Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು (ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ ಸಂಯೋಜಕರ-01 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೇರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 08 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 4.00 ರವರೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಎನ್.ಸಿ.ಡಿ. ಘಟಕ, ಮೆಗ್ಗಾನ್ ಆಸ್ಪತ್ರೆ ಆವರಣ, ತುಂಗಾ ವಿದ್ಯಾರ್ಥಿನಿಯರ ವಸತಿ ನಿಲಯದ ಎದುರು, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ದಾಖಲೆಗಳ ಮೂಲಪ್ರತಿ ಮತ್ತು ಛಾಯಾಪ್ರತಿಗಳೊಂದಿಗೆ ಭಾಗವಹಿಸುವಂತೆ ಎನ್.ಸಿ.ಡಿ. ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ವೈದ್ಯರಿಗೆ ವಿಶೇಷ ಸೂಚನೆ: ಪ್ರತಿ ತಿಂಗಳ 1, 10 ಮತ್ತು 20ನೇ ತಾರೀಖಿನಿಂದು ವೈದ್ಯರ ಮತ್ತು ತಜ್ಞ ವೈದ್ಯರ ಹುದ್ದೆಗೆ (ರಜೆ ಇರುವ ದಿನವಿದ್ದರೆ ನಂತರದ ದಿನದಲ್ಲಿ)…
ಬಳ್ಳಾರಿ : ನಗರದ ಕಂಟೋನ್ಮೆAಟ್ನ ಶಾಂತಿಧಾಮ ಆವರಣದ ಸರ್ಕಾರಿ ಕಿವುಡು ಮತ್ತು ಮೂಕ ಮಕ್ಕಳ ಪಾಠಶಾಲೆಯಲ್ಲಿ ವಿಶೇಷ ಶಿಕ್ಷಕರ 01 ಹುದ್ದೆಗೆ ಬಾಹ್ಯಮೂಲದಿಂದ ಅಂಶಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ ವಿದ್ಯಾರ್ಹತೆ (ವಿಶೇಷ ಡಿ.ಇಡಿ, ವಿಶೇಷ ಬಿ.ಇಡಿ) ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜನ್ಮದಿನಾಂಕ ಪ್ರಮಾಣ ಪತ್ರ, ಆಧಾರ್ಕಾರ್ಡ್, ಬ್ಯಾಂಕ್ ಪಾಸ್ಬುಕ್, ವಾಸಸ್ಥಳ ಪ್ರಮಾಣ ಪತ್ರ ಸೇರಿ ದೃಢೀಕೃತ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆ.15 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆಯ ಅಧೀಕ್ಷರ ಕಚೇರಿ ಅಥವಾ ದೂ.08392-297138, ಮೊ.9008485380, 9902106670 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆಯ ಅಧೀಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/false-allegations-levelled-against-cm-in-muda-scam-minister-k-j-george/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/
ಚಿಕ್ಕಮಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ದಲ್ಲಿ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿದ ಪ್ರತಿಪಕ್ಷಗಳು, ಮುಖ್ಯಮಂತ್ರಿಗಳಿಗೆ ಉತ್ತರ ನೀಡಲೂ ಅವಕಾಶ ಕೊಡದೆ ಸುಳ್ಳನ್ನು ಸತ್ಯ ಮಾಡುವ ಪ್ರಯತ್ನ ನಡೆಸಿದವು ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಮುಖ್ಯಮಂತ್ರಿಯವರ ಪತ್ನಿಗೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡುವ ಮೂಲಕ ಅಕ್ರಮ ಎಸಗಲಾಗಿದೆ ಎಂಬುದು ಪ್ರತಿಪಕ್ಷಗಳ ಆರೋಪ. ಆದರೆ, 50:50 ಅನುಪಾತದಲ್ಲಿ ಹಂಚಿಕೆ ಮಾಡುವ ನಿರ್ಧಾರ ಕೈಗೊಂಡಿದ್ದು ಯಾರು? ಬಿಜೆಪಿ ಸರ್ಕಾರವಲ್ಲವೇ,”? ಎಂದು ಪ್ರಶ್ನಿಸಿದರು. “ಮೂಡಾ ನಿವೇಶನಗಳ ಹಂಚಿಕೆಗೆ ಭೂಸ್ವಾಧೀನ ಮಾಡದೆ ಮುಖ್ಯಮಂತ್ರಿಯವರ ಪತ್ನಿಯ ಜಮೀನು ಪಡೆಯಲಾಗಿತ್ತು. ಕಾನೂನು ಪ್ರಕಾರ ಆ ಭೂಮಿಯನ್ನು ಸ್ವಾಧೀನದಿಂದ ಕೈಬಿಡಬೇಕಿತ್ತು. ಆದರೆ, 50:50 ಅನುಪಾತದಲ್ಲಿ ನಿವೇಶನ ನೀಡುವುದಾಗಿ ಹೇಳಿ ಅದರಂತೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕ್ರಮ ಕೈಗೊಳ್ಳಲಾಗಿತ್ತು. ಈಗ…
ಬೆಂಗಳೂರು: ಹಲವು ಪ್ರಖ್ಯಾತಿಗೆ ಪಾತ್ರವಾಗಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಮತ್ತೊಂದು ಸಾಧನೆ ಮಾಡಿದೆ. 14-ವರ್ಷದ ರೋಗಿಯೊಬ್ಬರಿಗೆ ಮೊದಲ ಪೀಡಿಯಾಟ್ರಿಕ್ ಮ್ಯಾಚಡ್ ಸಿಬ್ಲಿಂಗ್ ಡೋನರ್ ಅಲೋಜೆನಿಕ್ ಬೋನ್ ಮ್ಯಾರೊ ಟ್ರಾನ್ಸ್ ಪ್ಲಾಂಟ್ (ಬಿಎಂಟಿ) (ಅಸ್ತಿಮಜ್ಜೆ ಕಸಿ) ಚಿಕಿತ್ಸೆಯನ್ನು ಯಶಸ್ವಿಗೊಳಿಸುವ ಮೂಲಕ ರಾಜ್ಯ ಕಿದ್ವಾಯಿ ಆಸ್ಪತ್ರೆ ಹೊಸ ಮೈಲಿಗಲ್ಲು ಸೃಷ್ಟಿಸಿದೆ. ಅಲ್ಲದೇ ಬಡ ರೋಗಿಯ ಬದುಕಿಗೆ ಬೆಳಕಾದಂತೆ ಆಗಿದೆ. ಅಕ್ಯೂಟ್ ಮೈಲೋಯ್ಡ್ ಲ್ಯುಕೇಮಿಯಾ (ರಕ್ತದ ಕ್ಯಾನ್ಸರ್ ಪ್ರಕಾರ) ದಿಂದ ಬಳಲುತ್ತಿದ್ದ 14-ವರ್ಷದ ಅರ್ಚನಾ (ಹೆಸರು ಬದಲಾಯಿಸಲಾಗಿದೆ) ಎರಡು ತಿಂಗಳ ಹಿಂದೆ ನಗರದಲ್ಲಿರುವ ಕಿದ್ವಾಯಿ ಆಸ್ಪತ್ರೆಗೆ ದಾಖಲಾಗಿದ್ದರು. ರೋಗದ ಕ್ಯಾನ್ಸರ್ ವಕ್ರೀಕಾರಕವಾಗಿತ್ತು, ಅಂದರೆ ಇದು ಸಾಂಪ್ರದಾಯಿಕ ಕೀಮೋಥೆರಪಿಗೆ ನಿರೋಧಕವಾಗಿತ್ತು. ಬಿಎಂಟಿ ಮಕ್ಕಳ ವಿಭಾಗದ ವೈದ್ಯೆ ಡಾ ವಸುಂಧರಾ ಕೈಲಾಸನಾಥ್ ಹಾಗೂ ಅವರ ತಂಡವು ರೋಗಿಯ ಕಿರಿಯ ಸಹೋದರನ ಕಾಂಡಕೋಶಗಳನ್ನು ಬಳಸಿಕೊಂಡು ಅಲೋಜೆನಿಕ್ ನಂತರ ಹೆಚ್ಚಿನ ಪ್ರಮಾಣದ ಕೀಮೋಥೆರಪಿಯೊಂದಿಗೆ ಚಿಕಿತ್ಸೆ ನೀಡಲು ನಿರ್ಧರಿಸಿತು. ಆಕೆಯ ಕಿರಿಯ ಸಹೋದರ ಸಂಪೂರ್ಣ ಆನುವಂಶಿಕ ಹೊಂದಾಣಿಕೆ 12/12 ಎಚ್ಎಲ್ಎ ಹೊಂದಾಣಿಕೆಯಾಗಿದ್ದರಿಂದ…
ಬೆಂಗಳೂರು : ವನ್ಯಜೀವಿ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿಗಳಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್ ಶಿಪ್ ಅಲೋಯನ್ಸ್)ಯನ್ನು ಮಂಜೂರು ಮಾಡಿದ್ದು, ಈ ಸಿಬ್ಬಂದಿಯ ಬಹು ದಿನಗಳ ಬೇಡಿಕೆ ಈಡೇರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿಗಳಿಗೆ ತಲಾ 3500, ಅರಣ್ಯ ರಕ್ಷಕರಿಗೆ 2700 ಹಾಗೂ ಡಿ ದರ್ಜೆ ನೌಕರರಿಗೆ 2000 ರೂ.ಗಳನ್ನು ಮಾಸಿಕ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ. ರಾಜ್ಯದ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಹಾಗೂ ಬಂಡೀಪುರ ವ್ಯಾಪ್ತಿಯಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಇದರ ನಿಗ್ರಹಕ್ಕಾಗಿ ಆನೆ ಕಾರ್ಯಪಡೆ ರಚಿಸಲಾಗಿದ್ದು, ಇದರಲ್ಲಿ ಕಾರ್ಯ ನಿರ್ವಹಿಸುವ ಹೊರಗುತ್ತಿಗೆ ಸಿಬ್ಬಂದಿಯೂ ಸೇರಿದಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾಸಿಕ ಕರ್ತವ್ಯ ನಿರ್ವಹಿಸಿದ 6 ದಿನಗಳಿಗೆ 500 ರೂ. ಆಧಾರದಲ್ಲಿ ತಿಂಗಳಿಗೆ ಗರಿಷ್ಠ 2000 ರೂ.…
ಶಿವಮೊಗ್ಗ: ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡಾವಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ, ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಮತ್ತು ಬಡ್ಡಿ ಸಹಾಯಧನ ಸೌಲಭ್ಯ ನೀಡಲು ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲಾಖೆಯ https://shimoga.nic.in ಪೊರ್ಟಲ್ ಮೂಲಕ ದಿ: 30/08/2024 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-223376, ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9380561275, ಸೊರಬ, ಶಿಕಾರಿಪುರ, ಹೊಸನಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9481743640 ಹಾಗೂ ಸಾಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9448401714 ಇವರುಗಳನ್ನು ಸಂಪರ್ಕಿಸುವುದು. https://kannadanewsnow.com/kannada/tushar-girinath-warns-of-fir-if-unauthorised-flexes-banners-are-installed-in-bbmp-limits/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್/ಬ್ಯಾನರ್ ಗಳನ್ನು ಪಾಲಿಕೆಯಿಂದ ತೆರವುಗೊಳಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್.ಐ.ಆರ್ ದಾಖಲಿಸಲಾಗುತ್ತಿದೆ. ಆದರೂ ಸಾರ್ವಜನಿಕ ಸ್ಥಳ, ರಸ್ತೆ ಬದಿ ಫ್ಲೆಕ್ಸ್ ಅಳವಡಿಸುವುದು ಮಾತ್ರ ನಿಯಂತ್ರಣವಾಗುತ್ತಿಲ್ಲ. ಆದ್ದರಿಂದ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಜಾಹೀರಾತು ಅಳವಡಿಕೆಗೆ ನಿಯಂತ್ರಣ ತರಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು. ವಲಯವಾರು ಬರುವ ಫ್ರಿಂಟಿಂಗ್ ಯುನಿಟ್ಸ್…
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಸಿಬಿಐ ಕೇಸಲ್ಲಿ ದೆಹಲಿ ಸಿಎಂ ಅರವಿದ್ ಕೇಜ್ರಿವಾಲ್ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಇಂದು ಕೂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ರಿಲೀಫ್ ಸಿಕ್ಕಿಲ್ಲ. ದೆಹಲಿ ಅಬಕಾರಿ ನೀತಿ ‘ಹಗರಣ’ಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್ ಸೋಮವಾರ ಕಾಯ್ದಿರಿಸಿದೆ. ಇದಕ್ಕೂ ಮುನ್ನ ಸಿಬಿಐ ಈ ಪ್ರಕರಣದಲ್ಲಿ ತನ್ನ ಅಂತಿಮ ಚಾರ್ಜ್ಶೀಟ್ ಸಲ್ಲಿಸಿತ್ತು. https://kannadanewsnow.com/kannada/cm-siddaramaiah-pays-tribute-to-krs-in-ashada/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/
ಮಂಡ್ಯ: ಬಹುತೇಕ ಶುಭ ಕಾರ್ಯಗಳನ್ನು ಪ್ರಾರಂಭಿಸೋದು, ಅಣಿಯಾಗೋದು ಆಷಾಡ ಮುಗಿದ ಮೇಲೆಯೇ ಆಗಿದೆ. ಆದರೇ ಸಿಎಂ ಸಿದ್ಧರಾಮಯ್ಯ ಆಷಾಡದಲ್ಲೂ ಕೆ ಆರ್ ಎಸ್ ಡ್ಯಾಂಗೆ ಬಾಗಿನ ಅರ್ಪಿಸುವ ಮೂಲಕ ಸಂಪ್ರದಾಯವನ್ನು ಮುರಿದಿದ್ದಾರೆ. ಇದಷ್ಟೇ ಅಲ್ಲದೇ ಇದೇ ಮೊದಲ ಬಾರಿಗೆ ಬಾಗಿನ ಅರ್ಪಿಸಿದ ಬಳಿಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಬರ್ಜರಿ ಬಾಡೂಟದ ವ್ಯವಸ್ಥೆ ಮಾಡಿ, ಸಂಪ್ರದಾಯಕ್ಕೂ ತಿಲಾಂಜಲಿ ಇಟ್ಟಿದ್ದಾರೆ. ಇಂದು ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಾಗಿನ ಅರ್ಪಿಸಿದರು. ಆದರೇ ಸಂಪ್ರದಾಯ ಮುರಿಯುವಂತೆ ಆಷಾಡದಲ್ಲಿ ಬಾಗಿನ ಅರ್ಪಿಸಿದ್ದು ವಿಶೇಷವಾಗಿತ್ತು. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಕಾವೇರಿಗೆ ಬಾಗಿನ ಅರ್ಪಿಸಿದ ಬಳಿಕ ಅತ್ತ ತೆರಳುತ್ತಲೇ ಕಾವೇರಿ ನಿರಾವರಿ ನಿಗಮದ ಅಧಿಕಾರಿಗಳ ಯಡವಟ್ಟೋ ಅಥವಾ ಸಂಪ್ರದಾಯ ಮುರಿಯುವಂತೆಯೋ, ಅಧಿಕಾರಿಗಳಿಗೆ ಭರ್ಜರಿ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಕೆ ಆರ್ ಎಸ್ ನ ಖಾಸಗೀ ಹೋಟೆಲ್ ನಲ್ಲಿ ಕಾವೇರಿ ನೀರಾವರಿ…
ನವದೆಹಲಿ: 2025 ರ ಪುರುಷರ ಏಷ್ಯಾ ಕಪ್ ( Men’s Asia Cup in 2025 ) ಆವೃತ್ತಿಗೆ ಭಾರತ ಆತಿಥ್ಯ ವಹಿಸಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (Asian Cricket Council -ACC) ದೃಢಪಡಿಸಿದೆ. ಮಹಿಳಾ ಏಷ್ಯಾ ಕಪ್ 2024 ರ ಫೈನಲ್ಗೆ ಒಂದು ದಿನ ಮುಂಚಿತವಾಗಿ ಜುಲೈ 27 ರ ಶನಿವಾರ ಎಸಿಸಿ ಆಸಕ್ತಿಗಳ ಅಭಿವ್ಯಕ್ತಿಗಾಗಿ ಆಹ್ವಾನ (ಐಇಒಐ) ದಾಖಲೆಯನ್ನು ಬಿಡುಗಡೆ ಮಾಡಿದ ನಂತರ ಈ ಸುದ್ದಿಯನ್ನು ದೃಢಪಡಿಸಲಾಗಿದೆ. 2024 ರಿಂದ 2027 ರ ಅವಧಿಗೆ ಎಸಿಸಿ ಪ್ರಾಯೋಜಕತ್ವ ಹಕ್ಕುಗಳಿಗಾಗಿ ತಮ್ಮ ಐಇಒಐ ಸಲ್ಲಿಸಲು ಆಸಕ್ತ ಪಕ್ಷಗಳನ್ನು ಡಾಕ್ಯುಮೆಂಟ್ ಆಹ್ವಾನಿಸಿದೆ. “ಕೆಳಗೆ ನೀಡಲಾದ ಎಸಿಸಿ ಪಂದ್ಯಾವಳಿಗಳಿಗೆ ಸಂಬಂಧಿಸಿದಂತೆ ವೇಳಾಪಟ್ಟಿಗಳು, ದಿನಾಂಕಗಳು, ವರ್ಷಗಳು, ಸ್ವರೂಪಗಳು ಮತ್ತು / ಅಥವಾ ಸ್ಥಳಗಳು ಸೇರಿದಂತೆ ಆದರೆ ಸೀಮಿತವಾಗಿಲ್ಲದ ವಿವರಗಳು ತಾತ್ಕಾಲಿಕವಾಗಿವೆ ಮತ್ತು ಎಸಿಸಿಯ ಸಂಪೂರ್ಣ ವಿವೇಚನೆಯ ಮೇರೆಗೆ ಮತ್ತು ಎಸಿಸಿಗೆ ಯಾವುದೇ ಹೊಣೆಗಾರಿಕೆಯಿಲ್ಲದೆ ಯಾವುದೇ ಸಮಯದಲ್ಲಿ ಬದಲಾವಣೆಗೆ ಒಳಪಟ್ಟಿರಬಹುದು” ಎಂದು ಡಾಕ್ಯುಮೆಂಟ್ ಹೇಳಿದೆ.…