Subscribe to Updates
Get the latest creative news from FooBar about art, design and business.
Author: kannadanewsnow09
ಹಾವೇರಿ: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿ ಕಾಲೇಜು ಯುವತಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಹಾವೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಿಂದ ಮುಸ್ಲಿಮರನ್ನು ಓಡಿಸಲು ಹುನ್ನಾರ ನಡೆದಿದೆ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇಡೀ ಜಗತ್ತಿನಲ್ಲಿ ಎಲ್ಲಾದರೂ ಮುಸ್ಲಿಂಮರು ಸುರಕ್ಷತೆಯಿಂದ ಇದ್ದರೆ ಅದು ಭಾರತದಲ್ಲಿ ಮಾತ್ರ. ಇದನ್ನು ಮೊದಲು ಡಿ.ಕೆ. ಶಿವಕುಮಾರ್ ಅರ್ಥ ಮಾಡಿಕೊಳ್ಳಲಿ. ಅವರ ಜನಸಂಖ್ಯೆ ಅತಿ ವೇಗವಾಗಿ ಬೆಳೆಯುತ್ತಿರುವುದು ಭಾರತ ದೇಶದಲ್ಲಿ ಮಾತ್ರ. ಇಸ್ಲಾಂ ದೇಶದಲ್ಲಿ ಇವರ ಜನಸಂಖ್ಯೆ ಕಡಿಮೆ ಆಗುತ್ತಿದೆ. ಡಿ.ಕೆ. ಶಿವಕುಮಾರ್ ಅವರು ಓಟಿನ ರಾಜಕಾರಣಕ್ಕಾಗಿ ತುಷ್ಟಿಕರಣಕ್ಕಾಗಿ ಹಾಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು. ಇನ್ನು ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಮಾಡ್ತಿದೆ ಎಂಬ ವಿಧಾನ ಪರಿಷತ್ ಸದಸ್ಯ ಬಿ…
ಬೆಂಗಳೂರು: ವಾಮಮರ್ಗದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆ ಎಂದು ಜೆಡಿಎಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ. ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಹಿರಿಯ ಮುಖಂಡ ಆರ್.ಪ್ರಕಾಶ್ ಅವರಿದ್ದ ನಾಯಕರ ನಿಯೋಗ ಕೇಂದ್ರೀಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ವಿರುದ್ಧ ದೂರು ನೀಡಿದೆ. ಪಾರದರ್ಶಕವಾಗಿ, ನಿರ್ಭೀತಿ, ಭ್ರಷ್ಟಾಚಾರ ರಹಿತವಾಗಿ ನಡೆಯಬೇಕಿದ್ದ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡುಗಳನ್ನು ಹಂಚುವ ಮೂಲಕ ಕಲುಷಿತಗೊಳಿಸಿ ಅಕ್ರಮ ನಡೆಸುತ್ತಿದೆ. ನ್ಯಾಯ ಪತ್ರ ಹೆಸರಿನಲ್ಲಿ ಐದು ಗ್ಯಾರಂಟಿ ಕಾರ್ಡುಗಳ ಮೇಲೆ ಸಹಿ ಮಾಡಿ ಮತದಾರರಿಗೆ ಹಂಚಿಕೆ ಮಾಡುತ್ತಿರುವುದು ಚುನಾವಣಾ ನೀತಿ…
ಬೆಂಗಳೂರು: ಬರ ಪರಿಹಾರದ ವಿಚಾರದಲ್ಲಿ ಕರ್ನಾಟಕವನ್ನ ಕಡೆಗಣಿಸಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರೀ ಕೋರ್ಟ್ ತೀರ್ಪಿನಿಂದ ತೀವ್ರ ಮುಖಭಂಗವಾಗಿದೆ ಎಂದು ಸರ್ಕಾರದ ಮುಖ್ಯ ವಕ್ತಾರರಾಗಿರುವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ತಿಯಿಸಿದ ಅವರು, ಇದು ಕರ್ನಾಟಕದ ನ್ಯಾಯಯುತ ಹೋರಾಟಕ್ಕೆ ಸಂದಿರುವ ಜಯ ಎಂದರು. ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ. ಆದರೆ ಕೇಂದ್ರ ತಮಗಿಷ್ಟಬಂದಂತೆ ಬೇಕಾಬಿಟ್ಟಿಯಾಗಿ ನಡೆದುಕೊಳ್ತು. ಮೂರು ಬಾರಿ ರಾಜ್ಯದ ಬರ ಪರಿಸ್ಥಿತಿ ಕುರಿತು ವರದಿ ನೀಡಿದ್ವಿ. ಆದರೆ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ. ಅನಿವಾರ್ಯವಾಗಿ ಕರ್ನಾಟಕ ಸರ್ಕಾರದ ಕಾನೂನು ಹೋರಾಟಕ್ಕೆ ಇಳಿಯಬೇಕಾಯಿತು. ಕೇಂದ್ರ ಸರ್ಕಾರದ ವಿರುದ್ಧ ಸಂಘರ್ಷಕ್ಕಿಳಿಯುವ ಉದ್ದೇಶದಿಂದ ನಾವು ಕೋರ್ಟ್ ಮೊರೆ ಹೋಗಿರಲಿಲ್ಲ. ಕರ್ನಾಟಕದ ರೈತರು ಜನಸಾಮಾನ್ಯರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾನೂನಾತ್ಮಕವಾಗಿ ಸಿಗಬೇಕಾದ ಪರಿಹಾರಕ್ಕಾಗಿ ನಾವು ಕೋರ್ಟ್ ಗೆ ಹೋಗಿದ್ವಿ. ರಾಜ್ಯ…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದಂತ ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಮಾಜಿ ಪರಿಷತ್ ಸದಸ್ಯ ಅಶ್ವತ್ಥನಾರಾಯಣ ಅವರ ನೇತೃತ್ವದ ನಿಯೋಗವು ರಾಜ್ಯ ಚುನಾವಣಾ ಅಧಿಕಾರಿ ಕಚೇರಿಗೆ ತೆರಳಿ, ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯ ಅವರ ವಿರುದ್ಧ ದೂರು ನೀಡಿದೆ. ‘ಬಿಜೆಪಿ’ ಅಧಿಕಾರಕ್ಕೆ ಬಂದ್ರೆ ತಾಯಂದಿರು ‘ಗಂಡ-ಮಕ್ಕಳ’ನ್ನ ಕಳೆದುಕೊಳ್ತಾರೆ: ಯತೀಂದ್ರ ವಿವಾದ್ಮಕ ಹೇಳಿಕೆ ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲಾ ಧರ್ಮದ ತಾಯಂದಿರು ಗಂಡ-ಮಕ್ಕಳನ್ನು ಕಳೆದುಕೊಳ್ತಾರೆ ಎಂಬುದಾಗಿ ಡಾ.ಯತೀಂದ್ರ ಸಿದ್ಧರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮೈಸೂರಿನಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ಪ್ರಧಾನಿ ಮೋದಿ ಅವರನ್ನು ಟೀಕಿಸೋ ಭರದಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ, ಜನರ ಟೀಕೆಗೆ ಗುರಿಯಾಗಿದ್ದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ 70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷಗಳು ಆಡಳಿತ ನಡೆಸಿದ್ದಾವೆ. ಯಾವಾಗ್ಲೂ ಹಿಂದೂಗಳಿಗೆ…
ಬೆಂಗಳೂರು: “ಬೆಲೆ ಏರಿಕೆ, ಜಿಎಸ್ಟಿ ಹೊರೆ, ನಿರುದ್ಯೋಗ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿಜವಾದ ಗ್ಯಾರಂಟಿ” ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು. ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ದಕ್ಷಿಣದ ವಿವಿಧೆಡೆ ಭಾನುವಾರ ಪ್ರಚಾರ ನಡೆಸಿದ ಸುರೇಶ್ ಅವರು, “ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾದ ಕೇಳಲು ನಾನು ಬಂದಿದ್ದೇನೆ. ಈ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷವಾಗಿದೆ. ರಾಜ್ಯದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು 10 ತಿಂಗಳಾಗಿವೆ. ಕಾಂಗ್ರೆಸ್ ಸರ್ಕಾರದ ಈ ಹತ್ತು ತಿಂಗಳ ಸಾಧನೆ ಏನು, ಕೇಂದ್ರ ಬಿಜೆಪಿ ಸರ್ಕಾರ 10 ವರ್ಷಗಳ ಸಾಧನೆ ಏನು ಎಂಬುದನ್ನು ಈ ಚುನಾವಣೆಯಲ್ಲಿ ಚರ್ಚೆ ಮಾಡಬೇಕು ಎಂದರು. ನೀವೆಲ್ಲರೂ ಟಿವಿಗಳಲ್ಲಿ ಕಾಂಗ್ರೆಸ್ ನ ಐದು ಗ್ಯಾರಂಟಿ ಹಾಗೂ ಮೋದಿ ಗ್ಯಾರಂಟಿ ಬಗ್ಗೆ ಜಾಹೀರಾತು ನೋಡುತ್ತಿದ್ದೀರಿ. ಇಲ್ಲಿರುವ ಜನರ ಪೈಕಿ ಮೋದಿ ಗ್ಯಾರಂಟಿ ಎಷ್ಟು…
ಬೆಂಗಳೂರು: ಹಾಪ್ಕಾಮ್ಸ್ ರೈತರು ಹಾಗೂ ನೌಕರರ ಸಂಘ, ಕರ್ನಾಟಕ ರಾಜ್ಯ ನೇಕಾರರ ಸಮುದಾಯಗಳ ಸಮ್ಮಿಲನ ವೇದಿಕೆ ಹಾಗೂ ರಾಜ್ಯ ಆರ್ಯ ವೈಶ್ಯ ಸಮುದಾಯದವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಗೆ ಬೆಂಬಲ ಘೋಷಿಸಿದ್ದಾರೆ. ಇಂದು ಹಾಪ್ಕಾಮ್ಸ್ ರೈತರು ಹಾಗೂ ನೌಕರರ ಸಂಘ ಸಭೆಯನ್ನು ನಡೆಸಿ, ಕಳೆದ 30 ವರ್ಷಗಳಿಂದಲೂ ಹಾಪ್ಕಾಮ್ಸ್ ಹಾಗೂ ನೌಕರರ ಬಗ್ಗೆ ವಿಶೇಷ ಕಾಳಜಿ ಮತ್ತು ಪ್ರೀತಿ ತೋರಿ, ಹಾಫ್ ಕಾಮ್ಸ್ ಅಭಿವೃದ್ಧಿಗೆ ನಿರಂತರ ಸಹಕಾರ ನೀಡಿರುವ ಏಕೈಕ ರಾಜಕಾರಣಿ ಅಂದರೆ ಅದು ರಾಮಲಿಂಗಾರೆಡ್ಡಿರವರು, ಅವರ ಕಾರ್ಯವನ್ನು ಸ್ಮರಿಸಿ ಅಖಂಡ ಹಾಪ್ ಕಾಮ್ಸ್ ನೌಕರರು ರಾಮಲಿಂಗಾರೆಡ್ಡಿ ರವರ ಮಗಳಾದ ಸೌಮ್ಯ ರೆಡ್ಡಿ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ಘೋಷಿಸಿದರು. ಅದರಂತೆ ರಾಜ್ಯ ನೇಕಾರರ ಸಮುದಾಯದ ಒಕ್ಕೂಟದ ಅಧ್ಯಕ್ಷರಾದ ಲಕ್ಷ್ಮಿ ನಾರಾಯಣಪ್ಪ ರವರು ಮಾತನಾಡಿ ರಾಜ್ಯ ಸರ್ಕಾರವು ನೇಕಾರರಿಗೆ ಉಚಿತ ವಿದ್ಯುತ್, ರೂ.2 ಲಕ್ಷದವರೆಗೆ ಶೇ.1 ರೂ ಬಡ್ಡಿ ದರದಲ್ಲಿ ಸಾಲ, ರೂ. 2…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಮತಾಂಧ ಶಕ್ತಿಗಳು ಹಿಂದೂಗಳನ್ನು ಕೊಲ್ಲಿಸುವುದಕ್ಕಾ ಎನ್ನುವ ಅನುಮಾನ ಹುಟ್ಟಿಕೊಂಡಿದೆ ಎಂಬುದಾಗಿ ಕರ್ನಾಟಕ ಬಿಜೆಪಿ ಅನುಮಾನ ವ್ಯಕ್ತ ಪಡಿಸಿದೆ. ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಬಿಜೆಪಿಯು, ಯಾದಗಿರಿಯಲ್ಲಿ ಮತಾಂಧರಿಂದ ದಲಿತನ ಹತ್ಯೆ. ಮತಾಂಧ ಶಕ್ತಿಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ತಲೆ ಮೇಲೆ ಕೂರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು ಮತಾಂಧ ಶಕ್ತಿಗಳು ಹಿಂದೂಗಳನ್ನು ಕೊಲ್ಲಿಸುವುದಕ್ಕೆ ಎನ್ನುವ ಅನುಮಾನ ಹುಟ್ಟಿಕೊಂಡಿದೆ ಎಂಬುದಾಗಿ ಕಿಡಿಕಾರಿದೆ. https://twitter.com/BJP4Karnataka/status/1782367969823392201?t=36sij7b-YZDF2D0DkvD7Eg&s=08 ಹಿಂದೂ ಯುವತಿ ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ಪ್ರತಿಭಟನೆಗೆ ಪ್ರತಿಯೊಬ್ಬರು ಜಾತಿ, ಧರ್ಮವನ್ನು ಮೀರಿ ಬೆಂಬಲ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧತೆ ಹೆಚ್ಚಾಗಿದೆ. ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಅರಾಜಕತೆ ಸೃಷ್ಟಿಯಾಗಿರುವುದೇ ಈ ಎಲ್ಲಾ ಅನಾಹುತಗಳಿಗೆ ಕಾರಣ ಎಂದು ಗುಡುಗಿದೆ. https://twitter.com/BJP4Karnataka/status/1782377739183632490 ಬಾಂಧವರ ವೋಟ್ ಕಳೆದುಕೊಳ್ಳುವ ಭಯಕ್ಕೆ…
ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಅದೃಷ್ಟದ ಬದಲಾವಣೆಯಾಗುತ್ತದೆ.. ಮೂಲ ನಕ್ಷತ್ರದವರಿಗೆ ಯೆ,ಯೊ,ಬ,ಬಿ ಇವರಿಗೆ ನೀಮ್ಮಗೆ ಎಷ್ಟೇ ಸಮಸ್ಯೆಗಳು ಇದರು ಬಗ್ಗೆ ಆರಿಯುತ್ತದೆ. ಇದು ಹರಿ ವಾಕ್ ಸತ್ಯ ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು…
ಧಾರವಾಡ: ಜಿಎಸ್ಟಿ ಪಾವತಿಸದೇ ವಂಚಿಸಿದಂತ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದ 8 ಕಾಲೇಜುಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಏಕಕಾಲಕ್ಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದ 8 ಕಾಲೇಜುಗಳ ಮೇಲೆ ಜಿಎಸ್ಟಿ ವಂಚನೆ ಆರೋಪದ ಹಿನ್ನಲೆಯಲ್ಲಿ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಧಾರವಾಡದ ಅಣ್ಣಿಗೇರಿ ಕಾಲೇಜು, ಮಹೇಶ ಪಿಯು ಕಾಲೇಜು, ಪ್ರೇರಣಾ ಕಾಲೇಜುಗಳ ಮೇಲೆ ದಾಳಿ ನಡೆಸಲಾಗಿದೆ. ಇವಲ್ಲದೇ ಜಿಎಸ್ಎಸ್ ಆವಂತಿಕಾ ಕೋಚಿಂಗ್ ಸೆಂಟರ್ ಮತ್ತು ಚೇತನಾ ಪಿಯು ಕಾಲೇಜು ಸೇರಿದಂತೆ 8 ಕಾಲೇಜುಗಳ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ. ವಿದ್ಯಾರ್ಥಿಗಳಿಗೆ ಕೋಚಿಂಗ್ ಹೆಸರಿನಲ್ಲಿ ವಿವಿಧ ಪರೀಕ್ಷೆಗಾಗಿ ಸಂಗ್ರಹಿಸಿದಂತ ಹಣದಲ್ಲಿ ಜಿಎಸ್ಟಿ ಕಟ್ಟದೇ ವಂಚನೆ ಮಾಡಿದಂತ ಆರೋಪ ಈ ಕಾಲೇಜುಗಳ ಮೇಲೆ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಜಂಟಿ ಆಯುಕ್ತ ರವಿಕುಮಾರ್ ನೇತೃತ್ವದಲ್ಲಿ ದಾಳಿ…
ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸೋ ವಾಹನ ಸವಾರರಿಗೆ ಸಂಚಾರ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿ, ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ಬರೋಬ್ಬರಿ 19.55 ಕೋಟಿ ದಂಡವನ್ನು ವಸೂಲಿ ಮಾಡಿದ್ದಾರೆ. ಬೆಂಗಳೂರು ನಗರದಲ್ಲಿ ಸಂಚಾರ ನಿಯಮ ರೂಲ್ಸ್ ಬ್ರೇಕ್ ಮಾಡೋರಿಗೆ, ಸಂಚಾರ ಪೊಲೀಸರು ಆಗಾಗ್ಗೆ ಶಾಕ್ ನೀಡ್ತಾ ಇದ್ದಾರೆ. ಈಗ 1 ಲಕ್ಷಕ್ಕೂ ಹೆಚ್ಚು ದಂಡದ ಮೊತ್ತವಿರುವ 123 ವಾಹನಗಳ ಪಟ್ಟಿ ಮಾಡಿ, ವಾಹನ ಮಾಲೀಕರ ಪತ್ತೆಗೆ ನೋಟಿಸ್ ನೀಡಲು ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ. ಅಲ್ಲದೇ ದಂಡ ಪಾವತಿಸದೇ ಇದ್ದಂತವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸೋದಕ್ಕೂ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನೂ ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘಿಸಿದಂತ 3,71,516 ವಾಹನ ಮಾಲೀಕರಿಂದ ಬರೋಬ್ಬರಿ 19,54,16,400 ದಂಡವನ್ನು ವಸೂಲಿ ಮಾಡಿದ್ದಾರೆ. ಇವುಗಳಲ್ಲಿ 2,742 ಬೈಕ್ ಸವಾರರಿಂದ 3,61,292 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸುಮಾರು 18,76,34,300 ರೂ ದಂಡವನ್ನು ವಸೂಲಿ ಮಾಡಿದ್ದು ಸೇರಿದೆ. https://kannadanewsnow.com/kannada/kannadigas-will-never-tolerate-step-motherly-attitude-of-central-government-randeep-surjewala/ https://kannadanewsnow.com/kannada/computer-literacy-test-important-information-for-state-government-employees/