Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಇಂದು ನಗರದ ಕೆ ಎಸ್ ಆರ್ ಟಿ ಸಿ ಕೇಂದ್ರ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಕೊಪ್ಪಳದ ಪದ್ಮಶ್ರೀ ಪುರಸ್ಕೃತ ಖ್ಯಾತ ಹಾಡುಗಾರ್ತಿ ಭೀಮವ್ವ ದೊಡ್ಡಬಾಳಪ್ಪ ಅವರಿಗೆ ಸನ್ಮಾನಿಸಲಾಯಿತು. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಅವರು ಇಂದು ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದರು. ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ ಪ್ರಾಶಸ್ತ್ಯ ನೀಡಲಾಗುತ್ತಿದೆ. ಮಹಿಳಾ ಸಮಾನತೆ, ಸಬಲೀಕರಣ ಎಂಬುದನ್ನು ನಮ್ಮಲ್ಲಿ ಅಕ್ಷರಶಃ ಕಾಣಬಹುದಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಉಪಾಧ್ಯಕ್ಷ ರಿಜ್ವಾನ್ ನವಾಬ್ ಅವರು…
ಗದಗ: ರಾಜ್ಯದಲ್ಲಿ ಕುರಿಗಳಿಗೆ ನಿಗೂಢ ರೋಗವೊಂದು ಕಾಣಿಸಿಕೊಂಡಿದೆ. ಈ ಖಾಯಿಲೆಯಿಂದಲೇ ಗದಗದಲ್ಲಿ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದಾವೆ. ಕುರಿಗಳ ನಿಗೂಢ ಸಾವಿನಿಂದಾಗಿ ಕುರಿಗಾಯಿಗಳು ಆತಂತಕಕ್ಕೆ ಒಳಗಾಗುವಂತೆ ಮಾಡಿದೆ. ಗದಗದಲ್ಲಿ ಪೋಮಪ್ಪ ಲಮಾಣಿ ಎಂಬುವರಿಗೆ ಸೇರಿದಂತೆ 60 ಕುರಿಗಳಲ್ಲಿ 20ಕ್ಕೂ ಹೆಚ್ಚು ಕುರಿಗಳು ದಿಢೀರ್ ಅಸ್ವಸ್ಥಗೊಂಡು ಸಾವನ್ನಪ್ಪಿವೆ. ಕುರಿಗಳ ನಿಗೂಢ ಸಾವಿಗೆ ಕಾರಣ ಏನು ಎಂಬುದು ತಿಳಿದು ಬಂದಿದಲ್ಲ. ಈ ವಿಷಯ ತಿಳಿದು ಕುರಿಗಾಯಿ ಪೋಮಪ್ಪ ಲಮಾಣಿ ಅವರ ಮನೆಗೆ ಪಶು ವೈದ್ಯಾಧಿಕಾರಿಗಳು ಬೇಡಿ ನೀಡಿ, ಸಾವನ್ನಪ್ಪಿರುವಂತ ಕುರಿಗಳ ಮಾದರಿಯನ್ನು ಸಂಗ್ರಹಿಸಿದ್ದಾರೆ. ಆ ಬಳಿಕ ಸಂಗ್ರಹಿಸಿದಂತ ಮಾದರಿಯನ್ನು ಪರೀಕ್ಷೆಗಾಗಿ ಲ್ಯಾಬ್ ಗೆ ಕಳುಹಿಸಿಕೊಡಲಾಗಿದೆ. ಈ ಲ್ಯಾಬ್ ರಿಪೋರ್ಟ್ ಬಂದ ನಂತ್ರವೇ ಕುರಿಗಳ ಸಾವಿಗೆ ಕಾರಣ ಏನೆಂಬುದು ಖಚಿತವಾಗಿ ತಿಳಿದು ಬರಲಿದೆ. https://kannadanewsnow.com/kannada/cm-siddaramaiah-congratulates-shabana-azmi-for-lifetime-achievement-award/ https://kannadanewsnow.com/kannada/women-mutual-fund-investment/ https://kannadanewsnow.com/kannada/good-news-for-the-states-farmers-2-lakh-pump-sets-to-be-legalised-by-the-government-this-year/
ಬೆಂಗಳೂರು: ಬೆಂಗಳೂರಿನಲ್ಲಿ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಸಿಎಂ ಸಿದ್ಧರಾಮಯ್ಯ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, 70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ ಅವರ ಕಲಾಸೇವೆಗೆ ಸಂದ ಈ ಗೌರವವು ಪ್ರಶಸ್ತಿಯ ಘನತೆಯನ್ನು ಹೆಚ್ಚಿಸಿದೆ ಎಂಬುದಾಗಿ ಹೇಳಿದ್ದಾರೆ. https://twitter.com/siddaramaiah/status/1898309336515878930?t=x8JQV7wxNeCDpTziF0t_Ag&s=19 https://kannadanewsnow.com/kannada/khatarnak-thieves-who-had-been-absconding-for-20-years-arrested/ https://kannadanewsnow.com/kannada/women-mutual-fund-investment/
ಬೆಂಗಳೂರು: 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದಂತ ಇಬ್ಬರು ಖತರ್ನಾಕ್ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆ ಮೂಲಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿ ಕಳ್ಳತನ ಮಾಡಿ ನಾಗರಾಜು ಹಾಗೂ ಶ್ರೀನಿವಾಸಲು ಎಂಬುವರು ಸಿಕ್ಕಿ ಬಿದ್ದಿದ್ದರು. ಅವರನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದರು. ಜಾಮೀನಿನ ಮೇಲೆ ಹೊರಬಂದಿದ್ದಂತ ಇಬ್ಬರು, ಆ ಬಳಿಕ ನಾಪತ್ತೆಯಾಗಿದ್ದರು. ಉನ್ನತ ವ್ಯಾಸಂಗ ಮಾಡಿದ್ದಂತ ಆರೋಪಿಗಳಿಬ್ಬರು, ಪೊಲೀಸರಿಗೆ ಸಿಕ್ಕೇ ಇರಲಿಲ್ಲ. ಆಂಧ್ರಪ್ರದೇಶದಲ್ಲಿ ಹೋಂ ಗಾರ್ಡ್ ಕೆಲಸವನ್ನು ಶ್ರೀನಿವಾಸಲು ಮಾಡುತ್ತಿದ್ದರೇ, ಮತ್ತೋರ್ವ ಆರೋಪಿ ನಾಗರಾಜು ಬ್ಯಾಂಕ್ ಒಂದರಲ್ಲಿ ಕೆಲಸಕ್ಕೆ ಸೇರಿದ್ದನು. ಸಮನ್ಸ್ ನೀಡಿದರೂ ಆರೋಪಿಗಳು ಸಿಗದೇ ಪೊಲೀಸರು ಕನ್ ಫ್ಯೂಸ್ ಗೆ ಒಳಗಾಗಿದ್ದರು. ಇದೀಗ ಇಬ್ಬರು ಆರೋಪಿಗಳ ಸುಳಿವು ಪಡೆದು, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಖತರ್ನಾಕ್ ಕಳ್ಳರನ್ನು ಬಂಧಿಸಿದ್ದಾರೆ. https://kannadanewsnow.com/kannada/man-attempts-suicide-by-jumping-off-building-in-bengaluru-after-being-harassed-by-company/ https://kannadanewsnow.com/kannada/women-mutual-fund-investment/
ಕಲಬುರಗಿ: “ಸಿಎಂ ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತದ ಐತಿಹಾಸಿಕ ಬಜೆಟ್ ಮಂಡನೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೂ ಸಮತೋಲನವಾಗಿ ಅನುದಾನ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಲಬುರಗಿಯಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶನಿವಾರ ಮಾತನಾಡಿದರು. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ. ಅಜಯ್ ಸಿಂಗ್ ಅವರು ಉಪಸ್ಥಿತರಿದ್ದರು. “ಹೆಣ್ಣು ಕುಟುಂಬದ ಕಣ್ಣು ಎಂದು ಭಾವಿಸಿ ಮಹಿಳೆಯರಿಗೆ ಹೆಚ್ಚು ಶಕ್ತಿ ತುಂಬಬೇಕು ಎಂಬ ಉದ್ದೇಶದಿಂದ ನಾವು ಅನೇಕ ಕಾರ್ಯಕ್ರಮಗಳನ್ನು ನೋಡಿದ್ದೇವೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರ ಬದುಕಿನಲ್ಲಿ ಪ್ರೋತ್ಸಾಹ ನೀಡುವ ಪ್ರಯತ್ನ ಮಾಡಿದ್ದೇವೆ. ಚುನಾವಣೆಗೂ ಮುನ್ನ ನಾವು ಕೊಟ್ಟ ಮಾತಿನಂತೆ ಪ್ರತಿ ವರ್ಷ 5 ಸಾವಿರ ಕೋಟಿ ಕೊಡುತ್ತಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೆವು. ಈ ವರ್ಷವೂ ಕೊಟ್ಟಿದ್ದೇವೆ. ಇಂದು ಜೇವರ್ಗಿಯಲ್ಲಿ 1 ಸಾವಿರ ಕೋಟಿ ಮೊತ್ತದ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು. ನೀರಾವರಿ ಯೋಜನೆ…
ಬೆಂಗಳೂರು: ನಗರದಲ್ಲಿ ಕಂಪನಿಯೊಂದರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಜೆಪಿ ನಗರದ 7ನೇ ಹಂತದಲ್ಲಿ ನಡೆದಿದೆ. ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಜೆಪಿ ನಗರದ 7ನೇ ಹಂತದಲ್ಲಿರುವಂತ ಖಾಸಗಿ ಕಂಪನಿಯೊಂದರಲ್ಲಿ ನಂದೀಶ್ ಎಂಬಾತ ಕೆಲಸ ಮಾಡುತ್ತಿದ್ದರು. ಅವರನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿತ್ತು. ಅಲ್ಲದೇ ಕಳೆದ ಒಂದು ತಿಂಗಳಿನಿಂದ ಸ್ಯಾಲರಿ ಕೂಡ ನೀಡದೇ ಕಿರುಕುಳ ನೀಡುತ್ತಿತ್ತಂತೆ. ಇದೇ ಕಾರಣಕ್ಕೆ ಕಂಪನಿಯ ಕಿರುಕುಳಕ್ಕೆ ಬೇಸತ್ತು ಇಂದು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ನಂದೀಶ್ ಯತ್ನಿಸಿದ್ದಾನೆ. ಕಂಪನಿಯ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದಂತ ನಂದೀಶ್ ನ ಬೆನ್ನು ಮೂಳೆ ಮುರಿತಗೊಂಡಿದೆ. ಹೀಗಾಗಿ ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈಗ ನಂದೀಶ್ ಸ್ಥಿತಿ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ. https://kannadanewsnow.com/kannada/chitradurga-three-farmers-fall-ill-after-hunger-strike-demanding-filling-of-all-tanks-including-gayatri-dam/ https://kannadanewsnow.com/kannada/women-mutual-fund-investment/
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಗಾಯತ್ರಿ ಡ್ಯಾಂ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತ ರೈತರು ನಡೆಸುತ್ತಿರುವಂತ ಉಪವಾಸ ಸತ್ಯಾಗ್ರಹ ತೀವ್ರಗೊಂಡಿದೆ. ಈವರೆಗೆ ಮೂವರು ರೈತರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಗಾಯತ್ರಿ ಡ್ಯಾಂ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ಹರಿಸುವಂತೆ ರೈತರು ಅಮರಣಾಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇಂದಿಗೆ ಐದನೇ ದಿನಕ್ಕೆ ಅಮರಾಣಂತರ ಉಪವಾಸ ಸತ್ಯಾಗ್ರಹ ಕಾಲಿಟ್ಟಿದೆ. ಎರಡನೇ ದಿನಕ್ಕೆ ಕಾಲಿಟ್ಟಿದ್ದಂತ ಉಪವಾಸ ಸತ್ಯಾಗ್ರಹದ ಸಂದರ್ಭದಲ್ಲಿ 70 ವರ್ಷದ ರೈತ ಈರಣ್ಯ ಎಂಬುವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಿಪಿ, ಶುಗರ್, ಆಯಾಸದಿಂದ ಅಸ್ವಸ್ಥಗೊಂಡಿದ್ದಂತ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ನಿನ್ನೆ ಹಿರಿಯೂರು ತಾಲ್ಲೂಕು ಕಚೇರಿ ಮುಂಭಾಗದಲ್ಲಿನ ರೈತರ ಅಮರಣಾಂತರ ಉಪವಾಸ ಸತ್ಯಾಗ್ರಹದ ವೇಳಎಯಲ್ಲಿ ರೈತ ಸಂಘದ ಅಧ್ಯಕ್ಷ ಕೆ.ಟಿ ತಿಪ್ಪೇಸ್ವಾಮಿ(48) ಅವರು ಅಸ್ವಸ್ಥಗೊಂಡಿದ್ದರು. ಆದರೂ ಪಟ್ಟು ಬಿಡದೇ ರೈತರು ಉಪವಾಸ…
ಕೊಪ್ಪಳ: ಜಿಲ್ಲೆಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಪ್ಪಳದ ಗಂಗಾವತಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಪ್ರವಾಸಿಗರ ಮೇಲೆ ಹಲ್ಲೆ ಹಾಗೂ ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದರು. ಮಾರ್ಚ್.6, 2025ರ ರಾತ್ರಿ 11 ಗಂಟೆಗೆ ನಡೆದಿದ್ದಂತ ಈ ಘಟನೆ ಸಂಬಂಧ ಇಂದು ಇಬ್ಬರು ಆರೋಪಿಗಳನ್ನು ಬಂದಿಸಿದ್ದಾರೆ. ಪ್ರವಾಸಿಗರ ಮೇಲೆ ಹಲ್ಲೆ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿರುವಂತ ಪೊಲೀಸರು, ಪರಾರಿಯಾಗಿರುವಂತ ಮತ್ತೊಬ್ಬ ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. https://kannadanewsnow.com/kannada/court-issues-notice-to-three-bollywood-stars-for-calling-them-saffron-in-the-arena/ https://kannadanewsnow.com/kannada/women-mutual-fund-investment/
ಜೈಪುರ: ವಿಮಲ್ ಪಾನ್ ಮಸಾಲಾ ಕುರಿತು ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಮತ್ತು ಜೆಬಿ ಇಂಡಸ್ಟ್ರೀಸ್ ಅಧ್ಯಕ್ಷರಿಗೆ ಜೈಪುರ-2 ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ನೋಟಿಸ್ ನೀಡಿದೆ. ಪಾನ್ ಮಸಾಲಾದ ಪ್ರತಿಯೊಂದು ಕಾಳು ಕೇಸರಿಯನ್ನು ಹೊಂದಿದೆ ಎಂದು ಜಾಹೀರಾತಿನಲ್ಲಿ ಮಾಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಮಾರ್ಚ್ 19 ರಂದು ಹಾಜರಾಗುವಂತೆ ವೇದಿಕೆ ಅವರಿಗೆ ನೋಟಿಸ್ ನಲ್ಲಿ ಸೂಚಿಸಿದೆ ಎಂಬುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಜಾಹೀರಾತಿನ ವಿರುದ್ಧ ನೀಡಿದ ದೂರಿನಲ್ಲಿ ಏನಿದೆ.? ಜೈಪುರ ನಿವಾಸಿ ಯೋಗೇಂದ್ರ ಸಿಂಗ್ ಬಡಿಯಾಲ್ ಸಲ್ಲಿಸಿದ ದೂರನ್ನು ಆಲಿಸಿದ ನಂತರ ಗ್ಯಾರ್ಸಿಲಾಲ್ ಮೀನಾ ಅವರ ಅಧ್ಯಕ್ಷತೆಯಲ್ಲಿ ಸದಸ್ಯರಾದ ಹೆಮ್ಲತಾ ಅಗರ್ವಾಲ್ ಅವರ ವೇದಿಕೆಯು ನೋಟಿಸ್ ನೀಡಿದೆ. ವಿಮಲ್ ಪಾನ್ ಮಸಾಲಾ ತಯಾರಿಸುವ ಜೆಬಿ ಇಂಡಸ್ಟ್ರೀಸ್ ತನ್ನ ಉತ್ಪನ್ನವನ್ನು ರಾಷ್ಟ್ರವ್ಯಾಪಿ ಪ್ರಚಾರ ಮಾಡುತ್ತದೆ ಎಂದು ದೂರುದಾರರು ಹೇಳಿದ್ದಾರೆ. “ಶಾರುಖ್ ಖಾನ್, ಅಜಯ್ ದೇವಗನ್ ಮತ್ತು…
ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂದರ್ಭದಲ್ಲಿ ನೀಡುವಂತ ಜೀವಮಾನ ಸಾಧನೆ ಪ್ರಶಸ್ತಿ ಪ್ರಕಟವಾಗಿದೆ. ಈ ಬಾರಿ ಭಾರತೀಯ ಖ್ಯಾತ ಹೆಸರಾಂತ ಚನಚಿತ್ರ ನಟಿ ಶಬಾನಾ ಅಜ್ಮಿಗೆ ಈ ಪ್ರಶಸ್ತಿ ಸಂದಿದೆ. ಈ ಕುರಿತಂತೆ ನಡವಳಿಯನ್ನು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ. 2024-25ನೇ ಸಾಲಿನಲ್ಲಿ ಆಯೋಜಿಸಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಸಮಿತಿಯನ್ನು ರಚಿಸಿ ಆದೇಶಿಸಲಾಗಿದ್ದ ಮೇರೆಗೆ ಈ ಆಯ್ಕೆ ಸಮಿತಿಯು ದಿನಾಂಕ:28/02/2025ರಂದು ಸಭೆ ಸೇರಿ ಅವಿರೋಧವಾಗಿ ಆಯ್ಕೆ ಮಾಡಿರುವ ಮೂವರು (03) ಸಂಭಾವ್ಯ ಗಣ್ಯರ ಪಟ್ಟಿಯನ್ನು ಲಗತ್ತಿಸುತ್ತಾ, ಸಭಾ ನಡವಳಿಯನ್ವಯ ಈ ಪೈಕಿ ಒಬ್ಬರನ್ನು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಿ ಆದೇಶ ಹೊರಡಿಸುವಂತೆ ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಏಕಕಡತದಲ್ಲಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಇವರು ಕೋರಿರುತ್ತಾರೆ. ಪುಸ್ತಾವನೆಯನ್ನು ಪರಿಶೀಲಿಸಿ ಈ ಕೆಳಕಂಡಂತೆ…











