Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು. ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದರು. ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದರು. ಆನೆ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರಂ ವಲಯದಲ್ಲಿನ ಮಲಂದೂರು ಮೀಸಲು ಅರಣ್ಯವನ್ನು ನಕಲಿ ದಾಖಲೆ ಸೃಷ್ಟಿಸಿ ಒತ್ತುವರಿ ಮಾಡಿದ್ದಂತ 6 ಎಕರೆ 24 ಗುಂಟೆ ಜಮೀನನ್ನು ಅರಣ್ಯಾಧಿಕಾರಿಗಳು ತೆರವುಗೊಳಿಸಿದ್ದರು. ಈ ಮೂಲಕ ಸಾಗರದ ಅರಣ್ಯಾಧಿಕಾರಿಗಳು ನಕಲಿ ದಾಖಲೆ ಸೃಷ್ಟಿ ಅರಣ್ಯ ಭೂಮಿ ಒತ್ತುವರಿ ಮಾಡಿದ್ದವರಿಗೆ ಶಾಕ್ ನೀಡಿದ್ದಾರೆ. ಹಾಗಾದರೆ ಕರ್ನಾಟಕ ಅರಣ್ಯ ಅಧಿನಿಯಮ 1963ರ ಸೆಕ್ಷನ್ 64(ಎ)ರ ಅಡಿಯಲ್ಲೇ ಕಾನೂನಿನಂತೆ ತೆರವು ಮಾಡಿದ್ದೇಗೆ ಅಂತ ಆ 64ಎ ಪ್ರೊಸಿಡಿಂಗ್ಸ್ ಆದೇಶದ ಸಂಪೂರ್ಣ ವಿವರ ಮುಂದಿದೆ ಓದಿ. ಈ ಕುರಿತಂತೆ ಸಾಗರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ.ಕೆ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರಂನ ಮಲಂದೂರು ಗ್ರಾಮದ ಸರ್ವೆ ನಂಬರ್ 157ರ ಮಲಂದೂರು ರಾಜ್ಯ ಅರಣ್ಯ ಪ್ರದೇಶದಲ್ಲಿ ಆರ್.ಎಂ ಷಣ್ಮುಖ ಬಿನ್ ಮಂಜಪ್ಪಗೌಡ ಎಂಬುವರು 6 ಎಕರೆ 24 ಗುಂಟೆ ಜಮೀನು ಒತ್ತುವರಿ ಮಾಡಿದ್ದರ ಬಗ್ಗೆ ದೂರು ಬಂದಿತ್ತು. ಈ ದೂರು ಆಧರಿಸಿ ಅರಣ್ಯಾಧಿಕಾರಿಗಳು ತನಿಖೆ…
ಕೊಬ್ಬಿನ ಪಿತ್ತಜನಕಾಂಗದ ಬಗ್ಗೆ ಯಕೃತ್ತಿನ ವೈದ್ಯರು ಏನು ಹೇಳುತ್ತಾರೆ? ಕೊಬ್ಬಿನ ಪಿತ್ತಜನಕಾಂಗವು ಮನೆಯ ಕಾಳಜಿಯಾಗುತ್ತಿದೆ, ವಿಶೇಷವಾಗಿ ಜಡ ದಿನಚರಿ ಮತ್ತು ಸಂಸ್ಕರಿಸಿದ ಆಹಾರಗಳು ಕೇಂದ್ರ ಹಂತವನ್ನು ತೆಗೆದುಕೊಳ್ಳುತ್ತಿರುವಾಗ. ಆದರೆ ಇಲ್ಲಿ ಒಂದು ಸಾಂತ್ವನಕಾರಿ ಚಿಂತನೆ ಇದೆ, ಆಹಾರವು ಸಹ ಗುಣಪಡಿಸಬಹುದು. ಹಾರ್ವರ್ಡ್-ತರಬೇತಿ ಪಡೆದ ಯಕೃತ್ತು ಮತ್ತು ಕರುಳಿನ ತಜ್ಞ ಡಾ. ಸೌರಭ್ ಸೇಥಿ ಅವರು ಆರೋಗ್ಯಕರ ಜೀವನಶೈಲಿಯೊಂದಿಗೆ ಜೋಡಿಸಿದಾಗ ಕೊಬ್ಬಿನ ಪಿತ್ತಜನಕಾಂಗದ ಹಿಮ್ಮುಖವನ್ನು ಬೆಂಬಲಿಸುವ 4 ನಿರ್ದಿಷ್ಟ ತಿಂಡಿ ಸಂಯೋಜನೆಗಳತ್ತ ಗಮನ ಸೆಳೆದಿದ್ದಾರೆ. ಇವು ಕೇವಲ ಯಾದೃಚ್ಛಿಕ ಆರೋಗ್ಯಕರ ಆಹಾರಗಳಲ್ಲ, ಅವು ಯಕೃತ್ತಿನ ಕೊಬ್ಬಿನ ಚಯಾಪಚಯ, ಉರಿಯೂತ ಮತ್ತು ಕರುಳಿನ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದರ ಆಧಾರದ ಮೇಲೆ ಅವುಗಳನ್ನು ಎಚ್ಚರಿಕೆಯಿಂದ ಆಯ್ಕೆ ಮಾಡಲಾಗುತ್ತದೆ. ವಾಲ್ನಟ್ಸ್ನೊಂದಿಗೆ ಖರ್ಜೂರ ಖರ್ಜೂರವು “ತುಂಬಾ ಸಿಹಿ” ಎಂದು ಊಹಿಸುವುದು ಸುಲಭ. ಆದರೆ ಹೆಚ್ಚಿನವರಿಗೆ ತಿಳಿದಿರದ ಸಂಗತಿಯೆಂದರೆ ಖರ್ಜೂರವು ಕರಗುವ ನಾರಿನಲ್ಲಿ ಸಮೃದ್ಧವಾಗಿದೆ, ಇದು ಜೀರ್ಣಕ್ರಿಯೆ ಮತ್ತು ಸಕ್ಕರೆ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುವ ಮೂಲಕ ಯಕೃತ್ತಿನಲ್ಲಿ…
ನವದೆಹಲಿ: ಇಂದಿನಿಂದ ಭಾರತದಲ್ಲಿ ಫಿಂಗರ್ಪ್ರಿಂಟ್ಗಳು, ಮುಖ ಗುರುತಿಸುವಿಕೆ ಬಳಸಿಕೊಂಡು UPI ಮೂಲಕ ಹಣ ಪಾವತಿಸಲು ಬಳಕೆದಾರರಿಗೆ ಅವಕಾಶ ಆರಂಭಿಸಲಾಗುತ್ತಿದೆ. ಅಕ್ಟೋಬರ್ 8, 2025ರ ಇಂದಿನಿಂದ ಭಾರತದಲ್ಲಿ ಮುಖ ಗುರುತಿಸುವಿಕೆ ಮತ್ತು ಬೆರಳಚ್ಚುಗಳನ್ನು ಬಳಸಿಕೊಂಡು UPI ಪಾವತಿಗಳನ್ನು ಅನುಮೋದಿಸಲು ಬಳಕೆದಾರರಿಗೆ ಅವಕಾಶ ನೀಡಲಿದೆ ಎಂದು ರಾಯಿಟರ್ಸ್ ಮಂಗಳವಾರ ವರದಿ ಮಾಡಿದೆ. ಭಾರತದ ವಿಶಿಷ್ಟ ಗುರುತಿನ ವ್ಯವಸ್ಥೆ-ಆಧಾರ್ ಅಡಿಯಲ್ಲಿ ಸಂಗ್ರಹಿಸಲಾದ ಬಯೋಮೆಟ್ರಿಕ್ ಡೇಟಾವನ್ನು ಬಳಸಿಕೊಂಡು ದೃಢೀಕರಣಗಳನ್ನು ಮಾಡಲಾಗುತ್ತದೆ ಎಂದು ಮೂಲಗಳಲ್ಲಿ ಒಂದು ತಿಳಿಸಿದೆ. ಸಂಖ್ಯಾತ್ಮಕ ಪಿನ್ ಅಗತ್ಯವಿರುವ ಪ್ರಸ್ತುತ ವ್ಯವಸ್ಥೆಯಿಂದ ನಿರ್ಗಮಿಸಿ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಇತ್ತೀಚೆಗೆ ಡಿಜಿಟಲ್ ಪಾವತಿಗಳಿಗೆ ದೃಢೀಕರಣದ ಕೆಲವು ಪರ್ಯಾಯ ವಿಧಾನಗಳನ್ನು ಅನುಮತಿಸಿದೆ.
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿಯನ್ನು ಇಂದಿನಿಂದ ಅಕ್ಟೋಬರ್.18ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಸುರಲ್ಕರ್ ವಿಕಾಸ ಕಿಶೋರ್ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ, ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಮರು ನಿಗದಿ ಮಾಡಿ ಆದೇಶಿಸಲಾಗಿತ್ತು ಎಂದಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ರವರು ಸನ್ಮಾನ್ಯ ಮುಖ್ಯ ಮಂತ್ರಿಗಳವರಿಗೆ ನೀಡಿದ ಮನವಿ ಪತ್ರ ದಿ: 06-10-2025 ರಲ್ಲಿ ಮಾನ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ, ಇವರು ನಮೂದಿಸಿದ ಟಿಪ್ಪಣಿಯಲ್ಲಿ ಸದರಿ ಮನವಿ…
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿ ಸಮೀಕ್ಷೆಯನ್ನು ಅಕ್ಟೋಬರ್.18ರವರೆಗೆ ವಿಸ್ತರಣೆ ಮಾಡಲಾಗಿದೆ. ಇದರ ನಡುವೆ ರಾಜ್ಯದಲ್ಲಿ ಇದುವರೆಗೆ 1,19,65,700 ಸಮೀಕ್ಷೆಯನ್ನು ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಟ್ಟು ಮನೆಗಳ ಗುರಿ:1,43,77,978 ಮಾಡಲಾಗಿದೆ. ಮನೆಗಳ ಸಮೀಕ್ಷೆ ನೆನ್ನೆಯವರೆಗೆ ಪ್ರಗತಿ: 1,16,08,503 ಆಗಿದೆ. ಮನೆಗಳ ಸಮೀಕ್ಷೆ ಇಂದಿನ ಪ್ರಗತಿ: 3,57,197 ಆಗಿದೆ. ಒಟ್ಟು ಮನೆಗಳ ಸಮೀಕ್ಷೆ ಪ್ರಗತಿ: 1,19,65,700 ಆಗಿದೆ. ಶೇಕಡಾವಾರು ಪ್ರಗತಿ: 83.2% ಆಗಿದೆ. ಒಟ್ಟು ಜನಸಂಖ್ಯೆ: 4,47,34,261 ಆಗಿದೆ ಎಂದಿದೆ. ಇನ್ನೂ GBA (ಗ್ರೇಟರ್ ಬೆಂಗಳೂರು) ಪ್ರಗತಿಯು ಒಟ್ಟು ಮನೆಗಳ ಗುರಿ:39,82,335 ಆಗಿದೆ. ಮನೆಗಳ ಸಮೀಕ್ಷೆ ನೆನ್ನೆಯವರೆಗೆ ಪ್ರಗತಿ: 2,74,290 ಆಗಿದೆ. ಮನೆಗಳ ಸಮೀಕ್ಷೆ ಇಂದಿನ ಪ್ರಗತಿ: 1,37,714 ಆಗಿದೆ. ಒಟ್ಟು ಮನೆಗಳ ಸಮೀಕ್ಷೆ ಪ್ರಗತಿ: 4,12,004 ಎಂದಿದೆ. https://kannadanewsnow.com/kannada/government-is-telling-lies-after-lies-about-the-census-critic-narayanaswamy-condemns/ https://kannadanewsnow.com/kannada/no-title-deeds-no-basic-amenities-for-over-30-years-peoples-cries-before-maddur-mla-uday/
ಬೆಂಗಳೂರು: ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಕೋರ್ಟಿನ ಆವರಣದಲ್ಲೇ ಶೂ ಎಸೆಯುವ ಕೃತ್ಯ ಖಂಡನೀಯ ಎಂದು ತಿಳಿಸಿದ್ದಾರೆ. ಇದು ಬಾಬಾ ಸಾಹೇಬ ಡಾ. ಅಂಬೇಡ್ಕರರು ಬರೆದ ಸಂವಿಧಾನಕ್ಕೆ ಅಪಚಾರ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವಕ್ಕೆ ಅಪಚಾರ ಮಾಡುವಂಥ ಘಟನೆ. ಇದು ನ್ಯಾಯಾಂಗ ವ್ಯವಸ್ಥೆಗೆ ಆಗಿರುವ ಅಪಚಾರ ಎಂದು ಆಕ್ಷೇಪಿಸಿದರು. ಒಬ್ಬ ವಕೀಲರು ಇಂಥ ಪುಂಡಾಟಿಕೆ ಮಾಡಿದ್ದು, ಪ್ರಧಾನಿಯವರೂ ಸೇರಿ ಎಲ್ಲರೂ ಅದನ್ನು ವಿರೋಧಿಸಿದ್ದಾರೆ. ಇದು ದೇಶವೇ ತಲೆತಗ್ಗಿಸುವ ಕೃತ್ಯ. ನಾನೂ ಇದನ್ನು ಖಂಡಿಸುತ್ತೇನೆ ಎಂದು ತಿಳಿಸಿದರು. ಇದರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಇದು ಕ್ಷಮಾಪಣೆಗೆ ಅರ್ಹ ಕೃತ್ಯವಲ್ಲ; ಆ ವ್ಯಕ್ತಿಗೆ ಕಠಿಣ ಶಿಕ್ಷೆ ಕೊಡಬೇಕೆಂದು ಒತ್ತಾಯಿಸಿದರು. ಜಾತಿ ಜಾತಿಗಳನ್ನು ಒಡೆಯಲು ಗಣತಿ ಬಳಕೆ ಜಾತಿ ಜನಗಣತಿ ನಡೆಯಬೇಕಾದ ರೀತಿ…
ಮಂಡ್ಯ : ರಾಮಾಯಣದಂತ ಮಹಾಕಾವ್ಯ ರಚಿಸುವ ಮೂಲಕ ಭಾರತ ಪ್ರಾಚೀನ ಬದುಕು, ಸಂಸ್ಕೃತಿ ಹಾಗೂ ಸಂಬಂಧಗಳ ಮೌಲ್ಯಗಳನ್ನು ಶ್ರೀ ಮಹರ್ಷಿ ವಾಲ್ಮೀಕಿ ಅವರು ದಾಖಲಿಸಿದ್ದಾರೆಂದು ಮದ್ದೂರು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಅಭಿಪ್ರಾಯಪಟ್ಟರು. ಮದ್ದೂರು ನಗರದ ನಗರಸಭಾ ಆವರಣದಲ್ಲಿ ಮಂಗಳವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ರಾಮಾಯಣದಂತ ಮಹಾಕಾವ್ಯದ ಪಾತ್ರಗಳ ಮೂಲಕ ಜವಾಬ್ದಾರಿ ಮತ್ತು ಕರ್ತವ್ಯದ ಮಹತ್ವ ಸಾರಿ ಮುಂದಿನ ಯುವ ಪೀಳಿಗೆಗೆ ಮೌಲ್ಯಯುತ, ನ್ಯಾಯ, ನಿಷ್ಟೆ, ಪ್ರಾಮಾಣಿಕ ಬದುಕಿನ ಮಾರ್ಗವನ್ನು ತೋರಿದ್ದಾರೆ. ಅವರು ತೋರಿದ ಬೆಳಕಿನ ದಾರಿಯಲ್ಲಿ ನಾವೆಲ್ಲ ಸಾಗಬೇಕಾಗಿದೆ ಎಂದರು. ನಗರಸಭೆ ಅಧ್ಯಕ್ಷೆ ಕೋಕಿಲಾ ಅರುಣ್ ಮಾತನಾಡಿ, ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನು ಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಕೆಳ ಹಂತದ ಜನಾಂಗದಲ್ಲಿ ಜನಿಸಿದ್ದರೂ, ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದ್ದಾರೆ. ವಾಲ್ಮೀಕಿ…
ಮಂಡ್ಯ : ಹಕ್ಕು ಪತ್ರ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಚಾಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಂತಿ ಬಡಾವಣೆಯ ನಿವಾಸಿಗಳು ಮದ್ದೂರು ಶಾಸಕ ಕೆ.ಎಂ.ಉದಯ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ಸೋಮವಾರ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದ ವೇಳೆ ಶಾಸಕ ಉದಯ್ ಅವರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದ ಮುಖಂಡ ರಾಜೇಶ್ ಮಾತನಾಡಿ, 50ಕ್ಕೂ ಹೆಚ್ಚು ವರ್ಷಗಳಿಂದ ಜಯಂತಿ ಬಡಾವಣೆಯ ನಿವಾಸಿಗಳಿಗೆ ಹಕ್ಕುಪತ್ರ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸಿ ಕೊಡುವಂತೆ ಜಿಲ್ಲಾ ಮತ್ತು ತಾಲೂಕು ಆಡಳಿತಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಬಡಾವಣೆಯ ನಿವಾಸಿಗಳು ಪ್ರತಿನಿತ್ಯ ಯಾವುದೇ ಮೂಲ ಸೌಕರ್ಯಗಳು ಇಲ್ಲದೇ ಜೀವನ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅಳಲು ತೋಡಿಕೊಂಡರು. ಗ್ರಾಮದ ಸರ್ಕಾರಿ ಜಾಗದಲ್ಲಿ 100 ಕ್ಕೂ ಹೆಚ್ಚು ಮನೆಗಳನ್ನು ಸರ್ಕಾರ ನಿರ್ಮಿಸಿಕೊಟ್ಟಿದೆ. ಆದರೆ, ಯಾವುದೇ ಸೌಕರ್ಯಗಳನ್ನು ನೀಡಿಲ್ಲ. ಆಗ ನಿರ್ಮಿಸಿರುವ ಮನೆಗಳು ಸಹ ಶಿಥಿಲಗೊಂಡು ವಾಸಕ್ಕೂ ಸಹ…
ಬೆಂಗಳೂರು: ನರೇಗಾ ಯೋಜನೆಯ ನೆರವಿನಿಂದ ‘ಜಲ ಸಂಚಯ ಜನ ಭಾಗಿದಾರಿ’ ಅಭಿಯಾನದಡಿ ಪ್ರತಿ ಹನಿ ನೀರನ್ನು ಸಂರಕ್ಷಿಸುವ ಹಾಗೂ ಅಂತರ್ಜಲ ಮರುಪೂರಣದ ಧ್ಯೇಯದೊಂದಿಗೆ ಜಲ ಸಂರಕ್ಷಣೆಯಲ್ಲಿ ತೊಡಗಿಕೊಂಡ ರಾಜ್ಯದ 7 ಜಿಲ್ಲೆಗಳ ಗ್ರಾಮ ಪಂಚಾಯತಿಗಳಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿ ಪಡೆದುಕೊಂಡ ಎಲ್ಲ ಗ್ರಾಮ ಪಂಚಾಯತಿಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ. ಜಲಸಂರಕ್ಷಣೆಗಾಗಿ ಗದಗ ಜಿಲ್ಲೆಯಲ್ಲಿ 11,971 ವಿಜಯಪುರ ಜಿಲ್ಲೆಯಲ್ಲಿ 11,453 , ಬೀದರ್ ಜಿಲ್ಲೆಯಲ್ಲಿ 10,297, ಕೋಲಾರ ಜಿಲ್ಲೆಯಾದ್ಯಂತ 8,470 ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ 9,885, ಮಂಡ್ಯ ಜಿಲ್ಲೆಯಲ್ಲಿ 7192 ಮತ್ತು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ 7,815 ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಸಚಿವರು ಹೇಳಿದ್ದು, ರಾಜ್ಯದ ಇತರ ಜಿಲ್ಲೆಗಳು ಜಲಸಂರಕ್ಷಣೆಯಲ್ಲಿ ತೊಡಗಿಕೊಳ್ಳುವಂತೆ ಪ್ರಶಸ್ತಿ ಪಡೆದ ಜಿಲ್ಲೆಗಳು ಪ್ರೇರಣೆ ನೀಡಲಿ ಎಂದು ಆಶಿಸಿದ್ದಾರೆ. ಈ ಅಭಿಯಾನದಡಿ ಅಂತರ್ಜಲವನ್ನು ಹೆಚ್ಚಿಸಲು ಕ್ರಮ, ಮಳೆ ನೀರು ಸಂರಕ್ಷಣೆ, ಜಲಸಂರಕ್ಷಣೆಯ ಸಂಸ್ಕೃತಿ ಬಗ್ಗೆ…