Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ರಾಷ್ಟ್ರವನ್ನು ಆವರಿಸಿದ ಭಾವನಾತ್ಮಕ ಚರ್ಚೆಯ ನಂತರ ಆಸ್ಟ್ರೇಲಿಯಾ ಗುರುವಾರ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧವನ್ನು ಕಾನೂನಾಗಿ ಅಂಗೀಕರಿಸಿತು, ಇದು ಬಿಗ್ ಟೆಕ್ ಅನ್ನು ಗುರಿಯಾಗಿಸಿಕೊಂಡು ಕಠಿಣ ನಿಯಮಗಳಲ್ಲಿ ಒಂದಾಗಿದೆ. ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಮಾಲೀಕ ಮೆಟಾದಿಂದ ಟಿಕ್ಟಾಕ್ವರೆಗೆ ಟೆಕ್ ದೈತ್ಯರು ಅಪ್ರಾಪ್ತ ವಯಸ್ಕರು ಲಾಗಿನ್ ಆಗುವುದನ್ನು ನಿಲ್ಲಿಸಲು ಅಥವಾ 49.5 ಮಿಲಿಯನ್ ಡಾಲರ್ (ಯುಎಸ್ಡಿ 32 ಮಿಲಿಯನ್) ವರೆಗೆ ದಂಡವನ್ನು ಎದುರಿಸಲು ಕಾನೂನು ಒತ್ತಾಯಿಸುತ್ತದೆ. ಇದನ್ನು ಜಾರಿಗೊಳಿಸುವ ವಿಧಾನಗಳ ಪ್ರಯೋಗವು ಜನವರಿಯಲ್ಲಿ ಪ್ರಾರಂಭವಾಗಲಿದ್ದು, ನಿಷೇಧವು ಒಂದು ವರ್ಷದಲ್ಲಿ ಜಾರಿಗೆ ಬರಲಿದೆ. ಸಾಮಾಜಿಕ ಮಾಧ್ಯಮ ಕನಿಷ್ಠ ವಯಸ್ಸಿನ ಮಸೂದೆಯು ಯುವಜನರ ಮೇಲೆ ಮಾನಸಿಕ ಆರೋಗ್ಯದ ಪರಿಣಾಮದ ಬಗ್ಗೆ ಕಳವಳದ ನಡುವೆ ಸಾಮಾಜಿಕ ಮಾಧ್ಯಮದಲ್ಲಿ ವಯಸ್ಸಿನ ನಿರ್ಬಂಧವನ್ನು ಶಾಸನ ಮಾಡಲು ಯೋಜಿಸಿರುವ ಅಥವಾ ಕಾನೂನು ಮಾಡಲು ಯೋಜಿಸಿರುವ ಹೆಚ್ಚುತ್ತಿರುವ ಸರ್ಕಾರಗಳಿಗೆ ಆಸ್ಟ್ರೇಲಿಯಾವನ್ನು ಪರೀಕ್ಷಾ ಪ್ರಕರಣವಾಗಿ ರೂಪಿಸುತ್ತದೆ. ಫ್ರಾನ್ಸ್ ಮತ್ತು ಕೆಲವು ಯುಎಸ್ ರಾಜ್ಯಗಳು ಸೇರಿದಂತೆ ದೇಶಗಳು ಪೋಷಕರ…
ಲಂಡನ್: ಮುಂಬರುವ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ 15 ದಿನಗಳ ಯೂರೋಪ್ ಪ್ರವಾಸ ಕೈಗೊಂಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮೊದಲ ದಿನವಾದ ಗುರುವಾರ ಸ್ಮಿತ್ ಗ್ರೂಪ್ ಜತೆ ಬಂಡವಾಳ ಹೂಡಿಕೆ ಕುರಿತು ಲಂಡನ್ ನಲ್ಲಿ ಮಾತುಕತೆ ನಡೆಸಿದ್ದಾರೆ. ಜತೆಗೆ ಆಲ್ಕೋಬೇವ್ (ಮದ್ಯ ತಯಾರಿಕೆ) ವಲಯದ ಕಂಪನಿಗಳ ಜತೆಯೂ ಅವರು ದುಂಡುಮೇಜಿನ ಸಭೆ ನಡೆಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಸ್ಮಿತ್ ಗ್ರೂಪ್ ಕರ್ನಾಟಕದಲ್ಲಿ ದೀರ್ಘಾವಧಿ ಹೂಡಿಕೆ ಮಾಡಲು ಮತ್ತು ತನ್ನ ಉತ್ಪಾದನಾ ಚಟುವಟಿಕೆಗಳನ್ನು ವಿಸ್ತರಿಸಲು ಒಲವು ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ. ಏರೋಸ್ಪೇಸ್ ಮತ್ತು ರಕ್ಷಣಾ ವಲಯ ಸೇರಿದಂತೆ ಹಲವು ವಲಯಗಳಲ್ಲಿ ಸಕ್ರಿಯವಾಗಿರುವ ಸ್ಮಿತ್ ಗ್ರೂಪ್, ತನ್ನ ವೆಟ್ ಸೀಲ್ ಜೋಡಣೆ ಚಟುವಟಿಕೆಗಳನ್ನು ಥಾಯ್ಲೆಂಡಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲು ತೀರ್ಮಾನಿಸಿದೆ. ಅದು ಬೆಂಗಳೂರಿನಲ್ಲಿ ಈಗಾಗಲೇ 600 ಉದ್ಯೋಗಿಗಳನ್ನು ಹೊಂದಿದೆ. ಜತೆಗೆ ಕಂಪನಿಯು ತನ್ನ ಹೂಡಿಕೆ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಮೋಹಿತ್ ನರಸಿಂಹ ಮೂರ್ತಿ ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಕಾಟನ್ ಪೇಟೆ ಹಾಗೂ ತುಮಕೂರಿನ ಕೊರಟಗೆರೆಯಲ್ಲಿ ಮೋಹಿತ್ ವಿರುದ್ಧ ದೂರು ದಾಖಲಾಗಿತ್ತು, ಉತ್ತರಾಖಾಂಡ ದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಯನ್ನು ತುಮಕೂರು ಪೊಲೀಸರು ಬಂಧಿಸಿ ಕರೆತರುತ್ತಿದ್ದಾರೆ. ಮೋಹಿತ್ ನರಸಿಂಹ ಮೂರ್ತಿ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಜತೆಗೆ ಜಾತಿ ನಿಂದನೆ ದಸಹ ಮಾಡಿದ್ದರು. ದೂರು ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದರು. ಪೊಲೀಸರು ಮೊಬೈಲ್ ಟವರ್ ಪತ್ತೆ ಹಚ್ಚಿ ಉತ್ತರಾಖಂಡ ದಲ್ಲಿ ಬಂಧಿಸಿ ಕರೆತರುತ್ತಿದ್ದು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ. https://kannadanewsnow.com/kannada/state-cabinet-decides-to-re-appeal-for-prosecution-against-bs-yediyurappa/ https://kannadanewsnow.com/kannada/cm-to-be-vice-chancellor-of-universities-cabinet-meeting/
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ದಿನಾಂಕ: 28.11.2024ರ ಸಚಿವ ಸಂಪುಟದ ಮಹತ್ವದ ನಿರ್ಣಯಗಳ ಬಗ್ಗೆ ಮುಂದೆ ಓದಿ. ಲೋಕಾಯುಕ್ತ ಸಂಸ್ಥೆಯಲ್ಲಿ ಎಸ್.ನಿರಂಜನ್, ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ಹಾಗೂ ಬಿ.ಪ್ರಸನ್ನಕುಮಾರ್, ನಿವೃತ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಇವರ ಸೇವೆಯನ್ನು ಮತ್ತೊಂದು ವರ್ಷದ ಅವಧಿಗೆ ಮುಂದುವರೆಸಲು ಪ್ರಸ್ತಾಪಿಸಲಾಗಿದೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಆಡಳಿತ ಹಿತದೃಷ್ಟಿಯಿಂದ ಹಾಗೂ ತಾಂತ್ರಿಕ ವಿಭಾಗಕ್ಕೆ ವಹಿಸುವ ದೂರು ಪ್ರಕರಣಗಳಲ್ಲಿ ತನಿಖಾ ವರದಿಗಳನ್ನು ನಿಗದಿತ ಕಾಲಾವದಿಯೊಳಗೆ ಪಡೆಯುವುದು ಅವಶ್ಯಕವಾಗಿದೆ ಎಂದು ಲೋಕಾಯುಕ್ತ ನಿಬಂಧಕರು ಕೋರಿರುತ್ತಾರೆ. • ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ 05 ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳು ಹಾಗೂ 08 ಸಹಾಯಕ ಇಂಜಿನಿಯರ್ಗಳ ಹುದ್ದೆಗಳು ಮಂಜೂರಾಗಿವೆ. ಈ ಪೈಕಿ ಇಬ್ಬರು ಕಾರ್ಯಪಾಲಕ ಇಂಜಿನಿಯರ್ ಹಾಗೂ ಒಬ್ಬರು ಸಹಾಯಕ ಇಂಜಿನಿಯರ್ ಹುದ್ದೆಗಳು ಖಾಲಿಯಿವೆ. ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಅನುಸೂಚಿ-1ರ ಐಟಂ-19ರನ್ವಯ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಕಾರ್ಯಪಾಲಕ ಇಂಜಿನಿಯರ್ ಹಾಗೂ ಸಹಾಯಕ…
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಆಸ್ತಿ ವಿವರ ಸಲ್ಲಿಸುವಂತ ಸಂದರ್ಭದಲ್ಲಿ ಹೊಳಲ್ಕೆರೆಯ ಮಾಜಿ ಶಾಸಕ ಎ.ವಿ ಉಮಾಪತಿ ಅವರು ತಪ್ಪು ಮಾಹಿತಿ ನೀಡಿದ್ದರು. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 3 ತಿಂಗಳ ಜೈಲು ಶಿಕ್ಷೆ, 1 ಸಾವಿರ ದಂಡವನ್ನು ವಿಧಿಸಿ ಆದೇಶಿಸಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಮಾಜಿ ಶಾಸಕ ಎ.ವಿ ಉಮಾಪತಿ ಅವರು 2004 ರಿಂದ 2005, 2005 ರಿಂದ 2006ನೇ ಸಾಲಿನ ಆಸ್ತಿ ವಿವರವನ್ನು ಸರ್ಕಾರಕ್ಕೆ ಸಲ್ಲಿಸುವಾಗ ತಪ್ಪು ಮಾಹಿತಿ ನೀಡಿದ್ದರಂತೆ ಈ ಸಂಬಂಧ ಮಾಜಿ ಶಾಸಕ ತಿಪ್ಪೇರುದ್ರಪ್ಪ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ತನಿಖೆ ನಡೆಸಿದ್ದಂತ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ತಮ್ಮ ತನಿಖಾ ವರದಿಯನ್ನು ಸಲ್ಲಿಸಿದ್ದರು. ಈ ಪ್ರಕರಣ ಕುರಿತಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎನ್ ಶಿವಕುಮಾರ್ ವಿಚಾರಣೆ ನಡೆಸಿ, ಸರ್ಕಾರಕ್ಕೆ ಆಸ್ತಿ ವಿವರ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನೀಡಿ ವಂಚನೆ ಪ್ರಕರಣ ಸಂಬಂಧ 3 ತಿಂಗಳು ಜೈಲು…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ವಿವಿ ಚಾನ್ಸಲರ್ ಆಗಿ ರಾಜ್ಯಪಾಲರಿಗೆ ಇದ್ದಂತ ಅಧಿಕಾರವನ್ನು ಮೊಟಕಗೊಳಿಸಿ, ಮುಖ್ಯಮಂತ್ರಿಗೆ ನೀಡುವುದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ರಾಜ್ಯಪಾಲರಿಗೆ ಮರು ಪ್ರಾಸಿಕ್ಯೂಷನ್ ಗೆ ಅರ್ಜಿ ಸಲ್ಲಿಸುವುದು ಸೇರಿದಂತೆ ವಿವಿಧ ನಿರ್ಧಾರವನ್ನು ಕೈಗೊಳ್ಳಲಾಯಿತು. ಇದಷ್ಟೇ ಅಲ್ಲದೇ ಇನ್ನೂ ಏನೇನು ನಿರ್ಧಾರ ಕೈಗೊಳ್ಳಲಾಯಿತು ಎನ್ನುವ ಪ್ರಮುಖ ಹೈಲೈಟ್ಸ್ ಮುಂದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್ ಕೆ ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಇಂದಿ ಒಂಭತ್ತು ಬಿಲ್ ಗಳನ್ನ ಸಂಪುಟ ಅಂಗೀಕರಿಸಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕ, 20:40: 20 ಇದ್ದ ಕಲ್ಯಾಣ ನಿಧಿ ರೂಪ 50:100: 50,ವಿಧಾನಕ್ಕೆ ಬದಲಾಗಲಿದೆ. ಕಂಪನಿ ಕಡೆ ವ್ಯಾಲ್ಯೂ ಹೆಚ್ಚು ಸಿಗಲಿದೆ ಎಂದರು. ಕರ್ನಾಟಕ ಅಂತರ್ಜಲ ನಿಯಮಾವಳಿ ಅಭಿವೃದ್ಧಿ ಹಾಗೂ ನಿಯಮಾವಳಿ ತಿದ್ದುಪಡಿ ವಿಧೇಯಕಕ್ಕೆ ತಿದ್ದುಪಡಿ ತರಲಾಗುತ್ತಿದೆ. ಕೊಳವೆ ಬಾವಿ ಕೊರೆದು ನೀರು ಸಿಗದ…
ಬೆಂಗಳೂರು: ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ. ರಾಜ್ಯಪಾಲರ ಅಧಿಕಾರಕ್ಕೆ ಸಂಪುಟ ಸಭೆಯಲ್ಲಿ ಬ್ರೇಕ್ ಹಾಕಲಾಗಿದೆ. ಇಂತಹ ಮಹತ್ವದ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಂಪುಟ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಯುನಿವರ್ಸಿಟಿ ತಿದ್ದುಪಡಿ ವಿಧೇಯಕಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ. ಈ ವಿಧೇಯಕಕ್ಕೆ ತಿದ್ದುಪಡಿ ತರಲು ಕ್ಯಾಬಿನೇಟ್ ಅನುಮೋದನೆ ನೀಡಿದ್ದರಿಂದಾಗಿ, ರಾಜ್ಯಪಾಲರ ಅಧಿಕಾರ ಮೊಟಕಾಗಲಿದೆ. ಇಷ್ಟು ದಿನ ಚಾನ್ಸೆಲರ್ ಆಗಿದ್ದರು. ಇನ್ಮುಂದೆ ಮುಖ್ಯಮಂತ್ರಿಗಳೇ ಚಾನ್ಸಲರ್ ಆಗಲಿದ್ದಾರೆ. ರಾಜ್ಯಪಾಲರ ಬಳಿ ಇದ್ದ ಅಧಿಕಾರವನ್ನು ಹಿಂಪಡೆದು ಮುಖ್ಯಮಂತ್ರಿಗಳಿಗೆ ನೀಡಿದ ಕ್ಯಾಬಿನೆಟ್ ನೀಡಿದೆ. https://kannadanewsnow.com/kannada/state-cabinet-decides-to-re-appeal-for-prosecution-against-bs-yediyurappa/ https://kannadanewsnow.com/kannada/heres-a-golden-opportunity-to-meet-superstar-allu-arjun/
ಮಧುರೈ ಕಲಾದೇವಿ ಅಮ್ಮನ ದೇವಸ್ಥಾನದ ಮಹತ್ವ ಮುಖ್ಯಾಂಶಗಳು ಏನು ಹೋಗುತ್ತದೆ ಮತ್ತು ಹಿಂತಿರುಗುವುದಿಲ್ಲ. ಇದು ನಮ್ಮ ಜೀವನ ಎಂದು ಹೇಳೋಣ. ಆದರೆ ಸಮಯ ಮತ್ತು ಸಮಯ ಕೂಡ ಹಿಂತಿರುಗುವುದಿಲ್ಲ. ಇಂದು ನಾವು ಆ ಕಾಲದ ಒಡೆಯ, 27 ನಕ್ಷತ್ರಗಳು ಮತ್ತು 12 ರಾಶಿಚಕ್ರದ ಚಿಹ್ನೆಗಳ ಒಡೆಯ ಮತ್ತು ಈ ಸಮಯದ ಒಡೆಯ ಕಾಳಿಕಾದೇವಿ ಅಮ್ಮನ ದೇವಾಲಯದ ಬಗ್ಗೆ ನೋಡಲಿದ್ದೇವೆ. ದೇವಿ ಕಲಾದೇವಿ ವಿಶೇಷ ಯಾವುದೇ ಸಮಯದಲ್ಲಿ ಮನುಷ್ಯರಿಗೆ ಏನಾಗುತ್ತದೆ ಎಂದು ಯಾರೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ವಿಜ್ಞಾನಿಗಳು ಸಹ ಸಮಯದ ರಹಸ್ಯವನ್ನು ಊಹಿಸಲು ಸಾಧ್ಯವಿಲ್ಲ ಮತ್ತು ಈ ಭೂಮಿಯ ಮೇಲೆ ಮುಂದೆ ಏನಾಗುತ್ತದೆ ಎಂಬ ಅಭಿಪ್ರಾಯವಿದೆ. ಆದರೆ ನಮ್ಮ ಕಾಲ ಮತ್ತು ನಮ್ಮ ಭವಿಷ್ಯದ ಕಾಲದ ಬಗ್ಗೆ ತಿಳಿದಿರುವ ದೇವತೆಯಿದ್ದರೆ ಅದು ಈ ಶ್ರೀ ಕಲಾದೇವಿ ದೇವಿಯೇ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್…
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ಸಂಬಂಧ ತನಿಖೆ ನಡೆಸಲು ಅನುಮತಿ ಕೋರಿದ್ದಂತ ರಾಜ್ಯ ಸರ್ಕಾರದ ಮನವಿಯನ್ನು ರಾಜ್ಯಪಾಲರು ಪುರಸ್ಕರಿಸದೇ ತಿರಸ್ಕರಿಸಿದ್ದರು. ಇದೀಗ ಮರು ಮನವಿ ಮಾಡಲು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರನ್ನ ಕೋರಲು ಸರ್ಕಾರ ನಿರ್ಧರಿಸಿದೆ. ಬಿಎಸ್ ವೈ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಲಾಗಿದ್ದ ದೂರು ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿಗೆ ನಿರ್ಧರಿಸಲಾಗಿದೆ. 2020ರ ನವೆಂಬರ್ ನಲ್ಲಿ ಟಿ ಜೆ ಅಬ್ರಹಾಂ ಎಸಿಬಿಗೆ ದೂರು ನೀಡಿದ್ರು. ಕ್ರಮಕ್ಕೆ ರಾಜ್ಯಪಾಲರನ್ನ ಕೋರಿದ್ರು. ಅದರೆ ಗವರ್ನರ್ ಅದಕ್ಕೆ ಅನುಮತಿ ಕೊಟ್ಟಿರಲಿಲ್ಲ. ಈಗ ಸರ್ಕಾರ ಇದರ ತನಿಖೆಗೆ ಒಪ್ಪಿಗೆ ನೀಡುವಂತೆ ಗವರ್ನರ್ ಗೆ ಮರು ಮನವಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. https://kannadanewsnow.com/kannada/heres-a-golden-opportunity-to-meet-superstar-allu-arjun/ https://kannadanewsnow.com/kannada/under-construction-basavanahole-bridge-collapses-near-sagar-major-mishap-averted/
ಬೆಂಗಳೂರು: ಅತಿ ನಿರೀಕ್ಷಿತ ಪುಷ್ಪಾ-2 ಸಿನಿಮಾ ಇದೀಗ ಡಾರ್ಕ್ ಫ್ಯಾಂಟಸಿಯೊಂದಿಗೆ ಸಹಯೋಗ ಘೋಷಿಸಿದ್ದು, ನಟ ಅಲ್ಲು ಅರ್ಜುನ್ ಅವರನ್ನು ಭೇಟಿ ಮಾಡುವ “’ಬಿಗ್ಗೆಸ್ಟ್ ಫ್ಯಾನ್ ಬಿಗ್ಗೆಸ್ಟ್ ಫ್ಯಾಂಟಸಿ” ಸ್ಪರ್ಧೆಯನ್ನು ಆಯೋಜಿಸಿದೆ. ಈ ಸ್ಪರ್ಧೆಯಲ್ಲಿ ವಿಜೇತರಾಗುವ ಐದು ಅದೃಷ್ಟಶಾಲಿಗೆ ಸೂಪರ್ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಭೇಟಿಯಾಗುವ ಸುವರ್ಣಾವಕಾಶ ಸಿಗಲಿದೆ. ಐಟಿಸಿ ಲಿಮಿಟೆಡ್ನ ಬಿಸ್ಕತ್ತುಗಳು ಮತ್ತು ಕೇಕ್ಸ್ ಕ್ಲಸ್ಟರ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಅಲಿ ಹ್ಯಾರಿಸ್, ಆಸಕ್ತರು www.biggestfanbiggestfantasy.com ಈ ವೆಬ್ಸೈಟ್ನಲ್ಲಿ ಆಗ್ಮೆಂಟೆಡ್ ರಿಯಾಲಿಟಿ (AR) ಫಿಲ್ಟರ್ ಬಳಸಿ ಡಾರ್ಕ್ಫ್ಯಾಂಟಸಿಯೊಂದಿಗೆ ಸೆಲ್ಫಿ ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣವಾದಲ್ಲಿ ಸನ್ಫೀಸ್ಟ್ ಡಾರ್ಕ್ ಫ್ಯಾಂಟಸಿ ಪೇಜ್ನನ್ನು ಅಟ್ಯಾಚ್ ಮಾಡಬೇಕು. ಇದರಲ್ಲಿ ಆಯ್ಕೆಯಾದ ಐದು ಅದೃಷ್ಟಶಾಲಿಗಳಿಗೆ ಅಲ್ಲುಅರ್ಜುನ್ ಭೇಟಿ ಮಾಡುವುದು ಹಾಗೂ ಇತರೆ ಅತ್ಯಾಕರ್ಷ ಬಹುಮಾನವನ್ನು ಗೆಲ್ಲಬಹುದು. ಪುಷ್ಟಾ-2 ಸಿನಿಮಾ ಪ್ರಚಾರದ ಭಾಗವಾಗಿ ಸನ್ಫೀಸ್ಟ್ ಡಾರ್ಕ್ ಫ್ಯಾಂಟಸಿಯ ಪ್ಯಾಕ್ಗಳ ಮೇಲೆ ಪುಷ್ಪಾ ಅವತಾರದಲ್ಲಿ ಅಲ್ಲು ಅರ್ಜುನ್ ಅವರ ವಿಶೇಷ ಚಿತ್ರವನ್ನು ಮುದ್ರಿಸಿದೆ ಎಂದು ಹೇಳಿದರು. ಸಿಇಒ, ಮೈತ್ರಿ ಮೂವಿ…












