Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ವಕೀಲರಿಗೆ ಭದ್ರತೆ ನೀಡುವ ಸಂಬಂಧ ಮಹತ್ವದ ಕ್ರಮ ವಹಿಸಿದೆ. ಇದಕ್ಕಾಗಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023 ಜಾರಿಗೊಳಿಸಿದೆ. ಒಂದು ವೇಳೆ ವಕೀಲರ ಮೇಲೆ ಹಲ್ಲೆ ಮಾಡಿದ್ರೆ ಈ ನಿಯಮದಡಿ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ಹೌದು. ರಾಜ್ಯದಲ್ಲಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ – 2023 ಜಾರಿ ಮಾಡಲಾಗಿದೆ. ಈ ನಿಯಮವನ್ನು ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಜಾರಿಗೊಳಿಸಿದೆ. ಈ ನಿಯಮದಂತೆ ಕರ್ತವ್ಯದ ವೇಳೆ ವೃತ್ತಿಪರ ವಕೀಲರ ಮೇಲೆ ಹಲ್ಲೆ ನಡೆಸುವುದು, ಅವರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು ಅಥವಾ ಕಿರುಕುಳ ನೀಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಒಂದು ವೇಳೆ ನೀವು ಈ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ 6 ತಿಂಗಳಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹1 ಲಕ್ಷದವರೆಗೆ ದಂಡ ವಿಧಿಸಬಹುದಾಗಿದೆ. https://twitter.com/KarnatakaVarthe/status/1801160959060312434 https://kannadanewsnow.com/kannada/good-news-for-untrained-state-government-primary-school-teachers-state-govt-orders-pay-scale/
ಬೆಂಗಳೂರು: ಇಂದಿನಿಂದ 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾಧ್ಯಂತ 2.23 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ದಿನಾಂಕ 14-06-2024ರಿಂದ 22-06-2024ರವರೆಗೆ 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಅನ್ನು ನಡೆಸಲಾಗುವುದು ಅಂತ ತಿಳಿಸಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 2,23,308 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 1,44,160 ವಿದ್ಯಾರ್ಥಿಗಳು, 79,148 ವಿದ್ಯಾರ್ಥಿನಿಯರು ಸೇರಿದ್ದಾರೆ ಎಂದಿದೆ. ಒಟ್ಟು ನೋಂದಣಿಯಲ್ಲಿ 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ರಾಜ್ಯದ 724 ಪರೀಕ್ಷಾ ಕೇಂದ್ರಗಳಲ್ಲಿ ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಸಲಾಗುತ್ತಿದೆ ಎಂಬುದಾಗಿ ಮಾಹಿತಿ ನೀಡಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸಲಿದ್ದಾರೆ. ಜಿಲ್ಲಾ, ತಾಲೂಕು…
ನವದೆಹಲಿ: ಹೊಸದಾಗಿ ನೇಮಕಗೊಂಡ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಗುರುವಾರ ವಿಮಾನ ಟಿಕೆಟ್ ಬೆಲೆ ಏರಿಕೆಯ ಪ್ರವೃತ್ತಿಯನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೀಘ್ರವೇ ವಿಮಾನ ಟಿಕೆಟ್ ದರ ಇಳಿಕೆಯ ಸುಳಿವನ್ನು ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಯಾಣಿಕರಾಗಿ ತಮ್ಮ ವೈಯಕ್ತಿಕ ಅನುಭವವನ್ನು ಹಂಚಿಕೊಂಡರು ಮತ್ತು ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರ ‘ಹವಾಯಿ ಚಪ್ಪಲ್ ಸೆ ಹವಾಯಿ ಜಹಾಜ್ ತಕ್’ ಹೇಳಿಕೆಯಲ್ಲಿ ವಿಶ್ವಾಸವನ್ನು ಪುನರುಚ್ಚರಿಸಿದ ನಾಯ್ಡು, ಸಾಮಾನ್ಯ ಜನರಿಗೆ ವಾಯುಮಾರ್ಗಗಳನ್ನು ಪ್ರವೇಶಿಸುವಂತೆ ಮಾಡುವುದು ತಮ್ಮ ಗಮನವಾಗಿದೆ ಎಂದು ಹೇಳಿದರು. ಜೂನ್ 13 ರಂದು ನಾಗರಿಕ ವಿಮಾನಯಾನ ಸಚಿವಾಲಯದ ಉಸ್ತುವಾರಿ ವಹಿಸಿಕೊಂಡ ನಾಯ್ಡು, ಸಾಮಾನ್ಯ ಜನರಿಗೆ ವಿಮಾನ ಪ್ರಯಾಣವನ್ನು ಹೆಚ್ಚು ಪ್ರವೇಶಿಸಲು ಮತ್ತು ಆರಾಮದಾಯಕವಾಗಿಸಲು ತಮ್ಮ ಪ್ರಾಥಮಿಕ ಗಮನವಿದೆ ಎಂದು ಹೇಳಿದ್ದಾರೆ. ವಿಮಾನಯಾನ ದರಗಳ ಹೆಚ್ಚಳವು ಭಾರತದಾದ್ಯಂತದ ಪ್ರಯಾಣಿಕರಿಗೆ ಹೆಚ್ಚುತ್ತಿರುವ ಕಳವಳವಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ, ಟಿಕೆಟ್ ಬೆಲೆಗಳು ತೀವ್ರ…
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಬರಲಿದೆ ನೂತನ ನಮ್ಮ ಕ್ಲಿನಿಕ್ – 254 ಹೊಸ ನಮ್ಮ ಕ್ಲಿನಿಕ್ ಗಳನ್ನ ಆರಂಭಿಸಲು ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಹೀಗಾಗಿ ಸ್ಥಳ ಗುರುತಿಸಿದ ನಂತ್ರ, ರಾಜ್ಯಾಧ್ಯಂತ ಹೊಸದಾಗಿ ಶೀಘ್ರದಲ್ಲೇ 254 ನಮ್ಮ ಕ್ಲಿನಿಕ್ ಆರಂಭಗೊಳ್ಳಲಿದ್ದಾವೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಗಲಿದೆ. ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಇಂದು ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನೂತನ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್ ಗಳನ್ನ ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ…
ಶಿವಮೊಗ್ಗ: ಇಂದು ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರು ಆರ್ಯ ಅಡಿಕೆ ಬೆಳಗಾರರು ಮತ್ತು ವ್ಯಾಪಾರಸ್ಥರು(ಆಗ್ಮಾ)ದಿಂದ ನೂತನವಾಗಿ ಪ್ರಾರಂಭಿಸಲಾದಂತ ಅಡಿಕೆ ದಲ್ಲಾಳಿ ಹಾಗೂ ವ್ಯಾಪಾರಿ ಕೇಂದ್ರವನ್ನು ಉದ್ಘಾಟಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಎಪಿಎಂಸಿ ಆವರಣದ ನಂ.12ರಲ್ಲಿ ಆರ್ಯ ಅಡಿಕೆ ಬೆಳೆಗಾರರು ಮತ್ತು ವ್ಯಾಪಾರಸ್ಥರು(ಆಗ್ಮಾ) ಅಡಿಯ ನೂತನವಾಗಿ ಅಡಿಕೆ ದಲ್ಲಾಳಿ ಹಾಗೂ ವ್ಯಾಪಾರಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ಒಂದು ಸಂಸ್ಥೆ ಕಟ್ಟೋದು ಮುಖ್ಯವಾಗಲ್ಲ. ಅದನ್ನು ಉತ್ತಮ ರೀತಿಯಲ್ಲಿ ಬೆಳಿಸಿಕೊಂಡು ಹೋಗಬೇಕು. ಅದಕ್ಕಾಗಿ ಸಂಸ್ಥೆಯಲ್ಲಿನ ಪ್ರತಿಯೊಬ್ಬರು ಶ್ರಮಿಸಬೇಕು. ಶ್ರಮವಹಿಸಿ ದುಡಿಯಬೇಕು. ಆಗ ಆ ಸಂಘ, ಸಂಸ್ಥೆ ದೊಡ್ಡಮಟ್ಟಕ್ಕೆ ಬೆಳೆಯಲು ಸಾಧ್ಯ ಎಂಬುದಾಗಿ ಅಭಿಪ್ರಾಯ ಪಟ್ಟರು. ನನ್ನ ಕ್ಷೇತ್ರದಲ್ಲಿ ಇಂತದ್ದೊಂದು ಸಂಘ ಶುರುವಾಗಿದ್ದು, ಶುಭಾರಂಭ ಮಾಡಿದ್ದು ಸಂತಸ ತಂದಿದೆ. ಸಂಘ ಉನ್ನತ ಮಟ್ಟಕ್ಕೆ ಬೆಳೆಯಲಿ. ಅಡಿಕೆ ಬೆಳೆಯುವಂತ ರೈತರಿಗೆ ಈ ಸಂಘದ ಮೂಲಕ ಸಹಾಯವಾಗಲಿ ಎಂಬುದಾಗಿ ಆಶಿಸಿದರು. ಅಡಿಕೆ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನಲ್ಲಿ ಸರ್ಕಾರಿ ಭೂಮಿ, ಕಾಡುಗಳನ್ನು ಕಡಿದು ಕೃಷಿಗಾಗಿ ಭೂಮಿ ಒತ್ತುವರಿ ಮಾಡಲಾಗುತ್ತಿದೆ. ಇದನ್ನು ನಿಯಂತ್ರಿಸೋ ಕ್ರಮ ವಹಿಸಬೇಕು. ಸರ್ಕಾರಿ ಭೂಮಿ ಒತ್ತುವರಿಯಾದ್ರೆ ನಾನು ಸುಮ್ಮನಿರಲ್ಲ ಅಂತ ವಿಎಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆಯನ್ನು ಕಂದಾಯ ಇಲಾಖೆಯ ವಿಎಗಳೊಂದಿಗೆ ನಡೆಸಿದರು. ತಾಲೂಕಿನಲ್ಲಿ ಎಕರೆಗಟ್ಟಲೆ ಒತ್ತುವರಿಗೆ ಅವಕಾಶ ನೀಡಬಾರದು. ಒಂದು ವೇಳೆ ಹಾಗೆ ಒತ್ತುವರಿ ಮಾಡಿದ್ರೆ ಅಂತವರ ವಿರುದ್ಧ ದೂರು ದಾಖಲಿಸಿ, ಕೇಸ್ ಹಾಕುವಂತೆ ಸೂಚಿಸಿದರು. ನಾಡಕಲಸಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 48 ಎಕರೆ ಒತ್ತುವರಿ ತೆರವುಗೊಳಿಸಿ ನಾಡಕಲಸಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತ್ಯಾಗರ್ತಿ ಬಳಿ 48 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದೆ. ಈ ಭೂಮಿಯನ್ನು ಗೋಶಾಲೆಗೆ ಮೀಸಲಿರಿಸಿದಂತ ಜಮೀನಾಗಿದೆ. ಈ ಕೂಡಲೇ 48 ಎಕರೆ ಒತ್ತುವರಿ ಜಮೀನು ತೆರವುಗೊಳಿಸಬೇಕು. ತ್ಯಾಗರ್ತಿ ಸಮೀಪದಲ್ಲಿ ಗೋಶಾಲೆ ನಿರ್ಮಾಣ ಮಾಡಲು ಆದೇಶ ಮಾಡಬೇಕು ಎಂಬುದಾಗಿ ತಹಶೀಲ್ದಾರರಿಗೆ ಶಾಸಕ…
ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ದರ್ಶನ್ ದೊಡ್ಡ ನಟನಾಗಿದ್ದಾನೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆಯೇ ವಿನಹಃ ಅಪರಾಧಿ ಎಂಬುದಾಗಿ ಕೋರ್ಟ್ ತೀರ್ಪು ನೀಡಿಲ್ಲ. ಈ ಹಿನ್ನಲೆಯಲ್ಲಿ ಸದ್ಯಕ್ಕೆ ಅವರನ್ನು ಸ್ಯಾಂಡಲ್ ವುಡ್ ನಿಂದ ನಿಷೇಧ ಮಾಡುವ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಅಂತ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್ ಸ್ಪಷ್ಟ ಪಡಿಸಿದ್ದಾರೆ. ಇಂದು ವಾಣಿಜ್ಯ ಮಂಡಳಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದರ್ಶನ್ ಸ್ಯಾಂಡಲ್ ವುಡ್ ಚಿತ್ರರಂಗದ ದೊಡ್ಡ ನಟ. ಅವರ ವಿರುದ್ಧದ ಈಗ ಆರೋಪ ಮಾತ್ರವೇ ಕೇಳಿ ಬಂದಿದೆ. ತನಿಖೆ ನಡೆಯುತ್ತಿದೆ. ಅದರಲ್ಲಿ ಅಪರಾಧಿ ಎಂಬುದಾಗಿ ಸಾಭೀತಾದ್ರೇ, ಚಿತ್ರರಂಗದ ಅಂಗ ಸಂಸ್ಥೆಗಳು ಎಲ್ಲವೂ ಸೇರಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು. ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ವಾಣಿಜ್ಯ ಮಂಡಳಿ ಖಂಡಿಸುತ್ತದೆ. ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಅಂತಲೂ ಆಗ್ರಹಿಸುತ್ತದೆ. ನಾಳೆ ರೇಣುಕಾಸ್ವಾಮಿ ಮನೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಎಲ್ಲರೂ ತೆರಳಿ, ಅವರ ಕುಟುಂಬಸ್ಥರಿಗೆ…
ಮಹಾರಾಷ್ಟ್ರ: ನಾಗ್ಪುರದ ಧಮ್ನಾದಲ್ಲಿರುವ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಐವರು ಗಾಯಗೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರು ಎಎನ್ಐಗೆ ತಿಳಿಸಿದ್ದಾರೆ. “ಈ ಘಟನೆಯಲ್ಲಿ 4 ಮಹಿಳೆಯರು ಸೇರಿದಂತೆ ಸುಮಾರು 6 ಜನರು ಸಾವನ್ನಪ್ಪಿದ್ದಾರೆ. ನಮ್ಮ ತನಿಖೆ ನಡೆಯುತ್ತಿದೆ. ನಮ್ಮ ತಂಡ, ಅಪರಾಧ ವಿಭಾಗ ಮತ್ತು ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ, ಕ್ರಮ ತೆಗೆದುಕೊಳ್ಳಲಾಗುತ್ತಿದೆ” ಎಂದು ಪೊಲೀಸ್ ಆಯುಕ್ತ ರವೀಂದರ್ ಸಿಂಘಾಲ್ ಎಎನ್ಐಗೆ ತಿಳಿಸಿದ್ದಾರೆ. ವರದಿಯ ಪ್ರಕಾರ, ನಗರದಿಂದ 25 ಕಿ.ಮೀ ದೂರದಲ್ಲಿರುವ ಹಿಂಗ್ನಾ ಪೊಲೀಸ್ ಠಾಣೆ ವ್ಯಾಪ್ತಿಯ ಧಮ್ನಾ ಗ್ರಾಮದಲ್ಲಿರುವ ಚಾಮುಂಡಿ ಎಕ್ಸ್ಪ್ಲೋಸಿವ್ ಪ್ರೈವೇಟ್ ಲಿಮಿಟೆಡ್ನಲ್ಲಿ ಸ್ಫೋಟ ಸಂಭವಿಸಿದೆ. ಕಾರ್ಮಿಕರು ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದಾಗ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾರ್ಮಿಕರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ತರಲಾಗಿದೆ. “ನಾಗ್ಪುರದಲ್ಲಿ ಆರು ಜನರು ಸಾವನ್ನಪ್ಪಿರುವುದು ದುರದೃಷ್ಟಕರ. ನಾನು ತುಂಬಾ ದುಃಖಿತನಾಗಿದ್ದೇನೆ ಮತ್ತು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ”…
ಕೇರಳ: 10 ವರ್ಷದ ಬಾಲಕಿಗೆ ಶಬರಿಮಲೆ ದೇಗುಲ ಪ್ರವೇಶಿಸಲು ಅನುಮತಿ ನೀಡಲು ಕೇರಳ ಹೈಕೋರ್ಟ್ ಇತ್ತೀಚೆಗೆ ನಿರಾಕರಿಸಿತ್ತು. 10 ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ದೇವಾಲಯಕ್ಕೆ ಪ್ರವೇಶವನ್ನು ಸಾಂಪ್ರದಾಯಿಕವಾಗಿ ನಿಷೇಧಿಸಲಾಗಿದೆ. ಇದು ಸಾಮಾನ್ಯವಾಗಿ ಮುಟ್ಟಿನ ವಯಸ್ಸಿನ ಮಹಿಳೆಯರು ಮತ್ತು ಹುಡುಗಿಯರ ಪ್ರವೇಶವನ್ನು ಮೊಟಕುಗೊಳಿಸುವ ಸಾಧನವೆಂದು ತಿಳಿದುಬಂದಿದೆ. 2018 ರಲ್ಲಿ ಸುಪ್ರೀಂ ಕೋರ್ಟ್ ಎಲ್ಲಾ ವಯಸ್ಸಿನ ಮಹಿಳೆಯರಿಗೆ ದೇವಾಲಯಕ್ಕೆ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ತೀರ್ಪು ನೀಡಿತ್ತು. ಆದಾಗ್ಯೂ, ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯು ಉನ್ನತ ನ್ಯಾಯಾಲಯದ ವಿಸ್ತೃತ ಪೀಠದ ಮುಂದೆ ಬಾಕಿ ಇದೆ. ಆದ್ದರಿಂದ, ಹಿಂದಿನ ವಯಸ್ಸಿನ ಮಿತಿ ಪ್ರಸ್ತುತ ಅನ್ವಯಿಸುತ್ತದೆ. ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಹರಿಶಂಕರ್ ವಿ ಮೆನನ್ ಅವರ ವಿಭಾಗೀಯ ಪೀಠವು ಈ ವಾರ 10 ವರ್ಷದ ಬಾಲಕಿಯ ದೇವಾಲಯವನ್ನು ಪ್ರವೇಶಿಸಲು ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದೆ. “ಭಾರತದ ಸಂವಿಧಾನದ 25 ಮತ್ತು 26 ನೇ ವಿಧಿಗಳ ಅಡಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯ ಮತ್ತು ಭಾಗ 3 ರಲ್ಲಿನ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ಭೂಮ್ಯತೀತ ಜೀವನದ ಸಾಧ್ಯತೆ ಯಾವಾಗಲೂ ಮಾನವರನ್ನು ಆಕರ್ಷಿಸಿದೆ ಮತ್ತು ನಾವು ಈಗ ಕೆಲವು ಸಮಯದಿಂದ ಅನ್ಯಗ್ರಹ ಜೀವಿಗಳನ್ನು ಹುಡುಕುತ್ತಿದ್ದೇವೆ. ಆದಾಗ್ಯೂ, ದಶಕಗಳ ಸಂಶೋಧನೆಯ ಹೊರತಾಗಿಯೂ, ನಾವು ಬ್ರಹ್ಮಾಂಡದಲ್ಲಿ ಏಕಾಂಗಿಯಾಗಿದ್ದೇವೆಯೇ ಎಂಬ ಪ್ರಶ್ನೆಗೆ ನಮ್ಮಲ್ಲಿ ಇನ್ನೂ ದೃಢವಾದ ಉತ್ತರವಿಲ್ಲ. ಈಗ, ಹಾರ್ವರ್ಡ್ ವಿಶ್ವವಿದ್ಯಾಲಯದ ಅಧ್ಯಯನವು ಅನ್ಯಗ್ರಹ ಜೀವಿಗಳು ಭೂಮಿಯ ಮೇಲೆ ಮಾನವರ ನಡುವೆ ರಹಸ್ಯವಾಗಿ ವಾಸಿಸಬಹುದು ಎಂದು ಹೇಳಿಕೊಂಡಿದೆ. ಹಾರ್ವರ್ಡ್ ವಿಶ್ವವಿದ್ಯಾಲಯದ ಮಾನವ ಅಭಿವೃದ್ಧಿ ಕಾರ್ಯಕ್ರಮದ ಸಂಶೋಧಕರ ಹೊಸ ಪ್ರಬಂಧವು ಯುಎಫ್ಒಗಳು ಮತ್ತು ಭೂಮ್ಯತೀತ ಜೀವಿಗಳು ಎಂದು ಸಾಮಾನ್ಯವಾಗಿ ಕರೆಯಲ್ಪಡುವ “ಗುರುತಿಸಲಾಗದ ಅಸಂಗತ ವಿದ್ಯಮಾನಗಳು” (ಯುಎಪಿ) ಭೂಗತವಾಗಿ, ಚಂದ್ರನ ಮೇಲೆ ಅಥವಾ ಮಾನವರ ನಡುವೆ ನಡೆಯಬಹುದು ಎಂದು ಸೂಚಿಸುತ್ತದೆ. ಯುಎಫ್ಒಗಳು ಅಥವಾ ಗುರುತಿಸಲಾಗದ ವೈಮಾನಿಕ ವಿದ್ಯಮಾನಗಳು (ಯುಎಪಿ) ಭೂಮಿ ಆಧಾರಿತ ಅನ್ಯಗ್ರಹ ಸ್ನೇಹಿತರನ್ನು ಭೇಟಿ ಮಾಡುವ ಬಾಹ್ಯಾಕಾಶ ನೌಕೆಗಳಾಗಿರಬಹುದು ಎಂಬ ಕಲ್ಪನೆಯನ್ನು ಸಂಶೋಧನೆಯು ಅನ್ವೇಷಿಸುತ್ತದೆ. “ಲೇಖಕರು ಮತ್ತೊಂದು ಭೂಮ್ಯತೀತ ವಿವರಣೆಯನ್ನು ತಾತ್ಕಾಲಿಕವಾಗಿ ಬೆಂಬಲಿಸುವ ಪುರಾವೆಗಳು ಮತ್ತು ಸಿದ್ಧಾಂತದ ಆಳದ…