Author: kannadanewsnow09

ಬೆಂಗಳೂರು: ನಿನ್ನಯಷ್ಟೇ ವಂಚನೆ ಆರೋಪದಡಿಯಲ್ಲಿ ಐಶ್ವರ್ಯ ಗೌಡಗೆ ಸೇರಿದಂತೆ ಕೋಟ್ಯಂತರ 3.98 ಕೋಟಿ ಮೌಲ್ಯದ ಆಸ್ತಿಪಾಸ್ತಿಯನ್ನು ಜಾರಿ ನಿರ್ದೇಶನಾಲಯವು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಬೆನ್ನಲ್ಲೇ ಐಶ್ವರ್ಯ ಗೌಡ ವಿರುದ್ಧ ಪಿಎಂಎಲ್ಎ ಕಾಯ್ದೆಡಯಡಿ ಕೇಸ್ ದಾಖಲಿಸಿದೆ. ಇಡಿ ಅಧಿಕಾರಿಗಳು ನಿನ್ನೆಯಷ್ಟೇ, ಬೆಂಗಳೂರಿನ ಇಡಿ, 3.98 ಕೋಟಿ (ಅಂದಾಜು) ಮೌಲ್ಯದ ಫ್ಲಾಟ್‌ಗಳು, ನಿರ್ಮಿತ ಕಟ್ಟಡ ಮತ್ತು ರೂ. 2.01 ಕೋಟಿ (ಅಂದಾಜು) ಮೌಲ್ಯದ ಭೂಮಿ ಮತ್ತು ರೂ. 1.97 ಕೋಟಿ (ಅಂದಾಜು) ಮೌಲ್ಯದ ನಗದು ಮತ್ತು ವಾಹನದ ರೂಪದಲ್ಲಿ ಚಲಿಸಬಲ್ಲ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಶ್ರೀಮತಿ ಐಶ್ವರ್ಯಾ ಗೌಡ ಮತ್ತು ಇತರರ ಪ್ರಕರಣದಲ್ಲಿ ಹೆಚ್ಚಿನ ಆದಾಯದ ಭರವಸೆ ನೀಡಿ ಹಲವಾರು ವ್ಯಕ್ತಿಗಳಿಂದ ಚಿನ್ನ, ನಗದು ಮತ್ತು ಹಣವನ್ನು ಬ್ಯಾಂಕ್ ಖಾತೆಗಳ ಮೂಲಕ ಪಡೆದು ಕ್ರಿಮಿನಲ್ ಪಿತೂರಿಯಲ್ಲಿ ಹಣ ವರ್ಗಾವಣೆಯ ಅಪರಾಧದಲ್ಲಿ ಭಾಗಿಯಾಗಿದ್ದಾರೆಂದು ಕಂಡುಬಂದಿದೆ ಎಂದಿದ್ದರು. https://twitter.com/dir_ed/status/1937113610171670882 ಇಂದು ಹೆಚ್ಚಿನ ಆದಾಯದ ಭರವಸೆ ನೀಡಿ ಹಲವಾರು ವ್ಯಕ್ತಿಗಳಿಂದ ಚಿನ್ನ, ನಗದು ಮತ್ತು ಹಣವನ್ನು ಬ್ಯಾಂಕ್…

Read More

ಬೆಂಗಳೂರು: ರಾಜ್ಯದ ವಿವಿಧೆಡೆ 8 ಭ್ರಷ್ಟ ಅಧಿಕಾರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ಪರಿಶೀಲನೆಯಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮ ಆಸ್ತಿ-ಪಾಸ್ತಿ ಸಂಪಾದನೆಯ ಮಾಹಿತಿಯನ್ನು ದಾಖಲೆ ಸಹಿತ ಲೋಕಾಯುಕ್ತ ಪೊಲೀಸರು ಹೆಕ್ಕಿ ತೆಗೆದಿದ್ದಾರೆ. ಹಾಗಾದ್ರೇ ಇಂದಿನ ದಾಳಿಯಲ್ಲಿ ಯಾರ ಬಳಿ ಎಷ್ಟು ಅಕ್ರಮ ಆಸ್ತಿ-ಪಾಸ್ತಿ ಸಿಕ್ತು ಅಂತ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಂಗಳೂರು ನಗರ-1, ಬೆಂಗಳೂರು ಗ್ರಾಮಾಂತರ-1, ಕಲಬುರಗಿ-2, ಧಾರವಾಡ-1, ಹಾಸನ-1, ಗದಗ-1 ಮತ್ತು ಶಿವಮೊಗ್ಗ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 8 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ ಎಂದಿದೆ. ಈ ದಿನ ದಿನಾಂಕ: 24.06.2025 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 45 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ…

Read More

ಹುಬ್ಬಳ್ಳಿ: ನಾಗಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ಹಾಲಿ ಇರುವ ಲೂಪ್ ಲೈನ್ (ರೋಡ್-3) ಅನ್ನು ಮುಖ್ಯ ಲೈನ್ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವ ಮತ್ತು OHE ಪೋರ್ಟಲ್‌ಗಳನ್ನು ಸ್ಥಳಾಂತರಿಸುವ ಕಾಮಗಾರಿಯಿಂದಾಗಿ, ಜುಲೈ 2, 2025 ರಿಂದ ಜುಲೈ 28, 2025 ರವರೆಗೆ 27 ದಿನಗಳ ಕಾಲ ಲೂಪ್ ಲೈನ್ ಅನ್ನು ಸ್ಥಗಿತಗೊಳಿಸಲಾಗುವುದು. ಈ ಕಾಮಗಾರಿಯ ಹಿನ್ನೆಲೆಯಲ್ಲಿ, ಕೆಳಗಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗವನ್ನು ಈ ಕೆಳಗಿನಂತೆ ಬದಲಾಯಿಸಲಾಗಿದೆ: 1. ರೈಲು ಸಂಖ್ಯೆ 22231 ಕಲಬುರಗಿ – ಎಸ್‌ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (ಶುಕ್ರವಾರ ಹೊರತುಪಡಿಸಿ) ಅನಂತಪುರ, ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ಮಾರ್ಗವಾಗಿ ಸಂಚರಿಸಲಿದೆ. 2. ರೈಲು ಸಂಖ್ಯೆ 20703 ಕಾಚೇಗುಡ – ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್ (ಬುಧವಾರ ಹೊರತುಪಡಿಸಿ) ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ. 3. ರೈಲು ಸಂಖ್ಯೆ 22232 ಎಸ್‌ಎಂವಿಟಿ ಬೆಂಗಳೂರು – ಕಲಬುರಗಿ…

Read More

ಬೆಂಗಳೂರು: 2025-26ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ (ಎಂಡಿಎಸ್) ಪ್ರವೇಶಕ್ಕೆ ಅರ್ಹರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೆಇಎ ವೆಬ್ ಸೈಟ್ ನಲ್ಲಿ ಲಿಂಕ್ ಬಿಟ್ಟಿದ್ದು, ಜೂನ್ 29ರವರಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಸಲು ಜೂನ್ 30 ಕೊನೆ ದಿನ ಎಂದು ಪ್ರಸನ್ನ ತಿಳಿಸಿದ್ದಾರೆ. ಮೂಲ ದಾಖಲೆಗಳ ಪರಿಶೀಲನೆ ಜೂನ್‌ 30ರಿಂದ ನಡೆಯಲಿದ್ದು, ಇದಕ್ಕೆ 27ರಂದು ಮುಂಗಡ ದಿನಾಂಕ ನಿಗದಿಗೆ‌ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಕ್ಲಾಸ್ ಎ ಮತ್ತು ‌ವೈ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಬರುವ ಅಗತ್ಯ ಇರುವುದಿಲ್ಲ. ಒಂದು ವೇಳೆ ಅವರು ಎನ್ ಆರ್ ಐ ವಾರ್ಡ್ ಅಥವಾ ಧಾರ್ಮಿಕ ಅಲ್ಪಸಂಖ್ಯಾತ ಮೀಸಲಾತಿ ಕೋರಿದ್ದಲ್ಲಿ ಮಾತ್ರ ಅಂತಹವರು ದಾಖಲೆ ಪರಿಶೀಲನೆ ಗೆ ಬರಬೇಕಾಗುತ್ತದೆ. ಉಳಿದಂತೆ ಕ್ಲಾಸ್ ಬಿ, ಸಿ, ಡಿ, ಇ, ಎಫ್, ಜಿ, ಝೆಡ್ ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ಸ್ಲಾಟ್ ಬುಕ್‌ ಮಾಡಿಕೊಂಡು…

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಸಿಇಟಿ-2025 ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ. ಕೆಇಎ ವೆಬ್ ಸೈಟ್ ನಲ್ಲಿ ಲಿಂಕ್ ಬಿಟ್ಟಿದ್ದು, ಅಭ್ಯರ್ಥಿಗಳು ತಮ್ಮ ಫಲಿತಾಂಶ ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆ ಬರೆದಿದ್ದ ಸುಮಾರು 20,346 ಅಭ್ಯರ್ಥಿಗಳ Rank ಘೋಷಣೆ ಮಾಡಿದ್ದು, ಸರ್ಕಾರದಿಂದ ಸೀಟ್ ಮ್ಯಾಟ್ರಿಕ್ಸ್ ಬಂದ ಬಳಿಕ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ. ಎಂಜಿನಿಯರಿಂಗ್ ನ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ನೀಡಲು ಡಿಪ್ಲೊಮಾ ಉತ್ತೀಣರಾದ ಅಭ್ಯರ್ಥಿಗಳಿಗೆ ಡಿಸಿಇಟಿ ನಡೆಸಲಾಗುತ್ತದೆ. ಪ್ರತಿ ಎಂಜಿನಿಯರಿಂಗ್ ಕಾಲೇಜಿ‌ನಲ್ಲಿ ಈ ರೀತಿ ಡಿಪ್ಲೊಮಾ ಮುಗಿಸಿದವರಿಗೆ ಶೇ 10ರಷ್ಟು ಸೀಟು ಮೀಸಲಿರುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. https://twitter.com/KEA_karnataka/status/1937476595700367439 https://kannadanewsnow.com/kannada/invitation-to-apply-for-benefits-under-various-horticulture-schemes/ https://kannadanewsnow.com/kannada/bengaluru-residents-attention-tomorrow-there-will-be-a-power-outage-in-these-areas/

Read More

ಶಿವಮೊಗ್ಗ : 2025-26 ನೇ ಸಾಲಿಗೆ ಶಿಕಾರಿಪುರ ತಾಲ್ಲೂಕಿನ ಆಸಕ್ತ ರೈತರಿಂದ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರೈತರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕಚೇರಿ, ಶಿಕಾರಿಪುರ ಇಲ್ಲಿಗೆ ಭೇಟಿ ನೀಡಿ ಅರ್ಜಿಯನ್ನು ಪಡೆದು ಕಾರ್ಯಕ್ರಮದ ಸದುಉಪಯೋಗ ಪಡೆಯಬಹುದು. ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಂಗಾAಶ ಬಾಳೆ, ತರಕಾರಿ, ಹೂ ಬೆಳೆ, ಕಾಳುಮೆಣಸು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ(ವೀಡ್ ಮ್ಯಾಟ್), ಟ್ರಾö್ಯಕ್ಟರ್ (20 ಪಿಟಿಓ), ಕೃಷಿಹೊಂಡ, ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ (ಶಿಲೀಂದ್ರ ನಾಶಕಗಳ ಜಿ.ಎಸ್.ಟಿ. ಬಿಲ್) ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳು, ಹಾಗೂ ರಾಷ್ಟಿçÃಯ ಖಾದ್ಯ ತೈಲ ಅಭಿಯಾನ- ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ(ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕೊಯ್ಯಲು ಸಹಾಯಧನ ಕಾರ್ಯಕ್ರಮಗಳಿಗೆ ಸಹಾಯಧನ, ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕರ್ನಾಟಕದ ಮಾವು ಬೆಳೆಗಾರರು ದರ ಇಳಿಕೆಯಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಹಾರ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಪ್ರತಿಸ್ಪಂದಿಸಿರುವಂತ ಕೇಂದ್ರ ಕೃಷಿ ಸಚಿವರು ಪ್ರತಿ ಕ್ವಿಂಟಾಲ್ ಮಾವಿಗೆ ರೂ.1616 ಪರಿಹಾರ ಘೋಷಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ತಮ್ಮ ಪತ್ರಕ್ಕೆ ಕೃಷಿ ಸಚಿವರು ಸ್ಪಂದಿಸಿದ್ದಾರೆ. 2025-26ನೇ ಸಾಲಿನ ಮಾವು ಬೆಳೆಗೆ ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್ ಮಾವಿಗೆ 1616 ರೂ ಪರಿಹಾರ ಘೋಷಣೆ ಮಾಡಲಾಗಿದೆ. ರಾಜ್ಯದ 2,50,000 ಮೆಟ್ರಿಕ್ ಟನ್ ಮಾವಿಗೆ ಪರಿಹಾರ ಧನ ನೀಡಲಾಗುತ್ತದೆ. ಎಂಐಎಸ್ ಯೋಜನೆಯಡಿ ಪರಿಹಾರ ನೀಡಲು ಕೇಂದ್ರ ಸರ್ಕಾರ ಅನುಮೋದಿಸಿದೆ ಎಂದಿದ್ದಾರೆ. https://TWITTER.com/hd_kumaraswamy/status/1937484288351699257 https://kannadanewsnow.com/kannada/do-you-know-what-is-spell-mantra-and-enchantment-how-to-overcome-these-problems-here-is-the-information/ https://kannadanewsnow.com/kannada/bengaluru-residents-attention-tomorrow-there-will-be-a-power-outage-in-these-areas/

Read More

ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ ಭಯವಿದೆ,ಆದರೆ ಇನ್ನೂ ಕೆಲವರು ಇವುಗಳಲ್ಲಿ ನಂಬಿಕೆ ಇಟ್ಟಿರುತ್ತಾರೆ. ಎಲ್ಲವೂ ಅವರವರ ನಂಬಿಕೆಗೆ ಬಿಟ್ಟಿದ್ದುಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಇದ್ರೆ ಇವೆಲ್ಲಾ ಮಾಟದ ಸಂಕೇತನಿಮ್ಮ ಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಯಾರಾದ್ರೂ ಇಟ್ಟು ಹೋದ್ರೆ ನೋ ಡೌಟ್ ನಿಮ್ಮ ಹಾಗೂ ನಿಮ್ಮ ಮನೆ ಮೇಲೆ ಮಾಟ ಮಂತ್ರ ವಶೀಕರಣವಾಗಿದೆ ಎಂದರ್ಥ. ಬನ್ನಿ ನೋಡೋಣ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ. ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ,…

Read More

ಬೆಂಗಳೂರು: ರಾಜ್ಯದ ನೇರಳೆ ಹಣ್ಣು ಬೆಳೆಗಾರರಿಗೆ ಸಂತಸದ ಸುದ್ದಿ ಎನ್ನುವಂತೆ, ಇದೀಗ ಕರ್ನಾಟಕ ನೇರಳೆ ಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಅಲ್ಲದೇ ಇದೇ ಮೊದಲ ಬಾರಿಗೆ ಕರ್ನಾಟಕದ ನೇರಳೆ ಹಣ್ಣು ಲಂಡನ್ ಗೆ ರಫ್ತು ಮಾಡಲಾಗುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕದಲ್ಲಿ ಬೆಳೆಯುವ ನೇರಳೆ ಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದೇ ಮೊದಲ ಬಾರಿಗೆ ನೇರಳೆ ಹಣ್ಣನ್ನು ಕರ್ನಾಟಕದಿಂದ ಲಂಡನ್‌ಗೆ ರಫ್ತು ಮಾಡಲಾಗುತ್ತಿದೆ ಎಂದಿದೆ. ದೇಶದ ವಿವಿಧ ಭಾಗಗಳ ಸಾಂಪ್ರದಾಯಿಕ ಹಣ್ಣುಗಳನ್ನು ಜಾಗತಿಕ ಮಾರುಕಟ್ಟೆಗೆ ತಲುಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಈ ಮೂಲಕ ಕರ್ನಾಟಕದ ನೇರಳೆ ಹಣ್ಣು ಲಂಡನ್ ಗೆ ರಫ್ತು ಮಾಡಲಾಗುತ್ತಿದೆ ಎಂಬುದಾಗಿ ಸಂತಸದ ಸುದ್ದಿಯನ್ನು ಸರ್ಕಾರ ಹಂಚಿಕೊಂಡಿದೆ. https://twitter.com/KarnatakaVarthe/status/1937455700717846718 https://kannadanewsnow.com/kannada/bengaluru-residents-attention-tomorrow-there-will-be-a-power-outage-in-these-areas/ https://kannadanewsnow.com/kannada/minister-shivraj-tangadagi-inquired-about-the-health-of-dodderangegowda-announced-that-the-government-will-bear-the-medical-expenses/

Read More

ಇರಾನ್: ಜೂನ್ 13 ರಂದು ಇಸ್ರೇಲ್ ನಡೆಸಿದ ದಾಳಿಯ ನಂತರ ದೇಶದಲ್ಲಿ ಕನಿಷ್ಠ 610 ಜನರು ಸಾವನ್ನಪ್ಪಿದ್ದಾರೆ ಮತ್ತು 4,700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಇರಾನ್ ಮಂಗಳವಾರ ತಿಳಿಸಿದೆ. ಇಸ್ರೇಲ್-ಇರಾನ್ ಯುದ್ಧ ಸಂಘರ್ಷವನ್ನು ಶಮನಗೊಳಿಸುವ ಪ್ರಯತ್ನದಲ್ಲಿ, ಟೆಹ್ರಾನ್ ಮತ್ತು ಟೆಲ್ ಅವಿವ್ ಎರಡೂ ಯುನೈಟೆಡ್ ಸ್ಟೇಟ್ಸ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮಕ್ಕೆ ಒಪ್ಪಿಕೊಂಡವು. ಒಪ್ಪಂದದ ಹೊರತಾಗಿಯೂ, ಇರಾನ್‌ನಿಂದ ಹೆಚ್ಚಿನ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸುವುದನ್ನು ಪತ್ತೆಹಚ್ಚಿದ ಕಾರಣ ಇರಾನ್ ವಾಯುದಾಳಿ ಮುಂದುವರೆದಿದೆ ಎಂದು ಇಸ್ರೇಲ್ ಮಂಗಳವಾರ ಹೇಳಿಕೊಂಡಿದೆ. ಇಸ್ರೇಲ್-ಇರಾನ್ ಸಂಘರ್ಷ ಇಂದು 12 ನೇ ದಿನಕ್ಕೆ ಕಾಲಿಟ್ಟಿತು. ಮಂಗಳವಾರ ಮುಂಜಾನೆ, ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಸ್ಥಳೀಯ ಸಮಯ ಬೆಳಿಗ್ಗೆ 4 ಗಂಟೆಯೊಳಗೆ ಇಸ್ರೇಲ್ ತನ್ನ ವೈಮಾನಿಕ ದಾಳಿಯನ್ನು ನಿಲ್ಲಿಸಿದರೆ ಇರಾನ್ ತನ್ನ ದಾಳಿಯನ್ನು ನಿಲ್ಲಿಸುತ್ತದೆ ಎಂದು ಹೇಳಿದರು. ಅರಘ್ಚಿಯವರ ಹೇಳಿಕೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮಕ್ಕೆ ಇರಾನ್ ನೀಡಿದ…

Read More