Subscribe to Updates
Get the latest creative news from FooBar about art, design and business.
Author: kannadanewsnow09
ಯುರೋಪಿಯನ್ ಕ್ರಿಕೆಟ್ಗೆ ಒಂದು ಹೆಗ್ಗುರುತು ಎನ್ನುವಂತೆ ಇಟಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಐಸಿಸಿ ಪುರುಷರ ಟಿ 20 ವಿಶ್ವಕಪ್ಗೆ ಅಧಿಕೃತವಾಗಿ ಅರ್ಹತೆ ಪಡೆದಿದೆ. ಪ್ರಾದೇಶಿಕ ಅರ್ಹತಾ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ತಂಡವು ತನ್ನ ಸ್ಥಾನವನ್ನು ಪಡೆದುಕೊಂಡಿತು, ಇದು ಜಾಗತಿಕ ವೇದಿಕೆಯಲ್ಲಿ ಇಟಾಲಿಯನ್ ಕ್ರಿಕೆಟ್ಗೆ ಪ್ರಮುಖ ಪ್ರಗತಿಯ ಕ್ಷಣವಾಗಿದೆ. ಇಟಲಿಯ ಅರ್ಹತೆಯು ಸಾಂಪ್ರದಾಯಿಕವಲ್ಲದ ದೇಶಗಳಲ್ಲಿ ಕ್ರಿಕೆಟ್ನ ಬೆಳೆಯುತ್ತಿರುವ ಉಪಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಸ್ಥಿರ ಪ್ರದರ್ಶನ, ತೀಕ್ಷ್ಣವಾದ ತಂತ್ರಗಳು ಮತ್ತು ದೇಶೀಯ ಮತ್ತು ವಿದೇಶಿ ಮೂಲದ ಆಟಗಾರರ ಅತ್ಯುತ್ತಮ ಕೊಡುಗೆಗಳೊಂದಿಗೆ, ಇಟಲಿ ವಿಶ್ವದ ಅತ್ಯುತ್ತಮ ತಂಡಗಳೊಂದಿಗೆ ಸ್ಪರ್ಧಿಸಲು ಸಿದ್ಧವಾಗಿದೆ ಎಂದು ಸಾಬೀತುಪಡಿಸಿತು. 2026 ರಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ 20 ವಿಶ್ವಕಪ್ನಲ್ಲಿ ಸ್ಪರ್ಧಿಸುವ 20 ತಂಡಗಳಲ್ಲಿ ಇಟಲಿ ಈಗ ಸೇರಲಿದೆ. ದಕ್ಷಿಣ ಯುರೋಪಿನಲ್ಲಿ ಹೊಸ ಪೀಳಿಗೆಯ ಕ್ರಿಕೆಟಿಗರಿಗೆ ಒಂದು ಗುರುತು ಬಿಟ್ಟು ಸ್ಫೂರ್ತಿ ನೀಡುವ ಗುರಿಯನ್ನು ಹೊಂದಿರುವುದರಿಂದ ಅವರ ಚೊಚ್ಚಲ ಪಂದ್ಯವನ್ನು ಸೂಕ್ಷ್ಮವಾಗಿ ಗಮನಿಸಲಾಗುವುದು. ಹೊರಗಿನವರಾಗಿರುವುದರಿಂದ ಹಿಡಿದು ವಿಶ್ವದ ಅತಿದೊಡ್ಡ…
ಮೈಸೂರು: ಮೈಸೂರಿನ ಅಗ್ರಹಾರ ವಾರ್ಡಿನ ರಾಮಾನುಜ ರಸ್ತೆಯಲ್ಲಿ ನಿನ್ನೆ ರಾತ್ರಿ ಮಚ್ಚು ಲಾಂಗು ಗಳಿಂದ ಆಟೋದಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿರುವುದು ನಿಜಕ್ಕೂ ಖಂಡನೀಯ ಎಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೋಲಿಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ರಾಮಾನುಜ ರಸ್ತೆಯಲ್ಲಿ ಇಂತಹ ಘಟನೆಗಳು ನಡೆದಿರಲಿಲ್ಲ ಇಂತಹಾ ಘಟನೆಯಿಂದ ಸ್ಥಳೀಯ ನಿವಾಸಿಗಳಿಗೆ ಆತಂಕ ಉಂಟಾಗಿದೆ ಎಂದು ತೇಜಸ್ವಿ ಹೇಳಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಇತರ ಪುಂಡರಿಗೂ ಎಚ್ಚರಿಕೆ ನೀಡಬೇಕೆಂದು ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ. https://kannadanewsnow.com/kannada/local-farmers-agree-to-provide-land-for-sharavati-pumped-storage-mla-gopalakrishna-beluru/ https://kannadanewsnow.com/kannada/leaders-should-retire-at-75-rss-chief-mohan-bhagwats-statement-that-created-a-huge-stir/
ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಕಾಮಗಾರಿಗೆ ಸ್ಥಳೀಯ ರೈತರು ಒಪ್ಪಿಕೊಂಡಿದ್ದು ಭೂಮಿ ಬಿಟ್ಟುಕೊಡಲು ಒಪ್ಪಿದ್ದಾರೆ. ಪಂಪ್ಡ್ ಸ್ಟೋರೇಜ್ಗಾಗಿ ರೈತರ 8.32 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶರಾವತಿ ಅಂತರ್ಗತ ಭೂವಿದ್ಯುತ್ ಯೋಜನೆ ವ್ಯಾಪ್ತಿಗೆ ಬರುವ ಹೆನ್ನಿ ಭಾಗದ ರೈತರ ಸಭೆಯ ಅಧ್ಯಕ್ಷತೆ ವಹಿಸಿ ರೈತರ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡುತ್ತಿದ ಅವರು, ಪಂಪ್ಡ್ ಸ್ಟೋರೇಜ್ನಿಂದ ದೊಡ್ಡ ಪ್ರಮಾಣದ ಕಾಡು ನಾಶವಾಗುತ್ತದೆ ಎನ್ನುವ ಸುಳ್ಳುಸುದ್ದಿಯನ್ನು ಹಬ್ಬಿಸಲಾಗುತ್ತಿದೆ. ವಾಸ್ತವದಲ್ಲಿ 11 ರೈತ ಕುಟುಂಬಗಳ 8.32 ಎಕರೆ ಕೃಷಿಭೂಮಿ ಜೊತೆಗೆ 54 ಹೆಕ್ಟೇರ್ ಅರಣ್ಯಭೂಮಿಯನ್ನು ಸ್ವಾಧೀನಕ್ಕೆ ತೆಗೆದುಕೊಳ್ಳಲಾಗುತ್ತದೆ. ರೈತರು ಸಭೆಯಲ್ಲಿ ತಮ್ಮ ಬೇಡಿಕೆಗಳನ್ನು ಮಂಡಿಸಿದ್ದಾರೆ. ರೈತರ ಪರವಾಗಿ ನಾವಿದ್ದೇವೆ. ಸುಮಾರು 2ಸಾವಿರ ಮೆ.ವ್ಯಾ. ವಿದ್ಯುತ್ ಯೋಜನೆಯಡಿ ಆಣೆಕಟ್ಟು ನಿರ್ಮಿಸದೆ ಉತ್ಪಾದನೆ ಮಾಡುವ ಅಪರೂಪದ ಯೋಜನೆ ಇದಾಗಿದೆ ಎಂದರು. ಸುಮಾರು 8644…
ನಾಗ್ಬುರ: ನಾಯಕರು 75 ವರ್ಷಕ್ಕೆ ನಿವೃತ್ತಿಯಾಗಬೇಕು ಎಂಬುದಾಗಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿದಂತ ಹೇಳಿಕೆ ಈಗ ಬಿಜೆಪಿಯಲ್ಲಿ ಭಾರೀ ಸಂಚಲನವನ್ನೇ ಸೃಷ್ಠಿಸಿದೆ. ನಾಗ್ಬುರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿರುವಂತ ಅವರು ನಾಯಕರು 75 ವರ್ಷ ತುಂಬಿದ ಬಳಿಕ ಪಕ್ಕಕ್ಕೆ ಸರಿಯಬೇಕು. ಪಕ್ಕಕ್ಕೆ ಸರಿದು ಇತರರಿಗೂ ಕೆಲಸ ಮಾಡಲು ಅವಕಾಶ ಕೊಡಬೇಕು ಎಂದಿದ್ದಾರೆ. ಇದೇ ಸೆಪ್ಟೆಂಬರ್.17ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು 75 ವರ್ಷಕ್ಕೆ ಕಾಲಿಡುತ್ತಿದ್ದಾರೆ. ಈ ಸಂದರ್ಭದಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಈ ಹೇಳಿಕೆ ಬಿಜೆಪಿಯಲ್ಲಿ ಭಾರೀ ಸಂಚಲನವನ್ನೇ ಸೃಷ್ಠಿಸಿದೆ. https://kannadanewsnow.com/kannada/chitradurga-invitation-for-applications-for-the-talent-award-from-sslc-and-puc-students/ https://kannadanewsnow.com/kannada/important-state-cabinet-meeting-scheduled-for-july-17/
ಚಿತ್ರದುರ್ಗ : ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 85 ಕ್ಕಿಂತ ಹೆಚ್ಚು ಅಂಕ ಪಡೆದ ಹಿರಿಯೂರು ತಾಲೂಕಿನ ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ. ಕಂದಿಕೆರೆ ಜಗದೀಶ್ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಜೆರಾಕ್ಸ್ ಹಾಗೂ ಭಾವಚಿತ್ರದೊಂದಿಗೆ ಶ್ರೀ ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ಅರ್ಜಿ ಭರ್ತಿ ಮಾಡಿ ಕಛೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದೆ. ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದಿನಾಂಕ ಶೀಘ್ರದಲ್ಲೇ ತಿಳಿಸಲಾಗುವುದು. ಎಲ್ಲಾ ಸಮುದಾಯಗಳ ಅರ್ಹ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಯನ್ನು ಕಛೇರಿಯಲ್ಲಿ ಪಡೆಯಬಹುದು. ಅಂದಿನ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಶ್ರೀ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಂದಿಕೆರೆ ಜಗದೀಶ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಬ್ಯಾoಕ್ ನ ನಿರ್ದೇಶಕ ಮಲ್ಲಪ್ಪನಹಳ್ಳಿ…
ಬೆಂಗಳೂರು: ಜುಲೈ 7ರ ನಂತರ ಯುಜಿನೀಟ್ -2025ಕ್ಕೆ ನೋಂದಣಿ ಮತ್ತು ಆನ್ಲೈನ್ ಅರ್ಜಿ ಭರ್ತಿ ಮಾಡಿ, ಶುಲ್ಕ ಪಾವತಿಸಿರುವ (‘ಎ’ಯಿಂದ ‘ಒ’ವರೆಗೆ ಹಾಗೂ ‘ಝಡ್’ ಕ್ಲಾಸ್ ನಡಿ ಸೀಟು ಕ್ಲೇಮು ಮಾಡಿರುವವರು) ಅಭ್ಯರ್ಥಿಗಳು, ವೈದ್ಯಕೀಯ / ದಂತ ವೈದ್ಯಕೀಯ / ಆರ್ಯುವೇದ / ಹೋಮಿಯೋಪತಿ /ಯುನಾನಿ ಕೋರ್ಸುಗಳ ಪ್ರವೇಶಾತಿಗಾಗಿ ಎಲ್ಲಾ ಅಗತ್ಯ ಮೂಲ ದಾಖಲೆಗಳ ಪರಿಶೀಲನೆಗೆ ಕೆಇಎ, ಬೆಂಗಳೂರು ಇಲ್ಲಿಗೆ ಜುಲೈ 17ರಿಂದ 19ರೊಳಗೆ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶೇಷ ಪ್ರವರ್ಗಗಳಡಿ ಕ್ಲೇಮು ಮಾಡಿರುವವರು, ವಿಶೇಷ ಚೇತನ ಅಭ್ಯರ್ಥಿಗಳು, ‘ಎ’ಯಿಂದ ‘ಒ’ ಹಾಗೂ ‘ಝಡ್’ ಕ್ಲಾಸಿನಡಿ ಕ್ಲೇಮು ಮಾಡಿರುವವರು ದಾಖಲೆಗಳ ಪರಿಶೀಲನೆಗೆ ಹಾಜರಾಗುವ ಕುರಿತಾದ ವೇಳಾಪಟ್ಟಿಯನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದ್ದು, ಆ ಪ್ರಕಾರ ಹಾಜರಾಗಬೇಕು, ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಯುಜಿಸಿಇಟಿ ಸಂದರ್ಭದಲ್ಲಿಯೇ ನೀಡಲಾಗಿದೆ. ಅಭ್ಯರ್ಥಿಗಳು ಓದಿಕೊಳ್ಳಬೇಕು ಎಂದು ಸ್ಪಷ್ಟಪಡಿಸಲಾಗಿದೆ. ಕನ್ನಡ ಭಾಷಾ ಪರೀಕ್ಷೆ ಹೊಸದಾಗಿ…
ಬೆಂಗಳೂರು: ಸರ್ವರ್ ನಲ್ಲಿ ಕಾಣಿಸಿಕೊಂಡಿದ್ದ ಸಮಸ್ಯೆಯು ಸಹಜ ಸ್ಥಿತಿಗೆ ಮರಳುತ್ತಿದ್ದರೂ ಯುಜಿಸಿಇಟಿ-25 ಅಭ್ಯರ್ಥಿಗಳ ಹಿತದೃಷ್ಟಿಯಿಂದ ಆಪ್ಷನ್ ಎಂಟ್ರಿ ದಿನಾಂಕವನ್ನು ಜುಲೈ 15ರಿಂದ ಜುಲೈ 18ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ವರ್ ಸಮಸ್ಯೆ ಕಾರಣಕ್ಕೆ ಲಾಗಿನ್ ಆಗಿ ಆಪ್ಷನ್ಸ್ ಎಂಟ್ರಿ ಮಾಡಲು ಕೊಂಚ ವಿಳಂಬವಾಗುತ್ತಿದ್ದುದನ್ನು ಪರಿಗಣಿಸಿ ಈ ವಿಸ್ತರಣೆ ಮಾಡಲಾಗಿದೆ. ಎಂಜಿನಿಯರಿಂಗ್, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ, ಬಿ.ಪಿ.ಟಿ. ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳಿಗೆ ಸೀಟು ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಈ ಪ್ರಕ್ರಿಯೆ ಪೂರೈಸಲು ಈ ಅವಕಾಶ ಬಳಸಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ. ಅಭ್ಯರ್ಥಿಗಳು ಕಾಲೇಜುಗಳು ಮತ್ತು ಕೋರ್ಸುಗಳ ಪಟ್ಟಿಯನ್ನು ಆದ್ಯತೆಯ ಕ್ರಮದಲ್ಲಿ (ಕಾಲೇಜ್ ಕೋಡ್ ಮತ್ತು ಕೋರ್ಸ್ ಕೋಡ್) ಬಿಳಿ ಕಾಗದದಲ್ಲಿ ಮುಂಚಿತವಾಗಿಯೇ ಬರೆದು ಸಿದ್ದಪಡಿಸಿಕೊಂಡು ನಂತರ ಪೋರ್ಟಲ್ ನಲ್ಲಿ ಆಪ್ಷನ್ ಎಂಟ್ರಿ ನಮೂದಿಸಬೇಕು. ಹೀಗೆ ಮಾಡುವುದರಿಂದ ಒಮ್ಮೆಗೇ ಅಧಿಕ ಸಂಖ್ಯೆಯ ಅಭ್ಯರ್ಥಿಗಳು…
ಶಿವಮೊಗ್ಗ : ಸಾಗರ-ಹೊಸನಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅಪ್ರಬುದ್ದರಾಗಿ ಮಾತನಾಡುವುದನ್ನು ಬಿಡಬೇಕು. ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬವಾಗಲೂ ನಾನಾಗಲೀ, ಸಂಸದ ಬಿ.ವೈ.ರಾಘವೇಂದ್ರ ಆಗಲಿ ಕಾರಣವಲ್ಲ. ಆ ಯೋಜನೆ ರೂಪಿಸುವಾಗ ನೀರಿನ ಆಳ ಅಂದಾಜಿಸದೆ ಹೋಗಿರುವುದೇ ಕಾಮಗಾರಿ ವಿಳಂಬವಾಗಲು ಕಾರಣ ಎಂಬುದಾಗಿ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಸ್ಪಷ್ಟ ಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು ಹಸಿರುಮಕ್ಕಿ ಸೇತುವೆ ವೀಕ್ಷಣೆಗೆ ಹೋದಾಗ ಅನಗತ್ಯ ಪ್ರಲಾಪ ಮಾಡಿ ವಿಳಂಬಕ್ಕೆ ನಾವೇ ಕಾರಣ ಎಂದು ಹೇಳಿರುವುದು ಅವಿವೇಕನತಕ್ಕೆ ಸಾಕ್ಷಿಯಾಗಿದೆ ಎಂದರು. 2018ರಲ್ಲಿ ಕಾಗೋಡು ತಿಮ್ಮಪ್ಪ ಅವರು ಹಸಿರುಮಕ್ಕಿ ಸೇತುವೆಗೆ 115 ಕೋಟಿ ಬಿಡುಗಡೆ ಮಾಡಿಸಿದ್ದರು. ಯೋಜನೆ ರೂಪಿಸುವಾಗ 22 ಅಡಿ ನೀರು ನಿಲ್ಲುತ್ತದೆ ಎಂದು ತೋರಿಸಲಾಗಿತ್ತು. ಆದರೆ ಹಸಿರುಮಕ್ಕಿಯಲ್ಲಿ 62ರಿಂದ 72 ಅಡಿ ನೀರು ನಿಲ್ಲುತ್ತದೆ. ಕೆ.ಆರ್.ಐ.ಡಿ.ಎಲ್. ಯೋಜನೆ ಉಸ್ತುವಾರಿ…
ಶಿವಮೊಗ್ಗ : ಗ್ರಾಮ ಪಂಚಾಯ್ತಿ ಒಂದು ಮಿನಿ ವಿಧಾನಸೌಧವಿದ್ದಂತೆ. ವಿಧಾನಸೌಧದಲ್ಲಿ ಏನೆಲ್ಲಾ ನಿರ್ಧಾರ ಆಗುತ್ತೋ ಗ್ರಾಮ ಪಂಚಾಯ್ತಿಗಳಲ್ಲೂ ಹಾಗೆಯೇ ಆಗುತ್ತವೆ. ಗ್ರಾಮ ಪಂಚಾಯ್ತಿ ಅಭಿವೃದ್ದಿಯಾದರೆ, ದೇಶ ಅಭಿವೃದ್ದಿಯಾದಂತೆಯೇ ಸರಿ. ಪಂಚಾಯ್ತಿ ಸದಸ್ಯರು ಒಟ್ಟಾಗಿ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಪಡವಗೋಡು ಗ್ರಾಮದಲ್ಲಿ ಎಂಜಿಎನ್ಆರ್ಇಜಿಎ ಯೋಜನೆಯಡಿ ಶೆಡ್ ಮತ್ತು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅನುದಾನದಲ್ಲಿ ನವೀಕೃತ ಗ್ರಾಮ ಪಂಚಾಯ್ತಿ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದಂತ ಅವರು, ಗ್ರಾಮಸ್ಥರು ಗ್ರಾಮಸಭೆಗೆ ಹಾಜರಾಗಿ ಸರ್ಕಾರದಿಂದ ಬಂದ ಅನುದಾನದ ಮಾಹಿತಿಯನ್ನು ಪಡೆಯುತ್ತಿರುಬೇಕು. ಗ್ರಾಮ ಸಭೆಗೆ ಹಾಜರಾಗದೆ ತಮಗೆ ಸೌಲಭ್ಯವೆ ಸಿಗುತ್ತಿಲ್ಲ ಎಂದು ನನ್ನ ಬಳಿ ದೂರು ತೆಗೆದುಕೊಂಡು ಬರಬೇಡಿ ಎಂದು ತಿಳಿಸಿದರು. ಗ್ರಾಮ ಸಭೆಗಳಿಗೆ ಎಲ್ಲಾ ಅಧಿಕಾರಿಗಳು ಕಟ್ಟುನಿಟ್ಟಾಗಿ ಹಾಜರಾಗಬೇಕು. ಸರ್ಕಾರದ ಅನುದಾನ ತಳಮಟ್ಟದಿಂದ ಸದ್ವಿನಿಯೋಗವಾಗಬೇಕಾದರೆ ಗ್ರಾಮ ಪಂಚಾಯ್ತಿಗಳು ಸಶಕ್ತವಾಗಬೇಕು. ರಾಜ್ಯ ಸರ್ಕಾರ ಮಹಿಳಾ ಗ್ರಾಮ ಸಭೆಯನ್ನು…
ಮಂಡ್ಯ : ಜುಲೈ 28 ರಂದು ಮದ್ದೂರು ಪಟ್ಟಣದಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭಾಗವಹಿಸಲಿದ್ದು, ಹೀಗಾಗಿ ತಾಲೂಕಿನ ಜನತೆ ನಿರೀಕ್ಷೆಗೂ ಮೀರಿ ಅಭೂತಪೂರ್ವ ಯಶಸ್ವಿಗೊಳಿಸಬೇಕೆಂದು ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು. ಮದ್ದೂರು ಪಟ್ಟಣದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸಮಾವೇಶದ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ತಾಲೂಕು ಮಟ್ಟದ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಇತಿಹಾಸದಲ್ಲಿಯೇ ಮೊದಲನೇ ಬಾರಿಗೆ 1300 ಕೋಟಿ ರೂ ಗಳಿಗೂ ಹೆಚ್ಚು ಅನುದಾನವನ್ನು ತಂದಿದ್ದೇನೆ. ಅದಕ್ಕಾಗಿ ಸಾಧನಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನೇತೃತ್ವದಲ್ಲಿ ಹಮ್ಮಿಕೊಂಡಿದ್ದು, ಇದು ನಮ್ಮ ತಾಲೂಕಿನ ಹೆಮ್ಮೆ ಎಂದರು. ಅಷ್ಟೇ ಅಲ್ಲದೇ ನೂತನ ನ್ಯಾಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿ, ಸಾರ್ವಜನಿಕ ಆಸ್ಪತ್ರೆಯ ಉನ್ನತೀಕರಣ ಕಾಮಗಾರಿ ಸೇರಿದಂತೆ ಹಲವಾರು ಇನ್ನಿತರೆ ಕಾಮಗಾರಿಗಳು ಮುಂದಿನ ದಿನಗಳಲ್ಲಿ ನಡೆಯಲಿದ್ದು, ಇಂತಹ ಅಭೂತಪೂರ್ವ ಕಾರ್ಯಕ್ರಮವು ನಮ್ಮ ತಾಲೂಕಿನಲ್ಲಿ ನಡೆಯುತ್ತಿರುವುದು ನಮ್ಮ ಹೆಮ್ಮಯೆಂದು ಮನಗಂಡು ತಾಲೂಕಿನ ಸಾರ್ವಜನಿಕರು ಸ್ವ ಇಚ್ಛೆಯಿಂದ ಸಾಮಾವೇಶಕ್ಕೆ…