Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಕ್ಷಕಿರಣ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ ಅಳವಡಿಕೆಯೊಂದಿಗೆ ಹೊಸಹೊಸ ಆವಿಷ್ಕಾರಗಳು ಮೊದಲ್ಗೊಳ್ಳುತ್ತಿದ್ದು, ಹೊಸದಾಗಿ ಈ ಕ್ಷೇತ್ರಕ್ಕೆ ಬರುವವರು ಇದರ ಅರಿವು ಹೊಂದಿರಬೇಕು ಎಂದು ಹೊನ್ನಾವರ ರಾಂಜ್ಟನ್ ಪ್ಯಾರಾ ಮೆಡಿಕಲ್ ಸೈನ್ಸ್ ಸಂಸ್ಥೆಯ ಮುಖ್ಯಸ್ಥ ಸುರೇಶ್ ಟಿ. ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶೃಂಗೇರಿ ಶಂಕರಮಠದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ರೇಡಿಯಾಲಜಿ ಇಮೆಜಿಂಗ್ ಅಸೋಶಿಯೇಷನ್, ರಾಂಟ್ಜನ್ ಇನ್ಸಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಮತ್ತು ಶಿವಮೊಗ್ಗ ಜಿಲ್ಲಾ ರೆಡಿಯಾಲಜಿ ಅಸೋಶಿಯೇಷನ್ ವತಿಯಿಂದ ಏರ್ಪಡಿಸಿದ್ದ ರೇಡಿಯೇಷನ್ ಪ್ರೊಟೆಕ್ಷನ್ ಇನ್ ಡೈಯಾಗ್ನಸ್ಟಿಕ್ ರೇಡಿಯಾಲಜಿ ಕುರಿತ ವೈಜ್ಞಾನಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದ ಅವರು, ರೇಡಿಯಾಲಜಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ವೈಜ್ಞಾನಿಕ ತರಬೇತಿ ಅತ್ಯಾಗತ್ಯ. ತಂತ್ರಜ್ಞಾನ ವಿಜ್ಞಾನ ಕ್ಷೇತ್ರದ ಬೆಳವಣಿಗೆ ಅತಿವೇಗವಾಗಿ ಆಗುತ್ತಿದೆ. ಆದರೂ ಗುಣಮಟ್ಟದ ಸುಧಾರಣೆಗೆ ಇನ್ನೂ ಒತ್ತು ನೀಡಬೇಕು. ಬಿಎಸ್ಸಿ., ಎಂಎಸ್ಸಿ. ಪದವಿ ಪಡೆದವರಿಗೆ ಈ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ಇರುತ್ತದೆ. ಉದ್ಯೋಗ ಸಿಗುತ್ತದೆ ಎಂದು ಓದುವ ಜೊತೆಗೆ ಹೆಚ್ಚೆಚ್ಚು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಹೆಸರಿನಲ್ಲಿ ನಡೆಯುವ ಜಾತಿ ಸಮೀಕ್ಷೆ ಸಂವಿಧಾನ ಬಾಹಿರವಾಗಿದ್ದು, ರಾಜಕೀಯ ಪ್ರೇರಿತವಾಗಿದೆ. ಜಾತ್ಯಾತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಜಾತಿ ಜಾತಿಗಳ ನಡುವೆ ಜಾತಿಗಳನ್ನು ಒಡೆದು ಜಾತೀವಾದಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಸುಮಾರು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿ ಮಾಡಿದ್ದಾರೆ ಎಂದಿದ್ದಾರೆ. ಹಿಂದುಳಿದ ವರ್ಗಗಳ ಆಯೋಗ ಯಾವುದೇ ಅಧಿಕಾರ ಹೊಂದಿಲ್ಲ. ತಮ್ಮ ಕುರ್ಚಿ ಉಳಿಸಿಕೊಳ್ಳಲು ಎಲ್ಲ ಕಾನೂನು ಬಾಹಿರ ಕೆಲಸಗಳನ್ನು ಸಿಎಂ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಗೆ ನಾಚಿಕೆಯಾಗಬೇಕು. ರಾಹುಲ್ ಗಾಂಧಿ ಇದನ್ನೇ ಹೇಳುತ್ತಾರಾ ಎಂದು ಪ್ರಶ್ನಿಸಿದರು.
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಬೆಂಬಲಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಮಾನ್ಯ ಸಚಿವರು, ಲೋಕಸಭಾ ಸದಸ್ಯರು, ವಿಧಾನಸಭೆಯ ಸದಸ್ಯರು, ವಿಧಾನಪರಿಷತ್ತಿನ ಸದಸ್ಯರು, ಹಾಗೂ ಹಿರಿಯ ನಾಯಕರು 25-09-2025 ರ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ವಿಭಾಗವಾರು ಸಮಿತಿಗಳನ್ನು ಕೆಳಕಂಡಂತೆ ರಚಿಸಲಾಗಿರುತ್ತದೆ. ಈ ಮೂಲಕ ಜಾತಿಗಣತಿ ಸಮೀಕ್ಷೆಗೆ ಮತ್ತಷ್ಟು ಚುರುಕನ್ನು ಸರ್ಕಾರ ನೀಡಿದೆ. ಸಮಿತಿ-I : ಬೆಂಗಳೂರು ವಿಭಾಗ 1. ಬೈರತಿ ಸುರೇಶ್, ಸಚಿವರು 2. ಎಂ.ಆರ್.ಸೀತಾರಾಮ್, ಶಾಸಕರು 3. ಡಿ.ಟಿ.ಶ್ರೀನಿವಾಸ್, ಶಾಸಕರು 4. ಪುಟ್ಟರಂಗ ಶೆಟ್ಟಿ, ಶಾಸಕರು 5. ಎಂ.ಸಿ.ವೇಣುಗೋಪಾಲ್, ಮಾಜಿ ಶಾಸಕರು 6. ಪಿ.ಆರ್.ರಮೇಶ್, ಮಾಜಿ ಶಾಸಕರು ಸಮಿತಿ -II : ಕಲಬುರ್ಗಿ ವಿಭಾಗ 1. ಬೋಸರಾಜ್, ಸಚಿವರು 2.ಡಾ. ಯತೀಂದ್ರ ಸಿದ್ದರಾಮಯ್ಯ, ಶಾಸಕರು 3.ಡಾ.ಅಜಯ್ ಸಿಂಗ್, ಶಾಸಕರು 4. ರಮೇಶ್ ಬಾಬು, ಶಾಸಕರು 5. ತಿಪ್ಪಣ್ಣ ಕಮಕನೂರು, ಶಾಸಕರು 6. ಹೆಚ್.ಆರ್.ಗವಿಯಪ್ಪ, ಶಾಸಕರು ಸಮಿತಿ-III : ಮೈಸೂರು ವಿಭಾಗ 1. ಮಧು ಬಂಗಾರಪ್ಪ, ಸಚಿವರು…
ಬೆಂಗಳೂರು: ಸೆಪ್ಟೆಂಬರ್ 22ರಿಂದ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸಲಾಗುತ್ತಿದೆ. ಶಿಕ್ಷಕರ ಜಾತಿ ಗಣತಿ ಸಮೀಕ್ಷೆಗೆ ಸರ್ವರ್ ಸಮಸ್ಯೆ ಎದುರಾಗಿತ್ತು. ಇದರ ನಡುವೆ ಜಾತಿಗಣತಿ ಸಾಗಿದ್ದು, ಈವರೆಗೆ ಬರೋಬ್ಬರಿ 13 ಸಮೀಕ್ಷೆಯನ್ನು ಮಾಡಲಾಗಿದೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಸರ್ವರ್ ಸಮಸ್ಯೆ ನಡುವೆಯೂ ಹೆಣಗಾಡುತ್ತಲೇ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ಸೆಪ್ಟೆಂಬರ್.22ರಿಂದ ಆರಂಭಗೊಂಡು, ಸೆಪ್ಟೆಂಬರ್.27ರ ಇಂದು ಸಂಜೆ 5.30ರವರೆಗೆ 12,87,087 ಮನೆಗಳ ಜಾತಿಗಣತಿ ಸಮೀಕ್ಷೆಯನ್ನು ನಡೆಸಲಾಗಿದೆ. ಹೀಗಿದೆ ಜಿಲ್ಲಾವಾರ ಜಾತಿಗಣತಿ ಸಮೀಕ್ಷೆಯ ವಿವರ ಬಾಗಲಕೋಟೆ – 55,459 ಬಳ್ಳಾರಿ – 27,799 ಬೆಳಗಾವಿ -96,167 ಬೆಂಗಳೂರು ಗ್ರಾಮಾಂತರ – 22,984 ಬೆಂಗಳೂರು ಸೌತ್ – 32,610 ಬೆಂಗಳೂರು ನಗರ – 9,586 ಬೀದರ್ – 26,345 ಚಾಮರಾಜನಗರ – 24,688 ಚಿಕ್ಕಬಳ್ಳಾಪುರ – 28,845 ಚಿಕ್ಕಮಗಳೂರು -41,634 ಚಿತ್ರದುರ್ಗ -55,531 ದಕ್ಷಿಣ ಕನ್ನಡ – 24,309 ದಾವಣಗೆರೆ – 62,055 ಧಾರವಾಡ –…
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ವು ಭಾರತೋಯ ಸಾರ್ವಜನಿಕ ಸಂಪರ್ಕ ಮಂಡಳಿಯ (PRCI) ವತಿಯಿಂದ ನಡೆದ *15ನೇ ವಿಶ್ವ ಸಂವಹನ ಸಮ್ಮೇಳನ ಮತ್ತು ಎಕ್ಸಲೆನ್ಸ್ ಅವಾರ್ಡ್ಸ್ 2025 ರ ಕಾರ್ಯಕ್ರಮದಲ್ಲಿ 9 ವಿಭಾಗಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಗಳಿಸಿದೆ. ಈ ಕೆಳಗಿನ ವಿಭಾಗಗಳಲ್ಲಿ ಪ್ರಶಸ್ತಿಗಳು ಲಭಿಸಿದೆ: *ಡಿಜಿಟಲ್ ಮೀಡಿಯಾ ಇನೋವೇಶನ್ ಮತ್ತು ಹೌಸ್ ಜರ್ನಲ್ ಪ್ರಿಂಟ್ (ಪ್ರಾದೇಶಿಕ) ವಿಭಾಗದಲ್ಲಿ ಚಿನ್ನದ ಪದಕ *ಹೆಲ್ತ್ ಕೇರ್ ಕಮ್ಯುನಿಕೇಶನ್ ಫಿಲ್ಮ್ಸ್ ವಿಭಾಗದಲ್ಲಿ ಬೆಳ್ಳಿ ಪದಕ *ವಿಶಿಷ್ಟ ಮಾನವ ಸಂಪನ್ಮೂಲ (HR) ಕಾರ್ಯಕ್ರಮಕ್ಕಾಗಿ ಕಂಚಿನ ಪದಕ *ಗ್ರಾಹಕ ಸೇವಾ ಶ್ರೇಷ್ಠತೆ,ಬ್ಯಾಂಡಿಂಗ್, ವೆಬ್ಸೈಟ್ ಮತ್ತು ಮೈಕ್ರೋಸೈಟ್, ಕಾರ್ಪೊರೇಟ್ ಫಿಲ್ಮ್ಸ್, ಮಾರ್ಕೆಟಿಂಗ್ ಕ್ಯಾಂಪೇನ್ ಮತ್ತು ಆಂತರಿಕ ಕಮ್ಯುನಿಕೇಶನ್ ಕ್ಯಾಂಪೇನ್ ವಿಭಾಗಗಳಲ್ಲಿ ಪ್ರಶಸ್ತಿಗಳು ಲಭಿಸಿರುತ್ತವೆ. ಈ ಸಾಧನೆಗಳು ನಿಗಮವು ಆಧುನಿಕ ತಂತ್ರಜ್ಞಾನ, ನವೀನ ಚಟುವಟಿಕೆಗಳು ಮತ್ತು ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಕಾರ್ಯಾಚರಣೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿರುವುದಕ್ಕೆ ಸಾಕ್ಷಿಯಾಗಿದೆ. ಇಂದು ಗೋವಾದ ದ ಫರ್ನ್ ಕದಂಬ ಹೋಟೆಲ್ನಲ್ಲಿ…
ಶಿವಮೊಗ್ಗ: ಸಾಗರ ಇತಿಹಾಸ ಪ್ರಸಿದ್ದವಾದ ಕೆಳದಿ ಮಠದಲ್ಲಿ ಅ. 2ರಂದು ಇತಿಹಾಸ ಪ್ರಸಿದ್ದ ಪಚ್ಚೆಲಿಂಗು ದರ್ಶನ ಏರ್ಪಡಿಸಿದ್ದು, ಪ್ರಾತಃಕಾಲದಲ್ಲಿ ಪಚ್ಚೆಲಿಂಗಕ್ಕೆ ಅಭಿಷೇಕಾದಿ ವಿಶೇಷ ಪೂಜೆ ನಂತರ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ ಎಂದು ಕೆಳದಿ ರಾಜಗುರು ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮಿಗಳು ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬಂದಗದ್ದೆ-ಕೆಳದಿ ರಾಜಗುರು ಹಿರೇಮಠದಲ್ಲಿ ಶುಕ್ರವಾರ ವಿಜಯದಶಮಿ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದಂತ ಅವರು, 2019ರಿಂದ ಶ್ರೀಮಠದಲ್ಲಿ ಪಚ್ಚೆಲಿಂಗು ದರ್ಶನಕ್ಕೆ ಅವಕಾಶ ಕಲ್ಪಿಸುತ್ತಾ ಬರಲಾಗುತ್ತಿದೆ. ಈ ವರ್ಷ ಅ. 2ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ದರ್ಶನ ಇರುತ್ತದೆ. ಪಚ್ಚೆಲಿಂಗು ದರ್ಶನದಿಂದ ಭಕ್ತರ ಅಭಿಷ್ಟೆಗಳು ಈಡೇರುತ್ತದೆ. ಕೆಳದಿ ಅರಸರು ಶ್ರೀಮಠಕ್ಕೆ ಪಚ್ಚೆಲಿಂಗು ಉಡುಗೊರೆಯಾಗಿ ನೀಡಿ ಪ್ರತಿವರ್ಷ ವಿಜಯ ದಶಮಿಯಂದು ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡುವಂತೆ ಸಂಕಲ್ಪಿಸಿದ್ದರ ಮೇರೆಗೆ ಕಾರ್ಯಕ್ರಮ ನಡೆಯಲಿದೆ ಎಂದರು. ನವರಾತ್ರಿ ಅಂಗವಾಗಿ ಶ್ರೀಮಠದಲ್ಲಿ ಪ್ರತಿದಿನ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಅ. 1ರಂದು ಡಾ. ಗುರುಸಿದ್ದದೇವ…
ಶಿವಮೊಗ್ಗ : ಪ್ರತಿಭಾವಂತ ವಿದ್ಯಾರ್ಥಿಗಳು ಸಮಾಜದ ಆಸ್ತಿ. ಅವರು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದಾಗ ಗುರುತಿಸಿ ಗೌರವಿಸುವುದರಿಂದ ಇನ್ನೊಬ್ಬರಿಗೆ ಉತ್ತೇಜನ ಸಿಕ್ಕಂತೆ ಆಗುತ್ತದೆ ಇಂತಹ ಪ್ರಯತ್ನಗಳು ಹೆಚ್ಚಾಗಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಭಾಭವನದಲ್ಲಿ ಶನಿವಾರ ಪ್ರಾಂತ್ಯ ಆರ್ಯ ಈಡಿಗರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ, ಅಂತಿಮ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಿ ಅವರು ಮಾತನಾಡುತ್ತಿದ ಅವರು, ಪ್ರತಿಭೆ ಯಾರ ಸ್ವತ್ತು ಅಲ್ಲ. ಒಂದು ಕಾಲದಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿದ್ದ ನಮ್ಮ ಸಮಾಜದ ಮಕ್ಕಳು ಉನ್ನತ ವಿದ್ಯಾಭ್ಯಾಸ ಪಡೆದು ಉತ್ತಮ ನೌಕರಿ ಮಾಡುತ್ತಿದ್ದಾರೆ. ಪ್ರತಿಭೆ ಇದ್ದವರನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು. ಸರ್ವರೂ ಸಮುದಾಯದ ಆಭಿವೃದ್ದಿಗೆ ತಮ್ಮ ಸಹಕಾರ ನೀಡಬೇಕು ಎಂದು ತಿಳಿಸಿದರು. ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ. ರಾಮಪ್ಪ ಮಾತನಾಡಿ, ಪೋಷಕರು ಮಕ್ಕಳ ಶೈಕ್ಷಣಿಕ ಪ್ರತಿಭೆಯನ್ನು ಪ್ರೋತ್ಸಾಹಿಸಬೇಕು. ಮಕ್ಕಳಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆ…
ಶಿವಮೊಗ್ಗ : ಸೆಪ್ಟೆಂಬರ್.29ರಂದು ಸಾಗರದ ಶೃಂಗೇರಿ ಶಂಕರಮಠದಲ್ಲಿ ಮಧ್ಯಾಹ್ನ 12ಕ್ಕೆ ಸಾಧಕರಿಗೆ ಶಾರದಾ ಪ್ರಸಾದ ಪುರಸ್ಕಾರ ಪ್ರದಾನ ಮಾಡಲಾಗುತ್ತದೆ ಎಂದು ಸಾಗರದ ಶೃಂಗೇರಿ ಶಂಕರಮಠದ ಧರ್ಮದರ್ಶಿ ಅಶ್ವಿನಿಕುಮಾರ್ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ವರ್ಷ ಹೆಸರಾಂತ ಅರ್ಥಧಾರಿ ಎಂ.ಆರ್.ಲಕ್ಷ್ಮೀನಾರಾಯಣ ಅಮಚಿ ಮತ್ತು ಗಣಪತಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ್ ಮೇಸ್ತಿç ಅವರಿಗೆ ಶಾರದಾ ಪ್ರಸಾದ ಪುರಸ್ಕಾರ ನೀಡಿ ಗೌರವಿಸಲಾಗುತಿದ್ದು, ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಹೇಳಿದರು. ಶೃಂಗೇರಿ ಶಂಕರಮಠ ಕರ್ಯಾರಂಭ ಮಾಡಿ 25 ವರ್ಷ ಪೂರೈಸಿದ್ದು ಈತನಕ 50ಕ್ಕೂ ಹೆಚ್ಚು ಸಾಧಕರಿಗೆ ಶಾರದಾ ಪ್ರಸಾದ ಪುರಸ್ಕಾರ ನೀಡಿ ಗೌರವಿಸಿಕೊಂಡು ಬರಲಾಗುತ್ತಿದೆ. ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಶೃಂಗೇರಿ ಶಂಕರಮಠದ ಮಾರ್ಗದರ್ಶನದಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ನವರಾತ್ರಿ ಅಂಗವಾಗಿ ಶ್ರೀಮಠದಲ್ಲಿ ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮ, ಹೋಮಗಳು ನಡೆಯುತ್ತಿದ್ದು, ಪ್ರತಿದಿನ…
ಶಿವಮೊಗ್ಗ : ಕೆಎಂಎಫ್ ನಂದಿನಿ ಹಾಲು ಮಾರಾಟಗಾರರಿಗೆ ಸ್ಪಂದಿಸುತ್ತಿಲ್ಲ. ಹಲವು ವರ್ಷಗಳಿಂದ ಕೆ.ಎಂ.ಎಫ್. ಮೂಲಕ ಶಿಮೂಲ್ ಅಭಿವೃದ್ದಿಗೆ ಶ್ರಮಿಸುತ್ತಿರುವ ಹಾಲು ಮಾರಾಟಗಾರರನ್ನು ಭಿಕ್ಷುಕರಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ತಾಲ್ಲೂಕು ಹಾಲು ಮಾರಾಟಗಾರರ ಸಂಘದ ಅಧ್ಯಕ್ಷ ನಾಗರಾಜ್ ದೂರಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ಮೂರು ದಶಕಗಳಿಂದ ನಂದಿನಿ ಉತ್ಪನ್ನಗಳನ್ನು ಕಮೀಷನ್ ಆಧಾರದಲ್ಲಿ ಮಾರಾಟ ಮಾಡುವ ಏಜೆಂಟರ ಬಗ್ಗೆ ತೀವೃ ನಿರ್ಲಕ್ಷ್ಯ ವಹಿಸಲಾಗಿದೆ ಎಂದರು. ಹಿಂದೆ ಏಜೆಂಟರಿಂದ ಹಾಲಿನ ಹಣವನ್ನು ತೆಗೆದುಕೊಂಡು ಹೋಗಲಾಗುತಿತ್ತು. ಕೆಲವು ವರ್ಷಗಳ ಹಿಂದೆ ಅದನ್ನು ಎಚ್.ಡಿ.ಎಫ್.ಸಿ. ಬ್ಯಾಂಕ್ ಮೂಲಕ ಆನ್ಲೈನ್ನಲ್ಲಿ ಪಾವತಿ ಮಾಡಲು ತಿಳಿಸಲಾಗಿತ್ತು. ಆದರೆ ಆನ್ಲೈನ್ನಲ್ಲಿ ಪಾವತಿ ಮಾಡುವ ಏಜೆಂಟರ ಲಕ್ಷಾಂತರ ರೂಪಾಯಿ ಹಣ ಕಡಿತವಾಗುತ್ತಿದೆ. ಒಂದೆರಡು ರೂಪಾಯಿ ಕಮೀಷನ್ಗಾಗಿ ಕೆಲಸ ಮಾಡುವ ನಮಗೆ ಬ್ಯಾಂಕ್ನಿಂದ ಆನ್ಲೈನ್ ವಂಚನೆಯಾಗುತ್ತಿದೆ. ಈ ಬಗ್ಗೆ ಶಿಮುಲ್ ಅಧ್ಯಕ್ಷರು, ನಿರ್ದೇಶಕರಿಗೆ ತಿಳಿಸಿದರೆ ಸ್ಪಂದಿಸದೇ ಅವರಿವರ ಮೇಲೆ ಆರೋಪ ಹೊರಿಸಿ…
ತಮಿಳುನಾಡು:ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ನೇತೃತ್ವದಲ್ಲಿ ಬೃಹತ್ ರಾಜಕೀಯ ರ್ಯಾಲಿ ನಡೆಯಿತು. ಆದಾಗ್ಯೂ, 33 ಜನರು ಸಾವನ್ನಪ್ಪಿದಾಗ ಮತ್ತು ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಜನರು ಪ್ರಜ್ಞಾಹೀನರಾದಾಗಿದ್ದಾರೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು, ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್ಯಾಲಿಯ ಸಂದರ್ಭದಲ್ಲಿ ನಡೆದ ದುರದೃಷ್ಟಕರ ಘಟನೆ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿ ತುಂಬಲಿ ಎಂದು ಹಾರೈಸುತ್ತೇನೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. https://twitter.com/narendramodi/status/1971968033771127290






