Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: 22 ಬಾರಿ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಆಗಿರುವ ರಾಫೆಲ್ ನಡಾಲ್ ಈ ಋತುವಿನ ಕೊನೆಯಲ್ಲಿ ವೃತ್ತಿಪರ ಟೆನಿಸ್ನಿಂದ ನಿವೃತ್ತರಾಗುವುದಾಗಿ ಖಚಿತಪಡಿಸಿದ್ದಾರೆ. 38 ವರ್ಷದ ಟೆನಿಸ್ ಐಕಾನ್ ನವೆಂಬರ್ ನಲ್ಲಿ ಮಾಲಾಗಾದಲ್ಲಿ ನಡೆಯಲಿರುವ ಡೇವಿಸ್ ಕಪ್ ಫೈನಲ್ಸ್ ನಲ್ಲಿ ಸ್ಪೇನ್ ಪರ ಕೊನೆಯ ಸ್ಪರ್ಧಾತ್ಮಕ ಪ್ರದರ್ಶನ ನೀಡಲಿದ್ದಾರೆ. ನಡಾಲ್ ಗುರುವಾರ ಬಿಡುಗಡೆ ಮಾಡಿದ ವೀಡಿಯೊ ಸಂದೇಶದ ಮೂಲಕ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಅವರು ತಮ್ಮ ಇತ್ತೀಚಿನ ಹೋರಾಟಗಳು ಮತ್ತು ಆಟವು ತನ್ನ ದೇಹದ ಮೇಲೆ ತೆಗೆದುಕೊಂಡ ದೈಹಿಕ ಹಾನಿಯನ್ನು ಪ್ರತಿಬಿಂಬಿಸಿದರು. ಗುರುವಾರ ಬಿಡುಗಡೆ ಮಾಡಿದ ವೀಡಿಯೊ ಸಂದೇಶದಲ್ಲಿ ನಡಾಲ್, “ನಾನು ವೃತ್ತಿಪರ ಟೆನಿಸ್ನಿಂದ ನಿವೃತ್ತನಾಗುತ್ತಿದ್ದೇನೆ ಎಂದು ನಿಮಗೆ ತಿಳಿಸಲು ನಾನು ಇಲ್ಲಿದ್ದೇನೆ ಎಂದಿದ್ದಾರೆ. ವಾಸ್ತವವೆಂದರೆ ಇದು ಕೆಲವು ಕಷ್ಟಕರ ವರ್ಷಗಳು, ವಿಶೇಷವಾಗಿ ಕಳೆದ ಎರಡು ವರ್ಷಗಳು. ಮಿತಿಗಳಿಲ್ಲದೆ ಆಡಲು ನನಗೆ ಸಾಧ್ಯವಾಗಿದೆ ಎಂದು ನಾನು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ. https://twitter.com/RafaelNadal/status/1844308861492318594 https://kannadanewsnow.com/kannada/journalist-ganesh-popularly-known-as-crime-ganesh-passes-away/ https://kannadanewsnow.com/kannada/kannada-film-producer-and-udaya-tv-chairman-selvam-passes-away/
ಬೆಂಗಳೂರು: ವಾಲ್ಮಿಕಿ ನಿಗಮ ಕರ್ಮಕಾಂಡ, ಮುಡಾ ಸೈಟ್ ಅಕ್ರಮ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಕೆಐಎಡಿಬಿ ಭೂ ಅವ್ಯವಹಾರದ ಉರುಳು ಕೂಡಾ ಸುತ್ತಿಕೊಂಡಿದೆ. ಸರ್ಕಾರಿ ಜಮೀನನ್ನೇ ಬೇರೆಯವರ ಹೆಸರಲ್ಲಿ ಪರಿಗಣಿಸಿ ಪರಿಹಾರ ವಿತರಿಸಿರುವ ಭಾರೀ ಅಕ್ರಮ ಆರೋಪ ಕುರಿತಂತೆ ಲೋಕಾಯುಕ್ತರಿಗೆ ದೂರು ಸಲ್ಲಿಕೆಯಾಗಿದೆ. “ಸಿಟಿಜನ್ ರೈಟ್ಸ್ ಫೌಂಡೇಷನ್” ಪರವಾಗಿ ಅಧ್ಯಕ್ಷ ಕೆ.ಎ.ಪಾಲ್ ನೀಡಿರುವ ಈ ದೂರು, ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ್ ಸಹಿತ ಹಲವರಿಗೆ ಉರುಳಾಗುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ. ಏನಿದು ಆರೋಪ? ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ಚಪ್ಪರದಹಳ್ಳಿ ಗ್ರಾಮದಲ್ಲೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಯಿಂದ ಭೂಸ್ವಾಧೀನ ಆದೇಶವಾಗಿದೆ. ಈ ಭೂಸ್ವಾಧೀನ ಪ್ರಕ್ರಿಯೆಯ ದಾಖಲೆಗಳನ್ನು ಗಮನಿಸಿದಾಗ ಅರ್ಹರಲ್ಲದವರ ಹೆಸರಿಗೆ ಹಣ ಸಂದಾಯ ನಡೆದಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ದೇವನಹಳ್ಳಿ ತಾಲೂಕಿನ ಸುತ್ತಮುತ್ತ ನೂರಾರು ಎಕರೆ ಜಮೀನನ್ನು ಕೆಐಎಡಿಬಿ ವತಿಯಿಂದ ಸ್ವಾಧೀನಪಡಿಸಲು ತಯಾರಿ ನಡೆದಾಗಲೇ, ಕುಂದಾಣ ಹೋಬಳಿ ಚಪ್ಪರದಹಳ್ಳಿ ಗ್ರಾಮದಲ್ಲಿ ಭೂ ಸ್ವಾಧೀನಕ್ಕೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” – ತಲಕಾವೇರಿ ಜಾತ್ರೆಗೆ ರೂ.75 ಲಕ್ಷ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು, ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಸ್ಥಾನದಲ್ಲಿ ಪ್ರತಿ ವರ್ಷದ ರೂಢಿ ಸಂಪ್ರದಾಯದಂತೆ ಈ ವರ್ಷ ದಿನಾಂಕ:17.10.2024 ರಂದು “ಶ್ರೀ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ನಡೆಯಲಿದೆ. ಕಳೆದ ವರ್ಷದಿಂದ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅನುದಾನ ನೀಡಲಾಗುತ್ತಿದೆ. ಸದರಿ ಜಾತ್ರಾ ಮಹೋತ್ಸವಕ್ಕೆ ಈ ಹಿಂದೆ ಎಂದೂ ಕೂಡ ಮುಜರಾಯಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿರುವುದಿಲ್ಲ ಎಂದಿದೆ. ಆದರೆ ಮಡಿಕೇರಿ( ಕೊಡಗು) ಡಾ. ಮಂಥರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ, ಶಾಸಕರು, ವಿರಾಜಪೇಟೆ ಅವರು ತಲಕಾವೇರಿ ಜಾತ್ರೆಗೆ ಹಣ ಬಿಡುಗಡೆ ಮಾಡಿ ವ್ಯವಸ್ಥಿತ ಜಾತ್ರೆ ನಡೆಸಲು ಹಾಗೂ ಆಗಮಿಸುವ ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಕಲ್ಪಿಸಲು ತಮ್ಮಲ್ಲಿ…
ಮಂಡ್ಯ: ಜಿಲ್ಲೆಯ ವ್ಯಕ್ತಿಯೊಬ್ಬ 500 ರೂಪಾಯಿ ಕೊಟ್ಟು ಕೇರಳದ ಲಾಟರಿ ಟಿಕೆಟ್ ಖರೀದಿಸಿದ್ದರು. ಅವರ ಅದೃಷ್ಟ ಖುಲಾಯಿಸಿದೆ. 500 ರೂ ಕೊಟ್ಟು ಖರೀದಿಸಿದಂತ ಲಾಟರಿಗೆ ಬರೋಬ್ಬರಿ 25 ಕೋಟಿ ಬಹುಮಾನ ಬಂದಿದೆ. ಈ ಮೂಲಕ ಮಂಡ್ಯದ ಕುವರನೊಬ್ಬ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ಹೌದು. ಕೇರಳ ಲಾಟರಿಯಲ್ಲಿ ಮಂಡ್ಯದ ಕುವರನೊಬ್ಬ ಕೋಟಿ ಕೋಟಿ ಗೆದ್ದಿದ್ದಾನೆ. ಪಾಂಡವಪುರ ಪಟ್ಟಣದ ವ್ಯಕ್ತಿಗೆ ಒಲಿದ 25 ಕೋಟಿ ಬಹುಮಾನ ಬಂದಿದೆ. ಪಾಡವಪುರ ನಗರದ ಸ್ಕೂಟರ್ ಮೆಕ್ಯಾನಿಕ್ ಅಲ್ತಾಫ್ ಗೆ ಲಾಟರಿಯಲ್ಲಿ ಬಂಪರ್ ಲಕ್ ಹೊಡೆದಿರೋದು. ಇತ್ತೀಚೆಗೆ ಕೇರಳಕ್ಕೆ ಹೋಗಿದ್ದ ವೇಳೆ 500 ರೂ. ಕೊಟ್ಟು ಲಾಟರಿ ಖರೀದಿದ್ದರು. ಅಲ್ತಾಫ್ ಖರೀದಿಸಿದ್ದ ಆ ಲಾಟರಿ ಟಿಕೆಟ್ ಗೆ 25 ಕೋಟಿ ರೂ. ಬಂಪರ್ ಬಹುಮಾನ ಬಂದಿದೆ. ತೆರಿಗೆ ಕಳೆದು ಅಲ್ತಾಫ್ ಗೆ ಸುಮಾರು 17.5 ಕೋಟಿ ರೂ ಸಿಗಲಿದೆ. ಕೋಟಿ ರೂ ಬಹುಮಾನದ ಹಣ ತರಲು ಕೇರಳಕ್ಕೆ ಅಲ್ತಾಫ್ ಹಾಗೂ ಕುಟುಂಬ ದೌಡಾಯಿಸಿದೆ. ಈ ಮೂಲಕ ಕೇರಳದ ಲಾಟರಿ ಭಾಗ್ಯದಲ್ಲಿ…
ಬೆಂಗಳೂರು: ಕಳೆದ 20 ವರ್ಷಗಳಿಂದ ಕರ್ನಾಟಕ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಗಣೇಶ್, ಕ್ರೈಂ ಗಣೇಶ್ ಎಂಬುದಾಗಿಯೇ ಖ್ಯಾತರಾಗಿದ್ದಂತ ಪತ್ರಕರ್ತರು. ಅವರು ಕೆಲ ದಿನಗಳ ಹಿಂದೆ ಅನಾರೋಗ್ಯದಿಂದಾಗಿ ನಗರದ ಜೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ನಿಧರಾಗಿದ್ದಾರೆ. ಈ ಮೂಲಕ ಕ್ರೈಂ ಗಣೇಶ್ ಎಂದೇ ಖ್ಯಾತರಾಗಿದ್ದಂತ ಪತ್ರಕರ್ತ ಗಣೇಶ್ ಇನ್ನಿಲ್ಲವಾಗಿದ್ದಾರೆ. ಕ್ರೈಂ ಗಣೇಶ್, ಮೂಲತಃ ಮಾಗಡಿ ತಾಲೂಕಿನ ತಾಳೆಕೆರೆಯ ಗಂಗಯ್ಯ ಮತ್ತು ಕೆಂಪಮ ದಂಪತಿ ಪುತ್ರರಾಗಿದ್ದರು. ಅವರು ಪತ್ನಿ ಪಾರ್ವತಮ್ಮ ಹಾಗೂ ಪುತ್ರನನ್ನು ಅಗಲಿದ್ದಾರೆ. ಇಂದು ಅವರ ಮೃತದೇಹವನ್ನು ತಾಳೆಕೆರೆಗೆ ಕೊಂಡೊಯ್ದು ಗುಡ್ಡೆ ರಂಗನಾಥಸ್ವಾಮಿ ಗುಡಿ ರಸ್ತೆಯಲ್ಲಿರುವ ಅವರ ಜಮೀನಿನಲ್ಲಿ ಸಂಜೆ 5ಕ್ಕೆ ಅಂತ್ಯ ಸಂಸ್ಕಾರ ನೆರವೇರಲಿದೆ. ಕಸ್ತೂರಿ ಟಿವಿ ಮೂಲಕ ಕಸ್ತೂರಿ ಗಣೇಶ್ ಎಂದು ಪರಿಚಿತರಾಗಿದ್ದ ಗಣೇಶ್ ಅವರ ಕ್ರೈಂ ವರದಿಗಾರಿಕೆಯಲ್ಲಿ ನಿಪುಣರಾಗಿದ್ದರು. ಅವರ ಮಾರ್ಗದರ್ಶನದಲ್ಲಿ ಇಂದು ಹಲವಾರು ಯುವ ಪತ್ರಕರ್ತರು ಯಶಸ್ವಿ ಪತ್ರಕರ್ತರಾಗಿ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಸ್ತೂರಿ, ನ್ಯೂಸ್ 18, ಪ್ರಜಾ ಟಿವಿಗಳಲ್ಲಿ ಸೇವೆ ಸಲ್ಲಿಸಿದ್ದ ಗಣೇಶ್ ಅವರು…
ಬೆಂಗಳೂರು: ಕನ್ನಡದ ಮೊದಲ ಉಪಗ್ರಹ ವಾಹಿನಿ ಉದಯ ಟಿವಿಯ ಅಧ್ಯಕ್ಷರು, ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿದ್ದಂತ ಸೆಲ್ವಂ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಉದಯ ಟಿವಿಯ ಅಧ್ಯಕ್ಷ ಸೆಲ್ವಂ(84) ಇನ್ನಿಲ್ಲವಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿ, ಕನ್ನಡದ ಮೊಟ್ಟ ಮೊದಲ ಉಪಗ್ರಹ ವಾಹಿನಿ ಉದಯ ಟಿವಿ ಅಧ್ಯಕ್ಷರಾಗಿದ್ದಂತವರು ಸೆಲ್ವಂ ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಲಾಯಿತು. ಆದರೇ ಚಿಕಿತ್ಸೆ ಫಲಿಸದೇ ಸೆಲ್ವಂ ನಿಧನರಾಗಿರುವುದಾಗಿ ತಿಳಿದು ಬಂದಿದೆ. ಕನ್ನಡಮ್ಮನ ಸೇವೆ ಮಾಡುತ್ತಾರೆ ನನ್ನಂತಹ ನೂರಾರು ಮಂದಿಗೆ ಅನ್ನದಾತರಾಗಿದ್ದ ಸೆಲ್ವಂ ಸರ್ ಇನ್ನಿಲ್ಲವಾಗಿದ್ದಾರೆ. ಮಾತೃಭಾಷೆ ಎಂದಕೂಡಲೇ ಅದೇನದು ಮಾತೃಭಾಷೆ.. ತಾಯ್ನುಡಿ ಎಂದು ನಮ್ಮನ್ನು ತಿದ್ದುವ ಮೇಷ್ಟ್ರಾಗಿದ್ದಂತವರು ಸೆಲ್ವಂ. ಟೀವಿ ಪರದೆಯ ಬಣ್ಣಗಳ ವೈವಿಧ್ಯಮಯ ಚಿತ್ತಾರವನ್ನು ವಿವರಿಸುವ ತಂತ್ರಜ್ಞ, ವೀಕ್ಷಕರು ನಾಡಿಮಿಡಿತ ಹೇಗಿರುತ್ತದೆ ಎಂದು ತಿಳಿ ಹೇಳುವ ವ್ಯವಹಾರ ಜ್ಞಾನಿಯಾಗಿದ್ದರು. ಯಾವ ಸುದ್ದಿ ಎಷ್ಟು ಮುಖ್ಯ ಅದಕ್ಕೆ ಯಾವ ಪ್ರಾಧಾನ್ಯತೆ ಕೊಡಬೇಕೆಂದು ಹೇಳುತ್ತಿದ್ದ ಪತ್ರಕರ್ತ,…
ಬೆಂಗಳೂರು: 2009ರ ಬಿಜೆಪಿಯ ಅವಧಿಯಿಂದಲೂ ಕೆ ಎಸ್ ಆರ್ ಟಿ ಸಿಯ ಬಸ್ಸುಗಳಿಗೆ ಆಯುಧ ಪೂಜೆ ಮಾಡೋದಕ್ಕೆ ರೂ.30 ನೀಡಲಾಗುತ್ತಿತ್ತು. ಅದನ್ನು ರೂ.50, ಆನಂತ್ರ 100, ಈಗ ರೂ.250ಕ್ಕೆ ಹೆಚ್ಚಿಸಿದ್ದು ಕಾಂಗ್ರೆಸ್ ಸರ್ಕಾರ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಿಜೆಪಿ ಅವರಿಗೆ ಸಾರಿಗೆ ಸಂಸ್ಥೆಗಳ ಬಗ್ಗೆ ಮಾತನಾಡಬೇಕಾದರೆ ಸ್ವಲ್ಪವಾದರೂ ಮಾಹಿತಿ ಸಂಗ್ರಹಿಸಿ ಟ್ಟೀಟ್ ಮಾಡಲು ಯಾರಾದರೂ ಪ್ರಜ್ಞಾವಂತರು ಸಲಹೆ ನೀಡಿದರೆ ಒಳ್ಳೆಯದು ಅನ್ನಿಸುತ್ತೆ. ಇಲ್ಲವೆಂದರೆ ಕೈ ತೋರಿಸಿ ಅವಲಕ್ಷಣ ಮಾಡಿಸಿಕೊಳ್ಳುವ ಹಠಕ್ಕೆ ಬಿದ್ದ ಆಗಿದೆ ಅವರ ಪರಿಸ್ಥಿತಿ ಎಂದಿದ್ದಾರೆ. ಪ್ರತಿ ಬಾರಿಯೂ ಅವರಿಗೆ ತಿಳುವಳಿಕೆ ನೀಡಿ ತಮ್ಮ ಬಿ.ಜೆ.ಪಿ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳನ್ನು ಅಧೋಗತಿ ತಳ್ಳಿದ ಪ್ರತಿಯೊಂದು ಅಂಶವನ್ನು ಅಂಕಿ ಅಂಶಗಳ ಸಹಿತ ವಿವರಿಸಿದ್ದಾಗ್ಯೂ ಸ್ವಲ್ಪ ಕೂಡ ಅರಿವಿಲ್ಲದೆ ಟ್ಟೀಟ್ ಮಾಡಿ ತಮ್ಮ ಮಾರ್ಯಾದೆಯನ್ನು ಈ ರೀತಿ ಹರಾಜು ಮಾಡಿಕೊಳ್ಳುತ್ತಿರುವುದಕ್ಕೆ ನನ್ನ ಸಹಾನುಭೂತಿ ಇದೆ ಎಂದು ಹೇಳಿದ್ದಾರೆ. ಬಿ.ಜೆ.ಪಿ ಅವಧಿಯಿಂದ…
ನಮ್ಮ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದ ಪರಿಸ್ಥಿತಿ ಇರುತ್ತದೆ. ಆ ಸಮಸ್ಯೆಯ ಬಗ್ಗೆ ಹೊರಗೆ ಯಾರಿಗೂ ಹೇಳಲೂ ಆಗದ ಹಾಗೆ ಸಿಕ್ಕಿಹಾಕಿಕೊಳ್ಳುತ್ತೇವೆ. ದೇವರನ್ನು ಬಿಟ್ಟು ಬೇರೆ ಯಾರೂ ಇದನ್ನು ಪರಿಹರಿಸಲು ಸಾಧ್ಯವಿಲ್ಲ ಎಂಬ ಹಂತಕ್ಕೆ ನಾವು ತಲುಪುತ್ತೇವೆ. ಆ ಹಂತವನ್ನು ತಲುಪಿದ ನಂತರ, ವಾರಾಹಿ ಅಮ್ಮನ ಬಗ್ಗೆ ಯೋಚಿಸಿ ಮತ್ತು ಮೂರು ದಿನಗಳವರೆಗೆ ಪ್ರತಿದಿನ ಈ ಒಂದು ವಿಷಯವನ್ನು ಬರೆಯಿರಿ, ವಾರಾಹಿ ಅಮ್ಮನವರು ನಿಮ್ಮ ಪರಿಹರಿಸಲಾಗದ ಸಮಸ್ಯೆಗಳನ್ನು ಪರಿಹರಿಸುವ ಮಾರ್ಗಗಳನ್ನು ನೀಡುತ್ತಾರೆ. ಅಂತಹ ಆರಾಧನೆಯ ಬಗ್ಗೆ ನಾವು ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನೋಡಲಿದ್ದೇವೆ . ವಾರಾಹಿ ದೇವಿಯನ್ನು ಪೂಜಿಸಿದರೆ ನಮಗೆ ಹಲವಾರು ಲಾಭಗಳು ಸಿಗುತ್ತವೆ. ಜೀವನದಲ್ಲಿ ಶತ್ರುಗಳ ಕಾಟ, ಸಾಲದ ಬಾಧೆಯಿಂದ ನರಳುತ್ತಿರುವವರು ವಾರಾಹಿ ಅಮ್ಮನವರಿಗೆ ಮನಃಪೂರ್ವಕವಾಗಿ ಅರ್ಪಿಸಿದರೆ ಕ್ರಮೇಣ ಕಷ್ಟಗಳೆಲ್ಲ ಮಾಯವಾದಂತೆ ಅನಿಸುತ್ತದೆ. ಅಂತಹ ವಾರಾಹಿ ಅಮ್ಮನವರನ್ನು ಆಲೋಚಿಸಿ ಮಾಡಬಹುದಾದ ಸರಳ ಪರಿಹಾರವನ್ನು ನೋಡೋಣ. ಈ ಪರಿಹಾರವನ್ನು ಯಾವುದೇ ದಿನದಲ್ಲಿ ಮಾಡಬಹುದು. ನೀವು ಯಾವಾಗ ಬೇಕಾದರೂ ಮಾಡಬಹುದು. ನಮಗೆ ಬೇಕಾಗಿರುವುದು…
ಬೆಂಗಳೂರು: ಕಳೆದ ಕೆಲ ವರ್ಷಗಳಿಂದ ಕೆ ಎಸ್ ಆರ್ ಟಿಸಿಯಿಂದ ಸಾರಿಗೆ ಬಸ್ಸುಗಳನ್ನು ಆಯುಧ ಪೂಜೆಯಂದು ಪೂಜಿಸಲು ರೂ.100 ನೀಡಲಾಗುತ್ತಿತ್ತು. ಈ ದುಬಾರಿ ದುನಿಯಾದಲ್ಲಿ ಇಷ್ಟು ಹಣ ಸಾಕಾಗುವುದೇ ಎಂಬುದಾಗಿ ಅನೇಕರು ಪ್ರಶ್ನಿಸಿದ್ದರು. ಅಲ್ಲದೇ ಹೆಚ್ಚಳಕ್ಕೂ ಒತ್ತಾಯಿಸಿದ್ದರು. ಈಗ ಕೆ ಎಸ್ ಆರ್ ಟಿ ಸಿ ಸಂಸ್ಥೆಯಲ್ಲಿ ಆಯುಧ ಪೂಜೆಗೆ ರೂ.100 ನೀಡುತ್ತಿರುವುದನ್ನು ರೂ.250 ಕ್ಕೆ ಹೆಚ್ಚಿಸಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಯಾಂತ್ರಿಕ ಅಭಿಯಂತರರು ಆದೇಶವನ್ನು ಹೊರಡಿಸಿದ್ದು, ಪ್ರತಿ ವರ್ಷವು ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಆಚರಣೆಯಲ್ಲಿರುವ ಆಯುಧ ಪೂಜೆಯ ದಿನದಂದು ನಿಗಮದ ವಾಹನಗಳು ಮತ್ತು ಯಂತ್ರೋಪಕರಣಗಳನ್ನು ಸುಸ್ಥಿತಿಯಲ್ಲಿಟ್ಟು ಪೂಜೆ ಮಾಡುವುದು ಸಂಪುದಾಯವಿದ್ದು ಉಲ್ಲೇಖಿತ ಪತ್ರ 2 ರಲ್ಲಿ ವಿಭಾಗಗಳಲ್ಲಿ ಕಾರ್ಯಾಚರಣೆಯಲ್ಲಿರುವ ಪ್ರತಿ ಪ್ರಯಾಣಿಕ ಹಾಗೂ ಇಲಾಖಾ ವಾಹನದ ಪೂಜಾ ಕಾರ್ಯಕ್ಕೆ ರೂ. 100/- (ನೂರು ರೂಪಾಯಿಗಳು ಮಾತ್ರ) ರಂತೆ ಮುಂಗಡ ಹಣ ಪಡೆದು ಸ್ವಚ್ಛತೆಯೊಂದಿಗೆ ವಾಹನಗಳ ಮತ್ತು ಯಂತ್ರೋಪಕರಣಗಳ ಪೂಜೆ ಮಾಡುವಂತೆ…
ಬೆಂಗಳೂರು: ಸಿಲಿಕಾನ್ ಸಿಟಿಯ ನಗರ ಕಬ್ಬನ್ ಪೇಟೆ ಮುಖ್ಯರಸ್ತೆಯಲ್ಲಿರುವಂತ ಹಜ್ರತ್ ಹಮೀದ್ ಷಾ ಮತ್ತು ಹಜ್ರತ್ ಮುಹಿಬ್ ಶಾ ಖಾದ್ರಿ ವಕ್ಸ್ ಇನ್ನೂಷನ್ ನಲ್ಲಿ ಭಾರೀ ಹಗರಣ ನಡೆದಿದೆ. ಈ ಸಂಬಂಧ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಆಲಮ್ ಪಾಷಾ ಎಂಬುವರು ದೂರು ನೀಡಿದ್ದಾರೆ. ಈ ದೂರು ಆಧರಿಸಿ ಜಿ.ಎ ಬಾವ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಈ ಕುರಿತಂತೆ ಆಲಮ್ ಪಾಷಾ ಎಂಬುವರು ಹಲಸೂರುಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಬೆಂಗಳೂರು ನಗರ ಕಬ್ಬನ್ ಪೇಟೆ ಮುಖ್ಯರಸ್ತೆ, ಹಜ್ರತ್ ಹಮೀದ್ ಷಾ ಮತ್ತು ಹಜ್ರತ್ ಮುಹಿಬ್ ಶಾ ಖಾದ್ರಿ ವಕ್ಸ್ ಇನ್ನೂಷನ್ ಸರ್ಕಾರದ ವಕ್ಸ್ ಬೋರ್ಡ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುತ್ತದೆ. ಇದರ ಅಧ್ಯಕ್ಷರು ಮತ್ತು ಅಡಳಿತಾಧಿಕಾರಿಯಾಗಿ ಜಿ.ಎ. ಬಾವಾ, ನಿವೃತ್ತ ಡಿ,ಸಿ,ಪಿ ಸುಮಾರು 8 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುತ್ತಾರೆ. ಜಂಟಿ ಕಾರ್ಯಧರ್ಶಿಯಾಗಿ ಸೈಯದ್ ರಶೀರ್ ಅಹಮ್ಮದ್…














