Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು : ಬಡ ಹಾಗೂ ಭೂ ರಹಿತ ರೈತರಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಭೂ ಮಂಜೂರು ಮಾಡಲು ರಾಜ್ಯಾದ್ಯಂತ ಈವರೆಗೆ ಒಟ್ಟಾರೆ 185 ಸಭೆಗಳನ್ನು ನಡೆಸಲಾಗಿದ್ದು, ಅರ್ಜಿ ವಿಲೇವಾರಿಯನ್ನೂ ತ್ವರಿತಗೊಳಿಸಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲೇ ಇದೊಂದು ಹೊಸ ದಾಖಲೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕರಾದ ಶೈಲೇಂದ್ರ ಬೆಲ್ದಾಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ, ಅತಿಹೆಚ್ಚು ಬಗರ್ ಹುಕುಂ ಸಮಿತಿಗಳನ್ನು ರಚಿಸಿದ್ದು ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ. ಅಲ್ಲದೆ, ಅರ್ಜಿ ವಿಲೇವಾರಿಗೊಳಿಸಿ ಅರ್ಹ ರೈತರಿಗೆ ಭೂ ಮಂಜೂರುಗೊಳಿಸುವ ಪ್ರಕ್ರಿಯೆಗೂ ಸಾಕಷ್ಟು ವೇಗ ತುಂಬಲಾಗುತ್ತಿದೆ. ಸ್ವತಃ ನಾನೇ ನೇರವಾಗಿ ಪರಿಶೀಲಿಸಿ ವಿಲೇ ಕೆಲಸಗಳನ್ನು ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಸಂಬಂಧ ಅಧಿಕಾರಿಗಳಿಗೆ ಗಡುವು ನೀಡಿದ್ದು ನಿಜ, ಸರ್ಕಾರವೇ ಅದನ್ನು ಬೆನ್ನಟ್ಟಿರುವುದೂ ನಿಜ” ಎಂದು ತಿಳಿಸಿದರು. ಈ ವೇಳೆ…

Read More

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೇ, ಮಾನಸಿಕ ಶಾಂತ ಚಿತ್ತತೆಯ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ಹೆಚ್ಚಿಸೋದಕ್ಕೆ ನುರಿತ ಮನೋ ವೈದ್ಯರಿಂದ ಮಾರ್ಚ್.15ರ ನಾಳೆ ಯೂಟ್ಯೂಬ್ ನಲ್ಲಿ ವಿಶೇಷ ಕಾರ್ಯಕ್ರಮವ ಪ್ರಸಾರವಾಗಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪರೀಕ್ಷಾ ವಿಭಾಗದ ನಿರ್ದೇಶಕರಾದಂತ ಹೆಚ್.ಎನ್ ಗೋಪಾಲಕೃಷ್ಣ ಮಾಹಿತಿ ನೀಡಿದ್ದು, ಎಸ್.ಎಸ್ಎಲ್.ಸಿ ಪರೀಕ್ಷೆಯನ್ನು ದಿನಾಂಕ:21-03-2025 ರಿಂದ 04-04-2025ರವರೆಗೆ ನಡೆಸಲಾಗುತ್ತಿದೆ. ಸದರಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೇ ಆತಂಕ ಮತ್ತು ಭಯವಿಲ್ಲದೆ ಆತ್ಮ ಕ್ರೌರ್ಯದಿಂದ ಎದುರಿಸಬೇಕು ಎಂಬುದು ಮಂಡಲಿಯ ಆಶಯವಾಗಿದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಪೂರ್ವ, ಪರೀಕ್ಷಾ ಸಂದರ್ಭ ಮತ್ತು ಪರೀಕ್ಷಾ ನಂತರದಲ್ಲಿ ವಿದ್ಯಾರ್ಥಿಗಳಲ್ಲಿ ಉಂಟಾಗಬಹುದಾದ ಮಾನಸಿಕ ಸಂದಿಗ್ಧತೆಗಳನ್ನು ನಿವಾರಿಸಿ, ಆತ್ಮ ಸ್ಟೈರ್ಯವನ್ನು ಹೆಚ್ಚಿಸಿ ಪರೀಕ್ಷೆಯನ್ನು ಅತ್ಯಂತ ಲವಲವಿಕೆಯಿಂದ ಎದುರಿಸಲು ಅಗತ್ಯವಿರುವ ಮಾರ್ಗದರ್ಶನವನ್ನು National Institute of Mental Health and Neuro Sciences (NIMHANS),…

Read More

ನವದೆಹಲಿ: 2024-25ರ ಹಣಕಾಸು ವರ್ಷದ ಮುಂಗಡ ತೆರಿಗೆಯ ಅಂತಿಮ ಕಂತನ್ನು ಪಾವತಿಸಲು ಮಾರ್ಚ್ 15, 2025ರ ನಾಳೆ ಕೊನೆಯ ದಿನಾಂಕವಾಗಿದೆ. ಈ ದಿನಾಂಕದ ಮೊದಲು ತಮ್ಮ ಮುಂಗಡ ತೆರಿಗೆ ಪಾವತಿಗಳನ್ನು ತೆರವುಗೊಳಿಸುವಂತೆ ಆದಾಯ ತೆರಿಗೆ ಇಲಾಖೆ ತೆರಿಗೆದಾರರಿಗೆ ನೆನಪಿಸಿದೆ. 2024-25ರ ಹಣಕಾಸು ವರ್ಷದ ಮುಂಗಡ ತೆರಿಗೆಯ ಅಂತಿಮ ಕಂತು 2025 ರ ಮಾರ್ಚ್ 15 ರೊಳಗೆ ಬಾಕಿ ಇದೆ. ಸಮಯೋಚಿತ ಪಾವತಿಯು ತೆರಿಗೆ ಕಾನೂನುಗಳ ಅನುಸರಣೆಯನ್ನು ಖಚಿತಪಡಿಸುತ್ತದೆ ಮತ್ತು ಸ್ವಾವಲಂಬನೆ ಮತ್ತು ಸಮೃದ್ಧಿಯತ್ತ ಭಾರತದ ಪ್ರಯಾಣವನ್ನು ಮುನ್ನಡೆಸುವ ‘ವಿಕ್ಷಿತ್ ಭಾರತ್ ಮೂವ್ಮೆಂಟ್’ ಅನ್ನು ಬೆಂಬಲಿಸುತ್ತದೆ. ಮುಂಗಡ ತೆರಿಗೆ ಎಂದರೇನು? ಮುಂಗಡ ತೆರಿಗೆ, ಇದನ್ನು ‘ಪೇ ಆಸ್ ಯು ಎರ್ನ್ ಸ್ಕೀಮ್’ ಎಂದೂ ಕರೆಯಲಾಗುತ್ತದೆ. ಹಣಕಾಸು ವರ್ಷದ ಕೊನೆಯಲ್ಲಿ ಒಂದೇ ಪಾವತಿ ಮಾಡುವ ಬದಲು, ಸರ್ಕಾರ ಹೊರಡಿಸಿದ ದಿನಾಂಕಗಳ ಪ್ರಕಾರ ಇದನ್ನು ಕಂತುಗಳಲ್ಲಿ ಪಾವತಿಸಲಾಗುತ್ತದೆ. ಮುಂಗಡ ತೆರಿಗೆಯನ್ನು ಯಾರು ಪಾವತಿಸಬೇಕು? ಹಣಕಾಸು ವರ್ಷದಲ್ಲಿ ಅಂದಾಜು ತೆರಿಗೆ ಹೊಣೆಗಾರಿಕೆ 10,000 ರೂ ಅಥವಾ ಅದಕ್ಕಿಂತ…

Read More

ಬೆಂಗಳೂರು: 2023-24 ಮತ್ತು 2024-25ನೇ ಸಾಲಿನಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ, ನಿವೃತ್ತಿ ಹೊಂದಿರುವ ಶಿಕ್ಷಕ, ಸಿಬ್ಬಂದಿಗಳಿಗೆ ನಿವೃತ್ತಿ ನಂತರದ ಗಳಿಕೆ ರಜೆ ನಗಧೀಕರಣಕ್ಕಾಗಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಶಾಲಾ ಶಿಕ್ಷಣ ಇಲಾಖೆಯಲ್ಲಿ 2023-24 ರಿಂದ 2024-25 ನೇ ಸಾಲಿನವರೆಗೆ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ನಿವೃತ್ತಿ ನಂತರದ ಗಳಿಕೆ ರಜೆ ನಗಧೀಕರಣಕ್ಕಾಗಿ ಅಗತ್ಯವಾದ ಅನುದಾನವನ್ನು ಲೆಕ್ಕಶೀರ್ಷಿಕೆ:2071-01-109-1-02 ಯ ಉದ್ದೇಶಿತ ಶೀರ್ಷಿಕೆ:251 ರಡಿ ಉಲ್ಲೇಖ(1) ರ ಸರ್ಕಾರದ ಪತ್ರದನ್ವಯ ಬಿಡುಗಡೆ ಮಾಡಲಾಗಿರುತ್ತದೆ ಎಂದಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನಿವೃತ್ತರಾದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು/ಸಿಬ್ಬಂದಿಗಳ ಮಾಹಿತಿಗಳನ್ನು ತಾಲ್ಲೂಕು ಕಛೇರಿಗಳಿಂದ ಪಡೆದು ಕ್ರೋಢಿಕರಿಸಿ ಕ್ರೋಢೀಕೃತ ಮಾಹಿತಿಯನ್ನು ಈ ಕಛೇರಿಗೆ ಪರಿಶೀಲನೆಗಾಗಿ ದಿ:11.02.2025 ರ ಒಳಗಾಗಿ ಒದಗಿಸುವಂತೆ ಜಿಲ್ಲಾ ಕಛೇರಿಗಳಿಗೆ ಉಲ್ಲೇಖ(2)ರಲ್ಲಿ ಸೂಚಿಸಲಾಗಿರುತ್ತದೆ. ಅದಗ್ಯೂ ಮೂರು ದಿನಗಳು ಹೆಚ್ಚುವರಿಯಾಗಿ…

Read More

ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು 65ಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ಆದರೆ 65ಕ್ಕೆ ಹೆಚ್ಚಿಸುವ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಆದರೆ ನಿವೃತ್ತಿ ವಯಸ್ಸು ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ ಎಂಬುದಾಗಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ ನಡೆದ ಸಂವಾದದ ವೇಳೆ ಮಾತನಾಡಿದರು. ಸಂವಾದದ ವೇಳೆ ಜಯದೇವದ ಹಿರಿಯ ವೈದ್ಯರು ಕೆಲವು ವಿಷಯ ಪ್ರಸ್ತಾಪಿಸಿದರು. ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದ ನಂತರ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸಲು ಅತಿ ಹೆಚ್ಚು ವರ್ಷಗಳನ್ನು ವ್ಯಯಿಸಿರಲಾಗಿರುತ್ತದೆ. 60 ನೇ ವಯಸ್ಸಿನಲ್ಲಿ ನಿವೃತ್ತರಾಗುವ ಮೊದಲು ನಮಗೆ 20-25 ವರ್ಷಗಳ ಕಾಲ ಮಾತ್ರ ಸೇವೆ ಸಲ್ಲಿಸಲು ಅವಕಾಶ ಲಭ್ಯವಾಗಿರುತ್ತದೆ ಎಂದು…

Read More

ಬೆಂಗಳೂರು: ಪುನೀತ್ ರಾಜ್ ಕುಮಾರ್ ( Puneeth Rajkumar ) ಅಭಿನಯದ ಅಪ್ಪು ಸಿನಿಮಾ ( Appu Movie ) ಮಾರ್ಚ್.14ರ ಇಂದು ರೀ ರಿಲೀಸ್ ಆಗುತ್ತಿದೆ. ಮಾರ್ಚ್.17ರಂದು ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಅಪ್ಪು ಸಿನಿಮಾವನ್ನು ರೀ ರಿಲೀಸ್ ಮಾಡಲಾಗುತ್ತಿದೆ. ಈ ಸಂಬಂಧ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರು ವಿಶೇಷ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅಪ್ಪು ಸಿನಿಮಾ ಸಕ್ಸಸ್ ಬಗ್ಗೆಯೂ ಮಾಹಿತಿ ನೀಡಿದ್ದಾರೆ. https://twitter.com/PRK_Productions/status/1900115424655880441 ಪುನೀತ್ ರಾಜ್ ಕುಮಾರ್ ಅವರ ಅಪ್ಪು ಸಿನಿಮಾದ 100ನೇ ದಿನದ ಸಂಭ್ರಮದ ವೀಡಿಯೋ ಶೇರ್ ಮಾಡಿರುವಂತ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಅಪ್ಪು ಚಿತ್ರದ ಐತಿಹಾಸಿಕ ಶತದಿನೋತ್ಸವದ ಯಶಸ್ಸಿನ ಬಗ್ಗೆ ಕನ್ನಡ ಚಿತ್ರರಂಗದ ಗಣ್ಯರು ಒಂದುಗೂಡುವ ಹಬ್ಬದ ಅಪರೂಪದ ಕ್ಷಣ ಎಂದಿದ್ದಾರೆ. ಏನಿದೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಪೋಸ್ಟ್ ನಲ್ಲಿ? ಅಪ್ಪು ಚಿತ್ರದ ಐತಿಹಾಸಿಕ ಶತದಿನೋತ್ಸವ ಸಮಾರಂಭದ ಯಶಸ್ಸನ್ನು ಹರ್ಷದಿಂದ ಹಾರೈಸಲು ಕನ್ನಡ…

Read More

ಬೆಂಗಳೂರು: ನಿವೇಶನ ಮತ್ತು ಮನೆ ಹಂಚಿಕೆ ಸಂದರ್ಭದಲ್ಲಿ ಪತ್ರಕರ್ತರಿಗೆ ಮೀಸಲು ನೀಡುವ ನಿಟ್ಟಿನಲ್ಲಿ ಕೂಡಲೇ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಮಂಡಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳು, ಬಿಡಿಎ ಸೇರಿದಂತೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿವೇಶನ ಮತ್ತು ಮನೆ ಹಂಚಿಕೆ ಸಂದರ್ಭದಲ್ಲಿ ಪತ್ರಕರ್ತರಿಗೆ ಶೇ.5ರಷ್ಟು ಮೀಸಲು ನೀಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಲ್ಲಿಸಿದ ಮನವಿ ಹಿನ್ನೆಲೆಯಲ್ಲಿ ಈ ಸೂಚನೆ ನೀಡಿದರು. ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆಗೆ ಈ ಬಗ್ಗೆ ಸಮಾಲೋಚನೆ ನಡೆಸಿದ ಡಿಸಿಎಂ, ಕಾನೂನು ತೊಡಕುಗಳು ಏನೇನು ಇದೆ? ಯಾವ ರೀತಿಯಲ್ಲಿ ಪತ್ರಕರ್ತರಿಗೆ ಸಹಾಯ ಮಾಡಬಹುದು ಎಂದು ಚರ್ಚೆ ನಡೆಸಿದರು. ಶೇ.5 ರಿಯಾಯಿತಿ ಕೊಡುವುದು ಕಷ್ಟವಾಗಬಹುದು. ಆದರೆ, ಕನಿಷ್ಠ ಶೇ.1 ರಿಂದ ಶೇ.2ರಷ್ಟು ರಿಯಾಯಿತಿ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ಬಗ್ಗೆ ಶೀಘ್ರವೇ ಆದೇಶವನ್ನು ಹೊರಡಿಸಲು ಅಗತ್ಯವಿರುವ ಕ್ರಮಕ್ಕೆ ಮುಂದಾಗಬೇಕು…

Read More

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ ನಡೆದ ಸಂವಾದದ ವೇಳೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಈ ವಿಷಯ ತಿಳಿಸಿದರು. ಸಂವಾದದ ವೇಳೆ ಜಯದೇವದ ಹಿರಿಯ ವೈದ್ಯರು ಕೆಲವು ವಿಷಯ ಪ್ರಸ್ತಾಪಿಸಿದರು. ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದ ನಂತರ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸಲು ಅತಿ ಹೆಚ್ಚು ವರ್ಷಗಳನ್ನು ವ್ಯಯಿಸಿರಲಾಗಿರುತ್ತದೆ. 60 ನೇ ವಯಸ್ಸಿನಲ್ಲಿ ನಿವೃತ್ತರಾಗುವ ಮೊದಲು ನಮಗೆ 20-25 ವರ್ಷಗಳ ಕಾಲ ಮಾತ್ರ ಸೇವೆ ಸಲ್ಲಿಸಲು ಅವಕಾಶ ಲಭ್ಯವಾಗಿರುತ್ತದೆ ಎಂದು ವೈದ್ಯರು ಗಮನ ಸೆಳೆದರು. ಆಗ ಸಚಿವರು ಮಾತನಾಡಿ, ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅನುಭವಿ ವೈದ್ಯರನ್ನು ಉಳಿಸಿಕೊಳ್ಳಲು…

Read More

ಬೆಂಗಳೂರು: ರಾಜ್ಯದ ಕಾಲೇಜು, ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವಂತ 2000 ಬೋಧಕ, ಬೋಧಕೇತರ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಡಾ.ಎಂಸಿ ಸುಧಾಕರ್ ತಿಳಿಸಿದ್ದಾರೆ. ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2,000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂಸಿ ಸುಧಾಕರ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1900181744978190451 https://kannadanewsnow.com/kannada/assembly-passes-greater-bengaluru-administration-bill-with-amendment/ https://kannadanewsnow.com/kannada/vacancies-in-health-department-to-be-filled-up-soon-minister-dinesh-gundu-rao/

Read More

ಬೆಂಗಳೂರು : ಅಗತ್ಯಕ್ಕಿಂತಲೂ ಹೆಚ್ಚು ಪ್ರಮಾಣ ಉಪ್ಪು ಸೇವನೆಯಿಂದ ಭಾರತಲ್ಲಿ ಮಕ್ಕಳು ಸಹ ಸಾಂಕ್ರಾಮಿಕೇತರ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಅಧಿಕ ಉಪ್ಪು ಸೇವನೆಯಿಂದ ಭಾರತದಲ್ಲಿ ಮಕ್ಕಳು ಸೇರಿದಂತೆ ಜನರು ನಾನಾ ರೋಗಗಳಿಗೆ ತುತ್ತಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಅದಿಕ ಉಪ್ಪು ಸೇವನೆಯಿಂದ ರಕ್ತದೊತ್ತಡಕ್ಕೆ ಒಳಗಾಗಿ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಬದಲಾದ ಜೀವನ ಶೈಲಿಯಿಂದ ಇತ್ತೀಚಿನ ದಿನಗಳಲ್ಲಿ ಅಹಾರ ಪದಾರ್ಥಗಳಲ್ಲಿನ ಅತಿಯಾದ ಕೊಬ್ಬು, ಉಪ್ಪು ಮತ್ತು ಸಕ್ಕರೆ ಸೇವನೆ ಹೆಚ್ಚಾಗಿ ಜನರ ಅರೋಗ್ಯವಂತ ಬದುಕಿನ್ನೇ ಕಸಿದುಕೊಳ್ಳುತ್ತಿವೆ.  ಗ್ಲೋಬಲ್‌ ಬರ್ಡನ್‌ ಆಫ್‌ ಡಿಸೀಸ್‌ ಸಮೀಕ್ಷೆ ಪ್ರಕಾರ ಭಾರತದಲ್ಲಿ ಅಧಿಕ ಉಪ್ಪು ಸೇವನೆಯಿಂದ ಪ್ರತಿ ವರ್ಷ 1.75 ಲಕ್ಷ ಮಂದಿ ಸಾವಿಗೀಡಾಗುತ್ತಿದ್ದಾರೆ.  ಅನಾರೋಗ್ಯಕರ ಆಹಾರ ಪದ್ಧತಿಯಿಂದ ಜನರಲ್ಲಿ ಸಾಂಕ್ರಾಮಿಕೇತರ ರೋಗಗಳು ಹೆಚ್ಚಾಗಿ ಜೀವ ಹಿಂಡುತ್ತಿವೆ.  ಆರೋಗ್ಯವಂತ ಬದುಕಿಗಾಗಿ ಯಾವುದೇ ವ್ಯಕ್ತಿ ಪ್ರತಿ ನಿತ್ಯ ಐದು ಗ್ರಾಂಗಿಂತಲೂ ಹೆಚ್ಚು ಉಪ್ಪು ಸೇವನೆ ಮಾಡಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾನದಂಡ ನಿಗದಿ ಪಡಿಸಿದೆ. ಈ ಮಾನದಂಡದ ಪ್ರಕಾರ ಮಕ್ಕಳು…

Read More