Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಒಂದು ಒಂದು ವರ್ಷ ಕಳೆದಿದೆ. ಇದೇ ಹೊತ್ತಿನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಗೆ ಆಗಮಿಸಿದಂತ ಸಚಿವ ಬಿ.ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ನೀಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಹಗರಣದ ಬಗ್ಗೆ ಕೆಲಕಾಲ ಸಿಎಂ ಜೊತೆಗೆ ಚರ್ಚೆ ನಡೆಸಿದರು. ಆ ಬಳಿಕ ಈ ಪ್ರಕರಣದ ಹೊಣೆ ಹೊತ್ತಂತ ಬಿ.ನಾಗೇಂದ್ರ ಅವರು ಯುವ ಸಬಲೀಕರಣ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಂದಹಾಗೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ. ತನಿಖೆ ನಡೆಸುತ್ತಿರುವಂತ ಎಸ್ಐಟಿ ಅಧಿಕಾರಿಗಳು ಎಂಡಿ ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಏನಿದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ? ಬೆಂಗಳೂರಿನ ವಸಂತ ನಗರದಲ್ಲಿರುವ ಮಹರ್ಷಿ…
ಬೆಂಗಳೂರು: ಆಮ್ ಆದ್ಮಿ ಪಾರ್ಟಿ ಕರ್ನಾಟಕದ ಉಸ್ತುವಾರಿ ದಿಲೀಪ್ ಪಾಂಡೆ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಹಾಗೂ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರೊಂದಿಗೆ ಜೂನ್ 8 ರಂದು ಶನಿವಾರ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನಿ ತಿಳಿಸಿದ್ದಾರೆ. ನಗರದ ಅಲುಮ್ನಿ ಅಸೋಸಿಯೇಷನ್ ಯುವಿಸಿಇ ಇಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪ್ರಸ್ತುತ ರಾಜಕೀಯ ಬೆಳವಣಿಗೆ ಹಾಗೂ ಕರ್ನಾಟಕದಲ್ಲಿ ಪಕ್ಷದ ಮುಂದಿನ ರೂಪು ರೇಷೆ ಕುರಿತಾಗಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ರಾಜ್ಯ ಸಮಿತಿಯ ಎಲ್ಲ ಪದಾಧಿಕಾರಿಗಳು, ಎಲ್ಲ ಘಟಕದ ರಾಜ್ಯಾಧ್ಯಕ್ಷರು, ಎಲ್ಲಾ ಜಿಲ್ಲೆಯ ಜಿಲ್ಲಾಧ್ಯಕ್ಷರು ಭಾಗವಹಿಸಲಿದ್ದು, ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು. https://kannadanewsnow.com/kannada/7-year-old-boy-dies-in-bengaluru-after-doctors-fail-to-do-so/ https://kannadanewsnow.com/kannada/good-news-for-mobile-users-the-phone-will-be-charged-in-just-60-seconds/
ಬೆಂಗಳೂರು: ಸಂಪಂಗಿ ರಾಮನಗರದಲ್ಲಿ ವೈದ್ಯರೊಬ್ಬರು ಮಾಡಿದಂತ ಎಡವಟ್ಟಿಗೆ 7 ವರ್ಷದ ಬಾಲಕನೊಬ್ಬ ಧಾರುಣವಾಗಿ ಸಾವನ್ನಪ್ಪಿದ್ದಂತ ಘಟನೆ ನಡೆದಿದೆ. ಬೆಂಗಳೂರಿನ ಸಂಪಂಗಿ ರಾಮನಗರದ 7 ವರ್ಷದ ಬಾಲಕ ಆಡನ್ ಮೈಕಲ್ ಎಂಬಾತನಿಗೆ ಊಟ ಮಾಡುವಂತ ಸಂದರ್ಭದಲ್ಲಿ ಗಂಟಲು ನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಸಿಂಧ್ಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆಡನ್ ಮೈಕಲ್ ಪರೀಕ್ಷೆ ಮಾಡಿದಂತ ವೈದ್ಯರು, ಆಪರೇಷನ್ ಮಾಡಬೇಕು ಅಂತ ಹೇಳಿದ್ದಾರೆ. ಅದಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ. ಸಿಂಧ್ಯಾ ಆಸ್ಪತ್ರೆಯ ಡಾ.ಶ್ವೇತಾ ಪೈ ಎಂಬುವರು ಬಾಲಕ ಆಡನ್ ಮೈಕಲ್ ಗೆ ಅನೆಸ್ತೇಷಿಯಾ ನೀಡಿದ್ದಾರೆ. ಹೀಗೆ ನೀಡಿದಂತ ಕೆಲವೇ ನಿಮಿಷದಲ್ಲಿ ಬಾಲಕ ಸಾವನ್ನಪ್ಪಿದ್ದಾನೆ. ಇದನ್ನು ಮುಚ್ಚಿಕೊಳ್ಳೋದಕ್ಕೆ ಬಾಲಕನಿಗೆ ಹೃದಯ ಸಂಬಂಧಿ ಸಮಸ್ಯೆ ಇದೆ. ಅದು ಇದು ಅಂತ ಕಥೆ ಹೊಡೆದಿದ್ದಾರೆ. ಅನುಮಾನಗೊಂಡ ಪೋಷಕರು, ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದಾಗ ಬಾಲಕ ಅನೆಸ್ತೇಷಿಯಾ ಓವರ್ ಡೋಸ್ ಆಗಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಬಾಲಕನ ಮೃತದೇಹ ಕಳುಹಿಸಿಕೊಡಲಾಗಿದೆ.…
ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಲಿದೆ ಎನ್ನಲಾಗುತ್ತಿತ್ತು. ಒಂದು ವೇಳೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದ್ದೇ ಆದ್ರೇ, ಕರ್ನಾಟಕದಲ್ಲಿ ಮುಂದಾಗುವ ಅನಾಹುತಗಳಿಗೇ ರಾಜ್ಯ ಸರ್ಕಾರವೇ ಹೊಣೆ ಎಂಬುದಾಗಿ ಕರ್ನಾಟಕ ಬಿಜೆಪಿ ಎಚ್ಚರಿಕೆ ನೀಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅದು, ಬಣ್ಣ ಬದಲಿಸುವಲ್ಲಿ ಕಾಂಗ್ರೆಸ್ ಪಕ್ಷದವರು ಊಸರವಳ್ಳಿಯನ್ನು ಸಹ ಮೀರಿಸುತ್ತಾರೆ ಎಂಬುದಾಗಿ ಕಿಡಿಕಾರಿದೆ. ಗ್ಯಾರಂಟಿಗಳೇ ನಮ್ಮ ಸರ್ಕಾರಕ್ಕೆ ಶ್ರೀರಕ್ಷೆ ಎಂದು ಬಡಾಯಿ ಕೊಚ್ಚಿಕೊಂಡಿದ್ದ ಶಾಸಕರೆಲ್ಲರೂ ಈಗ ಗ್ಯಾರಂಟಿಯಿಂದಲೇ ನಮ್ಮ ಸರ್ಕಾರಕ್ಕೆ ಹಿನ್ನಡೆ ಎನ್ನುತ್ತಿರುವುದು ಹತಾಶೆಯ ಪರಮಾವಧಿ ಅಂತ ಗುಡುಗಿದೆ. ಲೋಕಸಭಾ ಚುನಾವಣೆಯಲ್ಲಿ ಸೋತ ಕಾರಣಕ್ಕೆ ಗ್ಯಾರಂಟಿಗಳನ್ನು ನಿಲ್ಲಿಸಿದರೆ, ಕರ್ನಾಟಕದಲ್ಲಿ ಮುಂದಾಗುವ ಅನಾಹುತಗಳಿಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣವಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದೆ. https://twitter.com/BJP4Karnataka/status/1798634856597053547 https://kannadanewsnow.com/kannada/bitcoin-case-sit-files-chargesheet-against-6-accused-including-sriki/ https://kannadanewsnow.com/kannada/good-news-for-mobile-users-the-phone-will-be-charged-in-just-60-seconds/
ಬೆಂಗಳೂರು: ಬಿಟ್ ಕಾಯಿನ್ ಹಗರಣದ ತನಿಖೆಯನ್ನು ನಡೆಸುತ್ತಿರುವಂತ ಎಸ್ಐಟಿ ಅಧಿಕಾರಿಗಳು, ಇಂದು ನ್ಯಾಯಾಲಯಕ್ಕೆ ಶ್ರೀಕಿ ಸೇರಿದಂತೆ 6 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಇಂದು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸುತ್ತಿರುವಂತ ಎಸ್ಐಟಿ ಪೊಲೀಸರು, ಮೊದಲ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಆರೋಪಿಗಳಾದಂತ ಶ್ರೀಕಿ ಆಲಿಯಾಸ್ ಶ್ರೀಕೃಷ್ಣ, ರಾಬಿನ್ ಖಂಡೇವಾಲ, ಸುನೀಶ್ ಹೆಗ್ಡೆ ಸೇರಿದಂತೆ 6 ಆರೋಪಿಗಳ ವಿರುದ್ಧ ಇಂದು ಕೋರ್ಟ್ ಗೆ ದೋಷಾರೋಪ ಪಟ್ಟಿಯನ್ನು ಎಸ್ಐಟಿ ಪೊಲೀಸರು ಸಲ್ಲಿಸಿದ್ದಾರೆ. ಅಂದಹಾಗೇ ಡ್ರಗ್ ಕೇಸ್ ಪ್ರಕರಣ ಸಂಬಂಧ ಮೂರು ಎಫ್ಐಆರ್ ಗಳು ದಾಖಲಾಗಿದ್ದವು. ಇವುಗಳನ್ನು ತನಿಖೆ ಮಾಡುತ್ತಿದ್ದಂತ ವೇಳೆಯಲ್ಲಿ ಬಿಟ್ ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು. ಈ ಕೇಸರನ್ನು ರಾಜ್ಯ ಸರ್ಕಾರ ಎಸ್ಐಟಿ ಪೊಲೀಸರ ಮೂಲಕ ತನಿಖೆಗೆ ಆದೇಶಿಸಿತ್ತು. ಈಗ ತನಿಖೆ ನಡೆಸಿರುವಂತ ಎಸ್ಐಟಿ ಪೊಲೀಸರು, ನ್ಯಾಯಾಲಯಕ್ಕೆ 6 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. https://kannadanewsnow.com/kannada/uttarakhand-avalanche-employee-of-bengalurus-famous-multinational-company-dies/ https://kannadanewsnow.com/kannada/good-news-for-mobile-users-the-phone-will-be-charged-in-just-60-seconds/
ಕಾರವಾರ: ಕರ್ನಾಟಕದಿಂದ ಉತ್ತರಾಖಂಡಕ್ಕೆ ಚಾರಣಕ್ಕೆಂದು 18 ಮಂದಿ ತೆರಳಿದ್ದರು. ಆದ್ರೇ ಹವಾಮಾನ ವೈಪರಿತ್ಯದಿಂದ ಹಿಮಪಾತ ಉಂಟಾದ ಪರಿಣಾಮ, 9 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ ಬೆಂಗಳೂರಿನ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿ ಕೂಡ ಸೇರಿದ್ದಾರೆ. ಉತ್ತರಾಖಂಡಕ್ಕೆ ಶಿರಸಿ ತಾಲೂಕಿನ ಜಾಗನಹಳ್ಳಿಯ ಯುವತಿ ಪದ್ಮಿನಿ ಚಾರಣಕ್ಕೆಂದು ತೆರಳಿದ್ದರು. ಬೆಂಗಳೂರಿನಿಂದ ತೆರಳಿದ್ದಂತ 18 ಮಂದಿಯಲ್ಲಿ ಇವರು ಒಬ್ಬರಾಗಿದ್ದರು. ಪದ್ಮಿನಿ ಬೆಂಗಳೂರು ನಿವಾಸಿಯಾಗಿದ್ದರು. ಬಹುರಾಷ್ಟ್ರೀಯ ಕಂಪನಿ ಗೂಗಲ್ ನಲ್ಲಿ ಕೆಲಸ ಮಾಡುತ್ತಿದ್ದಂತ ಪದ್ಮಿನಿ (35), ಉತ್ತರಾಖಂಡದಲ್ಲಿ ನಡೆದಂತ ಹಿಮಪಾತದಲ್ಲಿ ಸಾವನ್ನಪ್ಪಿದ್ದಾರೆ. ಅಂದಹಾಗೇ ಕೆಲ ವರ್ಷಗಳಿಂದ ಚಾರಣದಲ್ಲಿ ಆಸಕ್ತಿ ಹೊಂದಿದ್ದಂತ ಪದ್ಮಿನಿ, ಮೇ.29ರಿಂದ ಜೂನ್.7ರವರೆಗೆ ಭಟವಾಡಿ ಮಲ್ಲಾ-ಸಿಲ್ಲಾ ಕುಶಕಲ್ಯಾಣ ಸಹಸ್ರಾತಾಲ್ ಟ್ರೆಂಕ್ಕಿಂಗ್ ಗೆ ಅನುಮತಿ ಪಡೆದ ತಡದೊಂದಿಗೆ ತೆರಳಿದ್ದರು. ಜೂನ್.4ರಂದು ತಾಯಿಗೆ ಮೆಸೇಜ್ ಮಾಡಿದ್ದಂತ ಪದ್ಮಿನಿ, ಇಲ್ಲಿ ಹವಾಮಾನ ಸರಿಯಿಲ್ಲ ಎಂಬುದಾಗಿ ತಿಳಿಸಿದ್ದರು. ಈ ಬೆನ್ನಲ್ಲೇ ಹವಾಮಾನ ವೈಪರಿತ್ಯದಿಂದ ಹಿಮಪಾತವಾಗಿ, ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ಅವರ ಮೃತದೇಹವನ್ನು ಬೆಂಗಳೂರಿಗೆ ತರೋ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. https://kannadanewsnow.com/kannada/siddaramaiah-reveals-the-secret-of-his-addiction-on-stage/…
ಬೆಂಗಳೂರು: ದೈಹಿಕವಾಗಿ ಚಟುವಟಿಕೆ ಇಲ್ಲದೆ ಕುಳಿತವರಿಗೆ ಅನಾರೋಗ್ಯ ಹೆಚ್ಚು. ಆದ್ದರಿಂದ ದೈಹಿಕ ಮತ್ತು ಮಾನಸಿಕ ಚಟುವಟಿಕೆ ಅಗತ್ಯ. ನನಗೂ ಒಂದಾನೊಂದು ಕಾಲದಲ್ಲಿ ಆ ಒಂದು ಅಭ್ಯಾಸವಿತ್ತು. ಅದನ್ನು ಬಿಟ್ಟೆ ಅಂತ ವೇದಿಕೆಯಲ್ಲೇ ತನ್ನ ಚಟದ ಗುಟ್ಟನ್ನು ಸಿಎಂ ಸಿದ್ಧರಾಮಯ್ಯ ಬಿಚ್ಚಿಟ್ಟರು. ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಜೀವನಶೈಲಿ ಮತ್ತು ಆಹಾರ ಪದ್ಧತಿ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ಜನ ವರ್ಗಕ್ಕೆ ಆರೋಗ್ಯ ಮತ್ತು ಅಗತ್ಯ ಚಿಕಿತ್ಸೆಗೆ ಒದಗಿಸಲು ಕಾರ್ಯಕ್ರಮಗಳನ್ನು ನಿರಂತರವಾಗಿ ರೂಪಿಸಿ, ಜಾರಿ ಮಾಡುತ್ತಿದ್ದೇವೆ ಎಂದರು. ಕ್ಯಾನ್ಸರ್ ನಂತಹ ಮಾರಕ ರೋಗವನ್ನೂ ಗುಣಪಡಿಸುವುದು ಸಾಧ್ಯವಿದೆ. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದರೆ ದೀರ್ಘಕಾಲ ಆರೋಗ್ಯ ಕಾಪಾಡಿಕೊಳ್ಳುವುದು ಸಾಧ್ಯವಿದೆ ಎಂದರು. ಹಿಂದಿನವರ ಆರೋಗ್ಯ ಪದ್ಧತಿ ಮತ್ತು ಶ್ರಮಾಧಾರಿತ ಜೀವನ ಶೈಲಿ ಅವರನ್ನು ಗಟ್ಟಿಮುಟ್ಟಾಗಿ ಸದೃಡವಾಗಿ ಇಟ್ಟಿತ್ತು ಎಂದರು. ಇಂಥಾ…
ಬೆಂಗಳೂರು : “ಪಕ್ಷ ಹಾಗೂ ಸರ್ಕಾರಗ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ, “ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು” ಎಂದರು. ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂದು ಕೇಳಿದಾಗ, “ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ” ಎಂದರು. ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಕೇಳಿದಾಗ,…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಮೊತ್ತದ ಹಗರಣಕ್ಕೆ ಸಂಬಂಧಿಸಿ ಹಣಕಾಸು ಇಲಾಖೆ ನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯುವಂತೆ ರಾಜ್ಯಪಾಲರನ್ನು ಕೋರಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ಶಾಸಕರ ಜೊತೆ ತೆರಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜಭವನದಲ್ಲಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ಹೈದರಾಬಾದ್ನಲ್ಲಿ 18ಕ್ಕೂ ಹೆಚ್ಚು ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ಹಣವನ್ನು ಅಕ್ರಮವಾಗಿ ವರ್ಗಾಯಿಸಿದ್ದಾರೆ. ಹಣಕಾಸು ಇಲಾಖೆ ಅನುಮತಿ ಇಲ್ಲದೇ ಇದು ನಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು. ಮುಖ್ಯಮಂತ್ರಿಗಳ ಗಮನಕ್ಕೆ ಬರದೇ ಈ ಹಗರಣ ನಡೆದಿರಲು ಸಾಧ್ಯವಿಲ್ಲ. ಕೇವಲ ಸಚಿವರ ರಾಜೀನಾಮೆ ಪಡೆದರೆ ಸಾಲದು ಎಂದು ಅವರು ನುಡಿದರು. ರಾಜ್ಯದ ಇತಿಹಾಸದಲ್ಲಿ ಇಂಥ ದೊಡ್ಡ ಹಗರಣ ನಡೆದಿರಲಿಲ್ಲ ಎಂದು ತಿಳಿಸಿದರು. ಹಗರಣ ನಡೆದು ಇಷ್ಟು ದಿನ ಆದರೂ ಸಚಿವರ ರಾಜೀನಾಮೆ ಪಡೆಯಲು ಸಿಎಂ ಹಿಂದೆ ಮುಂದೆ ನೋಡುತ್ತಿದ್ದಾರೆ. ಸಿಬಿಐ ತನಿಖೆಗೆ ಕೋರಿದ್ದು, ಅದಕ್ಕೂ ಮಣಿದಿಲ್ಲ…
ಬೆಂಗಳೂರು: ಉತ್ತರಾಖಂಡಕ್ಕೆ ಚಾರಣಕ್ಕೆ ಕರ್ನಾಟಕದಿಂದ ತೆರಳಿದ್ದಂತ ಐವರು ಚಾರಣಿಗರು ಸೇಫ್ ಆಗಿದ್ದಾರೆ. ಇನ್ನುಳಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹವನ್ನು ಡೆಹ್ರಾಡೂನ್ ಗೆ ವಿಮಾನದಲ್ಲಿ ಸಾಗಿಸಲು ಸ್ವಲ್ಪ ವಿಳಂಬವಾಗಿದೆ. ಬೆಂಗಳೂರಿಗೆ ಅಲ್ಲಿಂತ ತರಲಾಗುತ್ತದೆ ಅಂತ ಕಂದಾಯ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟ ಪಡಿಸಿದ್ದಾರೆ. ಇಂದು ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಅವಘಡದಲ್ಲಿ ಬದುಕುಳಿದಿರುವ 5 ಜನ ಚಾರಣಿಗರು ಮತ್ತು 9 ಮೃತದೇಹಗಳನ್ನು ಉತ್ತರಕಾಶಿಯಿಂದ ಡೆಹ್ರಾಡೂನ್ಗೆ ವಿಮಾನದಲ್ಲಿ ಸಾಗಿಸಲು ಸ್ವಲ್ಪ ವಿಳಂಬವಾಗಿದೆ. ದುರಂತದ ಸ್ವರೂಪದ ಕಾರಣಕ್ಕೆ ಕೆಲವು ಏಜೆನ್ಸಿಗಳಿಂದ ಕಾನೂನು ದಾಖಲೆಗಳ ಪರಿಶೀಲನಾ ಕೆಲಸ ವಿಳಂಬವಾಗುತ್ತಿದೆ ಎಂದಿದ್ದಾರೆ. ಬದುಕುಳಿದಿರುವ 5 ಜನ ಚಾರಣಿಗರು ಮತ್ತು 9 ಮೃತದೇಹಗಳು ಇಂದು ಮಧ್ಯಾಹ್ನ 2.30ಕ್ಕೆ ವಿಮಾನದ ಮೂಲಕ ಡೆಹ್ರಾಡೂನ್ ತಲುಪಲಿವೆ. ಇದಲ್ಲದೆ, ಎಲ್ಲಾ 9 ಮೃತದೇಹಗಳನ್ನು ಬೆಂಗಳೂರಿಗೆ ಸಾಗಿಸಲು ಈ ಅಲ್ಪ ಅವಧಿಯಲ್ಲಿ ಚಾರ್ಟರ್ ಫ್ಲೈಟ್ ವ್ಯವಸ್ಥೆಗೊಳಿಸುವುದು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಂದು ಎಲ್ಲಾ 9 ಮೃತದೇಹಗಳನ್ನು ರಸ್ತೆ ಮೂಲಕ ದೆಹಲಿಗೆ ಸಾಗಿಸಲು ವ್ಯವಸ್ಥೆ…