Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ 5 ಕೋಟಿ ಹಣಕ್ಕೆ ಬೇಡಿಕೆ ಇಟ್ಟು 2 ಕೋಟಿ ಪಡೆದು, ವಂಚಿಸಿದಂತ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿಯವನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬಸವೇಶ್ವನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿಯವರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಪ್ರಕರಣದ ಹಿನ್ನಲೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ಪಡೆದು ವಂಚಿಸಿದ ಆರೋಪದಡಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನನ್ವಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ವಿಜಯ್ ಲಕ್ಷ್ಮೀ ಜೋಶಿ, ಅಜಯ್ ಜೋಶಿ ಎಂಬುವರ ವಿರುದ್ಧ…
ಕೆಎನ್ಎನ್ಡಿಜಿಟಲ್ ಡೆಸ್ಕ್ : ಆಲ್ಕೋಹಾಲ್ ಪ್ರಿಯರಿಗೆ ಬಿಯರ್ ಅತ್ಯಂತ ಪ್ರಿಯವಾದ ಪಾನೀಯಗಳಲ್ಲಿ ಒಂದಾಗಿದೆ. ಆಲ್ಕೋಹಾಲ್’ನಲ್ಲಿ ಅನೇಕ ವಿಧಗಳಿವೆ. ಆದಾಗ್ಯೂ, ಅವುಗಳಲ್ಲಿ ಆಲ್ಕೋಹಾಲ್ ಶೇಕಡಾವಾರು ಹೆಚ್ಚಾಗಿದೆ. ಬಿಯರ್’ನಲ್ಲಿ ಕಡಿಮೆ. ಇದಲ್ಲದೆ, ಬಿಯರ್ ಕುಡಿಯುವುದರಿಂದ ಹೆಚ್ಚು ಹ್ಯಾಂಗೋವರ್ ಉಂಟಾಗುವುದಿಲ್ಲ. ಇದನ್ನು ಸುಲಭವಾಗಿ ಕುಡಿಯಬಹುದು. ಆದ್ದರಿಂದ ಬಿಯರ್ ಹೆಚ್ಚಾಗಿ ಮದ್ಯ ಪ್ರಿಯರು ಸೇವಿಸುತ್ತಾರೆ. ಆದಾಗ್ಯೂ, ಬಿಯರ್ ಕುಡಿಯುವುದರಿಂದ ಪ್ರಯೋಜನಗಳಿವೆ ಎಂದು ಹೇಳಲಾಗುತ್ತದೆ. ಬಿಯರ್ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ ಎಂದು ವಿಜ್ಞಾನಿಗಳು ಹೇಳುತ್ತಾರೆ. ಈಗ ಬಿಯರ್ ಕುಡಿಯುವುದರಿಂದ ಆಗುವ ಪ್ರಯೋಜನಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ. ನೀರು ಮತ್ತು ಚಹಾದ ನಂತರ ಬಿಯರ್ ವಿಶ್ವದ ಮೂರನೇ ಅತಿ ಹೆಚ್ಚು ಸೇವಿಸುವ ಪಾನೀಯವಾಗಿದೆ. ಈ ಕ್ರಮದಲ್ಲಿ, ಬಿಯರ್ ಅನೇಕ ಆಲ್ಕೋಹಾಲ್ ಪ್ರಿಯರಿಗೆ ನೆಚ್ಚಿನ ಪಾನೀಯವಾಗಿದೆ. ಬಿಯರ್’ನಲ್ಲಿ ವಿವಿಧ ರೀತಿಯ ಬಿ ಜೀವಸತ್ವಗಳಿವೆ. ಆದ್ದರಿಂದ ನಾವು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಬಿಯರ್ ಕುಡಿಯುವುದರಿಂದ ವಿಟಮಿನ್ ಇ ಬಲಗೊಳ್ಳುತ್ತದೆ. ಇದು ಚರ್ಮವನ್ನ ಯೌವನದಿಂದ ಇರಿಸುತ್ತದೆ. ಆದ್ದರಿಂದ, ನೀವು ವಯಸ್ಸಾದರೂ, ವೃದ್ಧಾಪ್ಯದ ಛಾಯೆಗಳು ಬರುವುದಿಲ್ಲ.…
ಬೆಂಗಳೂರು: ಬಿಬಿಎಂಪಿ ಸೇರಿದಂತೆ ರಾಜ್ಯಾಧ್ಯಂತ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಅಕ್ರಮಕ್ಕೆ ಬ್ರೇಕ್ ಹಾಕಲಾಗಿದೆ. ಇದೀಗ ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಅಂತಿಮ ಇ-ಖಾತಾವನ್ನು ಈ ಕೆಳಗಿನ ಹಂತಗಳನ್ನು ಅನುಸರಿಸಿ ಡೌನ್ ಮಾಡಿಕೊಳ್ಳಿ ಅಂತ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2024ರ ಅಕ್ಟೋಬರ್ ತಿಂಗಳ ಒಳಗೆ ಉಪ-ನೋಂದಣಾಧಿಕಾರಿ ಕಛೇರಿಯಲ್ಲಿ ನೀವು ತುರ್ತು ಆಸ್ತಿ ನೋಂದಣಿಯನ್ನು ಹೊಂದಿದ್ದೀರಾ ? ಹಾಗಿದ್ರೆ ಬಿಬಿಎಂಪಿ ಅಂತಿಮ ಇ-ಖಾತಾವನ್ನು ಪಡೆಯಲು ದಯವಿಟ್ಟು ಕೆಳಗಿನ ವಿಧಾನವನ್ನು ಅನುಸರಿಸಿ. 1. ಆನ್ಲೈನ್ https://BBMPeAasthi.karnataka.gov.in ನಲ್ಲಿ ವಾರ್ಡ್ವಾರು ಇ-ಖಾತಾ ಪಟ್ಟಿಯಿಂದ ನಿಮ್ಮ ಕರಡು ಇ-ಖಾತಾ ಅನ್ನು ಡೌನ್ಲೋಡ್ ಮಾಡಿ. 2. ತಮ್ಮ ಸ್ವತ್ತಿನ ಆಸ್ತಿ ತೆರಿಗೆ ರಶೀದಿಯಿಂದ ನಿಮ್ಮ ವಾರ್ಡ್ ಹೆಸರು ಮತ್ತು ಸಂಖ್ಯೆಯನ್ನು ತಿಳಿದುಕೊಳ್ಳಬಹುದು. 3. ಅಂತಿಮ ಇ-ಖಾತಾ ಪಡೆಯಲು ಕೆಳಗಿನ ಮಾಹಿತಿಯನ್ನು ಆನ್ಲೈನ್ನಲ್ಲಿ ನಮೂದಿಸಿ/ಅಪ್ಲೋಡ್ ಮಾಡಿ: (i) ತಮ್ಮ ಸ್ವತ್ತಿನ ಆಸ್ತಿತೆರಿಗೆ ಅರ್ಜಿ ಸಂಖ್ಯೆಯ 10-ಅಂಕಿಗಳು. (ii) ಮಾಲೀಕರ ಆಧಾರ್ ಆಧಾರಿತ…
BIG NEWS: ರಾಜ್ಯದ ‘641 ಗ್ರಾಮ ಪಂಚಾಯ್ತಿ’ ಖಾಲಿ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ: ನ.23 ಮತದಾನ, ನ.25ಕ್ಕೆ ಫಲಿತಾಂಶ
ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ | ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308ಎಎ ಮತ್ತು 308ಎಬಿ ರನ್ವಯ ಚುನಾವಣಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಘೋಷಿಸಿದೆ. ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಉಪ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳ ಸಂಖ್ಯಾ ವಿವರಗಳನ್ನು ಲಗತ್ತಿಸಿರುವ ಅನುಬಂಧ ದಲ್ಲಿ ತೋರಿಸಲಾಗಿದೆ. ದಿನಾಂಕ 06-11-2024ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ದಿನಾಂಕ 12-11-2024 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ದಿನಾಂಕ 13-11-2024ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ದಿನಾಂಕ 15-11-2024ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 23-11-2024ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯಕತೆ ಇದ್ದರೇ ದಿನಾಂಕ 25-11-2024ರಂದು ನಡೆಸಲು ನಿಗದಿ ಪಡಿಸಲಾಗಿದೆ. ದಿನಾಂಕ 26-11-2024ರಂದು ಬೆಳಿಗ್ಗೆ 8ರಿಂದ…
ಬೆಂಗಳೂರು: ರಾಜ್ಯ ಚುನಾವಣಾ ಆಯೋಗದಿಂದ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ 641 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ದಿನಾಂಕ ಘೋಷಿಸಲಾಗಿದೆ. ನವೆಂಬರ್.23ಕ್ಕೆ ಮತದಾನ ನಿಗದಿ ಪಡಿಸಿದ್ದರೇ, ನವೆಂಬರ್.25ರಂದು ಮತಏಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಕುರಿತಂತೆ ಇಂದು ರಾಜ್ಯ ಚುನಾವಣಾ ಆಯೋಗದಿಂದ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದಿದೆ. ದಿನಾಂಕ 06-11-2024ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ದಿನಾಂಕ 12-11-2024 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ದಿನಾಂಕ 13-11-2024ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ದಿನಾಂಕ 15-11-2024ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 23-11-2024ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯಕತೆ ಇದ್ದರೇ ದಿನಾಂಕ 25-11-2024ರಂದು ನಡೆಸಲು ನಿಗದಿ ಪಡಿಸಲಾಗಿದೆ. ದಿನಾಂಕ 26-11-2024ರಂದು ಬೆಳಿಗ್ಗೆ 8ರಿಂದ ಮತಏಣಿಕೆ ನಡೆಸಿ,…
ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರ್ವಜನಿಕರು ಮತ್ತು ಉದ್ಯಮಗಳಿಗೆ ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ ಸರಕಾರವು ಐದು ಸ್ಥಳಗಳನ್ನು ಗುರುತಿಸಿದೆ. ಆದರೆ ಇವುಗಳ ಪೈಕಿ ಯಾವುದನ್ನೂ ಆಖೈರು ಮಾಡಿಲ್ಲ. ಈ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ಸೇರಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಶುಕ್ರವಾರ ಅವರು ತಮ್ಮ ಕಚೇರಿಯಲ್ಲಿ ಕರೆದಿದ್ದ ಮಹತ್ತ್ವದ ಸಭೆಯ ನಂತರ ಈ ವಿಚಾರ ಹೇಳಿದ್ದಾರೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಭಾಗವಹಿಸಿದ್ದರು. ಸಭೆಯ ಬಳಿಕ ಮಾತನಾಡಿದ ಪಾಟೀಲ ಅವರು, `ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಈಗಾಗಲೇ ತೀರ್ಮಾನಿಸಲಾಗಿದೆ ಎನ್ನುವ ವರದಿಗಳಿಗೆ ಆಧಾರವಿಲ್ಲ. ಡಾಬಸಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ ಒಟ್ಟು ಐದು ಸ್ಥಳಗಳನ್ನು ನಾವು ಮುಕ್ತವಾಗಿ ಇಟ್ಟುಕೊಂಡಿದ್ದೇವೆ. ಇವತ್ತು ಇನ್ನೂ ಒಂದು ಸ್ಥಳದ ಬಗ್ಗೆ ಯೂ ಚರ್ಚೆ ಆಗಿದೆ. ಇವುಗಳ…
ಬೆಂಗಳೂರು; ಮಾರ್ಚ್ 2025ರಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿ ಮಾಹಿತಿಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ನಲ್ಲಿ ಅಪ್ ಲೋಡ್ ಮಾಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದ್ದು, ದಿನಾಂಕ: 21-09-2023 ರನ್ವಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ವತಿಯಿಂದ 2023-24ನೇ ಸಾಲಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಪರೀಕ್ಷೆ-1, ಪರೀಕ್ಷೆ-2 ಮತ್ತು ಪರೀಕ್ಷೆ -3 ಎಂಬ ಹೆಸರಿನಲ್ಲಿ ನಡೆಸಲಾಗುತ್ತಿದೆ. ಮಾರ್ಚ್-2025 ರಲ್ಲಿ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆ – 1 ಕ್ಕೆ ಅರ್ಹ ಅಭ್ಯರ್ಥಿಗಳ ನೋಂದಣಿ ಮಾಹಿತಿಗಳನ್ನು ಮಂಡಲಿಯ ಜಾಲತಾಣದ (https://kseab.karnataka.gov.in)) ಶಾಲಾ ಲಾಗಿನ್ನಲ್ಲಿ ಪಡೆಯಲು ಯೋಜಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ (ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ ಪುನರಾವರ್ತಿತ ಶಾಲಾ ಹಾಗೂ ಖಾಸಗಿ ಅಭ್ಯರ್ಥಿಗಳು) ಮಾರ್ಚ್-2025 ರ ಎಸ್.ಎಸ್.ಎಲ್.ಸಿ. ಪರೀಕ್ಷೆ -…
ಬೆಂಗಳೂರು: 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಕ್ರಿಯೆ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದ್ದು, ದಿನಾಂಕ:21.09.2023ರನ್ವಯ 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಪರೀಕ್ಷೆ-1, ಪರೀಕ್ಷೆ-2 ಮತ್ತು ಪರೀಕ್ಷೆ-3 ಎಂದು ಹೆಸರಿಸಿ. ಹಂತ ಹಂತವಾಗಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದಿದೆ. 2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ/ ಕಾಲೇಜುಗಳಿಂದ (ಪ್ರೌಢ ಶಾಲಾ ವಿಭಾಗ) ಹಾಜರಾಗುವ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಾಗೆಯೇ ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ಸಹ ಈ ಪರೀಕ್ಷೆಗೆ ನೋಂದಾಯಿಸಲು ಅರ್ಜಿಗಳನ್ನು ಶಾಲೆಗಳ ಮುಖಾಂತರ ಸಲ್ಲಿಸಬಹುದಾಗಿದೆ. ಸದರಿ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಬಗ್ಗೆ ಅವರು ಸ್ಪಷ್ಟನೆ ನೀಡಿದರು. ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ತಮ್ಮ ಸಂಪರ್ಕ, ಸಂಬಂಧವಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದರು. ಗೋಪಾಲ್ ಜೋಶಿ ಮಾತ್ರವಲ್ಲ ಯಾರೇ ತಮ್ಮ ಕೆಲಸ ಕಾರ್ಯಗಳಿಗೆ ನನ್ನ ಹೆಸರು ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರಲ್ಹಾದ ಜೋಶಿ ಪುನರುಚ್ಚರಿಸಿದರು. ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಾಲದ ಅಫಿಡವಿಟ್ ನಲ್ಲಿ ಅದರ ವಿವರವಿದೆ ಎಂದು ದಾಖಲೆ ಸಮೇತ ಸ್ಪಷ್ಟನೆ ನೀಡಿದರು ಪ್ರಲ್ಹಾದ…
ಕರ್ಪೂರವನ್ನು ಉರಿಸುವುದರಿಂದ ಬೂದಿ ಉಳಿಯುವುದಿಲ್ಲ. ಹೇಗೆ ಕರ್ಪೂರ ಉರಿದು ಗಾಳಿಯಲ್ಲಿ ಕರಗುತ್ತದೆಯೋ ಹಾಗೆಯೇ ನಿಮ್ಮ ಜೀವನದಲ್ಲಿ ಒಂದು ರೂಪಾಯಿ ಸಾಲವೂ ಉಳಿಯುವುದಿಲ್ಲ. ನಿಮ್ಮ ಎಲ್ಲಾ ಸಾಲಗಳು ಶೀಘ್ರದಲ್ಲೇ ಗಾಳಿಯಲ್ಲಿ ಮಾಯವಾಗುತ್ತವೆ. ಶುಕ್ರವಾರ ರಾತ್ರಿ ನಿಮ್ಮ ಮನೆಯಲ್ಲಿ ಭೈರವನ ಸ್ಮರಿಸಿ ಈ ಪೂಜೆ ಮಾಡಿದರೆ. ಎಂತಹ ಅದ್ಭುತ ಪರಿಹಾರ. ಇದು ತುಂಬಾ ಖರ್ಚಾಗುತ್ತದೆಯೇ, ಯಾವುದೇ ಪ್ರಮುಖ ಕೆಲಸ ಇರುತ್ತದೆಯೇ, ಏನೂ ಇಲ್ಲ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ…













