆಂಗೇರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/the-process-of-transformation-has-begun-in-jammu-and-kashmir-under-the-bjp-central-government/

Read More

ಹಾಸನ : “ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಏತ (Lift) ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಈ ಯೋಜನೆ ಉದ್ಘಾಟನಾ ದಿನಾಂಕವನ್ನು ಪ್ರಕಟಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹರ್ಷ ವ್ಯಕ್ತಪಡಿಸಿದರು. ಹಾಸನ ಜಿಲ್ಲೆ ಸಕಲೇಶಪುರದ ಕೆಸವನಹಳ್ಳಿ ಗ್ರಾಮದ ಕುಂಬರಡಿ ಕಾಫಿ ಎಸ್ಟೇಟ್ ಬಳಿ ಎತ್ತಿನಹೊಳೆ ಯೋಜನೆಯ ಪರೀಕ್ಷಾರ್ಥ ನೀರು ಹರಿಸುವ ಕಾರ್ಯಚರಣೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಪರಿಶೀಲನೆ ಮಾಡಿದರು. ನಂತರ ಸಕಲೇಶಪುರದ ದೊಡ್ಡನಗರದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, “ಎತ್ತಿಹೊಳೆ ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ತಾಯಿ ಗಂಗೆ ಪೂಜೆ ಮಾಡಿ ಖುದ್ದಾಗಿ ನಾನೇ ಪ್ರಾಯೋಗಿಕ ಪರೀಕ್ಷೆಗೆ ಚಾಲನೆ ನೀಡಿದ್ದೇನೆ. ನಮ್ಮ ಅಧಿಕಾರಿಗಳು ಈ ಯೋಜನೆಯ ವಿವರ ಮತ್ತು ವಿಡಿಯೋಗಳನ್ನು ತೋರಿಸಿದರು. ನಾನು ಕಣ್ಣಾರೆ ನೋಡಬೇಕು ಎಂದು ಬಂದಿದ್ದೇನೆ. ಈ ಹಿಂದೆ ಭೇಟಿ ನೀಡಿದಾಗ ಶೀಘ್ರವಾಗಿ ಕೆಲಸ ಮುಗಿಸಬೇಕು ಎಂದು ತಿಳಿಸಿದ್ದೇ, ಅದರಂತೆ ಒಂದೆರಡು ತಿಂಗಳು ತಡವಾಗಿಯಾದರೂ ಕೆಲಸ ಮುಗಿದಿದೆ” ಎಂದು…

Read More

ಬೆಂಗಳೂರು: ಒಂದು ವರ್ಷದ ಹಿಂದೆ ತಿರುಪತಿ ತಿರುಮಲಕ್ಕೆ ಸಾಗಿಸಲಾಗುತ್ತಿದ್ದಂತ ನಂದಿನಿ ತುಪ್ಪದ ಸರಬರಾದು ಸ್ಥಗಿತಗೊಂಡಿತ್ತು. ಈಗ ಮತ್ತೆ ಆರಂಭಗೊಂಡಿದೆ. ಟ್ಯಾಂಕರ್ ಮೂಲಕ ನಂದಿನಿ ತುಪ್ಪವನ್ನು ತಿರುಪತಿ ತಿರುಮಲಕ್ಕೆ ಸಾಗಿಸಲು ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ತಿರುಪತಿ ತಿರುಮಲಕ್ಕೆ ಸ್ಥಗಿತವಾಗಿದ್ದ ನಂದಿನಿ ತುಪ್ಪ ಸರಬಾಜಿಗೆ ಟ್ಯಾಂಕರ್ ಮೂಲಕ ಸಾಗಿಸುವುದಕ್ಕೆ ಚಾಲನೆ ನೀಡಿದರು. ಈ ವೇಳೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್, ಎಂಡಿ ಜಗದೀಶ್ ಸೇರಿದಂತೆ ಹಲವರು ಉಪಸ್ಥಿತಿರಾಗಿದ್ದರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳವು ಕಳೆದ 05 ದಶಕಗಳಿಂದಲೂ ತನ್ನ ಸದಸ್ಯ ಹಾಲು ಒಕ್ಕೂಟಗಳ ಮೂಲಕ ರಾಜ್ಯದ 24 ಲಕ್ಷಕ್ಕೂ ಹೆಚ್ಚು ಹೈನುಗಾರರಿಂದ ಹಾಲನ್ನು ಖರೀದಿಸಿ, ಸಂಸ್ಕರಿಸಿ, “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯನ್ನು ಹೊತ್ತು “ನಂದಿನಿ” ಬ್ಯಾಂಡಿನಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರ ಅಭಿರುಚಿಗೆ ತಕ್ಕಂತೆ ಪರಿಚಯಿಸಿರುತ್ತದೆ. “ನಂದಿನಿ” ಯು ಕರ್ನಾಟಕ ರಾಜ್ಯದ ಮನೆ…

Read More