Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಇಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhan Mantri Kisan Samman Nidhi – PM-KISAN Nidhi) ಯೋಜನೆಯಡಿ 20,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಜೂನ್ 18 ರಂದು ವಾರಣಾಸಿಗೆ ಭೇಟಿ, ಬಿಡುಗಡೆ ಮಾಡಿದ್ದಾರೆ. ಪಿಎಂ ಕಿಸಾನ್ ನಿಧಿಯ 17 ನೇ ಕಂತನ್ನು ಬಿಡುಗಡೆ ಮಾಡಲು ಅಧಿಕಾರ ನೀಡುವ ಮೂಲಕ ಪಿಎಂ ಮೋದಿ ಜೂನ್ 10 ರಂದು ತಮ್ಮ ಮೂರನೇ ಅವಧಿಯನ್ನು ಪ್ರಾರಂಭಿಸಿದರು, ಇದು 9.3 ಕೋಟಿ ರೈತರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಸುಮಾರು 20,000 ಕೋಟಿ ರೂ.ಗಳನ್ನು ವಿತರಿಸುವ ಗುರಿಯನ್ನು ಹೊಂದಿದೆ. 2019 ರ ಫೆಬ್ರವರಿಯಲ್ಲಿ ಪ್ರಾರಂಭಿಸಲಾದ ಈ ಯೋಜನೆಯು ವಾರ್ಷಿಕವಾಗಿ 6,000 ರೂ.ಗಳನ್ನು 2,000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ನೇರವಾಗಿ ರೈತರ ಆಧಾರ್-ಸೀಡ್ ಮಾಡಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. https://twitter.com/ANI/status/1803032508151603464 ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಚೌಹಾಣ್, 100 ದಿನಗಳ ಯೋಜನೆಯಲ್ಲಿ ಕೆಲಸ ಮಾಡುವ ಜವಾಬ್ದಾರಿಯನ್ನು ಪ್ರಧಾನಿ ಮೋದಿ ನೀಡಿದ್ದಾರೆ ಎಂದು…
ಬೆಂಗಳೂರು: ರಾಜ್ಯಾಧ್ಯಂತ ಇಂದು ಎಸ್ಎಸ್ ಎಲ್ ಸಿ ಪರೀಕ್ಷೆ-2ಗೆ ಮೊದಲ ದಿನದ ಗಣಿತ ಪರೀಕ್ಷೆ ನಡೆಯಿತು. ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿದ್ದು, ಈ ಪರೀಕ್ಷೆಗೆ 1.56 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಈ ಪರೀಕ್ಷೆಯಲ್ಲಿ ನಕಲಿಗೆ ಯತ್ನಿಸಿದಂತ ಮೂವರನ್ನು ಡಿಬಾರ್ ಕೂಡ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಇಂದಿನ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಗಣಿತ ವಿಷಯದ ಪರೀಕ್ಷೆಗೆ 1,79,169 ಮಂದಿ ನೋಂದಾಯಿಸಿಕೊಂಡಿದ್ದರು. ಇವರಲ್ಲಿ 1,56,658 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದೆ. ಇಂದಿನ ಮೊದಲ ದಿನದ ಪರೀಕ್ಷೆಗೆ 22,511 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶೇ.87.44ರಷ್ಟು ವಿದ್ಯಾರ್ಥಿಗಳು ಇಂದಿನ ಪರೀಕ್ಷೆಗೆ ಹಾಜರಾಗಿದ್ದಾರೆ. ಕಲಬುರ್ಗಿಯ ಆರಾಧನಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ನಲ್ಲಿ ನಕಲಿಗೆ ಪ್ರಯತ್ನಿಸಿದಂತ ಮೂವರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಅಂತ ಮಾಹಿತಿ ನೀಡಿದೆ. https://kannadanewsnow.com/kannada/market-cap-crosses-5-trillion-mark-after-modi-becomes-pm-pm-modi/ https://kannadanewsnow.com/kannada/expensive-duniya-for-common-man-prices-of-essential-commodities-including-pulses-and-grains-rise-sharply/
ಬೆಂಗಳೂರು: ನಗರದ ಟರ್ಫ್ ಕ್ಲಪ್ ನಲ್ಲಿ ರೇಸಿಂಗ್ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇಂದು ಹೈಕೋರ್ಟ್ ಮತ್ತೆ ಟರ್ಫ್ ಕ್ಲಪ್ ನಲ್ಲಿ ರೇಸಿಂಗ್ ಚಟುವಟಿಕೆಗಳನ್ನು ನಡೆಸೋದಕ್ಕೆ ಅನುಮತಿ ನೀಡಿದೆ. ಬೆಂಗಳೂರಿನ ಟರ್ಫ್ ಕ್ಲಪ್ ನಲ್ಲಿ ರೇಸಿಂಗ್, ಬೆಟ್ಟಿ ಚಟುವಟಿಕೆ ಮುಂದುವರೆಸಲು ಹೈಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್ ಏಕಸದಸ್ಯಪೀಠವು ಮಧ್ಯಂತರ ಅನುತಿ ನೀಡಿ ಆದೇಶಿಸಿದೆ. ರಾಜ್ಯ ಸರ್ಕಾರವು 2024-25ನೇ ಸಾಲಿನಲ್ಲಿ ಬೆಟ್ಟಿಂಗ್ ಚಟುವಟಿಕೆಯ ಹಿನ್ನಲೆಯಲ್ಲಿ ಅನುಮತಿ ನೀಡಲು ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ಟರ್ಫ್ ಕ್ಲಪ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಎಸ್. ಆರ್ ಕೃಷ್ಣಮೂರ್ತಿಯನ್ನು ಒಳಗೊಂಡಂತ ಏಕಸದಸ್ಯ ನ್ಯಾಯಪೀಠವು, ರೇಸಿಂಗ್, ಬೆಟ್ಟಿಂಗ್ ಮೇಲೆ ನಿಗಾ ವಹಿಸಲು ಸರ್ಕಾರಕ್ಕೆ ಸ್ವತಂತ್ರ್ಯವಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿತು. ಅಲ್ಲದೇ ರೇಸಿಂಗ್, ಬೆಟ್ಟಿಂಗ್ ಚಟುವಟಿಕೆ ಮುಂದುವರೆಸಲು ಅನುಮತಿ ನೀಡಿ ಆದೇಶಿಸಿದೆ. https://kannadanewsnow.com/kannada/renukaswamy-murder-case-a1-accused-pavithra-gowdas-health-deteriorates-hospitalised/ https://kannadanewsnow.com/kannada/market-cap-crosses-5-trillion-mark-after-modi-becomes-pm-pm-modi/
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧನದಲ್ಲಿರುವಂತ ಎ1 ಆರೋಪಿ ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿರೋದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರ ಬಂಧನದಲ್ಲಿರುವಂತ ಎ1 ಆರೋಪಿ ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗಾಗಿ ಪೊಲೀಸರು ದಾಖಲಿಸಿದ್ದಾರೆ. https://kannadanewsnow.com/kannada/rs-1-lakh-will-be-distributed-for-kempegowda-jayanti-celebrations-in-all-taluk-headquarters-dk-shivakumar/ https://kannadanewsnow.com/kannada/market-cap-crosses-5-trillion-mark-after-modi-becomes-pm-pm-modi/
ಬೆಂಗಳೂರು : ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ನೀಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ರೂ.1 ಲಕ್ಷ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು; ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 20 ಸಾವಿರ, ತಾಲ್ಲೂಕು ಕೇಂದ್ರಗಳಿಗೆ 20 ಸಾವಿರದ ಜೊತೆಗೆ ಹೆಚ್ಚುವರಿಯಾಗಿ 1 ಲಕ್ಷ ನೀಡಲಾಗುವುದು. ಜಿಲ್ಲಾ ಕೇಂದ್ರಗಳಿಗೆ 50 ಸಾವಿರ ನೀಡಲಾಗುತ್ತಿದ್ದು ಹೆಚ್ಚು ಮಾಡಲು ಚಿಂತನೆ ನಡೆಸಲಾಗುವುದು. ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವವನ್ನು ಅರಮನೆ ಮೈದಾನ ಅಥವಾ ಹೊರಾಂಗಣ ಮೈದಾನದಲ್ಲಿ ಜೂನ್ 27 ರಂದು ನಡೆಸಲು ತೀರ್ಮಾನಿಸಲಾಗಿದೆ. ಹುಲಿಯೂರುದುರ್ಗ, ಮಾಗಡಿ, ಆವತಿ ಸೇರಿದಂತೆ ಬೆಂಗಳೂರಿನ ಎಲ್ಲಾ ದಿಕ್ಕುಗಳಿಂದ ಪ್ರತಿವರ್ಷದಂತೆ ಗೋಪುರ ಮತ್ತು ಜ್ಯೋತಿಗಳ ಮೆರವಣಿಗೆ ಬರುತ್ತದೆ. ಕೆಂಪೇಗೌಡರು…
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಬಂಧನದಲ್ಲಿರುವಂತ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜರಾಜೇಶ್ವರಿನಗರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಿಸಿರುವಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಯಾರೇ ಸ್ಟೇ ತಂದಿದ್ರೂ ತೆರವು ಮಾಡ್ತೀವಿ ಅಂತ ನಟ ದರ್ಶನ್ ಮನೆ ತೆರವು ಬಗ್ಗೆ ಡಿಕೆ ಶಿವಕುಮಾರ್ ಖಡಕ್ ಮಾತಿನಲ್ಲಿ ಹೇಳಿದ್ದಾರೆ. ನಟ ದರ್ಶನ್ ಗೆ ಈಗ ರಾಜಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಿಸಿರೋ ಸಂಕಷ್ಟ ಎದುರಾರಗಿದೆ. ರಾಜ ರಾಜೇಶ್ವರಿ ನಗರದಲ್ಲಿನ ದರ್ಶನ್ ಮನೆ ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಾಣ ಮಾಡಲಾಗಿದೆ ಎಂಬುದಾಗಿ ಹೇಳಲಾಗುತ್ತಿತ್ತು. ಅಲ್ಲದೇ ನಟ ದರ್ಶನ್ ಮನೆ ಒತ್ತುವರಿ ತೆರವಿಗೂ ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಈ ಬಗ್ಗೆ ಇಂದು ಬೆಂಗಳೂರು ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಗಮನಕ್ಕೆ ಬರುತ್ತಿದ್ದಂತೆ, ರಾಜಕಾಲುವೆಯನ್ನು ಯಾರೇ ಒತ್ತುವರಿ ಮಾಡಿದ್ರೂ, ಸ್ಟೇ ತಂದಿದ್ದರೂ ಸಹ ಕಾನೂನಿನ ಪ್ರಕಾರ ತೆರವು ಮಾಡಲು ಸೂಚನೆ ನೀಡಿದ್ದಾರೆ. ಹೀಗಾಗಿ ನಟ ದರ್ಶನ್ ಅವರು…
ವಿಜಯಪುರ: ಜಿಲ್ಲೆಯಲ್ಲಿ ಇಂದು ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಂತ ಇಬ್ಬರು ಬಾಲಕರು ಧಾರುಣವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ದ್ಯಾಬೇರಿಯಲ್ಲಿ ಕೆರೆಯೊಂದಕ್ಕೆ ಮೀನು ಹಿಡಿಯೋದಕ್ಕೆ ಇಬ್ಬರು ಬಾಲಕರು ತೆರಳಿದ್ದರು. ಈ ವೇಳೆ ವಿದ್ಯುತ್ ವೈಯರ್ ಕೆರೆಗೆ ತುಂಡಾಗಿ ಬಿದ್ದಿತ್ತು. ಇದನ್ನು ಕಾಣದಂತ ಬಾಲಕರು ಕೆರೆಯಲ್ಲಿ ಮೀನು ಹಿಡಿಯೋದಕ್ಕೆ ಇಳಿದಂತ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ರೋಹಿತ್ ಅನಿಲ್ ಚೌವಾಹ್ (8) ಹಾಗೂ ವಿಜಯ್ ಪಿಂಟು ಚೌವಾಹ್(16) ಎಂಬುವರು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಬಾಲಕರ ಸಾವಿನ ಸುದ್ದಿ ಕೇಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಕೆರೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಂತ ಇಬ್ಬರು ಬಾಲಕರ ಶವವನ್ನು ಹೊರ ತೆಗೆದಿದ್ದಾರೆ. https://kannadanewsnow.com/kannada/prajwal-revannas-bail-plea-adjourned-to-june-24/ https://kannadanewsnow.com/kannada/market-cap-crosses-5-trillion-mark-after-modi-becomes-pm-pm-modi/
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾಚಾರ ಪ್ರಕರಣ ಸಂಬಂಧ ಇಂದು ಕೂಡ ಕೋರ್ಟ್ ನಿಂದ ರಿಲೀಫ್ ಸಿಕ್ಕಿಲ್ಲ. ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೂನ್.24ಕ್ಕೆ ಮುಂದೂಡಿಕೆ ಮಾಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಎರನೇಡ ಕೇಸ್ ನಲ್ಲಿ ಎಸ್ಐಟಿ ಅಧಿಕಾರಿಗಳು ಬಾಡಿ ವಾರೆಂಟ್ ಪಡೆದು, ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಜೂನ್.24ಕ್ಕೆ ಮುಂದೂಡಿಕೆ ಮಾಡಿದೆ. ಇದೇ ವೇಳೆ ನ್ಯಾಯಮೂರ್ತಿಗಳು, ನಿಮಗೆ ಆರೋಗ್ಯ ಸಮಸ್ಯೆ ಇದೆಯೇ ಎಂದು ವಿಚಾರಿಸಿದ್ದಾರೆ. ಈ ವೇಳೆ ಪ್ರಜ್ವಲ್ ಉಸಿರಾಟದ ಸಮಸ್ಯೆ ಇದೆ. ಎಂಆರ್ಐ ಮಾಡಿಸಬೇಕಿದೆ ಎಂದು ಹೇಳಿದ್ದಾರೆ. ನಾನು ಎರಡು ಕೇಸ್ನಲ್ಲಿ ಪುರುಷತ್ವ ಪರೀಕ್ಷೆ ಒಪ್ಪಿ ಮಾಡಿಸಿಕೊಂಡಿದ್ದೇನೆ. ಇದರಿಂದ ತುಂಬಾ ಮುಜುಗರ ಆಗತ್ತೆ. ಮತ್ತೆ…
ಬೆಂಗಳೂರು : 2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನವನ್ನು ಪಡೆದುಕೊಂಡಿದೆ. ಹೊಸದಿಲ್ಲಿಯಲ್ಲಿ ಶನಿವಾರ ನಡೆದ ‘ಗ್ಲೋಬಲ್ ವಿಂಡ್ ಡೇ’ 2024 “ಪವನ್-ಉರ್ಜಾ: ಪವರ್ನಿಂಗ್ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ ಅವರಿಂದ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪಯ್ಯ ಪ್ರಶಸ್ತಿ ಸ್ವೀಕರಿಸಿದರು. ಪವನ ವಿದ್ಯುತ್ ವಲಯದಲ್ಲಿನ ಸಾಧನೆಯನ್ನು ಗುರುತಿಸಿ ರಾಜ್ಯಕ್ಕೆ ಪ್ರಶಸ್ತಿ ನೀಡಲಾಗಿದೆ. ಗುಜರಾತ್ ಅಗ್ರಸ್ಥಾನ ಪಡೆದರೆ, ತಮಿಳುನಾಡು 3ನೇ ಸ್ಥಾನ ಪಡೆದುಕೊಂಡಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್ ಸಂತಸ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕಕ್ಕೆ ಸಂದಿರುವ ಪ್ರಶಸ್ತಿ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, “ಈ ಪ್ರಶಸ್ತಿಯು ನವೀಕರಿಸಬಹುದಾದದ ಇಂಧನ ವಲಯದಲ್ಲಿನ ನಮ್ಮ ಬದ್ಧತೆಯನ್ನು ಹೆಚ್ಚಿಸಿದೆ. ಈ ಸಾಧನೆ ಹಿಂದೆ ಕ್ರೆಡಲ್ ಅಧಿಕಾರಗಳ ಶ್ರಮವಿದ್ದು, ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ,” ಎಂದಿದ್ದಾರೆ. “ವಿದ್ಯುತ್ ಉತ್ಪಾದನಾ…
ಪಾಟ್ನಾ: ಪಾಟ್ನಾ ವಿಮಾನ ನಿಲ್ದಾಣಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಇದು ತಾತ್ಕಾಲಿಕ ಭೀತಿಗೆ ಕಾರಣವಾಗಿದೆ. ಘಟನೆಯ ನಂತರ, ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪಾಟ್ನಾ ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ. ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ಪಾಟ್ನಾ ವಿಮಾನ ನಿಲ್ದಾಣ ನಿರ್ದೇಶನಾಲಯ ತಿಳಿಸಿದ ನಂತರ ಮಂಗಳವಾರ ಮಧ್ಯಾಹ್ನ ಬಿಹಾರದ ಪಾಟ್ನಾದ ಜಯಪ್ರಕಾಶ್ ನಾರಾಯಣ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. https://twitter.com/ANI/status/1803010781359054850 https://kannadanewsnow.com/kannada/bjp-state-president-b-y-vijayendra-visits-renukaswamys-family-distributes-rs-2-lakh-financial-assistance/ https://kannadanewsnow.com/kannada/market-cap-crosses-5-trillion-mark-after-modi-becomes-pm-pm-modi/