Subscribe to Updates
Get the latest creative news from FooBar about art, design and business.
Author: kannadanewsnow09
ತಿರುಮಲ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವುದು ನಿಜ. ಇದು ಲ್ಯಾಬ್ ವರದಿಯಿಂದ ತಿಳಿದ ನಂತ್ರ ನಮಗೂ ಶಾಕ್ ಆಗಿದೆ ಎಂಬುದಾಗಿ ಟಿಟಿಡಿ ಸ್ಪಷ್ಟ ಪಡಿಸಿದೆ. ತಿರುಪತಿ ತಿಮ್ಮಪ್ಪನ ಲಡ್ಡು ವಿವಾದದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ತಿರುಪತಿ ದೇವಸ್ಥಾನ ಟ್ರಸ್ಟ್ ( Tirupati Temple Trust ), ಈ ಪ್ರಕರಣದಲ್ಲಿ ಶೀಘ್ರದಲ್ಲೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಪ್ರಸಾದದ ಮಾದರಿಗಳು ಕಲಬೆರಕೆಯಾಗಿವೆ ಎಂದು ಟ್ರಸ್ಟ್ ಹೇಳಿದೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ತಿರುಮಲ ತಿರುಪತಿ ದೇವಸ್ಥಾನಂ (Tirumala Tirupati Devasthanams – TTD) ಕಾರ್ಯನಿರ್ವಾಹಕ ಅಧಿಕಾರಿ ಜೆ ಶ್ಯಾಮಲಾ ರಾವ್ ( TTD Executive Officer J Syamala Rao ) “ಶುದ್ಧ ಹಸುವಿನ ತುಪ್ಪದಿಂದ ಮಾತ್ರ ಉತ್ತಮ ಲಡ್ಡುವನ್ನು ತಯಾರಿಸಲಾಗುತ್ತದೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ತಮ್ಮ ಆಶಯಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರು. ಅವರ ಸೂಚನೆಯ ಮೇರೆಗೆ, ನಾವು ಮಾದರಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ ಮತ್ತು ನಿಯಮಗಳನ್ನು ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಿದ್ದೇವೆ.…
ಬೆಂಗಳೂರು: ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸೆ.21ರ ನಾಳೆ, ಸೆ.22ರ ನಾಡಿದ್ದು ವಿದ್ಯುತ್ ವ್ಯತ್ತಯ ಉಂಟಾಗಲಿದೆ. ನಾಳೆ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ( BESCOM ) ಮಾಹಿತಿ ಹಂಚಿಕೊಂಡಿದ್ದು, 66/11 ಕೆವಿಎ ಸಹಕಾರನಗರ ಕೇಂದ್ರದಲ್ಲಿ , ಟ್ರಾನ್ಸ್ ಫಾರ್ಮರ್ 1, 2 & 3 ಮತ್ತು ಬೇಸ್ ಮತ್ತು 66ಕೆವಿ ಬಸ್ ನಿರ್ವಹಣೆ ಕೆಲಸಗಳಿಂದಾಗಿ ದಿನಾಂಕ 21.09.2024 ರಂದು ಬೆಳಿಗ್ಗೆ 10:00 ರಿಂದ ಸಂಜೆ 16:00 ಗಂಟೆಗಳವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ…
ಬೆಂಗಳೂರು: ನಗರದ ರಾಜರಾಜೇಶ್ವರಿ ಕಾಲೇಜಿನಲ್ಲಿನ ಶೌಚಾಲಯದಲ್ಲಿ ಯುವತಿಯರ ವೀಡೀಯೋವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದಂತ ಶಾಕಿಂಗ್ ವಿಷಯ ಬೆಳಕಿಗೆ ಬಂದಿತ್ತು. ಈ ಬೆನ್ನಲ್ಲೇ ಪೊಲೀಸರಿಂದ ಓರ್ವ ಅನುಮಾನಾಸ್ಪದ ಯುವಕನನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ರಾಜರಾಜೇಶ್ವರಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ನಿಂದ ಯುವತಿಯ ವೀಡಿಯೋವನ್ನು ಚಿತ್ರೀಕರಿಸಿಕೊಳ್ಳುತ್ತಿದ್ದಂತ ಘಟನೆ ಬೆಳಕಿಗೆ ಬಂದಿತ್ತು. ಈ ಬೆನ್ನಲ್ಲೇ ರಾಜರಾಜೇಶ್ವರಿ ಕಾಲೇಜಿನ ವಿದ್ಯಾರ್ಥಿನಿಯರು ಯುವಕನನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಲೇಜಿನಲ್ಲಿ ಪ್ರತಿಭಟನೆ ನಡೆಸುತ್ತಿರುವಂತ ವಿಷಯ ತಿಳಿದಂತ ಕುಂಬಳಗೋಡು ಠಾಣೆಯ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರತಿಭಟನಾ ನಿರತ ವಿದ್ಯಾರ್ಥಿನಿಯರನ್ನು ಮನವೊಲಿಸಿದರು. ಅಲ್ಲದೇ ಘಟನೆಯ ಸಂಬಂಧ ಶೌಚಾಲಯದಲ್ಲಿ ಯುವತಿಯ ವೀಡಿಯೋ ಚಿತ್ರೀಕರಿಸುತ್ತಿದ್ದಂತ ಅನುಮಾನಾಸ್ಪದ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗ ಯುವಕನನ್ನು ಬಂಧಿಸಿರುವಂತ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/big-news-the-destruction-of-the-world-will-begin-in-3-months-baba-vanga-shocking-prediction/ https://kannadanewsnow.com/kannada/breaking-cm-siddaramaiah-announces-increase-in-age-limit-for-police-constable-posts-from-27-to-33-years/ https://kannadanewsnow.com/kannada/bengaluru-power-outages-in-these-areas-of-the-city-on-september-21/
ತಿರುಮಲ: ತಿರುಪತಿ ತಿರುಮಲ ಲಡ್ಡು ಪ್ರಸಾದ ಈಗ ವಿವಾದದ ಸ್ವರೂಪ ಪಡೆದಿದೆ. ಜೊತೆ ಜೊತೆಗೆ ದನದ ಕೊಬ್ಬು ಮಾತ್ರವೇ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಬಳಕೆ ಮಾತ್ರ ಆಗುತ್ತಿಲ್ಲ. ಇದರೊಂದಿಗೆ ಇತರೆ ಕೊಬ್ಬಿನ ಅಂಶಗಳು ಕೂಡ ಬಳಕೆಯಾಗಿರುವುಂತ ಆಘಾತಕಾರಿ ಮಾಹಿತಿಯು ಲ್ಯಾಬ್ ರಿಪೋರ್ಟ್ ವರದಿಯಿಂದ ಬಹಿರಂಗವಾಗಿದೆ. ಹೌದು ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶವಷ್ಟೇ ಅಲ್ಲದೇ ಇತರೆ ಕೊಬ್ಬಿನ ಅಂಶಗಳು ಪತ್ತೆಯಾಗಿರುವುದಾಗಿ ಲ್ಯಾಬ್ ವರದಿಯಿಂದ ತಿಳಿದು ಬಂದಿದೆ. ಇದಕ್ಕೆ ಕಲಬೆರೆಕೆಯ ತುಪ್ಪ ಸರಬರಾಜು ಕಾರಣ ಎಂಬುದಾಗಿ ಟಿಟಿಡಿ ಕಾರ್ಯಕಾರಿ ಅಧಿಕಾರಿ ಶ್ಯಾಮಲಾ ರಾವ್ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತಿರುಪತಿ ತಿರುಮಲ ಪ್ರಸಾದವಾದಂತ ಲಡ್ಡು ತಯಾರಿಕೆಗಾಗಿ ಎಆರ್ ಡೈರಿಯಿಂದ ತುಪ್ಪವನ್ನು ಸರಬರಾಜು ಮಾಡಲಾಗುತ್ತಿತ್ತು. ಕಲಬೆರೆಕೆಯಿಂದ ಕೂಡಿರುವ ಅನುಮಾನದಿಂದ ಗುಜರಾತ್ ನಲ್ಲಿನ ಸರ್ಕಾರಿ ಲ್ಯಾಬ್ ಗೆ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು ಎಂದಿದ್ದಾರೆ. ಲ್ಯಾಬ್ ರಿಪೋರ್ಟ್ ನೋಡಿ ನಮಗೆ ಶಾಕ್ ಆಗಿದೆ. ವರದಿಯಂತೆ ತಿರುಪತಿ ತಿರುಮಲ ಲಡ್ಡು ಪ್ರಸಾದಕ್ಕೆ ಎಆರ್ ಡೈರಿಯಿಂದ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಚೆನ್ನೈನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ಜಸ್ಪ್ರೀತ್ ಬುಮ್ರಾ ಪ್ರಮುಖ ಮೈಲಿಗಲ್ಲನ್ನು ಸಾಧಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ 400 ವಿಕೆಟ್ ಪಡೆದ ಭಾರತದ 10ನೇ ಬೌಲರ್ ಹಾಗೂ 6ನೇ ವೇಗಿ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದಾರೆ. ಬಾಂಗ್ಲಾದೇಶದ ಹಸನ್ ಮಹಮೂದ್ ಅವರು ಬುಮ್ರಾ ಅವರ 400ನೇ ವ್ಯಕ್ತಿಯಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಶುಕ್ರವಾರ ಮೊದಲ ಎರಡು ಸೆಷನ್ಗಳಲ್ಲಿ ಮೂರು ವಿಕೆಟ್ಗಳನ್ನು ಪಡೆಯುವ ಮೂಲಕ ತವರು ಪರಿಸ್ಥಿತಿಗಳಲ್ಲಿ ತಮ್ಮ ಪ್ರಾಬಲ್ಯವನ್ನು ಮುಂದುವರಿಸಿದರು. ಬುಮ್ರಾ ತಮ್ಮ ಮೊದಲ ಓವರ್ನಲ್ಲಿ ಶತಕ ಬಾರಿಸಿ, ಬಾಂಗ್ಲಾದೇಶದ ಆರಂಭಿಕ ಬ್ಯಾಟ್ಸ್ಮನ್ ಶದ್ಮಾನ್ ಇಸ್ಲಾಂ ಅವರನ್ನು ಹಿಂದಕ್ಕೆ ಕಳುಹಿಸಿದರು. ನಂತರ ಅವರು ಎರಡನೇ ಸೆಷನ್ನಲ್ಲಿ ಮುಷ್ಫಿಕರ್ ರಹೀಮ್ ಮತ್ತು ಮಹಮೂದ್ ಅವರನ್ನು ಔಟ್ ಮಾಡುವ ಮೂಲಕ ತಮ್ಮ ಖಾತೆಗೆ ಇನ್ನೂ ಎರಡು ಸೇರಿಸಿದರು. ಹೀಗಿದೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಬುಮ್ರಾ ಸಾಧನೆ 162 ಟೆಸ್ಟ್, 149 ಏಕದಿನ…
ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ವಿವಾದ ತೀವ್ರ ಸ್ವರೂಪ ಪಡೆಯುತ್ತಿದೆ. ದನದ ಕೊಬ್ಬಿಗೆ ಕಲಬೆರೆಕೆ ತುಪ್ಪ ಸರಬರಾಜೇ ಕಾರಣ ಎಂಬುದಾಗಿ ಟಿಟಿಡಿ ಸ್ಪಷ್ಟ ಪಡಿಸಿದೆ. ಈ ಬೆನ್ನಲ್ಲೇ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮಧ್ಯ ಪ್ರವೇಶಕ್ಕೆ ಮನವಿ ಮಾಡಲಾಗಿದೆ. ಈ ಸಂಬಂಧ ಇಂದು ಸುಪ್ರೀಂ ಕೋರ್ಟ್ ಗೆ ಪತ್ರಕರ್ತ ಸುರೇಶ್ ಎಂಬುವರು ಅರ್ಜಿಯೊಂದನ್ನು ಸಲ್ಲಿಸಿದ್ದು, ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶ ಪತ್ತೆಯಾಗಿರುವುದು ತೀವ್ರ ವಿವಾದವನ್ನು ಪಡೆಯುತ್ತಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ ಕೂಡಲೇ ಮಧ್ಯ ಪ್ರವೇಶಿಸುವಂತೆ ಕೋರಲಾಗಿದೆ. ಈ ನಡುವೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತಿರುಪತಿ ತಿಮ್ಮಪ್ಪನ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ತಯಾರಿಕೆಗಾಗಿ ಈ ಮೊದಲು ಕಂಪನಿಯೊಂದರಿಂದ ತುಪ್ಪವನ್ನು ಖರೀದಿಸಲಾಗುತ್ತಿತ್ತು. ಆ ತುಪ್ಪ ಕಲಬೆರೆಕೆಯಿಂದ ಕೂಡಿದ್ದೇ ವಿವಾದಕ್ಕೆ ಕಾರಣವಾಗಿದೆ ಎಂಬುದಾಗಿ ತಿಳಿಸಿದರು. ತುಪ್ಪ ಕಲಬೆರೆಕೆಯ ಬಗ್ಗೆ ಸರ್ಕಾರಿ ಲ್ಯಾಬ್ ಗೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಲಡ್ಡು ತಯಾರಿಕೆಗೆ ಬಳಸುತ್ತಿದ್ದಂತ ತುಪ್ಪದಲ್ಲಿ ದನದ ಕೊಬ್ಬು ಸೇರಿಸುವಂತ ಅಂಶವಿರುವ ವರದಿಯನ್ನು ನೋಡಿ…
ತಿರುಪತಿ: ತಿರುಪತಿ ತಿರುಮಲ ದೇವಸ್ಥಾನದಲ ಲಡ್ಡು ಪ್ರಸಾದದಲ್ಲಿ ಕೊಬ್ಬು ಬಳಕೆ ಆಗಿರುವುದು ನಿಜವೆಂಬುದಾಗಿ ಟಿಟಿಡಿ ತಪ್ಪೊಪ್ಪಿಕೊಂಡಿದೆ. ಅಲ್ಲದೇ ಕಲಬೆರೆಕೆ ತುಪ್ಪ ಬಳಕೆಯಿಂದಲೇ ಲಡ್ಡು ಪ್ರಸಾದಲ್ಲಿ ದನದ ಕೊಬ್ಬು ಮಿಕ್ಸ್ ಆಗಲು ಕಾರಣ ಎಂಬುದಾಗಿ ಟಿಟಿಡಿ ಕಾರ್ಯಕಾರಿ ಅಧಿಕಾರಿ ಶ್ಯಾಮಲಾ ರಾವ್ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತಿರುಪತಿ ತಿಮ್ಮಪ್ಪನ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ತಯಾರಿಕೆಗಾಗಿ ಈ ಮೊದಲು ಕಂಪನಿಯೊಂದರಿಂದ ತುಪ್ಪವನ್ನು ಖರೀದಿಸಲಾಗುತ್ತಿತ್ತು. ಆ ತುಪ್ಪ ಕಲಬೆರೆಕೆಯಿಂದ ಕೂಡಿದ್ದೇ ವಿವಾದಕ್ಕೆ ಕಾರಣವಾಗಿದೆ ಎಂಬುದಾಗಿ ತಿಳಿಸಿದರು. ತುಪ್ಪ ಕಲಬೆರೆಕೆಯ ಬಗ್ಗೆ ಸರ್ಕಾರಿ ಲ್ಯಾಬ್ ಗೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಲಡ್ಡು ತಯಾರಿಕೆಗೆ ಬಳಸುತ್ತಿದ್ದಂತ ತುಪ್ಪದಲ್ಲಿ ದನದ ಕೊಬ್ಬು ಸೇರಿಸುವಂತ ಅಂಶವಿರುವ ವರದಿಯನ್ನು ನೋಡಿ ನಾವು ಶಾಕ್ ಆದೆವು ಎಂದಿದ್ದಾರೆ. ಕಲಬೆರೆಕೆ ತುಪ್ಪವನ್ನು ಸರಬರಾಜು ಮಾಡಿದಂತ ಕಂಪನಿಯನ್ನು ಬ್ಲಾಕ್ ಲೀಸ್ಟ್ ಗೆ ಹಾಕಲಾಗಿದೆ. ಅತ್ಯಂತ ಕೆಳ ಮಟ್ಟದ ತುಪ್ಪವನ್ನು ಸರಬರಾಜು ಮಾಡಿದಂತ ಕಂಪನಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಟಿಟಿಡಿ ಕಾರ್ಯಕಾರಿ ಅಧಿಕಾರಿ…
ಬೆಂಗಳೂರು: ಮುಂದಿನ ಮೂರು ವಾರಗಳಲ್ಲಿ ಬೆಂಗಳೂರಿನ ಎಲ್ಲಾ 20 ಲಕ್ಷ ಆಸ್ತಿ ಮಾಲೀಕರಿಗೆ ಬಿಬಿಎಂಪಿಯಿಂದ ಹೊಸ ಇ-ಖಾತಾ ವಿತರಣಾ ವ್ಯವಸ್ಥೆಯ ಭಾಗವಾಗಿ ಎಸ್ಎಂಎಸ್ ಸಿಗಲಿದೆ. ಅದಕ್ಕೂ ಮುನ್ನವೇ ಬಿಬಿಎಂಪಿಯಿಂದ 21 ಲಕ್ಷ ಆಸ್ತಿಗಳನ್ನು ಜಿಪಿಎಸ್ ತಂತ್ರಾಂಶದಲ್ಲಿ ಬಿಬಿಎಂಪಿ ಅಳವಡಿಸಿದೆ. ಇಲ್ಲಿಯವರೆಗೆ, ಅಧಿಕಾರಿಗಳು ಸುಮಾರು ಮೂರು ಲಕ್ಷ ಆಸ್ತಿಗಳಿಗೆ ಪ್ರಸಾರ ಸಂದೇಶಗಳನ್ನು ಕಳುಹಿಸಿದ್ದಾರೆ. ಇ-ಖಾತಾ ಪಡೆಯಲು ಅಗತ್ಯವಿರುವ ಜಿಪಿಎಸ್ ನಿರ್ದೇಶಾಂಕಗಳನ್ನು ಸೆರೆಹಿಡಿಯಲು ಬಿಬಿಎಂಪಿ ಸಿಬ್ಬಂದಿ ತಮ್ಮ ಆಸ್ತಿಗೆ ಭೇಟಿ ನೀಡುತ್ತಾರೆ ಎಂದು ಎಸ್ಎಂಎಸ್ ಸ್ವೀಕರಿಸುವವರಿಗೆ ತಿಳಿಸುತ್ತದೆ. ಎಸ್ಎಂಎಸ್ನಲ್ಲಿ ಹೀಗೆ ಬರೆಯಲಾಗಿದೆ: “ಬಿಬಿಎಂಪಿ ಪ್ರತಿ ಆಸ್ತಿಗೆ ಇ-ಖಾತಾ ರಚಿಸುತ್ತಿದೆ. ಇ-ಖಾತಾ ಪಡೆಯಲು ಜಿಪಿಎಸ್ ನಿರ್ದೇಶಾಂಕಗಳು ಕಡ್ಡಾಯ. ಜಿಪಿಎಸ್ ವಿವರಗಳನ್ನು ಸೆರೆಹಿಡಿಯಲು ಬಿಬಿಎಂಪಿ ಸಿಬ್ಬಂದಿ ಕೆಲವೇ ದಿನಗಳಲ್ಲಿ ನಿಮ್ಮ ಆಸ್ತಿಗೆ ಭೇಟಿ ನೀಡುತ್ತಾರೆ. ದಯವಿಟ್ಟು ನಿಮ್ಮ ಆಸ್ತಿ ತೆರಿಗೆ ರಸೀದಿಯನ್ನು ಸಿದ್ಧವಾಗಿರಿಸಿಕೊಳ್ಳಿ ಮತ್ತು ನಿಖರವಾದ ಜಿಪಿಎಸ್ ಟ್ಯಾಗಿಂಗ್ ಖಚಿತಪಡಿಸಿಕೊಳ್ಳಲು ಬಿಬಿಎಂಪಿ ಸಿಬ್ಬಂದಿಯೊಂದಿಗೆ ಸಹಕರಿಸಿ. ಆಸ್ತಿ ಜಿಪಿಎಸ್ ಬಿಎಚ್ಯು ಆಧಾರ್ ಆಗಿ ಕಾರ್ಯನಿರ್ವಹಿಸುತ್ತದೆ, ಆಸ್ತಿಯ ವಿಶಿಷ್ಟ ಗುರುತಿಸುವಿಕೆಯಾಗಿ…
ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ದೇವರಿಗೆ ಪ್ರಸಾದವಾಗಿ ನೀಡಲಾಗುವ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದಲ್ಲಿನ ಪ್ರಾಣಿಗಳ ಕೊಬ್ಬಿನ ಬಗ್ಗೆ ಮತ್ತು ಪ್ರತಿವರ್ಷ ಭೇಟಿ ನೀಡುವ ಕೋಟ್ಯಂತರ ಭಕ್ತರಿಗೆ ಸಂಬಂಧಿಸಿದ ವಿವಾದದ ಬಗ್ಗೆ ವಿವರವಾದ ವರದಿಯನ್ನು ನೀಡುವಂತೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರನ್ನು ಕೇಳಿದ್ದಾರೆ. ತಮ್ಮ ಪ್ರತಿಸ್ಪರ್ಧಿ ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಅಧಿಕಾರದಲ್ಲಿದ್ದಾಗ ಬಳಸಿದ ತುಪ್ಪದ ಮಾದರಿಗಳಲ್ಲಿ ಗೋಮಾಂಸ ಟಾಲೋ, ಮೀನಿನ ಎಣ್ಣೆ ಮತ್ತು ಹಂದಿ ಕೊಬ್ಬು ಅಥವಾ ಹಂದಿಮಾಂಸದ ಕುರುಹುಗಳಿವೆ ಎಂದು ಗುಜರಾತ್ನ ಸರ್ಕಾರಿ ಪ್ರಯೋಗಾಲಯದಿಂದ ಜುಲೈನಲ್ಲಿ ವರದಿಯನ್ನು ನಾಯ್ಡು ಅವರ ತೆಲುಗು ದೇಶಂ ಪಕ್ಷ ಈ ವಾರ ಉಲ್ಲೇಖಿಸಿದೆ. ಚಂದ್ರಬಾಬು ನಾಯ್ಡು ಮತ್ತು ಅವರ ಉಪ ಮುಖ್ಯಮಂತ್ರಿ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ವೈಎಸ್ಆರ್ಸಿಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಗನ್ ಮೋಹನ್ ರೆಡ್ಡಿ ದೇವಾಲಯವನ್ನು ಅಪವಿತ್ರಗೊಳಿಸಿದ್ದಾರೆ ಮತ್ತು ‘ಸನಾತನ ಧರ್ಮ’ವನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕೇಂದ್ರದಲ್ಲಿ ಟಿಡಿಪಿ…
ಮೈಸೂರು : ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ. ಕರ್ನಾಟಕ ಬಹುತ್ವದ ಬೀಡು. ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಜಂಟಿಯಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ “ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶ” ವನ್ನು ಉದ್ಘಾಟಿಸಿ ಮಾತನಾಡಿದರು. ದೇವರಾಜ ಅರಸರು 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ನಾಮಕರಣಗೊಂಡು 50 ವರ್ಷದ ಸುವರ್ಣ ಸಂಭ್ರಮವನ್ನು ಬಿಜೆಪಿ ಸರ್ಕಾರ ಮಾಡಬೇಕಿತ್ತು. ಅವರು ಮಾಡಲಿಲ್ಲ. ಹೀಗಾಗಿ ನಾನು ಸುವರ್ಣ ಸಂಭ್ರಮವನ್ನು ಬಜೆಟ್ ನಲ್ಲೇ ಘೋಷಿಸಿ ಇದನ್ನು ಕನ್ನಡ ಜನೋತ್ಸವವನ್ನಾಗಿ ಆಚರಿಸಲಾಗುತ್ತಿದೆ ಎಂದರು. ಕರ್ನಾಟಕ ಮತ್ತು ಕನ್ನಡ ಏಳು ಕೋಟಿ ಜನರ ಉಸಿರಾಗಲಿ. ಇಲ್ಲಿ ಬದುಕನ್ನು ಕಟ್ಟಿಕೊಂಡಿರುವ ಇತರೆ ಭಾಷಿಕರು ಕನ್ನಡ ಮಾತಾಡುವಂತಾದರೆ ಒಳ್ಳೆಯದು. ನಾವು ಯಾವ ಭಾಷೆಗೂ ದ್ವೇಷಿಗಳಲ್ಲ. ಸಾಧ್ಯವಿರುವಷ್ಟು…










