Author: kannadanewsnow09

ಬೆಂಗಳೂರು: ಭಾರೀ ಮಳೆಗೆ ಮುನಿರಾಜ ರೆಡ್ಡಿ ಕಟ್ಟಡ ಕುಸಿದಿದ್ದು, ಹಲವರು ಗಾಯಗೊಂಡಿದ್ದಾರೆ. ಕಟ್ಟಡವು ಏಳು ಅಂತಸ್ತಿನ ಎತ್ತರವಾಗಿದ್ದು, ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಘಟನೆ ಸಂಬಂಧ ಕಟ್ಟಡದ ಮಾಲೀಕ ಭುವನ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಲ್ಲದೇ ಅವರ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೃತ ಕಾರ್ಮಿಕನನ್ನು ಸೋಲು ಪಾಸ್ವಾನ್ ಎಂದು ಗುರುತಿಸಲಾಗಿದೆ.ಈ ಮೂಲಕ ಇದುವರೆಗೂ 6 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲೀಕ ಭುವನ್ ರೆಡ್ಡಿ, ಮುನಿರಾಜ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಟ್ಟಡದ ಮಾಲೀಕ ಭುವನ್ ರೆಡ್ಡಿ ನಾಲ್ಕು ಕಟ್ಟಡ ನಿರ್ಮಾಣ ಮಾಡಲಾಗುತ್ತೆ ಎಂದು…

Read More

ಬೆಂಗಳೂರು : ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ ಕೇಂದ್ರ ಸರಕಾರದ ಗ್ರೀನ್‌ ಸಿಗ್ನಲ್‌ ದೊರೆತಿದೆ. ಕೇಂದ್ರ ಸರಕಾರದ ವಿಮಾನಯಾನ ಸಚಿವರೊಂದಿಗೆ ಹಲವಾರು ಬಾರಿ ನಡೆಸಿದ ಚರ್ಚೆಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಬೋಸರಾಜು ತಿಳಿಸಿದ್ದಾರೆ. ಕೇಂದ್ರ ಸರಕಾರದಿಂದ ವಿಮಾನ ನಿಲ್ದಾಣಕ್ಕೆ ಗ್ರೀನ್‌ ಸಿಗ್ನಲ್‌ ದೊರೆತಿರುವ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು, ನಮ್ಮ ಕಾಂಗ್ರೆಸ್‌ ಸರಕಾರ ರಾಯಚೂರಿನಲ್ಲಿ ನೂತನ ಗ್ರೀನ್‌ ಫೀಲ್ಡ್‌ ಏರ್‌ಪೋರ್ಟ್‌ ಮಾಡಲು ಬಹಳ ಪ್ರಯತ್ನ ಮಾಡಿತ್ತು. ಅಲ್ಲದೇ, ಆಯವ್ಯಯದಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶೇಷ ಕಾಳಜಿ ವಹಿಸಿ ಕೇಂದ್ರ ಸರಕಾರದೊಂದಿಗೆ ಸಮನ್ವಯ ಮಾಡಿದ್ದರು. ರಾಯಚೂರು ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಸಹಕಾರ ವನ್ನು ಸರಕಾರ ನೀಡುವುದಾಗಿಯೂ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ದಿ ನಿಗಮದ ವತಿಯಿಂದ…

Read More

ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಗೆ ಬಾಬುಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತವಾಗಿಲ್ಲ. ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ಈ ಘಟನೆ ನಡೆದಿದೆ. ಈ ಘಟನೆಗೆ ಕಾರಣರಾದ ಮನೆ ಮಾಲೀಕ, ನಿರ್ಮಾಣ ಗುತ್ತಿಗೆದಾರ, ಅಧಿಕಾರಿಗಳು ಸೇರಿದಂತೆ ಎಲ್ಲರ ಮೇಲೂ ಪ್ರಕರಣ ದಾಖಲಿಸಲಾಗುವುದು. ಸಣ್ಣ ಜಾಗದಲ್ಲಿ ಎತ್ತರದ ಕಟ್ಟಡ ಕಟ್ಟಿದ್ದೇ ಇದಕ್ಕೆ ಕಾರಣ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಸೋಲಿನ ಭೀತಿಗೆ ಕ್ಷೇತ್ರ ಬಿಟ್ಟುಕೊಡಲು ಮುಂದಾಗಿದ್ದ ಕುಮಾರಸ್ವಾಮಿ ಬಿಜೆಪಿ ಅಭ್ಯರ್ಥಿಗೆ ಕ್ಷೇತ್ರ ಬಿಟ್ಟುಕೊಡಲು ಕುಮಾರಸ್ವಾಮಿ ಅವರು ಮುಂದಾಗಿದ್ದರು ಎನ್ನುವ ಬಗ್ಗೆ ಕೇಳಿದಾಗ, “ತಮ್ಮ ಸ್ವಂತ ಕ್ಷೇತ್ರವನ್ನೇ ಬಿಜೆಪಿಗೆ ಬಿಟ್ಟುಕೊಡಲು ಕುಮಾರಸ್ವಾಮಿ ಸಿದ್ದರಾಗಿದ್ದರು. ಎರಡು ಬಾರಿ ಸಿಎಂ, ಪ್ರಸ್ತುತ ಕೇಂದ್ರ ಸಚಿವರಾಗಿರುವ ಅವರು ಎಷ್ಟು ದುರ್ಬಲರಾಗಿದ್ದಾರೆ ಎಂಬುದು ಇದರಿಂದ ತಿಳಿಯುತ್ತದೆ. ಅವರು ಚನ್ನಪಟ್ಟಣವನ್ನು ಗೆಲ್ಲುತ್ತೇವೆ ಎಂದು ಹೇಳಲು ಸಾಧ್ಯವೇ” ಎಂದರು. “ಪ್ರಿಯಾಂಕ ಗಾಂಧಿ ಅವರು ವಯನಾಡಿನಲ್ಲಿ ನಾಮಪತ್ರ ಸಲ್ಲಿಸುತ್ತಿದ್ದು. ಈ ಕಾರ್ಯಕ್ರಮಕ್ಕೆ ತೆರಳಬೇಕಾಗಿತ್ತು. ಪಕ್ಷ ಸೇರ್ಪಡೆ ಕಾರ್ಯಕ್ರಮ ತುರ್ತಾಗಿ ನಡೆದ ಕಾರಣಕ್ಕೆ ಮುಖ್ಯಮಂತ್ರಿಗಳು ಅಲ್ಲಿ…

Read More

ಬೆಂಗಳೂರು : “ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಮಾತನಾಡಿದರು. “ಕಾಂಗ್ರೆಸ್ ಪಕ್ಷದಿಂದಲೇ ಅವರ ರಾಜಕಾರಣ ಪ್ರಾರಂಭವಾಗಿತ್ತು. ಮತ್ತೊಮ್ಮೆ ಇದೇ ಪಕ್ಷದಿಂದಲೇ ರಾಜಕಾರಣ ಪ್ರಾರಂಭ ಮಾಡಬೇಕು ಎಂದು ಸಿ.ಪಿ.ಯೋಗೇಶ್ವರ್ ಅವರು ಬುಧವಾರ (ಇಂದು) ಬೆಳಿಗ್ಗೆ ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸಿದರು. ಇಷ್ಟು ದಿನ ಎನ್ ಡಿಎಯಲ್ಲಿದ್ದೂ, ಮತ್ತೆ ಕಾಂಗ್ರೆಸ್ಸಿಗನಾಗಿ ಮುಂದುವರೆಯಬೇಕು ಎಂದು ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದರು. “ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ವಿಚಾರವನ್ನು ಮುಖ್ಯಮಂತ್ರಿಗಳ ಬಳಿ ದೂರವಾಣಿಯಲ್ಲಿ ಚರ್ಚೆ ಮಾಡಿದೆ. ನಂತರ ಪಕ್ಷದ ಎಲ್ಲ ಮುಖಂಡರ ಬಳಿ ಸಮಾಲೋಚನೆ ನಡೆಸಿದೆ. ನಮ್ಮ ಬಳಿ ಹೆಚ್ಚು ಸಮಯವಿಲ್ಲದೇ ಇರುವ ಕಾರಣಕ್ಕೆ ಬುಧವಾರ (ಇಂದು) ಬೆಳಿಗ್ಗೆಯೇ ಮುಖ್ಯಮಂತ್ರಿಗಳ ನಿವಾಸದಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಿದೆ.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದಿಂದ ಈ ಸಂಬಂಧ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಬೆಂಗಳೂರಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾದ ಮನೋಜ್ ಜೈನ್, ಐಎಎಸ್ (ಕೆಎನ್: 2006) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರದ ಮುಖ್ಯ ಮೌಲ್ಯಮಾಪನ ಅಧಿಕಾರಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. ರಮಣದೀಪ್ ಚೌಧರಿ, ಐಎಎಸ್ (ಕೆಎನ್: 2008) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಬೆಂಗಳೂರಿನ ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರದ ಮುಖ್ಯ ಮೌಲ್ಯಮಾಪನ ಅಧಿಕಾರಿ ಸುಶಮಾ ಗೋಡಬೋಲೆ (ಕೆಎನ್: 2008) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಬಸವರಾಜು ಎ.ಬಿ ಅವರನ್ನು ವರ್ಗಾವಣೆಗೊಳಿಸಿದೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು,…

Read More

ಯಾವುದೇ ಶುಭ ಕಾರ್ಯ ಮಾಡಲು ಶುಭಗಳಿಗೆ, ಶುಭ ನಕ್ಷತ್ರವನ್ನು ನೋಡುವುದು ಹಿಂದೂ ಸಂಪ್ರದಾಯ. ಉತ್ತಮ ನಕ್ಷತ್ರದಲ್ಲಿ ಕೆಲಸ ಆರಂಭಿಸಿದರೆ ಯಶಸ್ವಿಯಾಗುತ್ತದೆ ಎಂದು ಜ್ಯೋತಿಶಾಸ್ತ್ರ ಹೇಳುತ್ತದೆ. ಇನ್ನು ನಿಮ್ಮ ಜನನ ದಿನಾಂಕ, ಗ್ರಹಗಳು, ಹುಟ್ಟಿದ ಸಮಯ, ಗಳಿಗೆ, ದಿನ ವಾರ, ತಿಂಗಳು ಇದೆಲ್ಲವನ್ನೂ ಆಧರಿಸಿ ಜನ್ಮ ಪತ್ರಿಕೆಯನ್ನು ಸಿದ್ಧಪಡಿಸಲಾಗುತ್ತದೆ. ಈ ಜನ್ಮ ಪತ್ರಿಕೆಯಲ್ಲಿ ಅತಿ ಮುಖ್ಯ ಪಾತ್ರವನ್ನು ವಹಿಸುವಂತಹವು ನಕ್ಷತ್ರಗಳಾಗಿವೆ. ಆದರೆ ನಕ್ಷತ್ರ ಎಂದರೇನು, ಒಟ್ಟು ಎಷ್ಟು ನಕ್ಷತ್ರಗಳಿವೆ, ಯಾವ ನಕ್ಷತ್ರದ ಏನನ್ನು ಸೂಚಿಸುತ್ತದೆ, ಪ್ರತಿ ನಕ್ಷತ್ರಗಳ ವಿಶೇಷತೆ ಏನು ಎಂಬುದರ ಬಗ್ಗೆ ಮುಂದೆ ಲೇಖನದಲ್ಲಿ ತಿಳಿಯೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ…

Read More

ಜೀವನದಲ್ಲಿ ಔದ್ಯೋಗಿಕ ಶತ್ರುಗಳ ಸಮಸ್ಯೆ, ಆಸ್ತಿ ಪ್ರಕರಣ ಬಹಳ ದಿನಗಳಿಂದ ನಡೆಯುತ್ತಿರುವುದು, ಪತಿ-ಪತ್ನಿಯರ ನಡುವೆ ಒಗ್ಗಟ್ಟು ಇಲ್ಲದ ಪರಿಸ್ಥಿತಿ ಉಂಟಾಗುವುದು ಅಥವಾ ಕುಟುಂಬದಲ್ಲಿ ಇರಬಹುದಾದ ಇತರ ಬಂಧುಗಳಿಂದ ಸಮಸ್ಯೆಗಳು ಉಂಟಾಗುವುದು. , ಮತ್ತು ಅನೇಕ ಜನರು ತಮ್ಮ ಸಮಸ್ಯೆಗಳನ್ನು ಅನೇಕ ರೀತಿಯಲ್ಲಿ ಪೇರಿಸುತ್ತಾ ಹೋಗುತ್ತಾರೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಸಮಸ್ಯೆಯನ್ನು ಪರಿಹರಿಸಲು, ನಾವು 18 ನೇ ಹಂತದಲ್ಲಿರುವ ಕಪ್ಪು ಮನುಷ್ಯನನ್ನು ಪೂಜಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ,…

Read More

ಬೆಂಗಳೂರು : ಬೆಂಗಳೂರು ನಗರದಲ್ಲಿ ಕಟ್ಟಡಗಳ ಫಿಟ್ನೆಸ್ ಪ್ರಮಾಣ ಪತ್ರ, ವಿನ್ಯಾಸ ಸೇರಿದಂತೆ ಪಾಲಿಕೆಯಿಂದ ಅನುಮತಿ ತೆಗೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಆದಷ್ಟು ಬೇಗ ಇದರ ಬಗ್ಗೆ ಸಮೀಕ್ಷೆ ಕಾರ್ಯ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಸ್ಥಳಕ್ಕೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸಚಿವರಾದ ಸಂತೋಷ್ ಲಾಡ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರ ಜೊತೆ ಭೇಟಿ ನೀಡಿ ರಕ್ಷಣಾ ಕಾರ್ಯವನ್ನು ವೀಕ್ಷಣೆ ಮಾಡಿದರು. ರಕ್ಷಣಾ ಕಾರ್ಯ ಹಾಗೂ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಿದರು. ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಅವರು, “60/40 ಅಳತೆಯ ನಿವೇಶನದಲ್ಲಿ ಇಷ್ಟು ದೊಡ್ಡ ಕಟ್ಟಡ ಕಟ್ಟಿರುವುದು ದೊಡ್ಡ ಅಪರಾಧ. ಅಧಿಕಾರಿಗಳು ಮೂರು ಬಾರಿ ನೋಟಿಸ್ ನೀಡಿದ್ದೇವೆ ಎಂದು ತಿಳಿಸಿದ್ದಾರೆ. ನೋಟೀಸ್ ನೀಡಿದರೆ ಸಾಲದು ಅದರ ಬದಲು ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಇದು ನಮಗೆ ದೊಡ್ಡ ಪಾಠವಾಗಿದೆ.…

Read More

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಇಂದು ದಿನಾಂಕ 23.10.2024 ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ರವರು ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ…

Read More

ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ( BESCOM ) ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ದಿನಾಂಕ 23-10-2024ರ ಇಂದು, ಹಾಗೂ ದಿನಾಂಕ 24-10-2024ರ ಗುರುವಾರದ ನಾಳೆ ನಗರದ ಕೆಲ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದ್ದು, ಬೆಂಗಳೂರು: 66/11 ಕೆವಿ. ಆಲೂರು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜಾಗುತ್ತಿರುವ ನೆಲಮಂಗಲ ತಾಲ್ಲೂಕಿನ ಈ ಕೆಳಕಂಡ ಗ್ರಾಮಗಳಲ್ಲಿ ದಿನಾಂಕ: 23.10.2024 ರಂದು ಬುಧವಾರ ಬೆಳಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಕೋರಲಾಗಿದೆ. ಇಂದು ಈ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು: ನೆಲಮಂಗಲ ತಾಲ್ಲೂಕಿನ ಮಾಕಳಿ, ಮಂತ್ರಿ ಬಡಾವಣೆ, ನರಸೀಪುರ ಬಿಡಿಎ ಪ್ಲಾಟ್ಸ್, ಅಡಕಮಾರನಹಳ್ಳಿ, ದೊಂಬರಹಳ್ಳಿ, ರಾಜೇಶ್ವರಿ ನಗರ,…

Read More