Author: kannadanewsnow09

ಅಹ್ಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ (ಮಾರ್ಚ್ 31) ನಡೆದ ಗುಜರಾತ್ ಟೈಟಾನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಪಂದ್ಯದಲ್ಲಿ ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಇತಿಹಾಸ ನಿರ್ಮಿಸಿದ್ದಾರೆ. ಅದೇ 49 ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಶಮಿ ಅವರ ದಾಖಲೆಯನ್ನು ರಶೀದ್ ಖಾನ್ ಮುರಿದಿದ್ದಾರೆ. ಶುಬ್ಮನ್ ಗಿಲ್ ನೇತೃತ್ವದ ತಂಡದ ಋತುವಿನ ಮೂರನೇ ಪಂದ್ಯದಲ್ಲಿ ಹೆನ್ರಿಕ್ ಕ್ಲಾಸೆನ್ ಅವರ ಪ್ರಮುಖ ವಿಕೆಟ್ ಪಡೆಯುವ ಮೂಲಕ ರಶೀದ್ ತಮ್ಮ ಮಾಜಿ ತಂಡದ ವಿರುದ್ಧ ಮತ್ತೊಮ್ಮೆ ತಮ್ಮ ಕ್ಲಾಸ್ ಅನ್ನು ಸಾಬೀತುಪಡಿಸಿದರು. ಕ್ಲಾಸೆನ್ ಈ ಸಮಯದಲ್ಲಿ ವಿಶ್ವ ಕ್ರಿಕೆಟ್ನಲ್ಲಿ ಅತ್ಯಂತ ಫಾರ್ಮ್ನಲ್ಲಿರುವ ಮತ್ತು ಅಪಾಯಕಾರಿ ಟಿ 20 ಬ್ಯಾಟ್ಸ್ಮನ್ ಎಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟಿದ್ದಾರೆ ಮತ್ತು ಮೊದಲ ಎರಡು ಪಂದ್ಯಗಳಲ್ಲಿ ಎರಡು ಅರ್ಧಶತಕಗಳೊಂದಿಗೆ 2024 ರ ಐಪಿಎಲ್ ಋತುವನ್ನು ಶೈಲಿಯಲ್ಲಿ ಪ್ರಾರಂಭಿಸಿದ್ದಾರೆ. ರಶೀದ್ ಪಂದ್ಯವನ್ನು ತಿರುಗಿಸುವ ಮೊದಲು ಕ್ಲಾಸೆನ್ ಅಹಮದಾಬಾದ್ನಲ್ಲಿ ಮತ್ತೊಂದು…

Read More

ಬೆಂಗಳೂರು: ನನಗೆ ಅಂಬರೀಶ್ ಅಣ್ಣನ ಮನೆಗೆ ಭೇಟಿ ನೀಡಿವುದು ಹೊಸದೇನಲ್ಲ. ನಾನು ಈ ಹಿಂದೆ ಭೇಟಿ ನೀಡಿದಂತೆ ಅಂಬರೀಶ್ ಮನೆಗೆ ಭೇಟಿ ನೀಡಿದ್ದೇನೆ. ಅದರಲ್ಲಿ ಹೊಸದೇನಿಲ್ಲ ಅಂತ ಮಂಡ್ಯ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೇ ಅವರನ್ನು ಮನವೊಲಿಸಿದ್ದು, ಏಪ್ರಿಲ್.4ರಂದು ನಾಮಪತ್ರ ಸಲ್ಲಿಸೋದಾಗಿಯೂ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಮಂಡ್ಯ ಲೋಕಸಭಾ ಸಂಸದೆ ಸುಮಲತಾ ಅಂಬರೀಶ್ ಅವರ ಜೆಪಿ ನಗರದ ನಿವಾಸಕ್ಕೆ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ತಮಗೆ ಬೆಂಬಲಿಸುವಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸುಮಲತಾ ಅಂಬರೀಶ್ ಅವರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿತ್ತು. ಆದ್ರೇ ಸುಮಲತಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಹೆಚ್.ಡಿಕೆ ಏಪ್ರಿಲ್.4ರಂದು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದೇನೆ. ಅದಕ್ಕೂ ಮುನ್ನಾ ಏಪ್ರಿಲ್.3ರಂದು ಸುಮಲತಾ ಮಂಡ್ಯದಲ್ಲಿ ಬೆಂಬಲಿಗರು, ಹಿತೈಷಿಗಳು, ಕಾರ್ಯಕರ್ತರ ಜೊತೆಗೆ ಸಭೆ ನಡೆಸಲಿದ್ದಾರೆ…

Read More

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ನಾನು ಮಹಿಳಾ ಕೋಟಾದಿಂದ ಸಚಿವೆಯಾಗಿರುವೆ ಹೊರತು, ಯಾರಿಂದಲೂ ಕಸಿದುಕೊಂಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಯಲ್ಲಿ ಭಾನುವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಪ್ರಚಾರ ಮಾಡುವ ವೇಳೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಿದ್ದರು. ಕಾಂಗ್ರೆಸ್‌ನಲ್ಲಿ ಹಿರಿಯರಿದ್ದರೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಸಚಿವ ಸ್ಥಾನವನ್ನು ಕಸಿದುಕೊಂಡಿದ್ದಾರೆ ಎಂಬ ಸಂಸದೆ ಮಂಗಳಾ ಅಂಗಡಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಚಿವ ಸಂಪುಟ ರಚಿಸುವಾಗ ಮಹಿಳಾ ಕೋಟಾದಲ್ಲಿ ಅಂತ ಇರುತ್ತೆ. ಹಿಂದಿನಿಂದಲೂ ಈ ಸಂಪ್ರದಾಯ ನಡೆದುಕೊಂಡು ಬಂದಿದೆ. ರೂಪಾ ಶಶಿಧರ್ ಹಾಗೂ ನಾನು ಎರಡನೇ ಬಾರಿಗೆ ಆಯ್ಕೆಯಾದ ಶಾಸಕಿಯರು. ರೂಪಾ ತಂದೆ ಮುನಿಯಪ್ಪನವರು ಸಚಿವರಾದ ಕಾರಣ, ನನಗೆ ಮಹಿಳಾ ಕೋಟಾದಡಿ ಸಚಿವೆಯಾಗುವ ಅದೃಷ್ಟ ಒಲಿಯಿತು. ಆದರೆ ಮಂಗಲಾ ಅಂಗಡಿಗೆ ಇಂಥ ಸೂಕ್ಷ್ಮವಾದ ವಿಚಾರಗಳು ತಿಳಿದಿಲ್ಲ. ಏಕೆಂದರೆ ಅವರು ತುಂಬಾ ಮುಗ್ದರು, ಯಾರೋ…

Read More

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಸೇರಿದಂತೆ ಐದು ಬೇಡಿಕೆಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮುಂದಿಟ್ಟಿದ್ದಾರೆ. ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಐಎನ್ ಡಿಐಎ ವಿರೋಧ ಬಣ ಆಯೋಜಿಸಿದ್ದ ‘ಲೋಕತಂತ್ರ ಬಚಾವೋ (ಪ್ರಜಾಪ್ರಭುತ್ವ ಉಳಿಸಿ)’ ರ್ಯಾಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತಕ್ಷಣ ಬಿಡುಗಡೆ ಮಾಡುವುದು ಮತ್ತು ಚುನಾವಣಾ ಬಾಂಡ್ ಗಳಿಂದ ಬಿಜೆಪಿ ಪಡೆದ ಹಣದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುವುದು ಸೇರಿದಂತೆ ಐದು ಬೇಡಿಕೆಗಳನ್ನು ಮುಂದಿಟ್ಟರು. ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರತಿಪಕ್ಷಗಳ ಐದು ಬೇಡಿಕೆಗಳನ್ನು ವಿವರಿಸಿದರು: 1. ಭಾರತದ ಚುನಾವಣಾ ಆಯೋಗವು ಲೋಕಸಭಾ ಚುನಾವಣೆಯಲ್ಲಿ ಸಮತೋಲನವನ್ನು ಖಚಿತಪಡಿಸಿಕೊಳ್ಳಬೇಕು. 2. ಚುನಾವಣೆಗಳನ್ನು ತಿರುಚುವ ಉದ್ದೇಶದಿಂದ ಪ್ರತಿಪಕ್ಷಗಳ ವಿರುದ್ಧ ಆದಾಯ…

Read More

ಬೆಂಗಳೂರು: ಜೆಪಿ ನಗರದಲ್ಲಿರುವಂತ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ಇಂದಿನ ಸುಮಲತಾ-ಹೆಚ್ ಡಿಕೆ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ನಿನ್ನೆಯಷ್ಟೇ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಆಗಮಿಸಿದಂತ ಬೆಂಬಲಿಗರೊಂದಿಗೆ ಸಭೆ ನಡೆಸಿ, ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚೆ ನಡೆಸಿದ್ದರು. ಅಂತಿಮವಾಗಿ ಏಪ್ರಿಲ್.3ರಂದು ಮಂಡ್ಯದಲ್ಲಿ ಸಭೆ ನಡೆಸಿ, ತನ್ನ ಮುಂದಿನ ನಿರ್ಧಾರ ಪ್ರಕಟಿಸೋದಾಗಿ ಘೋಷಿಸಿದ್ದರು. ಈ ಬೆನ್ನಲ್ಲೇ ಇಂದು ಬೆಂಗಳೂರಿನ ಜೆಪಿ ನಗರದಲ್ಲಿರುವಂತ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ಮಂಡ್ಯ ಕ್ಷೇತ್ರದ ಜೆಡಿಎಸ್-ಬಿಜೆಪಿ ಬೆಂಬಲಿತ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಹಾಗೂ ಹೆಚ್.ಡಿ ಕುಮಾರಸ್ವಾಮಿ ಭೇಟಿ, ತೀವ್ರ ಕುತೂಹಲ ಕೆರಳಿಸಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಹೆಚ್.ಡಿಕೆ ಮನವಿ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/ed-cbi-tax-department-are-all-working-as-pms-slaves-cm-chandru/ https://kannadanewsnow.com/kannada/congress-had-earlier-declared-tandas-as-revenue-villages-priyank-kharge/

Read More

ಬೆಂಗಳೂರು: ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು. ಆಮ್‌ ಆದ್ಮಿ ಪಾರ್ಟಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಅಕ್ರಮವಾಗಿ ಬಂಧಿಸಿರುವುದನ್ನು ವಿರೋಧಿಸಿ ನಗರದ ಸ್ವತಂತ್ರ ಉದ್ಯಾನವನದಲ್ಲಿ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟವು ಬೃಹತ್‌ ಶಾಂತಿಯುತ ಪ್ರತಿಭಟನೆಯನ್ನು ನಡೆಸಿತು. ಈ ಸಂದರ್ಭ ಮುಖ್ಯಮಂತ್ರಿ ಚಂದ್ರು ಅವರು ಮಾತನಾಡುತ್ತ, ಕಳೆದ 10 ವರ್ಷಗಳಲ್ಲಿ ನಾವು ನೋಡಿದ್ದು ಪ್ರಜಾಪ್ರಭುತ್ವದ ಕಗ್ಗೋಲೆ, ವಿವಿಧತೆಯಲ್ಲಿ ಏಕತೆಯಿಂದಿರುವ ಭಾರತದ ನಾಶ, ಜನತಂತ್ರ ವ್ಯವಸ್ಥೆಯ ಸರ್ವನಾಶ, ಸಂವಿಧಾನ ಬದಲಿಸುವ ಪ್ರಯತ್ನ, ಪಾರದರ್ಶಕತೆ ಇಲ್ಲದ ಆಡಳಿತ, ಕೋಮುಗಲಭೆಗಳಾಗಿವೆ ಎಂದರು. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಮೂಲಕ ಕಡಿವಾಣ ಹಾಕುತ್ತಿದ್ದಾರೆ, ದೆಹಲಿಯಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಮೂಲಕ ರಾಜ್ಯದ ಆಡಳಿತವನ್ನು ಹತೋಟಿಯಲ್ಲಿಡಲು ಯತ್ನಿಸುತ್ತಿದ್ದಾರೆ. ಜೈಲಿನಲ್ಲಿರಬೇಕಾದ…

Read More

ನವದೆಹಲಿ: ಲೋಕಸಭಾ ಚುನಾವಣೆಗೆ ಮುನ್ನಲೇ ಬಿಜೆಪಿಯಿಂದ ಮ್ಯಾಚ್ ಫಿಕ್ಸಿಂಗ್ ಮಾಡಲಾಗಿದೆ. ಚುನಾವಣೆಯಾಗದೇ 400 ಸ್ಥಾನ ಗೆಲ್ತೀವಿ ಅಂತ ಹೇಳುತ್ತಿದ್ದಾರೆ ಎಂಬುದಾಗಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ ನಡೆಸಿದರು. ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವಂತ ಇಂಡಿಯಾ ಮೈತ್ರಿಕೂಟದ ಪ್ರತಿಭಟನಾ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಚುನಾವಣೆಗೂ ಮುನ್ನವೇ ಬಿಜೆಪಿಯಿಂದ ಮ್ಯಾಚ್ ಫಿಕ್ಸಿಂಗ್ ಆಗಿದೆ. ಬಿಜೆಪಿಯವರು 400 ಸ್ಥಾನ ಗೆಲ್ಲೋದಾಗಿ ಹೇಳ್ತಿದ್ದಾರೆ. ಚುನಾವಣೆಗೆ ಮೊದಲೇ 400 ಸ್ಥಾನ ಎನ್ನುತ್ತಿದ್ದಾರೆ. ಅದು ಹೇಗೆ ಸಾಧ್ಯ? ಮ್ಯಾಚ್ ಫಿಕ್ಸಿಂಗ್ ಅಲ್ಲವೇ ಎಂಬುದಾಗಿ ಕಿಡಿಕಾರಿದರು. https://kannadanewsnow.com/kannada/jnvst-2024-result-declared-how-to-check-class-6-9-results/ https://kannadanewsnow.com/kannada/man-killed-for-celebrating-rohit-sharmas-dismissal/

Read More

ಕೊಲ್ಹಾಪುರ: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಅಭಿಮಾನಿ ಮತ್ತು ಮುಂಬೈ ಇಂಡಿಯನ್ಸ್ನ ಇಬ್ಬರು ಬೆಂಬಲಿಗರ ನಡುವೆ ನಡೆದ ಕ್ರಿಕೆಟ್ ಚರ್ಚೆ ದುರಂತಕ್ಕೆ ತಿರುಗಿದೆ. ರೋಹಿತ್ ಶರ್ಮಾ ಔಟ್ ಆದಾಗ ಸಂಭ್ರಮಿಸಿದಂತ ಅಭಿಮಾನಿಯನ್ನು ಭೀಕರವಾಗಿ ಕೊಲೆ ಮಾಡಿರುವಂತ ಘಟನೆ ನಡೆದಿದೆ. ಎಬಿಪಿ ಮಜಾ ವರದಿಯ ಪ್ರಕಾರ, ಬುಧವಾರ (ಮಾರ್ಚ್ 27) ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ವಿರುದ್ಧದ ಐಪಿಎಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಔಟಾದ ನಂತರ ಮುಂಬೈ ಇಂಡಿಯನ್ಸ್ (ಎಂಐ) ಗೆಲ್ಲುವ ಸಾಧ್ಯತೆಗಳ ಬಗ್ಗೆ ಹಿರಿಯ ಸಿಎಸ್ಕೆ ಅಭಿಮಾನಿ ಕೇಳಿದಾಗ ವಾಗ್ವಾದ ನಡೆದಿದೆ. ಹಿರಿಯ ಸಿಎಸ್ಕೆ ಅಭಿಮಾನಿಯ ವಿಚಾರಣೆಯು ಎಂಐ ಬೆಂಬಲಿಗರನ್ನು ಕೆರಳಿಸಿತು. ಇದು ಮರದ ಕೋಲುಗಳಿಂದ ಹಿಂಸಾತ್ಮಕ ಹಲ್ಲೆಗೆ ಕಾರಣವಾಯಿತು. ಇದರಿಂದ ಮಾರಣಾಂತಿಕ ಗಾಯಗಳನ್ನು ಉಂಟುಮಾಡಿತು. ದುರದೃಷ್ಟವಶಾತ್, ಆಸ್ಪತ್ರೆಗೆ ದಾಖಲಾದರೂ, ವಯಸ್ಸಾದ ಅಭಿಮಾನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಕೊಲ್ಹಾಪುರದ ಕರ್ವೀರ್ ಪೊಲೀಸರು ಹನುಮಂತವಾಡಿ ನಿವಾಸಿಗಳಾದ ಬಲ್ವಂತ್ ಮಹಾದೇವ್ ಝಂಜಗೆ (50) ಮತ್ತು ಸಾಗರ್ ಸದಾಶಿವ್ ಝಂಜಗೆ (35) ಅವರನ್ನು ಬಂಧಿಸಿದ್ದಾರೆ. ಬಂಡೋಪಂತ್ ಬಾಪ್ಸೊ…

Read More

ನವದೆಹಲಿ: ನವೋದಯ ವಿದ್ಯಾಲಯ ಸಮಿತಿಯು 6 ಮತ್ತು 9 ನೇ ತರಗತಿಯ ಜೆಎನ್ವಿಎಸ್ಟಿ 2024 ರ ಫಲಿತಾಂಶವನ್ನು ಪ್ರಕಟಿಸಿದೆ. ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು navodaya.gov.in ಎನ್ವಿಎಸ್ನ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶಗಳನ್ನು ಪರಿಶೀಲಿಸಬಹುದು. ಫಲಿತಾಂಶಗಳನ್ನು ಪರಿಶೀಲಿಸಲು, 6 ಅಥವಾ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ರೋಲ್ ಸಂಖ್ಯೆ ಮತ್ತು ಹುಟ್ಟಿದ ದಿನಾಂಕದ ಅಗತ್ಯವಿದೆ. ಕೆಳಗೆ ನೀಡಲಾದ ಹಂತಗಳು ವಿದ್ಯಾರ್ಥಿಗಳಿಗೆ ತಮ್ಮ 6 ನೇ ತರಗತಿ ಅಥವಾ 9 ನೇ ತರಗತಿಯ ಫಲಿತಾಂಶಗಳನ್ನು ಸುಲಭವಾಗಿ ಪರಿಶೀಲಿಸಬಹುದಾಗಿದೆ. ಜೆಎನ್ವಿಎಸ್ಟಿ 2024 ಫಲಿತಾಂಶ ಪ್ರಕಟ: 6, 9ನೇ ತರಗತಿ ಫಲಿತಾಂಶ ಚೆಕ್ ಮಾಡುವುದು ಹೇಗೆ? navodaya.gov.in ರಂದು ಎನ್ ವಿಎಸ್ ನ ಅಧಿಕೃತ ಸೈಟ್ ಗೆ ಭೇಟಿ ನೀಡಿ. ಮುಖಪುಟದಲ್ಲಿ ಲಭ್ಯವಿರುವ ಜೆಎನ್ವಿಎಸ್ಟಿ ಕ್ಲಾಸ್ 6, ಕ್ಲಾಸ್ 9 ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ. ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ. ಪಟ್ಟಿಯನ್ನು ಪರದೆಯ…

Read More

ಬೆಂಗಳೂರು: `ಬರಗಾಲ ಮತ್ತು ಬೇಸಿಗೆ ಎರಡೂ ಸೇರಿಕೊಂಡು ನಮ್ಮ ದೇಶವೂ ಸೇರಿದಂತೆ ಜಗತ್ತಿನ ಎಲ್ಲೆಡೆಯೂ ನೀರಿನ ಕೊರತೆ ಉಂಟಾಗಿರುವುದು ನಿಸರ್ಗ ಸಹಜ ವಿದ್ಯಮಾನದ ಪರಿಣಾಮವಾಗಿದೆ. ಇದಕ್ಕೆ ಕೇರಳವೂ ಹೊರತಲ್ಲ. ಇಂತಹ ಸಂದರ್ಭದಲ್ಲಿ ಅಲ್ಲಿನ ಕೈಗಾರಿಕಾ ಸಚಿವರು ಬೆಂಗಳೂರಿನಲ್ಲಿ ನೀರಿಲ್ಲವೆಂದು ತಮ್ಮ ರಾಜ್ಯಕ್ಕೆ ಬರುವಂತೆ ಇಲ್ಲಿನ ಐ.ಟಿ. ಕಂಪನಿಗಳಿಗೆ ಆಹ್ವಾನ ನೀಡುತ್ತಿರುವುದು ಒಕ್ಕೂಟ ವ್ಯವಸ್ಥೆಯ ತತ್ತ್ವಕ್ಕೆ ವಿರುದ್ಧವಾದುದು. ಅವರ ಈ ನಡವಳಿಕೆ ಆರೋಗ್ಯಕರವಲ್ಲ’ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಭಾನುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, `ಕೇರಳದ ಕೈಗಾರಿಕಾ ಸಚಿವ ಪಿ.ರಾಜೀವ್ ಅವರು ನೀರಿನ ಕೊರತೆಯ ಹಿನ್ನೆಲೆಯಲ್ಲಿ ಬೆಂಗಳೂರನ್ನು ಬಿಟ್ಟು ತಮ್ಮ ರಾಜ್ಯಕ್ಕೆ ಬಂದು ನೆಲೆಯೂರುವಂತೆ ಐಟಿ ಕಂಪನಿಗಳಿಗೆ ಆಹ್ವಾನಿಸಿರುವ ಸಂಗತಿಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಇದು ಒಂದು ರೀತಿ ಕುಚೋದ್ಯದ ನಡೆ ಎಂದು ಟೀಕಿಸಿದ್ದಾರೆ. ‘ನಾವೆಲ್ಲರೂ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಅಂದಮೇಲೆ, ಪರಸ್ಪರ ಕೊಡು-ಕೊಳ್ಳುವಿಕೆ ಇರಬೇಕೇ ವಿನಾ ಪರಿಸ್ಥಿತಿಯ ದುರ್ಲಾಭ…

Read More