Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಇ-ಖಾತಾ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿಯೊಂದು ಹೊರಬಿದ್ದಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದ್ದು, ಸದನದಲ್ಲಿ ವಿಧೇಯಕಕ್ಕೆ ಅಂಗೀಕಾರ ದೊರೆತಿದ್ದೇ ಆದರೇ ಗ್ರಾಮೀಣ ಭಾಗದ ಇ-ಖಾತಾ ಸಮಸ್ಯೆಯೇ ತೀರಲಿದೆ. ಶುಕ್ರವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಇ-ಖಾತಾ ಸಮಸ್ಯೆ ಸರಿ ಪಡಿಸೋ ಸಂಬಂಧ ತಿದ್ದುಪಡಿ ವಿಧೇಯಕ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ರಾಜ್ಯ ಸಚಿವ ಸಂಪುಟ ಸಭೆಯು ವಿಧೇಯಕಕ್ಕೆ ಅಂಗೀಕಾರ ನೀಡಿದೆ. ಶುಕ್ರವಾರದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿರುವಂತ ಇ-ಖಾತಾ ಸಮಸ್ಯೆ ಸರಿ ಪಡಿಸುವಂತ ತಿದ್ದುಪಡಿ ವಿಧೇಯಕವನ್ನು ರಾಜ್ಯದ ಉಭಯ ಸದನಗಳಲ್ಲಿ ಈ ಬಾರಿಯೇ ಮಂಡನೆ ಮಾಡೋ ಸಾಧ್ಯತೆ ಇದೆ. ಇದಕ್ಕೆ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತರೇ ಗ್ರಾಮೀಣ ಭಾಗದ ಇ-ಖಾತಾ ಸಮಸ್ಯೆ ಕ್ಲಿಯರ್ ಆಗಲಿದೆ. ಗ್ರಾಮೀಣ ಭಾಗದ ಕಂದಾಯ ಭೂಮಿಯಲ್ಲಿನ ನಿವೇಶ, ಮನೆ ಸಕ್ರಮಕ್ಕೆ ಅವಕಾಶ ಸಿಗಲಿದೆ. ಆ ನಂತ್ರ ಇ-ಖಾತಾವೂ…

Read More

ಬೆಂಗಳೂರು: ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಒಂದು ಗುದ್ದಿ ಗಾಯಗೊಂಡಿದ್ದರು. ಗಲ್ಲ, ತಲೆಗೆ ಪೆಟ್ಟು ಬಿದ್ದಿರುವಂತ ಅವರನ್ನು ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂತಹ ಅವರಿಗೆ ಸಿಎಂ ಸಿದ್ಧರಾಮಯ್ಯ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನಿಂದ ಕುಮಾರ ಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದಂತ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಮಾರ್ಗ ಮಧ್ಯೆ ಮೂತ್ರ ವಿಸರ್ಜನೆಗೆ ಕಾರಿನಿಂದ ಇಳಿಯುತ್ತಿದ್ದರು. ಈ ವೇಳೆಯಲ್ಲಿ ಹಿಂಬದಿಯಿಂದ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ತಲೆ, ಕೈ-ಕಾಲುಗಳಿಗೆ ಪೆಟ್ಟು ಬಿದ್ದಿತ್ತು. ಬೈಕ್ ಗುದ್ದಿದ ಕಾರಣ ಗಾಯಗೊಂಡ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದೀಗ ರುದ್ರಪ್ಪ ಲಮಾಣಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಇಂತಹ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಕರೆ…

Read More

ದಾವಣಗೆರೆ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ದಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಾರ್ಚ್ 15 ರಂದು ಹದಡಿ ರಸ್ತೆಯ ಸರ್ಕಾರಿ ಐಟಿಐ ಕಾಲೇಜು ಆವರಣ ಹಾಗೂ ಬಿಐಇಟಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳ ನಡೆಯುವ ಮಾರ್ಚ್ 15 ರಂದು ಸಂಜೆ 6 ಗಂಟೆಯಿಂದ ಬಿಐಇಟಿ ಎಸ್.ಎಸ್.ಮಲ್ಲಿಕಾರ್ಜುನ್ ಸಾಂಸ್ಕøತಿಕ ಕೇಂದ್ರದಲ್ಲಿ ಶ್ರೀರಾಮಚಂದ್ರ ಹಡಪದ, ಹರ್ಷ ರಂಜಿನಿ, ಸ್ಪರ್ಷ ಆರ್.ಕೆ. ಇವರಿಂದ ಸಂಗೀತ ಪ್ರಭ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ. https://kannadanewsnow.com/kannada/police-public-school-invites-applications-from-skilled-teachers/ https://kannadanewsnow.com/kannada/another-victim-of-wild-elephant-attack-in-karnataka-woman-dies-on-the-spot/

Read More

ದಾವಣಗೆರೆ : ಕೊಂಡಜ್ಜಿಯಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಸ್ನಾತಕೋತ್ತರ ಹಾಗೂ ಸ್ನಾತಕ ಶಿಕ್ಷಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಈ ಶಾಲೆಯನ್ನು ಕರ್ನಾಟಕ ರಾಜ್ಯ ಪೊಲೀಸ್ ಕಲ್ಯಾಣ, ಶಿಕ್ಷಣ ಟ್ರಸ್ಟ್, ಪೂರ್ವ ವಲಯ ದಾವಣಗೆರೆ ಇವರಿಂದ ಪೊಲೀಸ್ ಪಬ್ಲಿಕ್ ಸ್ಕೂಲ್ ಸಿಬಿಎಸ್‍ಇ ಪಠ್ಯಕ್ರಮದ ಶಾಲೆ ನಡೆಸಲಾಗುತ್ತಿದೆ. ಇಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಮಕ್ಕಳು ಹಾಗೂ ಇತರೆ ಸಾರ್ವಜನಿಕ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಈ ಶಾಲೆಗೆ ಅಗತ್ಯವಿರುವ ಪಿಜಿಟಿ ಇಂಗ್ಲೀಷ್ ಶಿಕ್ಷಕರ 1 ಹುದ್ದೆಗೆ ಎಂಎ.ಬಿ.ಇಡಿ, ಪಿಜಿಟಿ ಗಣಿತ ಶಿಕ್ಷಕರ 1 ಹುದ್ದೆಗೆ ಎಂ.ಎಸ್ಸಿ, ಬಿ.ಇಡಿ, ಪಿಜಿಟಿ ವಿಜ್ಞಾನ ಶಿಕ್ಷಕರ 2 ಹುದ್ದೆಗಳಿಗೆ ಎಂಎಸ್ಸಿ, ಬಿಇಡಿ ಸಿಬಿಝಡ್, ಟಿಜಿಟಿ ಸಮಾಜ ವಿಜ್ಞಾನ 1 ಹುದ್ದೆಗೆ ಎಂ.ಎ. ಬಿ.ಇಡಿ, ಕನ್ನಡ ಪಿಜಿಟಿ 1 ಹುದ್ದೆಗೆ ಎಂಎ, ಬಿ.ಇಡಿ, ಹಿಂದಿ 2 ಹುದ್ದೆ ಬಿ.ಎ, ಎಂ.ಎ ಬಿ.ಇಡಿ, ದೈಹಿಕ ಶಿಕ್ಷಕ…

Read More

ಹಾಸನ: ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದಾಗಿ ಮತ್ತೊಂದು ಬಲಿಯಾಗಿದೆ. ಕಾಡಾನೆಯೊಂದು ಸೊಂಡಿಲಿನಿಂದ ತಿವಿದು, ಎತ್ತಿ ಬಿಸಾಕಿ ತುಳಿದ ಪರಿಣಾಮ ಸ್ಥಳದಲ್ಲೇ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಹಾಸನದ ಬೇಲೂರು ತಾಲ್ಲೂಕಿನ ಕೋಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ದಿಢೀರ್ ಕಾಡಾನೆಯೊಂದು ದಾಳಿ ಮಾಡಿದೆ. ಈ ವೇಳೆಯಲ್ಲಿ ಸುಶೀಲಮ್ಮ ಕಾಡಾನೆ ದಾಳಿಗೆ ಸಿಕ್ಕಿದ್ದಾರೆ. ಕೋಪಗೊಂಡ ಕಾಡಾನೆ ಸೊಂಡಿನಿಂದ ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದು ಸಾಯಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅರಣ್ಯ ಇಲಾಖೆ ಅಧಿಕಾರಿಗಳು, ಅರೇಹಳ್ಳಿ ಠಾಣೆಯ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಇದು ಕಳೆದ 2 ತಿಂಗಳಿನಲ್ಲಿ ನಾಲ್ಕನೇ ಸಾವಾಗಿದ್ದು, ಕಾಡಾನೆ ಹಿಡಿದು, ಸುರಕ್ಷಿತ ಸ್ಥಳಕ್ಕೆ ಬಿಡುವಂತೆ ಆಗ್ರಹಿಸಿದರು. https://kannadanewsnow.com/kannada/mark-carney-sworn-in-as-canadas-new-prime-minister/ https://kannadanewsnow.com/kannada/good-news-for-those-who-were-expecting-e-khata-illegal-plots-houses-to-be-regularised-soon/

Read More

ಬೆಂಗಳೂರು: ಇ-ಖಾತಾ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿಯೊಂದು ಹೊರಬಿದ್ದಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದ್ದು, ಸದನದಲ್ಲಿ ವಿಧೇಯಕಕ್ಕೆ ಅಂಗೀಕಾರ ದೊರೆತಿದ್ದೇ ಆದರೇ ಗ್ರಾಮೀಣ ಭಾಗದ ಸಮಸ್ಯೆಯೇ ತೀರಿದಂತೆ ಆಗಲಿದೆ. ರಾಜ್ಯದ ಅಕ್ರಮ ನಿವೇಶನ, ಮನೆಗಳಿಗೆ ಇ-ಖಾತಾ ನೀಡುವ ಸಂಬಂಧ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಈ ತಿದ್ದುಪಡಿ ಮಸೂದೆಯನ್ನು ರಾಜ್ಯ ವಿಧಾನ ಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಸರ್ಕಾರ ಮಂಡಿಸಲಿದೆ. ಅಕ್ರಮ ಮನೆ, ನಿವೇಶನಗಗಳಿಗೆ ಸಕ್ರಮ ಮಾಡುವ ಸಂಬಂಧದ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತಿದ್ದೇ ಆದರೇ, ಗ್ರಾಮೀಣ ಹಾಗೂ ನಗರ ಭಾಗದ ಅಕ್ರಮ ನಿವೇಶನ, ಮನೆ ಮಾಲೀಕರಿಗೆ ಸಿಹಿಸುದ್ದಿ ಸಿಗಲಿದೆ. ಗ್ರಾಮೀಣ ಭಾಗದ ಕಂದಾಯ ಬಡಾವಣೆ, ಗ್ರಾಮ ಠಾಣೆ ವ್ಯಾಪ್ತಿಯ ಮನೆ, ನಿವೇಶನ ಸಕ್ರಮಕ್ಕೆ ಅವಕಾಶ ದೊರೆಯುವಂತಾಗಲಿದ್ದು, ಇ-ಖಾತಾ ಲಭ್ಯವಾಗಲಿದೆ. https://kannadanewsnow.com/kannada/mark-carney-sworn-in-as-canadas-new-prime-minister/ https://kannadanewsnow.com/kannada/worlds-most-dangerous-terrorist-isis-leader-abu-khadija-killed/

Read More

ಕೆನಡಾ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಮರಳಿದ ನಂತರ ಅಮೆರಿಕದ ಸಂಬಂಧಗಳಲ್ಲಿನ ಕುಸಿತದಿಂದ ನಲುಗಿಹೋಗಿದ್ದ ದೇಶದ ಉಸ್ತುವಾರಿಯನ್ನು ಮಾರ್ಕ್ ಕಾರ್ನಿ ಶುಕ್ರವಾರ ಕೆನಡಾದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 2015 ರಿಂದ ಕೆನಡಾವನ್ನು ಮುನ್ನಡೆಸುತ್ತಿದ್ದ ಜಸ್ಟಿನ್ ಟ್ರುಡೊ ಅವರ ಬದಲಿಗೆ ಕಾರ್ನಿ ಒಟ್ಟಾವಾದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೆನಡಾದ ಆಡಳಿತಾರೂಢ ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆಯಾದ ಕೆಲವೇ ದಿನಗಳ ನಂತರ ಅರ್ಥಶಾಸ್ತ್ರಜ್ಞ ಮತ್ತು ರಾಜಕೀಯ ಹೊಸಬ ಮಾರ್ಕ್ ಕಾರ್ನೆ ಶುಕ್ರವಾರ ಕೆನಡಾದ ಹೊಸ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೇಶದ ಕೇಂದ್ರ ಬ್ಯಾಂಕ್ ಬ್ಯಾಂಕ್ ಆಫ್ ಕೆನಡಾ ಮತ್ತು ಬ್ಯಾಂಕ್ ಆಫ್ ಇಂಗ್ಲೆಂಡ್ನ ಗವರ್ನರ್ ಆಗಿ ಕಾರ್ನೆ ಈ ಹಿಂದೆ ಎರಡೂ ದೇಶಗಳಿಗೆ ಪ್ರಮುಖ ಆರ್ಥಿಕ ಅಡಚಣೆಯನ್ನು ಎದುರಿಸಲು ಸಹಾಯ ಮಾಡಿದ್ದರು. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಡೆಯುತ್ತಿರುವ ವ್ಯಾಪಾರ ಯುದ್ಧದ ಬಗ್ಗೆ ಕಾರ್ನೆ ಮಾತುಕತೆ ನಡೆಸುತ್ತಿರುವಾಗ ಆ ಅನುಭವವು ಉಪಯುಕ್ತವಾಗುವ ನಿರೀಕ್ಷೆಯಿದೆ. ಕಳೆದ ವಾರ ನಡೆದ…

Read More

ನವದೆಹಲಿ: ಇರಾಕ್ ಮತ್ತು ಸಿರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ (ISIS) ನ ನಾಯಕ, ಅಬು ಖದೀಜಾ ಎಂದೂ ಕರೆಯಲ್ಪಡುವ ಅಬ್ದುಲ್ಲಾ ಮಕಿ ಮುಸ್ಲೆಹ್ ಅಲ್-ರಿಫಾಯಿ, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾಕಿ ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಶುಕ್ರವಾರ ದೃಢಪಡಿಸಿದ್ದಾರೆ. “ಇರಾಕ್ ಮತ್ತು ವಿಶ್ವದ ಅತ್ಯಂತ ಅಪಾಯಕಾರಿ ಭಯೋತ್ಪಾದಕರಲ್ಲಿ ಒಬ್ಬರು” ಎಂದು ಬಣ್ಣಿಸಲಾದ ಅಬು ಖದೀಜಾ ಅವರನ್ನು ಇರಾಕಿ ಭದ್ರತಾ ಪಡೆಗಳು ISIS ವಿರುದ್ಧ ಹೋರಾಡುವ ಅಮೆರಿಕ ನೇತೃತ್ವದ ಒಕ್ಕೂಟದ ಸಮನ್ವಯದೊಂದಿಗೆ ಹೊಡೆದುರುಳಿಸಿದವು. https://twitter.com/RealZoya1/status/1900550101380063706?ref_src=twsrc%5Etfw%7Ctwcamp%5Etweetembed%7Ctwterm%5E1900550101380063706%7Ctwgr%5E03cd8d0607d3c9df7f424c6ea02f876a8a1c65ac%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fasianetnewsable-epaper-dh45a668314cf54d1db4076a42953091e8%2Fbreakingoneofworldsmostdangerousterroristsisisleaderabukhadijakillediniraqiusoperation-newsid-n655963871 ಈ ಕಾರ್ಯಾಚರಣೆಯು ಉಗ್ರಗಾಮಿ ಗುಂಪಿನ ವಿರುದ್ಧ ನಡೆಯುತ್ತಿರುವ ಇರಾಕ್ನ ಯುದ್ಧದಲ್ಲಿ ಮಹತ್ವದ ವಿಜಯವನ್ನು ಸೂಚಿಸುತ್ತದೆ. ಇದು ತನ್ನ ಪ್ರಾದೇಶಿಕ ನಿಯಂತ್ರಣವನ್ನು ಕಳೆದುಕೊಂಡರೂ ಭದ್ರತಾ ಬೆದರಿಕೆಯನ್ನು ಒಡ್ಡುತ್ತಲೇ ಇದೆ. ದಾಳಿಗಳನ್ನು ಸಂಘಟಿಸುವಲ್ಲಿ ಮತ್ತು ಐಸಿಸ್ಗೆ ಹೋರಾಟಗಾರರನ್ನು ನೇಮಕ ಮಾಡುವಲ್ಲಿ ಅಬು ಖದೀಜಾ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ನಂಬಲಾಗಿದೆ. ಅವರ ಸಾವು ಇರಾಕ್ ಮತ್ತು ಸಿರಿಯಾದಲ್ಲಿ ಗುಂಪಿನ ನಾಯಕತ್ವ ಮತ್ತು ಕಾರ್ಯಾಚರಣೆಯ ಸಾಮರ್ಥ್ಯಗಳಿಗೆ ದೊಡ್ಡ ಹೊಡೆತವನ್ನು ನೀಡುವ…

Read More

ಬೆಂಗಳೂರು: ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲೆಗೆ ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ನೀಡಿದೆ. ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ) ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಮನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೀಟ್ ವೇವ್ ಸ್ಟ್ರೋಕ್ ತಪ್ಪಿಸಲು ಅನುಸರಿಸಬೇಕಾದ ಕ್ರಮಗಳು: ಸಾರ್ವಜನಿಕರು ಹೀಟ್ ವೇವ್ ಕುರಿತು ಸದಾ ಎಚ್ಚರಿಕೆಯಿಂದ ಇರಬೇಕು. ರೇಡಿಯೋ,ಟಿವಿ,ದಿನ ಪತ್ರಿಕೆಗಳಲ್ಲಿ ಬರುವ ಮುನ್ಸೂಚನೆಗಳನ್ನು ತಿಳಿದುಕೊಂಡು ಅವುಗಳನ್ನು ಪಾಲಿಸಬೇಕು. ಬಾಯಾರಿಕೆಯಿಲ್ಲದಿದ್ದರೂ ಹೆಚ್ಚಾಗಿ ನೀರನ್ನು ಕುಡಿಯುಬೇಕು. ಹಗುರ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ರಕ್ಷಣಾತ್ಮಕ ಕನ್ನಡಕಗಳು, ಛತ್ರಿ,ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಧರಿಸಿಬೇಕು. ರಾತ್ರಿ ವೇಳೆ ಬಸ್ಸಿನಲ್ಲಿ ದೂರದ ಪ್ರಯಾಣ ಉತ್ತಮ, ಒಂದು ವೇಳೆ ಹಗಲಿನಲ್ಲಿ ಪ್ರಯಾಣ ಮಾಡುವ ಸಂದರ್ಭ ಬಂದರೆ, ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಿ ಕುಡಿಯಬೇಕು. ಬಿಸಿನಲ್ಲಿ ಹೊರಗೆ ಕೆಲಸ ಮಾಡುವವರು,…

Read More

ಚಿತ್ರದುರ್ಗ :  ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಇದೇ ಮಾರ್ಚ್ 16 ರಂದು ಭಾನುವಾರ ನಡೆಯಲಿದ್ದು, ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಹಟ್ಟಿ ತಿಪ್ಪೇಶನ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಜಾತ್ರೆಗೆ ನಾಡಿನ ಹಲವು ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತಾಧಿಕಾರಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲಾಗಿದೆ. ಜಾತ್ರೆ ಪ್ರಯುಕ್ತ ನಾಯಕನಹಟ್ಟಿ ಪಟ್ಟಣ ನೂತನ ವಧುವಿನಂತೆ ಸಿಂಗಾರಗೊಂಡಿದೆ. ತಿಪ್ಪೇರುದ್ರಸ್ವಾಮಿ ದೇವಾಲಯದ ಒಳಮಠ ಮತ್ತು ಹೊರಮಠದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿಟ್ಟಿನಲ್ಲಿ ಎರಡೂ ದೇವಾಲಯದ ಆವರಣ ಸ್ವಚ್ಛಗೊಳಿಸಲಾಗಿದೆ. ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎರಡೂ ದೇವಾಲಯಗಳ ಆವರಣದಲ್ಲಿ ಬೃಹತ್ ಚಪ್ಪರದ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಹೊರಮಠ ದೇವಾಲಯದ ಆವರಣದ ಸುತ್ತಲೂ ಶಾಶ್ವತವಾಗಿ ನೆರಳಿನ ವ್ಯವಸ್ಥೆಗಾಗಿ ಶೆಡ್ ನಿರ್ಮಾಣ ಮಾಡಲಾಗಿದೆ. ಪಟ್ಟಣದ ಎಲ್ಲಾ ವಾರ್ಡ್ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ವಿದ್ಯುತ್ ದೀಪಾಲಂಕಾರ…

Read More