Author: kannadanewsnow09

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಇದೀಗ ವಿವಾಧ ಗೂಡಾಗಿ ಪರಿಣಮಿಸಿದೆ. ಲೋಕಸಭಾ ಚುನಾವಣಾ ಹೊತ್ತಲ್ಲಿ ವಿವಿ ಕೈಗೊಂಡ ನಿರ್ಧಾರದಿಂದಾಗಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮುಜುಗರದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಕರ್ನಾಟಕ ರಾಜ್ಯ ಕಾನೂನು ವಿವಿ ಈ ಬಾರಿ ‘ಈಸ್ಟರ್’ ದಿನದಂದು ಪರೀಕ್ಷೆಯನ್ನು ನಿಗದಿಗೊಳಿಸಿದೆ. ಗುಡ್‌ಫ್ರೈಡೇ ನಂತರದ ಭಾನುವಾರ ನಡೆಯುವ ‘ಈಸ್ಟರ್’ ಇಡೀ ಜಗತ್ತಿಗೆ ಶ್ರದ್ಧಾಭಕ್ತಿಯ ಆಚರಣೆ. ಆದರೆ KSLU ನಡೆಯಿಂದಾಗಿ ಕ್ರೈಸ್ತ ಸಮುದಾಯವು ಸಿದ್ದರಾಮಯ್ಯ ಸರ್ಕಾರದ ವಿರುದ್ದ ತಿರುಗಿ ಬೀಳುವಂತಾಗಿದೆ. ಪರೀಕ್ಷೆ ಮುಂದೂಡುವ ಬದಲು ಹಿಂದೂಡಿದ ವಿವಿ..! ಏಪ್ರಿಲ್ 2ರಂದು ನಿಗದಿಯಾಗಿದ್ದ ಕಾನೂನು ವಿವಿ ಪರೀಕ್ಷೆಯನ್ನು ಪರೀಕ್ಷೆಯನ್ನು ಈಸ್ಟರ್ ಆಚರಣೆಯ ದಿನದಂದು ಪೂರ್ವನಿಗದಿ ಮಾಡಿದೆ. ಅದೂ ಕೂಡಾ ಭಾನುವಾರದ ರಜೆಯ ದಿನದಂದೇ ಈಸ್ಟರ್ ಇರುವುದನ್ನು ತಿಳಿದಿದ್ದರೂ ಅದೇ ದಿನ ಪರೀಕ್ಷೆಯನ್ನು ನಿಗದಿ ಮಾಡುವ ಮಾಡುವ ವಿವಿಯು ವಿವಾದದ ನಡೆ ಅನುಸರಿಸಿದೆ. ಈ ಬಗ್ಗೆ ವಿವಿ ಕುಲಪತಿ ಹಾಗೂ ಕುಲಸಚಿವರ ಕಚೇರಿಗೆ ಮನವರಿಕೆ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಕ್ರೈಸ್ತ ಸಮುದಾಯಕ್ಕೆ ಸೇರಿದ…

Read More

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಯ ಹಿನ್ನಲೆಯಲ್ಲಿ ಬೆಂಗಳೂರಿನ ಮೈಕೋ ಲೇಔಟ್ ನಿಂದ ಆನೆಪಾಳ್ಯದವರೆಗೆ ಉತ್ತರ ದಿಕ್ಕಿನ ಮಾರ್ಗವನ್ನು ಒಂದು ವರ್ಷ ಬಂದ್ ಮಾಡಲಾಗಿದೆ.  ಈ ಕುರಿತಂತೆ ಬಿಎಂಆರ್ ಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರುವುದೇನೆಂದರೆ ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಕಾಮಗಾರಿಯ ನಿರ್ಮಾಣಕ್ಕೆ ಅನುಕೂಲವಾಗುವಂತೆ, ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಉತ್ತರ ದಿಕ್ಕಿನ ಪಥವನ್ನು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರವನ್ನು ದಿನಾಂಕ 01.04.2024 ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುವುದು ಎಂದು ತಿಳಿಸಿದೆ. ಈ ಸಂಬಂಧ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ಸರ್ಕಲ್ ಕಡೆಯಿಂದ ಚಲಿಸುವ ವಾಹನಗಳು ಆನೆಪಾಳ್ಯ ಜಂಕ್ಷನ್ ಕಡೆಗೆ ಚಲಿಸಬೇಕಾದ ವಾಹನಗಳು ಮೈಕೋ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ ಭೋಷ್ ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್ ತಲುಪಿ ಎಡಕ್ಕೆ ತಿರುಗಿ ಚಲಿಸಬೇಕು. ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೆ ವ್ಯತ್ಯಯವಿರುವುದಿಲ್ಲ. ಡೈರಿ ಸರ್ಕಲ್‌ನಿಂದ…

Read More

ನವದೆಹಲಿ. ಲೋಕಸಭೆಯ 514 ಹಾಲಿ ಸಂಸದರ ಪೈಕಿ 225 (ಶೇ.44) ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಘೋಷಿಸಿದ್ದಾರೆ. ಸಂಸದರು ನೀಡಿದ ಅಫಿಡವಿಟ್ಗಳ ವಿಶ್ಲೇಷಣೆಯ ಆಧಾರದ ಮೇಲೆ ಎಡಿಆರ್ (ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್) ಈ ಮಾಹಿತಿಯನ್ನು ನೀಡಿದೆ. ದೇಶದ ಶೇ.5ರಷ್ಟು ಸಂಸದರು ಶತಕೋಟ್ಯಾಧಿಪತಿಗಳಾಗಿದ್ದಾರೆ. ಅವರ ಘೋಷಿತ ಆಸ್ತಿ 100 ಕೋಟಿ ರೂ.ಗಿಂತ ಹೆಚ್ಚಾಗಿದೆ. ಎಡಿಆರ್ ವರದಿಯ ಪ್ರಕಾರ, ಹಾಲಿ ಸಂಸದರ ಅಫಿಡವಿಟ್ಗಳನ್ನು ಪರಿಶೀಲಿಸಿದಾಗ ಶೇಕಡಾ 29 ರಷ್ಟು ಸಂಸದರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇವುಗಳಲ್ಲಿ ಕೊಲೆ, ಕೊಲೆ ಯತ್ನ, ಕೋಮು ಸಾಮರಸ್ಯವನ್ನು ಉತ್ತೇಜಿಸುವುದು, ಅಪಹರಣ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿವೆ. ಐವರು ಬಿಜೆಪಿ ಸಂಸದರ ವಿರುದ್ಧ ಕೊಲೆ ಪ್ರಕರಣ ದಾಖಲು ಹಾಲಿ ಸಂಸದರ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಅವರಲ್ಲಿ 9 ಮಂದಿ ಕೊಲೆ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಈ ಪೈಕಿ ಐವರು ಸಂಸದರು ಬಿಜೆಪಿಗೆ ಸೇರಿದವರಾಗಿದ್ದಾರೆ. 28 ಸಂಸದರು ತಮ್ಮ ವಿರುದ್ಧ…

Read More

ಬೆಂಗಳೂರು : “ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ಪಕ್ಷ ಸೇರಿದಂತೆ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಎಐಸಿಸಿಗೆ ಆದಾಯ ತೆರಿಗೆ ಇಲಾಖೆಯಿಂದ ನೊಟೀಸ್ ಜಾರಿ ಮಾಡಿರುವ ಬಗ್ಗೆ ಕೇಳಿದಾಗ ಅವರು ಶನಿವಾರ ಉತ್ತರಿಸಿದ್ದು ಹೀಗೆ; “1800 ಕೋಟಿ ತೆರಿಗೆ ಪಾವತಿಸಬೇಕು ಎಂದು ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ನೊಟೀಸ್ ಜಾರಿ ಮಾಡಿದೆ. ಇದು ಪ್ರಜಾಪ್ರಭುತ್ವ ದೇಶ. ಆದರೂ ಬಿಜೆಪಿ ಸರ್ಕಾರ ಅಧಿಕಾರಿಗಳ ಮೂಲಕ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ. ಸೂರ್ಯ ಮುಳುಗುತ್ತಾನೆ, ಮತ್ತೆ ಹುಟ್ಟುತ್ತಾನೆ. ಇಲ್ಲಿ ಯಾವುದೂ ಶಾಶ್ವತವಲ್ಲ. ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟಕ್ಕೆ ಬಿಜೆಪಿ ಸರ್ಕಾರ ಬೆದರಿದೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಅವರಿಗೆ ಅರಿವಾಗಿದೆ. ಹೀಗಾಗಿ ಅವರು ಎಲ್ಲರಿಗೂ ಕಿರುಕುಳ ನೀಡುತ್ತಿದ್ದಾರೆ. ನನಗೂ ನೊಟೀಸ್ ಬಂದಿದೆ: ನನ್ನ ವಿರುದ್ಧದ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣೆಯ ಮತದಾನದಂದು ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಿ ಇಂದು ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ:26.04.2024ರ ಶುಕ್ರವಾರದಂದು ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತ ಹಾಗೂ ಶೋರಾಪುರ-36 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ದಿನಾಂಕ:07.05.2024ರ ಮಂಗಳವಾರದಂದು ನಡೆಸುತ್ತಿದೆ ಎಂದಿದ್ದಾರೆ. ಸದರಿ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ದಿನಾಂಕ:26.04.2024 ಮತ್ತು ದಿನಾಂಕ:07.05.2024ರಂದು ನಡೆಯುವ ಚುನಾವಣೆಗೆ ಕೆಳಗಿನ ಅಂಕಣದಲ್ಲಿ ನಮೂದಿಸಿರುವ ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯನ್ನು ಘೋಷಿಸಿದ್ದಾರೆ. ಲೋಕಸಭಾ ಕ್ಷೇತ್ರಗಳ…

Read More

ನವದೆಹಲಿ: ಹಿರಿಯ ಎನ್ ಸಿ ಪಿ ನಾಯಕ ನವಾಬ್ ಮಲ್ಲಿಕ್ ಅವರ ಆರೋಗ್ಯದಲ್ಲಿ ಏರುಪೇರು ಆಗಿರೋ ಕಾರಣ, ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಹಿರಿಯ ಎನ್ಸಿಪಿ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರನ್ನು ಉಸಿರಾಟದ ತೊಂದರೆಯಿಂದಾಗಿ ಶನಿವಾರ ಕುರ್ಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಮಗಳು ಸುದ್ದಿ ಸಂಸ್ಥೆ ಎಎನ್ಐಗೆ ಖಚಿತಪಡಿಸಿದ್ದಾರೆ. https://twitter.com/ANI/status/1773982143745786162

Read More

ಬೀದರ್: ಜಿಲ್ಲೆಯಲ್ಲಿ ಇಂದು ಶಾಕ್ ಎನ್ನುವಂತೆ ಓವರ್ ಟ್ಯಾಂಕ್ ಒಂದನ್ನು ಓರಿದಂತ ಯುವಕನೊಬ್ಬ ಅದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದ್ಯಾವುದನ್ನು ಅರಿಯದಂತ ಜನರು ಮಾತ್ರ ಅದೇ ನೀರನ್ನು 4-5 ದಿನಗಳ ಕಾಲ ಕುಡಿದಿದ್ದಾರೆ. ಕೊನೆಗೆ ವಾಸನೆಯ ನಂತ್ರ ಓವರ್ ಟ್ಯಾಂಕ್ ನಲ್ಲಿ ಚೆಕ್ ಮಾಡಿದಾಗ ಯುವಕ ಶವ ಕಂಡು ಶಾಕ್ ಆಗಿದ್ದಾರೆ. ಬೀದರ್ ತಾಲೂಕಿನ ಅಣದೂರು ಗ್ರಾಮದ ರಾಜಕುಮಾರ ದಾಸ ಎಂಬಾತ ಪತ್ನಿಯ ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಬೇಸತ್ತು, ಓವರ್ ಟ್ಯಾಂಕ್ ಏರಿ ಅದರೊಳಗಿನ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜಕುಮಾರ ಆತ್ಮಹತ್ಯೆ ಮಾಡಿಕೊಂಡಿದ್ದಂತ ವಿಷಯ ತಿಳಿಯದ ಅಣದೂರು ಗ್ರಾಮಸ್ಥರು ಮಾತ್ರ 4-5 ದಿನಗಳಿಂದ ಅದೇ ನೀರು ಕುಡಿದಿದ್ದಾರೆ. ಕುಡಿಯುವ ನೀರು ವಿಪರೀತವಾಗಿ ವಾಸನೆ ಬರುತ್ತಿದೆ. ಅದರಲ್ಲಿ ಕೂದಲುಗಳು ಬರ್ತಾ ಇದ್ದಾವೆ ಎಂಬುದಾಗಿ ಗ್ರಾಮಸ್ಥರು ಪಿಡಿಓ, ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಗ್ರಾಮಸ್ಥರ ದೂರಿನಿಂದ ಗ್ರಾಮದಲ್ಲಿ ಎಲ್ಲೋ ಕುಡಿಯೋ ನೀರಿನ ಪೈಪಿಗೆ ಚರಂಡಿ ನೀರು ಸೇರುತ್ತಿರಬೇಕು ಅಂತ ಹುಡುಕಾಡಿದ್ದಾರೆ. ಕೊನೆಗೆ ಸಿಗದ ಕಾರಣ…

Read More

ಬೆಂಗಳೂರು: ಕರ್ನಾಟಕ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಅಚ್ಚರಿಯೆನ್ನುವಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಕುರಿತಂತೆ ಎಐಎಸಿಸಿ ಜನರಲ್ ಸೆಕ್ರೇಟರಿ ಕೆಸಿ ವೇಣುಗೋಪಾಲ್ ಪಟ್ಟಿ ಪ್ರಕಟಿಸಿದ್ದು, ಬಳ್ಳಾರಿ ಎಸ್ಟಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಈ ತುಕಾರಾಂ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನೂ ಚಾಮರಾಜನಗರ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಸುನೀಲ್ ಬೋಸ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.

Read More

ಕಲಬುರಗಿ: ಜಿಲ್ಲೆಯಲ್ಲಿ ಇಂದು ಘೋರ ದುರಂತವೊಂದು ಸಂಭವಿಸಿದೆ. ರಥೋತ್ಸವದ ವೇಳೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಾವನ್ನಪ್ಪಿದ್ರೇ, ಮತ್ತೋರ್ವ ವ್ಯಕ್ತಿ ಗಾಯಗೊಂಡಿರೋ ಘಟನೆ ನಡೆದಿದೆ. ಕಲಬುರ್ಗಿಯ ಜಿಲ್ಲೆಯ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ, ಜನರನ್ನು ನಿಯಂತ್ರಿಸೋದಕ್ಕಾಗಿ ಪೊಲೀಸರು ಸೇರಿದಂತೆ ಹೋಂ ಗಾರ್ಡ್ ನಿಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಹೋಂ ಗಾರ್ಡ್ ರಾಮು ಸಿದ್ದಪ್ಪ(28) ಎಂಬುವರು ರಥದ ಚಕ್ರಕ್ಕೆ ಸಿಲುಕಿ ಮೃತ ಪಟ್ಟಿದ್ದಾರೆ. ಮೃತ ರಾಮು ಸಿದ್ದಪ್ಪ ಬೀದರ್ ಜಿಲ್ಲೆಯ ಇಟಗಾ ಗ್ರಾಮದವರಾಗಿದ್ದಾರೆ. ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿನ ರಥೋತ್ಸವದ ಭದ್ರತೆಗಾಗಿ ಅವರನ್ನು ನಿಯೋಜಿಸಲಾಗಿತ್ತು. ಇನ್ನೂ ಇದೇ ಘಟನೆಯಲ್ಲಿ ಮತ್ತೋರ್ವ ಸಿಬ್ಬಂದಿ ಅಶೋಕರೆಡ್ಡಿ ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರಣಬಸವೇಶ್ವರ ರಥವನ್ನು ಎಳೆಯುವಾಗ ನೂಕು ನುಗ್ಗಲು ಉಂಟಾಗಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಉನ್ನತ ನಾಯಕರ ಸಮ್ಮುಖದಲ್ಲಿ ಏಪ್ರಿಲ್ 5 ರಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಖರ್ಗೆ ಮತ್ತು ಗಾಂಧಿ ಕುಟುಂಬವು ಏಪ್ರಿಲ್ 6 ರಂದು ಜೈಪುರ ಮತ್ತು ಹೈದರಾಬಾದ್ನಲ್ಲಿ ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ, ಅಲ್ಲಿ ಅವರು ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಅಂಶಗಳನ್ನು ಎತ್ತಿ ತೋರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಿಟಿಐ ಮೂಲಗಳ ಪ್ರಕಾರ, ಪಕ್ಷದ ನಾಯಕತ್ವವು ಏಪ್ರಿಲ್ 5 ರಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಚೇರಿಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ಕಾಂಗ್ರೆಸ್ ಪ್ರಣಾಳಿಕೆಯು ‘ಪಾಂಚ್ ನ್ಯಾಯ್’ ಅಥವಾ ನ್ಯಾಯದ ಐದು ಸ್ತಂಭಗಳಿಗೆ ಒತ್ತು ನೀಡಲಿದೆ. ಇದರಲ್ಲಿ ‘ಯುವ ನ್ಯಾಯ್’, ‘ನಾರಿ ನ್ಯಾಯ್’, ‘ಕಿಸಾನ್ ನ್ಯಾಯ್’, ‘ಶ್ರಮಿಕ್ ನ್ಯಾಯ್’ ಮತ್ತು ‘ಹಿಸ್ಸೆದಾರಿ ನ್ಯಾಯ್’ ಮತ್ತು 2024 ರ…

Read More