Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಂದು ವಿಧಾನಪರಿಷತ್ತಿನಲ್ಲಿ ನಿತ್ಯ ಸುಮಂಗಲಿ ಪದ ಪ್ರತಿಧ್ವನಿಸಿತು. ವಿಪಕ್ಷ ಸದಸ್ಯ ಸಿ.ಟಿ ರವಿ ಅವರ ಪದ ಬಳಕೆಗೆ ಆಡಳಿತ ಪಕ್ಷದ ಮಹಿಳಾ ಸದಸ್ಯರು ಆಕ್ಷೇಪ ಕೂಡ ವ್ಯಕ್ತಪಡಿಸಿದ್ರು. ವಿಧಾನಪರಿಷತ್ತಿನಲ್ಲಿ ಇಂದು ಬಿಜೆಪಿಯ ಸದಸ್ಯ ಸಿಟಿ ರವಿ ಅವರು ತಮ್ಮ ಭಾಷಣದ ವೇಳೆಯಲ್ಲಿ ನಿತ್ಯ ಸುಮಂಗಲಿ ಪದವನ್ನು ಬಳಸಿದ್ರು. ವಕ್ಫ್ ಬೋರ್ಡ್ ಅಕ್ರಮದ ಬಗ್ಗೆ ನಿನ್ನೆ ಆರೋಪ ಕೇಳಿ ಬಂದಿದೆ. ದಲಿತರ ಹಣ ಅಕ್ರವಾಗಿ ವರ್ಗಾವಣೆ ಮಾಡಲಾಗಿದೆ. ಆಡು ಮುಟ್ಟದ ಸೊಪ್ಪಿಲ್ಲದ ರೂಪದಲ್ಲಿ ಎಲ್ಲದ್ರಲ್ಲೂ ಲೂಟಿ ಮಾಡಿದ್ದಾರೆ. ಸತ್ಯ ಮರೆಮಾಚಲು ಕಾಂಗ್ರೆಸ್ ಪಕ್ಷದವರು ಅಡ್ಡಿಪಡಿಸುತ್ತಿದ್ದಾರೆ ಎಂದರು. ಇಂತಹ ಸಿ.ಟಿ ರವಿ ಅವರ ಮಾತಿಗೆ ಪದೇ ಪದೇ ಕಾಂಗ್ರೆಸ್ ಸದಸ್ಯರು ಅಡ್ಡಿ ಪಡಿಸುತ್ತಿದ್ದರು. ಅಲ್ಲದೇ ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಅವರು ಕೂಡ ಅಡ್ಡಿಪಡಿಸಿದರು. ಬಿಜೆಪಿ ಸರ್ಕಾರ ಹೇಗೆ ಬಂತು ಅಂತ ಹೇಳಿ ನೋಡೋಣ ಎಂಬುದಾಗಿ ಚೇಡಿಸಿದರು. ಜೊತೆಗೆ ಬಿಜೆಪಿ ಸದಸ್ಯ ವಿಶ್ವನಾಥ್ ಅವರ ಕಾಲೆಳೆದರು. ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಅವರ ಮಾತಿಗೆ ಸಿಟ್ಟಾದಂತ ಸಿ.ಟಿ…
ಬೆಂಗಳೂರು: ಕೆ ಎಸ್ ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು-ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ ಪ್ರವಾಸಿ ತಾಣಗಳಿಗೆ ಪ್ಯಾಕೇಜ್ ಟೂರ್ ಆರಂಭಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು-ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ”ಮಾರ್ಗದಲ್ಲಿ ಕರ್ನಾಟಕ ಸಾರಿಗೆ ಸಾರಿಗೆಯನ್ನು ವಾರಾಂತ್ಯದ ದಿನಗಳಲ್ಲಿ (ಶನಿವಾರ & ಭಾನುವಾರ) ಪ್ಯಾಕೇಜ್ ಟೂರನ್ನು (ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನದ/ರಾತ್ರಿ ಊಟವನ್ನು ಹೊರತುಪಡಿಸಿ) ದಿನಾಂಕ 20/07/2024 ರಿಂದ ಪ್ರಾರಂಭಿಸಿ ಈ ಕೆಳಕಂಡ ವೇಳಾಪಟ್ಟಿಯಂತೆ ಕಾರ್ಯಾಚರಣೆ ಮಾಡಲಾಗುತ್ತದೆ ಅಂತ ತಿಳಿಸಿದೆ. “ಬೆಂಗಳೂರು-ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ” ಪ್ಯಾಕೇಜ್ ಟೂರ್ ವೇಳಾಪಟ್ಟಿ ಬೆಂಗಳೂರಿನಿಂದ ಮದ್ದೂರು 0630-0830 ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿ ಮದ್ದೂರಿನಲ್ಲಿ ಉಪಹಾರದ ಸಮಯ 0830-0900 ಮದ್ದೂರಿನಿಂದ ಸೋಮನಾಥಪುರ 0900-0945 ಸೋಮನಾಥೇಶ್ವರ ದರ್ಶನ 0945-1045 ಸೋಮನಾಥಪುರದಿಂದ ತಲಕಾಡು 1045-1130 ತಲಕಾಡು ಪಂಚಲಿಂಗ ದರ್ಶನ/ಮಧ್ಯಾಹ್ನದ ಊಟ 1130-1500 ತಲಕಾಡಿನಿಂದ ಮಧ್ಯರಂಗ 1500-1545 ರಂಗನಾಥ ಸ್ವಾಮಿ ದರ್ಶನ 1545-1555 ಮಧ್ಯರಂಗದಿಂದ…
ಬೆಂಗಳೂರು: ಜೋಗ್ ಫಾಲ್ಸ್ ಗೆ ತೆರಳುವಂತ ಪ್ರವಾಸಿಗರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಕೆ ಎಸ್ ಆರ್ ಟಿಸಿಯಿಂದ ಪ್ಯಾಕೇಜ್ ಟೂರ್ ಘೋಷಣೆ ಮಾಡಲಾಗಿದೆ. ಈ ಮೂಲಕ ಜೋಗದ ಜಲಪಾತ ವೀಕ್ಷಣೆಗೆ ತೆರಳುವಂತ ಪ್ರವಾಸಿಗರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು-ಜೋಗ ಜಲಪಾತ” ವಯಾ ಶಿವಮೊಗ್ಗ, ಸಾಗರ ಮಾರ್ಗವಾಗಿ ನಾನ್ ಎಸಿ ಸ್ಲೀಪರ್ ವಾಹನದೊಂದಿಗೆ ವಾರಾಂತ್ಯದ ದಿನಗಳಲ್ಲಿ (ಶುಕ್ರವಾರ ಮತ್ತು ಶನಿವಾರ) ಪ್ಯಾಕೇಜ್ಟೂರ್ನ್ನು ದಿನಾಂಕ 19/07/2024 ರಿಂದ ಪ್ರಾರಂಭಿಸಿ ಈ ಕೆಳಕಂಡ ವೇಳಾಪಟ್ಟಿಯಂತೆ ಕಾರ್ಯಾಚರಣೆ ಮಾಡಲಾಗುತ್ತದೆ. ಬೆಂಗಳೂರು-ಜೋಗ ಜಲಪಾತ ಪ್ಯಾಕೇಜ್ ಟೂರ್ ವೇಳಾಪಟ್ಟಿ ಬೆಂಗಳೂರಿನಿಂದ ಸಾಗರ 2230-0530 ಹೋಟೆಲ್ನಲ್ಲಿ ಫ್ರೆಶ್ ಅಪ್ ಹಾಗೂ ವಿಶ್ರಾಂತಿ ಸಮಯ 0530-0700 ಉಪಹಾರ 0700-0715 ಸಾಗರದಿಂದ-ವರದಹಳ್ಳಿ 0715-0730 ವರದಹಳ್ಳಿಯಿಂದ ವರದಮೂಲ 0830-0900 ವರದಮೂಲದಿಂದ ಇಕ್ಕೇರಿ 0915-0930 ಇಕ್ಕೇರಿಯಿಂದ…
ಹಾಸನ: ಜಿಲ್ಲೆಯಲ್ಲಿ ಡೆಂಗ್ಯೂ ಆರ್ಭಟ ಮುಂದುವರೆದಿದೆ. ಇಂದು ಶಂಕಿತ ಡೆಂಗ್ಯೂಗೆ ಮತ್ತೊಂದು ಬಲಿಯಾಗಿದೆ. ಜ್ವರದಿಂದ ಬಳಲುತ್ತಿದ್ದಂತ 9 ವರ್ಷದ ಬಾಲಕ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಡಾಳು ಗ್ರಾಮದ 9 ವರ್ಷದ ಬಾಲಕ ರಾಜೇಶ್ ಎಂಬಾತ ತೀವ್ರ ಜ್ವರದಿಂದ ಬಳಲುತ್ತಿದ್ದನು. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂತಹ 9 ವರ್ಷದ ಬಾಲಕ ಸಾವನ್ನಪ್ಪಿರೋದ್ದಾರೆ. ಮಾಡಾಳುವಿನ ಗೌರಮ್ಮ ಹಾಗೂ ನಾಗರಾಜು ದಂಪತಿಗಳ ಪುತ್ರ ರಾಜೇಶ್(9) ಇಂದು ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದಾನೆ. ಈ ಮೂಲಕ ಹಾಸನದಲ್ಲಿ ಶಂಕಿತ ಡೆಂಗ್ಯೂಗೆ ಮತ್ತೊಂದು ಬಲಿಯಾದಂತೆ ಆಗಿದೆ. https://kannadanewsnow.com/kannada/note-applications-invited-for-free-classes-for-bank-exams/ https://kannadanewsnow.com/kannada/it-is-a-tragedy-that-hd-kumaraswamy-did-not-attend-all-party-meeting-and-went-to-badoota-minister-cheluvariyaswamy/
ಮಡಿಕೇರಿ : ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಲ್ಲಿ ಖಾಲಿ ಇರುವ ಕ್ಲರಿಕಲ್ ಮತ್ತು ಪೊಬೇಶನರಿ ಆಫೀಸರ್ ಹುದ್ದೆಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಖಾಲಿ ಇರುವ ಕ್ಲರಿಕಲ್ ಹುದ್ದೆಗಳ ನೇಮಕಾತಿಗೆ ಐಬಿಪಿಎಸ್ ಸಂಸ್ಥೆ ಈಗಾಗಲೇ ಅರ್ಜಿ ಆಹ್ವಾನಿಸಿದೆ. ಈ ವರ್ಷದಲ್ಲಿ ಇಲ್ಲಿಯವರೆಗೆ ಒಟ್ಟು 15,215 ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದಂತಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಖಾಲಿ ಇರುವ ಪೊಬೇಶನರಿ ಆಫೀಸರ್ ಹುದ್ದೆಗಳು, ಎಸ್ಬಿಐ, ಆರ್ಬಿಐ ಹಾಗೂ ಖಾಸಗಿ ಬ್ಯಾಂಕ್ಗಳಲ್ಲಿ ಖಾಲಿ ಇರುವ ಸಾವಿರಾರು ಕ್ಲರಿಕಲ್ ಹಾಗೂ ಪೊಬೇಶನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುವುದು ತಿಳಿದು ಬಂದಿದೆ. ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್ನಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳ ತಯಾರಿಗೆ ಜುಲೈ, 16 ರಿಂದ 18 ರವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಡೆಮೋ ಉಚಿತ ತರಗತಿಗಳನ್ನು ಆಯೋಜಿಸಲಾಗಿದ್ದು, ಆಸಕ್ತರು ಈ ಅವಕಾಶದ ಉಪಯೋಗಪಡೆದುಕೊಳ್ಳಲು ಕೂಡಲೇ ಮೊಬೈಲ್ ಸಂಖ್ಯೆ 8660217739 ಸಂಪರ್ಕಿಸಿ ಉಚಿತ ಡೆಮೋ ತರಗತಿಗಳಿಗೆ…
ಮಡಿಕೇರಿ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನವಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ “ನಮೂನೆ-ಜಿ” ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಶೇಷಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ…
ಮಡಿಕೇರಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ. ಯುವನಿಧಿ ಯೋಜನೆಯಡಿ ಸೇವಾಸಿಂಧು ಪೋರ್ಟಲ್ನಲ್ಲಿ ನೋಂದಾಯಿಸಿರುವ ಕೊಡಗು ಜಿಲ್ಲೆಗೆ ಸಂಬಂಧಿಸಿದ ಅರ್ಹ ಫಲಾನುಭವಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ಅಂಕಪತ್ರಗಳು, ಆಧಾರ್ ಕಾರ್ಡ್ ಹಾಗೂ ಇತರ ದಾಖಲಾತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ, (ರೂಂ.ನಂ-22, ಎರಡನೇ ಮಹಡಿ, ಜಿಲ್ಲಾಡಳಿತ ಭವನ ಕಟ್ಟಡ ಕೊಡಗು ಜಿಲ್ಲೆ, ಮಡಿಕೇರಿ) ಇಲ್ಲಿಗೆ ಪರಿಶೀಲನೆಗಾಗಿ ಹಾಜರಾಗಬೇಕು. ಹಾಗೆಯೇ ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲಾ ಫಲಾನುಭವಿಗಳು ಪ್ರತಿ ಮಾಹೆಯ 25 ರೊಳಗೆ ಉನ್ನತ ವ್ಯಾಸಂಗ ಮುಂದುವರೆಸದಿರುವ ಕುರಿತು ಹಾಗೂ ಯಾವುದೇ ಉದ್ಯೋಗ ಹೊಂದಿಲ್ಲದಿರುವ ಕುರಿತು ಸ್ವಯಂ ಘೋಷಣೆ ನೀಡಬೇಕಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800 599 9918 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ,…
ಬೆಂಗಳೂರು: ಇಂದಿನಿಂದ ವಿಧಾನಮಂಡಲದ ಅಧಿವೇಶನ ಆರಂಭಗೊಂಡಿದೆ. ಈ ಹಿನ್ನಲೆಯಲ್ಲಿ ವಿಪಕ್ಷಗಳಿಗೆ ತಿರುಗೇಟು ನೀಡುವ ಸಂಬಂಧ ಚರ್ಚಿಸಲು ಜುಲೈ.18ರಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರು, ವಿಧಾನಸಭೆ, ಪರಿಷತ್, ಲೋಕಸಭೆ, ರಾಜ್ಯಸಭೆಯ ಸದಸ್ಯರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಲ್ಲಮಪ್ರಭು ಪಾಟೀಲ್ ಪತ್ರ ಬರೆದಿದ್ದಾರೆ. ಅದರಲ್ಲಿ ದಿನಾಂಕ:15-07-2024ರ ಸೋಮವಾರದಿಂದ ದಿನಾಂಕ: 26-07-2024 ರ ಶುಕ್ರವಾರದವರೆಗೆ ವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ದಿನಾಂಕ:18-07-2024ರ ಗುರುವಾರ ಸಂಜೆ 6.30 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ “ಹೋಟೆಲ್ ಬ್ಯಾಡಿಸನ್ ಬ್ಲೂ (ಏಟ್ರಿಯಾ)” ಇಲ್ಲ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ಯನ್ನು ಕರೆಯಲಾಗಿದೆ ಅಂತ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಭೆಯಲ್ಲಿ ರಾಜ್ಯ ಕೆ.ಪಿ.ಸಿ.ಸಿ. ಅಧ್ಯಕ್ಷರು ಹಾಗೂ ಮಾನ್ಯ…
ಬೆಂಗಳೂರು: ಭಾರತ ತಂಡವು 2024ರ ಟಿ20 ವಿಶ್ವಕಪ್ ಗೆಲುವು ಸಾಧಿಸಿತ್ತು. ಈ ಹಿನ್ನಲೆಯಲ್ಲಿ ಟೀಂ ಇಂಡಿಯಾ ಕೋಚ್ ಆಗಿರುವಂತ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ಇಂದಿನ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಭಾರತ ತಂಡವು ಟಿ20 ವಿಶ್ವಕಪ್ ಗೆಲುವಿನ ವೇಳೆಯಲ್ಲಿ ಮುಖ್ಯ ಕೋಚ್ ಆಗಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸನ್ಮಾನಿಸುವಂತ ಮನವಿನ್ನು ಸದನದಲ್ಲಿ ಮಾಡಿದರು. ಶಾಸಕ ಸುರೇಶ್ ಕುಮಾರ್ ಅವರ ಮನವಿಗೆ ಸದನದ ಎಲ್ಲಾ ಸದಸ್ಯರು ಒಕ್ಕೊರಲಿನಿಂದ ಒಮ್ಮತದ ಒಪ್ಪಿಗೆಯನ್ನು ಸೂಚಿಸಿದರು. ಈ ಹಿನ್ನಲೆಯಲ್ಲಿ ವಿಧಾನಸಭೆಯಿಂದ ಭಾರತ ತಂಡವು ಟಿ20 ವಿಶ್ವಕಪ್ ಗೆಲುವಿಗೆ ಕಾರಣವಾದಂತ ಮುಖ್ಯ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಅಭಿನಂದನೆ ಸಲ್ಲಿಸುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ ಅಂತ ಸ್ಪೀಕರ್ ಯು.ಟಿ ಖಾದರ್ ಪ್ರಕಟಿಸಿದರು. ಅಂದಹಾಗೇ ಕಳೆದ ಜೂನ್.29 ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ಗಳ ರೋಚಕ ಗೆಲುವು ಸಾಧಿಸಿತ್ತು. ಭಾರತ ಟಿ20 ವಿಶ್ವಕಪ್…
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಾಳೆಯೂ ಮಳೆ ಮುಂದುವರೆಯುವ ಮುನ್ಸೂಚನೆಯಿದೆ. ಹೀಗಾಗಿ ಸಾಗರ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿಲ್ಲ ಅಂತ ಸಾಗರ ಡಿಡಿಪಿಐ ಹೆಚ್.ಕೆ ಪಾಂಡು ಅವರು ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ನಿಮ್ಮ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು ನಾಳೆ ಸಾಗರ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ನಾಳೆ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಅಂತ ತಿಳಿಸಿದರು. ಇನ್ನೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಡಿಡಿಪಿಐ ಅವರನ್ನು ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದ್ಯಾ ಅನ್ನೋ ಬಗ್ಗೆ ವಿಚಾರಿಸಿದಾಗ, ಮಳೆಯ ಪ್ರಮಾಣವನ್ನು ಆಧರಿಸಿ ಆಯಾ ಕಾಲೇಜುಗಳ ಪ್ರಾಂಶುಪಾಲರು ರಜೆಯನ್ನು ಘೋಷಿಸುವ ನಿರ್ಧಾರ ಕೈಗೊಳ್ಳಲು ಸೂಚಿಸಲಾಗಿದೆ. ಹೆಚ್ಚು ಮಳೆಯಾದ್ರೇ ಆಯಾ ಕಾಲೇಜುಗಳ ಪ್ರಾಂಶುಪಾಲರು…