Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಸೇರಿದಂತೆ ಎಲ್ಲ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಘಟ್ಟ ಪ್ರದೇಶಗಳಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿಸಿಎಫ್ ಗಳಿಗೂ ಅರಣ್ಯ…
ಬೆಂಗಳೂರು: ಈ ಹಿಂದೆ ಬಿಗ್ ಬಾಸ್ ಸ್ಪರ್ಧಿ, ನಟ ಪ್ರಥಮ್ ಗೆ ಸೋಷಿಯಲ್ ಮೀಡಿಯಾದ ಮೂಲಕ ದರ್ಶನ್ ಅಭಿಮಾನಿಗಳು ಕಾಟ ಕೊಟ್ಟಿದ್ದರು. ಈಗ ಅಣ್ಣಾವ್ರ ಅಭಿಮಾನಿಗಳ ಹಿಂದೆ ಬಿದ್ದಿದ್ದಾರೆ. ಡಿ ಬಾಸ್ ಅಭಿಮಾನಿಗಳ ಕೈಗೆ ಸಿಕ್ಕರೇ ನಿನ್ನನ್ನು ಮುಗಿಸುತ್ತೇನೆ ಎಂಬುದಾಗಿ ಬೆದರಿಕೆ ಹಾಕಲಾಗಿದೆ. ಹೀಗಾಗಿ ಡಿ ಬಾಸ್ ಅಭಿಮಾನಿಗಳ ವಿರುದ್ಧ ಕೇಸ್ ದಾಖಲಾಗಿದೆ. ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ನಟ ದರ್ಶನ್, ನನಗೆ ಜೈಲೂಟ ಬೇಡ. ಮನೆಯೂಟ ಬೇಕು. ನನ್ನ ತೂಕ ಕಡಿಮೆ ಆಗುತ್ತಿದೆ ಎಂಬುದಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರೂ, ನ್ಯಾಯಾಲಯ ಜೈಲಿನ ಖೈದಿಗಳಿಗೆ ಬೇರೆ ಆಹಾರ, ನಿನಗೆ ಬೇರೆ ಆಹಾರಕ್ಕೆ ಅವಕಾಶ ಮಾಡಿಕೊಡೋದಿಲ್ಲ ಅಂತ ನಿರಾಕರಿಸಿ, ಅರ್ಜಿ ವಜಾಗೊಳಿಸಿತ್ತು. ಈಗ ಜೈಲೂಟವೇ ಗತಿಯಾಗಿದೆ. ಇದರ ನಡುವೆ ದಿವಂಗತ ಡಾ.ರಾಜ್ ಕುಮಾರ್ ಅಭಿಮಾನಿಯಾಗಿರುವಂತ ಯೋಗಿ ಎಂಬಾತನಿಗೆ ನಟ ದರ್ಶನ್ ಅಭಿಮಾನಿಗಳು ಬೆದರಿಕೆ ಹಾಕೋದಕ್ಕೆ ಶುರುಮಾಡಿದ್ದಾರೆ ಎಂಬುದಾಗಿ…
ಬಾಂಗ್ಲಾದೇಶ: ಢಾಕಾದ ಹೊರವಲಯದಲ್ಲಿ ಪ್ರತಿಭಟನಾಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರ ನಡುವೆ ಬಾಂಗ್ಲಾದೇಶದಲ್ಲಿ ಹೊಸ ಘರ್ಷಣೆಗಳು ಭುಗಿಲೆದ್ದಿದ್ದರಿಂದ ಭಾನುವಾರ (ಆಗಸ್ಟ್ 4) ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಸಾವಿರಾರು ಪ್ರತಿಭಟನಾಕಾರರು ಬಾಂಗ್ಲಾದೇಶದ ರಾಜಧಾನಿಯಲ್ಲಿ ಜಮಾಯಿಸಿದ್ದಾರೆ. ಪ್ರಧಾನಿ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಅಸಹಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರು ಆಡಳಿತಾರೂಢ ಅವಾಮಿ ಲೀಗ್, ಅದರ ವಿದ್ಯಾರ್ಥಿ ಅಂಗಸಂಸ್ಥೆ ಛತ್ರ ಲೀಗ್ ಮತ್ತು ಜುಬೊ ಲೀಗ್ ಕಾರ್ಯಕರ್ತರಿಂದ ವಿರೋಧವನ್ನು ಎದುರಿಸಿದಾಗ ಇಂದು ಬೆಳಿಗ್ಗೆ ಇತ್ತೀಚಿನ ಘರ್ಷಣೆಗಳು ಭುಗಿಲೆದ್ದವು. “ಮುನ್ಶಿಗಂಜ್ನಲ್ಲಿ ಪ್ರತಿಭಟನಾಕಾರರು ಮತ್ತು ಅವಾಮಿ ಲೀಗ್ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ” ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ. ಘಟನೆಯ ಸಮಯದಲ್ಲಿ ಹಲವಾರು ಕಾಕ್ಟೈಲ್ ಸ್ಫೋಟಗಳು ಸಂಭವಿಸಿವೆ ಎಂದು ಪತ್ರಿಕೆ ಹೇಳಿದೆ. ಢಾಕಾದ ಶಹಬಾಗ್ನಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ವೃತ್ತಿಪರರು…
ಕೊಪ್ಪಳ್ಳ: ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ್ ಅನುಮಾನಾಸ್ಪದ ರೀತಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. ಇಂತಹ ಅವರ ಮೃತದೇಹವನ್ನು ಇದೀಗ ಸ್ವಗ್ರಾಮ ಸೋಮನಾಳದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಯಾದಗಿರಿಗೆ ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಅನುಮಾನಾಸ್ಪದವಾಗಿ ಹಠಾತ್ ಸಾವನ್ನಪ್ಪಿದ್ದರು. ಪಿಎಸ್ಐ ಪರಶುರಾಮ್ ಸಾವಿಗೆ ಶಾಸಕರು ಹಾಗೂ ಅವರ ಪುತ್ರ ಕಾರಣ ಎನ್ನಲಾಗಿತ್ತು. ಈ ಸಂಬಂಧ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಮೃತ ಪಿಎಸ್ಐ ಪರಶುರಾಮ್ ಅವರ ಪಾರ್ಥಿವ ಶರೀರವನ್ನು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮಕ್ಕೆ ಕೊಂಡಯ್ಯಲಾಗಿತ್ತು. ಪರಶುರಾಮ್ ಅವರ ಕುಟುಂಬಕ್ಕೆ ಸೇರಿದಂತ ಸ್ವಗ್ರಾಮ ಸೋಮನಾಳದಲ್ಲಿ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸರು. ಈ ಮೂಲಕ ಪಿಎಸ್ಐ ಪರಶುರಾಮ್ ಮಣ್ಣಲ್ಲಿ ಮಣ್ಣಾಗಿದ್ದಾರೆ. https://kannadanewsnow.com/kannada/pms-son-becoming-cm-is-not-a-big-deal-farmers-son-becoming-deputy-cm-is-a-big-deal-pradeep-easwar-to-hdk/ https://kannadanewsnow.com/kannada/good-news-for-veerashaiva-lingayat-communities-applications-invited-for-these-schemes/
ಬೆಂಗಳೂರು: ಪ್ರಧಾನಿ ಮಗ ಮುಖ್ಯಮಂತ್ರಿ ಆಗುವುದು ದೊಡ್ಡ ವಿಚಾರವಲ್ಲ. ಅದೇ ಒಬ್ಬ ರೈತನ ಮಗ ಉಪ ಮುಖ್ಯಮಂತ್ರಿ ಆಗುವುದು ದೊಡ್ಡವಿಚಾರ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಪರವಾಗಿ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್ ನೀಡಿದ್ದಾರೆ. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಅವರು, ಕುಮಾರಸ್ವಾಮಿ ಅವರೇ, ಪ್ರಧಾನಮಂತ್ರಿಯ ಮಗ ಮುಖ್ಯಮಂತ್ರಿ ಆಗುವುದು ದೊಡ್ಡ ವಿಚಾರವಲ್ಲ, ಕನಕಪುರದ ರೈತನ ಮಗ ಉಪ ಮುಖ್ಯಮಂತ್ರಿ ಆಗುವುದು ದೊಡ್ಡ ವಿಚಾರ ಅಂತ ಹೆಚ್.ಡಿಕೆಗೆ ತಿರುಗೇಟು ನೀಡಿದ್ದಾರೆ. ಹಿಂದುಳಿದ ವರ್ಗದ ವ್ಯಕ್ತಿ ಮುಖ್ಯಮಂತ್ರಿ ಆಗಿರುವುದನ್ನು, ನಿಮ್ಮ ಸಮುದಾಯದ ವ್ಯಕ್ತಿ ಉಪ ಮುಖ್ಯಮಂತ್ರಿ ಆಗಿರುವುದನ್ನು ಸಹಿಸಿಕೊಳ್ಳಲು ನಿಮ್ಮಿಂದ ಆಗುತ್ತಿಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. ಭ್ರಷ್ಟರೆಲ್ಲರೂ ಸೇರಿ ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ಆರಂಭಿಸಿದ್ದಾರೆ ಎಂಬುದಾಗಿ ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ. https://twitter.com/INCKarnataka/status/1819762035552334067 https://kannadanewsnow.com/kannada/muda-scam-bjp-govt-allotted-plots-and-now-they-are-making-allegations-says-ugrappa/ https://kannadanewsnow.com/kannada/man-who-committed-suicide-by-jumping-on-metro-rail-tracks-in-bengaluru-has-been-identified/
ಬೆಂಗಳೂರು: ಬಿಜೆಪಿ ಸರ್ಕಾರವೇ ನಿವೇಶನ ಹಂಚಿಕೆ ಮಾಡಿ ಈಗ ಅವರೇ ಆರೋಪ ಮಾಡುತ್ತಿದ್ದಾರೆ. ಮೂಡ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಕೈವಾಡ ಇಲ್ಲ ಎನ್ನುವುದಕ್ಕೆ ಅನೇಕ ಸಾಕ್ಷಿಗಳಿವೆ. ಭೂಮಿ ಡಿ ನೋಟಿಫೈ ಆಗಿದ್ದು 1998 ರಲ್ಲಿ. ಅಂದರೆ 26 ವರ್ಷಗಳಾಗಿವೆ. ಸಿದ್ದರಾಮಯ್ಯನವರ ಕೈವಾಡ ಇದ್ದಿದ್ದರೆ ಈ ಹಿಂದೆಯೇ ವಿರೋಧ ಪಕ್ಷದವರು ದನಿ ಎತ್ತಬೇಕಾಗಿತ್ತು. ಈ ಭೂಮಿ ಮಾರಾಟವಾಗಿದ್ದು 2004ರಲ್ಲಿ ಅಂದರೆ ಭೂಮಿ ಮಾರಾಟವಾಗಿ 20 ವರ್ಷಗಳಾಯಿತು ಆಗಲು ಸಹ ಯಾರು ಕೂಡ ಭೂಮಿ ಮಾರಾಟ ಅಕ್ರಮ ಎಂದು ಪ್ರಶ್ನಿಸಲಿಲ್ಲ ಎಂಬುದಾಗಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಉಗ್ರಪ್ಪ ಅವರು ಕಿಡಿಕಾರಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರಿಗೆ ಈ ಭೂಮಿಯನ್ನ ಉಡುಗೊರೆಯಾಗಿ ನೀಡಿರುವುದು 2010ರಲ್ಲಿ ಆಗಲು ಸಹ ಯಾರು ಕೂಡ ಈ ಉಡುಗೊರೆ ಕೊಟ್ಟಿರೋದು ಅಕ್ರಮ ಎಂದು ಪ್ರಕರಣ ದಾಖಲಿಸಿಲ್ಲ. 14 ವರ್ಷದ ಆದರು ಯಾರು ಪ್ರಶ್ನೆ ಮಾಡಿಲ್ಲ ಎಂದರು. ಮೂಡ ನಮ್ಮ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದು ಪಾರ್ವತಿಯವರು 2015,…
ಬೆಂಗಳೂರು: ಇಂದು ದೊಡ್ಡಕಲ್ಲಸಂದ್ರದ ನಮ್ಮ ಮೆಟ್ರೋ ಹಸಿರು ಮಾರ್ಗದ ರೈಲು ನಿಲ್ದಾಣದಲ್ಲಿ ರೈಲು ಸಮೀಪ ಬರುತ್ತಿದ್ದಂತೆ ವ್ಯಕ್ತಿಯೊಬ್ಬ ರೈಲು ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದನು. ಹೀಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಬೆಂಗಳೂರಿನ ದೊಡ್ಡಕಲ್ಲಸಂದ್ರದ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಶರಣಾದಂತ ವ್ಯಕ್ತಿಯನ್ನು ನವೀನ್ ಕುಮಾರ್ ಅರೋರ(57) ಎಂಬುದಾಗಿ ಗುರುತಿಸಲಾಗಿದೆ. ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ದೊಡ್ಡಕಲ್ಲಸಂದ್ರದ ನಿಲ್ದಾಣಕ್ಕೆ ಬರುವವರೆಗೂ ಸುಮ್ಮನಿದ್ದಂತ ಆತ, ದಿಢೀರ್ ರೈಲಿನ ಮುಂದೆ ಹಾರಿದ್ದನು. ಮೆಟ್ರೋ ರೈಲಿನ ಮುಂದೆ ಹಾರಿದ್ದರಿಂದಾಗಿ ನವೀನ್ ಕುಮಾರ್ ಅರೋರ ರೈಲು ಅಡಿಗೆ ಸಿಲುಕಿ ಸುಮಾರು 40 ರಿಂದ 50 ಅಡಿಗಳ ದೂರದವರೆಗೆ ಮೃತದೇಹವನ್ನು ಕೊಂಡಯ್ಯಲಾಗಿತ್ತು. ಆತ್ಮಹತ್ಯೆಗೆ ಶರಣಾದಂತ ನವೀನ್ ಕುಮಾರ್ ಅರೋರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕೆ ಬಂದಂತ ಕೋಣನಕುಂಟೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/bjp-has-stooped-to-defame-cm-siddaramaiah-it-will-never-be-possible-l-hanumanthaiah/ https://kannadanewsnow.com/kannada/good-news-for-veerashaiva-lingayat-communities-applications-invited-for-these-schemes/
ಬೆಂಗಳೂರು: ಮುಡಾ ಹಗರಣ ಸಂಬಂಧ ಜನನಾಯಕ ಸಿದ್ಧರಾಮಯ್ಯ ಅವರ ತೇಜೋವಧೆ ಮಾಡಲಾಗುತ್ತಿದೆ. ರಾಜ್ಯಪಾಲರ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂಬುದಾಗಿ ಆರೋಪಿಸಿ, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಆಗಸ್ಟ್.5ರಂದು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲಿದ್ದಾವೆ. ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮುಖಂಡ ಅನಂತ್ ನಾಯ್ಕ್.ಎನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 05-08-2024ರಂದು ಜನನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ, ರಾಜ್ಯಪಾಲರ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಯುತ್ತಿರುವ ಷಡ್ಯಂತರವನ್ನು ವಿರೋಧಿಸಿ ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದರು. ನಾಡಿನ ಪ್ರಜ್ಞಾವಂತ, ಜನಪರ, ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಸಮುದಾಯ, ಸಂಘಟನೆಗಳ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ನಿಮ್ಮ ನಿಮ್ಮ ಜಿಲ್ಲಾ ಕೇಂದ್ರದಲ್ಲಿ ನಡೆಯುವ ಈ ಪ್ರತಿಭಟನೆ ಹೋರಾಟದಲ್ಲಿ ಭಾಗವಹಿಸಲು ವಿನಂತಿಸಿದ್ದಾರೆ. ಈ ವೇಳೆಯಲ್ಲಿ ಕೆ.ಎಂ ರಾಮಚಂದ್ರಪ್ಪ, ಮಾವಳ್ಳಿ ಶಂಕರ್ ಸೇರಿದಂತೆ ಬೆಂಗಳೂರಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವಿವಿಧ ಮುಖಂಡರಿಂದ ಪ್ರತಿಭಟನೆ ನಡೆಸಲಾಗುತ್ತದೆ…
ಬೆಂಗಳೂರು: ಅಹಿಂದ ವರ್ಗಗಳ ಮತಗಳನ್ನು ಹಾಗೂ ಎಲ್ಲಾ ವರ್ಗದ ಜನರನ್ನು ಸೆಳೆಯಬಲ್ಲಂತಹ ವ್ಯಕ್ತಿತ್ವ. ನಮ್ಮ ನಡುವಿನ ಜನಪ್ರಿಯ ನಾಯಕ ಸಿದ್ದರಾಮಯ್ಯನವರು. ಇವರ ತೇಜೋವಧೆ ಮಾಡುವ ಕೆಲಸಕ್ಕೆ ಬಿಜೆಪಿ ಇಳಿದಿದೆ, ಇದು ಖಂಡನೀಯ ಎಂಬುದಾಗಿ ರಾಜ್ಯಸಭಾ ಮಾಜಿ ಸದಸ್ಯರಾದ ಎಲ್ ಹನುಮಂತಯ್ಯ ಹೇಳಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಇಡೀ ದೇಶದ ಅಹಿಂದ ವರ್ಗದ ನಾಯಕರಲ್ಲಿ ಭ್ರಷ್ಟಾತೀತ ನಾಯಕರು ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯನವರು ಮಾತ್ರ. ಎಲ್ಲಾ ಪಕ್ಷದ ನಾಯಕರನ್ನು ಮುಂದೆ ಕೂರಿಸಿಕೊಂಡು ಈ ಮಾತನ್ನು ಧೈರ್ಯವಾಗಿ ಹೇಳಬಲ್ಲೆ ಎಂದರು. ಜನನಾಯಕರಾದ, ಜನರ ಅತ್ಯಂತ ವಿಶ್ವಾಸ ಗಳಿಸಿರುವ ನಾಯಕರನ್ನು ಗುರಿ ಮಾಡಿ ಅವರ ಜನಪ್ರಿಯತೆ ಕುಗ್ಗಿಸುವ ಕೆಲಸ ಬಿಜೆಪಿ ಮೊದಲಿನಿಂದಲೂ ಮಾಡುತ್ತಿದೆ. ಇದು ಕೇವಲ ಸಿದ್ದರಾಮಯ್ಯನವರ ಮೇಲೆ ಮಾತ್ರ ಮಾಡುತ್ತಿಲ್ಲ ವಿರೋಧ ಪಕ್ಷದಲ್ಲಿರುವ ಎಲ್ಲಾ ನಾಯಕರನ್ನು ಗುರಿಯಾಗಿಸಿಕೊಂಡು ಈ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಲಿಕ್ಕರ್ ಕೇಸಿನಲ್ಲಿ ಸಿಲುಕಿಸಿ ಜೈಲಿಗೆ ಕಳುಹಿಸಿದೆ ಬಿಜೆಪಿ. ಜಾರ್ಖಂಡಿನ ಮುಖ್ಯಮಂತ್ರಿ…
ಅತ್ತಿಬೆಲೆ: ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದಂತ ರೌಡಿ ಶೀಟರ್ ಕಾಲಿಗೆ ಗುಂಡೇಟು ನೀಡಿ, ಬಂಧಿಸಿದ್ದಾರೆ. ಈ ಮೂಲಕ 10ಕ್ಕೂ ಹೆಚ್ಚು ಕೇಸಲ್ಲಿ ಬೇಕಾಗಿದ್ದಂತ ವೆಂಕಟರಾಜು ಆಲಿಯಾಸ್ ತುಕಡಿ ಎಂಬಾತನನ್ನು ಬಂಧಿಸಲಾಗಿದೆ. ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ, ಕೊಲೆಯತ್ನ ಸೇರಿದಂತೆ 10ಕ್ಕೆ ಹೆಚ್ಚು ಕೇಸಲ್ಲಿ ರೌಡಿ ಶೀಟರ್ ವೆಂಕಟರಾಜು ಆಲಿಯಾಸ್ ತುಕಡಿ ಬೇಕಾಗಿದ್ದನು. ಹಲವು ದಿನಗಳಿಂದ ತಲೆಮರಿಸಿಕೊಂಡಿದ್ದಂತ ಆರೋಪಿ, ಇಂದು ಬೆಂಗಳೂರು ನಗರದ ಆನೇಕಲ್ ತಾಲ್ಲೂಕಿನ ರಾಗಿಹಳ್ಳಿ ಬಳಿ ಇರುವಂತ ಖಚಿತ ಮಾಹಿತಿ ಜಿಗಣಿ ಠಾಣೆಗೆ ಸಿಕ್ಕಿತ್ತು. ಕೂಡಲೇ ಅಲರ್ಟ್ ಆದಂತ ಜಿಗಣಿ ಠಾಣೆಯ ಇನ್ಸ್ ಪೆಕ್ಟರ್ ಮಂಜುನಾಥ್, ಪೊಲೀಸರ ತಂಡದೊಂದಿಗೆ ರಾಗಿಹಳ್ಳಿ ಸ್ಥಳಕ್ಕೆ ರೌಡಿ ಶೀಟರ್ ವೆಂಕಟರಾಜು ಆಲಿಯಾಸ್ ತುಕಡಿ ಎಂಬಾತನನ್ನು ಬಂಧಿಸೋದಕ್ಕೆ ತೆರಳಿದ್ದರು. ಪೊಲೀಸರು ಬಂಧನದ ವಿಷಯ ತಿಳಿದು ಸ್ಥಳದಿಂದ ಎಸ್ಕೇಪ್ ಆಗೋದಕ್ಕಾಗಿ ಮಾರಕಾಸ್ತ್ರಗಳಿಂದ ಕ್ರೈಂ ವಿಭಾಗದ ಸಿಬ್ಬಂದಿ ವಿನಯ್ ಮೇಲೆ ದಾಳಿ ನಡೆಸಿದ್ದಾನೆ. ಈ ವೇಳೆಯಲ್ಲಿ ಜಿಗಣಿ ಠಾಣೆ…