Author: kannadanewsnow09

ಬೆಂಗಳೂರು : “ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 10 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಈ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ವಿದ್ಯುತ್ ಇಲಾಖೆಗೆ 3 ಸಾವಿರ ಕೋಟಿಯಷ್ಟು ಮೊತ್ತ ಪಾವತಿಸಬೇಕಾಗಿದೆ. ಈ ಕೆರೆಗಳ ಪೈಕಿ ಸಣ್ಣ ಕೆರೆಗಳನ್ನು ಸೊಸೈಟಿಗಳಿಗೆ ಜವಾಬ್ದಾರಿ ನೀಡುತ್ತೇವೆ. ಉಳಿದ ಕೆರೆಗಳನ್ನು ಹರಾಜು ಪ್ರಕ್ರಿಯೆ ಮೂಲಕ ಮೀನುಗಾರಿಕೆ ಮಾಡಲು ಅವಕಾಶ ನೀಡಲಾಗುವುದು. ಇದನ್ನು ಬಳಸಿಕೊಂಡು ನೀವು ಮೀನುಗಾರಿಕೆ ವೃತ್ತಿ ಮಾಡಬೇಕು” ಎಂದು ತಿಳಿಸಿದರು. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ: “ಮೀನು ಎಂದರೆ ಲಕ್ಷ್ಮಿ. ರೈತರು ಭೂಮಿಯಲ್ಲಿ ಕೃಷಿ ಮಾಡಿದರೆ, ಮೀನುಗಾರರು…

Read More

ಶಿವಮೊಗ್ಗ : ಪತ್ರಕರ್ತರು ಮತ್ತು ಪತ್ರಿಕಾ ವಿತರಕರು ಒಗ್ಗೂಡಿ ಸಾಗಬೇಕಾಗಿದೆ. ಪತ್ರಕರ್ತರು ವರದಿ ಮಾಡಿದರೇ, ಪತ್ರಿಕಾ ವಿತರಕರು ಮನೆಮನೆಗೆ ಪತ್ರಿಕೆ ತಲುಪಿಸುವ ಕೆಲಸ ಮಾಡುತ್ತಾರೆ ಎಂದು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ರಮೇಶ್ ಎನ್. ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಪತ್ರಿಕಾ ವಿತರಕರ ಸಂಘದ ವತಿಯಿಂದ ಪತ್ರಕರ್ತರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ಮಹೇಶ್ ಹೆಗಡೆ ಅವರನ್ನು ಸನ್ಮಾನಿಸಿ ಅವರು ಮಾತನಾಡಿದ ಅವರು, ಸರ್ಕಾರ ಪತ್ರಕರ್ತರಿಗೆ ಎಲ್ಲ ಸೌಲಭ್ಯ ನೀಡಿದಂತೆ ಪತ್ರಿಕಾ ವಿತರಕರಿಗೂ ಎಲ್ಲ ಸೌಲಭ್ಯ ನೀಡಬೇಕು. ಉಚಿತ ವಿಮಾ ಯೋಜನೆ, ಬಸ್ ಯೋಜನೆ ಸಹ ವಿತರಕರಿಗೆ ಸಿಗಬೇಕು. ಸರ್ಕಾರ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ್ ಹೆಗಡೆ, ವಿತರಕರ ಸಮಸ್ಯೆಗಳಿಗೆ ಪತ್ರಕರ್ತರ ಸಂಘ ಸದಾ ಸ್ಪಂದಿಸುತ್ತಾ ಬರುತ್ತಿದೆ. ಪತ್ರಕರ್ತರು ಮತ್ತು ವಿತರಕರು ಒಂದೆ ನಾಣ್ಯದ ಎರಡು ಮುಖವಿದ್ದಂತೆ. ಸರ್ಕಾರ ಇಬ್ಬರಿಗೂ ಸಮಾನ ಸೌಲಭ್ಯ ನೀಡಬೇಕು.…

Read More

ಶಿವಮೊಗ್ಗ: ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮಹೇಶ್ ಹೆಗಡೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಇಂತಹ ಮಹೇಶ್ ಹೆಗಡೆ ಅವರನ್ನು ಸಾಗರ ತಾಲ್ಲೂಕು ಪತ್ರಿಕಾ ವಿತರಕರ ಸಂಘದಿಂದ ಸ್ಮಾನಿಸಿ, ಅಭಿನಂದಿಸಲಾಯಿತು. ಈ ವೇಳೆ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ರಮೇಶ್ ಎನ್ ಮಾತನಾಡಿ ಪತ್ರಕರ್ತರು ಹಾಗೂ ವಿತರಕರು ಒಂದುಗೂಡಿ ಹೋಗುವ ಅವಶ್ಯಕತೆ ಇದೆ. ಪತ್ರಿಕೆಯನ್ನು ಮನೆಮನೆಗೆ ತಲುಪಿಸುವ ವಿತರಕರು ಪತ್ರಕರ್ತರ ವರದಿಯನ್ನು ಓದುಗರಿಗೆ ತಲುಪಿಸುತ್ತಾರೆ. ಹಾಗಾಗಿ ಪತ್ರಕರ್ತರು ಹಾಗೂ ವಿತರಕರು ಒಟ್ಟಾಗಿ ಹೋಗಬೇಕು ಎಂದರು. ಪತ್ರಕರ್ತರಿಗೆ ಎಲ್ಲಾ ಸೌಲಭ್ಯ ನೀಡುವ ಸರ್ಕಾರ ವಿತರಕರಿಗೂ ಸೌಲಭ್ಯಗಳನ್ನು ನೀಡಬೇಕು. ಉಚಿತ ವಿಮಾಯೋಜನೆ ಹಾಗೂ ಉಚಿತ ಬಸ್ ಪಾಸ್ ಯೋಜನೆ ಈ ರೀತಿಯಲ್ಲಿ ವಿತರಕರಿಗೆ ಸೌಲಭ್ಯಗಳನ್ನು ನೀಡಿ ತಾರತಮ್ಯತೆಯನ್ನು ಹೋಗಲಾಡಿಸಬೇಕು ಎಂದು ಮನವಿ ಮಾಡಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಮಹೇಶ್ ಹೆಗಡೆ, ಪತ್ರಕರ್ತರು ಹಾಗೂ ವಿತರಕರು ಒಂದು ನಾಣ್ಯದ ಎರಡು ಮುಖಗಳು ಅಷ್ಟೆ. ಇಲ್ಲಿ ಭೇದಬಾವಗಳು ಯಾವತ್ತೂ ಯಾರೂ ಮಾಡಬಾರದು. ವಿತರಕರಿಗೆ ಸೌಲಭ್ಯ ನೀಡಬೇಕು…

Read More

ಬೆಂಗಳೂರು: ನಗರದಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆ ಮಾಡಿದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಪೊಲೀಸ್ ಪೇದೆ ಸೇರಿದಂತೆ ಬಹುತೇಕ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ 7.11 ಕೋಟಿ ರೂಪಾಯಿಗಳಲ್ಲಿ 6 ಕೋಟಿಗೂ ಹೆಚ್ಚು ಹಣವನ್ನು ಜಪ್ತಿ ಮಾಡಿದ್ದಾರೆ. ಕಳೆದ ನವೆಂಬರ್.19ರಂದು ಡೈರಿ ಸರ್ಕಲ್ ಬಳಿಯಲ್ಲಿ ಎಟಿಎಂಗೆ ಹಣ ತುಂಬಲು ಕೊಂಡೊಯ್ಯುತ್ತಿದ್ದಂತ ವಾಹನ ತಡೆದು, ಆರ್ ಬಿ ಐ ಅಧಿಕಾರಿಗಳು ಎಂಬುದಾಗಿ ಹೇಳಿ 7.11 ಕೋಟಿ ದರೋಡೆ ಮಾಡಲಾಗಿತ್ತು. ಹಾಡ ಹಗಲೇ ನಡೆದಿದ್ದಂತ ಈ ಘಟನೆಯಿಂದ ರಾಜಧಾನಿ ಬೆಂಗಳೂರಿನ ಜನತೆ ಬೆಚ್ಚಿ ಬಿದ್ದಿದ್ದರು. ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಇತರೆ ತಾಂತ್ರಿಕ ಮಾಹಿತಿ ಆಧರಿಸಿ ಮೊದಲು ವಾಹನ ಪತ್ತೆ ಹಚ್ಚಿದ್ದರು. ಆ ಬಳಿಕ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆಂಧ್ರದಲ್ಲಿ ಬಂಧಿತ ಆರೋಪಿಗಳಿಂದ 5.3 ಕೋಟಿ ಹಣವನ್ನು ಪೊಲೀಸರು ವಶಕ್ಕೂ ಪಡೆದಿದ್ದರು. ಇದಲ್ಲದೇ ಚಿತ್ತೂರಿನ ಅರಣ್ಯ ಪ್ರದೇಶದಲ್ಲಿ ಚೇಸ್ ನಡೆಸಿದಂತ ಬೆಂಗಳೂರು ಪೊಲೀಸರು ಪ್ರಮುಖ ಆರೋಪಿ…

Read More

ಬೆಂಗಳೂರು; ನಗರದಲ್ಲಿ ಎಟಿಎಂಗೆ ತುಂಬೋದಕ್ಕೆ ಕೊಂಡೊಯ್ಯುತ್ತಿದ್ದಂತ 7.11 ಕೋಟಿ ದರೋಡೆ ಮಾಡಲಾಗಿತ್ತು. ಈ ದರೋಡೆಗೆ ಮಾಸ್ಟರ್ ಮೈಡ್ ಪೊಲೀಸ್ ಕಾನ್ ಸ್ಟೇಬಲ್ ಆಗಿದ್ದರು. ಇದಷ್ಟೇ ಅಲ್ಲದೇ ದರೋಡೆ ಹಿಂದಿನ ಪುಲ್ ಸೀಕ್ರೇಟ್ ಕೂಡ ಪೊಲೀಸ್ ಆಯುಕ್ತರು ರಿವೀಲ್ ಮಾಡಿದ್ದಾರೆ. ಅದೇನು ಅಂತ ಮುಂದೆ ಓದಿ. ನವೆಂಬರ್ 19 ರಂದು ಎಟಿಎಂನಲ್ಲಿ ನಗದು ಸಾಗಿಸುವ ವಾಹನದಿಂದ 7.11 ಕೋಟಿ ರೂ. ದರೋಡೆ ನಡೆದ ಅತಿದೊಡ್ಡ ಹಗಲು ಹೊತ್ತಿನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಶನಿವಾರ ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ ಮತ್ತು 5.76 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬೆಂಗಳೂರು ಪೂರ್ವದ ಗೋವಿಂದಪುರ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೆಬಲ್ ಅಣ್ಣಪ್ಪ ನಾಯಕ್, ಎಟಿಎಂನಲ್ಲಿ ನಗದು ತುಂಬುವ ವ್ಯಾನ್ ನಿರ್ವಹಿಸುತ್ತಿದ್ದ ಸಿಎಂಎಸ್ ಇನ್ಫೋ ಸಿಸ್ಟಮ್ಸ್‌ನ ಮಾಜಿ ಉದ್ಯೋಗಿ ಕ್ಸೇವಿಯರ್ ಮತ್ತು ಸಿಎಂಎಸ್‌ನ ಉದ್ಯೋಗಿ ಗೋಪಿ ಎಂದು ಗುರುತಿಸಲಾಗಿದೆ. ಆರರಿಂದ ಎಂಟು ಸದಸ್ಯರ ತಂಡ ಈ ಅಪರಾಧದಲ್ಲಿ ಭಾಗಿಯಾದವರ ಬಗ್ಗೆ…

Read More

ಬೆಂಗಳೂರು : ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ” ವಂದೇ ಮಾತರಂ ಸಂಭ್ರಮಾಚರಣೆ” ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಯಾರು ಮುಖ್ಯಮಂತ್ರಿ ಎಂದು ಸ್ಪಷ್ಟವಾಗಿ ತಿಳಿಸಲಿ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕಾದಾಟ ನಡೆಯುತ್ತಿರುವುದರಿಂದ ಸರ್ಕಾರ ಸತ್ತುಹೋಗಿದೆ. ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡಿಲ್ಲವೆಂದರೆ ಸರ್ಕಾರ ನಡೆಯುವುದಿಲ್ಲ. ಅಧಿಕಾರಿಗಳು ಕೆಲಸ ಮಾಡುವುದಿಲ್ಲ. ಆಡಳಿತಯಂತ್ರ ಕೋಮಾದಲ್ಲಿದೆ ಎಂದರು. ಸಾರ್ವಜನಿಕರು, ರೈತ ಸಮುದಾಯ, ವಿದ್ಯಾರ್ಥಿಗಳು ಎದುರಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಕಾಳಜಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಇಲ್ಲ ಎಂದರು. ಸಿದ್ದರಾಮಯ್ಯನವರನ್ನು ಉಳಿಸಲು ಒಂದು ಗ್ಯಾಂಗ್‌, ಇಳಿಸಲು ಮತ್ತೊಂದು ಗ್ಯಾಂಗ್‌ ಕೆಲಸ…

Read More

ಬೆಂಗಳೂರು; ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರದ ಬರೆದಿದ್ದಾರೆ. ಅವರು ಬರೆದ ಪತ್ರದಲ್ಲಿ ಏನಿದೆ ಅಂತ ಮುಂದಿದೆ ಓದಿ. ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ಕರ್ನಾಟಕದಲ್ಲಿ ಮೆಕ್ಕೆ ಜೋಳ ಮತ್ತು ಹೆಸರುಕಾಳು (ಮೂಂಗ್) ಬೆಳೆಯ ಬೆಲೆಗಳ ತೀವ್ರ ಕುಸಿತದ ಬಗ್ಗೆ ಗಾಢ ಆತಂಕ ಮತ್ತು ತುರ್ತು ಗಮನ ಹರಿಸುವ ಉದ್ದೇಶದಿಂದ ನಿಮಗೆ ಈ ಪತ್ರ ಬರೆಯುತ್ತಿದ್ದೇನೆ. ಇವು ಲಕ್ಷಾಂತರ ರೈತರ ಜೀವನಕ್ಕೆ ಆಧಾರವಾಗಿರುವ ಬೆಳೆಗಳಾಗಿವೆ. ಭಾರತ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗಿಂತ (MSP) ಗಣನೀಯವಾಗಿ ಕಡಿಮೆಯಾದ ಮಾರುಕಟ್ಟೆ ಬೆಲೆಗಳು ರೈತರಲ್ಲಿ ದೊಡ್ಡ ಆತಂಕವನ್ನು ಸೃಷ್ಟಿಸಿವೆ. ಈ ಖಾರಿಫ್ ಋತುವಿನಲ್ಲಿ ಕರ್ನಾಟಕದಲ್ಲಿ 17.94 ಲಕ್ಷ ಹೆಕ್ಟೇರಿಗೂ ಅಧಿಕ ಪ್ರದೇಶದಲ್ಲಿ ಮೆಕ್ಕೆ ಜೋಳ ಹಾಗೂ ಹೆಸರುಕಾಳನ್ನು 4.16 ಲಕ್ಷ ಹೆಕ್ಟೇರಿಗೂ ಹೆಚ್ಚು ಪ್ರದೇಶದಲ್ಲಿ ಬೆಳೆಯಲಾಗಿದ್ದು, ರಾಜ್ಯದಲ್ಲಿ ಸುಮಾರು 54.74 ಲಕ್ಷ ಮೆಟ್ರಿಕ್ ಟನ್‌ಗಿಂತ ಹೆಚ್ಚು ಮೆಕ್ಕೆ…

Read More

ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶ ಇದೆ. ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆ 10 ಲಕ್ಷ ಜನರ ಜೀವನ ಆಸರೆಯಾಗಿದೆ ಎಂದರು‌. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್ ಗೆ ಹೆಚ್ಚಿಸಲಾಗಿದೆ.…

Read More

ನವದೆಹಲಿ: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಪ್ರಕಟಣೆಯಲ್ಲಿ, ಭಾರತ ಸರ್ಕಾರವು ನವೆಂಬರ್ 21 ರಿಂದ ಜಾರಿಗೆ ಬರುವಂತೆ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿದೆ ಮತ್ತು ಅಸ್ತಿತ್ವದಲ್ಲಿರುವ 29 ಕಾರ್ಮಿಕ ಕಾನೂನುಗಳನ್ನು ತರ್ಕಬದ್ಧಗೊಳಿಸಿದೆ ಎಂದು ತಿಳಿಸಿದೆ. ಹೊಸ ಸಂಹಿತೆಗಳು – ವೇತನ ಸಂಹಿತೆ, 2019, ಕೈಗಾರಿಕಾ ಸಂಬಂಧ ಸಂಹಿತೆ, 2020, ಸಾಮಾಜಿಕ ಭದ್ರತೆ ಸಂಹಿತೆ, 2020, ಮತ್ತು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ, 2020. ವಿವಿಧ ವರ್ಗಗಳಲ್ಲಿ ಕಾರ್ಯಪಡೆಯಲ್ಲಿರುವ ಮಹಿಳಾ ಉದ್ಯೋಗಿಗಳಿಗೆ ವಿಶೇಷವಾಗಿ ಕೈಗೊಂಡ ಕ್ರಮಗಳನ್ನು ನವೀಕರಣಗಳು ಒಳಗೊಂಡಿವೆ. ಮಹಿಳಾ ಕಾರ್ಯಪಡೆಗೆ ಹೊಸ ಕಾರ್ಮಿಕ ಸಂಹಿತೆಗಳು ಏನೆಲ್ಲ ಪ್ರಯೋಜನ ಗೊತ್ತಾ? ಇತರ ವಿಷಯಗಳ ಜೊತೆಗೆ, ಮಹಿಳಾ ಕಾರ್ಮಿಕರಿಗೆ ಅವರ ಒಪ್ಪಿಗೆ ಮತ್ತು ಅಗತ್ಯವಿರುವ ಸುರಕ್ಷತಾ ಕ್ರಮಗಳಿಗೆ ಒಳಪಟ್ಟು ಎಲ್ಲಾ ಸಂಸ್ಥೆಗಳಲ್ಲಿ (ಭೂಗತ ಗಣಿಗಾರಿಕೆ ಮತ್ತು ಭಾರೀ ಯಂತ್ರೋಪಕರಣಗಳು ಸೇರಿದಂತೆ) ಎಲ್ಲಾ ರೀತಿಯ ಕೆಲಸಗಳಲ್ಲಿ ರಾತ್ರಿಯಲ್ಲಿ ಕೆಲಸ ಮಾಡಲು ಅನುಮತಿ ಇದೆ. ಮಹಿಳಾ ಉದ್ಯೋಗಿಗಳು ಹೆಚ್ಚಿನ ಆದಾಯವನ್ನು…

Read More

ಶಿವಮೊಗ್ಗ: ಸಾಗರದ ಕಲ್ಮನೆ ಒಂದಿಲ್ಲೊಂದು ವಿಚಾರದಲ್ಲಿ ಸದಾ ಸುದ್ದಿಯಲ್ಲಿದೆ. ಕೆಲ ವರ್ಷಗಳ ಹಿಂದೆ ಕಲ್ಮನೆ ಸಹಕಾರ ಸಂಘದ ಹಗರಣದಿಂದ ಸುದ್ದಿಯಾಗಿತ್ತು. ಆ ಬಳಿಕ ಗ್ರಾಮ ಪಂಚಾಯ್ತಿ ನರೇಗಾ ಯೋಜನೆಗೆ ಹಗರಣದಿಂದ ಸದ್ದು ಮಾಡಿತ್ತು. ಇದೀಗ ರಾಜಕೀಯ ಜಿದ್ದಿಗೆ ಗೂಡು ಅಂಗಡಿ ಧ್ವಂಸದ ಮೂಲಕ ಮತ್ತೆ ಮುನ್ನೆಲೆಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಿಂದ ಕೆಲವೇ ದೂರದಲ್ಲಿ ಕಲ್ಮನೆ ಗ್ರಾಮವಿದೆ. ಈ ಗ್ರಾಮವನ್ನು ಹಾದು ಸಿಗಂದೂರು ರಸ್ತೆ ಹೋಗುತ್ತದೆ. ಈ ರಸ್ತೆಯ ಒಂದು ಬದಿಯಲ್ಲಿ ಸುರೇಂದ್ರ ಶೆಟ್ಟಿ ಎಂಬುವರು ಗೂಡು ಅಂಗಡಿ ಇಟ್ಟುಕೊಂಡು ಅದರಲ್ಲಿ ಬಂದಂತ ಆದಾಯದಲ್ಲಿ ಜೀವನ, ಸಂಸಾರ ನಡೆಸುತ್ತಿದ್ದರು. ಅಂಗಡಿ ಅಂದಮೇಲೆ ಎಲ್ಲಾ ವರ್ಗದ ಜನರು ಬಂದು ಸೇರೋದು, ವಸ್ತು ಖರೀದಿಸೋದು ಮಾಮೂಲಿ. ಆದರೇ ಸುರೇಂದ್ರ ಶೆಟ್ಟಿ ಅಂಗಡಿಯಲ್ಲಿ ಹೆಚ್ಚು ಹೊತ್ತು ಕಳೆಯುತ್ತಿದ್ದದ್ದು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಎನ್ನಲಾಗುತ್ತಿದೆ. ಈ ಕಾರಣಕ್ಕೆ ಸುರೇಂದ್ರ ಶೆಟ್ಟಿ ಕಿರಾಣಿ ಅಂಗಡಿಯ ಮೇಲೆ ಬಿಜೆಪಿಗರ ಕಣ್ಣು ಬಿದ್ದಿದೆ ಎನ್ನಲಾಗುತ್ತಿದೆ. ಮದ್ಯ ಮಾರಾಟವೆಂದು ನೆಪದಲ್ಲಿ ಗೂಡು…

Read More