Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಶಿವಮೊಗ್ಗ: ಸಾಗರ ತಾಲ್ಲೂಕು ಖಾಸಗಿ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ಆರ್. ಶ್ರೀನಿವಾಸ್ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ. ಸಾಗರದಲ್ಲಿ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಹೀಗಿದೆ ನೂತನ ಪದಾಧಿಕಾರಿಗಳ ವಿವರ: ಸಂಘದ ಬಲವರ್ಧನೆಗಾಗಿ ವಿವಿಧ ಜವಾಬ್ದಾರಿಗಳಿಗೆ ಕೆಳಗಿನವರನ್ನು ನೇಮಿಸಲಾಗಿದೆ: ಗೌರವಾಧ್ಯಕ್ಷರು: ರಾಬರ್ಟ್ ಗೋಮ್ಸ್ ಉಪಾಧ್ಯಕ್ಷರು: ಮುರುಗನ್, ಚಂದ್ರು ಮೇಸ್ತ್ರಿ, ಎಲ್.ಆರ್.ಎಸ್. ರಾಜಣ್ಣ, ವೆಂಕಟೇಶ್ ವಿ., ಖಲಬ್ ಸಾಬ್, ವಾಸು ಮೇಸ್ತ್ರಿ, ಮನೋಜ್. ಪ್ರಧಾನ ಕಾರ್ಯದರ್ಶಿಗಳು: ಶ್ರೀನಾಥ್, ಸಬಾಸ್ಟಿನ್. ಖಜಾಂಚಿ: ಯೋಗೇಂದ್ರ. ಸಂಘಟನಾ ಕಾರ್ಯದರ್ಶಿ: ಅಂತೋನಿ ಗೋಮ್ಸ್. ಸಹ ಕಾರ್ಯದರ್ಶಿಗಳು: ಅರುಣ್, ಶಂಕರ್ ಪೂಜಾರಿ, ಗುರುರಾಜ, ನಾಗರಾಜ್, ಮರಿದೇವ, ಶಿವರಾಮ ಜಂಬಗಾರು. ಸಂಚಾಲಕರು: ಸಂತೋಷ್, ಸುಂದರ, ಬೀರಪ್ಪ, ಮಣಿ. ಕಾರ್ಮಿಕರ ಹಿತರಕ್ಷಣೆಗೆ ಸಂಘ ಬದ್ಧ: ಆರ್. ಶ್ರೀನಿವಾಸ್ ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಆರ್. ಶ್ರೀನಿವಾಸ್ ಮೇಸ್ತ್ರಿ, ತಾಲ್ಲೂಕಿನ ಕಾರ್ಮಿಕರ ಶಕ್ತಿಯ ಬಗ್ಗೆ ಮಾಹಿತಿ ನೀಡಿದರು: “ಸಾಗರ ತಾಲ್ಲೂಕಿನಲ್ಲಿ ಸುಮಾರು 14,500 ಕಟ್ಟಡ…
ಶಿವಮೊಗ್ಗ: ದೇಶದ ರಾಜಕೀಯ ಇತಿಹಾಸದಲ್ಲಿ ಮಹಿಳೆಯರಿಗೆ ಶಕ್ತಿ ತುಂಬುವ ‘ನಾರಿಶಕ್ತಿ ವಂದನಾ ವಿಧೇಯಕ’ದ ಸುತ್ತಲ ರಾಜಕೀಯ ಇದೀಗ ಬೀದಿಗಿಳಿದಿದೆ. ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸದನದಲ್ಲಿ ಅಡ್ಡಿಪಡಿಸಿದ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ನಿಲುವನ್ನು ವಿರೋಧಿಸಿ ಸಾಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವಿನೂತನ ಹಾಗೂ ಆಕ್ರಮಣಕಾರಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದಿದೆ. ವಿನೂತನ ಪ್ರತಿಭಟನೆ: ಅಂಬೇಡ್ಕರ್ ಪುತ್ಥಳಿ ಮುಂದೆ ಮೊಳಗಿದ ನಾದ ನಗರಸಭೆ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತೆಯರು, ಕೈಯಲ್ಲಿ ತಟ್ಟೆ ಮತ್ತು ಲೋಟಗಳನ್ನು ಬಡಿಯುವ ಮೂಲಕ ಕಾಂಗ್ರೆಸ್ ಸರ್ಕಾರದ ಧೋರಣೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ನಾರಿಶಕ್ತಿಯ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂಬ ಆಕ್ರೋಶ ಪ್ರತಿಭಟನೆಯಲ್ಲಿ ಎದ್ದು ಕಾಣುತ್ತಿತ್ತು. ಕಾಂಗ್ರೆಸ್ನದ್ದು ಮಹಿಳಾ ವಿರೋಧಿ ಧೋರಣೆ: ಹರತಾಳು ಹಾಲಪ್ಪ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. “ಕಳೆದ 30 ವರ್ಷಗಳಿಂದ…
ಶಿವಮೊಗ್ಗ: ಜಿಲ್ಲೆಯ ಸಾಗರದ ಇಕ್ಕೇರಿ ವೃತ್ತದ ವಿಜ್ಞಾನ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರದಂದು ಅತ್ಯಂತ ಕುತೂಹಲಕಾರಿಯಾದ ‘ನೆರಳು ರಹಿತ ದಿನ’ (Zero Shadow Day) ವನ್ನು ಆಚರಿಸಲಾಯಿತು. ಮಧ್ಯಾಹ್ನ ಸೂರ್ಯ ಸರಿಯಾಗಿ ನಡುನೆತ್ತಿಗೆ ಬಂದಾಗ ಸಂಭವಿಸುವ ಈ ಅಪರೂಪದ ವಿದ್ಯಮಾನವನ್ನು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಆಸಕ್ತಿಯಿಂದ ವೀಕ್ಷಿಸಿದರು. ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಮಧ್ಯಾಹ್ನ 12:28ಕ್ಕೆ ಸೂರ್ಯನು ಆಕಾಶದ ಉತ್ತುಂಗಕ್ಕೇರಿದಾಗ ಯಾವುದೇ ವಸ್ತುವಿನ ನೆರಳು ಅದರ ಕೆಳಭಾಗದಲ್ಲೇ ಬೀಳುವ ಮೂಲಕ ‘ನೆರಳು ಮಾಯವಾದ’ ಅನುಭವ ನೀಡಿತು. ಕಾಲೇಜಿನ ಪ್ರಾಚಾರ್ಯರಾದ ಡಾ. ರೋಹಿತ್ ಅವರು ಈ ಕುರಿತು ಪ್ರಾಯೋಗಿಕ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಡುವ ಮೂಲಕ ವಿದ್ಯಾರ್ಥಿಗಳಿಗೆ ವಿಷಯ ಮನವರಿಕೆ ಮಾಡಿಕೊಟ್ಟರು. ಖಗೋಳ ವಿಜ್ಞಾನದ ಅರಿವು ಅಗತ್ಯ: ಮಂಜುನಾಥ ಜೇಡಿಕುಣಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಖಗೋಳ ತಜ್ಞ ಮಂಜುನಾಥ ಜೇಡಿಕುಣಿ ಮಾತನಾಡಿ, “ಖಗೋಳದ ಇಂತಹ ಅದ್ಭುತ ಕೌತುಕಗಳನ್ನು ಮಕ್ಕಳಿಗೆ ಪರಿಚಯಿಸುವುದು ಇಂದಿನ ಅಗತ್ಯವಾಗಿದೆ. ಗ್ರಹಣಗಳು ಏಕೆ ಸಂಭವಿಸುತ್ತವೆ, ನಭೋಮಂಡಲದ ನಕ್ಷತ್ರಗಳ ಗತಿ ಏನು ಎನ್ನುವುದರ ಬಗ್ಗೆ ಮಕ್ಕಳಿಗೆ ಅರಿವಿರಬೇಕು,”…
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ‘ಡಿಜಿಟಲ್ ಅರೆಸ್ಟ್’ (Digital Arrest) ವಂಚನೆಗಳನ್ನು ತಡೆಗಟ್ಟಲು ಕೇಂದ್ರ ಗೃಹ ಸಚಿವಾಲಯವು (MHA) ಕಠಿಣ ಕ್ರಮ ಕೈಗೊಂಡಿದೆ. ಈ ಕುರಿತು ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿರುವ ಸಚಿವಾಲಯ, ವಂಚನೆಗೆ ಸಂಬಂಧಿಸಿದ ಸುಮಾರು 9,400 ವಾಟ್ಸಾಪ್ ಖಾತೆಗಳನ್ನು ಈವರೆಗೆ ನಿಷೇಧಿಸಲಾಗಿದೆ ಎಂದು ತಿಳಿಸಿದೆ. ಡಿಜಿಟಲ್ ಅರೆಸ್ಟ್ ವಂಚನೆ ಎಂದರೇನು? ಇತ್ತೀಚಿನ ದಿನಗಳಲ್ಲಿ ವಂಚಕರು ಸಾರ್ವಜನಿಕರಿಗೆ ಕರೆ ಮಾಡಿ ತಾವು ಪೊಲೀಸ್ ಅಥವಾ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಳ್ಳುತ್ತಾರೆ. ನಿಮ್ಮ ಹೆಸರಿನಲ್ಲಿ ಮಾದಕ ವಸ್ತುಗಳ ಪಾರ್ಸೆಲ್ ಬಂದಿದೆ ಅಥವಾ ನೀವು ಯಾವುದೋ ಅಪರಾಧದಲ್ಲಿ ಭಾಗಿಯಾಗಿದ್ದೀರಿ ಎಂದು ಹೆದರಿಸಿ, ಸ್ಕೈಪ್ ಅಥವಾ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ಮನೆಯಲ್ಲೇ ಬಂಧಿಯಾಗಿರುವಂತೆ (ಡಿಜಿಟಲ್ ಅರೆಸ್ಟ್) ಬೆದರಿಕೆ ಹಾಕುತ್ತಾರೆ. ನಂತರ ಪ್ರಕರಣದಿಂದ ಕೈಬಿಡಲು ಲಕ್ಷಾಂತರ ರೂಪಾಯಿ ಹಣ ಪೀಕುತ್ತಾರೆ. ಸುಪ್ರೀಂ ಕೋರ್ಟ್ಗೆ ಕೇಂದ್ರದ ವಿವರಣೆ ಈ ವಂಚನೆಗಳ ಕುರಿತಾದ ಅರ್ಜಿಯ ವಿಚಾರಣೆ ವೇಳೆ ಕೇಂದ್ರ ಸರ್ಕಾರವು ಈ ಕೆಳಗಿನ ಪ್ರಮುಖ ಮಾಹಿತಿಗಳನ್ನ ನೀಡಿದೆ: ವ್ಯಾಪಕ ತಪಾಸಣೆ:…
ಬೆಂಗಳೂರು: ನಗರದ ದೊಮ್ಮಲೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಉಮರ್ ಅವರ ಪುಸ್ತಕ ಕುರಿತಾದ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಹೈಡ್ರಾಮಾ ನಡೆದಿದೆ. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ದೊಮ್ಮಲೂರಿನಲ್ಲಿ ಹೈಡ್ರಾಮಾ ದೊಮ್ಮಲೂರಿನಲ್ಲಿರುವ ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ (BIC) ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಕಾರ್ಯಕ್ರಮದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಸ್ಥಳದಿಂದ ತೆರವುಗೊಳಿಸಿದ್ದಾರೆ. ಗಣ್ಯರ ಭಾಗಿ, ಪೊಲೀಸ್ ಬಂದೋಬಸ್ತ್ ಸಂಜೆ 6 ಗಂಟೆಗೆ ನಿಗದಿಯಾಗಿರುವ ಈ ಕಾರ್ಯಕ್ರಮದಲ್ಲಿ ಖ್ಯಾತ ನಟ ಪ್ರಕಾಶ್ ರಾಜ್ ಹಾಗೂ ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಯಾವುದೇ ಅಡ್ಡಿಯಾಗದಂತೆ ಬಿಐಸಿ ಕೇಂದ್ರದ ಸುತ್ತಮುತ್ತ ಬಿಗುವಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಸದ್ಯ ಬಿಐಸಿ ಆವರಣದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಮಹಾರಾಷ್ಟ್ರ: “ಸಾರ್ವಜನಿಕ ಹಿತದೃಷ್ಟಿಯಿಂದ ಅಥವಾ ಕಳಪೆ ಕಾಮಗಾರಿಯ ವಿರುದ್ಧ ಧ್ವನಿ ಎತ್ತುವ ಉದ್ದೇಶವಿದ್ದರೂ ಸಹ, ಒಬ್ಬ ಸಾರ್ವಜನಿಕ ಸೇವಕನನ್ನು ಸಾರ್ವಜನಿಕವಾಗಿ ಅವಮಾನಿಸುವ ಹಕ್ಕು ಯಾರಿಗೂ ಇಲ್ಲ” – ಹೀಗೆಂದು ಕಟುವಾಗಿ ಹೇಳಿರುವ ಸಿಂಧುದುರ್ಗ ನ್ಯಾಯಾಲಯವು, ಮಹಾರಾಷ್ಟ್ರದ ಸಚಿವ ನಿತೇಶ್ ರಾಣೆ ಅವರಿಗೆ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯದ ಮಹತ್ವದ ವೀಕ್ಷಣೆ: ಪ್ರಕರಣದ ತೀರ್ಪು ನೀಡುವಾಗ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ವಿ.ಎಸ್. ದೇಶ್ಮುಖ್ ಅವರು ವ್ಯವಸ್ಥೆಯ ಶಿಸ್ತಿನ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ್ದಾರೆ: “ಅಧಿಕಾರದಲ್ಲಿರುವವರು ಕಾನೂನನ್ನು ಕೈಗೆತ್ತಿಕೊಳ್ಳುವುದು ಅಧಿಕಾರದ ದುರುಪಯೋಗ. ಸಾರ್ವಜನಿಕ ಸೇವಕರನ್ನು ಸಾರ್ವಜನಿಕವಾಗಿ ನಿಂದಿಸುವ ಅಥವಾ ಅವಮಾನಿಸುವ ಇಂತಹ ಪ್ರವೃತ್ತಿಗಳನ್ನು ಕಠಿಣವಾಗಿ ಹತ್ತಿಕ್ಕುವ ಅಗತ್ಯವಿದೆ,” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. ಶಿಕ್ಷೆ ಮತ್ತು ದಂಡದ ವಿವರ: ಶಿಕ್ಷೆ: ಐಪಿಸಿ ಸೆಕ್ಷನ್ 504 (ಶಾಂತಿ ಭಂಗ ಪ್ರಚೋದಿಸುವ ಉದ್ದೇಶದಿಂದ ಅವಮಾನ) ಅಡಿಯಲ್ಲಿ ನಿತೇಶ್ ರಾಣೆ ದೋಷಿ ಎಂದು ಸಾಬೀತಾಗಿದ್ದು, ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ದಂಡ: 1 ಲಕ್ಷ ರೂಪಾಯಿ ದಂಡ…
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ಆದಾಯ ಸೋರಿಕೆಯನ್ನು ತಡೆಗಟ್ಟಲು ತನಿಖಾ ಕಾರ್ಯವನ್ನು ಚುರುಕುಗೊಳಿಸಿದ್ದು, ಕೇವಲ ಮಾರ್ಚ್ ತಿಂಗಳಲ್ಲೇ ಸಾವಿರಾರು ಟಿಕೆಟ್ ರಹಿತ ಪ್ರಯಾಣಿಕರಿಂದ ಲಕ್ಷಾಂತರ ರೂಪಾಯಿ ದಂಡ ವಸೂಲಿ ಮಾಡಿದೆ. 42 ಸಾವಿರಕ್ಕೂ ಹೆಚ್ಚು ವಾಹನಗಳ ತಪಾಸಣೆ ಮಾರ್ಚ್-2026ರ ಮಾಹೆಯಲ್ಲಿ ನಿಗಮದ ವಿಶೇಷ ತನಿಖಾ ತಂಡಗಳು ರಾಜ್ಯಾದ್ಯಂತ ಸಂಚರಿಸುವ 42,395 ವಾಹನಗಳನ್ನು ತಪಾಸಣೆಗೊಳಪಡಿಸಿವೆ. ಈ ವೇಳೆ ಒಟ್ಟು 4,260 ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, ನಿಯಮ ಮೀರಿ ಸಂಚರಿಸುತ್ತಿದ್ದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. 8 ಲಕ್ಷಕ್ಕೂ ಅಧಿಕ ದಂಡ ವಸೂಲಿ ತಪಾಸಣೆಯ ವೇಳೆ ಸಿಕ್ಕಿಬಿದ್ದ 4,265 ಟಿಕೆಟ್ ರಹಿತ ಪ್ರಯಾಣಿಕರಿಂದ ನಿಗಮವು ಒಟ್ಟು 8,16,375/- ರೂ. ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದೆ. ಇದರೊಂದಿಗೆ, ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ 1,21,633/- ರೂ. ಗಳನ್ನು ತನಿಖಾಧಿಕಾರಿಗಳು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೇವಲ ಪ್ರಯಾಣಿಕರಷ್ಟೇ ಅಲ್ಲದೆ, ಕರ್ತವ್ಯ ಲೋಪ ಎಸಗಿದ ಮತ್ತು ಆದಾಯ ಸೋರಿಕೆಗೆ…
ಶಿವಮೊಗ್ಗ: ರಾಜ್ಯದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿರುವ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭವಿಷ್ಯ ನುಡಿದಿದ್ದಾರೆ. ಇಂದು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಸಂಘಟನೆ ಮತ್ತು ಸರ್ಕಾರದ ಸಾಧನೆಗಳ ಮೇಲೆ ನಮಗೆ ನಂಬಿಕೆಯಿದೆ ಎಂದರು. ಶಾಸಕರ ಪ್ರಮುಖ ಹೇಳಿಕೆಗಳು ಇಲ್ಲಿವೆ: ಶಿಸ್ತು ಕ್ರಮ ಸಹಜ ಪ್ರಕ್ರಿಯೆ ಉಪಚುನಾವಣೆಯ ಪ್ರಚಾರ ಕಾರ್ಯಗಳಲ್ಲಿ ಪಾಲ್ಗೊಳ್ಳದ ನಾಯಕರಿಗೆ ಪಕ್ಷ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಪಕ್ಷದ ಚಟುವಟಿಕೆಗಳಿಂದ ದೂರವಿರುವವರಿಗೆ ನೋಟಿಸ್ ಕೊಡುವುದು ಅಥವಾ ಕ್ರಮ ಕೈಗೊಳ್ಳುವುದು ಸಹಜ ಪ್ರಕ್ರಿಯೆ. ಪಕ್ಷದ ಶಿಸ್ತು ಕಾಪಾಡುವುದು ಮುಖ್ಯ,” ಎಂದು ತಿಳಿಸಿದರು. ಅಲ್ಪಸಂಖ್ಯಾತರಿಗೆ ಆದ್ಯತೆ ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತ ಸಮುದಾಯವನ್ನು ಕೇವಲ ಮತಬ್ಯಾಂಕ್ ಆಗಿ ಬಳಸುತ್ತಿಲ್ಲ, ಬದಲಾಗಿ ಅಧಿಕಾರದಲ್ಲೂ ಪಾಲು ನೀಡಿದೆ ಎಂದು ಬೇಳೂರು ಸಮರ್ಥಿಸಿಕೊಂಡರು. ಯು.ಟಿ ಖಾದರ್ ಅವರನ್ನು ವಿಧಾನಸಭೆಯ ಸ್ಪೀಕರ್ ಮಾಡಲಾಗಿದೆ. ಜಮೀರ್ ಅಹ್ಮದ್ ಖಾನ್ ಮತ್ತು ರಹೀಂ ಖಾನ್…
ಮಹಾರಾಷ್ಟ್ರ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬದ ಹಿನ್ನೆಲೆಯಲ್ಲಿ ಸರ್ಕಾರಿ ಇಂಜಿನಿಯರ್ ಒಬ್ಬರನ್ನು ಕೆಸರು ನೀರಿನಲ್ಲಿ ನಡೆಯುವಂತೆ ಮಾಡಿ, ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಕ್ಯಾಬಿನೆಟ್ ಸಚಿವ ಮತ್ತು ಬಿಜೆಪಿ ನಾಯಕ ನಿತೇಶ್ ನಾರಾಯಣ್ ರಾಣೆ ಅವರಿಗೆ ಸಿಂಧುದುರ್ಗ ನ್ಯಾಯಾಲಯವು ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣದ ಹಿನ್ನೆಲೆ ಏನು? ಈ ಘಟನೆಯು ಜುಲೈ 4, 2019 ರಂದು ನಡೆದಿತ್ತು. ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿ (NH-66) ವಿಸ್ತರಣೆ ಕಾಮಗಾರಿ ವಿಳಂಬ ಮತ್ತು ರಸ್ತೆಗಳ ದುಸ್ಥಿತಿಯಿಂದ ಸಾರ್ವಜನಿಕರು ಆಕ್ರೋಶಗೊಂಡಿದ್ದರು. ಈ ವೇಳೆ ಕಂಕವಲಿ ಭಾಗದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಎಂಜಿನಿಯರ್ ಪ್ರಕಾಶ್ ಶೇಡೇಕರ್ ಅವರನ್ನು ಸ್ಥಳಕ್ಕೆ ಕರೆಸಿದ್ದ ನಿತೇಶ್ ರಾಣೆ ಮತ್ತು ಅವರ ಬೆಂಬಲಿಗರು, ಕಾಮಗಾರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಆ ಸಂದರ್ಭದಲ್ಲಿ ಇಂಜಿನಿಯರ್ ಮೇಲೆ ಕೆಸರು ನೀರು ಸುರಿದು, ಅವರನ್ನು ಬಲವಂತವಾಗಿ ಕೆಸರು ಗದ್ದೆಯಂತಾಗಿದ್ದ ರಸ್ತೆಯಲ್ಲಿ ನಡೆಸುವ ಮೂಲಕ ಸಾರ್ವಜನಿಕವಾಗಿ ಅವಮಾನಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ನ್ಯಾಯಾಲಯದ ತೀರ್ಪು ಮತ್ತು ವೀಕ್ಷಣೆ…
ಶಿವಮೊಗ್ಗ : ಬಿರುಗಾಳಿ ಮತ್ತು ಮಳೆಯಿಂದ ಹಾನಿಗೊಳಗಾದ ಅಡಿಕೆ, ತೆಂಗು ತೋಟ ಸೇರಿದಂತೆ ಬೆಳೆ ಹಾನಿಯಾದ ರೈತರಿಗೆ ಮತ್ತು ಮನೆ ಕಳೆದುಕೊಂಡವರಿಗೆ ತಕ್ಷಣವೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನಡ ನೀಡಿದರು. ಮಂಗಳವಾರ ಬೆಳಿಗ್ಗೆ ಗಾಳಿ ಮಳೆ ಹಾನಿಗೊಳಗಾದ ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು. ಅರಹತೊಳಲು ಗ್ರಾಮದ ತೋಟಕ್ಕೆ ಭೇಟಿ ನೀಡಿ ಬಿರುಗಾಳಿ ಮತ್ತು ಮಳೆಯಿಂದಾಗಿ ಧರೆಗುರುಳಿದ ಮರಗಳನ್ನು ವೀಕ್ಷಿಸಿ, ಸಂತ್ರಸ್ತ ರೈತರೊಂದಿ ಮಾತನಾಡಿದರು. ಬಿರುಗಾಳಿಗೆ ಧರೆಗುರುಳಿದ ಅಡಿಕೆ ಮರಗಳು, ಹಾನಿಗೊಳಗಾದ ಮನೆಗಳು ವೀಕ್ಷಿಸಿದರು. ಸಂತ್ರಸ್ತ ರೈತರು ಮತ್ತು ಸಾರ್ವಜನಿಕರೊಂದಿಗೆ ಮಾತನಾಡಿ ಅಹವಾಲು ಸ್ವೀಕರಿಸಿದರು. ನಂತರ ಅರಹತೊಳಲು ವಡ್ಡರಹಟ್ಟಿಗೆ ತೆರಳಿ ಬಿರುಗಾಳಿಗೆ ಹಾನಿಗೊಳಗಾದ ಮನೆಗಳು, ಕೊಟ್ಟಿಗೆಗಳನ್ನು ವೀಕ್ಷಿಸ, ಮನೆಯವರೊಂದಿಗೆ ಮಾತನಾಡಿ, ಅಧಿಕಾರಿಗಳ ಬಳಿ ನಷ್ಟದ ಕುರಿತು ಮಾಹಿತಿ ಪಡೆದುಕೊಂಡು, ತ್ವರಿತ ಪರಿಹಾರಕ್ಕೆ ಕ್ರಮ ವಹಿಸಬೇಕೆಂದು ಸೂಚನೆ ನೀಡುದರು. ಮಲ್ಲಿಗೇನಹಳ್ಳಿ…














