Author: kannadanewsnow09

ಮೈಸೂರು: ಚೆಕ್ ಬೌನ್ಸ್ ಕೇಸ್ ನಲ್ಲಿ ಕೋರ್ಟ್ ಗೆ ಹಾಜರಾಗದ ಕಾರಣ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಮೈಸೂರಿನ ಕೋರ್ಟ್ ಗೆ ಚೆಕ್ ಬೌನ್ಸ್ ಕೇಸ್ ಸಂಬಂಧ ಇಂದು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಜರಾಗಬೇಕಿತ್ತು. ಆದರೇ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಕಾರಣ, ಕೋರ್ಟ್ ಮುಂದೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಮುಡಾ ದೂರುದಾರ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ, ಬಿಗ್ ಶಾಕ್ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಅವರು, ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ಕಾರಣ ಕೋರ್ಟ್ ಗೆ ಹಾಜರಾಗಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಕೋರ್ಟ್ ಗೆ ಹಾಜರಾಗುತ್ತೇನೆ. ಜಾಮೀನು ರಹಿತ ವಾರೆಂಟ್ ರೀ ಕಾಲ್ ಮಾಡಿಸುವುದಾಗಿ ಸ್ಪಷ್ಟ ಪಡಿಸಿದರು. https://kannadanewsnow.com/kannada/accounts-of-14-muda-plots-allotted-to-cm-siddaramaiahs-wife-parvathi-cancelled/ https://kannadanewsnow.com/kannada/will-work-with-conscience-wont-resign-siddaramaiah/

Read More

ಬೆಂಗಳೂರು: ನಾಗಸಂದ್ರ ಮತ್ತು ಮಾಧವರ ಮೆಟ್ರೋ ನಿಲ್ದಾಣಗಳ ನಡುವಿನ ಹೊಸ ರೈಲು ಮಾರ್ಗದಲ್ಲಿ ದಿನಾಂಕ 03ನೇ ಅಕ್ಟೋಬರ್ 2024 ರಂದು ಸುರಕ್ಷತಾ ತಪಾಸಣೆ ನಡೆಸುತ್ತರುವುದರಿಂದ ಹಸಿರು ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.  ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಾಗಸಂದ್ರ ಮತ್ತು ಮಾಧವರ ನಿಲ್ದಾಣಗಳ ನಡುವಿನ ಹೊಸ ಮಾರ್ಗವನ್ನು ಮೆಟ್ರೋ ರೈಲ್ವೆ ಸುರಕ್ಷತ ಆಯುಕ್ತರಿಂದ ಶಾಸನಬದ್ಧ ಸುರಕ್ಷತಾ ತಪಾಸಣೆ ನಡೆಸುತ್ತಿರುವುದರಿಂದ, ದಿನಾಂಕ 3ನೇ ಅಕ್ಟೋಬರ್ 2024 ರಂದು ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಕಾರ್ಯಾಚರಣೆಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಬದಲಾವಣೆಯಾಗಲಿದೆ ಎಂದಿದೆ. ದಿನಾಂಕ 3ನೇ ಅಕ್ಟೋಬರ್ 2024 ರಂದು ನಾಗಸಂದ್ರ ಮತ್ತು ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವಾಣಿಜ್ಯ ಸೇವೆ ಲಭ್ಯವಿರುವುದಿಲ್ಲ, ಈ ಅವಧಿಯಲ್ಲಿ ಪೀಣ್ಯ ಇಂಡಸ್ಟ್ರಿ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಎಂದಿನಂತೆ ಲಭ್ಯವಿರುತ್ತದೆ. ಬೆಳಿಗ್ಗೆ…

Read More

ಮಂಡ್ಯ : ಶಿಂಷಾ ನದಿಗೆ ಅಡ್ಡಲಾಗಿ ಐದು ಕಡೆ ಹೊಸದಾಗಿ ಚೆಕ್ ಡ್ಯಾಂ ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮದ್ದೂರು ತಾಲೂಕಿನ ಕಬ್ಬಾರೆ, ನೀಲಕಂಠನಹಳ್ಳಿ ಹಾಗೂ ಕೆ.ಕೋಡಿಹಳ್ಳಿ ಗ್ರಾಮಗಳ ಏತ ನೀರಾವರಿ ಯೋಜನೆಗಳನ್ನು ಮಂಗಳವಾರ ಅಧಿಕಾರಿಗಳ ಜೊತೆಗೂಡಿ ವೀಕ್ಷಣೆ ಮಾಡಿ ಸಮರ್ಪಕವಾಗಿ ಮಾಹಿತಿ ಪಡೆದುಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಹಿಂದೆ ಶಿಂಷಾ ನದಿಯಿಂದ ಹಲವು ಕಡೆ ಏತ ನೀರಾವರಿ ಯೋಜನೆಯನ್ನು ನಿರ್ಮಾಣ ಮಾಡಿ ಸರಿಯಾಗಿ ಕಾರ್ಯಾರಂಭ ಮಾಡದೇ ನಿರ್ಲಕ್ಷ ಮಾಡಲಾಗಿತ್ತು. ಅವುಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿ ಮೋಟಾರ್, ಪೈಪ್ ಹಾಗೂ ವಿದ್ಯುತ್ ಸೇರಿದಂತೆ ಹಲವು ಸಮಸ್ಯೆಗಳಿವೆ. ಹೀಗಾಗಿ ಹಳೆಯ ಯಂತ್ರಗಳನ್ನು ತೆರವುಗೊಳಿಸಿ ಅತ್ಯಾಧುನಿಕ ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಇನ್ನು ಶಿಂಷಾ ನದಿಗೆ ಅಡ್ಡಲಾಗಿ ಹೊಸದಾಗಿ ಐದು ಕಡೆ ಚೆಕ್ ಡ್ಯಾಂ ನಿರ್ಮಾಣ ಮಾಡಲು ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಇದರಿಂದ…

Read More

ನವದೆಹಲಿ: ಹಿಂದೆ ಇದೇ ಸಿದ್ದರಾಮಯ್ಯ ಅವರ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್ ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಕಳಿಸಬೇಕೆಂದು ಚರ್ಚೆ ಮಾಡಲಾಗಿದೆ ಇಂದು ಆರೋಪ ಮಾಡಿದರು. ನಾನು ಜಾಮೀನು ತೆಗೆದುಕೊಂಡಿದ್ದೇನೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಈ ಸರ್ಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆ ಎಂದು ನನ್ನ ವಕೀಲರು ಜಾಮೀನು ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಅದಕ್ಕೆ ಜಾಮೀನು ಪಡೆದಿದ್ದೇನೆ ಎಂದು ಅವರು…

Read More

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ಮತ್ತು ಪ್ರೆಸ್ ಕ್ಲಬ್ ಆ್ ಬೆಂಗಳೂರು(PCB) ಇವರ ಸಂಯುಕ್ತಾಶ್ರದಲ್ಲಿ ಟಿಎಸ್‌ಆರ್ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಪುರಸ್ಕೃತರಿಗೆ ಚಹಾಕೂಟ ಮತ್ತು ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ದಿನಾಂಕ 3.10.2024 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಟಿಎಸ್‌ಆರ್ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿವಾಜಿ ಎಸ್. ಗಣೇಶನ್, ಶ್ರೀಕಾಂತಾಚಾರ್ಯ.ಆರ್.ಮಣೂರ, ಡಾ.ಆರ್.ಪೂರ್ಣಿಮಾ, ಪದ್ಮರಾಜ ದಂಡಾವತಿ, ಡಾ.ಸರಜೂ ಕಾಟ್ಕರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ರಾಜೀವ್ ಕಿದಿಯೂರ, ಇಂದೂಧರ ಹೊನ್ನಾಪುರ, ಎನ್.ಮಂಜುನಾಥ, ಚಂದ್ರಶೇಖರ್ ಪಾಲೆತ್ತಾಡಿ, ಶಿವಲಿಂಗಪ್ಪ ದೊಡ್ಡಮನಿ ಅವರನ್ನು ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ…

Read More

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲೇ ವಸ್ತು ಪ್ರದರ್ಶನವನ್ನು ಆಯೋಜಿಸಲಾಗುತ್ತದೆ. ಈ ವಸ್ತು ಪ್ರದರ್ಶನದಲ್ಲಿ ಭಾಗಿಯಾಗುವಂತ ಪ್ರವಾಸಿಗರಿಗೆ ಬಿಗ್ ಶಾಕ್ ಎನ್ನುವಂತೆ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಸುದ್ದಿಗೋಷ್ಠಿ ಮಾತನಾಡಿ,  ಅಕ್ಟೋಬರ್ 3 ರಂದು ದಸರಾ ವಸ್ತು ಪ್ರದರ್ಶನ ರಾತ್ರಿ 8 ಗಂಟೆಗೆ ಉದ್ಘಾಟನೆ ಆಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸ್ಥಳೀಯ ಜನಪ್ರನಿಧಿಗಳು, ಅಧಿಕಾರಗಳ ಸಮ್ಮುಖದಲ್ಲಿ ಉದ್ಘಾಟನೆ ಆಗಲಿದೆ. ಸುಮಾರು 90 ದಿನಗಳ ಕಾಲ ವಸ್ತು ಪ್ರದರ್ಶನವಿರುತ್ತದೆ ಎಂದಿದ್ದಾರೆ. ಈ ಬಾರಿ ಉದ್ಘಾಟನೆಗೂ ಮುನ್ನವೇ ಸರ್ಕಾರಿ ಮಳಿಗೆಗಳು ಭರ್ತಿಯಾಗುವಂತೆ ಸೂಚಿಸಲಾಗಿದೆ. ಈಗಾಗಲೇ 30 ಕ್ಕೂ ಹೆಚ್ಚು ಮಳಿಗೆಗಳು ತುಂಬಿವೆ. ಉಳಿದಂತೆ ಎಲ್ಲಾ ಖಾಸಗಿ ಮಳಿಗೆಗಳೂ ಕೂಡ ಅಂದೇ ಉದ್ಘಾಟನೆ ಆಗಲಿವೆ. ಬ್ರಾಂಡ್ ಮೈಸೂರು ಹೆಸರಿನಡಿ ಮೈಸೂರು ಬ್ರಾಂಡ್ ಪ್ರಾಡಕ್ಟ್ ಗಳೆಲ್ಲವೂ ಒಂದೇ ಸೂರಿನಡಿ ಸಿಗುವ ವ್ಯವಸ್ಥೆ ಮಾಡಲಾಗುತ್ತದೆ. ಈ ಬಾರಿ ಪ್ಲಾಸ್ಟಿಕ್ ಮುಕ್ತ ವಸ್ತು…

Read More

ಬೆಂಗಳೂರು: ಅಕ್ಟೋಬರ್.3ರಿಂದ 12ರವರೆಗೆ ನಡೆಯಲಿರುವಂತ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ 508 ಕಲಾ ತಂಡಗಳು, 6,500 ಕಲಾವಿದರು ಭಾಗಿಯಾಗಲಿದ್ದಾರೆ. ಇದಕ್ಕಾಗಿ ವೇದಿಕೆ ಸಿದ್ಧಗೊಂಡಿದೆ ಎಂಬುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ. ಈಗಾಗಲೇ ದಸರಾ ಸಮೀಪಿಸುತ್ತಿದೆ. ಎಲ್ಲಾ ಸಿದ್ದತಾ ಕಾರ್ಯಗಳು ಹಂತಿಮ ಹಂತಕ್ಕೆ ಬಂದಿವೆ. ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಂದೇ ಎಲ್ಲಾ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ ಎಂದರು. ಅಕ್ಟೋಬರ್ 3ರಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಿಎಂ ನೀಡಲಿದ್ದಾರೆ. 11 ವೇದಿಕೆಗಳಲ್ಲಿ 508 ಕಲಾ ತಂಡಗಳ ಕಲಾವಿದರು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಅಕ್ಟೋಬರ್ 5ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ ಎಂದು ಹೇಳಿದರು. ದಸರಾ ವೇಳೆ ಏರ್ ಶೋ ವಿಚಾರವಾಗಿ ಮಾತನಾಡಿದಂತ…

Read More

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ಕೊಟ್ಟಿದ್ದಂತ 14 ಸೈಟ್ ಗಳನ್ನು ಮುಡಾಗೆ ಮರಳಿ ನೀಡಿದ್ದರು. ಈ 14 ಮುಡಾ ಸೈಟ್ ಗಳ ಕ್ರಯಪತ್ರವನ್ನು ರದ್ದುಗೊಳಿಸಲಾಗಿದ್ದು, ಮುಡಾ ಮರಳಿ ವಾಪಾಸ್ ಪಡೆದಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಮೈಸೂರು ಮುಡಾ ಆಯುಕ್ತ ರಘುನಂದನ್ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿಯವರು 14 ಸೈಟ್ ಗಳನ್ನು ಮುಡಾಗೆ ವಾಪಾಸ್ ಮಾಡಿದ್ದಾರೆ. ಅವುಗಳನ್ನು ಮುಡಾ ಪಡೆದಿದೆ ಎಂದರು. ಪಾರ್ವತಿಯವರು ಸ್ವಇಚ್ಛೆಯಿಂದ ತಮಗೆ ನೀಡಿದ್ದಂತ 14 ಸೈಟ್ ಗಳನ್ನು ವಾಪಾಸ್ ಮಾಡಿದ್ದಾರೆ. ಹೀಗಾಗಿ 14 ಮುಡಾ ಸೈಟ್ ಗಳ ಕ್ರಯಪತ್ರ ರದ್ದುಗೊಳಿಸಲಾಗಿದೆ ಎಂಬುದಾಗಿ ತಿಳಿಸಿದರು. ಸ್ವಇಚ್ಛೆಯಿಂದ ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಅವರು ಕೊಟ್ಟಿದ್ದಾರೆ. ನಾವು ಸ್ವೀಕರಿಸಿದ್ದೇವೆ. ಇದನ್ನು ಸರ್ಕಾರದ ಗಮನಕ್ಕೂ ತಂದಿದ್ದೇವೆ ಎಂಬುದಾಗಿ ಹೇಳಿದರು. https://kannadanewsnow.com/kannada/shivamogga-minister-madhu-bangarappa-launches-distribution-of-eggs-to-school-children-7-days-a-week-in-sagar/ https://kannadanewsnow.com/kannada/breaking-in-a-heart-rending-incident-in-belagavi-mother-commits-suicide-by-jumping-into-well-with-17-month-old-baby/ https://kannadanewsnow.com/kannada/accounts-of-14-muda-plots-allotted-to-cm-siddaramaiahs-wife-parvathi-cancelled/

Read More

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಇಂದು 1-10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಾರದ 7 ದಿನ ಪೌಷ್ಠಿಕಾಂಶ ಯುಕ್ತ ಆಹಾರ ಎನ್ನುವಂತೆ ಮೊಟ್ಟೆ ವಿತರಣೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಜ್ಯ ಸರ್ಕಾರದ ಅಕ್ಷರ ದಾಸೋಹ- ಮಧ್ಯಾಹ್ನದ ಉಪಹಾರ ಯೋಜನೆಯಡಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು ಇವರ ಸಹಯೋಗದೊಂದಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನಗಳ ಕಾಲ ಪೂರಕ ಪೌಷ್ಟಿಕ ಆಹಾರವನ್ನು ಉಚಿತವಾಗಿ ವಿತರಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಸಾಗರದ ಗಾಂಧೀ ಮೈದಾನದಲ್ಲಿ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಸೇರಿದಂತೆ ಒಂದರಿಂದ 10ನೇ ತರಗತಿಯವರೆಗಿನ ಒಟ್ಟು 76,000 ಶಾಲೆಗಳ 57 ಲಕ್ಷ ಮಕ್ಕಳು ವಾರದ ಏಳು…

Read More

ಬೆಂಗಳೂರು: ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ವಿಎಗಳಿಗೆ ಟ್ಯಾಬ್ ವಿತರಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಘೋಷಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಪದಾಧಿಕಾರಿಗಳನ್ನು ಇಂದು ನನ್ನನ್ನು ವಿಕಾಸಸೌಧದ ಕಚೇರಿಯಲ್ಲಿ ಭೇಟಿಯಾಗಿ ತಮ್ಮ ಬೇಡಿಕೆಯನ್ನು ಸಲ್ಲಿಸಿದ್ದಾರೆ. ಈ ವೇಳೆ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಎರಡು ಗಂಟೆಗೂ ಅಧಿಕ ಸಮಯ ಚರ್ಚಿಸಲಾಯಿತು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೆಲಸದ ಹೊರೆ ಅಧಿಕವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅವರ ಶ್ರಮವಿಲ್ಲದೆ ಬರ ಸಂದರ್ಭದಲ್ಲಿ “ಫ್ರೂಟ್ಸ್ʼ ಮೂಲಕ ನೈಜ ದತ್ತಾಂಶಗಳನ್ನು ಪಡೆದು ರೈತರ ಖಾತೆಗೆ ನೇರವಾಗಿ ಬರ ಪರಿಹಾರ ತಲುಪಿಸುವುದು ಸಾಧ್ಯವಾಗುತ್ತಿರಲಿಲ್ಲ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಬೀಟ್ ಆ್ಯಪ್ ಹಾಗೂ ಆಧಾರ್ ಸೀಡಿಂಗ್ ಹಾಗೂ ಫೌತಿ ಖಾತೆ ಅಭಿಯಾನದಲ್ಲೂ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವವಾದದ್ದು. ಹೀಗಾಗಿ ಮುಂದಿನ ದಿನಗಳಲ್ಲಿ ಏಕ ಕಾಲದಲ್ಲಿ ಎಲ್ಲಾ ಅಭಿಯಾನಗಳಿಗೂ ಒಟ್ಟಿಗೆ ಚಾಲನೆ ನೀಡದೆ, ಅವರ ಕೆಲಸದ ಒತ್ತಡಗಳನ್ನು…

Read More