Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ ಶನಿವಾರ ಬೆಳ್ಳಂಬೆಳಗ್ಗೆಯೇ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಮದ್ದೂರು ಪಟ್ಟಣ ಸಮೀಪದ ಶಿಂಷಾ ನದಿ ಎಲಿವೇಟೆಡ್ ರಸ್ತೆ ( ಮೇಲು ಸೇತುವೆ ಮೇಲೆ )ಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡು ಮಂಡ್ಯ ಮಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ಐಸಿಐಸಿಐ ಬ್ಯಾಂಕ್ ( ಹೋಂ ಫೈನಾನ್ಸ್ ವಿಭಾಗ ) ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಶಂಕರ್, ಮಹದೇವು ಹಾಗೂ ಕಿಶೋರ್ ಮೂವರು ಕೆಲಸದ ನಿಮಿತ್ತ ಮೈಸೂರಿಗೆ ತೆರಳಿದ್ದ ಅವರು ಶನಿವಾರ ಬೆಳಗಿನ ಜಾವ 4.30 ರ ಸಮಯದಲ್ಲಿ ಬೊಲೆರೋ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಅವರು ಮದ್ದೂರು ಪಟ್ಟಣದ ಎಲಿವೇಟೆಡ್ ರಸ್ತೆಯಲ್ಲಿ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಶಿಂಷಾ ನದಿ ಸೇತುವೆ ಮೇಲೆಯೇ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ಕ್ಯಾಮೆರಾ ಕಂಬಕ್ಕೆ ಡಿಕ್ಕಿ ಹೊಡೆದು ಮೈಸೂರು ಕಡೆಗೆ ಹೋಗುವ ರಸ್ತೆಗೆ ಹೋಗಿ ಮಗುಚಿ ಬಿದ್ದಿದೆ. ಡಿಕ್ಕಿಯ…
ಬೆಂಗಳೂರು : ಬನಶಂಕರಿಯ ನ್ಯಾಷನಲ್ ಹಿಲ್ ವ್ಯೂ ಶಾಲೆ ಹಾಗೂ ಕಸ್ತೂರಿ ನಗರದ ಪ್ರೆಸಿಡೆನ್ಸಿ ಶಾಲೆಗಳು ಬ್ರಾಂಡ್ ಬೆಂಗಳೂರು ಐಡಿಯಾಥಾನ್ ಸ್ಪರ್ಧೆಯ ವಿಜೇತರಾಗಿ ಹೊರಹೊಮ್ಮಿವೆ. ಬೆಂಗಳೂರಿನಲ್ಲಿ ಶನಿವಾರ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಪ್ರಶಸ್ತಿ ಮಕ್ಕಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಖ್ಯಾತ ನಟ ರಮೇಶ್ ಅರವಿಂದ್ ಅವರು ಪ್ರಮಾಣ ಪತ್ರ ನೀಡಿದರು. ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಿಗೆ ಹಾರ್ವಡ್ ವಿಶ್ವವಿದ್ಯಾಲಯದಲ್ಲಿ ನಡೆಯುವ 40 ಗಂಟೆಗಳ ಅನ್ವೇಷಣೆ ಮತ್ತು ವ್ಯಾಪಾರೋದ್ಯಮ ಕುರಿತ ಕಾರ್ಯಕ್ರಮಕ್ಕೆ ಸ್ಕಾಲರ್ ಶಿಪ್ ಅನ್ನು ನೀಡಲಾಗುವುದು. ಕಳೆದ ವರ್ಷ ನವೆಂಬರ್ 14ರಂದು ಆರಂಭವಾದ ಈ ಸ್ಪರ್ಧೆಯಲ್ಲಿ ಒಟ್ಟು 200 ಶಾಲೆಗಳು ಭಾಗವಹಿಸಿದ್ದು, ಎರಡನೇ ಸುತ್ತಿಗೆ 50 ಶಾಲೆಗಳನ್ನು ಆಯ್ಕೆ ಮಾಡಲಾಗಿದ್ದು, ನಂತರ ಮೂರನೇ ಸುತ್ತಿನಲ್ಲಿ 25 ಶಾಲೆಗಳನ್ನು ಆಯ್ಕೆ ಮಾಡಲಾಯಿತು. ಅಂತಿಮ ಸುತ್ತಿಗೆ ಪ್ರಮುಖ 7 ಶಾಲೆಗಳನ್ನು ಆಯ್ಕೆ ಮಾಡಲಾಗಿತ್ತು. ಇಂದು ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಬನಶಂಕರಿಯ ಪ್ರೆಸಿಡೆನ್ಸಿ ಶಾಲೆ, ಎಸ್ ಜೆಆರ್ ಕೆಂಗೇರಿ ಪಬ್ಲಿಕ್ ಶಾಲೆ, ಒಕ್ರಿಡ್ಜ್ ಇಂಟರ್…
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ಹೆಮ್ಮೆ ಮಾತ್ರವಲ್ಲ, ಅವರು ಈಗ ದೇಶದ ಹೆಮ್ಮೆಯಾಗಿದ್ದಾರೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಹೆಮ್ಮೆ ಮಾತ್ರವಲ್ಲ, ಅವರು ದೇಶದ ಹೆಮ್ಮೆ ಮತ್ತು ಈಗ ನಮ್ಮಲ್ಲಿರುವ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರು. ಇಂದು, ಅವರನ್ನು ಇಂಡಿಯಾ ಬಣದ ಅಧ್ಯಕ್ಷರನ್ನಾಗಿ ಹೆಸರಿಸಲಾಗಿದೆ. ಇದು ಅವರ ನಾಯಕತ್ವ ಮತ್ತು ದೃಷ್ಟಿಕೋನದಲ್ಲಿ ವಿಶ್ವಾಸಾರ್ಹತೆ ಮತ್ತು ನಂಬಿಕೆಯನ್ನು ತೋರಿಸುತ್ತದೆ. ಅವರಿಗೆ ನನ್ನ ಶುಭ ಹಾರೈಕೆಗಳು ಎಂದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದಂತೆ ಅವರು ಅಪಾರ ಬದ್ಧತೆ ಮತ್ತು ಸಮರ್ಪಣೆಯೊಂದಿಗೆ ಭಾರತ ಬಣವನ್ನು ಮುನ್ನಡೆಸುತ್ತಾರೆ ಎಂದು ನನಗೆ ತಿಳಿದಿದೆ ಎಂದು ಹೇಳಿದ್ದಾರೆ. https://twitter.com/ANI/status/1746166657418956857 https://kannadanewsnow.com/kannada/applications-invited-for-subsidy-loan-facility-up-to-rs-2-5-lakh-for-acid-affected-women/ https://kannadanewsnow.com/kannada/ksrtc-class-03-technical-assistant-final-selection-list-released/
ಬೆಂಗಳೂರು: ವೀರವನಿತೆ ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ ಹುಟ್ಟಿದ ನಾಡು ನಮ್ಮದು. ಇಂತಹ ನಾಡಿನಲ್ಲಿ ಮಹಿಳೆಯರ ಸುರಕ್ಷತೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ್ರೆ ಕರ್ನಾಟಕ ಸ್ವಾಭಿಮಾನಿ ಮಹಿಳೆಯರು ಬ್ರಿಟಿಷರಿಗೆ ಗತಿ ಕಾಣಿಸಿದಂತೆ ನಿಮಗೆ ಗತಿ ಕಾಣಿಸ್ತಾರೆ ಎಚ್ಚರ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಆಶೋಕ್ ಗುಡಿಗಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಸಿಎಂ ಸಿದ್ಧರಾಮಯ್ಯನವರಿಗೆ ಕರಸೇವಕರ ಮೇಲಿನ 32 ವರ್ಷಗಳ ಹಳೇ ಪ್ರಕರಣಕ್ಕೆ ಮರುಜೀವ ನೀಡಿ ರಾಜಕೀಯ ಮಾಡುವುದರಲ್ಲಿ ಇರುವ ಕಳಕಳಿ, ಆಸಕ್ತಿ ಮಹಿಳೆಯರ ಅತ್ಯಾಚಾರ, ಕಿಡ್ನಾಪ್, ಹಲ್ಲೆ ಪ್ರಕರಣಗಳ ಅಪರಾಧಿಗಳನ್ನು ಹಿಡಿಯುವುದರಲ್ಲಿ ಇದ್ದಿದ್ದರೆ ರಾಜ್ಯದ ಮಹಿಳೆಯರಿಗೆ ಇಂದು ಈ ರೀತಿ ದುಸ್ಥಿತಿ ಬರುತ್ತಿರಲಿಲ್ಲ. ಸ್ವಾಮಿ ಸಿದ್ಧರಾಮಯ್ಯನವರೇ, ಹೈದರಾಲಿ ಸೈನ್ಯದ ಹೆಡೆಮುರಿ ಕಟ್ಟಲು ಏಕಾಂಗಿಯಾಗಿ ಹೋರಾಡಿದ ವೀರವನಿತೆ ಒನಕೆ ಓಬವ್ವಳ ನಾಡು ನಮ್ಮ ಕರ್ನಾಟಕ. ಬ್ರಿಟಿಷರ ವಿರುದ್ಧ ಬಂಡಾಯವೆದ್ದು ಅವರ ಹುಟ್ಟಡಗಿಸಿದ ಕಿತ್ತೂರು ರಾಣಿ ಚೆನ್ನಮ್ಮ ಹುಟ್ಟಿದ ನಾಡು ನಮ್ಮ ಕನ್ನಡ ನಾಡು. ಮಹಿಳೆಯರ ಸುರಕ್ಷತೆ ವಿಷಯದಲ್ಲಿ ಹೀಗೆ…
ಬೆಂಗಳೂರು: ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಸರ್ಕಾರ ಜಾರಿಗೆ ತಂದಿರುವಂತ ಯೋಜನೆಯಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿ ಇದೀಗ ಚಿಕಿತ್ಸೆ ಪಡೆಯುತ್ತಿರೋರ ಸಂಖ್ಯೆ ಕೂಡ ಹೆಚ್ಚಳವಾಗಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಖಾಸಗಿ ವೈದ್ಯಕೀಯ ವ್ಯವಸ್ಥೆಯಡಿ ಮಂಡಿ ಚಿಪ್ಪು, ಹೃದಯದ ಕವಾಟ ಬದಲಾವಣೆಯಂತಹ ಶಸ್ತ್ರ ಚಿಕಿತ್ಸೆಗಳು ದುಬಾರಿ ಆಗಿರುವುದರಿಂದ ‘ಆಯುಷ್ಮಾನ್ ಭಾರತ – ಆರೋಗ್ಯ ಕರ್ನಾಟಕ’ ಯೋಜನೆಯಡಿ ಚಿಕಿತ್ಸೆ ಪಡೆಯುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆ ಒದಗಿಸುವುದು ನಮ್ಮ ಆದ್ಯತೆ, ದುಬಾರಿ ಚಿಕಿತ್ಸೆಗಳನ್ನೂ ಯೋಜನೆಯಡಿ ಉಚಿತವಾಗಿ ಒದಗಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದ್ದಾರೆ. https://kannadanewsnow.com/kannada/delegation-led-by-m-b-patil-to-travel-to-davos-tomorrow-for-world-economic-summit/ https://kannadanewsnow.com/kannada/applications-invited-for-subsidy-loan-facility-up-to-rs-2-5-lakh-for-acid-affected-women/
ಬೆಂಗಳೂರು: ಸ್ವಿಟ್ಸರ್ಲೆಂಡ್ನ ದಾವೋಸ್ನಲ್ಲಿ ಜನವರಿ 15ರಿಂದ 19ರವರೆಗೆ ನಡೆಯುವ “ವಿಶ್ವ ಆರ್ಥಿಕ ವೇದಿಕೆ-2024” ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರ ನೇತೃತ್ವದ ಉನ್ನತ ಮಟ್ಟದ ನಿಯೋಗ ಭಾನುವಾರ (ಜ.14) ಪ್ರಯಾಣ ಬೆಳೆಸಲಿದೆ. “ನಾವೀನ್ಯತೆ ಭವಿಷ್ಯ ರೂಪಿಸುತ್ತದೆ” (ಇನ್ನೋವೇಷನ್ ವಿಲ್ ಇಂಪ್ಯಾಕ್ಟ್) ಎಂಬ ಧ್ಯೇಯವಾಕ್ಯದೊಂದಿಗೆ ತೆರಳುತ್ತಿರುವ ಈ ನಿಯೋಗದಲ್ಲಿ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಸಿಇಒ ಡಾ. ಮಹೇಶ್ ಮತ್ತಿತರರು ಇದ್ದಾರೆ. ಈ ಶೃಂಗಸಭೆಯ ವೇಳೆ ಕರ್ನಾಟಕ ಸರ್ಕಾರದ ಉದ್ಯಮಸ್ನೇಹಿ ನೀತಿಗಳು, ಇಲ್ಲಿನ ಉತ್ತಮ ಕಾರ್ಯಪರಿಸರ, ಹೂಡಿಕೆಗೆ ಅವಕಾಶವಿರುವ ಕ್ಷೇತ್ರಗಳು, ಮಾನವ ಸಂಪನ್ಮೂಲ ಲಭ್ಯತೆ, ಕೌಶಲ್ಯ ಕಲಿಸಲು ನೀಡುತ್ತಿರುವ ಆದ್ಯತೆ, ಸಿಂಗಲ್ ವಿಂಡೋ ವ್ಯವಸ್ಥೆ…
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 152 ಮಂದಿ ಗುಣಮುಖರಾಗಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ RTPCR ಮೂಲಕ 4352 ಹಾಗೂ RAT ಮೂಲಕ 590 ಸೇರಿದಂತೆ 4942 ಮಂದಿಯನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದಿದೆ. ರಾಜ್ಯದಲ್ಲಿ 19 ಸೋಂಕಿತರು ಸರ್ಕಾರಿ ಆಸ್ಪತ್ರೆಯ ಐಸೋಲೇಷನ್ ಬೆಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, 17 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಸೇರಿದಂತೆ 36 ಸೋಂಕಿತರು ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕ್ಸಿಜನ್ ಸಪೋರ್ಟ್ ನಲ್ಲಿ ಓರ್ವ ಸೋಂಕಿತರಿದ್ದರೇ, ಐಸಿಯುನಲ್ಲಿ 12 ಮಂದಿ, ಐಸಿಯು ವೆಂಟಿಲೇಟರ್ ಸಪೋರ್ಟ್ ನಲ್ಲಿ ಐವರು ಸೇರಿದಂತೆ 54 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದೆ. ಕಳೆದ 24 ಗಂಟೆಯಲ್ಲಿ ಬಳ್ಳಾರಿ 04, ಬೆಳಗಾವಿ 08, ಬೆಂಗಳೂರು ಗ್ರಾಮಾಂತರ 05, ಬೆಂಗಳೂರು ನಗರ…
ನವದೆಹಲಿ: ಭಾರತದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಉದ್ವಿಗ್ನತೆಯ ಮಧ್ಯೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಶನಿವಾರ ಐದು ದಿನಗಳ ಭೇಟಿಯ ನಂತರ ಚೀನಾದಿಂದ ಆಗಮಿಸಿದ ಕೆಲವೇ ಕ್ಷಣಗಳಲ್ಲಿ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಯಿಝು, “ನಾವು ಚಿಕ್ಕವರಾಗಿರಬಹುದು ಆದರೆ ಇದು ನಮ್ಮನ್ನು ಬೆದರಿಸಲು ಅವರಿಗೆ ಪರವಾನಗಿ ನೀಡುವುದಿಲ್ಲ” ಎಂದು ಭಾರತದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಮಾಲ್ಡೀವ್ಸ್ನ ಆಂತರಿಕ ವ್ಯವಹಾರಗಳಲ್ಲಿ ಬಾಹ್ಯ ಹಸ್ತಕ್ಷೇಪವನ್ನು ದೃಢವಾಗಿ ವಿರೋಧಿಸುವುದಾಗಿ ಮತ್ತು ತನ್ನ ಸಾರ್ವಭೌಮತ್ವ ಮತ್ತು ಸ್ವಾತಂತ್ರ್ಯವನ್ನು ಎತ್ತಿಹಿಡಿಯುವಲ್ಲಿ ದ್ವೀಪ ರಾಷ್ಟ್ರವನ್ನು ಬೆಂಬಲಿಸುವುದಾಗಿ ಚೀನಾ ಹೇಳಿದ ನಂತರ ಮುಯಿಝು ಈ ಹೇಳಿಕೆ ನೀಡಿದ್ದಾರೆ. https://twitter.com/Mjournalissts/status/1746139213161255319 “ತಮ್ಮ ಪ್ರಮುಖ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಪರಸ್ಪರ ದೃಢವಾಗಿ ಬೆಂಬಲಿಸುವುದನ್ನು ಮುಂದುವರಿಸಲು ಎರಡೂ ಕಡೆಯವರು ಒಪ್ಪಿದ್ದಾರೆ” ಎಂದು ಚೀನಾದ ಉನ್ನತ ನಾಯಕರೊಂದಿಗಿನ ಮುಯಿಝು ಅವರ ಮಾತುಕತೆಯ ಕೊನೆಯಲ್ಲಿ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ. “ಚೀನಾ ತನ್ನ ರಾಷ್ಟ್ರೀಯ ಸಾರ್ವಭೌಮತ್ವ, ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಘನತೆಯನ್ನು ಎತ್ತಿಹಿಡಿಯುವಲ್ಲಿ ಮಾಲ್ಡೀವ್ಸ್ ಅನ್ನು ದೃಢವಾಗಿ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಳೆ ಮಣಿಪುರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಲಿರುವಂತ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸಿಎಂ ಸಿದ್ಧರಾಮಯ್ಯ ಅವರು ನಾಳೆ ಬೆಳಿಗ್ಗೆ 9.30ಕ್ಕೆ ಹೆಚ್ಎಎಲ್ ಏರ್ ಪೋರ್ಟ್ ನಿಂದ ವಿಶೇಷ ವಿಮಾನದಲ್ಲಿ ಮಣಿಪುರಕ್ಕೆ ತೆರಳಲಿದ್ದಾರೆ. ಮಣಿಪುರದ ತಿಕೇಂದ್ರಜಿತ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಳಿಗ್ಗೆ 11.50ಕ್ಕೆ ತಲುಪಲಿದ್ದಾರೆ ಎಂದು ತಿಳಿಸಿದೆ. ಇನ್ನೂ ಇಂಫಾಲ ಏರ್ ಪೋರ್ಟ್ ನಿಂದ 11.55ಕ್ಕೆ ರಸ್ತೆ ಮೂಲಕ ತೆರಳಲಿರೋ ಮುಖ್ಯಮಂತ್ರಿ ಸಿದ್ಧರಾಮಯ್ಯ 12.15ಕ್ಕೆ ಇಂಫಾಲ್ ಸಿಟಿಯನ್ನು ತಲುಪಲಿದ್ದಾರೆ. ಅಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳೋದಾಗಿ ತಿಳಿಸಿದೆ. ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಂಡ ಬಳಿಕ ಸಂಜೆ 3 ಗಂಟೆಯ ಹಾಗೆ ಇಂಫಾಲ ನಗರಕ್ಕೆ ರಸ್ತೆ ಮೂಲಕ ಸಂಚಾರ ಮಾಡಲಿದ್ದಾರೆ. 3.20ಕ್ಕೆ ಇಂಫಾಲ ಏರ್ ಪೋರ್ಟ್ ತಲುಪಲಿದ್ದಾರೆ. 3.25ಕ್ಕೆ ವಿಶೇಷ ವಿಮಾನದಲ್ಲಿ ಅಲ್ಲಿಂದ ಹೊರಟು, ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್…
ದೇವದುರ್ಗ : ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು.ಕುರುಬರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ವೈಭವ 2024 ಸಮಾವೇಶದಲ್ಲಿ ಮಾತನಾಡಿದರು. ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು ಸಮಾಜದಲ್ಲಿ ಅವಕಾಶ ದೊರೆತವರು ಮುಂದುವರೆದರು ಮೇಲ್ಜಾತಿಯವರಾದರು. ಅವಕಾಶ ವಂಚಿತರು ಹಿಂದುಳಿದು ಕೆಳಜಾತಿಯವರಾದರು. ಚಾತುರ್ವಣ ವ್ಯವಸ್ಥೆಯನ್ನು ದೇವರು ಮಾಡಲಿಲ್ಲ. ಮನುಷ್ಯನ ಸ್ವಾರ್ಥದಿಂದಾಗಿ ನಾವು ಮಾಡಿಕೊಂಡಿದ್ದೇವೆ. ಮಹಿಳೆಯರೂ ಅವಕಾಶ ವಂಚಿತರಾಗಿದ್ದರು. ಅಂಬೇಡ್ಕರ್ ಅವರು ಎಲ್ಲರಿಗೂ ಶಿಕ್ಷಣ ಕಡ್ಡಾಯ ಎಂದು ಸಂವಿಧಾನದಲ್ಲಿ ಹೇಳಿದ್ದಾರೆ. ಅಕ್ಷರ ಸಂಸ್ಕೃತಿ ಯಿಂದ ವಂಚಿತರಾದವರು ಶೂದ್ರರಾದರು. ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಇದರ ಲಾಭ ಪಡೆದವರು ಈಗಲೂ ಆ ಪ್ರಯತ್ನ ವನ್ನು ಮಾಡುತ್ತಿದ್ದಾರೆ. ಶೋಷಣೆಗೆ ಒಳಪಟ್ಟವರು ಈ ಬಗ್ಗೆ ಎಚ್ಚರಿಕೆಯಿಂದ…