Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಕೆಎಎಸ್ ಅಧಿಕಾರಿ ಸಿ.ಎನ್ ಮಂಜುನಆಥ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿದೆ. ಇಂದು ಸಹಕಾರ ಇಲಾಖೆಯ ಸರ್ಕಾರದ ಅಧೀನ ಅಧಿಕಾರಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಲು ಕೋರಿರುತ್ತಾರೆ ಎಂದು ಹೇಳಿದ್ದಾರೆ. ಮೇಲ್ಕಂಡ ಅಂಶಗಳನ್ನು ಪರಿಶೀಲಿಸಲಾಗಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬೆಂಗಳೂರು, ಈ ಸಂಘವು ಬೃಹತ್ ಸಂಘವಾಗಿದ್ದು, ಸಂಘದ ಆಡಳಿತ ಮಂಡಳಿ ಅವಧಿ ಮುಗಿದಿರುವುದರಿಂದ ಸಂಘದ ಸದಸ್ಯರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯನ್ನು ನೇಮಿಸಲು ಸರ್ಕಾರವು ತೀರ್ಮಾನಿಸಿದೆ, ಅದರಿಂದ ಈ ಆದೇಶಿಸಿದ್ದಾರೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960 ರ ಕಲಂ 27-ಎ ರನ್ವಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು-560001, ಈ ಸಂಘಕ್ಕೆ ಶ್ರೀ. ಸಿ.ಎನ್. ಮಂಜುನಾಥ್, ಕೆ.ಎ.ಎಸ್(ಆಯ್ಕೆ ಶ್ರೇಣಿ), ಪ್ರಧಾನ ವ್ಯವಸ್ಥಾಪಕರು, ಆಹಾರ…
ಬೆಂಗಳೂರು: ಬೆಂಗಳೂರು ನಗರದ ಹೆಸರುಘಟ್ಟ ಹುಲ್ಲುಗಾವಲಿನ ಪ್ರದೇಶವನ್ನು “ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ” ಎಂದು ಘೋಷಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆ ಅಂಗೀಕಾರ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಸಭೆಯ ಬಳಿಕ ಸುದ್ದಿಗಾರರಿಗೆ ವಿವರ ನೀಡಿದ ಅವರು, ಹೆಸರಘಟ್ಟವನ್ನು ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿತ್ತು. ಈ ಬಗ್ಗೆ ಆಂದೋಲನವೂ ನಡೆದಿತ್ತು. ಪ್ರಕೃತಿ ಪರಿಸರ ಸಂರಕ್ಷಣೆಗೆ ಶ್ರಮಿಸುತ್ತಿರುವ ಸರ್ಕಾರ ಇಂದು ಈ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದರು. 2021ರ ಜನವರಿ 19ರಂದು ನಡೆದಿದ್ದ 15ನೇ ರಾಜ್ಯ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಈ ಪ್ರಸ್ತಾಪ ತಿರಸ್ಕರಿಸಲಾಗಿತ್ತು. ರಾಜ್ಯ ಹೈಕೋರ್ಟ್ ಈ ಕುರಿತು ಪುನರ್ ನಿರ್ಣಯ ಕೈಗೊಳ್ಳುವಂತೆ ಸೂಚಿಸಿತ್ತು. ಬೆಂಗಳೂರು ಕಾಂಕ್ರೀಟ್ ಕಾಡಾಗಿ ಮಾತ್ರ ಬೆಳೆಯದೆ, ಹಚ್ಚ ಹಸುರಿನ ತಾಣವಾಗಿಯೂ ಉಳಿಯಬೇಕು ಎಂಬ ಮಹತ್ವದ ಉದ್ದೇಶದಿಂದ ನಮ್ಮ ಸರ್ಕಾರ…
ಬೆಂಗಳೂರು : ಕಪ್ಪತ್ತಗುಡ್ಡ ವನ್ಯಜೀವಿಧಾಮದ 10 ಕಿ.ಮೀ ವ್ಯಾಪ್ತಿಯಲ್ಲಿನ ಗಣಿಗಾರಿಕೆ ಪ್ರಸ್ತಾವನೆಗಳಿಗೆ ಅವಕಾಶ ಕೋರಿದ್ದ ಒಟ್ಟು 28 ಪ್ರಸ್ತಾವನೆಗಳನ್ನು ಮುಂದೂಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆ ನಿರ್ಧರಿಸಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಸಭೆಯ ಬಳಿಕ ಸುದ್ದಿಗಾರರಿಗೆ ವಿವರ ನೀಡಿದ ಅವರು, 16ನೇ ರಾಜ್ಯ ವನ್ಯಜೀವಿ ಮಂಡಳಿಯಲ್ಲಿ ಈ ಕುರಿತು ಚರ್ಚಿಸಿ ಕಪ್ಪತ್ತಗುಡ್ಡ ವನ್ಯಜೀವಿಧಾಮದ 1 ಕಿ.ಮೀ ವ್ಯಾಪ್ತಿಯಲ್ಲಿ ಚಾಲನೆಯಲ್ಲಿರುವ ಅನಧಿಕೃತ ಗಣಿಗಾರಿಕೆಗಳಿಗೆ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ನೋಟೀಸ್ ನೀಡುವಂತೆ ಸೂಚಿಸಲಾಗಿತ್ತು. ಈ ಬಗ್ಗೆ ಪರಿಶೀಲಿಸಿ, ಅನಧಿಕೃತ ಗಣಿಗಾರಿಕೆಗಳ ಕುರಿತು ವಾಸ್ತವಾಂಶದ ವರದಿ ನೀಡುವಂತೆ ಮತ್ತು ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು ಕಾನೂನಿನ ಅಂಶಗಳನ್ನು ಒಳಗೊಂಡ ವರದಿಯೊಂದಿಗೆ ಮೇಲ್ಕಂಡ ಪ್ರಸ್ತಾವನೆಗಳನ್ನು ಮುಂದಿನ ರಾಜ್ಯ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಮರು ಮಂಡಿಸಲು ಸೂಚಿಸಲಾಗಿತ್ತು. ಅದರಂತೆ ಇಂದು ಈ ಪ್ರಸ್ತಾಪ ಮಂಡನೆಯಾಯಿತು. ಆದರೆ ಈ ಪ್ರಸ್ತಾವನೆ ಮುಂದೂಡಲುಇರುವ ತೀರ್ಮಾನಿಸಲಾಯಿತು…
ಬೆಂಗಳೂರು: ಇಂದು ನಮಗೆ ಸಾಮಾಜಿಕವಾಗಿ ಬೇಕಾಗಿರುವುದು ‘ಚಾಯ್ ಪೇ ಚರ್ಚಾ’ದಂತಹ ಬೀಡಾಡಿ ಚರ್ಚೆಗಳಲ್ಲ, ನಮ್ಮೆಲ್ಲರನ್ನು ಬೆಸೆಯುವಂತಹ, ಚಿಂತನೆಗೆ ಹಚ್ಚುವಂತಹ ಆಹಾರ ಸಂಸ್ಕೃತಿಯಂತಹ ಮೌಲಿಕ ಚರ್ಚೆಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಎಕ್ಸ್ ನಲ್ಲಿ ರಾಹುಲ್ ಗಾಂಧಿಯವರ ವೀಡಿಯೋವೊಂದನ್ನು ಶೇರ್ ಮಾಡಿರುವಂತ ಅವರು, ದಲಿತರ ಊಟದೆಡೆಗೆ ಅವಜ್ಞೆಯಷ್ಟೇ ಅಲ್ಲ, ತೀವ್ರ ಅಸಹನೆಯನ್ನೂ ಬೆಳೆಸಿಕೊಂಡಿರುವ ಸಮಾಜ ನಮ್ಮದು. ದಲಿತರ ಕೈಯಿಂದ ತಯಾರಿಸಿದ ಅಡುಗೆಯ ಸೇವನೆ ಇರಲಿ, ಅವರು ಊಟಕ್ಕೆ ಬಳಸುವ ಪಾತ್ರೆ ಮುಟ್ಟಿದರೂ ಅದನ್ನು ಮೈಲಿಗೆ ಎಂದು ಕರೆಯುವ ಮನಸ್ಥಿತಿ ಇಂದಿಗೂ ನಮ್ಮಲ್ಲಿ ವ್ಯಾಪಕವಾಗಿದೆ ಎಂದಿದ್ದಾರೆ. ಶಾಲೆಗಳಲ್ಲಿ ದಲಿತ ಸಮುದಾಯದವರು ಅಡುಗೆ ಮಾಡಿದರೆ ಅದನ್ನು ವಿರೋಧಿಸುವುದು, ಜಾತ್ರೆ, ದೇವಸ್ಥಾನಗಳ ಅಡುಗೆಯ ಉಸ್ತುವಾರಿಯಿಂದ ದಲಿತರನ್ನು ಪ್ರಜ್ಞಾಪೂರ್ವಕವಾಗಿ ಕೈ ಬಿಡುವುದು ಅಥವಾ ದೂರವಿರಿಸುವುದು ಇವೆಲ್ಲವನ್ನು ನಮ್ಮ ಸಮಾಜದಿಂದ ಇಂದಿಗೂ ತೊಡೆಯಲಾಗಿಲ್ಲ ಎಂದು ಹೇಳಿದ್ದಾರೆ. ಆಹಾರವೆನ್ನುವುದು ಅವರವರ ರುಚಿ, ಇಚ್ಛೆಗೆ ಅನುಸಾರವಾಗಿಯೇ ಇರುವುದಾದರೂ, ತಳ ಸಮುದಾಯಗಳ ಆಹಾರ ಸಂಸ್ಕೃತಿಯನ್ನು ಕೀಳಾಗಿ ಕಾಣುವ ಕೊಳಕು ಮನಸ್ಥಿತಿಯನ್ನು ಬೇರು ಸಹಿತ ಕಿತ್ತು…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಯುಜಿ ಸಿಇಟಿ 2024ರ 2ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕೆಇಎ, UGCET-24 ಎರಡನೇ ವಿಸ್ತೃತ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶದ ಲಿಂಕ್ ಅನ್ನು KEA ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಹರು ಸೀಟು ಹಂಚಿಕೆ ಬಗ್ಗೆ ಮಾಹಿತಿ ಪಡೆಯಬಹುದು. ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದೆ. ಈ ಸಂಬಂಧದ ಹೆಚ್ಚಿನ ಮಾಹಿತಿಗಾಗಿ ಯುಜಿ ಸಿಇಟಿ ಪರೀಕ್ಷೆ ಬರೆದಂತ ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣ cetonline.karnataka.gov.in/kea/ ಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ. https://twitter.com/KEA_karnataka/status/1843297272878264600 https://kannadanewsnow.com/kannada/good-news-for-kannadigas-railways-recruitment-2019-railways-recruitment-2019-notification-for-12-lakh-vacancies/ https://kannadanewsnow.com/kannada/waqf-board-property-doesnt-belong-to-anyone-mr-yatnal-its-a-donation-from-donors-minister-jamir/
ವಿಜಯಪುರ : ವಖ್ಫ್ ಬೋರ್ಡ್ ಆಸ್ತಿ ಯಾರಪ್ಪನದು ಅಲ್ಲ, ಮಿಸ್ಟರ್ ಯತ್ನಾಳ್. ಅದು ದಾನಿಗಳು ಸಮುದಾಯಕ್ಕೆ ಕೊಟ್ಟಿರುವ ದಾನ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ವಿಜಯಪುರದಲ್ಲಿ ವಖ್ಫ್ ಅದಾಲತ್ ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಖ್ಫ್ ಆಸ್ತಿ ಸರ್ಕಾರದಿಂದ ಪಡೆದಿಲ್ಲ, ಬದಲಿಗೆ ಸರ್ಕಾರಿ ಸಂಸ್ಥೆ ಗಳೇ ವಖ್ಫ್ ಆಸ್ತಿ ಒತ್ತುವರಿ ಮಾಡಿವೆ. ಖಬರಸ್ಥಾನಕ್ಕೆ ಹೊರತು ಪಡಿಸಿ ವಖ್ಫ್ ಬೋರ್ಡ್ ಗೆ ಸರ್ಕಾರ ಜಮೀನು ಕೊಟ್ಟಿಲ್ಲ. ವ್ಯವಸ್ಥಿತ ವಾಗಿ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲು ಹೋಗಬೇಡಿ ಎಂದು ತಿಳಿಸಿದರು. ವಿಜಯಪುರದಲ್ಲಿ ಬೇರೆ ಯವರಿಗೆ ಸೇರಿದ ಆಸ್ತಿ ಗೆಲ್ಲಾ ಖಾತೆ ಮಾಡಿಸಿಕೊಳ್ಳಲು ಜಮೀರ್ ಅಹಮದ್ ಬರುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವೇದಿಕೆಯಲ್ಲಿ ಮಾತನಾಡುತ್ತಾ ನೇರವಾಗಿ ತರಾಟೆಗೆ ತೆಗೆದುಕೊಂಡ ಸಚಿವರು, ವಖ್ಫ್ ಆಸ್ತಿ ನಿಮ್ಮಪ್ಪ ನದೂ ಅಲ್ಲ, ನಮ್ಮಪ್ಪನ ದು ಅಲ್ಲ. ಸಮುದಾಯದ ಒಳಿತಿಗಾಗಿ ದಾನಿಗಳು ಕೊಟ್ಟ ದೇವರ ಆಸ್ತಿ…
ನವದೆಹಲಿ : ಉಪಗ್ರಹ ಸಂವಹನಕ್ಕಾಗಿ ಸ್ಪೆಕ್ಟ್ರಮ್ ಹಂಚಿಕೆಗೆ ಸಂಬಂಧಿಸಿದಂತೆ ಪರಿಷ್ಕೃತ ಸಮಾಲೋಚನಾ ಪತ್ರವನ್ನು ನೀಡುವಂತೆ ರಿಲಯನ್ಸ್ ಜಿಯೋ ಕಂಪನಿಯು ಟೆಲಿಕಾಂ ನಿಯಂತ್ರಕ ‘ಟ್ರಾಯ್’ಗೆ ಒತ್ತಾಯಿಸಿದೆ. ಉಪಗ್ರಹ ಮತ್ತು ಭೂ ಸೇವೆಗಳ ನಡುವೆ ಸಮಾನ ಅವಕಾಶವನ್ನು ಖಾತರಿಪಡಿಸುವ ಪ್ರಮುಖ ಅಂಶಗಳನ್ನು ವರದಿಯಲ್ಲಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸುವ ಮೂಲಕ ಪರಿಷ್ಕೃತ ಪತ್ರ ನೀಡಿವಂತೆ ಕಂಪನಿ ಕೇಳಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (ಟ್ರಾಯ್) ಅಧ್ಯಕ್ಷ ಅನಿಲ್ ಕುಮಾರ್ ಲಹೋಟಿ ಅವರಿಗೆ ಕಂಪನಿ ಪತ್ರ ಬರೆದಿದ್ದು, ‘ಕೆಲವು ಉಪಗ್ರಹ ಆಧಾರಿತ ವಾಣಿಜ್ಯ ಸಂವಹನ ಸೇವೆಗಳಿಗೆ ಸ್ಪೆಕ್ಟ್ರಮ್ ನಿಯೋಜನೆ ಮಾಡುವ ಸಂಬಂಧ ನಿಯಮಗಳು ಮತ್ತು ಷರತ್ತುಗಳಿಗೆ’ ನಿಯಮಗಳನ್ನು ಶಿಫಾರಸು ಮಾಡುವ ಸಮಾಲೋಚನಾ ಪತ್ರವನ್ನು ಪರಿಷ್ಕರಿಸುವಂತೆ ಕೋರಿದೆ. ಉಪಗ್ರಹ ಆಧಾರಿತ ಮತ್ತು ಭೂ ಪ್ರದೇಶ ಸೇವೆಗಳ ನಡುವೆ ಸಮಾನ ಅವಕಾಶವನ್ನು ಖಚಿತಪಡಿಸಿಕೊಳ್ಳುವ ನಿರ್ಣಾಯಕ ವಿಷಯವನ್ನು ಸಮಾಲೋಚನಾ ಪತ್ರವು ಸಂಪೂರ್ಣವಾಗಿ ಕಡೆಗಣಿಸಿದೆ ಎನ್ನುವುದು ನಮಗೆ ಆಶ್ಚರ್ಯವಾಗಿದೆ. ಈ ಲೋಪವು ಈ ಸೇವೆಗಳ ನಡುವೆ ಸಮಾನ ಅವಕಾಶವನ್ನು ರೂಪಿಸುವ ಅಗತ್ಯವನ್ನು ಪರಿಹರಿಸುವ…
ಮಂಡ್ಯ: ಕುಮಾರಸ್ವಾಮಿ ಏನು ಜ್ಯೋತಿಷ್ಯ ಹೇಳ್ತಾರಾ? ಜ್ಯೋತಿಷ್ಯ ಹೇಳೋದಾದ್ರೆ ಕೇಳಿ ನಮ್ಮ ಜ್ಯೋತಿಷ್ಯನು ಕೇಳ್ತಿವಿ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಗ್ಗೆ ಸಚಿವ ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಂಡ್ಯದ ಮದ್ದೂರಿನ ತರಮ್ಮನಕಟ್ಟೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಗೃಹ ಸಚಿವ ಪರಮೇಶ್ವರ್ -ಸತೀಶ್ ಜಾರಕಿಹೋಳಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು, ಸೀನಿಯರ್ ಲೀಡರ್ ಅನ್ನು ಭೇಟಿ ಮಾಡಬಾರದ.? ಯಾರು ಯಾರನ್ನು ಭೇಟಿ ಮಾಡಬಾರದು ಅಂತ ನಿಗಧಿ ಮಾಡಕ್ಕಾಗುತ್ತಾ? ಎಂದು ಪ್ರಶ್ನಿಸಿದರು. ಅವಧಿಗೂ ಮುನ್ನ ಚುನಾವಣೆ ಹೆಚ್ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು, ಕುಮಾರಸ್ವಾಮಿ ಏನು ಜ್ಯೋತಿಷ್ಯ ಹೇಳ್ತಾರಾ? ಜ್ಯೋತಿಷ್ಯ ಹೇಳೋದಾದ್ರೆ ಕೇಳಿ ನಮ್ಮ ಜ್ಯೋತಿಷ್ಯನು ಕೇಳ್ತಿವಿ. ಅವರು ಯಾವತ್ತಾದ್ರು ಪೂರ್ಣ ಪ್ರಮಾಣದ ಸರ್ಕಾರ ಮಾಡಿದ್ರಾ? ಅನುಭವ ಇಲ್ಲ ಅದಕ್ಕೆ ಆತರ ಅಂತಾರೆ ಅಷ್ಟೆ. ಯಾವ ಸರ್ಕಾರ ಬಂದ್ರು ಅವರಿಗೆ ಅಧಿಕಾರ ಸಿಕ್ಕುದ್ರುನು ಪೂರ್ಣ ಅವಧಿಯನ್ನ ಮುಗಿಸೋಕೆ ಯಾವತ್ತು ರೆಡಿ ಇಲ್ಲ. ಅವರು ಜ್ಯೋತಿಷ್ಯ ಹೇಳೋದಾದ್ರೆ ಹೇಳಿ ನಮ್ಮವರು ಇದ್ದಾರೆ ಒಳ್ಳೆಯ ಜ್ಯೋತಿಷ್ಯ…
ಗುರುಗ್ರಾಮ: ಜೊಮಾಟೊ ಸಿಇಒ ದೀಪಿಂದರ್ ಗೋಯಲ್ ಅವರು ಒಂದು ದಿನದ ಮಟ್ಟಿಗೆ ಡೆಲಿವರಿ ಏಜೆಂಟ್ ಆಗಿ ಮಾರ್ಪಟ್ಟಿದ್ದರು, ಆದರೆ ಆರ್ಡರ್ ಸಂಗ್ರಹಿಸುವಾಗ ಗುರುಗ್ರಾಮದ ಪ್ರಮುಖ ಮಾಲ್ ಅಥವಾ ಮಾಲ್ ಲಿಫ್ಟ್ಗೆ ಪ್ರವೇಶವನ್ನು ನಿರಾಕರಿಸಿದ ನಂತರ ಅವರ ಅನುಭವವು ಸುಗಮವಾಗಿ ಸಾಗಲಿಲ್ಲ. ಉಪಾಹಾರ ಗೃಹದಿಂದ ವಿತರಣಾ ಪ್ಯಾಕೇಜ್ ಪಡೆಯಲು ಅವರು ಮತ್ತೊಂದು ಪ್ರವೇಶದ್ವಾರದಿಂದ ಮೆಟ್ಟಿಲುಗಳನ್ನು ಹತ್ತಬೇಕಾಯಿತು. ಡೆಲಿವರಿ ಏಜೆಂಟರು ಎದುರಿಸುತ್ತಿರುವ ಸವಾಲುಗಳ ಮೊದಲ ಅನುಭವವನ್ನು ಪಡೆಯಲು ಗೋಯಲ್ ಮತ್ತು ಅವರ ಪತ್ನಿ ಗ್ರೇಸಿಯಾ ಮುನೋಜ್ ವಿತರಣಾ ಕಾರ್ಯನಿರ್ವಾಹಕರ ಪಾತ್ರವನ್ನು ವಹಿಸಿಕೊಂಡರು. ಜೊಮ್ಯಾಟೊ ಡೆಲಿವರಿ ಸಮವಸ್ತ್ರ ಧರಿಸಿದ ಗೋಯಲ್ ಗುರುಗ್ರಾಮದ ಆಂಬಿಯನ್ಸ್ ಮಾಲ್ಗೆ ಪ್ರವೇಶಿಸಿದಾಗ, ಭದ್ರತಾ ಸಿಬ್ಬಂದಿ ಅವರನ್ನು ತಡೆದು ಮತ್ತೊಂದು ಪ್ರವೇಶದ್ವಾರವನ್ನು ತೆಗೆದುಕೊಳ್ಳುವಂತೆ ಹೇಳಿದರು. ಘಟನೆಗಳ ಅನುಕ್ರಮದ ವೀಡಿಯೊವನ್ನು ಪೋಸ್ಟ್ ಮಾಡಿದ ಗೋಯಲ್, ಮಾಲ್ಗಳು ವಿತರಣಾ ಏಜೆಂಟರ ಬಗ್ಗೆ ಹೆಚ್ಚು ಮಾನವೀಯವಾಗಿರಬೇಕು. ಅವರ ಪರಿಸ್ಥಿತಿಗಳನ್ನು ಸುಧಾರಿಸಲು ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಗಮನಸೆಳೆದರು. “ನನ್ನ ಎರಡನೇ ಆದೇಶದ ಸಮಯದಲ್ಲಿ, ಎಲ್ಲಾ ವಿತರಣಾ ಪಾಲುದಾರರಿಗೆ…
ಬೆಂಗಳೂರು: ಇ-ಖಾತಾ ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಬರುವ ಅಗತ್ಯ ಇಲ್ಲ. ಬದಲಾಗಿ ಮನೆಯಿಂದಲೇ ಇ-ಖಾತಾ ಡೌನ್ಲೋಡ್ ಮಾಡಿಕೊಳ್ಳಬಹುದು ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬೆನ್ನಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಬೆಂಗಳೂರಿನಲ್ಲಿ 21 ಲಕ್ಷ ನಿವೇಶನಗಳಿವೆ. ಈ ನಿವೇಶನಗಳ ಡ್ರಾಪ್ಟ್ಗಳನ್ನು ಬಿಬಿಎಂಪಿ ಈಗಾಗಲೇ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. ಆಸ್ತಿ ಮಾಲೀಕರು ಈ ಡ್ರಾಪ್ಟ್ ಗಳನ್ನು ನೋಡಿ, ಅಗತ್ಯ ದಾಖಲೆಗಳನ್ನು ವೆಬ್ಸೈಟ್ ನಲ್ಲೇ ಲಗತ್ತಿಸುವ ಮೂಲಕ ಯಾವುದೇ ಕಚೇರಿಗೆ ಹೋಗದೆ ಮನೆಯಿಂದಲೇ ಶಾಶ್ವತ ಇ-ಖಾತಾ ಪಡೆದುಕೊಳ್ಳಬಹುದು” ಎಂದು ಅವರು ತಿಳಿಸಿದರು. ಇ-ಖಾತಾ ಹೆಲ್ಪ್ ಡೆಸ್ಕ್ ಇ-ಖಾತಾ ಪಡೆಯುವ ಸಂಬಂಧ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆ ಗಮನದಲ್ಲಿದ್ದು, ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಲ್ಪ್ ಡೆಸ್ಕ್ ಗಳನ್ನು ತೆರೆಯುವ ಮೂಲಕ ಸರ್ಕಾರವೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಈ ಬಗ್ಗೆ ಮಾಹಿತಿ ನೀಡಿದ…











