Author: kannadanewsnow09

ಶಿವಮೊಗ್ಗ: ಜೂನ್.3ರಂದು ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾರರನ್ನು ಮನವೊಲಿಸೋ ಕೆಲಸದಲ್ಲಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೊಡಗಿದ್ದಾರೆ. ಇಂದು ಸಾಗರ ನಗರದ ಜೂನಿಯರ್ ಕಾಲೇಜಿಗೆ ಭೇಟಿ ನೀಡಿದಂತ ಅವರು, ಕಾಲೇಜಿನ ಉಪನ್ಯಾಸಕರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದಂತ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಮನವಿಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವಂತ ಮತದಾರರು, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆ ಮತ ನೀಡುವಂತ ಭರವಸೆ ನೀಡಿದ್ದಾರೆ. ಇದಲ್ಲದೇ ಸಾಗರ ನಗರದಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಸೇರಿದಂತೆ ಇತರೆ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿದಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ತಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಿಕೊಂಡರು. ಶಾಸಕ…

Read More

ಬೆಂಗಳೂರು: ವಾಲ್ಮೀಕ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾನು ಸಿ.ಟಿ ರವಿ ಇಬ್ಬರೂ ಪಾಟ್ನರ್ಸ್ ಆಗಿದ್ದೇವೆ. ಸಿಎಂ, ನಾನು ಹಣ ಹಂಚಿಕೊಂಡಿದ್ದಾರೆ ಅಂತ ಹೇಳಿದ್ದಾರೆ. ಆದ್ರೇ ರವಿ ಮತ್ತು ನಾನು ಇಬ್ಬರೂ ಹಂಚಿಕೊಂಡಿದ್ದೇವೆ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನಗರದ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ರವಿ ಮತ್ತು ನಾನು ಹಣ ಹಂಚಿಕೊಂಡಿದ್ದೇವೆ ಸಿ.ಟಿ. ರವಿ ಆರೋಪದ ಬಗ್ಗೆ ಕೇಳಿದಾಗ “ಯಾರೋ ಒಬ್ಬ ರವಿ ಎನ್ನುವವನು ನನ್ನ ಮೇಲೆ ಹೇಳುತ್ತಿದ್ದಾನೆ. ನಾನು ಮತ್ತು ಅವನು ಇಬ್ಬರೂ ಪಾರ್ಟನರ್ಸ್. ಸಿಎಂ ಮತ್ತು ನಾನು ಹಣ ಹಂಚಿಕೊಂಡಿದ್ದೇವೆ ಎಂದು ಹೇಳಿದ್ದಾನಲ್ಲ. ಆದರೆ ರವಿ ಮತ್ತು ನಾನು ಇಬ್ಬರೂ ಹಂಚಿಕೊಂಡಿದ್ದೇವೆ” ಎಂದು ತಿರುಗೇಟು ನೀಡಿದರು. ಹಗರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎನ್ನುವ ಆಗ್ರಹದ ಬಗ್ಗೆ ಕೇಳಿದಾಗ “ಇಂತಿಷ್ಟು ಕೋಟಿಯ ಬ್ಯಾಂಕ್ ಅವ್ಯವಹಾರ ನೇರವಾಗಿ ಸಿಬಿಐ ತನಿಖೆಗೆ ಹೋಗುತ್ತದೆ. ಅದು ನಿಯಮ. ಇಲ್ಲಿ ಸರ್ಕಾರ…

Read More

ಬೆಂಗಳೂರು: “ಇಡೀ ದೇಶದಲ್ಲೇ ಕರ್ನಾಟಕ ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷ. ಬಿಜೆಪಿಯ ಭ್ರಷ್ಟಾಚಾರವನ್ನು ಬಯಲು ಮಾಡಲು ಅವರೇ ಕರೆಯುತ್ತಿದ್ದಾರೆ. ಈಗ ನಾವು ನಮ್ಮ ಶಕ್ತಿ ತೋರಿಸುತ್ತೇವೆ” ಎಂದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. “ನಮ್ಮ ಜಾಹೀರಾತುಗಳ ಬಗ್ಗೆ ಬಿಜೆಪಿಯವರು ಖಾಸಗಿ ದೂರು ನೀಡಿದ್ದಾರೆ. ನಾವು ಸುಮ್ಮನೆ ಜಾಹೀರಾತು ನೀಡಿಲ್ಲ. ಬಿಜೆಪಿ ನಾಯಕರ, ಸಚಿವರ ಹೇಳಿಕೆಗಳ ಆಧಾರದ ಮೇಲೆ ಹಾಗೂ ಮಾಧ್ಯಮಗಳಲ್ಲಿ ಬಂದ ವರದಿಯನ್ನು ಆಧರಿಸಿ ಹಿಂದಿನ ರಾಜ್ಯ ಬಿಜೆಪಿ ಸರಕಾರದ ಹಗರಣಗಳ ಬಗ್ಗೆ ಪತ್ರಿಕಾ ಜಾಹೀರಾತು ನೀಡಿದ್ದೆವು. ಇದನ್ನೆಲ್ಲಾ ನಾವು ಸಾಬೀತು ಮಾಡುತ್ತೇವೆ ಎಂದರು. ಕೇಂದ್ರದ ಮಾಜಿ ಸಚಿವ, ಶಾಸಕ ಯತ್ನಾಳ್ ಅವರೇ ತಮ್ಮ ಬಿಜೆಪಿ ಸರ್ಕಾರದ ಮೇಲೆ ಹಗರಣದ ಆರೋಪ ಮಾಡಿದ್ದರು. ಹಣ ನೀಡದೆ ಯಾವುದೇ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ 2,500 ಸಾವಿರ ಕೋಟಿ, ಮಂತ್ರಿ…

Read More

ಚಾಮರಾಜನಗರ: ರಾಜ್ಯದ ಪ್ರತಿಷ್ಠಿತ ದೇವಾಲಯಗಳಲ್ಲಿ ಒಂದು ಕೊಳ್ಳೇಗಾಲದ ಚಿಕ್ಕಲ್ಮೂರು ಸಿದ್ದಪ್ಪಾಜಿ ದೇವಾಲಯವಾಗಿದೆ. ಈ ದೇವಾಲಯದ ಅರ್ಚಕರು ತ್ರಿಶೂದಲ್ಲಿ ಹೊಡೆದಾಡಿಕೊಂಡ ಪರಿಣಾಮ, ಮೂವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಚಾಮರಾಜನಗರದ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ದೇವಾಲಯ ಚಿಕ್ಕಲ್ಮೂರು ಸಿದ್ದಪ್ಪಾಜಿ ದೇವಸ್ಥಾನದ ಅರ್ಚಕರ ನಡುವೆ ಗಲಾಟೆಯಾಗಿದೆ. ಗಲಾಟೆ ಸಂದರ್ಭದಲ್ಲಿ ಅರ್ಚಕರು ಪರಸ್ಪರ ತ್ರಿಶೂಲ ಹಿಡಿದು ಹೊಡೆದಾಡಿಕೊಂಡಿದ್ದಾರೆ. ಅರ್ಚಕರ ನಡುವಿನ ಹೊಡೆದಾಟದಲ್ಲಿ ಚಿಕ್ಕಲೀರಿ ದೇವಾಲಯದ ಅರ್ಚಕ ಶಂಕರಪ್ಪ, ಶಿವಕುಮಾರಸ್ವಾಮಿ ಹಾಗೂ ನಂಜುಂಡಸ್ವಾಮಿ ಎಂಬುವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಚಿಕ್ಕಲ್ಮೂರು ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಅರ್ಚಕರ ನಡುವಿನ ಗಲಾಟೆಗೆ ಪ್ರಮುಖ ಕಾರಣ, ಪೂಜೆ ವಿಚಾರಕ್ಕೆ ಎಂಬುದಾಗಿ ಹೇಳಲಾಗುತ್ತಿದೆ. ಗಲಾಟೆ ತಾರಕಕ್ಕೇರಿದಂತ ಸಂದರ್ಭದಲ್ಲಿ ಎರಡು ಗುಂಪಿನ ಅರ್ಚಕರು ಪರಸ್ಪರ ಬೆತ್ತ, ತ್ರಿಶೂಲದಲ್ಲಿ ಹೊಡೆದಾಡಿಕೊಂಡ ಪರಿಣಾಮ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/pakistan-occupied-kashmir-is-not-a-part-of-pakistan-shehbaz-govt-tells-hc/ https://kannadanewsnow.com/kannada/prajwal-revanna-pornography-video-case-jds-mla-a-manju-questioned-by-cyber-crime-police/

Read More

ಇಸ್ಲಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು 1999 ರಲ್ಲಿ ಭಾರತದೊಂದಿಗಿನ ಒಪ್ಪಂದವನ್ನು ಪಾಕಿಸ್ತಾನ ಮುರಿದಿದೆ ಎಂದು ಇತ್ತೀಚೆಗೆ ಒಪ್ಪಿಕೊಂಡಿದ್ದರು. ಈಗ ಪಾಕಿಸ್ತಾನ ಸರ್ಕಾರ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಬಗ್ಗೆ ಹೊಸ ಹೇಳಿಕೆ ನೀಡಿದೆ. ಪಿಒಕೆ ಕವಿ ಮತ್ತು ಪತ್ರಕರ್ತ ಅಹ್ಮದ್ ಫರ್ಹಾದ್ ಶಾ ಅವರ ಕಣ್ಮರೆ ಕುರಿತ ಎರಡು ವಾರಗಳ ವಿಚಾರಣೆಯ ಸಮಯದಲ್ಲಿ, ಪಾಕಿಸ್ತಾನ ಸರ್ಕಾರವು ಪಿಒಕೆ ತಮ್ಮ ಭಾಗವಲ್ಲ. ಅದು ವಿದೇಶಿ ಪ್ರದೇಶ ಎಂದು ಹೇಳಿದೆ. ನವಾಜ್ ಷರೀಫ್ ಸರ್ಕಾರದ ಈ ಹೇಳಿಕೆಯನ್ನು ಕೇಳಿ ಪಾಕಿಸ್ತಾನದ ಜನರು ಆಶ್ಚರ್ಯಚಕಿತರಾಗಿದ್ದಾರೆ. ಪಿಒಕೆ ಕವಿ ಅಹ್ಮದ್ ಫರ್ಹಾದ್ ಬಗ್ಗೆ, ಪಾಕಿಸ್ತಾನ ಸರ್ಕಾರದ ವಕೀಲರು ನ್ಯಾಯಾಲಯದಲ್ಲಿ, “ಅಹ್ಮದ್ ಫರ್ಹಾದ್ ಅವರನ್ನು ಬಂಧಿಸಲಾಗುವುದಿಲ್ಲ. ಏಕೆಂದರೆ ಪಿಒಕೆ ನಮ್ಮದಲ್ಲ ಆದರೆ ವಿದೇಶಿ ಪ್ರದೇಶ” ಎಂದು ಹೇಳಿದರು. ಆದಾಗ್ಯೂ, ಸರ್ಕಾರಿ ವಕೀಲರ ಈ ಹೇಳಿಕೆಯಿಂದ ಹೈಕೋರ್ಟ್ ಕೂಡ ಆಶ್ಚರ್ಯಚಕಿತವಾಗಿದೆ. ಪಿಒಕೆ ವಿದೇಶಿ ಭೂಪ್ರದೇಶವಾಗಿರುವಾಗ ಪಾಕಿಸ್ತಾನಿ ರೇಂಜರ್ಗಳು ಹೇಗೆ ಪ್ರವೇಶಿಸಿದರು ಎಂದು ನ್ಯಾಯಾಲಯ ಕೇಳಿದೆ. ಸರ್ಕಾರಿ…

Read More

ಹಾವೇರಿ: ಉತ್ತರ ಕರ್ನಾಟಕದಲ್ಲಿ ರೈತರು ಬಿತ್ತನೆ ಪ್ರಾರಂಭ ಮಾಡಿದ್ದಾರೆ. ಬಿತ್ತನೆ ಬೀಜ, ಗೊಬ್ಬರದ ಕೊರತೆ ಆಗಿದೆ. ಬೀಜದ ದರ ಹೆಚ್ಚಾಗಿದೆ, ಮಳೆ ಬಿದ್ದರೂ ರೈತರು ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ರಾಜ್ಯ ಸರ್ಕಾರ ಮುಂಗಾರು ಸಿದ್ದತೆಯಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಹಾವೇರಿಯಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಇದ್ದರೂ ಕೃಷಿ ಇಲಾಖೆಯ ಫಾರ್ಮ್ ಗಳು, ಕೃಷಿ ಹಾಗೂ ತೋಟಗಾರಿಕೆ ವಿವಿಗಳ ಮೂಲಕ ಬೀಜೊತ್ಪಾದನೆಗೆ ಕ್ರಮ ಕೈಗೊಳ್ಳಬೇಕಿತ್ತು. ಉತ್ಪಾದನೆ ಮಾಡದಿದ್ದರೂ ಅಗತ್ಯ ಬಿತ್ತನೆ ಬೀಜಗಳನ್ನು ಆಮದು ಮಾಡಿಕೊಳ್ಳಬಹುದಿತ್ತು, ಆ ಕೆಲಸವನ್ನೂ ಸರ್ಕಾರ ಮಾಡಿಲ್ಲ. ಹೀಗಾಗಿ ಬಿತ್ತನೆ ಬೀಜದ ದರ ಹೆಚ್ಚಾಗಿದೆ. ದರ ಹೆಚ್ಚಾಗಿದೆ ಎಂದು ರೈತರು ಬಿತ್ತನೆ ಮಾಡುವುದನ್ನು ನಿಲ್ಲಿಸಲು ಸಾಧ್ಯವಿಲ್ಲ. ಇದರಿಂದ ಆಹಾರ ಉತ್ಪಾದನೆ ಕುಂಠಿತವಾಗುತ್ತದೆ. ಇವರು ಅನ್ನಭಾಗ್ಯ ಅಂತ ಹೇಳುತ್ತಾರೆ. ಅನ್ನಕ್ಕೆ ಮೊದಲು ಬೇಕಾಗಿರುವುದು ಬಿತ್ತನೆ ಬೀಜ ಎಂದು ಹೇಳಿದರು. ನಾವು ರೈತರಿಗೆ ಬಿತ್ತನೆ ಬೀಜ ಖರೀದಿಸಲು ಭೂಸಿರಿ ಅಂತ ಯೋಜನೆ ಮೂಲಕ…

Read More

ಬೆಂಗಳೂರು: ನಿಮ್ಮ ಕನ್ನಡ ನ್ಯೂಸ್ ನೌ ನಿನ್ನೆಯಂದು ಪ್ರಯಾಣಿಕರ ಊಟದ ಹೆಸರಿನಲ್ಲಿ ಭ್ರಷ್ಟಾಚಾರ: ಶಕ್ತಿಯಿಂದ KSRTCಗೆ ಭಿಕ್ಷಾಟನೆಯ ಸ್ಥಿತಿಯೇ ಎಂದು ಸಾರಿಗೆ ಮಂತ್ರಿಗೆ ನೆಟ್ಟಿಗರ ತರಾಟೆ ಅಂತ ಸುದ್ದಿ ಪ್ರಕಟಿಸಿತ್ತು. ಈ ಬಗ್ಗೆ ಕೆ ಎಸ್ ಆರ್ ಟಿಸಿ ಸ್ಪಷ್ಟನೆ ನೀಡಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಇಂದು ಕೆ ಎಸ್ ಆರ್ ಟಿಸಿಯಿಂದ ಸ್ಪಷ್ಟನಾ ಹೇಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ನಿಗಮದ ಸಾರಿಗೆಗಳನ್ನು ತಿಂಡಿ, ಊಟೋಪಚಾರ, ಪ್ರಯಾಣಿಕರ ನೈಸರ್ಗಿಕ ಕರೆ ಮತ್ತು ಲಘು ವಿಶ್ರಾಂತಿಗಾಗಿ ಮಾರ್ಗಬದಿಯ ಫಲಹಾರ ಮಂದಿರಗಳ ಬಳಿಯಲ್ಲಿ ನಿಲುಗಡೆ ನೀಡುವ ಪದ್ಧತಿ ಕಳೆದ‌ 20 ವರ್ಷಗಳಿಂದ ಚಾಲ್ತಿಯಲ್ಲಿರುತ್ತದೆ ಎಂಬುದಾಗಿ ತಿಳಿಸಿದೆ. ಸಾರಿಗೆಗಳನ್ನು ಮಾರ್ಗಬದಿಯ ಫಲಹಾರ ಮಂದಿರಗಳ ಬಳಿಯಲ್ಲಿ ನಿಲುಗಡೆ ನೀಡುವುದಕ್ಕೂ, ಶಕ್ತಿ ಯೋಜನೆಗೂ ಯಾವುದೇ ಸಂಬಂಧವಿರುವುದಿಲ್ಲ. ನಿಗಮದ ನಿಯಮಾವಳಿ ಪ್ರಕಾರ ಮಾರ್ಗಬದಿಯ ಫಲಹಾರ ಮಂದಿರಗಳನ್ನು ಪರಿವೀಕ್ಷಣೆ ನಡೆಸಿ, ಗುರುತಿಸಲು ಹಾಗೂ ಬಸ್ಸುಗಳ ನಿಲುಗಡೆಗಾಗಿ ಕರಾರು ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದೆ. ನಿಗಮವು ರಾಜ್ಯ / ಅಂತರರಾಜ್ಯ ಮಾರ್ಗಗಳಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯ ಅವರನ್ನು ಅನರ್ಹಗೊಳಿಸಿ ಆದೇಶಿಸಿದೆ. ಇಂದು ಅರಣ್ಯ, ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ರಾಜ್ಯ ಸರ್ಕಾರದ ಅಧೀನ ಕಾರ್ಯದಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 31.05.2024 ರಲ್ಲಿ ಜಲ (ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣ) ಅಧಿನಿಯಮ, 1974ರ ಪ್ರಕರಣ 6 (1) (ಜಿ) ರಡಿ ಪುದತ್ತವಾದ ಅಧಿಕಾರ ಚಲಾಯಿಸಿ ಡಾ.ಶಾಂತ್ ಎ. ತಿಮ್ಮಯ್ಯ, ಅಧ್ಯಕ್ಷರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರನ್ನು ಮಂಡಳಿಯ ಸದಸ್ಯ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅನರ್ಹಗೊಳಿಸಿ, ತತ್ಪರಿಣಾಮವಾಗಿ ಅವರನ್ನು ಮಂಡಳಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಆದೇಶಿಸಲಾಗಿದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಜಲ (ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ, 1974ರ ಅನುಚ್ಛೇದ 4(2)ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಶ್ರೀ. ಬಿ.ಪಿ.ರವಿ, ಭಾ.ಅ.ಸೇ, ಸರ್ಕಾರದ ಪ್ರಧಾನ ಕಾರ್ಯದರ್ಶಿ (ಜೀವಿಪರಿಸ್ಥಿತಿ…

Read More

ನವದೆಹಲಿ: ಟೆಲಿವಿಷನ್ ಚಾನೆಲ್ ಗಳಲ್ಲಿ ಯಾವುದೇ ಲೋಕಸಭಾ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ. ಟಿಆರ್ ಪಿಗಾಗಿ ಊಹಾಪೋಹಗಳು ಮತ್ತು ಕೆಸರೆರಚಾಟದಲ್ಲಿ ತೊಡಗಲು ಬಯಸುವುದಿಲ್ಲ ಎಂದು ಹೇಳಿದೆ. ಮತದಾರರು ತಮ್ಮ ಮತಗಳನ್ನು ಚಲಾಯಿಸಿದ್ದಾರೆ ಮತ್ತು ಅವರ ತೀರ್ಪು ಸುರಕ್ಷಿತವಾಗಿದೆ ಎಂದು ಕಾಂಗ್ರೆಸ್ ವಕ್ತಾರ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ಪವನ್ ಖೇರಾ ಹೇಳಿದರು. ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಮೊದಲು, ಟಿಆರ್ಪಿಗಾಗಿ ಊಹಾಪೋಹಗಳು ಮತ್ತು ಕೆಸರೆರಚಾಟದಲ್ಲಿ ತೊಡಗಲು ನಮಗೆ ಯಾವುದೇ ಕಾರಣ ಕಾಣುತ್ತಿಲ್ಲ” ಎಂದು ಅವರು ಎಕ್ಸ್ನಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ. https://twitter.com/ANI/status/1796542256280994163 ಚುನಾವಣೋತ್ತರ ಸಮೀಕ್ಷೆಗಳ ಚರ್ಚೆಗಳಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾಗವಹಿಸುವುದಿಲ್ಲ. ಯಾವುದೇ ಚರ್ಚೆಯ ಉದ್ದೇಶವು ಜನರಿಗೆ ತಿಳಿಸುವುದಾಗಿರಬೇಕು. ಜೂನ್ 4 ರಿಂದ ನಾವು ಸಂತೋಷದಿಂದ ಚರ್ಚೆಗಳಲ್ಲಿ ಭಾಗವಹಿಸುತ್ತೇವೆ” ಎಂದು ಖೇರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಕ್ಷದೊಳಗಿನ ಸಮಾಲೋಚನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. https://kannadanewsnow.com/kannada/minister-ramalinga-reddy-hits-back-at-pralhad-joshi-for-saying-that-kannadigas-are-rearing-keralites-in-taxes/ https://kannadanewsnow.com/kannada/breaking-court-orders-sit-custody-of-mp-prajwal-revanna-2/

Read More

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರನ್ನು ಸಿದ್ದರಾಮಯ್ಯ ಸಾಕುತ್ತಿದ್ದಾರೆ ಎಂಬುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಏನು ಹೇಳಿದ್ರು ಅಂತ ಮುಂದೆ ಓದಿ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿರುವಂತ ಅವರು, ಕೇಂದ್ರ ಸರ್ಕಾರದಲ್ಲಿಯೇ ಇದ್ದು, ಪ್ರಧಾನ‌ ಮಂತ್ರಿ ಮೋದಿಯವರ ನೀತಿ‌ ನಿಯಮಗಳ ಬಗ್ಗೆಯೇ ಅರಿವಿಲ್ಲದೆ ಮಾತನಾಡುತ್ತಿರುವ ಪ್ರಹ್ಲಾದ್ ಜೋಷಿ ಅವರೇ, ರಾಜ್ಯದ ವಿರೋಧ ಪಕ್ಷದ ನಾಯಕರಾದ ಅಶೋಕ್,‌ಬಿ.ಜೆ.ಪಿ ಯ ರಾಜ್ಯಧ್ಯಕ್ಷಾದ ವಿಜಯೇಂದ್ರ ಅವರುಗಳೇ ನಿಜಕ್ಕೂ ನೀವುಗಳು ತಮ್ಮ ಬುದ್ಧಿವಂತಿಕೆಯನ್ನು ಅಡವಿಟ್ಟಿರುವ ಹಾಗೆ ಕಾಣಿಸುತ್ತಿರುವುದು ಸಾಬೀತಾಗಿದೆ‌. ಯಾವುದೇ ಒಂದು ವಿಷಯದ ಬಗ್ಗೆ ಸಮಗ್ರ ಮಾಹಿತಿಯನ್ನೇ ಪಡೆಯದೆ, ಟ್ವೀಟ್ ಮಾಡುತ್ತೀರೋ ನೀವುಗಳು ಜನರ ಮುಂದೆ ತಮಗೆ ಅರಿವಿಲ್ಲ ಎಂಬುದನ್ನು ಪದೇ ಪದೇ ತೋರಿಸಿಕೊಳ್ಳುವ ಖಯಾಲಿಗೆ ಬಿದ್ದಂತಿದೆ ಎಂದಿದ್ದಾರೆ. ನಾವು ಸಾರ್ವಜನಿಕರಿಗೆ ಸರಿಯಾದ ಮತ್ತು ಸತ್ಯವನ್ನು ತಿಳಿಸುವ ಬದ್ಧತೆ ಮತ್ತು‌ ಜವಾಬ್ದಾರಿಯನ್ನು ಹೊಂದಿದ್ದೇವೆ . ಆದ್ದರಿಂದ ತಮ್ಮ ಸಾವಿರ ಸುಳ್ಳಿನ ಟ್ಟೀಟ್ ಗಳಿಗೂ ಕೂಡ…

Read More