Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು : ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳಿಗೆ “ಬ್ರೇಕ್‌” ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ವಿಷಯವನ್ನು ಅರಿತ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್,…

Read More

ಬಳ್ಳಾರಿ: ಮಾಜಿ ಶಾಸಕ ಬಸವರಾಜ ದಡೇಸೂಗೂರು ನನ್ನ ಗಂಡ ಎಂಬುದಾಗಿ ಹೇಳಿದ್ದಂತ ವಿಜಯನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯ ಮೇಲೆ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ವಿಜಯನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿದ್ದರು. ಈ ವೇಳೆಯಲ್ಲಿ ಮಹಿಳಾ ಅಧಿಕಾರಿ ಶ್ವೇತಾ ಅವರ ಮೊಬೈಲ್ ಪೋನ್ ಚೆಕ್ ಮಾಡಲಾಗಿತ್ತು. ಈ ವೇಳೆ ಹಣ ವಹಿವಾಟಿನ ವಿಚಾರ ಬೆಳಕಿಗೆ ಬಂದಿತ್ತು. ಹಣದ ವಹಿವಾಟಿನ ಬಗ್ಗೆ ವಿಚಾರಿಸಿದಾಗ ನನ್ನ ಗಂಡ ಕಳಿಸಿದ್ದಾರೆ. ನನ್ನ ಗಂಡ ರಾಜಕಾರಣಿ. ನನ್ನ ಪತಿ ಮಾಜಿ ಶಾಸಕ ಬಸವರಾಜ ದಡೇಸೂಗೂರು ಎಂಬುದಾಗಿ ತಿಳಿಸಿದ್ದರು. ಮಹಿಳಾ ಅಧಿಕಾರಿ ಶ್ವೇತಾ ಈ ಉತ್ತರದಿಂದ ಉಪ ಲೋಕಾಯುಕ್ತರಿಗೆ ಸಮಾಧಾನವಾಗಿರಲಿಲ್ಲ. ಜೊತೆಗೆ ಭ್ರಷ್ಟಾಚಾರದ ಅನುಮಾನ ವ್ಯಕ್ತವಾಗಿತ್ತು. ಹೀಗಾಗಿ ಸ್ವಯಂ ಪ್ರೇರಿತ ಕೇಸ್ ದಾಖಲಿಸಿ, ತನಿಖೆಗೆ ಸೂಚಿಸಿದ್ದಾರೆ. https://kannadanewsnow.com/kannada/mandya-residential-school-student-dies-due-to-poisoning-cm-siddaramaiah-announces-compensation/ https://kannadanewsnow.com/kannada/shocking-incident-transgender-stripped-naked-shaved-off-and-assaulted-in-kalaburagi/

Read More

ಬೆಂಗಳೂರು: ಮಂಡ್ಯದಲ್ಲಿ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ವಿಷಾಹಾರ ಸೇವಿಸಿ ಸಾವನ್ನಪ್ಪಿದ್ದರ ಬಗ್ಗೆ ಸಿಎಂ ಸಿದ್ಧರಾಮಯ್ಯ ವಿಷಾದ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಪೊಲೀಸರಿಗೆ ಸೂಕ್ತ ತನಿಖೆಗೆ ಸೂಚಿಸಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು ಎಂದಿದ್ದಾರೆ. ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ಹೇಳಿದ್ದಾರೆ. ಈ ದುರ್ಘಟನೆಯಲ್ಲಿ ಮಡಿದ ಬಾಲಕನ‌ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ…

Read More

ಉತ್ತರ ಮ್ಯಾಸಿಡೋನಿಯಾದ ನೈಟ್ ಕ್ಲಬ್ ನಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿ ಸಂಗೀತ ಕಚೇರಿಗಾಗಿ 1,000 ಕ್ಕೂ ಹೆಚ್ಚು ಜನರು ಜಮಾಯಿಸಿದ್ದರು, ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸುದ್ದಿ ಸಂಸ್ಥೆ ಎಂಐಎ ತಿಳಿಸಿದೆ. ತಡರಾತ್ರಿ ಈ ದುರಂತ ಸಂಭವಿಸಿದ್ದು, ಬೆಂಕಿಯ ಜ್ವಾಲೆಗಳು ಕಿಕ್ಕಿರಿದ ಸ್ಥಳವನ್ನು ತ್ವರಿತವಾಗಿ ಆವರಿಸಿದ್ದು, ಭಾಗವಹಿಸುವವರಲ್ಲಿ ಭೀತಿ ಮತ್ತು ಗೊಂದಲಕ್ಕೆ ಕಾರಣವಾಯಿತು. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಬೆಂಕಿ ಹೊತ್ತಿಕೊಳ್ಳೋದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸುಟ್ಟ ಗಾಯಗಳಿಂದ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. https://kannadanewsnow.com/kannada/we-will-not-accept-4-reservation-for-muslims-narayanasamy/ https://kannadanewsnow.com/kannada/shocking-incident-transgender-stripped-naked-shaved-off-and-assaulted-in-kalaburagi/

Read More

ಬೆಂಗಳೂರು: ಮುಸ್ಲಿಮರಿಗೆ ಶೇ 4 ಮೀಸಲಾತಿಯನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ; ಇದನ್ನು ನಾವು ವಿರೋಧಿಸುತ್ತೇವೆ. ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಲಿದ್ದೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಕಟಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ನೀಡಿದರು. ಈಗಾಗಲೇ ಮುಸ್ಲಿಂ ಬಂಧುಗಳಿಗೆ ಶೇ 4ರಷ್ಟು ಮೀಸಲಾತಿ ಹಿಂದೆ ಇತ್ತು. ಧಾರ್ಮಿಕ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಅವಕಾಶ ಇಲ್ಲ; ಧಾರ್ಮಿಕ ಮೀಸಲಾತಿ ನೀಡಿದರೆ ಅದು ಸಂವಿಧಾನಕ್ಕೆ ವಿರುದ್ಧವಾದ ನಡೆ ಎಂದು ಪ್ರತಿಪಾದಿಸಿದರು. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದಾಗ ಧಾರ್ಮಿಕ ಮೀಸಲಾತಿಯನ್ನು ಹಿಂದಕ್ಕೆ ಪಡೆಯಲಾಗಿತ್ತು. ಕಾಂಗ್ರೆಸ್ಸಿನವರು ತಾವು ಅಧಿಕಾರಕ್ಕೆ ಬಂದರೆ ಮತ್ತೆ ಧಾರ್ಮಿಕ ಮೀಸಲಾತಿ ನೀಡುವುದಾಗಿ ಘೋಷಿಸಿದ್ದರು. ಈಗ ಗುತ್ತಿಗೆಯಲ್ಲಿ ಶೇ 4 ಮೀಸಲಾತಿಯನ್ನು ಕೊಟ್ಟಿದ್ದಾರೆ. ಇದು ಕಾನೂನುಬಾಹಿರ, ಸಂವಿಧಾನವಿರೋಧಿ ಎಂದು ಆಕ್ಷೇಪಿಸಿದರು. ನಮ್ಮ ರಾಷ್ಟ್ರೀಯ ನಾಯಕರು ಕೂಡ ಇದಕ್ಕೆ ಉತ್ತರ ನೀಡಿದ್ದಾರೆ. ಜೈನರು…

Read More

ಬೆಂಗಳೂರು: ಅಟ್ಲಾಂಟಿಕ್ ಮಹಾಸಾಗರ ದಾಟಿ ದಾಖಲೆ ನಿರ್ಮಿಸಿದ ರಾಷ್ಟ್ರಕವಿ ಜಿಎಸ್ಎಸ್ ಮೊಮ್ಮಗಳಾದಂತ ಅನನ್ನಯ ಪ್ರಸಾದ್ ಸಾಧನೆಗೆ ಸಿಎಂ ಸಿದ್ಧರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಅಟ್ಲಾಂಟಿಕ್ ಮಹಾಸಾಗರವನ್ನು ಸತತ 52 ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡುತ್ತಾ ದಾಟಿ ಹೊಸದೊಂದು ದಾಖಲೆ ನಿರ್ಮಿಸಿದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಮೊಮ್ಮಗಳು ಅನನ್ಯ ಪ್ರಸಾದ್ ಅವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದರು. ಅನಾಥ ಮಕ್ಕಳಿಗೆ ಶಿಕ್ಷಣ ನೀಡುವ ಚಾಮರಾಜನಗರ – ರಾಮಸಮುದ್ರದ ದೀನಬಂಧು ಶಾಲೆಯ ಮಕ್ಕಳ ಭವಿಷ್ಯಕ್ಕಾಗಿ ಇಂಥದ್ದೊಂದು ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿರುವ ಅನನ್ಯ ಪ್ರಸಾದ್‌ ಅವರ ಕಾಳಜಿಯನ್ನು ಮೆಚ್ಚಿ ಮುಖ್ಯಮಂತ್ರಿಗಳು ಮನಸ್ಪೂರ್ತಿಯಾಗಿ ಶ್ಲಾಘಿಸಿದರು. https://kannadanewsnow.com/kannada/psi-slaps-bjp-leader-in-the-middle-of-the-road/ https://kannadanewsnow.com/kannada/breaking-shivamogga-woman-dies-of-electrocution-while-starting-motor/

Read More

ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಗಾದಿಲಿಂಗಪ್ಪ ಮತ್ತು ಮಧುಗಿರಿ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಹನುಮಂತೇಗೌಡ ನಡುವೆ ಶುಕ್ರವಾರ ತಡರಾತ್ರಿ ನಗರದ ಖಾಸಗಿ ಹೋಟೆಲ್ ಬಳಿ ನಡೆದ ಗಲಾಟೆ ರಾಜಕೀಯ ತಿರುವು ಪಡೆದುಕೊಂಡಿದ್ದು, ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ. ಮಾರ್ಚ್ 14ರಂದು ತಡರಾತ್ರಿ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ಹನುಮಂತೇಗೌಡ ಮತ್ತು ಅವರ ಬೆಂಬಲಿಗರು ಗುಂಪು ಗುಂಪಾಗಿ ನಿಂತಿದ್ದರು. ರಾತ್ರಿ ಗಸ್ತು ತಿರುಗುತ್ತಿದ್ದ ಸಬ್ ಇನ್ಸ್ ಪೆಕ್ಟರ್ ಗಾದಿಲಿಂಗಪ್ಪ ಅವರು ಗುಂಪನ್ನು ಪ್ರಶ್ನಿಸಿದ್ದಾರೆ. ಹನುಮಂತೇಗೌಡ ಅವರು ಆ ರಾತ್ರಿ ಊಟಕ್ಕೆ ಹೋಟೆಲ್ ಗೆ ಬಂದಿದ್ದರು ಎಂದು ಹೇಳಿದರು. ನಂತರ, ಅವರಿಬ್ಬರೂ ಮಾತಿನ ಚಕಮಕಿಗೆ ಇಳಿದರು. ಇಬ್ಬರೂ ತಾಳ್ಮೆ ಕಳೆದುಕೊಂಡರು ಮತ್ತು ಪರಸ್ಪರ ಹಲ್ಲೆ ನಡೆಸಿದರು ಮತ್ತು ಪರಸ್ಪರ ನಿಂದಿಸಿದರು. ಈ  ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. https://twitter.com/HateDetectors/status/1900882063731159139 ಈ ಘಟನೆಯಲ್ಲಿ ಸಬ್ ಇನ್ಸ್ಪೆಕ್ಟರ್ ಗಾದಿಲಿಂಗಪ್ಪ ಅವರಿಗೆ ಗಾಯವಾಗಿದೆ. ವಾಗ್ವಾದದಲ್ಲಿ ತೊಡಗಿದ್ದ…

Read More

ಬೆಂಗಳೂರು: “ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,‌ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ. ಈ ಹಿಂದೆ ಪರಿಶಿಷ್ಟ ಜಾತಿ,‌ ಪಂಗಡವರಿಗೆ ಗುತ್ತಿಗೆ ಮೀಸಲಾತಿ ನೀಡುವಂತೆ ತಿದ್ದುಪಡಿ ಮಾಡಿದ್ದೆವು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇ.4 ರಷ್ಟು ಮೀಸಲಾತಿ ನೀಡಲು ಮಾಡಿರುವ ತೀರ್ಮಾನದ ಬಗ್ಗೆ ಕೇಳಿದಾಗ, “ಕೇವಲ 2 ಕೋಟಿ ಮೊತ್ತಕ್ಕೆ ಮಾತ್ರ ಒಪ್ಪಿಗೆ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಮೊತ್ತದ‌‌ ಕಾಮಗಾರಿ ನಡೆಸಲು ಸಾಧ್ಯವಿಲ್ಲ. ನಾವು ಬೇರೆ ಯಾರ ಹಕ್ಕನ್ನು ಇಲ್ಲಿ ಕಸಿದುಕೊಳ್ಳುತ್ತಿಲ್ಲ‌ ಅವರಿಗೂ ನಾವು ಬದುಕು ಕೊಡಬೇಕಲ್ಲವೇ?” ಎಂದು ಹೇಳಿದರು. ಬಿಜೆಪಿಯು ಗುತ್ತಿಗೆ ಮೀಸಲಾತಿಯನ್ನು ಮತ ಬ್ಯಾಂಕ್ ರಾಜಕಾರಣ ಎನ್ನುತ್ತಿದೆ ಎಂದಾಗ, “ಅವರು ನಮ್ಮನ್ನು ನೆನಪಿಸಿಕೊಳ್ಳುತ್ತಾ ಇರಬೇಕು.‌ಆಗಲೇ ನಾವು ಗಟ್ಟಿಯಾಗವುದು” ಎಂದರು. ಕಸ ವಿಲೇವಾರಿ ವಿಚಾರದಲ್ಲಿ…

Read More

ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಬಂಧನವಾಗಿದೆ. ಈ ಕೇಸ್ ನಂತ್ರ ಡಿಜಿಪಿ ಡಾ.ರಾಮಚಂದ್ರ ರಾವ್ ಅವರ ವಿರುದ್ಧವೂ ಈ ಪ್ರಕರಣದಲ್ಲಿ ಭಾಗಿಯಾಗಿರೋ ಆರೋಪ ಕೇಳಿ ಬಂದಿತ್ತು. ಹೀಗಾಗಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಕಡ್ಡಾಯ ರಜೆ’ ಮೇಲೆ ಕಳುಹಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಐಪಿಎಸ್ ಅಧಿಕಾರಿ ಕೆವಿ ಶರತ್ ಚಂದ್ರ ಅವರನ್ನು ಎಡಿಜಿಪಿ, ನೇಮಕಾತಿಯಿಂದ ವರ್ಗಾವಣೆ ಮಾಡಿ, ಛೇರ್ ಮೆನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್, ಕರ್ನಾಟಕ ರಾಜ್ಯ ಪೊಲೀಸ್ ಹೌಸಿಂಗ್ ಮತ್ತು ಇನ್ಫಾಸ್ಟ್ರಕ್ಚರ್ ಡೆಲವೆಲಪ್ ಮೆಂಟ್ ಕಾರ್ಪೊರೇಷನ್ ಲಿಮಿಟೆಡ್, ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ. ಇನ್ನೂ ಈ ಹುದ್ದೆಯಲ್ಲಿದ್ದಂತ ಐಪಿಎಸ್ ಅಧಿಕಾರಿ ಡಾ.ಕೆ ರಾಮಚಂದ್ರ ರಾವ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯ ರಾವ್ ಬಂಧನದ ಬಗ್ಗೆ ಆಘಾತ ಮತ್ತು ವಿನಾಶವನ್ನು ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದ ಮಹಾನಿರ್ದೇಶಕ (ಕರ್ನಾಟಕ…

Read More

ಬೆಂಗಳೂರು: ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸುವ ಮೂಲಕ ತಮ್ಮ ಆರೋಗ್ಯದ ಕಾಳಜಿ ವಹಿಸವಂತೆ ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಅಲ್ಲದೆ ಮಾರ್ಚ್ ಯಿಂದ ಮೇ ವರೆಗೆ ವಾತಾರವಣದಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ. ಇದರಿಂದಾಗಿ ವಾತಾವರಣದಲ್ಲಿ ಅನೇಕ ರೀತಿಯ ಬದಲಾವಣೆ ಉಂಟಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಜಿಲ್ಲೆಯ ಜನರು ತಮ್ಮ ಆರೋಗ್ಯದÀ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾಗಿದೆ. ದಿನೇ ದಿನೇ ಸಾರ್ವಜನಿಕರು ಕೆಲಸದ ಒತ್ತಡದ ಜೊತೆಗೆ ಬಿಸಿಲಿನ ಬೇಗೆಯನ್ನು ಸಹಿಸಿಕೊಳ್ಳದ ಸ್ಥಿತಿಗೆ ತಲುಪಿದ್ದಾರೆ. ಇದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗುತ್ತಿದ್ದಾರೆ. ಈ ಸಂದರ್ಭದಲ್ಲಿ ಸಾಮಾನ್ಯವಾಗಿ ಮನುಷ್ಯನ ದೇಹದ ಉಷ್ಣತೆಯು 36.4 ಡಿಗ್ರಿ ಸೆ ನಿಂದ 37.2 ಡಿಗ್ರಿ ಸೆ( 97.5 ಡಿಗ್ರಿ ಸೆ ಎಫ್ ನಿಂದ 98.9…

Read More