Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಬೆನ್ನಲ್ಲೇ ಮತ್ತೊಂದು ಶಾಕ್ ಎನ್ನುವಂತೆ ವಿದ್ಯುತ್ ದರ ಏರಿಕೆಯ ಶಾಕ್ ಅನ್ನು ನೀಡಲಾಗಿದೆ. ಈ ಸಂಬಂಧ ಇಂದು ಕೆಇಆರ್ ಸಿ ಮಾಹಿತಿ ನೀಡಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ರಾಜ್ಯಾಧ್ಯಂತ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ. ಈ ಮೂಲಕ ಹಾಲಿನ ದರ ಏರಿಕೆ ಬೆನ್ನಲ್ಲೇ ವಿದ್ಯುತ್ ದರೆ ಏರಿಕೆ ಶಾಕ್ ನೀಡಲಾಗಿದೆ. ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ರಾಜ್ಯದಲ್ಲಿ ಹೈನೋದ್ಯಮಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರವನ್ನು ಪ್ರತಿ ಲೀಟರ್/ಕೆಜಿಗೆ ರೂ.4/- ರಂತೆ ಹೆಚ್ಚಿಸಲು ಸಮ್ಮತಿಸಲಾಯಿತು. ದರ ಪರಿಷ್ಕರಣೆಯ ಮೊತ್ತವು ರಾಜ್ಯದ ಹಾಲು ಉತ್ಪಾದಕರಿಗೆ ನೇರವಾಗಿ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಈ ಹಿಂದೆ ದಿನಾಂಕ:26.06.2024…

Read More

ಬೆಂಗಳೂರು: ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿದ್ದಂತ 384 ಕೆಎಎಸ್ ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆಯನ್ನು ಏಪ್ರಿಲ್ 2ರಂದು ನಡೆಸುವುದಾಗಿ ಕೆಪಿಎಸ್ಸಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಲೋಕಸೇವಾ ಆಯೋಗವು,  2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳಿಗೆ ಅಧಿಸೂಚನೆಗಳನ್ನು ಕ್ರಮವಾಗಿ ದಿನಾಂಕ: 26-02-2024 ಮತ್ತು. ದಿನಾಂಕ:13-02-2025ರಂದು ಹೊರಡಿಸಲಾಗಿರುತ್ತದೆ ಎಂದು ತಿಳಿಸಿದೆ. ದಿನಾಂಕ:13-02-2025ರ ಅಧಿಸೂಚನೆಯಲ್ಲಿ ಮುಖ್ಯ ಪರೀಕ್ಷೆಯನ್ನು ದಿನಾಂಕ:28-03-2025, 29-03-2025, 01-04-2025 ಮತ್ತು 02-04-2025ರಂದು ನಡೆಸಲು ನಿಗದಿಪಡಿಸಲಾಗಿತ್ತು. ಕಾರಣಾಂತರಗಳಿಂದ ಮುಖ್ಯ ಪರೀಕ್ಷೆಯನ್ನು ಮುಂದೂಡಿ, ಪ್ರಕಟಣೆ ಹೊರಡಿಸಲಾಗಿತ್ತು ಎಂದು ಹೇಳಿದೆ. ಪ್ರಸ್ತುತ ಸದರಿ ಮುಖ್ಯ ಪರೀಕ್ಷೆಯನ್ನು ದಿನಾಂಕ:03-05-2025, 05-05-2025, 07-05-2025 ಮತ್ತು 09-05-2025 ರಂದು ನಡೆಸಲು ಮರುನಿಗದಿಪಡಿಸಲಾಗಿರುತ್ತದೆ. ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಆಯೋಗದ ಅಂತರ್ಜಾಲ http://kpsc.kar.nic.in ನಲ್ಲಿ, ಅಭ್ಯರ್ಥಿಗಳ ಮಾಹಿತಿಗಾಗಿ ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ. https://kannadanewsnow.com/kannada/sensex-surges-318-points-nifty-falls-below-23600/ https://kannadanewsnow.com/kannada/breaking-mp-priyanka-gandhi-visits-sitadevi-love-kush-temple-in-kerala-watch-video/

Read More

ನವದೆಹಲಿ: ಗುರುವಾರದ ವಹಿವಾಟಿನ ಆರಂಭವು ಸಕಾರಾತ್ಮಕವಾಗಿ ಕೊನೆಗೊಂಡಿದ್ದು, ಬೆಂಚ್‌ಮಾರ್ಕ್ ಷೇರು ಮಾರುಕಟ್ಟೆ ಸೂಚ್ಯಂಕಗಳು ಅಲುಗಾಡುವ ಆರಂಭದ ನಂತರ ಬಲವಾದ ಚೇತರಿಕೆಯನ್ನು ದಾಖಲಿಸಿವೆ. ಎಸ್ & ಪಿ ಬಿಎಸ್‌ಇ ಸೆನ್ಸೆಕ್ಸ್ 317.93 ಪಾಯಿಂಟ್‌ಗಳ ಏರಿಕೆಯಾಗಿ 77,606.43 ಕ್ಕೆ ಮುಕ್ತಾಯಗೊಂಡರೆ, ಎನ್‌ಎಸ್‌ಇ ನಿಫ್ಟಿ 50 105.10 ಪಾಯಿಂಟ್‌ಗಳ ಏರಿಕೆಯಾಗಿ 23,591.95 ಕ್ಕೆ ಮುಕ್ತಾಯವಾಯಿತು. ಪ್ರಗತಿಶೀಲ ಷೇರುಗಳ ನಿರ್ದೇಶಕ ಆದಿತ್ಯ ಗಗ್ಗರ್, “ಮಾಸಿಕ ಮುಕ್ತಾಯ ವಹಿವಾಟಿನ ನಿಧಾನಗತಿಯ ಆರಂಭದ ನಂತರ, ಮಾರುಕಟ್ಟೆಯು ಕೆಳ ಮಟ್ಟದಿಂದ ಬಲವಾದ ಚೇತರಿಕೆ ಕಂಡಿತು, ಆದಾಗ್ಯೂ ಸೂಚ್ಯಂಕವು ನಂತರ ಕಿರಿದಾದ ವ್ಯಾಪ್ತಿಯಲ್ಲಿ ಆಂದೋಲನಗೊಂಡು ಅಂತಿಮವಾಗಿ 105.10 ಪಾಯಿಂಟ್‌ಗಳ ಲಾಭದೊಂದಿಗೆ 23,591.95 ಕ್ಕೆ ಮುಕ್ತಾಯವಾಯಿತು” ಎಂದು ಹೇಳಿದರು. ಹೆಚ್ಚಿನ ವಿಶಾಲ ಮಾರುಕಟ್ಟೆ ಸೂಚ್ಯಂಕಗಳು ಸಹ ಅಧಿವೇಶನದಲ್ಲಿ ಏರಿತು, ಆದರೆ ಹೂಡಿಕೆದಾರರಿಗೆ ಅತಿದೊಡ್ಡ ಸಕಾರಾತ್ಮಕ ಅಂಶವೆಂದರೆ ಏಪ್ರಿಲ್ 2 ರ ಯುಎಸ್ ಪರಸ್ಪರ ಸುಂಕಗಳ ಗಡುವಿನ ಹೊರತಾಗಿಯೂ ಚಂಚಲತೆಯ ಕುಸಿತ. ಎರಡೂ ಕಡೆಯ ಸುಂಕಗಳ ಪರಿಣಾಮವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಭಾರತ ಮತ್ತು…

Read More

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂ.ಗಳಷ್ಟು ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ. ಏಪ್ರಿಲ್ 1ರಿಂದ ನೂತನ ದರ ಜಾರಿಗೊಳ್ಳಲಿದೆ. ಈ ನೂತನ ದರಪಟ್ಟಿಯಂತೆ ಯಾವ ಪ್ಯಾಕೇಟ್ ಹಾಲು ಎಷ್ಟು ರೂಪಾಯಿ ಹೆಚ್ಚಳವಾಗಲಿದೆ ಅಂತ ಮಾಹಿತಿ ಮುಂದಿದೆ ಓದಿ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡುವುದಕ್ಕೆ ಅನುಮೋದಿಸಿದೆ. ಏಪ್ರಿಲ್ 1ರಿಂದ ರಾಜ್ಯದಲ್ಲಿ 4 ರೂಪಾಯಿ ನಂದಿನಿ ಹಾಲಿನ ದರ ಹೆಚ್ಚಳವಾಗಲಿದೆ. ಹಾಗಾದ್ರೇ ಯಾವ ಮಾದರಿಯ ಹಾಲಿಗೆ ಎಷ್ಟು ಬೆಲೆ ಹೆಚ್ಚಳ ಅಂತ ಈ ಕೆಳಗಿದೆ ನೂತನ ಪರಿಷ್ಕೃತ ದರಪಟ್ಟಿ. ಹೀಗಿದೆ ನೂತನ ಪರಿಷ್ಕೃತ ದರಪಟ್ಟಿ ನೀಲಿ ಪ್ಯಾಕೇಟ್ ಹಾಲಿನ ದರ 44 ರೂಪಾಯಿಯಿಂದ 48 ರೂಪಾಯಿಗೆ ಏರಿಕೆ. ಆರೇಂಜ್ ಪ್ಯಾಕೇಟ್ ನಂದಿನಿ ಹಾಲಿನ ದರ ರೂ.54 ರಿಂದ 58 ರೂಗೆ ಏರಿಕೆ. ಸಮೃದ್ಧಿ ಪ್ಯಾಕೇಟ್ ನಂದಿನಿ…

Read More

ಬೆಂಗಳೂರು : ಕಳಪೆ ಗುಣಮಟ್ಟದ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳಪೆ ಮೂಲ ಸೌಕರ್ಯ ಹೊಂದಿರುವ ಸಂಸ್ಥೆಗಳು ಹಾಗೂ ಅಂಗಸಂಸ್ಥೆಗಳನ್ನು ಮುಚ್ಚಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ನಿರ್ದೇಶನ ನೀಡಿದ್ದಾರೆ. ಮೂಲಸೌಕರ್ಯ ಮತ್ತು ಬೋಧನಾ ಮಾನದಂಡಗಳನ್ನು ಪೂರೈಸಲು ವಿಫಲವಾದ ಸಂಸ್ಥೆಗಳನ್ನು ಕೂಡಲೇ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಗುರುವಾರ ವಿಕಾಸಸೌಧದಲ್ಲಿ ನಡೆದ ರಾಜ್ಯ ಪ್ಯಾರಾ-ಮೆಡಿಕಲ್ ಮಂಡಳಿಯ ಪರಿಶೀಲನಾ ಸಭೆಯಲ್ಲಿ ಸಚಿವರು, ಹಲವಾರು ಖಾಸಗಿ ಕಾಲೇಜುಗಳಲ್ಲಿನ ನ್ಯೂನತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಸಮರ್ಪಕ ಸೌಲಭ್ಯಗಳೊಂದಿಗೆ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜುಗಳಿವೆ. ಒಂದು ಸಂಸ್ಥೆಯು ನೂರಾರು ವಿದ್ಯಾರ್ಥಿಗಳಿಗೆ ಒಂದೇ ಸೂಕ್ಷ್ಮದರ್ಶಕವನ್ನು ನೀಡುತ್ತಿದೆ ಹಾಗೂ ಇನ್ನೊಂದು ಸರಿಯಾದ ಬೆಳಕಿಲ್ಲದೆ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ಸಚಿವರಿಗೆ ವರದಿ ನೀಡಿದ್ದಾರೆ. ಭಾರಿ ಶುಲ್ಕ ಪಡೆದರೂ ಕಳಪೆ ಬೋಧನೆ ಖಾಸಗಿ ಸಂಸ್ಥೆಗಳು ಅನುಮೋದನೆ ಪಡೆಯುವಾಗ ದಾರಿತಪ್ಪಿಸುವ ಮಾಹಿತಿ ನೀಡುತ್ತಿವೆ. ಭಾರಿ…

Read More

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (Union Public Service Commission -UPSC)  ತನ್ನ ವೆಬ್ಸೈಟ್ನಲ್ಲಿ ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ( Combined Defence Services -CDS) 1 2025 ಪ್ರವೇಶ ಪತ್ರವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ / ರೋಲ್ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಅದನ್ನು ಡೌನ್ಲೋಡ್ ಮಾಡಬಹುದು. ಸಿಡಿಎಸ್ 1 ಪರೀಕ್ಷೆಯನ್ನು ಏಪ್ರಿಲ್ 13, 2025 ರಂದು ನಡೆಸಲಾಗುವುದು ಮತ್ತು ಪ್ರವೇಶಕ್ಕೆ ಪ್ರವೇಶ ಪತ್ರ ಕಡ್ಡಾಯ ದಾಖಲೆಯಾಗಿದೆ. ಪ್ರವೇಶ ಪತ್ರದಲ್ಲಿ ಅಭ್ಯರ್ಥಿಯ ಹೆಸರು, ರೋಲ್ ಸಂಖ್ಯೆ, ಪರೀಕ್ಷಾ ಕೇಂದ್ರ, ವರದಿ ಮಾಡುವ ಸಮಯ ಮತ್ತು ಪರೀಕ್ಷಾ ಸೂಚನೆಗಳಂತಹ ನಿರ್ಣಾಯಕ ವಿವರಗಳಿವೆ. ಯುಪಿಎಸ್ಸಿ ಅಭ್ಯರ್ಥಿಗಳಿಗೆ ಎಲ್ಲಾ ವಿವರಗಳನ್ನು ಪರಿಶೀಲಿಸಲು ಮತ್ತು ವ್ಯತ್ಯಾಸಗಳನ್ನು ತಕ್ಷಣ ವರದಿ ಮಾಡಲು ಸಲಹೆ ನೀಡುತ್ತದೆ. ಮುದ್ರಿತ ಪ್ರತಿಯನ್ನು ಮಾನ್ಯ ಫೋಟೋ ಐಡಿ ಪ್ರೂಫ್ ನೊಂದಿಗೆ ಪರೀಕ್ಷಾ ಕೊಠಡಿಗೆ ಕೊಂಡೊಯ್ಯಬೇಕು. ಯುಪಿಎಸ್ಸಿ ಸಿಡಿಎಸ್ 1 ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾದ ವಿವರಗಳು…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳಕ್ಕೆ ಅನುಮೋದನೆ ನೀಡಲಾಯಿತು. ಇದಲ್ಲದೇ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಅನುಮೋದಿಸಿದೆ. ಆ ಎಲ್ಲಾ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದು ಸಿಎಂ ಸಿದ್ಧರಾಮಯ್ಯ ನೇೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಣಯಗಳನ್ನು ಮಾದ್ಯಮಗೋಷ್ಠಿಯಲ್ಲಿ ಸಚಿವ ಹೆಚ್.ಕೆ ಪಾಟೀಲ್ ವಿವರಿಸಿದರು. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 34 ವಿಷಯಗಳ ಬಗ್ಗೆ ಚರ್ಚೆಯಾಗಿದೆ. ನ್ಯಾ.ನಾಗಮೋಹನ್ ದಾಸ್ ಆಯೋಗ ರಚನೆ ಬಗ್ಗೆಯೂ ಚರ್ಚಿಸಲಾಗಿದೆ. ಒಳ‌ಮೀಸಲಾತಿ ಬಗ್ಗೆ ಆಯೋಗ ರಚಿಸಿತ್ತು. ಅವರು ಮಧ್ಯಂತರ ವರದಿಯನ್ನ ಕೊಟ್ಟಿದ್ದಾರೆ. ಅದರಲ್ಲಿ 4 ಪ್ರಮುಖ ಶಿಫಾರಸು ಮಾಡಿದ್ದಾರೆ. ಉಪಜಾತಿಗಳ ವೈಜ್ಙಾನಿಕ‌ವರದಿಗೆ ಸಮೀಕ್ಷೆ ಮಾಡಬೇಕು. ದತ್ತಾಂಶವನ್ನ ಮಾಡಬೇಕು. 30 ರಿಂದ 40 ದಿನದೊಳಗೆ ಹೊಸದಾಗಿ ಸಮೀಕ್ಷೆ ಮಾಡಬಹುದು ಎಂದಿದ್ದಾರೆ ಎಂದರು. ಹೊಸ ಸಮೀಕ್ಷೆ ನಡೆಸಲು ಪ್ರಶ್ನೆಗಳ ಸಿದ್ಧತೆ, ಸಂಸ್ಥೆ, ಸಂಪನ್ಮೂಲ ಬೇಕಿದೆ. ಹೊಸ ಸಮೀಕ್ಷೆಯಿಂದ…

Read More

ಬೆಂಗಳೂರು: ನಟಿ ರನ್ಯಾ ರಾವ್ ಅವರು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ನಟಿ ರನ್ಯಾ ರಾವ್ ಗೆ ಬಿಗ್ ಶಾಕ್ ನೀಡಲಾಗಿದೆ. ಈ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟಿ ರನ್ಯಾ ರಾವ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಈ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಅವರು ವಿಚಾರಣೆಯ ವೇಳೆ ಸರಿಯಾಗಿ ಸಹಕರಿಸಿಲ್ಲ. ತನಿಖೆ ಬಾಕಿ ಇದೆ. ಯಾವುದೇ ಕಾರಣಕ್ಕೂ ಜಾಮೀನು ನೀಡದಂತೆ ಡಿಆರ್ಐ ಪರ ವಕೀಲರು ವಾದಿಸಿದ್ದರು. ಈ ಎಲ್ಲಾ ವಾದ ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯವು ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. https://kannadanewsnow.com/kannada/breaking-mp-priyanka-gandhi-visits-sitadevi-love-kush-temple-in-kerala-watch-video/ https://kannadanewsnow.com/kannada/nandini-milk-price-hiked-by-rs-2-from-tomorrow-heres-the-revised-price-list/

Read More

ಬೆಂಗಳೂರು: ಕರ್ನಾಟಕದ ಪರಿಶಿಷ್ಟ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯು, ಸಿಎಂ ಸಿದ್ಧರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ್ತ ನಿವೃತ್ತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ಅವರು, ಎಸ್ಸಿ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆ ತಮ್ಮ ಮಧ್ಯಂತರ ವರದಿಯನ್ನು ಸಲ್ಲಿಸಿದರು. ಮಧ್ಯಂತರ ವರದಿಯ ಶಿಫಾರಸ್ಸುಗಳು ಏನು.? ರಾಜ್ಯದಲ್ಲಿ ಎಸ್ಸಿಯಲ್ಲಿರುವಂತ ಉಪ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದಂತ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಲು ಶಿಫಾರಸ್ಸು. ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪ ಜಾತಿಗಳ ವೈಜ್ಞಾನಿಕ ಸಮೀಕ್ಷೆಯನ್ನು ಆಧುನಿಕ ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿನಗಳಲ್ಲಿ ಹೊಸದಾದ ಸಮೀಕ್ಷೆ ಮಾಡಬಹುದು ಎಂಬುದಾಗಿ ತಜ್ಞರ ಅಭಿಪ್ರಾಯ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವಂತ ಪ್ರಶ್ನಾವಳಿ ತಯಾರಿಸಲು ಶಿಫಾರಸ್ಸು ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣದ ಕುರಿತು ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು. ಸಿಬ್ಬಂದಿಗೆ ತರಬೇತಿ,…

Read More

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂ.ಗಳಷ್ಟು ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ. ಹಾಗಾದ್ರೇ ಯಾವ ಪ್ಯಾಕೇಟ್ ಹಾಲು ಎಷ್ಟು ರೂಪಾಯಿ ಹೆಚ್ಚಳವಾಗಲಿದೆ ಅಂತ ಮಾಹಿತಿ ಮುಂದಿದೆ ಓದಿ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡುವುದಕ್ಕೆ ಅನುಮೋದಿಸಿದೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಅನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಹೀಗಿದೆ ನೂತನ ಪರಿಷ್ಕೃತ ದರಪಟ್ಟಿ ನೀಲಿ ಪ್ಯಾಕೇಟ್ ಹಾಲಿನ ದರ 44 ರೂಪಾಯಿಯಿಂದ 48 ರೂಪಾಯಿಗೆ ಏರಿಕೆ. ಆರೇಂಜ್ ಪ್ಯಾಕೇಟ್ ನಂದಿನಿ ಹಾಲಿನ ದರ ರೂ.54 ರಿಂದ 58 ರೂಗೆ ಏರಿಕೆ. ಸಮೃದ್ಧಿ ಪ್ಯಾಕೇಟ್ ನಂದಿನಿ ಹಾಲಿನ ದರ ರೂ.56 ರಿಂದ 60ಕ್ಕೆ ಏರಿಕೆ. ಗ್ರೀನ್ ಸ್ಪೆಷಲ್ ಹಾಲಿನ ದರ ರೂ.54 ರಿಂದ 58ಕ್ಕೆ ಏರಿಕೆ. ನಾರ್ಮಲ್ ಗ್ರೀನ್ ಹಾಲಿನ ದರ ರೂ.52ರಿಂದ…

Read More