Author: kannadanewsnow09

ಕಾಶ್ಮೀರ : ಕಾಶ್ಮೀರದ ಬಂಡಿಪೋರಾದಲ್ಲಿ ಇರುವಂಥ ಗುರೆಜ್(Gurez) ದೂರದ ಪ್ರದೇಶದಲ್ಲಿ ರಿಲಯನ್ಸ್ ಜಿಯೋ ತನ್ನ ಸೇವೆ ಪ್ರಾರಂಭಿಸಿದೆ. ರಿಲಯನ್ಸ್ ಜಿಯೋ ಮತ್ತು ಭಾರತೀಯ ಸೇನೆ ಜಂಟಿಯಾಗಿ ಐದು ಹೊಸ ಟವರ್ ಗಳನ್ನು ಸ್ಥಾಪಿಸಲಾಗಿದೆ. ಕುಪ್ವಾರ ಸೆಂಟಿನೆಲ್ಸ್ ಸಾಮಾಜಿಕ ಮಾಧ್ಯಮ ವೇದಿಕೆಯು “X”ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಇದನ್ನು ಘೋಷಿಸಿದೆ. ಈ ಟವರ್ ಗಳು ಸರಾಸರಿ 13,000 ಅಡಿ ಎತ್ತರದಲ್ಲಿರುವ ಕಾರ್ಯತಂತ್ರದ ಪ್ರಮುಖ ಫಾರ್ವರ್ಡ್ ಪೋಸ್ಟ್‌ಗಳಿಗೆ ಸಂಪರ್ಕವನ್ನು ಒದಗಿಸುತ್ತವೆ. ಇದನ್ನು ಮಹತ್ವದ ಸಾಧನೆ ಎಂದು ಕರೆದ ಕುಪ್ವಾರ ಸೆಂಟಿನಲ್ಸ್, “ಭಾರತೀಯ ಸೇನೆ ಮತ್ತು ರಿಲಯನ್ಸ್ ಜಿಯೋ ಗುರೆಜ್ ಪ್ರದೇಶದಲ್ಲಿ ಐದು ಹೊಸ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿವೆ – ಸಂವಹನ ಮೂಲಸೌಕರ್ಯವನ್ನು ಸುಧಾರಿಸುವ ಮತ್ತು ಈ ಪ್ರದೇಶದಲ್ಲಿ ಡಿಜಿಟಲ್ ಸಂಪರ್ಕವನ್ನು ಹೆಚ್ಚಿಸುವತ್ತ ಒಂದು ಮಹತ್ವದ ಹೆಜ್ಜೆ,” ಎಂದು ತನ್ನ ಪೋಸ್ಟ್‌ನಲ್ಲಿ ಹೇಳಿದೆ. ಈ ಹಿಂದೆ ಜಿಯೋ 16,000 ಅಡಿ ಎತ್ತರದಲ್ಲಿರುವ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಸೇವೆಯನ್ನು ಒದಗಿಸುವ ಮೂಲಕ ಹೀಗೆ ಸೇವೆ ಒದಗಿಸಿದ ಮೊದಲ ಆಪರೇಟರ್ ಆಯಿತು.…

Read More

ಬೆಂಗಳೂರು: ರಾಜ್ಯಾಧ್ಯಂತ ದೀಪಾವಳಿ ಹಬ್ಬದ ಪ್ರಯುಕ್ತ ತೆರೆಯುವ ಪಟಾಕಿ ಮಾರಾಟ ಮಳಿಗೆಗಳು, ಪಟಾಕಿ ತಯಾರಿಕೆ ಸೇರಿದಂತೆ ಇತರೆ ಪ್ರಕ್ರಿಯೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ನಿಷೇಧಿಸಿ ಕಾರ್ಮಿಕ ಇಲಾಖೆ ಆದೇಶಿಸಿದೆ. ಒಂದು ವೇಳೆ ಕಾನೂನು ಮೀರಿದ್ರೇ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯದ ಆಯಾ ಜಿಲ್ಲೆಯ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತಪ್ಪಿದಲ್ಲಿ ಕಾಯ್ದೆಯಡಿ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ ಎಂಬುದಾಗಿ ಎಚ್ಚರಿಸಿದ್ದಾರೆ. https://kannadanewsnow.com/kannada/open-rice-and-ragi-purchase-centers-throughout-the-year-maddur-farmers-association-urges-mandya-district-administration/ https://kannadanewsnow.com/kannada/2588-64-crore-expenditure-for-panch-guarantees-in-chitradurga-district-state-vice-president-dinesh-gooligowda/

Read More

ಚಿತ್ರದುರ್ಗ : ರಾಜ್ಯದ ಮಹತ್ವಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳಿಂದ ಕರ್ನಾಟಕ ರಾಜ್ಯದ ತಲಾ ಆದಾಯ ಹೆಚ್ಚಳವಾಗಿದೆ ಎಂಬುದನ್ನು ಕೇಂದ್ರ ಸರ್ಕಾರ ನೀಡಿರುವ ವರದಿಗಳಿಂದಲೇ ತಿಳಿದುಬಂದಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಹೇಳಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನಾಡಿನ ಜನರಿಗೆ ನೀಡಿದ್ದ ಭರವಸೆಯಂತೆ, ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೂಡಲೆ ಜಾರಿಗೊಳಿಸಿ, ನುಡಿದಂತೆ ನಡೆದಿದೆ. ನಮ್ಮ ಸರ್ಕಾರ ಜಾರಿಗೊಳಿಸಿರುವ ಪ್ರತಿಯೊಂದು ಗ್ಯಾರಂಟಿ ಯೋಜನೆಗಳು ರಾಜ್ಯದ ಬಡ ಹಾಗೂ ಮಧ್ಯಮ ವರ್ಗದ ಜನರ ಆರ್ಥಿಕ ಸಬಲೀಕರಣ ದೃಷ್ಟಿಯಿಂದ ಮಹತ್ವದ್ದಾಗಿವೆ. ಯೋಜನೆಗಳ ಸವಲತ್ತು ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿವೆ ಎಂದರು. ಪಂಚಗ್ಯಾರಂಟಿ ಯೋಜನೆಗಳಿಂದ ದೇಶಕ್ಕೆ ಕರ್ನಾಟಕ ಮಾದರಿಯಾಗಿದೆ.…

Read More

ಮಂಡ್ಯ : ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಮದ್ದೂರು ನಗರದ ತಾಲೂಕು ಕಚೇರಿ ಆವರಣದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ತಾಲೂಕು ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಶಂಕರೇಗೌಡ ಮಾತನಾಡಿ, 2022-23 ನೇ ಸಾಲಿನಲ್ಲಿ ಕಬ್ಬು ಅರೆದಿರುವ ಹಂಗಾಮಿನಲ್ಲಿ ಅಂದಿನ ರಾಜ್ಯ ಸರ್ಕಾರ ಟನ್ ಕಬ್ಬಿಗೆ 150 ರೂ.ಗಳನ್ನು ಕಬ್ಬು ಬೆಳೆಗಳಿಗೆ ಪಾವತಿಸಲಾಗುವುದು ಎಂದು ಘೋಷಣೆ ಮಾಡಿತ್ತು. ಆದರೆ, ಇಲ್ಲಿಯವರೆಗೂ ಬಿಡುಗಡೆ ಮಾಡಿಲ್ಲ. ಈ ಕೂಡಲೇ ರಾಜ್ಯ ಸರ್ಕಾರ ಅದರ ಹಣವನ್ನು ಪಾವತಿ ಮಾಡಬೇಕು ಎಂದು ಆಗ್ರಹಿಸಿದರು. ಇನ್ನೊಂದು ತಿಂಗಳಲ್ಲಿ ಭತ್ತದ ಬೆಳೆ ಕಟಾವಿಗೆ ಬರುತ್ತಿದ್ದು, ಭತ್ತಕ್ಕೆ ಕ್ವಿಂಟಾಲ್ಗೆ ಕನಿಷ್ಟ 3500 ರೂ. ಬೆಲೆ ನಿಗದಿಗೊಳಿಸಬೇಕು ಹಾಗೂ ನವಂಬರ್ ತಿಂಗಳಲ್ಲೇ ಖರೀದಿ ಕೇಂದ್ರ ತೆರೆದು ರಾಗಿ, ಭತ್ತ ಖರೀಸಬೇಕು ಮತ್ತು ಶಾಶ್ವತವಾಗಿ ಖರೀದಿ ಕೇಂದ್ರಗಳನ್ನು ವರ್ಷ ಪೂರ್ತಿ ತೆರೆಯಬೇಕು. ಕೇಂದ್ರ ಸರ್ಕಾರ ಡಾ.ಸ್ವಾಮಿನಾಥನ್ ವರದಿಯನ್ನು…

Read More

ಢಾಕಾದ ಹಜರತ್ ಶಹಜಲಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸರಕು ಸಾಗಣೆ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಧಿಕಾರಿಗಳು ಎಲ್ಲಾ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಬೇಕಾಯಿತು. ಮಧ್ಯಾಹ್ನ 2:30 ರ ಸುಮಾರಿಗೆ ಪ್ರಾರಂಭವಾದ ಬೆಂಕಿಯು ಆಮದು ಮಾಡಿದ ಸರಕುಗಳನ್ನು ಸಂಗ್ರಹಿಸಲು ಬಳಸಲಾಗುತ್ತಿದ್ದ ಪ್ರದೇಶವನ್ನು ಆವರಿಸಿತು, ವಿಮಾನ ನಿಲ್ದಾಣದ ಆವರಣದಾದ್ಯಂತ ದಟ್ಟವಾದ ಹೊಗೆಯನ್ನು ಹೊರಹಾಕಿತು ಎಂದು ಪ್ರೋಥೋಮ್ ಅಲೋ ವರದಿ ಮಾಡಿದೆ. ವಿಮಾನ ನಿಲ್ದಾಣದ ಕಾರ್ಯನಿರ್ವಾಹಕ ನಿರ್ದೇಶಕ ಎಂಡಿ ಮಸೂದುಲ್ ಹಸನ್ ಮಸೂದ್ ಅವರನ್ನು ಉಲ್ಲೇಖಿಸಿ ವರದಿಯು, ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಹೋರಾಡುತ್ತಿರುವುದರಿಂದ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಎರಡನ್ನೂ ನಿಲ್ಲಿಸಲಾಗಿದೆ ಎಂದು ಹೇಳಿದೆ. https://twitter.com/PTI_News/status/1979501934768800160 ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಪ್ರಕಾರ, ಬಾಂಗ್ಲಾದೇಶ ನಾಗರಿಕ ವಿಮಾನಯಾನ ಪ್ರಾಧಿಕಾರ, ಅಗ್ನಿಶಾಮಕ ಸೇವೆ ಮತ್ತು ಎರಡು ವಾಯುಪಡೆಯ ಅಗ್ನಿಶಾಮಕ ಘಟಕಗಳು ಬೆಂಕಿಯನ್ನು ನಂದಿಸಲು ಜಂಟಿಯಾಗಿ ಕೆಲಸ ಮಾಡುತ್ತಿವೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ನೌಕಾಪಡೆಯೂ ಸಹ ಕಾರ್ಯಾಚರಣೆಯಲ್ಲಿ ಸೇರಿಕೊಂಡಿದೆ. ಹಾನಿಯ ಪ್ರಮಾಣ ಮತ್ತು ಬೆಂಕಿಯ…

Read More

ಬೆಂಗಳೂರು: ಸರಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳು ಚಟುವಟಿಕೆ ನಡೆಸಬೇಕಾದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕು ಎಂಬ ಸಚಿವ ಸಂಪುಟದ ತೀರ್ಮಾನ ಸಮರ್ಥನೀಯ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ವಿದ್ಯಮಾನಗಳ ಕುರಿತಾಗಿಯೂ ಸಚಿವರು ಪ್ರತಿಕ್ರಿಯೆ ನೀಡಿದರು. ನಮ್ಮ ಸರ್ಕಾರ ಜಾರಿಗೆ ಈ ನಿಷೇಧ ಹೇರಿಲ್ಲ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಗಿತ್ತು. ಇದನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡಿದೆಯಷ್ಟೇ. ಮಾಡಲು ಕೆಲಸವಿಲ್ಲದ ಬಿಜೆಪಿಯವರು ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು. ನಿಷೇಧದ ಬಗ್ಗೆ ಎಲ್ಲಿಯೂ ಹೇಳಿಲ್ಲ ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್‌ ನಿಷೇಧ ಮಾಡಬೇಕು ಎಂದು ಎಲ್ಲಿಯೂ ಹೇಳಿಲ್ಲ.ಎಲ್ಲರೂ ಅವರ ಮಾತನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಸರ್ಕಾರಿ ಅಧೀನದ ಸ್ಥಳಗಳಲ್ಲಿ, ಶಾಲಾ-ಕಾಲೇಜು ಆವರಣದಲ್ಲಿ ಅನುಮತಿ ಪಡೆಯಬೇಕು ಎಂದು…

Read More

ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳಿಗೆ ಬೋಧಿಸುತ್ತಿರುವಂತ ಪ್ರಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಟಿಇಟಿ ಪರೀಕ್ಷೆ ಪಾಸ್ ಮಾಡಿದ್ದರೇ ಅರ್ಹರಾಗಿರುತ್ತಾರೆ ಎಂಬುದಾಗಿ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯಪತ್ರವನ್ನು ಹೊರಡಿಸಿರುವಂತ ಸರ್ಕಾರವು,  1 ರಿಂದ 5ನೇ ತರಗತಿಗೆ ಬೋಧಿಸುವ ಪ್ರಾಥಮಿಕ ಶಾಲಾ ಶಿಕ್ಷಕರು NCTE ಮಾರ್ಗಸೂಚಿಗಳಲ್ಲಿ ನಿರ್ಧಿಷ್ಟಪಡಿಸಿದಂತೆ ಮತ್ತು ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿರುವಂತೆ ಅಗತ್ಯ ವಿಷಯಗಳಲ್ಲಿ ಪದವಿಯನ್ನು ಹಾಗೂ TET ಪ್ರಮಾಣ ಪತ್ರವನ್ನು ಹೊಂದಿದ್ದಲ್ಲಿ 6 ಮತ್ತು 7 ನೇ ತರಗತಿಗೆ ಬೋಧಿಸಲು ಅರ್ಹರಾಗತಕ್ಕದ್ದು ಎಂದಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) ನಿಯಮಗಳು, 1967ನ್ನು ಈ ಮುಂದಿನಂತೆ ತಿದ್ದುಪಡಿ ಮಾಡಲು ಕರ್ನಾಟಕ ನಾಗರಿಕ ಸೇವೆಗಳು ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14) ರ ಕಲಂ 3 ಉಪ ಕಲಂ (1) ರೊಂದಿಗೆ ಓದಿಕೊಂಡ ಕಲಂ 8 ರಂತೆ…

Read More

ಬೆಂಗಳೂರು: ರಾಜ್ಯಕ್ಕೆ ಹಬ್ಬಕ್ಕೆ ಮುನ್ನವೇ ದೀಪಾವಳಿ ಸಡಗರ ಬಂದಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದೆ. ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದೇ ನಮ್ಮ ಸರ್ಕಾರದ ಗುರಿ ಎಂದು ಸಚಿವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಪ್ರೀ ಕ್ಲೀನಿಕಲ್‌, ಪ್ಯಾರಾ ಕ್ಲೀನಿಕಲ್‌ ಮತ್ತು ಕ್ಲೀನಿಕಲ್‌ ವಿಭಾಗಕ್ಕೆ ಒಟ್ಟು 422 ಪಿಜಿ ಸೀಟುಗಳ ಹೆಚ್ಚಳ ಮಾಡಲಾಗಿದೆ ಎಂದು ಡಾ. ಪಾಟೀಲ್‌ ವಿವರಿಸಿದರು. ಪೀಡಿಯಾಟ್ರಿಕ್ಸ್‌, ಅನಸ್ತೇಸಿಯಾ, ಫೋರೆನ್ಸಿಕ್‌ ಮೆಡಿಸಿನ್‌, ಮೈಕ್ರೊ ಬಯಲಾಜಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ವಿಭಾಗದಲ್ಲಿ ಪಿಜಿ ಸೀಟುಗಳನ್ನು ಮಂಜೂರು ಮಾಡಲಾಗಿದೆ ಎಂದು ಸಚಿವರು ತಿಳಿಸಿದರು. 572 ಸೀಟು ಹೆಚ್ಚಳಕ್ಕೆ ಮನವಿ ಸಲ್ಲಿಸಲಾಗಿತ್ತು ಪ್ರತಿಬಾರಿಯಂತೆ…

Read More

ಬೆಂಗಳೂರು: ಖಾತಾ ಮಾಡಿಸಲು 10-15 ಸಾವಿರ ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕೆ.ಆರ್. ಪುರಂ ಆರ್ ಓ ಬಸವರಾಜ್ ಅವರ ವಿರುದ್ಧ ಕ್ರಮ ಜರುಗಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರಿನ ಕೆ ಆರ್ ಪುರಂನ ಟಿ.ಸಿ. ಪಾಳ್ಯದ ವೆಂಗಯ್ಯ ಪಾರ್ಕ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ “ಬೆಂಗಳೂರು ನಡಿಗೆ” ಅಭಿಯಾನ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕಾರ್ಯಕ್ರಮದ ವೇಳೆ ಸುಲ್ತಾನ್ ಮಿರ್ಜಾ ಎಂಬುವವರು ಮಾತನಾಡಿ, “ಇಷ್ಟು ದಿನ ನಮ್ಮ ಆಸ್ತಿಯ ಖಾತೆ ಮಾಡಿಸಲು ಬಹಳಷ್ಟು ಕಷ್ಟಪಡಬೇಕಾಗಿತ್ತು. ಆದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇದಕ್ಕಾಗಿ ಯೋಜನೆ ರೂಪಿಸಿ ಬಹಳ ಅನುಕೂಲ ಮಾಡಿಕೊಟ್ಟಿದ್ದಾರೆ. ಆದರೆ ಖಾತಾ ಮಾಡಿಸಲು ಕಂದಾಯ ಅಧಿಕಾರಿಗಳು ಹೆಚ್ಚು ಲಂಚ ಕೇಳುತ್ತಾರೆ. ಈ ವಿಚಾರವಾಗಿ ಬಿಬಿಎಂಪಿ ಕಮಿಷನರ್ ಬಳಿ ದೂರು ನೀಡಿದ್ದೇನೆ” ಎಂದರು. ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಲಂಚ ಕೇಳುತ್ತಿರುವ ಅಧಿಕಾರಿಯ ಹೆಸರು ಹೇಳಿ, ನಾನು ಇಲ್ಲೇ ಆ…

Read More

ಬೆಂಗಳೂರು : “ಮುಂದಿನ ದಿನಗಳಲ್ಲಿ ಐಟಿ‌- ಬಿಟಿ ಕಂಪನಿಗಳ ಜೊತೆ ನಾನು ಹಾಗೂ ಐಟಿ, ಕೈಗಾರಿಕೆ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರುಗಳು ಪ್ರತ್ಯೇಕವಾಗಿ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುತ್ತೇವೆ. ಟೀಕೆ ಟಿಪ್ಪಣಿ ಮಾಡುವವರಿಗೆ ನಮ್ಮ ಕೆಲಸವೇ ಉತ್ತರ ನೀಡುತ್ತದೆ. ನಾವು ನಮ್ಮ ಪಾಡಿಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ನಾವು ಟೀಕೆಗಳಿಗೆ‌ ತಲೆ‌ಕೆಡಿಸಿಕೊಳ್ಳುವುದಿಲ್ಲ. ಭಗವಂತ ಹಾಗೂ ಜನರು ನಮಗೆ ಆಶೀರ್ವಾದ ಮಾಡಿದ್ದು, ನಾವು ಅವರ ಸೇವೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಕೆ ಆರ್ ಪುರಂನ ಟಿ.ಸಿ. ಪಾಳ್ಯದ ವೆಂಗಯ್ಯ ಪಾರ್ಕ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ “ಬೆಂಗಳೂರು ನಡಿಗೆ” ಅಭಿಯಾನದ ಅಂಗವಾಗಿ “ನಾಗರಿಕರೊಂದಿಗೆ ಸಂವಾದ” ನಡೆಸಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “ನೂತನ ಐದು ಪಾಲಿಕೆಗಳು ಬೆಂಗಳೂರಿನ ಅಭಿವೃದ್ಧಿಯಲ್ಲಿ ಇತಿಹಾಸ ಸೃಷ್ಟಿಸಲಿವೆ. ಬೆಂಗಳೂರು ನಗರದಿಂದ 6 ಸಾವಿರ ಕೋಟಿ ತೆರಿಗೆ ಸಂಗ್ರಹವಾಗುತ್ತಿದೆ. ಇದರಲ್ಲಿ ಬೆಂಗಳೂರು ನಗರ ಪೂರ್ವ ಪಾಲಿಕೆ 1600 ಕೋಟಿ ರೂಪಾಯಿ ಪಾಲು…

Read More