Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಚಿತ್ರದುರ್ಗ: ಗ್ರಾಮ ಪಂಚಾಯ್ತಿ ಸದಸ್ಯನ ವಿರುದ್ಧ ಜಾತಿ ನಿಂದನೆ, ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಈ ಸಂಬಂಧ ದೂರು ಕೂಡ ದಾಖಲಾಗಿದ್ದು, ಪೊಲೀಸರು ಗ್ರಾಮ ಪಂಚಾಯ್ತಿ ಸದಸ್ಯನನ್ನು ಬಂಧಿಸಿದ್ದಾರೆ. ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಗ್ರಾಮ ಪಂಚಾಯ್ತಿ ಸದಸ್ ದೇವರಾಜ ವಿರುದ್ಧ, ಸಿರಿಗೆರೆ ಗ್ರಾಮ ಪಂಚಾಯ್ತಿ ಕ್ಲರ್ ಜಯರಾಮ್ ಎಂಬುವರು ಜಾತಿ ನಿಂದನೆ, ಲೈಂಗಿಕ ದೌರ್ಜನ್ಯದ ಆರೋಪದಡಿ ದೂರು ನೀಡಿದ್ದಾರೆ. ಗ್ರಾಮ ಪಂಚಾಯ್ತಿ ಅಧ್ಯಕ್ಷೆ, ಪಿಡಿಓಗೆ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಕ್ಲರ್ಕ್ ಜಯರಾಮ್ ನೀಡಿರುವಂತ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ದೂರು ಆಧರಿಸಿ ಭರಮಸಾಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಗ್ರಾಮ ಪಂಚಾಯ್ತಿ ಸದಸ್ಯ ದೇವರಾಜ ಎಂಬುವರನ್ನು ಬಂಧಿಸಿದ್ದಾರೆ. https://kannadanewsnow.com/kannada/fake-currency-racket-busted-in-karnataka-four-accused-including-pc-arrested/ https://kannadanewsnow.com/kannada/fire-breaks-out-in-copra-godown-copra-worth-lakhs-of-rupees-gutted/

Read More

ರಾಯಚೂರು: ರಾಜ್ಯದಲ್ಲೇ ಬಹುದೊಡ್ಡ ಖೋಟಾನೋಟು ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ಈ ದಂಧೆಯಲ್ಲಿ ತೊಡಗಿದ್ದಂತ ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರಿನ ಪಶ್ಚಿಮ ಠಾಣೆಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ನಗರದಲ್ಲಿ ದಾಳಿಯನ್ನು ನಡೆಸಿ, ಖೋಟಾ ನೋಟು ದಂಧೆಯಲ್ಲಿ ತೊಡಗಿದ್ದಂತ ಅಡ್ಡೆಯನ್ನು ಪತ್ತೆ ಹಚ್ಚಿದ್ದಾರೆ. ಈ ದಾಳಿಯ ವೇಳೆಯಲ್ಲಿ ಲಕ್ಷಾಂತರ ಮೌಲ್ಯದ ಖೋಟಾ ನೋಟು, ಅದಕ್ಕೆ ಬಳಸುತ್ತಿದ್ದಂತ ಪೂರಕ ವಸ್ತುಗಳಾದ ವೈಟ್ ಪೇಪರ್ ಜಪ್ತಿ ಮಾಡಿದ್ದಾರೆ. ಈ ದಾಳಿಯಲ್ಲಿ  ರಾಯಚೂರು ಸಶಸ್ತ್ರ ಮೀಸಲು ಪಡೆಯ ಕಾನ್ಸ್ ಸ್ಟೇಬಲ್ ಮರಿಲಿಂಗ, ರಮೇಶ್ ಆದಿ, ಶಿವಲಿಂಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಈ ದಾಳಿಯನ್ನು ನಡೆಸಲಾಗಿದೆ. https://kannadanewsnow.com/kannada/fire-breaks-out-in-copra-godown-copra-worth-lakhs-of-rupees-gutted/ https://kannadanewsnow.com/kannada/no-property-registration-without-e-khata-state-govt/

Read More

ಚಿತ್ರದುರ್ಗ: ಜಿಲ್ಲೆಯ ರೈತರೊಬ್ಬರಿಗೆ ಸೇರಿದಂತ ಕೊಬ್ಬರಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಈ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಗೋದಾಮಿಗೆ ಆವರಿಸಿದ್ದರಿಂದ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಭಸ್ಮವಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಧುರೆ ಗ್ರಾಮದಲ್ಲೇ ಇಂತಹ ಬೆಂಕಿ ಅವಘಡ ಸಂಭವಿಸಿದೆ. ರೈತ ಪರಮೇಶ್ ಎಂಬುವರಿಗೆ ಸೇರಿದಂತ ಕೊಬ್ಬರಿ ಗೋದಾಮು ಹೊತ್ತಿ ಉರಿದಿದೆ. ಕೊಬ್ಬರಿ ಗೋದಾಮಿಗೆ ಬೆಂಕಿ ಬಿದ್ದಂತ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅವಘಡದಲ್ಲಿ ರೈತ ಪರಮೇಶ್ ಗೆ ಸೇರಿದಂತೆ ಲಕ್ಷಾಂತರ ಮೌಲ್ಯದ ಕೊಬ್ಬರು ಸುಟ್ಟು ಭಸ್ಮವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/state-cabinet-expansion-in-may-i-am-hopeful-of-getting-a-ministerial-berth-says-salim-ahmed/ https://kannadanewsnow.com/kannada/four-persons-including-a-constable-arrested-in-connection-with-police-raid-on-fake-currency-racket-in-raichur/

Read More

ರಾಯಚೂರು: ಜಿಲ್ಲೆಯಲ್ಲಿ ಖೋಟಾನೋಟು ದಂಧೆಯಲ್ಲಿ ತೊಡಗಿದ್ದಂತ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಸಶಸ್ತ್ರ ಮೀಸಲಿ ಪಡೆಯ ಕಾನ್ಸ್ ಸ್ಟೇಬಲ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಯಚೂರಿನ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಖೋಟಾನೋಟು ದಂಧೆಯಲ್ಲಿ ತೊಡಗಿದ್ದಂತ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಯಚೂರು ಸಶಸ್ತ್ರ ಮೀಸಲು ಪಡೆಯ ಕಾನ್ಸ್ ಸ್ಟೇಬಲ್ ಮರಿಲಿಂಗ, ರಮೇಶ್ ಆದಿ, ಶಿವಲಿಂಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಯಚೂರು ಪೊಲೀಸರಿಗೆ ಖಚಿತ ಮಾಹಿತಿ ಮೇರೆಗೆ ಈ ದಾಳಿಯನ್ನು ನಡೆಸಿದ್ದಾರೆ. ನಗರದಲ್ಲಿ ನಡೆಯುತ್ತಿದ್ದಂತ ಖೋಟಾ ನೋಟು ದಂಧೆಯ ಜಾಲವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಸಶಸ್ತ್ರ ಮೀಸಲು ಪಡೆಯ ಕಾನ್ಸ್ ಸ್ಟೇಬಲ್ ಒಬ್ಬರು ಈ ದಂಧೆಯಲ್ಲಿ ಭಾಗಿಯಾದ ಬಗ್ಗೆ ಅಚ್ಚರಿಯನ್ನು ವ್ಯಕ್ತಪಡಿಸಿದ್ದಾರೆ. ಇದೀಗ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/state-cabinet-expansion-in-may-i-am-hopeful-of-getting-a-ministerial-berth-says-salim-ahmed/ https://kannadanewsnow.com/kannada/no-property-registration-without-e-khata-state-govt/

Read More

ಹುಬ್ಬಳ್ಳಿ: ಮೇನಲ್ಲಿ ರಾಜ್ಯಸಚಿವ ಸಂಪುಟ ಸಭೆ ವಿಸ್ತರಣೆಯಾಗುವ ಸಾಧ್ಯತೆ ಇದೆ. ಈ ವೇಳೆಯಲ್ಲಿ ನನಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಅಂತ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ. ನಗರದಲ್ಲಿ ಸುದ್ದಿದಾಗರೊಂದಿಗೆ ಮಾತನಾಡಿದಂತ ಅವರು ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಶೀಘ್ರವೇ ಉಚ್ಚಾಚಿಸುವ ಮಾಹಿತಿ ಇದೆ ಎಂದರು. ಹೆಬ್ಬಾರ್ ಹಾಗೂ ಸೋಮಶೇಖರ್ ನಮ್ಮ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಜೊತೆಗೆ ಈಚೆಗೆ ಮುಖ್ಯಮಂತ್ರಿಗಳು ಮಂಡಿಸಿದಂತ ಬಜೆಟ್ ಅನ್ನು ಸ್ವಾಗತಿಸಿದ್ದಾರೆ. ಅವರು ಯಾವಾಗಲೋ ನಮ್ಮ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ ಎಂದರು. ಕೆಲವು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಕಾಂಗ್ರೆಸ್ ಪಕ್ಷವನ್ನು ಸೇರಲು ಉತ್ಸುಕರಾಗಿದ್ದಾರೆ. ಅವರು ಸೂಕ್ತ ಸಮಯದಲ್ಲಿ ಪಕ್ಷದ ವರಿಷ್ಠರೊಂದಿಗೆ ಮಾತನಾಡಿ, ಸೇರ್ಪಡೆಗೊಳ್ಳಲಿದ್ದಾರೆ ಎಂದರು. https://kannadanewsnow.com/kannada/nasa-confirms-sunita-williams-return-date-to-earth-splashdown-time-sharing/ https://kannadanewsnow.com/kannada/no-property-registration-without-e-khata-state-govt/

Read More

ನವದೆಹಲಿ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್ಎಸ್) ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿರುವ ಯುಎಸ್ ಗಗನಯಾತ್ರಿಗಳ ಮರಳುವಿಕೆಯ ಬಗ್ಗೆ ಕುತೂಹಲ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಏರೋನಾಟಿಕ್ಸ್ ಮತ್ತು ಬಾಹ್ಯಾಕಾಶ ಆಡಳಿತ (ನಾಸಾ) ಭಾನುವಾರ ಇವರಿಬ್ಬರು ಮಾರ್ಚ್ 18 ರ ಮಂಗಳವಾರ ಸಂಜೆ (ಜಿಎಂಟಿ) ಭೂಮಿಗೆ ಮರಳಲಿದ್ದಾರೆ ಎಂದು ದೃಢಪಡಿಸಿದೆ. ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರನ್ನು ಅಮೆರಿಕದ ಮತ್ತೊಬ್ಬ ಗಗನಯಾತ್ರಿ ಮತ್ತು ರಷ್ಯಾದ ಗಗನಯಾತ್ರಿಯೊಂದಿಗೆ ಸ್ಪೇಸ್ಎಕ್ಸ್ ಕ್ರೂ ಡ್ರ್ಯಾಗನ್ ಕ್ರಾಫ್ಟ್ನಲ್ಲಿ ಭಾನುವಾರ ಮುಂಜಾನೆ ಐಎಸ್ಎಸ್ಗೆ ಕರೆತರಲಾಗುವುದು. https://twitter.com/Commercial_Crew/status/1901422933366456607 ಭೂಮಿಗೆ ಮರಳಿದ ಸುನೀತಾ ವಿಲಿಯಮ್ಸ್, ಹೀಗಿದೆ ಸ್ಪ್ಲಾಶ್ ಡೌನ್ ಸಮಯ ಬೋಯಿಂಗ್ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯು ತನ್ನ ಮೊದಲ ಸಿಬ್ಬಂದಿ ಪ್ರಯಾಣದಲ್ಲಿ ಪರೀಕ್ಷಿಸುತ್ತಿದ್ದಾಗ ಪ್ರೊಪಲ್ಷನ್ ಸಮಸ್ಯೆಗಳಿಂದ ಹಾನಿಗೊಳಗಾದ ನಂತರ ಮತ್ತು ಅವುಗಳನ್ನು ಭೂಮಿಗೆ ಹಿಂತಿರುಗಿಸಲು ಅನರ್ಹವೆಂದು ಪರಿಗಣಿಸಲಾದ ನಂತರ ಇವರಿಬ್ಬರು ಕಳೆದ ವರ್ಷ ಜೂನ್ನಿಂದ ಐಎಸ್ಎಸ್ನಲ್ಲಿದ್ದಾರೆ. ಫ್ಲೋರಿಡಾ ಕರಾವಳಿಯಲ್ಲಿ ಗಗನಯಾತ್ರಿಗಳ ನಿರೀಕ್ಷಿತ ಸಾಗರ ಪತನವನ್ನು ಫ್ಲೋರಿಡಾ ಸಮಯ ಮಂಗಳವಾರ ಸಂಜೆ 5:57…

Read More

ನವದೆಹಲಿ: ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬ್ಯಾರಿ ‘ಬುಚ್’ ವಿಲ್ಮೋರ್ ಮಂಗಳವಾರ ಸಂಜೆ (ಭಾರತದಲ್ಲಿ ಬುಧವಾರ ಮುಂಜಾನೆ) ಭೂಮಿಗೆ ಮರಳಲಿದ್ದಾರೆ. ನಾಸಾ ಮಂಗಳವಾರ ಸಂಜೆ 5:57 ಕ್ಕೆ (ಭಾರತೀಯ ಕಾಲಮಾನ ಮಾರ್ಚ್ 19 ರ ಮುಂಜಾನೆ 3:27) ಫ್ಲೋರಿಡಾ ಕರಾವಳಿಯಲ್ಲಿ ಗಗನಯಾತ್ರಿಗಳ ನಿರೀಕ್ಷಿತ ಸಾಗರ ಪತನವನ್ನು ಮುಂದಕ್ಕೆ ಸಾಗಿಸಿತು. ಇದನ್ನು ಆರಂಭದಲ್ಲಿ ಬುಧವಾರಕ್ಕಿಂತ ಮುಂಚಿತವಾಗಿ ನಿಗದಿಪಡಿಸಲಾಗಿತ್ತು. https://TWITTER.com/Commercial_Crew/status/1901422933366456607 “ನವೀಕರಿಸಿದ ರಿಟರ್ನ್ ಟಾರ್ಗೆಟ್ ಬಾಹ್ಯಾಕಾಶ ನಿಲ್ದಾಣದ ಸಿಬ್ಬಂದಿಗೆ ಹಸ್ತಾಂತರ ಕರ್ತವ್ಯಗಳನ್ನು ಪೂರ್ಣಗೊಳಿಸಲು ಸಮಯವನ್ನು ನೀಡುತ್ತದೆ, ಆದರೆ ವಾರದ ಕೊನೆಯಲ್ಲಿ ನಿರೀಕ್ಷಿಸಲಾದ ಕಡಿಮೆ ಅನುಕೂಲಕರ ಹವಾಮಾನ ಪರಿಸ್ಥಿತಿಗಳಿಗೆ ಮುಂಚಿತವಾಗಿ ಕಾರ್ಯಾಚರಣೆಯ ನಮ್ಯತೆಯನ್ನು ಒದಗಿಸುತ್ತದೆ” ಎಂದು ನಾಸಾ ಹೇಳಿಕೆಯಲ್ಲಿ ತಿಳಿಸಿದೆ. ಅವರನ್ನು ಸ್ಪೇಸ್ ಎಕ್ಸ್ ಕ್ರೂ ಡ್ರ್ಯಾಗನ್ ಕ್ರಾಫ್ಟ್ ನಲ್ಲಿ ಮತ್ತೊಬ್ಬ ಅಮೆರಿಕನ್ ಗಗನಯಾತ್ರಿ ಮತ್ತು ರಷ್ಯಾದ ಗಗನಯಾತ್ರಿಯೊಂದಿಗೆ ಮನೆಗೆ ಸಾಗಿಸಲಾಗುವುದು. ವಿಲಿಯಮ್ಸ್ ಮತ್ತು ವಿಲ್ಮೋರ್ ಅವರು ತಮ್ಮ ಮೊದಲ ಸಿಬ್ಬಂದಿ ಪ್ರಯಾಣದಲ್ಲಿ ಪರೀಕ್ಷಿಸುತ್ತಿದ್ದ…

Read More

ಮಂಡ್ಯ: ಜಿಲ್ಲೆಯ ಖಾಸಗಿ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಪುಡ್ ಪಾಯಿಸನ್ ನಿಂದ ಸಾವನ್ನಪ್ಪಿದ್ದನು. ಈ ಘಟನೆಯ ಸಂಬಂಧ ಶಿಕ್ಷಣ ಸಂಸ್ಥೆಯ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಕುರಿತಂತೆ ಬಿಇಓ ಉಮಾ ನೀಡಿದ್ದಂತ ದೂರಿನ ಆಧಾರದ ಮೇಲೆ ಕೇಸ್ ದಾಖಲಾಗಿದೆ. ಬಿಇಓ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಹೋಳಿ ಹಬ್ಬ ಆಯೋಜಿಸಿದ್ದಂತ ಪುಷ್ಪೇಂದ್ರ ಕುಮಾರ್, ಹೋಟೆಲ್ ಮಾಲೀಕ ಸಿದ್ದರಾಜು, ಕಲ್ಯಾಣ ಮಂಟಪದ ನೌಕರ ಕೃಷ್ಣ, ಗೋಕುಲ ವಿದ್ಯಾ ಸಂಸ್ಥೆಯ ಮುಖ್ಯಸ್ಥ ಲಂಕೇಶ್ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳವಳ ವ್ಯಕ್ತ ಪಡಿಸಿದ್ದ ಸಿಎಂ ಸಿದ್ಧರಾಮಯ್ಯ ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಂತ ಸಿಎಂ ಸಿದ್ಧರಾಮಯ್ಯ ಅವರು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು ಎಂದಿದ್ದರು. ಈ ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ…

Read More

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನು ಅಗಲಿದ್ದಾರೆ. ಆದರೇ ಅವರ ಸಾಧನೆ, ನಟಿಸಿದಂತ ಚಿತ್ರಗಳ ಮೂಲಕ ಇನ್ನೂ ನೆನಪಾಗಿಯೇ ಉಳಿದಿದ್ದಾರೆ. ಇಂದು ಪುನೀತ್ ರಾಜ್ ಕುಮಾರ್ ಅವರಿಗೆ 50ನೇ ಜನ್ಮ ದಿನದ ಹಿನ್ನಲೆಯಲ್ಲಿ ಅವರ ಸಮಾಧಿ ಸ್ಥಳಕ್ಕೆ ಅಭಿಮಾನಿಗಳ ದಂಡೆ ನೆರೆದಿದೆ.  ರಾತ್ರಿಯಿಂದಲೇ ಬೆಂಗಳೂರಿನ ಕಂಠೀರವ ಸ್ಟೂಡಿಯೋದಲ್ಲಿರುವಂತ ಅಪ್ಪು ಸಮಾಧಿ ದರ್ಶನಕ್ಕಾಗಿ ಅಭಿಮಾನಿಗಳು ಸಾಲುಗಟ್ಟಿ ನಿಂತಿದ್ದಾರೆ. ಅಪ್ಪು ಸಮಾಧಿಯ ದರ್ಶನವನ್ನು ಪಡೆಯುತ್ತಿದ್ದಾರೆ. ಇಂದು ಪುನೀತ್ ರಾಜ್ ಕುಮಾರ್ 50ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಅಪ್ಪು ಸಮಾಧಿಯ ದರ್ಶನವನ್ನು ಅಭಿಮಾನಿಗಳು ಸಾಲುಗಟ್ಟಿ ನಿಂತು ಮಡಾುತ್ತಿದ್ದಾರೆ. ಪುನೀತ್ ಅವರ ಕುಟುಂಬಸ್ಥರು ಇಂದು ಸಮಾಧಿ ಸ್ಥಳಕ್ಕೆ ಆಗಮಿಸಿ ಪೂಜೆ ಸಲ್ಲಿಸಲಿದೆ. https://kannadanewsnow.com/kannada/no-property-registration-without-e-khata-state-govt/ https://kannadanewsnow.com/kannada/how-to-remove-encroachments-on-government-land-in-the-state-what-are-the-actions-against-the-erring-officer-heres-the-information/

Read More

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವುದು, ಒತ್ತುವರಿದಾರರ ವಿರುದ್ಧ ಕ್ರಮ ಜರುಗಿಸುವುದು, ಒತ್ತುವರಿ ತೆರವುಗೊಳಿಸಲು ವಿಫಲರಾಗಿರುವ ಅಧಿಕಾರಿಗಳು, ಭೂ ಕಬಳಿಕೆಗೆ ದುಷ್ಪ್ರೇರಣೆ ನೀಡುವ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಶಾಮೀಲಾದ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಾನೂನು, ಶಿಸ್ತು ಕ್ರಮದ ಬಗ್ಗೆ ಸರ್ಕಾರ ಮಹತ್ವದ ಆದೇಶ ಮಾಡಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ಸರ್ಕಾರಿ ಭೂಮಿ ಮಂಜೂರಾತಿ, ಗುತ್ತಿಗೆ, ಒತ್ತುವರಿಗಳ ತೆರವುಗೊಳಿಸುವಿಕೆ ಹಾಗೂ ಅಕ್ರಮ ಹಿಡುವಳಿಗಳನ್ನು ಸಕ್ರಮಗೊಳಿಸುವಿಕೆ ಕುರಿತು ವರದಿ ಸಂಖ್ಯೆ: 05/2018 ಸಲ್ಲಿಸಿರುತ್ತಾರೆ. ಸದರಿ ವರದಿಯ ಬಗ್ಗೆ ಕರ್ನಾಟಕ ವಿಧಾನ ಮಂಡಲದ 2019-20ನೇ ಸಾಲಿನ 14.01.2020ರಂದು ಸಭೆ ನಡೆಸಿದ್ದು, ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯು ದಿನಾಂಕ: 07.01.2020 ಮತ್ತು ಕಬಳಿಕೆಯಾಗಿರುವ ಸರ್ಕಾರಿ ಜಮೀನುಗಳನ್ನು ಹಿಂಪಡೆಯುವ ಪ್ರಕ್ರಿಯೆ ಮಂದ ಗತಿಯಲ್ಲಿಯಲ್ಲಿರುವುದು, ಭೂ ಕಬಳಿಕೆದಾರರು ಹಾಗೂ ದುಷ್ಟೇರಣೆ ನೀಡಿದವರ ವಿರುದ್ಧ ಕಠಿಣ ಕ್ರಮಗಳಾಗದೇ ಇರುವುದನ್ನು ಗಂಭೀರವಾಗಿ ಪರಿಗಣಿಸಿರುತ್ತದೆ ಎಂದಿದೆ. ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಕಲಂ 192 192-29 ಹಾಗೂ…

Read More