Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಭಯೋತ್ಪಾದಕರು ಭಾರತದ ವಿರುದ್ಧ ಭಯೋತ್ಪಾದಕ ದಾಳಿಗಳನ್ನು ನಡೆಸಲು ಅಮೆಜಾನ್ ಮತ್ತು ಪೇಪಾಲ್ನಂತಹ ಇ-ಕಾಮರ್ಸ್ ವೇದಿಕೆಗಳನ್ನು ಬಳಸಿದ್ದಾರೆ. ಹಲವಾರು ಭಯೋತ್ಪಾದಕ ಸಂಘಟನೆಗಳು ವಸ್ತುಗಳನ್ನು ಖರೀದಿಸಲು ಮತ್ತು ಭಯೋತ್ಪಾದಕ ಹಣಕಾಸುಗಾಗಿ ಇ-ಕಾಮರ್ಸ್ ವೇದಿಕೆಗಳನ್ನು ದುರುಪಯೋಗಪಡಿಸಿಕೊಂಡಿವೆ ಎಂದು ಜಾಗತಿಕ ಭಯೋತ್ಪಾದನಾ ಹಣಕಾಸು ಕಾವಲು ಸಂಸ್ಥೆ ಹಣಕಾಸು ಕಾರ್ಯಪಡೆ (FATF) ಮಂಗಳವಾರ ತನ್ನ ವರದಿಯಲ್ಲಿ ಬಹಿರಂಗಪಡಿಸಿದೆ. ಸುಮಾರು 40 CRPF ಸಿಬ್ಬಂದಿಯನ್ನು ಬಲಿತೆಗೆದುಕೊಂಡ ಪುಲ್ವಾಮಾ ಭಯೋತ್ಪಾದಕ ದಾಳಿ ಮತ್ತು 2022 ರ ಗೋಕರ್ಣನಾಥ ದೇವಾಲಯದಂತಹ ಭಯೋತ್ಪಾದಕ ದಾಳಿಗಳನ್ನು ಸಂಸ್ಥೆಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಭಯೋತ್ಪಾದನೆಗೆ ಹಣಕಾಸು ಒದಗಿಸಲು ಇ-ಕಾಮರ್ಸ್ ವೇದಿಕೆಗಳು ಮತ್ತು ಆನ್ಲೈನ್ ಪಾವತಿ ಸೇವೆಗಳ ದುರುಪಯೋಗದ ಬಗ್ಗೆ ವರದಿಯು ಗಂಭೀರ ಕಳವಳ ವ್ಯಕ್ತಪಡಿಸಿದೆ. ಭಯೋತ್ಪಾದನಾ ಹಣಕಾಸು ಅಪಾಯಗಳ ಕುರಿತು ಸಮಗ್ರ ನವೀಕರಣ ಎಂಬ ಶೀರ್ಷಿಕೆಯ ತನ್ನ ವರದಿಯಲ್ಲಿ, FATF ಫೆಬ್ರವರಿ 2019 ರ ಪುಲ್ವಾಮಾ ಆತ್ಮಹತ್ಯಾ ಬಾಂಬ್ ದಾಳಿಯನ್ನು ವಿವರಿಸಿದೆ. ಈ ದಾಳಿಯು 40 CRPF ಸಿಬ್ಬಂದಿಯ ಸಾವಿಗೆ ಕಾರಣವಾಯಿತು ಮತ್ತು ಇದನ್ನು ಜೈಶ್-ಎ-ಮೊಹಮ್ಮದ್…
ಬೆಂಗಳೂರು: ರಾಜ್ಯದಲ್ಲಿ ಮೂವರು ಶಂಕಿತ ಉಗ್ರರನ್ನು ಎನ್ ಐ ಎ ಬಂಧಿಸಿದೆ. ಬೆಂಗಳೂರು, ಕೋಲಾರದಲ್ಲಿ ಶಂಕಿತ ಮೂವರು ಉಗ್ರರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು, ಕೋಲಾರದ ಐದು ಕಡೆಯಲ್ಲಿ ದಾಳಿ ನಡೆಸಿರುವಂತ ಎನ್ಐಎ, ಮೂವರು ಶಂಕಿತ ಉಗ್ರರನ್ನು ಬಂಧಿಸಿದೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಎಎಸ್ಐ ಆಗಿದ್ದ ಚಾಂದ್ ಪಾಷಾ ಅನೀಸ್, ಫಾತೀಮಾರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರು, ಕೋಲಾರದ 5 ಕಡೆಯಲ್ಲಿ ಎನ್ಐಎ ನಡೆಸಿದಂತ ದಾಳಿಯಲ್ಲಿ 2 ವಾಕಿಟಾಕಿ, ಚಿನ್ನಾಭರಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. https://kannadanewsnow.com/kannada/nrega-staff-not-paid-for-6-months-statewide-non-cooperation-protests-disruption-in-services/ https://kannadanewsnow.com/kannada/on-july-16-indian-nurse-nimisha-priya-is-executed-in-yemen-report/
ಬೆಂಗಳೂರು: ಕಳೆದ ವಿಚಾರಣೆ ಸಂದರ್ಭದಲ್ಲಿ ವೈಯಕ್ತಿಕ ಆದಾಯ ಹಾಗೂ ಆಸ್ತಿಯ ಬಗ್ಗೆ ಇಡಿಯವರು ಮಾಹಿತಿ ಕೇಳಿದ್ದರು. ಅದೆಲ್ಲದಕ್ಕೂ ನಾನು ಸಂಪೂರ್ಣ ಮಾಹಿತಿ ನೀಡಿದ್ದೇನೆ ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಹೇಳಿದರು. ಇಡಿ ವಿಚಾರಣೆ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಉತ್ತರಿಸಿದರು. ಐಶ್ವರ್ಯಗೌಡ ವಂಚನೆ ಪ್ರಕರಣದಲ್ಲಿ ಇಡಿ ವಿಚಾರಣೆ ಬಗ್ಗೆ ಕೇಳಿದಾಗ, “ನ್ಯಾಯಲಯದಲ್ಲಿ ಪ್ರಕರಣಗಳು ಏನಾದರೂ ಇದೆಯೇ ಎಂದು ಕೇಳಿದರು. ನಾನು ಅವರ ಕೇಳಿದ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ. ನಾನು ನೀಡಿದ ದಾಖಲೆಗಳನ್ನು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ” ಎಂದರು. ಯಾವ ದಾಖಲೆಗಳನ್ನು ಕೇಳಿದ್ದಾರೆ ಎಂದಾಗ, “ಅದೆಲ್ಲವನ್ನು ಬಹಿರಂಗಪಡಿಸಲು ಆಗುವುದಿಲ್ಲ. ನಾನು ದಾಖಲೆಗಳನ್ನು ಸಲ್ಲಿಸಿದ್ದೇನೆ” ಎಂದರು. ಐಶ್ವರ್ಯಗೌಡ ವಂಚನೆ ಪ್ರಕರಣದಲ್ಲಿ ನಿಮ್ಮನ್ನು ತಳುಕು ಹಾಕಲು ಪ್ರಯತ್ನಿಸಲಾಗುತ್ತಿದೆಯೇ ಎಂದು ಕೇಳಿದಾಗ, “ಇದರ ಬಗ್ಗೆ ನನಗೆ ಗೊತ್ತಿಲ್ಲ. ಅನ್ಯಾಯಕ್ಕೆ ಒಳಗಾದವರು ಹೇಳಿಕೆ ಆಧಾರದ ಮೇಲೆ ತನಿಖೆ ನಡೆಯುತ್ತಿದೆ. ಈ ತನಿಖೆಗೆ ಏನೇನು ಸಹಕಾರ ನೀಡಬೇಕೋ ಅದೆಲ್ಲವನ್ನು ನೀಡಿದ್ದೇನೆ. ಮುಂದಕ್ಕೆ ನೋಡೋಣ” ಎಂದರು.
ಬೆಂಗಳೂರು: ರಾಜ್ಯಾಧ್ಯಂತ ಸಾವಿರಾರು ಮಂದಿ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ(ನರೇಗಾ) ಯೋಜನೆಯಡಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ನೌಕರರಿಗೆ ಕಳೆದ 6 ತಿಂಗಳಿನಿಂದ ವೇತನ ನೀಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಅಸಹಕಾರ ಪ್ರತಿಭಟನೆ ಆರಂಭಿಸಿದ್ದಾರೆ. ಈ ಕಾರಣ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿ, ಜನರು ಪರದಾಡುವಂತೆ ಆಗಿದೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ನರೇಗಾ ನೌಕರರ ಸಂಘದ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಅವರು, ರಾಜ್ಯ ಸರ್ಕಾರಕ್ಕೆ ಕಳೆದ ಹಲವು ತಿಂಗಳಿನಿಂದ ನೌಕರರ ಬಾಕಿ ವೇತನ ಬಿಡುಗಡೆ ಮನವಿ ಮಾಡಿದ್ದರೂ ಈವರೆಗೆ ಬಿಡುಗಡೆ ಮಾಡಿಲ್ಲ. ಹೀಗಾಗಿ ನೌಕರರು ರಾಜ್ಯಾಧ್ಯಂತ ಕೆಲಸ ತೊರೆದು ಅಸಹಕಾರ ಪ್ರತಿಭಟನೆಯಲ್ಲಿ ತೊಡಗಿರುವುದಾಗಿ ತಿಳಿಸಿದರು. ನರೇಗಾ ನೌಕರರಿಗೆ ವೇತನ ಬಾಕಿಗೆ ಕೇಂದ್ರ ಸರ್ಕಾರ ಅನುದಾನ ಮಂಜೂರು ಮಾಡಿರದೇ ಇರೋದು ಕಾರಣ ಎಂಬುದಾಗಿ ರಾಜ್ಯ ಸರ್ಕಾರ ಆರೋಪಿಸುತ್ತಿದೆ. ಅನುದಾನ ಮಂಜೂರಾದ ನಂತ್ರ ಈಗ ರಾಜ್ಯ ಸರ್ಕಾರ ಟೆಕ್ನಿಕಲ್ ಸಮಸ್ಯೆ ಆಗಿದೆ. ಬಿಡುಗಡೆ ಆಗಲಿದೆ, ಆಗಲಿದೆ…
ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ…
ನವದೆಹಲಿ: ಯೆಮೆನ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16 ರಂದು ಗಲ್ಲಿಗೇರಿಸಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಕೇರಳ ಮೂಲದ ನಿಮಿಷಾ ಪ್ರಿಯಾ (37) ಯೆಮೆನ್ ನಾಗರಿಕ ತಲಾಲ್ ಅಬ್ದೋ ಮೆಹ್ದಿ ಅವರ ಕೊಲೆಗೆ ಶಿಕ್ಷೆ ವಿಧಿಸಲಾಗಿದೆ. ಯೆಮೆನ್ನಲ್ಲಿ ವಿದೇಶಿ ಪ್ರಜೆಗಳಿಗೆ ಕಾನೂನುಬದ್ಧ ಅವಶ್ಯಕತೆಯಾಗಿದ್ದ ಕ್ಲಿನಿಕ್ ಅನ್ನು ತೆರೆಯಲು ನರ್ಸ್ ತಲಾಲ್ ಜೊತೆ ಪಾಲುದಾರಿಕೆ ಹೊಂದಿದ್ದರು. ತಲಾಲ್ ವಶಪಡಿಸಿಕೊಂಡಿದ್ದ ಅವರ ಪಾಸ್ಪೋರ್ಟ್ ಅನ್ನು ಮರಳಿ ಪಡೆಯಲು ಅವರು ತಲಾಲ್ಗೆ ನಿದ್ರಾಜನಕವನ್ನು ನೀಡಿರುವುದಾಗಿ ಆರೋಪಿಸಲಾಗಿದೆ. ಆದಾಗ್ಯೂ, ಯೆಮೆನ್ ನಾಗರಿಕ ಔಷಧಿಗಳ ಮಿತಿಮೀರಿದ ಸೇವನೆಯಿಂದ ಸಾವನ್ನಪ್ಪಿದರು. ಪ್ರಿಯಾ ಮತ್ತು ಅವರ ಸಹೋದ್ಯೋಗಿ ಮತ್ತೊಬ್ಬ ಯೆಮೆನ್ ಪ್ರಜೆ ಹನಾನ್ ನಂತರ ತಲಾಲ್ ಅವರ ದೇಹವನ್ನು ಕತ್ತರಿಸಿ ನೀರಿನ ಟ್ಯಾಂಕ್ನಲ್ಲಿ ವಿಲೇವಾರಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಯೆಮೆನ್ನಲ್ಲಿರುವ ಸರ್ಕಾರಿ ಅಧಿಕಾರಿಗಳು ಮತ್ತು ತಲಾಲ್ ಅವರ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸ್ಯಾಮ್ಯುಯೆಲ್ ಜೆರೋಮ್ ಬಾಸ್ಕರನ್,…
ಕಲಬುರಗಿ : ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ; ರಾಜ್ಯದ ಜನರಿಗೂ ವಿಶ್ವಾಸ ಇಲ್ಲ ಎಂದು ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ 15 ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದೆ. ಸುರ್ಜೇವಾಲಾ ಅವರು ಪದೇಪದೇ ಬೆಂಗಳೂರಿಗೆ ಬರುತ್ತಿದ್ದಾರೆ. ಶಾಸಕರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದಾರೆ. ಇವತ್ತು ಮತ್ತೆ ಬಂದಿದ್ದಾರೆ. 3 ದಿನಗಳ ಕಾಲ ಇರುತ್ತಾರೆ. ಡಿ.ಕೆ.ಶಿವಕುಮಾರ್ ಜೊತೆ 100 ಶಾಸಕರಿದ್ದಾರೆ. ಅವರಿಗೂ ಅವಕಾಶ ಕೊಡಬೇಕೆಂಬ ನಾನಾ ಹೇಳಿಕೆ ಬರುತ್ತಿದೆ. ಬಿ.ಆರ್.ಪಾಟೀಲರ ಹೇಳಿಕೆ, ರಾಜು ಕಾಗೆಯವರ ಹೇಳಿಕೆಗಳನ್ನು ಗಮನಿಸಿದರೆ ಆಡಳಿತ ಪಕ್ಷದಲ್ಲಿ ಶಾಸಕರು ಮುಖ್ಯಮಂತ್ರಿಗಳ ಮೇಲಿನ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣುತ್ತದೆ ಎಂದು ತಿಳಿಸಿದ್ದರು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸರಿಯಾಗಿ ಇರಬಾರದು ಎರಡು ಧರ್ಮಗಳ ನಡುವೆ ಸಂಘರ್ಷ ನಡೆಯುತ್ತಿರಬೇಕೆಂಬ ದುರುದ್ದೇಶದಿಂದ ಅಹಿತಕರ ಘಟನೆಗಳು ನಡೆಯುತ್ತಿವೆ. ರಾಜ್ಯ…
ಬೆಂಗಳೂರು: ಡಿಸಿಇಟಿ-25, ಮೊದಲ ಸುತ್ತಿನ ಸೀಟು ಹಂಚಿಕೆ ಸಂಬಂಧ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಜು.9ರಂದು ಸಂಜೆ 4ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಮೊದಲ ಸುತ್ತಿನ ಸೀಟು ಹಂಚಿಕೆಗೆ ಅಣಕು ಫಲಿತಾಂಶ ಪ್ರಕಟವಾಗಿದ್ದು, ಅಭ್ಯರ್ಥಿಗಳ ಕೋರಿಕೆ ಮೇರೆಗೆ ಆಪ್ಷನ್ಸ್ ದಾಖಲಿಸುವುದಕ್ಕೆ ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೈದ್ಯಕೀಯ ಸೀಟು: ಜುಲೈ 8ರಿಂದ ಎನ್ ಆರ್ ಐ ವಾರ್ಡ್ ದಾಖಲೆ ಪರಿಶೀಲನೆ ಕರ್ನಾಟಕದಲ್ಲಿ ವೈದ್ಯಕೀಯ ಸೀಟುಗಳಿಗೆ ಎನ್ ಆರ್ ಐ ವಾರ್ಡ್ ಕ್ಲೇಮ್ ಮಾಡಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆಯನ್ನು ಜುಲೈ 8ರಿಂದ ಜುಲೈ 10ರವರೆಗೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ತಿಳಿಸಿದೆ. ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳಿಗೆ ಎನ್ ಆರ್ ಐ ವಾರ್ಡ್ ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ಖುದ್ದು ಹಾಜರಾಗಿ ಪರಿಶೀಲನೆ ಮಾಡಿಸಿಕೊಳ್ಳಬೇಕು. ಮೊದಲ ದಿನ,…
ಮಂಡ್ಯ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಪೈಶಾಚಿಕ ಕೃತ್ಯ ಎನ್ನುವಂತ ಘಟನೆ ಮಂಡ್ಯದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಮೇಲೆ ವೃದ್ದನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ಸೋಮವಾರ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೈಲೂರು ಗ್ರಾಮದಲ್ಲಿ 8 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವಂತ ಘಟನೆ ನಡೆದಿದೆ. ಬಾಲಕಿ ಪೋಷಕರು ಕೂಲಿ ಕೆಲಸಕ್ಕೆ ಹೋದ ನಂತರ ಪಕ್ಕದ ಮನೆಯ ವೃದ್ದನೊಬ್ಬ ಮಗುವಿನ ಜೊತೆ ಕೆಲ ಹೊತ್ತು ಆಟವಾಡಿಕೊಂಡು ನಂತರ ಅಲ್ಲಿಂದ ಎತ್ತಿಕೊಂಡು ಹೋಗಿ ಅವರ ಮನೆಗೆ ತೆರಳಿದ್ದಾನೆ. ಸುಮಾರು ಸಮಯಗಳ ಕಾಲ ಮಗು ಕಾಣಿಸಿಕೊಳ್ಳದ್ದಾಗ ಪೋಷಕರು ಮತ್ತು ಅಕ್ಕ ಪಕ್ಕದ ಮನೆಯವರು ಹುಡುಕಾಟ ನಡೆಸಿದ್ದಾರೆ. ಮಗುವಿನ ಹುಡುಕಾಟ ನಡೆಸುತ್ತಿರುವುದನ್ನು ಗಮನಿಸಿದ ವೃದ್ದ ಮಗುವನ್ನು ವೃದ್ದ ಹೊರಗೆ ಬಿಟ್ಟು ಕಳುಹಿಸಿದ್ದಾನೆ. ಆಕೆಯ ಪೋಷಕರು ಮಗುವಿನ ನಡವಳಿಕೆಯಲ್ಲಿ ವ್ಯತ್ಯಾಸ ಕಂಡು ಆಕೆಯನ್ನು ವಿಚಾರಿಸಿದಾಗ ವೃದ್ಧನ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.…
ಬೆಂಗಳೂರು: ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೇಶ್ವರರನ್ನು ಮಾಡಿ ಎಂದು ತಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ಇದು ಇಡೀ ದೇಶದ ನಾರಿಯರಿಗೆ ಮಾಡಿರುವಂತಹ ಅಪಮಾನ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿದ್ದವರು. ಸಿಡಬ್ಲ್ಯುಸಿ ಸದಸ್ಯರೂ ಆಗಿದ್ದರು. ಇವರ ಸಣ್ಣತನದಿಂದಲೇ ಅವರಿಗೆ ಈಗ ಹಿನ್ನಡೆ (ಡಿಮೋಷನ್) ನೀಡಿ ಕಳುಹಿಸಿದ್ದಾರೆ ಎಂದು ಟೀಕಿಸಿದರು. ರಾಷ್ಟ್ರಮಟ್ಟದಲ್ಲಿ ಹರಿಪ್ರಸಾದ್ ಅವರು ಪ್ರಧಾನಮಂತ್ರಿಗಳ ಆಯ್ಕೆ, ಸಂಸದರ ಆಯ್ಕೆ ರಾಜ್ಯಸಭಾ ಸದಸ್ಯರ ಆಯ್ಕೆ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷ ಇಂದು ಅವರನ್ನು ಕಾಂಗ್ರೆಸ್ಸಿನ ಶೆಡ್ಡಿನಲ್ಲಿ ಇಟ್ಟಿದ್ದು, ಕೇವಲ ಒಬ್ಬ ವಿಧಾನ ಪರಿಷತ್ ಸದಸ್ಯರಾಗಿ ಕೂರಿಸಿದ್ದಾರೆ. ಅವರನ್ನು ಮಂತ್ರಿ ಮಾಡುವ ಸ್ಥಿತಿಯಲ್ಲಿ ಕಾಂಗ್ರೆಸ್ ಇಲ್ಲ. ಅವರ ಸ್ಥಿತಿ ಹೇಗೆ…