Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಂತ ಸಂಸದ ಪಪ್ಪು ಯಾದವ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 31 ವರ್ಷಗಳ ಹಳೇ ಕೇಸ್ ನಲ್ಲಿ ಸಂಸದ ಪಪ್ಪು ಯಾದವ್ ಬಂಧಿಸಲಾಗಿತ್ತು. 1995ರ ಪೋರ್ಜರಿ ಕೇಸಲ್ಲಿ ಪಪ್ಪು ಯಾದವ್ ಅವರನ್ನು ಪೊಲೀಸರು ಕಳೆದ ಶುಕ್ರವಾರ ರಾತ್ರಿ ಅರೆಸ್ಟ್ ಮಾಡಿದ್ದರು. ಬಿಹಾರದ ಪೂರ್ಣಿಯಾ ಕ್ಷೇತ್ರದ ಪಕ್ಷೇತರ ಸಂಸದರಾಗಿದ್ದಂತ ಪಪ್ಪು ಯಾದವ್ ಆ ಬಳಿಕ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಜಾಮೀನು ಮಂಜೂರು ಮಾಡಿದೆ. https://kannadanewsnow.com/kannada/a-sinful-mother-killed-her-11-year-old-daughter-for-telling-her-to-stop-drinking/
ಯಾದಗಿರಿ: ಜಿಲ್ಲೆಯಲ್ಲಿ ಶಾಕಿಂಗ್ ಘಟನೆ ಎನ್ನುವಂತೆ ಕುಡಿಯೋದು ಬಿಡು ಎಂದಿದ್ದಕ್ಕೆ 11 ವರ್ಷದ ಮಗಳನ್ನೇ ಪಾಪಿ ಕೊಂದಿರುವಂತ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ರಾಜೀವ್ ಗಾಂಧಿ ನಗರದಲ್ಲಿ ಎಣ್ಣೆ ಕುಡಿಯೋದು ಬಿಡು ಎಂದಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಮಗಳನ್ನೇ ಕತ್ತು ಹಿಸುಕಿ ಕೊಂದಿರುವಂತ ಘಟನೆ ನಡೆದಿದೆ. ಕೊಲೆಯಾದಂತ ಬಾಲಕಿಯನ್ನು ಪ್ರತಿಭಾ(11) ಎಂಬುದಾಗಿ ಗುರುತಿಸಲಾಗಿದೆ. ಆಕೆಯ ತಾಯಿ ನಿರ್ಮಲಾ ಎಂಬುವರೇ ಕೊಲೆ ಮಾಡಿದಂತ ಪಾಪಿ ತಾಯಿಯಾಗಿದ್ದಾಳೆ. ಪುತ್ರಿಯನ್ನು ಕೊಂದಿದ್ದಂತ ತಾಯಿ ನಿರ್ಮಲಾ ಮಾತ್ರ ಕತೆ ಕಟ್ಟಿದ್ದಳು. ಜ್ಯೂಸ್ ಕುಡಿಯೋದಕ್ಕೆ ಹಣ ನೀಡಿಲ್ಲ ಎಂಬುದಾಗಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದಾಗಿ ಹೇಳಿದ್ದಳು. ಆದರೇ ಮದ್ಯ ಸೇವನೆ ಮಾಡಿ ಹಣ ಖರ್ಚು ಮಾಡಿದರೇ ನಮಗೆ ಊಟಕ್ಕೆ ತೊಂದರೆಯಾಗುತ್ತೆ. ನೀನು ಕುಡಿದು ಸತ್ತರೇ ನಮ್ಮನ್ನು ನೋಡಿಕೊಳ್ಳೋರು ಯಾರು? ಅಮ್ಮ ಕುಡಿಯಬೇಡ. ಕುಡಿಯೋದು ಬಿಡು ಅಂತ ಪುತ್ರಿ ಪ್ರತಿಭಾ ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡು ತಾಯಿ ನಿರ್ಮಲಾ ಕತ್ತು ಹಿಸುಕಿ ಕೊಲೆಗೈದಿರೋದು ತನಿಖೆಯ ವೇಳೆಯಲ್ಲಿ ಬಯಲಾಗಿದೆ. ಯಾದಗಿರಿ ನಗರ ಠಾಣೆಯ ಪೊಲೀಸರು…
ಬೆಂಗಳೂರು: ಕೆಪಿಟಿಸಿಎಲ್ ನಿಂದ ಹೆಬ್ಬಾಳ ವಿಭಾಗದ 66/11 ಕೆವಿಎ ಸಹಕಾರನಗರ ಕೇಂದ್ರದಲಿಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.02.2026 (ಬುಧವಾರ) ರಂದು ಬೆಳಗ್ಗೆ 11:00 ಯಿಂದ ಮಧ್ಯಾಹ್ನ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಜಯಸರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್ಎಸ್ ಲೇಔಟ್, ಸರ್ಯೋದಯ ನಗರ. 2 , ಅಗ್ರಹಾರ…
ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಲಘು ಭೂಕಂಪನ ಉಂಟಾಗಿದೆ. ಇದರಿಂದಾಗಿ ಜನರು ಮನೆಯಿಂದ ಹೊರ ಓಡಿ ಬಂದು ಕೆಲ ಕಾಲ ಬಯಲಿನಲ್ಲಿ ಕಾಲ ಕಳೆಯುವಂತಾದ ಘಟನೆ ವರದಿಯಾಗಿದೆ. ವಿಜಯಪುರ ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವ ಉಂಟಾಗಿದೆ. ಮನೆಯಲ್ಲಿದ್ದಂತ ಪಾತ್ರೆಗಳು ಕೆಳಗೆ ಬಿದ್ದು ಸದ್ದು ಮಾಡಿದ್ದಾವೆ. ಕಿಟಕಿ-ಬಾಗಿಲು ಗಳು ಕೂಡ ಅಲುಗಾಡಿದ್ದಾಗಿ ಸ್ಥಳೀಯರು ಹೇಳಿದ್ದಾರೆ. ಏಕಾಏಕಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದ್ದರಿಂದ ವಿಜಯಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ. ಕೆಲ ಕ್ಷಣ ಬಯಲಿನಲ್ಲಿ ಆತಂಕ, ಭಯದಿಂದ ಕಾಲ ಕಳೆದಿದ್ದಾರೆ ಎನ್ನಲಾಗಿದೆ. ಭೂಕಂಪ ಎಷ್ಟು ಪ್ರಮಾಣದಲ್ಲಿ ಆಗಿದೆ ಎನ್ನುವ ಬಗ್ಗೆ ಕೆ ಎಸ್ ಎನ್ ಡಿ ಎಂ ಸಿ ಮಾಹಿತಿ ನೀಡಿದಾಗಲೇ ಖಚಿತವಾಗಬೇಕಿದೆ. https://kannadanewsnow.com/kannada/kengal-hanumantaiyya-was-an-honest-passionate-politician-who-saw-the-state-chief-minister-siddaramaiah/
ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯನವರು, ರಾಜ್ಯ ಕಂಡ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರು ಒಬ್ಬ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ. ಸುಂದರವಾದ ಭವ್ಯವಾದ ವಿಧಾನಸೌಧ ನಿರ್ಮಿಸಿದ ಕೀರ್ತಿ ಅವರಿ ಗೆ ಸಲ್ಲುತ್ತದೆ. ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ನಾಯಕರಾಗಿ, ಕೇಂದ್ರದ ರೈಲ್ವೆ ಮಂತ್ರಿಯಾಗಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಂವಿಧಾನ ರಚನಾ ಸಮಿತಿಗೆ ಅಮೂಲ್ಯ ಸಲಹೆಗಳನ್ನು ನೀಡಿ, ರಾಷ್ಟ್ರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆಯನ್ನು ನೀಡಿದಂತಹ ಧೀಮಂತ ರಾಜಕಾರಣಿಯೊಬ್ಬರು ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಪ್ರಥಮ ಚುನಾಯಿತ ಮುಖ್ಯಮಂತ್ರಿಯಾಗಿದ್ದರು. ಹನುಮಂತಯ್ಯನವರು ವಿಧಾನಸೌಧಕ್ಕೆ ಬುನಾದಿ ಹಾಕಿದರಾದರೂ, ಉದ್ಘಾಟನೆಯ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿಯಾಗಿರಲಿಲ್ಲವೆಂಬುದು…
ಬೆಂಗಳೂರು : ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು. ಅಧಿಕಾರ ಹಂಚಿಕೆ ಕುರಿತು ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ “ನನ್ನ ಪರ, ವಿರುದ್ಧ ಹೇಳಿಕೆಗಳನ್ನು ಶಾಸಕರು, ಮಂತ್ರಿಗಳು, ಯಾರೇ ನೀಡುತ್ತಿರಬಹುದು. ಈ ಹೇಳಿಕೆಗಳು ಪಕ್ಷಕ್ಕೆ ಹಾನಿ ಮಾಡುವ ಹೇಳಿಕೆಗಳೇ ಹೊರತು ಪಕ್ಷಕ್ಕೆ ಒಳ್ಳೆಯದನ್ನು ಮಾಡುವ ಹೇಳಿಕೆಗಳಲ್ಲ” ಎಂದರು. ಪ್ರತಿದಿನವೂ ಶುಭದಿನ: ಒಂದಷ್ಟು ಕಾಂಗ್ರೆಸ್ ನಾಯಕರು ನೀವು ಶುಭಸುದ್ದಿ ತರುವಿರಿ ಎಂದಿರುವ ಬಗ್ಗೆ ಕೇಳಿದಾಗ, “ಪ್ರತಿದಿನವೂ ನನಗೆ ಶುಭದಿನ, ಶುಭ ಜೀವನ, ಶುಭ ಪ್ರಾರಂಭ, ಯಶಸ್ಸಿನ ದಿನ, ಪ್ರತಿದಿನವೂ ಕಷ್ಟದ ದಿನವೇ. ಪ್ರತಿದಿನವೂ ಏನೂ ಸುಲಭವಾಗಿ ಇರುವುದಿಲ್ಲ. ಜನರ ಕಷ್ಟಗಳನ್ನು ಬಗೆಹರಸಿಬೇಕಾದರೆ ಕಷ್ಟ ಕಾರ್ಪಣ್ಯಗಳು, ಅಡಚಣೆಗಳು, ತೊಡಕುಗಳು ಇದ್ದೇ ಇರುತ್ತವೆ. ಟೀಕೆಗಳು ಬರುತ್ತಲೇ ಇರುತ್ತವೆ. ಟೀಕೆಗಳನ್ನು ಎದುರಿಸಲೇ ಬೇಕು.…
ಬೆಂಗಳೂರು : ಸಾಲ ಕೊಡಿಸುವ ನೆಪದಲ್ಲಿ ನೂರಾರು ಉದ್ಯಮಿಗಳಿಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಪೀಟರ್ ಕ್ಯಾಡಿ ಎಂಬುವರ ಮನೆ ಮೇಲೆ ಸಿಐಡಿ ಪೊಲೀಸರು ಮಂಗಳವಾರ ಬೆಳಗ್ಗೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಫುಲಿಕೇಶಿನಗರದ ಕೋಲ್ಸ್ ಪಾರ್ಕ್ ಸಮೀಪ ಇರುವ ಪೀಟರ್ ಕ್ಯಾಡಿ ಮನೆ ಮೇಲೆ ಸಿಐಡಿ ಅಧಿಕಾರಿಗಳ ತಂಡ ಬೆಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಸುಮಾರು ಹದಿನೈದು ವರ್ಷಗಳಿಂದ ಉದ್ಯಮಿಗಳಿಗೆ ವಂಚಿಸಿ ಕಾನೂನು ಕುಣಿಕೆಯಿಂದ ತಪ್ಪಿಸಿಕೊಂಡಿರುವ ಪೀಟರ್ ಕ್ಯಾಡಿ ವಂಚನೆಗೆ ಓಳಗಾದವರ ವಿರುದ್ಧವೇ ಸುಳ್ಳು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿ ನಾಟಕವಾಡುತ್ತಿದ್ದರು ಎನ್ನಲಾಗಿದೆ.. ಈತನಿಂದ ಸುಮಾರು ಐದು ನೂರಕ್ಕೂ ಹೆಚ್ಚು ಮಂದಿ ವಂಚನೆಗೆ ಒಳಗಾಗಿದ್ದಾರೆ ಎಂದು ಸಿಐಡಿ ಅಧಿಕಾರಿಗಳ ಮೂಲಗಳ ಮಾಹಿತಿಯಾಗಿದೆ. ಸಾಲ ಅಗತ್ಯ ಇರುವವರಿಗೆ ಗಾಳ ಹಾಕುತ್ತಿದ್ದ ಪೀಟರ್ ಕ್ಯಾಡಿ, ತಾನು ಬ್ಯಾಂಕ್ ಬಡ್ಡಿಗಿಂತಲೂ ಕಡಿಮೆಗೆ ಕೋಟ್ಯಂತರ ರೂಪಾಯಿ ಸಾಲ ಕೊಡಿಸುವುದಾಗಿ ನಂಬಿಸುತ್ತಿದ್ದ. ಅರಂಭದಲ್ಲಿ ಈತ ಕೋಟ್ಯಂತರ ರೂಪಾಯಿ ಮೊತ್ತದ ಡಿಡಿಯನ್ನು ಉದ್ಯಮಿಗಳ ಹೆಸರಿನಲ್ಲಿ ತೆಗೆದುಕೊಂಡು ತೋರಿಸುತ್ತಿದ್ದ. ಪೀಟರ್…
ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆ.ಎಸ್.ಡಿ.ಎಲ್) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಖ್ಯಾತ ಹಿಂದಿ ನಟಿ ತಮನ್ನಾ ಭಾಟಿಯಾ ಅವರನ್ನು 2 ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಅವರ ಈ ಕೆಲಸವು ಮಂಗಳವಾರದಿಂದ (ಫೆ.10) ವಿಧ್ಯುಕ್ತವಾಗಿ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ಪಾರಂಪರಿಕ ಹೆಮ್ಮೆಯ ಉತ್ಪನ್ನವಾಗಿರುವ ಮೈಸೂರು ಸ್ಯಾಂಡಲ್ ಸೋಪನ್ನು ನವನವೀನ ರೂಪದಿಂದಿಗೆ ಬಿಡುಗಡೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಸೋಮವಾರ ಈ ಬಗ್ಗೆ ಮಾತನಾಡಿರುವ ಅವರು, `ಕೆ.ಎಸ್.ಡಿ.ಎಲ್. ಸಂಸ್ಥೆಯ ವಾರ್ಷಿಕ ವಹಿವಾಟನ್ನು 2030ರ ಹೊತ್ತಿಗೆ 5,000 ಕೋಟಿ ರೂ.ಗಳ ಮಟ್ಟಕ್ಕೆ ಬೆಳೆಸುವ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕೆ ಪೂರಕವಾಗಿ ಯುವಜನಾಂಗವನ್ನು ತಲುಪಲು ವ್ಯಾಪಕ ಪ್ರಸಾರ ಆಂದೋಲವನ್ನು ನಡೆಸಲಾಗುತ್ತಿದೆ. ಇದಕ್ಕಾಗಿ, ಸೋಶಿಯಲ್ ಮೀಡಿಯಾದಲ್ಲಿ 30 ಲಕ್ಷಕ್ಕೂ ಹೆಚ್ಚು ಫಾಲೋಯರ್ಸ್ ಗಳನ್ನು ಹೊಂದಿರುವ ತಾರಾ ವರ್ಚಸ್ಸಿನ ನಟಿ ತಮನ್ನಾ ಅವರನ್ನು ನೇಮಿಸಿಕೊಳ್ಳಲಾಗುತ್ತಿದೆ. ಈ ಮೂಲಕ ಉತ್ತರ ಭಾರತದಲ್ಲಿ…
ನವದೆಹಲಿ : ಮಹಿಳಾ ಸಬಲೀಕರಣದತ್ತ ಬಲವಾದ ಒತ್ತು ನೀಡುವ ಮೂಲಕ ಕೇಂದ್ರ ಸರ್ಕಾರವು ಜನ-ಕೇಂದ್ರಿತ ಯೋಜನೆಗಳನ್ನು ಜಾರಿಗೆ ತರುವುದನ್ನು ಮುಂದುವರೆಸಿದೆ. ಈ ದೃಷ್ಟಿಕೋನವನ್ನು ಮುಂದಕ್ಕೆ ತೆಗೆದುಕೊಂಡು ಹೋಗುತ್ತಾ, ನರೇಂದ್ರ ಮೋದಿ ಸರ್ಕಾರವು ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ಸೃಷ್ಟಿಸುವ ಗುರಿಯನ್ನು ಹೊಂದಿರುವ ಹೊಸ ಉಪಕ್ರಮವಾದ ಬಿಮಾ ಸಖಿ ಯೋಜನೆಯನ್ನು ಪರಿಚಯಿಸಲು ಸಜ್ಜಾಗಿದೆ. ಈ ಹೊಸ ಯೋಜನೆಯನ್ನು ಡಿಸೆಂಬರ್ 9, ಸೋಮವಾರ, ಹರಿಯಾಣದ ಪಾಣಿಪತ್ನಲ್ಲಿ ನಡೆಯಲಿರುವ ‘ವಿಕಾಶ್ ಭಾರತ್’ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಉದ್ಘಾಟಿಸಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಮಹಿಳೆಯರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಬಿಮಾ ಸಖಿ ಯೋಜನೆಯು ಸ್ಥಿರ ಆದಾಯ ಮತ್ತು ದೀರ್ಘಾವಧಿಯ ಸ್ವಾವಲಂಬನೆಗೆ ಬಾಗಿಲು ತೆರೆಯುತ್ತದೆ. ಈ ಯೋಜನೆಯಡಿಯಲ್ಲಿ, ಆಯ್ದ ಮಹಿಳೆಯರು ಭಾರತೀಯ ಜೀವ ವಿಮಾ ನಿಗಮದ (LIC) ಬಿಮಾ ಸಖಿ ಏಜೆಂಟ್ಗಳಾಗಿ ಕೆಲಸ ಮಾಡುತ್ತಾರೆ. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಿ ಸೀಮಿತವಾಗಿರುತ್ತವೆ, ವಿಶೇಷವಾಗಿ ಮಹಿಳೆಯರಿಗೆ. ಈ ಉಪಕ್ರಮವು ತರಬೇತಿ ಮತ್ತು ಆದಾಯ ಬೆಂಬಲ ಎರಡನ್ನೂ ನೀಡುವ ಮೂಲಕ ಆ ಅಂತರವನ್ನು ನೇರವಾಗಿ ನೀಗಿಸುತ್ತದೆ,…
ಬೆಂಗಳೂರು: ರಾಜ್ಯದಲ್ಲಿ ಸೋಷಿಯಲ್ ಮೀಡಿಯಾ ಪೋಸ್ಟ್ ಗಳಿಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವ ನಿಯಮವನ್ನು ಬಿಗಿಗೊಳಿಸಲಾಗಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಂದ ಉಂಟಾಗುವ ಪ್ರಕರಣಗಳಲ್ಲಿ ಎಫ್ಐಆರ್ಗಳನ್ನು ನೋಂದಾಯಿಸಲು ಈ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸುಪ್ರೀಂ ಕೋರ್ಟ್ ನಿಗದಿಪಡಿಸಿದಂತೆ ಪ್ರಾಥಮಿಕ ವಿಚಾರಣೆಗಳನ್ನು ಕೈಗೊಳ್ಳದೆ, ಪೊಲೀಸ್ ಅಧಿಕಾರಿಗಳು ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಗೆ ಸಂಬಂಧಿಸಿದ ಪ್ರಕರಣವನ್ನು ಯಾಂತ್ರಿಕವಾಗಿ ದಾಖಲಿಸುತ್ತಿದ್ದಾರೆ ಎಂದು ಗಮನಿಸಲಾಗಿದೆ. ಇಮ್ರಾನ್ ಪ್ರತಾಪ್ಗಾಧಿ vs ಗುಜರಾತ್ ರಾಜ್ಯ, ಕ್ರಿಮಿನಲ್ ಮೇಲ್ಮನವಿ ಸಂಖ್ಯೆ 1545/2025, ದಿನಾಂಕ: 28.03.2025. ಈ ಕಚೇರಿಯು ಈಗಾಗಲೇ 04.07.2025 ರಂದು CRM-3/41/2024 ಸುತ್ತೋಲೆಯನ್ನು ಹೊರಡಿಸಿದೆ. ಇದಲ್ಲದೆ, ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್, ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಂದ ಉಂಟಾಗುವ ಪ್ರಕರಣಗಳಲ್ಲಿ FIR ಗಳ ನೋಂದಣಿಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ರೂಪಿಸಿದ ಮಾರ್ಗಸೂಚಿಗಳನ್ನು ಉಲ್ಲೇಖಿತ ತೀರ್ಪಿನಲ್ಲಿ ಎತ್ತಿಹಿಡಿದಿದೆ ಎಂದಿದೆ. ಆದ್ದರಿಂದ, ಅದೇ ಮಾರ್ಗಸೂಚಿಗಳನ್ನು ಇಲ್ಲಿ ಅಳವಡಿಸಿಕೊಳ್ಳಲಾಗಿದೆ ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಗೆ ಸಂಬಂಧಿಸಿದ…














