Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ಎನ್ನುವಂತೆ, ಸದ್ಯಕ್ಕೆ ಹೊಸದಾಗಿ ಪಡಿತರ ಚೀಟಿ ವಿತರಣೆ ಮಾಡುವುದಿಲ್ಲ ಅಂತ ತಿಳಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಆಹಾರ ಇಲಾಖೆ ಸಚಿವ ಕೆಹೆಚ್ ಮುನಿಯಪ್ಪ ಅವರು, ರಾಜ್ಯದಲ್ಲಿ ಕೇಂದ್ರ ನಿಗದಿ ಪಡಿಸಿದಂತ ಕಾರ್ಡ್ ಗುರಿ ಮುಕ್ತಾಯಗೊಂಡಿದೆ. ಹೀಗಾಗಿ ಹೊಸ ಕಾರ್ಡ್ ವಿತರಣೆ ಮಾಡುವುದಿಲ್ಲ ಎಂದರು. ಈಗಾಗಲೇ ಅನರ್ಹರು ಬಿಪಿಎಲ್ ರೇಷನ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಆ ಕಾರ್ಡ್ ಗಳನ್ನು ರದ್ದುಪಡಿಸಿದ ನಂತ್ರ ಹೊಸದಾಗಿ ಅರ್ಜಿ ಸಲ್ಲಿಸಿರುವಂತ ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆ ಆರಂಭಿಸಲಾಗುತ್ತದೆ ಎಂದರು.  ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ಅನ್ವಯ 4,01,93,000 ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಣೆ ಮಾಡಲು ಗುರಿ ನಿಗದಿ ಮಾಡಲಾಗಿದೆ. ಆದರೆ ರಾಜ್ಯದಲ್ಲಿ ನಿಯಮ ಮೀರಿ 4,50,59,460 ಫಲಾನುಭವಿಗಳಿಗೆ ಪಡಿತರ ಕೊಡಲಾಗುತ್ತಿದೆ. ಕಾಯ್ದೆ ಪ್ರಕಾರ ನಿಗದಿ ಮಾಡಿರುವ ಫಲಾನುಭವಿಗಳಿಗೆ ಪಡಿತರ ಈಗಾಗಲೇ ಕೊಡಲಾಗುತ್ತಿದೆ. https://kannadanewsnow.com/kannada/home-minister-g-parameshwara-said-that-the-government-is-planning-to-implement-uniform-ticket-prices-in-multiplexes-across-the-state/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ಬೆಂಗಳೂರು: ರಾಜ್ಯಾದ್ಯಂತ ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪದ ಟಿಕೆಟ್ ಬೆಲೆಯನ್ನು ಮತ್ತೆ ಜಾರಿಗೆ ತರುವ ಸಾಧ್ಯತೆಯನ್ನು ಸರ್ಕಾರ ಪರಿಶೀಲಿಸಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಗುರುವಾರ ವಿಧಾನ ಪರಿಷತ್ತಿಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ಪ್ರಸ್ತುತ ರಾಜ್ಯವು ಥಿಯೇಟರ್ ಮಾಲೀಕರು ಟಿಕೆಟ್ ಬೆಲೆಯನ್ನು ನಿಗದಿಪಡಿಸುವ ವ್ಯವಸ್ಥೆಯನ್ನು ಅನುಸರಿಸುತ್ತಿದೆ ಎಂದು ಹೇಳಿದರು. ಆದರೆ ಚಲನಚಿತ್ರ ಟಿಕೆಟ್‌ಗಳು ಸೇರಿದಂತೆ ಯಾವುದೇ ಸರಕುಗಳ ಬೆಲೆಯನ್ನು ಮಧ್ಯಪ್ರವೇಶಿಸಲು ಮತ್ತು ನಿಯಂತ್ರಿಸಲು ಸರ್ಕಾರಕ್ಕೆ ಎಲ್ಲಾ ಹಕ್ಕುಗಳಿರುವುದರಿಂದ ರಾಜ್ಯವು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತಿಲ್ಲ ಎಂಬ ಕಠಿಣ ನಿಯಮವಿಲ್ಲ ಎಂದು ಅವರು ಹೇಳಿದರು. “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ, 2017 ರಲ್ಲಿ ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್ ದರವನ್ನು 200 ರೂ.ಗೆ ಮಿತಿಗೊಳಿಸಿದ್ದರು ಮತ್ತು ಅವರು ಹಿಂದಿನ ಮುಖ್ಯಮಂತ್ರಿಯಾಗಿದ್ದಾಗ ಆದೇಶ ಹೊರಡಿಸಲಾಗಿತ್ತು, ಆದರೂ ರಾಜ್ಯ ಸರ್ಕಾರ ಇಲ್ಲಿಯವರೆಗೆ ಏಕೆ ಮಧ್ಯಪ್ರವೇಶಿಸಲಿಲ್ಲ ಎಂದು ನನಗೆ ತಿಳಿದಿಲ್ಲ” ಎಂದು ಗೃಹ ಸಚಿವರು ಹೇಳಿದರು. ಮಲ್ಟಿಪ್ಲೆಕ್ಸ್ ಮಾಲೀಕರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದ…

Read More

ಬೆಂಗಳೂರು: ಇಂದು ಬೆಳಗ್ಗೆ 10.15ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇಂತಹ ಬಜೆಟ್ ಪ್ರತಿಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಣಕಾಸು ಇಲಾಖೆಯ ಅಧಿಕಾರಿಗಳು ಹಸ್ತಾಂತರಿಸಿದರು. ಇಂದು ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾದಂತ ಹಣಕಾಸು ಇಲಾಖೆಯ ಅಧಿಕಾರಿಗಳು ಸಿಎಂ ಸಿದ್ಧರಾಮಯ್ಯಗೆ 2025-26ನೇ ಸಾಲಿನ ರಾಜ್ಯ ಬಜೆಟ್ ಪ್ರತಿಗಳ್ನು ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಆರ್ಥಿಕ ಇಲಾಖೆಯ ಸಲಹೆಗಾರ ರಾಯರೆಡ್ಡಿ ಅವರ ನೇತೃತ್ವದಲ್ಲಿ ಹಸ್ತಾಂತರಿಸಿದಂತ ಬಜೆಟ್ ಪ್ರತಿಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರು. ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾವೇರಿ ನಿವಾಸಕ್ಕೆ ಬಜೆಟ್ ಪ್ರತಿಗಳನ್ನು ತಂದಂತ ಆರ್ಥಿಕ ಇಲಾಖೆಯ ಅಧಿಕಾರಿಗಳ ತಂಡವು, ಸಿಎಂ ಸಿದ್ಧರಾಮಯ್ಯಗೆ ಹಸ್ತಾಂತರಿಸಿತು. ಈ ಬಜೆಟ್ ಅನ್ನೇ ಸಿಎಂ ಸಿದ್ಧರಾಮಯ್ಯ ಅವರು ಇಂದು ಬೆಳಗ್ಗೆ 10.15ಕ್ಕೆ ವಿಧಾನಸಭೆಯಲ್ಲಿ ಮಂಡನೆ ಮಾಡಲಿದ್ದಾರೆ. https://kannadanewsnow.com/kannada/bjp-jds-protest-ahead-of-state-budget-to-be-presented-today/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2025-26 ಮಂಡಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳ ಪ್ರತಿಭಟನೆಯು ನಾಳೆ 7-3-2025 ರ ಬೆಳಿಗ್ಗೆ 09.30 ಗಂಟೆಗೆ ಬೆಂಗಳೂರಿನ ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿ ನಡೆಸಲಿದೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ. ವಿಜಯೇಂದ್ರ , ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್ತಿನ ನಾಯಕರಾದ ಬೋಜೆಗೌಡ ಮತ್ತು ಬಿಜೆಪಿ-ಜೆಡಿಎಸ್‍ನ ಶಾಸಕರುಗಳು ಹಾಗೂ ವಿಧಾನ ಪರಿಷತ್ತಿನ ಸದಸ್ಯರುಗಳು ಭಾಗವಹಿಸಲಿದ್ದಾರೆ. ಇಂದು ಬೆಳಗ್ಗೆ 9:30 ಕ್ಕೆ ವಿಧಾನಸೌಧ ಗಾಂಧಿ ಪ್ರತಿಮೆ‌ ಎದುರು ಮೈತ್ರಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಎಸ್‌ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಸಬಾರದು, ಶಾಸಕರ ಕ್ಷೇತ್ರಗಳಿಗೆ ತಲಾ 150 ಕೋಟಿ ಅನುದಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ. https://kannadanewsnow.com/kannada/us-supreme-court-refuses-to-stay-extradition-of-26-11-attack-convict-tahawwur-rana-to-india/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ನವದೆಹಲಿ: 2008 ರ ಮುಂಬೈ ದಾಳಿಯಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಪಾಕಿಸ್ತಾನದ ತಹವೂರ್ ರಾಣಾ ಅವರನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ತಡೆ ನೀಡಲು ನಿರಾಕರಿಸಲಾಗಿದೆ. ಯುಎಸ್ ಸುಪ್ರೀಂ ಕೋರ್ಟ್ ಅವರ ತುರ್ತು ತಡೆ ಅರ್ಜಿಯನ್ನು ತಿರಸ್ಕರಿಸಿದೆ. ಇದು ಅವರನ್ನು ಭಾರತಕ್ಕೆ ಹಸ್ತಾಂತರಿಸಲು ದಾರಿಯನ್ನು ಸುಲಭ ಮಾಡಿಕೊಟ್ಟಂತೆ ಆಗಿದೆ. ಭಾರತಕ್ಕೆ ಹಸ್ತಾಂತರಿಸುವುದರಿಂದ ತನ್ನ ಜೀವಕ್ಕೆ ಅಪಾಯವಿದೆ ಎಂದು ವಾದಿಸಿ ರಾಣಾ ಅಮೆರಿಕದ ಉನ್ನತ ನ್ಯಾಯಾಲಯದಲ್ಲಿ ‘ತುರ್ತು ಮೇಲ್ಮನವಿ’ ಸಲ್ಲಿಸಿದ್ದರು. ತನ್ನ ಧಾರ್ಮಿಕ ಗುರುತು ಮತ್ತು ಪಾಕಿಸ್ತಾನ ಸೇನೆಯೊಂದಿಗಿನ ಹಿಂದಿನ ಒಡನಾಟದಿಂದಾಗಿ, ಭಾರತೀಯ ಕಸ್ಟಡಿಯಲ್ಲಿ ಚಿತ್ರಹಿಂಸೆ ಮತ್ತು ಮರಣವನ್ನು ಸಹ ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ನ್ಯಾಯಮೂರ್ತಿ ಎಲೆನಾ ಕಾಗನ್ ಅವರ ಅರ್ಜಿಯನ್ನು ವಜಾಗೊಳಿಸಿದರು, ಈ ಕ್ರಮವನ್ನು ತಡೆಯುವ ಅಂತಿಮ ಪ್ರಯತ್ನದಲ್ಲಿ ಅವರ ಕಾನೂನು ತಂಡವು ಮುಖ್ಯ ನ್ಯಾಯಮೂರ್ತಿ ರಾಬರ್ಟ್ಸ್ಗೆ ಮೇಲ್ಮನವಿಯನ್ನು ಹೆಚ್ಚಿಸಲು ಪ್ರೇರೇಪಿಸಿತು. ಪಾರ್ಕಿನ್ಸನ್ ಕಾಯಿಲೆ ಮತ್ತು ಉಬ್ಬುವ ಅಪಧಮನಿಯಂತಹ ಸ್ಥಿತಿಗಳನ್ನು ಉಲ್ಲೇಖಿಸಿ ಅವರ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ -…

Read More

ಬಳ್ಳಾರಿ : ಕೋಳಿ ಶೀತ ಜ್ವರ(ಹಕ್ಕಿ ಜ್ವರ)ವು ಹೆಚ್5ಎನ್1 ವೈರಸ್ ನಿಂದ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಮಿಕವಾಗಿ ಹರಡುವುದಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸ್ಪಷ್ಟನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕಾಣಿಸಿಕೊಂಡ ಕೋಳಿ ಶೀತ ಜ್ವರಕ್ಕೆ ಸಂಬAಧಿಸಿದAತೆ ಸೋಮವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಸಾಮಾನ್ಯವಾಗಿ ಶೀಥಲ ಪ್ರದೇಶದ ವಲಸೆ ಹಕ್ಕಿಗಳು ವಂಶಾಭಿವೃದ್ಧಿಗಾಗಿ ಬಂದಾಗ ಹಿಕ್ಕೆ, ಪುಕ್ಕ ಹಾಗೂ ಬಾಯಿ ಮತ್ತು ಕಣ್ಣಿನಿಂದ ಹೊರ ಬರುವ ಸ್ರವಿಕೆಯಿಂದ ಕಾಯಿಲೆ ಹರಡು ಸಂಭವವಿದ್ದು, ಪಕ್ಷಿಗಳಿಗೆ ರೋಗವು ಹರಡುತ್ತದೆ ಎಂದು ತಿಳಿಸಿದರು. ಬೇಯಿಸಿ ನಂತರ ಸೇವಿಸಿ: ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು 70 ಡಿಗ್ರಿ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಬೇಯಿಸಿದಾಗ ವೈರಾಣು ನಾಶಗೊಳ್ಳುತ್ತದೆ. ಹಾಗಾಗಿ ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿದ ನಂತರ ಸೇವನೆ ಮಾಡಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಫೆ.23 ರಂದು…

Read More

ತಿರುಮಲ: ತಿರುಮಲ ಗಿರಿ ನಿವಾಸಿ, ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಂತಸದ ಸುದ್ದಿ ಎನ್ನುವಂತೆ ಅನ್ನ ಪ್ರಸಾದಕ್ಕೆ ಮತ್ತೊಂದು ಹೊಸ ಖಾದ್ಯ ಸೇರ್ಪಡೆಗೊಳಿಸಲಾಗಿದೆ. ಈಗ ಅನ್ನ ಪ್ರಸಾದದ ಮೆನುವಿನಲ್ಲಿ ಮಸಾಲೆ ವಡೆ ಕೂಡ ಸೇರ್ಪಡೆಯಾಗಿದೆ. ಈ ಬಗ್ಗೆ ಗುರುವಾರದಂದು ಟಿಟಿಡಿಯಿಂದ ಅನ್ನ ಪ್ರಸಾದ ಭವನದಲ್ಲಿ ಮೆನು ರಿಲೀಸ್ ಮಾಡಲಾಗಿದೆ. ತಿರುಮಲ ತಾರಿಗೊಂಡ ವೆಂಗಮಾಂಬ ಅನ್ನ ಪ್ರಸಾದ ಭವನದಲ್ಲಿ ಭಕ್ತರಿಗೆ ಅನ್ನ ಪ್ರಸಾದದಲ್ಲಿ ಮಸಾಲೆ ವಡೆಯನ್ನು ಬಡಿಸುವುದಕ್ಕೆ ಅಧ್ಯಕ್ಷ ಬಿ ಆರ್ ನಾಯ್ಡು ಚಾಲನೆ ನೀಡಿದರು. ಒಟ್ಟಾರೆ ತಿರುಮಲ ತಿರುಪತಿ ಅನ್ನ ಪ್ರಸಾದದಲ್ಲಿ ದಕ್ಷಿಣ ಭಾರತದ ಖಾತ್ಯವನ್ನು ಸೇರಿಸಲಾಗಿದೆ. ಈ ಬಗ್ಗೆ ಸಿಎಂ ಚಂದ್ರಬಾಬು ನಾಯ್ಡು ಜೊತೆಗೆ ಚರ್ಚಿಸಿ ಕ್ರಮ ವಹಿಸಲಾಗಿದ್ದು, ಅವರು ಅನುಮೋದಿಸಿದ ನಂತ್ರ, ಭಕ್ತರಿಗೆ ಅನ್ನ ಪ್ರಸಾದದ ಮೆನುವಿನಲ್ಲಿ ವಡೆಯನ್ನು ಸೇರಿಸಲಾಗಿದೆ. https://kannadanewsnow.com/kannada/district-level-job-fair-to-be-held-in-madikeri-tomorrow/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ಮಡಿಕೇರಿ : ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳ ನಡೆಯಲಿದೆ. ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಯಲ್ಲಿ ‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಆದ್ದರಿಂದ ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ ಯುವತಿಯರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ. https://kannadanewsnow.com/kannada/good-news-for-women-employees-lt-announces-one-days-paid-menstrual-leave/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ನವದೆಹಲಿ: ಲಾರ್ಸೆನ್ ಅಂಡ್ ಟೂಬ್ರೊ (ಎಲ್ & ಟಿ) ತನ್ನ ಮಹಿಳಾ ಉದ್ಯೋಗಿಗಳಿಗೆ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ತೆಗೆದುಕೊಳ್ಳಲು ಅವಕಾಶ ನೀಡುವ ಹೊಸ ನೀತಿಯನ್ನು ಪರಿಚಯಿಸಿದೆ. ಈ ನಿರ್ಧಾರವು ಅದರ ಪ್ರಧಾನ ಕಚೇರಿಯಲ್ಲಿ ಕೆಲಸ ಮಾಡುವ ಸುಮಾರು 5,000 ಮಹಿಳೆಯರಿಗೆ ಪ್ರಯೋಜನವನ್ನು ನೀಡುತ್ತದೆ. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಸ್ ಎನ್ ಸುಬ್ರಮಣಿಯನ್ ಈ ಘೋಷಣೆ ಮಾಡಿದರು. ಪ್ರಮುಖ ಎಂಜಿನಿಯರಿಂಗ್ ಮತ್ತು ನಿರ್ಮಾಣ ಕಂಪನಿಯು ನೀತಿಯನ್ನು ಹೇಗೆ ಜಾರಿಗೆ ತರಲಾಗುವುದು ಎಂಬ ವಿವರಗಳನ್ನು ಇನ್ನೂ ಅಂತಿಮಗೊಳಿಸುತ್ತಿದೆ. ರಜೆ ನೀತಿಯು ಮೂಲ ಕಂಪನಿಯಾದ ಎಲ್ &ಟಿಯ ಉದ್ಯೋಗಿಗಳಿಗೆ ಮಾತ್ರ ಅನ್ವಯಿಸುತ್ತದೆ. ಇದು ಹಣಕಾಸು ಸೇವೆಗಳು ಅಥವಾ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತನ್ನ ಅಂಗಸಂಸ್ಥೆಗಳಿಗೆ ವಿಸ್ತರಿಸುವುದಿಲ್ಲ. ಎಲ್ ಅಂಡ್ ಟಿ ಒಟ್ಟು 60,000 ಉದ್ಯೋಗಿಗಳನ್ನು ಹೊಂದಿದೆ, ಅದರಲ್ಲಿ 9% ಮಹಿಳೆಯರು. ಈ ಕ್ರಮವು L&T ಅನ್ನು ಭಾರತದಲ್ಲಿ ಈಗಾಗಲೇ ಇದೇ ರೀತಿಯ…

Read More

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 03 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್…

Read More