Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ ರೇವಣ್ಣ ಹಲ್ಲೆ ಮಾಡಿದ್ದಾರೆ ಎಂಬುದಾಗಿ ಮಹಿಳಾ ಆಯೋಗಕ್ಕೆ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಎಂಬುವರು ದೂರು ನೀಡಿದ್ದರು. ಈ ಬೆನ್ನಲ್ಲೇ ನಂದಿನಿ ನಾಗರಾಜ್ ಅವರ ಮತ್ತೊಂದು ಮುಖ ಬಟಾ ಬಯಲಾಗಿದೆ. ನಂದಿನಿ ನಾಗರಾಜ್ ವ್ಯಕ್ತಿಯೊಬ್ಬರಿಗೆ ಹಣಕ್ಕೆ ಕಿರುಕುಳ ನೀಡಿದ ಆರೋಪದಡಿ ದೂರು ದಾಖಲಾಗಿದೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಗೆ ಚಂದ್ರಶೇಖರ್ ಎಂಬುವರು ದೂರು ನೀಡಿದ್ದಾರೆ. ಅವರು ನೀಡಿದಂತ ದೂರಿನಲ್ಲಿ  ಬೆಂಗಳೂರಿನ ಶಾಸಕರ ಭವನದಲ್ಲಿ ನನಗೆ ಸುಮಾರು 2 ವರ್ಷಗಳಿಂದ ಸುನೀಲ್ ಕುಮಾರ್ ಎಂಬುವರು ಪರಿಚಯವಿರುತ್ತಾರೆ. ಅವರು ಸಮಾಜ ಸೇವೆಯಲ್ಲಿಯೂ ತೊಡಗಿಸಿಕೊಂಡಿರುತ್ತೇನೆ. ನನಗೆ ಎಲ್ಲಾ ಪಕ್ಷದ ಶಾಸಕರು ಮತ್ತು ಕೆಲವು ಮಂತ್ರಿಗಳು ಸಹ ಪರಿಚಯವಿರುತ್ತಾರೆೆ. ನಿಮಗೆ ಹಾಗೂ ನಿಮ್ಮ ಕಡೆಯವರಿಗೆ ಯಾರಿಗಾದರೂ ಏನಾದರೂ ಕೆಲಸಕಾರ್ಯಗಳು ಹಾಗೂ ವರ್ಗಾವಣೆ ಏನಾದರೂ ಆಗಬೇಕಾದರೆ ನಾನು ಸಹಾಯ ಮಾಡುತ್ತೇನೆಂದು ತಿಳಿಸಿರುತ್ತಾರೆ ಎಂದಿದ್ದಾರೆ. ಆದಾಗಿ ನನಗೆ ಪರಿಚಯಸ್ಥರಾದ ಶಿವಸ್ವಾಮಿಯವರಿಗೆ ಗೋಪಾಲ್ ಜಾಧವ್ ಎಂಬ ಅಧಿಕಾರಿಗಳು ಪರಿಚಯವಿರುತ್ತದೆ. ಗೋಪಾಲ್ ಜಾದವ್…

Read More

ಬೆಂಗಳೂರು: ರಾಜ್ಯಾಧ್ಯಂತ ಇಂದು ಕನ್ನಡಿಗರಿಗಾಗಿ ಕರೆ ನೀಡಿದ್ದಂತ ಅಖಂಡ ಕರ್ನಾಟಕ ಬಂದ್ ಯಶಸ್ವಿಯಾಗಿದೆ ಎಂಬುದಾಗಿ ಕನ್ನಡ ಒಕ್ಕೂಟದ ಹೋರಾಟಗಾರ ವಾಟಾಳ್ ನಾಗರಾಜ್ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಂದ್ ಅವರದ್ದೇ ಆದಂತ ರೂಪದಲ್ಲಿ ನಡೆದಿದೆ. ಕೆಲವು ಕಡೆ ಬಸ್ ಓಡಾಡುತಿದ್ದಾವೆ. ಜನರೇ ಇಲ್ಲ. ಬಸ್ ನಿಲ್ದಾಣದಲ್ಲಿ ಜನ ಇಲ್ಲ. ಕನ್ನಡಿಗರಿಗಾಗಿ ಕರೆದ ಬಂದ್ ಯಶಸ್ವಿಯಾಗಿದೆ ಎಂದರು. ಬಂದ್ ಮಾಡಿದಂತ ನಮ್ಮವರನ್ನು ಬಂಧನ ಮಾಡಿದ್ದಾರೆ. ಬೆಂಗಳೂರು ಕಮೀಷನರ್ ವೈಯಕ್ತಿಕವಾಗಿ ತೆಗೆದುಕೊಂಡಿದ್ದಾರೆ. ಭಾಸ್ಕರ್ ರಾವ್ ರೀತಿ ಇವರು ರಾಜಕೀಯಕ್ಕೆ ಬರುತ್ತಾರೋ ಏನೋ ಗೊತ್ತಿಲ್ಲ. ನನಗೂ ನೋಟಿಸ್ ಕೊಟ್ಟಿದ್ದಾರೆ ಎಂದರು. ಟೌನ್ ಹಾಲ್ ನಿಂದ ಪ್ರತಿಭಟನಾ ಮೆರವಣಿಗೆಗೆ ಅನುಮತಿ ನೀಡಲಿಲ್ಲ. ಬಂದ್ ಹತ್ತಿಕೋ ಕೆಲಸ ಮಾಡಲಾಗಿತ್ತು. ಈ ಕೆಲಸ ಮಾಡಬಾರದು. ನಾವು ಮಾಡಿರೋ ಹೋರಾಟದಲ್ಲಿ ಒಂದು ಹನಿ ನೀರು ಸಿಗದ ರೀತಿ ಆಗಬೇಕಿತ್ತು. ಆದರೂ ಯಶಸ್ಸು ಸಿಕ್ಕಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/we-are-united-for-the-survival-of-our-rights-existence-constitution-dk-shivakumar/ https://kannadanewsnow.com/kannada/nagpur-violence-14-more-held-number-of-arrests-reaches-105-3-fresh-firs-registered/

Read More

ಚೆನ್ನೈ : “ನಾವು ನಮ್ಮ ಹಕ್ಕು, ಅಸ್ತಿತ್ವಕ್ಕೆ ಹೋರಾಡಲು, ಸಂವಿಧಾನ ಉಳಿವಿಗಾಗಿ ನಾವು ಒಟ್ಟಾಗಿದ್ದೇವೆ. ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. “ನಮ್ಮ ಸಂಸತ್ ಸ್ಥಾನಗಳು ಕಡಿಮೆಯಾಗಲು ನಾವು ಬಿಡುವುದಿಲ್ಲ. ದಕ್ಷಿಣದ ರಾಜ್ಯಗಳು ದೇಶದ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡುತ್ತಿವೆ. ಶೈಕ್ಷಣಿಕ ಗುಣಮಟ್ಟದಲ್ಲಿ, ಆರ್ಥಿಕ ಬೆಳವಣಿಗೆ ಸೇರಿದಂತೆ ಅನೇಕ ವಿಷಯಗಳಲ್ಲಿ ಸಾಕಷ್ಟು ಮುಂದಿದ್ದೇವೆ, ತೆರಿಗೆ ಪಾವತಿಯಲ್ಲಿ ಮುಂಚೂಣಿಯಲ್ಲಿದ್ದೇವೆ” ಎಂದು ಹೇಳಿದರು. “ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಪ್ರಗತಿ ಎನ್ನುವ ಮಾತಿನ ಮೇಲೆ ನಂಬಿಕೆಯನ್ನು ಇಟ್ಟಿರುವವರು ನಾವು. ಸ್ಟಾಲಿನ್ ಅವರ ನಾಯಕತ್ವದಲ್ಲಿ ದಕ್ಷಿಣ ಭಾರತ ರಾಜ್ಯಗಳು ಹಾಗೂ ಪಂಜಾಬ್ ರಾಜ್ಯ ಭಾಗವಹಿಸುತ್ತಿದ್ದು ಯಾವುದೇ ಕಾರಣಕ್ಕೂ ನಮ್ಮ ಹಕ್ಕುಗಳನ್ನು ಬಿಟ್ಟುಕೊಡಲು ಸಾಧ್ಯವಿಲ್ಲ. ಮಾಜಿ ಪ್ರಧಾನಿ ವಾಜಪೇಯ ಅವರು ಇದೇ ರೀತಿ 2002 ರಲ್ಲಿ 84 ನೇ ತಿದ್ದುಪಡಿ ಮೂಲಕ ಸಂವಿಧಾನ ಬದಲಾವಣೆಗೆ ಮುಂದಾಗಿದ್ದರು” ಎಂದರು. “ನಾವು ಕ್ಷೇತ್ರ ವಿಂಗಡಣೆ…

Read More

ಮಂಗಳೂರು: ಕೆಲಸಕ್ಕೆ ತೆರಳುತ್ತಿದ್ದಂತ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಬೀದಿಯಲ್ಲಿ ಆಡುತ್ತಿದ್ದಂತ ನಾಯಿಮರಿಯೊಂದು ಕಚ್ಚಿದೆ. ಇದನ್ನು ತಾತ್ಸಾರ ಮಾಡಿದ್ದಂತ ಮಹಿಳೆಯೊಬ್ಬರು ರೆಬೀಸ್ ರೋಗದಿಂದ ಸಾವನ್ನಪ್ಪಿರುವಂತ ಘಟನೆ ಸುಳ್ಯದಲ್ಲಿ ನಡೆದಿದೆ. ಮಾರ್ಚ್.7ರಂದು ಸಂಪಾಜೆಯ ಕಲ್ಲುಗುಂಡಿ ಬಳಿಯಲ್ಲಿ ಅರಂತೋಡಿಗೆ ತೆರಳುತ್ತಿದ್ದಂತ 42 ವರ್ಷದ ಮಹಿಳೆಗೆ ಬೀದಿಯಲ್ಲಿದ್ದಂತ ನಾಯಿಮರಿಯೊಂದು ಕಚ್ಚಿದೆ. ಈ ಬಗ್ಗೆ ಯಾರಿಗೂ ಹೇಳದೇ, ಚಿಕಿತ್ಸೆಯನ್ನು ಪಡೆಯದೇ ಮಹಿಳೆ ತಾತ್ಸಾರ ಮಾಡಿದ್ದಾಳೆ. ಮಾರ್ಚ್.17ರಂದು ಮಹಿಳೆಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಆಕೆಯನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ವೇಳೆಯಲ್ಲಿ ನೀರು ನೋಡಿದ್ರೇ ಕಿರುಚಾಡೋದಕ್ಕೆ ಮಹಿಳೆ ಆರಂಭಿಸಿದ್ದಾರೆ. ವಿಚಿತ್ರವಾಗಿ ವರ್ತನೆ ತೋರಿದಂತ ಮಹಿಳೆಯನ್ನು ವಿಚಾರಿಸಿದಾಗ ನಾಯಿಮರಿ ಕಚ್ಚಿದಂತ ವಿಷಯವನ್ನು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೇ ಮಾರ್ಚ್.22ರಂದು ಚಿಕಿತ್ಸೆ ಫಲಿಸದೇ ಮಹಿಳೆ ಸಾವನ್ನಪ್ಪಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ರೆಬೀಸ್ ತಗುಲಿದ್ದು ದೃಢಪಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಮಹಿಳೆ ವಾಸವಾಗಿದ್ದಂತ ಪ್ರದೇಶ ಮತ್ತು ಕುಟುಂಬದ ಹಲವಾರು ಜನರಿಗೆ ರೆಬೀಸ್ ವಿರೋಧಿ…

Read More

ನಾವು ನಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗಳಲ್ಲಿ ಓದುವಂತೆ ಮಾಡುತ್ತೇವೆ, ಇದರಿಂದ ನಾವು ಕಷ್ಟಪಟ್ಟರೂ ಅವರು ಓದಬಹುದು ಮತ್ತು ಉತ್ತಮ ಅಂಕಗಳನ್ನು ಪಡೆಯುತ್ತಾರೆ. ಪ್ರಸ್ತುತ ಸನ್ನಿವೇಶದಲ್ಲಿ ಎಲ್ಲಾ ಮಕ್ಕಳು ಒಳ್ಳೆಯ ಮತ್ತು ಬುದ್ಧಿವಂತ ಮಕ್ಕಳು ಮತ್ತು ಓದುವ ಮಕ್ಕಳು. ಆದರೆ ಕೆಲವು ಮಕ್ಕಳು ಪರೀಕ್ಷೆಯ ಸಮಯದಲ್ಲಿ ಓದುವುದೆಲ್ಲವನ್ನೂ ಮರೆತುಬಿಡುತ್ತಾರೆ. ಕೆಲವು ಮಕ್ಕಳು ಯಾವಾಗಲೂ ಸ್ವಲ್ಪ ಜಡವಾಗಿರುತ್ತಾರೆ. ಇದು ಬದಲಾಗಬೇಕಾದರೆ ಸರಸ್ವತಿ ದೇವಿಯ ಕೃಪೆಗೆ ಪಾತ್ರರಾಗಬೇಕು. ಆ ಕೃಪೆಯನ್ನು ಪರಿಪೂರ್ಣವಾಗಿ ಪಡೆಯಲು ಈ ಒಂದು ಸಾಲಿನ ಮಂತ್ರ ಸಾಕು ಎನ್ನುತ್ತದೆ ಆಧ್ಯಾತ್ಮಿಕತೆ . ಈ ಪೋಸ್ಟ್‌ನಲ್ಲಿ, ಮಂತ್ರ ಯಾವುದು ಮತ್ತು ಅದನ್ನು ಹೇಗೆ ಹೇಳಬೇಕೆಂದು ನೀವು ವಿವರವಾಗಿ ನೋಡಬಹುದು. ತಮ್ಮ ಮಕ್ಕಳು ಚೆನ್ನಾಗಿ ಓದಿ ಉತ್ತಮ ಸ್ಥಾನದಲ್ಲಿರಬೇಕು ಎಂಬುದು ಪೋಷಕರ ದೊಡ್ಡ ಕನಸು. ಇಂದು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಹೊಂದಲು ಬೆಳಿಗ್ಗೆಯಿಂದ ಸಂಜೆಯವರೆಗೆ ದಣಿವರಿಯಿಲ್ಲದೆ ಶ್ರಮಿಸುತ್ತಾರೆ. ಅದಕ್ಕೆ ಆಧಾರವೆಂದರೆ ಅವರು ಉತ್ತಮ ಶಿಕ್ಷಣ ಪಡೆಯಬೇಕು. ಈ ಶಿಕ್ಷಣ ಪಡೆಯಲು ನಮ್ಮ ದೊಡ್ಡ ಶಾಲೆಗಳಿಗೆ…

Read More

ಬೆಂಗಳೂರು: ಇಂದು ವಿಧಾನಸಭೆಯಲ್ಲಿ ಬಿಜೆಪಿಯ 18 ಶಾಸಕರ ಅಮಾನತ್ತಿನೊಂದಿಗೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ಅಲ್ಲದೇ ಪರಿಷತ್ ಕಲಾಪವನ್ನು ಮುಸ್ಲೀಂ ಸಮುದಾಯದವರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಶೇ.4ರಷ್ಟು ಮೀಸಲಾತಿ ಸಂಬಂಧ ಚರ್ಚೆಯ ನಡುವೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೆ ಗೌರವ ತೋರಿದಂತ ಬಿಜೆಪಿಯ 18 ಶಾಸಕರನ್ನು ಸದನದ ಕಲಾಪದಿಂದ 6 ತಿಂಗಳವರೆಗೆ ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶಿಸಿದರು. ಆ ಬಳಿಕ ಅರಮನೆ ಭೂ ಬಳಕೆ ತಿದ್ದುಪಡಿ ವಿಧೇಯಕ ಹಾಗೂ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲೀಮರಿಗೆ ಶೇ.4ರಷ್ಟು ಮೀಸಲಾತಿ ಮಸೂದೆಗೆ ತೀವ್ರ ವಿರೋಧದ ನಡುವೆ ಅಂಗೀಕಾರ ದೊರೆಯಿತು. ಆ ಬಳಿಕ ವಿಧಾನಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಇತ್ತ ವಿಧಾನ ಪರಿಷತ್ತಿನಲ್ಲೂ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲೀಮರಿಗೆ ಶೇ.4ರಷ್ಟು ಮೀಸಲಾತಿ ವಿಧೇಯಕದ ಬಗ್ಗೆ ಚರ್ಚೆ ನಡೆಯಿತು. ಈ ವಿಧೇಯಕವನ್ನು ಪರಿಷತ್ ಸದಸ್ಯ ಸಿ.ಟಿ ರವಿ ಅವರು ತೀವ್ರವಾಗಿ ವಿರೋಧಿಸಿದರು. ಸದನದಲ್ಲಿ ಗದ್ದಲ ಕೋಲಾಹಲಕ್ಕೂ ಕಾರಣವಾಯಿತು. ಹೀಗಾಗಿ ಚರ್ಚೆಯ ಬಳಿಕ ವಿಧಾನ ಪರಿಷತ್ ಕಲಾಪವನ್ನು…

Read More

ಮಡಿಕೇರಿ : ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹಾಗೆಯೇ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿರುವ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸುವಂತೆ ಈ ಮೂಲಕ ತಿಳಿಸಲಾಗಿದೆ. ಹೋಂ-ಸ್ಟೇಗಳ ನೋಂದಣಿಗಾಗಿ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅಂತರ್ಜಾಲ ತಾಣ https://kttf.karnatakatourism.org/login ಮುಖಾಂತರ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಲಾಗಿದೆ. ಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿಯನ್ನು ಹಾಜರುಪಡಿಸುವುದು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ ಕಾನೂನು…

Read More

ಬಳ್ಳಾರಿ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಗೆ ಬರುವ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಮಾ.23 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 04 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-1 ವ್ಯಾಪ್ತಿಯ ಕಪ್ಪಗಲ್ಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿನಗರ, ಕೆಇಬಿ ಕ್ವಾರ್ಟಸ್ಸ್, ಭಗತ್ ಸಿಂಗ್ ನಗರ, ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸಿ ಸ್ಟಿçÃಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್. ಎಫ್-2 ವ್ಯಾಪ್ತಿಯ ಗಾಂಧಿನಗರ, ಬಿ.ಎಸ್.ಕಾಂಪೌAಡ್, ರ‍್ರಿತಾತ ನಗರ, ಸೆಂಟ್ರಲ್‌ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕ ರಸ್ತೆ, ಸೊಂತಲಿAಗಣ್ಣ ಕಾಲೋನಿ, ರೈಲ್ವೆ ಸ್ಟೇ಼ಷನ್, ಎಸ್.ಪಿ.ಬಂಗ್ಲೆ, ಮಹಿಳಾ ಕಾಲೇಜು ರಸ್ತೆ, ಗಾಂಧಿನಗರ, ಸೂರ್ಯಕಾಲೋನಿ. ಎಫ್-4 ವ್ಯಾಪ್ತಿಯ ಆಟೋ ನಗರ, ಎಸ್.ಆರ್.ಎಮ್ ಲೇ಼಼ಔಟ್, ಕನಕದಾಸ್ ನಗರ, ಕೆ.ಎ.ಐ.ಡಿ,ಬಿ ಕೈಗಾರಿಕಾ ಪ್ರದೇಶ. ಎಫ್-6 ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ,…

Read More

ಶಿವಮೊಗ್ಗ: ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ ಮತ್ತು ಬೆಂಗಳೂರಿನ ಇನ್ಸಿಟ್ಯೂಟ್ ಆಪ್ ಹೋಟೆಲ್ ಮ್ಯಾನೇಜ್‌ಮೆಂಟ್ ಮೂಲಕ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪ.ಜಾ/ ಪ.ಪಂ.ಗಳ ಅಭ್ಯರ್ಥಿಗಳಿಗೆ 2ನೇ ಹಂತದ ಕೌಶಲ್ಯಾಭಿವೃದ್ಧಿ ತರಬೇತಿ ಆಯೋಜಿಸಲಾಗಿದ್ದು, 20-45 ವರ್ಷದೊಳಗಿನ ಅಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. 8ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಮಲ್ಟಿ ಕುಸಿನ್ ಕುಕ್ ಕುರಿತು 5 ತಿಂಗಳ ತರಬೇತಿ ಹಾಗೂ 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಫುಡ್ ಆಂಡ್ ಬೆವರೇಜ್ ಸರ್ವಿಸ್ ಸ್ಟೀವರ್ಡ್ ಕುರಿತು 4 ತಿಂಗಳ ತರಬೇತಿ ನೀಡಲಾಗುತ್ತಿದ್ದು, ನಿಗದಿತ ನಮೂನೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆದಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 03/04/2025 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆದ ಗುರುದತ್ತ ಹೆಗಡೆರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-251444 ನ್ನು ಸಂಪರ್ಕಿಸುವುದು. https://kannadanewsnow.com/kannada/bjp-is-an-uncultured-party-i-have-never-seen-such-behaviour-dk-shivakumar/ https://kannadanewsnow.com/kannada/good-news-for-those-going-home-for-ugadi-festival-special-express-train-service-between-bengaluru-and-kalaburagi/

Read More

ಬೆಂಗಳೂರು : “ಬಿಜೆಪಿ ಸಂಸ್ಕೃತಿಹೀನ ಪಕ್ಷ. ಅವರು ಜನಾದೇಶದಿಂದ ಸೋಲನುಭವಿಸಿದ್ದು, ವಿಧಾನಸಭೆಯಲ್ಲಿ ಹೇಗೆ ವರ್ತಿಸಬೇಕು ಎಂಬುದು ಗೊತ್ತಿಲ್ಲ. ಅವರು ಗೂಂಡಾಗಳು. ಇದು ನಾಚಿಕೆಗೇಡಿನ ವಿಚಾರ. ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದು, ಎಂದೂ ಇಂತಹ ವರ್ತನೆ ನೋಡಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಹನಿಟ್ರ್ಯಾಪ್ ವಿಚಾರವಾಗಿ ಹೇಳಿಕೆ ನೀಡಿದ್ದು, ಯಾರಾದರೂ ಒಬ್ಬರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳಬಹುದು. ವಿಧಾನಸೌಧದಲ್ಲೇ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ. ಈ ವಿಚಾರ ನ್ಯಾಯಾಲದಲ್ಲಿದೆ. ಬಾಂಬೆ ಬಾಯ್ಸ್ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಯಾವ ಕಾರಣಕ್ಕೆ?” ಎಂದು ತಿರುಗೇಟು ನೀಡಿದರು. ಅವರ ಬಾಣದ ಗುರಿ ಯಾರ ಕಡೆ ಇದೆ ಎಂದು ಕೇಳಿದಾಗ, “ಅವರು ಯಾರತ್ತ ಗುರಿ ಇಟ್ಟಿದ್ದಾರೋ ಗೊತ್ತಿಲ್ಲ. ಇದು ಅವರ ಸೆಲ್ಫ್ ಗೋಲ್ ಇರಬೇಕು” ಎಂದು ವ್ಯಂಗವಾಡಿದರು. https://kannadanewsnow.com/kannada/shivamogga-a-state-level-workshop-was-successfully-held-at-anavatti-government-first-grade-college/ https://kannadanewsnow.com/kannada/good-news-for-those-going-home-for-ugadi-festival-special-express-train-service-between-bengaluru-and-kalaburagi/

Read More