Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಅವರನ್ನು ಇಂದು ಎನ್ಡಿಎ ಸಂಸದೀಯ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ತನ್ನ ಸಂಸದೀಯ ಪಕ್ಷದ ನಾಯಕ ಮತ್ತು ಮೈತ್ರಿಕೂಟದ ಲೋಕಸಭೆಯ ನಾಯಕರಾಗಿ ಬಿಜೆಪಿಯ ನರೇಂದ್ರ ಮೋದಿಯವರ ಹೆಸರನ್ನು ಪ್ರಸ್ತಾಪಿಸಿದ ನಂತರ, ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ಸತತ ಮೂರನೇ ಅವಧಿಗೆ ಕೇಂದ್ರ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. https://twitter.com/ANI/status/1799061211151257831 ಇದಕ್ಕೂ ಮುನ್ನ ಅವರು ಪಕ್ಷದ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಅವರ ನಿವಾಸಗಳಲ್ಲಿ ಭೇಟಿಯಾದರು. ಇಂದು ಬೆಳಿಗ್ಗೆ ಎನ್ಡಿಎ ಸಂಸದೀಯ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಮೈತ್ರಿಕೂಟದ ಲೋಕಸಭಾ ಚುನಾವಣೆಯ ಗೆಲುವನ್ನು ಸೋಲು ಎಂದು ಚಿತ್ರಿಸುವ ಪ್ರತಿಪಕ್ಷಗಳ ಪ್ರಯತ್ನಗಳು ವ್ಯರ್ಥವಾಗಿವೆ ಎಂದು ಹೇಳಿದ್ದರು. “ಈ ಗೆಲುವನ್ನು ಒಪ್ಪಿಕೊಳ್ಳದಿರಲು, ಸೋಲಿನ ಛಾಯೆ ಮೂಡಿಸಲು ಪ್ರಯತ್ನಗಳು ನಡೆದವು. ಆದರೆ…
ನವದೆಹಲಿ: ಬಾಲಿವುಡ್ ನಟಿ, ನೂತನ ಸಂಸದೆ ಕಂಗನಾ ರಣಾವತ್ ಅವರನ್ನು ಸಿಐಎಸ್ಎಫ್ ಕಾನ್ಸ್ಟೇಬಲ್ ಕಪಾಳಮೋಕ್ಷ ಮಾಡಿದ ಪ್ರಕರಣದ ಇತ್ತೀಚಿನ ಬೆಳವಣಿಗೆಯಲ್ಲಿ, ಆರೋಪಿ ಕಾನ್ಸ್ಟೇಬಲ್ ಕುಲ್ವಿಂದರ್ ಕೌರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 323 ಮತ್ತು 341 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ಸಮಯದಲ್ಲಿ ಸಿಐಎಸ್ಎಫ್ ಕಾನ್ಸ್ಟೇಬಲ್ ತನಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಕಂಗನಾ ಆರೋಪಿಸಿದ ನಂತರ ಗುರುವಾರ ಮಧ್ಯಾಹ್ನ 3: 30 ರ ಸುಮಾರಿಗೆ ಈ ಘಟನೆ ವರದಿಯಾಗಿದೆ. ದೆಹಲಿಗೆ ವಿಮಾನ ಹತ್ತಲು ಅವಳು ಏರ್ಪೋರ್ಟ್ನಲ್ಲಿದ್ದಳು. ಈ ಘಟನೆಯ ನಂತರ, ನಟ ಮತ್ತು ರಾಜಕಾರಣಿ ಕಂಗನಾ ರನೌತ್ ದೆಹಲಿಗೆ ತೆರಳಿ ಸಿಐಎಸ್ಎಫ್ ಮಹಾನಿರ್ದೇಶಕ ನೀನಾ ಸಿಂಗ್ ಅವರನ್ನು ಭೇಟಿಯಾಗಿ ಘಟನೆಯ ವಿವರವಾದ ವಿವರಗಳನ್ನು ನೀಡಿದರು. ನಂತರ, ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಕಂಗನಾ ಅವರ ಹಿಂದಿನ ಹೇಳಿಕೆಯ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸುತ್ತಿರುವ ಸಿಐಎಸ್ಎಫ್ ಕಾಂಬ್ಯಾಬಲ್ನ ವೀಡಿಯೊ ಹೊರಬಂದಿತು. ವೀಡಿಯೊದ ನಂತರ, ಅನೇಕ ರೈತ…
ಚಂಡೀಗಢ: ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರನೌತ್ ಅವರಿಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಐಎಸ್ಎಫ್ ಮಹಿಳಾ ಕಾನ್ಸ್ಟೇಬಲ್ಗೆ ಕೆಲವು ರೈತ ಗುಂಪುಗಳು ಶುಕ್ರವಾರ ಬೆಂಬಲ ವ್ಯಕ್ತಪಡಿಸಿದ್ದು, ಘಟನೆಗೆ ಮುಂಚಿನ ಘಟನೆಗಳ ಸಂಪೂರ್ಣ ಅನುಕ್ರಮದ ಬಗ್ಗೆ ಸಮಗ್ರ ತನಿಖೆಯ ಅಗತ್ಯವನ್ನು ಒತ್ತಿಹೇಳಿವೆ. ಕಾನ್ಸ್ಟೇಬಲ್ ಕುಲ್ವಿಂದರ್ ಕೌರ್ ವಿರುದ್ಧ ಯಾವುದೇ ಅನಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರೈತರು ಜೂನ್ 9 ರಂದು ಮೊಹಾಲಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಿಳಾ ಕಾನ್ಸ್ಟೇಬಲ್ಗೆ ಬೆಂಬಲ ವ್ಯಕ್ತಪಡಿಸಿದ ಪ್ರಮುಖ ಸಂಘಟನೆಗಳಲ್ಲಿ ಸೇರಿವೆ. ಎಸ್ಕೆಎಂ (ರಾಜಕೀಯೇತರ) ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವನ್ ಸಿಂಗ್ ಪಂಧೇರ್ ಅವರು ಈ ವಿಷಯದ ಬಗ್ಗೆ ಸರಿಯಾದ ತನಿಖೆಗಾಗಿ ಪಂಜಾಬ್ನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ಅವರನ್ನು ಭೇಟಿ ಮಾಡುವುದಾಗಿ ಹೇಳಿದರು. “ನಾವು…
ಬೆಂಗಳೂರು: ಸ್ಯಾಂಡಲ್ ವುಡ್ ರ್ಯಾಪ್ ಹಾಡುಗಾರ ಚೆಂದನ್ ಶೆಟ್ಟಿ ಹಾಗೂ ನಿವೇದಿತಾ ಡಿವೋರ್ಸ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನಡೆಸಿದಂತ ಫ್ಯಾಮಿಲಿ ಕೋರ್ಟ್, ವಿಚ್ಚೇದನ ಮಂಜೂರು ಮಾಡಿದೆ. ಇದರ ನಡುವೆ ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಬ್ಬರ ವಿವಾಹ ವಿಚ್ಚೇಧನದ ಹಿಂದಿನ ಸಿಕ್ರೇಟ್ ರಿವೀಲ್ ಆಗಿದೆ. ಅದೇನು ಅಂತ ಮುಂದೆ ಓದಿ. Rap ಸಾಂಗ್ ಹಾಡುಗಾರ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ದಾಂಪತ್ಯ ಈಗ ಡಿವೋರ್ಸ್ ಹಂತಕ್ಕೆ ತಲುಪಿದೆ. ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡ ಪರಿಣಾಮ ಇದೀಗ ಇಬ್ಬರೂ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಂದಹಾಗೇ ಕನ್ನಡದ ಬಿಗ್ ಬಾಸ್ ಸೀಸನ್-5ರಲ್ಲಿ ಕನ್ನಡ ರ್ಯಾಪ್ ಹಾಡುಗಳ ಮೂಲಕ ಮನೆ ಮಾತಾಗಿದ್ದಂತ ಚಂದನ್ ಶೆಟ್ಟಿ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಇದೇ ಬಿಗ್ ಬಾಸ್ ನಲ್ಲಿ ನಿವೇದಿತಾ ಕೂಡ ಪಾಲ್ಗೊಂಡಿದ್ದರು. ಇವರಿಬ್ಬರು ಆ ಸ್ಪರ್ಧೆಯಲ್ಲೇ ಪ್ರೀತಿಸೋದಕ್ಕೆ ಶುರು ಮಾಡಿದ್ದರು. ಬಿಗ್ ಬಾಸ್ ನಂತ್ರ ಮೈಸೂರಿನ ಯುವ ದಸರಾ…
ಬೆಂಗಳೂರು: ರ್ಯಾಪ್ ಹಾಡುಗಾರ ಚೆಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಹೀಗಾಗಿಯೇ ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಲಯಕ್ಕೆ ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಜೂನ್.6ರ ನಿನ್ನೆ ಸಲ್ಲಿಸಿದ್ದಂತ ವಿಚ್ಚೇದನ ಅರ್ಜಿಯ ವಿಚಾರಣೆಯನ್ನು ಇಂದು ವಿಚಾರಣೆ ನಡೆಸಿತು. ಬಳಿಕ ಚೆಂದನ್ ಶೆಟ್ಟಿ ಹಾಗೂ ನಿವೇದಿತಾ ವಿವಾಹ ವಿಚ್ಚೇದನಕ್ಕೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ 4 ವರ್ಷದ ಚೆಂದನ್ ಶೆಟ್ಟಿ-ನಿವೇದಿತಾ ದಾಂಪತ್ಯ ಜೀವನ ಅಂತ್ಯಗೊಂಡಂತೆ ಆಗಿದೆ. ಜೂನ್.6ರ ನಿನ್ನಯಂದು ಚೆಂದನ್ ಶೆಟ್ಟಿ ಹಾಗೂ ನಿವೇದಿತಾ ವಿವಾಹ ವಿಚ್ಚೇದನಕ್ಕಾಗಿ ಕೌಟುಂಬಿಕ ನ್ಯಾಯಲಯಕ್ಕೆ ಸ್ವ ಇಚ್ಚೆಯಿಂದ ಪರಸ್ಪರ ಒಪ್ಪಿ ಇಬ್ಬರೂ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಶಾಂತಿನಗರದ ಫ್ಯಾಮಿಲಿ ನ್ಯಾಯಾಲಯದ ನ್ಯಾಯಮೂರ್ತಿಗಳು ನಡೆಸಿದರು. ಇಂದಿನ ವಿಚಾರಣೆಗಾಗಿ ಚೆಂದನ್ ಶೆಟ್ಟಿ ಹಾಗೂ ನಿವೇದಿತಾ ಖುದ್ದು ಕೋರ್ಟ್ ಗೆ ಹಾಜರಾಗಿದ್ದರು. ಇಬ್ಬರು ಪರಸ್ಪರ ನಗು ನಗುತ್ತಲೇ ಕೋರ್ಟ್ ಗೆ ಹಾಜರಾಗಿದ್ದರು. ಬೆಂಗಳೂರಿನ ಶಾಂತಿನಗರದಲ್ಲಿರುವಂತ 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾದ ನಂತ್ರ, ನ್ಯಾಯಾಲಯವು ವಿವಾಹ…
ಬೆಂಗಳೂರು: ರಾಹುಲ್ ಗಾಂಧಿ ಅವರು ನ್ಯಾಯಾಲಯ ಹಾಗೂ ಕಾನೂನಿಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದಾರೆ. ಬಿಜೆಪಿ ನಾಯಕರಾದ ಯತ್ನಾಳ್ ಅವರೇ ಸಿಎಂ ಹುದ್ದೆಗೆ 2,500 ಕೋಟಿ ಹಾಗೂ ಮಾಧ್ಯಮಗಳಲ್ಲಿ ಬಂದಿದ್ದ ವರದಿ ಅನುಸಾರ ಸರ್ಕಾರಿ ಹುದ್ದೆಗೆ ಹಿಂದಿನ ಸರ್ಕಾರದ ರೇಟ್ ಕಾರ್ಡ್ ಅನ್ನು ಜಾಹೀರಾತು ರೂಪದಲ್ಲಿ ಕೊಟ್ಟಿದ್ದೆವು. ಈ ವಿಚಾರದಲ್ಲಿ ರಾಹುಲ್ ಗಾಂಧಿ ಅವರಿಗೂ ಈ ಪ್ರಕರಣಕ್ಕೂ ಸಂಬಂಧವೇ ಇಲ್ಲ. ಆದರೂ ಉದ್ದೇಶಪೂರ್ವಕವಾಗಿ ಅವರನ್ನು ಎಳೆದುತರಲಾಗಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿಯವರಲ್ಲಿ ದ್ವೇಷ ಹಾಗೂ ಸೇಡು ತುಂಬಿ ತುಳುಕುತ್ತಿದೆ. ಹೀಗಾಗಿ ಸುಳ್ಳು ಪ್ರಕರಣ ದಾಖಲಿಸಿದ್ದು, ಅದಕ್ಕೆ ಈ ಪ್ರಕರಣವೇ ಉದಾಹರಣೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಆಗಮಿಸಿ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಡಿ.ಕೆ. ಸುರೇಶ್ ಅವರು ಜಾಮೀನು ನೀಡಿದ್ದಾರೆ. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಂದು ಬೆಂಬಲ ನೀಡಿದ್ದಾರೆ. ಅವರೆಲ್ಲರಿಗೂ ಧನ್ಯವಾದ ತಿಳಿಸಿದರು. ಪರಿಷತ್ ಚುನಾವಣೆಯಲ್ಲಿ 3 ಕ್ಷೇತ್ರ ಗೆಲುವು ಆರು…
ಬೆಂಗಳೂರು: “ನೂತನ ಸಂಸದರು ಜನರ ಧ್ವನಿಯಾಗಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ಯಾರೆಲ್ಲ ಕಾಂಗ್ರೆಸ್ ಗೆ ಮತ ಹಾಕದವರ ಮನ ಗೆಲ್ಲಬೇಕು ಎಂದು ರಾಹುಲ್ ಗಾಂಧಿ ಅವರು ಸಲಹೆ ನೀಡಿದರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ರಾಹುಲ್ ಗಾಂಧಿ ಅವರ ಭೇಟಿ ಬಳಿಕ ಶಾಂಗ್ರಿಲಾ ಹೊಟೇಲ್ ನಲ್ಲಿ ಶಿವಕುಮಾರ್ ಅವರು ಶುಕ್ರವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು; “ರಾಹುಲ್ ಗಾಂಧಿ ಅವರು ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಜತೆ ಚರ್ಚೆ ಮಾಡಿದರು. ಲೋಕಸಭೆಗೆ ಆಯ್ಕೆಯಾದ 9 ಸಂಸದರಿಗೆ ಅಭಿನಂದನೆ ಸಲ್ಲಿಸಿ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು. ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು, ಅದರ ನೆರವು ಪಡೆದು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.…
ಬೆಂಗಳೂರು: ಪ್ರಧಾನಿ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ನೊಂದ ನೀಟ್ ಪರೀಕ್ಷಾರ್ಥಿಗಳ ಅಹವಾಲು ಆಲಿಸಲಿ. ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒತ್ತಾಯಿಸಿದ್ದಾರೆ. ಈ ಕುರಿತಂತೆ ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನೀಟ್ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ. NEET (ನೀಟ್) ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ 100% ಅಂಕಗಳು ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ. 2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ,…
ಶಿವಮೊಗ್ಗ : ಮೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಜೂನ್.10ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಂ.ಆರ್ ಎಸ್ ವ್ಯಾಪ್ತಿಯ ಗ್ರಾಮಾಂತರದ ಗ್ರಾಮಗಳಲ್ಲಿ ಶಿವಮೊಗ್ಗದ 110 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 10 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಕರೆಂಟ್ ಇರೋದಿಲ್ಲ. ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಚಿಕ್ಕಲ್ಲು, ಗುರುಪುರ, ಪರುಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹ್ಮದ್ ಸರ್ಕಲ್ವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ, ಬಾಲ್ರಾಜ್ಅರಸ್ ರಸ್ತೆ, ಗಾಂದಿಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್ ನಲ್ಲಿ ಕರೆಂಟ್ ಇರಲ್ಲ. ಟಿ.ಜಿ.ಎನ್.ಬಡಾವಣೆ, ಜೋಸೆಫ್ನಗರ, ಟ್ಯಾಂಕ್ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು…
ಬೆಂಗಳೂರು: ಬಿಗ್ ಬಾಸ್ ಕನ್ನಡ ಸ್ಪರ್ಧೆಯಲ್ಲಿ ಪಾಲ್ಗೊಂಡು, ಅಲ್ಲಿಯೇ ಪರಿಚಯವಾಗಿದ್ದಂತ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಜೋಡಿ, ದಾಂಪತ್ಯಕ್ಕೆ ಕಾಲಿಟ್ಟಿತ್ತು. ಇದೀಗ ಕೆಲವೇ ವರ್ಷಗಳಲ್ಲೇ ಚಂದನ್ ಶೆಟ್ಟಿ-ನಿವೇದಿತಾ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಹೀಗಾಗಿ ವಿಚ್ಥೇದನಕ್ಕೆ ಇಬ್ಬರು ಸೆಲೆಬ್ರೆಟಿಗಳು ಅರ್ಜಿ ಸಲ್ಲಿಸಿರೋದಾಗಿ ತಿಳಿದು ಬಂದಿದೆ. Rap ಸಾಂಗ್ ಹಾಡುಗಾರ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ದಾಂಪತ್ಯ ಈಗ ಡಿವೋರ್ಸ್ ಹಂತಕ್ಕೆ ತಲುಪಿದೆ. ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡ ಪರಿಣಾಮ ಇದೀಗ ಇಬ್ಬರೂ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಂದಹಾಗೇ ಕನ್ನಡದ ಬಿಗ್ ಬಾಸ್ ಸೀಸನ್-5ರಲ್ಲಿ ಕನ್ನಡ ರ್ಯಾಪ್ ಹಾಡುಗಳ ಮೂಲಕ ಮನೆ ಮಾತಾಗಿದ್ದಂತ ಚಂದನ್ ಶೆಟ್ಟಿ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಇದೇ ಬಿಗ್ ಬಾಸ್ ನಲ್ಲಿ ನಿವೇದಿತಾ ಕೂಡ ಪಾಲ್ಗೊಂಡಿದ್ದರು. ಇವರಿಬ್ಬರು ಆ ಸ್ಪರ್ಧೆಯಲ್ಲೇ ಪ್ರೀತಿಸೋದಕ್ಕೆ ಶುರು ಮಾಡಿದ್ದರು. ಬಿಗ್ ಬಾಸ್ ನಂತ್ರ ಮೈಸೂರಿನ ಯುವ ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಚಂದನ್ ಶೆಟ್ಟಿ, ನಿವೇದಿತಾಗೆ ಪ್ರಪೋಸ್…