Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಬಾರ್ ಅಂಡ್ ಬೆಂಚ್ ವರದಿ ಮಾಡಿದಂತೆ, “ಇದು ಕಾರ್ಯಾಂಗಕ್ಕೆ ಬಿಟ್ಟದ್ದು … ಅವರನ್ನು ತೆಗೆದುಹಾಕಲು ಯಾವುದೇ ನಿಯಮವಿಲ್ಲ. ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಈ ವಿಷಯದ ಅರ್ಹತೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿತು, ಇದು ನ್ಯಾಯಾಂಗ ಹಸ್ತಕ್ಷೇಪದ ವ್ಯಾಪ್ತಿಯಿಂದ ಹೊರಗಿದೆ ಎಂದು ಪಿಟಿಐ ವರದಿ ಮಾಡಿದೆ. “ಕಾನೂನಿಗೆ ಅನುಗುಣವಾಗಿ ಪರಿಶೀಲಿಸುವುದು ಸರ್ಕಾರದ ಇತರ ವಿಭಾಗಗಳಿಗೆ ಬಿಟ್ಟದ್ದು” ಎಂದು ನ್ಯಾಯಮೂರ್ತಿ ಮನ್ಮೀತ್ ಪಿಎಸ್ ಅರೋರಾ ಅವರನ್ನೂ ಒಳಗೊಂಡ ನ್ಯಾಯಪೀಠ ಹೇಳಿದೆ.
ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಪೊಲೀಸರು ಭಾರೀ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ರಾಜ್ಯಾದ್ಯಂತ 13 ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಲಾಗಿದೆ. ಹಾಗಾದ್ರೆ 13 ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿಯ ವೇಳೆಯಲ್ಲಿ ಯಾರ ಬಳಿ ಎಷ್ಟು ಅಕ್ರಮ ಆಸ್ತಿಪಾಸ್ತಿ ಪತ್ತೆ ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರದ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ 13 ಸರ್ಕಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಉಡುಪಿ, ಕಾರವಾರ, ಮಂಡ್ಯ, ಮೈಸೂರು, ಕೊಡಗು, ಧಾರವಾಡ, ಬೀದರ್, ಕೋಲಾರ, ವಿಜಯಪುರ, ಚಿಕ್ಕಬಳ್ಳಾಪುರ ಮತ್ತು ಬೆಳಗಾವಿಯಲ್ಲಿ ಈ ದಾಳಿ ನಡೆದಿದೆ ಎಂದಿದ್ದಾರೆ. 27/03/2024 ರಂದು, ಏಕಕಾಲದಲ್ಲಿ ನಿವಾಸಗಳು, ಕಚೇರಿಗಳು ಮತ್ತು ಸಂಬಂಧಪಟ್ಟ ಆರೋಪಿ ಸರ್ಕಾರಿ ಅಧಿಕಾರಿಗಳ ಸಂಬಂಧಿಕರ ನಿವಾಸಗಳು 62 ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆಸಲಾಯಿತು. ಈ ದಾಳಿಯ ವೇಳೆಯಲ್ಲಿ 13 ಅಧಿಕಾರಿಗಳ ಬಳಿಯಲ್ಲಿ ಈ ಕೆಳಕಂಡಂತೆ ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾಗಿದೆ ಎಂದಿದೆ.…
ಶಿವಮೊಗ್ಗ: ‘ಕೊಳವೆ ಬಾವಿ’ ಕೊರೆಯಲು ಹೆಚ್ಚಿಗೆ ಹಣ ಪಡೆದಲ್ಲಿ ನಿರ್ದಾಕ್ಷಿಣ್ಯ ಕ್ರಮ- ‘DC ಗುರುದತ್ತ ಹೆಗಡೆ’ ಎಚ್ಚರಿಕೆ
ಶಿವಮೊಗ್ಗ: ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ಕೊಳವೆಬಾವಿ ವಾಹನ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದರು. ಸರ್ಕಾರದ ಇಲಾಖೆಗಳ ವಿವಿಧ ಯೋಜನೆಗಳಡಿ ಹಾಗೂ ಖಾಸಗಿ ರೈತರ ಜಮೀನುಗಳಲ್ಲಿ ಕೊಳವೆ ಬಾವಿಗಳ ಕೊರೆಯುವ ಕುರಿತು ಜಿಲ್ಲೆಯ ರಿಗ್ ವಾಹನ ಮಾಲೀಕರು ಹಾಗೂ ಏಜೆನ್ಸಿಯವರೊಂದಿಗೆ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಾ.26 ರಂದು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ವಿವಿಧ ಇಲಾಖೆಗಳಡಿ ವಿಶೇಷವಾಗಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯಡಿ ವಿವಿಧ ಯೊಜನೆಗಳಡಿಯಲ್ಲಿ ಕೊರೆಯುವ ಕೊಳವೆ ಬಾವಿಗಳ ಕಾಮಗಾರಿಗಳನ್ನು ಅನುಷ್ಟಾನಗೊಳಿಸಲು ರಿಗ್/ಕೊಳವೆಬಾವಿ ಮಾಲೀಕರು ಕರಾರು ಮಾಡಿಕೊಂಡಿದ್ದು, ಸೂಕ್ತ ಸಮಯದಲ್ಲಿ ಡ್ರಿಲ್ಲಿಂಗ್ ಗಳನ್ನು ಮಾಡದೇ ಇರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ ಎಂದಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಬರ ಪರಿಸ್ಥಿತಿ ಇರುವುದರಿಂದ…
ಗದಗ: ಕಾಂಗ್ರೆಸ್ ಸರ್ಕಾರ ಇಡೀ ವರ್ಷ ತಮಿಳನಾಡಿನ ಹಿತಾಸಕ್ತಿ ಕಾಪಾಡಲು ಸರ್ವ ಪ್ರಯತ್ನ ಮಾಡಿದೆ. ಅವರ ರಾಜಕೀಯ ಮಿತ್ರಪಕ್ಷ ಡಿಎಂಕೆ ಯವರನ್ನು ಸಂತೈಸುವವುದೇ ಕೆಲಸ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರದಿಂದ ಕುಡಿಯಲು ನೀರಿಲ್ಲದಿದ್ದರೂ ಕೆಆರ್ ಎಸ್ ಜಲಾಶಯದಿಂದ ತಮಿಳನಾಡಿಗೆ ನೀರು ಹರಿಬಿಟ್ಟಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಕರ್ನಾಟಕ ಜನರ ಹಿತಾಸಕ್ತಿಗಿಂತ ಡಿಎಂಕೆ ಸಂತೈಸುವದೇ ಪ್ರಮುಖವಾಗಿ ಕಂಡು ಬಂದಿದೆ. ಹಲವಾರು ಬಾರಿ ನಾವು ಈ ಬಗ್ಗೆ ಪ್ರತಿಭಟನೆ ಮಾಡಿದ್ದೇವೆ. ಸರ್ವಪಕ್ಷ ಸಭೆ ಸೇರಿದಂತೆ, ವಿಧಾನಸಭೆಯಲ್ಲೂ ಹೇಳಿದ್ದೇವೆ. ಕರ್ನಾಟಕದ ಜನ ಇಂದು ನೀರಿಗೆ ಪರಿತಪಿಸುತ್ತಿದ್ದಾರೆ. ಬರಗಾಲ ಇದೆ. ಬೇಸಿಗೆ ಇದೆ. ಜಲಾನಯನ ಪ್ರದೇಶದ ಜನರಿಗೆ ನೀರಿಲ್ಲ. ಬೆಂಗಳೂರಿನ ಕುಡಿಯಲು ಜನತೆಗೆ ನೀರಿಲ್ಲ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ನವರಿಗೆ ರಾಜಕೀಯ ಮಹತ್ವದ್ದಾಗಿದೆ. ಇದು ಅತ್ಯಂತ ಖಂಡನೀಯ ಎಂದು ಹೇಳಿದರು. https://kannadanewsnow.com/kannada/bescom-electricity-consumers-to-open-cash-counters-for-bill-payments-on-march-29-31/ https://kannadanewsnow.com/kannada/bjp-jds-unite-out-of-fear-in-karnataka-people-should-defeat-them-siddaramaiah/
ಬೆಂಗಳೂರು: ವಿದ್ಯುತ್ ಬಿಲ್ ( Electricity Bill ) ಪಾವತಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಬೆಸ್ಕಾಂ ( BESCOM ) ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳ ಕ್ಯಾಷ್ ಕೌಂಟರ್ ಗಳನ್ನು ಸಾರ್ವತ್ರಿಕ ರಜಾ ದಿನವಾದ ಮಾರ್ಚ್ 29 (ಗುಡ್ ಪ್ರೈಡೆ) ಹಾಗೂ ಮಾರ್ಚ್ 31 (ಭಾನುವಾರ) ತೆರೆಯಲು ನಿರ್ಧರಿಸಲಾಗಿದೆ. ಇಂಧನ ಇಲಾಖೆಯ ( Energy Department ) ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಸಲುವಾಗಿ ಮಾರ್ಚ್ 10 ರಿಂದ 19ರವರೆಗೆ ಆನ್ ಲೈನ್ ವಿದ್ಯುತ್ ಸೇವೆಗಳು ಸ್ಥಗಿತಗೊಂಡಿದ್ದವು. ಈ ಅವಧಿಯಲ್ಲಿ ಗ್ರಾಹಕರಿಗೆ ವಿದ್ಯುತ್ ಬಿಲ್ ಪಾವತಿ ಸಾಧ್ಯವಾಗಿರಲಿಲ್ಲ. ಹಾಗೆಯೇ ತಂತ್ರಾಂಶ ಕಾರ್ಯಾರಂಭಗೊಂಡ ನಂತರ ಸರ್ವರ್ ಓವರ್ಲೋಡ್ ಆಗಿ ಆನ್ ಲೈನ್ ವಿದ್ಯುತ್ ಸಂಬಂಧಿತ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿತ್ತು. ತಂತ್ರಾಂಶ ಉನ್ನತೀಕರಣದ ಹಿನ್ನೆಲೆಯಲ್ಲಿ ಗ್ರಾಹಕರು ಸಕಾಲದಲ್ಲಿ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮಾರ್ಚ್ 29 ಮತ್ತು 31 ರಂದು ಬೆಸ್ಕಾಂನ ಎಲ್ಲಾ ಉಪ ವಿಭಾಗಗಳ ಕ್ಯಾಶ್ ಕೌಂಟರುಗಳು ಕಾರ್ಯ ನಿರ್ವಹಿಸಲಿದೆ…
ಬಳ್ಳಾರಿ: ನಾಳೆ ಬಳ್ಳಾರಿ ಪಾಲಿಕೆಯ ಮೇಯರ್ ಆಯ್ಕೆಗಾಗಿ ಚುನಾವಣೆ ನಿಗದಿ ಪಡಿಸಲಾಗಿತ್ತು. ಇಂತಹ ಮೇಯರ್ ಚುನಾವಣೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಸಂಬಂಧ ಕಲಬುರ್ಗಿ ಪ್ರಾದೇಶಕ ಆಯುಕ್ತರು ಆದೇಶ ಹೊರಡಿಸಿದ್ದು, ನಾಳೆ ನಡೆಯಬೇಕಿದ್ದಂತ ಬಳ್ಳಾರಿ ಮೇಯರ್ ಚುನಾವಣೆಯನ್ನು ಮುಂದೂಡಿಕೆ ಮಾಡಿರೋದಾಗಿ ತಿಳಿಸಿದ್ದಾರೆ. ಮಾ.28ರ ನಾಳೆ 23ನೇ ಬಳ್ಳಾರಿ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗಾಗಿ ಚುನಾವಣೆ ನಿಗದಿಯಾಗಿತ್ತು. ಕಲಬುರಗಿ ವಿಭಾದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ 28ರಂದು ಚುನಾವಣೆ ನಡೆಯಲಿದೆ. ಆ ದಿನ ಬೆಳಗ್ಗೆ 10.30ರ ಒಳಗಾಗಿ ನಾಮಪತ್ರ ಸಲ್ಲಿಸಲು ಅವಕಾಶವಿರಲಿದೆ. ನಾಮಪತ್ರ ಪರಿಶೀಲನೆ, ಹಿಂತೆಗೆತ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮಧ್ಯಾಹ್ನ 12.30ಕ್ಕೆ ಚುನಾವಣೆ ನಡೆಸಲು ನಿರ್ಧರಿಸಲಾಗಿತ್ತು. ಇದರ ನಂತರ ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಸದಸ್ಯ ಸ್ಥಾನಗಳಿಗೂ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ. ಸದ್ಯ 39 ಸದಸ್ಯಬಲದ ಪಾಲಿಕೆಯಲ್ಲಿ ಕಾಂಗ್ರೆಸ್ 21 , ಬಿಜೆಪಿ 13 ಸದಸ್ಯರನ್ನು ಹೊಂದಿದೆ. ಪಕ್ಷೇತರರಾಗಿ ಆಯ್ಕೆಯಾಗಿದ್ದ 5 ಸದಸ್ಯರೂ ಕಾಂಗ್ರೆಸ್ ಸೇರಿದ್ದು, ಅದರ ಬಲ 26ಕ್ಕೆ ಏರಿದೆ.…
ಬೆಂಗಳೂರು: ರಾಜಕಾರಣದಲ್ಲಿ ಶತ್ರುತ್ವ ಎನ್ನುವುದು ಶಾಶ್ವತವಲ್ಲ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಸುಮಲತಾ ಅವರು ನನಗೆ ಶತ್ರುವಲ್ಲ. ಅವರನ್ನು ಭೇಟಿಯಾಗುವುದಕ್ಕೆ ಯಾವುದೇ ಹಿಂಜರಿಕೆ ಇಲ್ಲ ಎಂದಿದ್ದಾರೆ. ಮೈಸೂರಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮಗಳು; ʼಸುಮಲತಾ ಅವರ ಜೊತೆ ಯಾವಾಗ ಮಾತನಾಡುತ್ತೀರಿ?ʼ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಖಂಡಿತವಾಗಿಯೂ ಅವರು ನನಗೆ ಶತ್ರು ಅಲ್ಲ. ಅಂಬರೀಶ್ ಬದುಕಿದ್ದಾಗ ಜೊತೆಯಲ್ಲಿ ಅವರ ಮನೆಯಲ್ಲಿ ಊಟ ಮಾಡಿದ್ದೇವೆ. ಆಗ ಸುಮಲತಾ ಅವರೇ ನಮಗೆ ಊಟ ಬಡಿಸಿದ್ದಾರೆ. ಹೀಗಿರುವಾಗ ಆಗಿ ಹೋಗಿದ್ದನ್ನೇ ಸಾಧಿಸಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂದರು. ರಾಜಕೀಯ ಸನ್ನಿವೇಶ, ಆಯಾ ಸಂದರ್ಭದಲ್ಲಿ ಸಂಘರ್ಷ ಆಗಿದೆ. ಆ ರಾಮಾಂಜನೇಯರ ನಡುವೆಯೇ ಯುದ್ಧ ಆಗಿದೆಯಲ್ಲವೇ? ಅವರ ಮುಂದೆ ನಾವೆಷ್ಟು? ನಾವು ಹುಲು ಮಾನವರು. ಸಮಯ ಬಂದಾಗ ನಾನು ಸುಮಲತಾ ಅವರ ಜೊತೆ ಮಾತನಾಡುತ್ತೇನೆ ಎಂದರು ಕುಮಾರಸ್ವಾಮಿ ಅವರು. ಚಲುವರಾಯಸ್ವಾಮಿಗೆ ತಿರುಗೇಟು ಪುಟ್ಟರಾಜ ಅವರಿಗೆ ಇನ್ನೂ ಚೆನ್ನಾಗಿರುವ ವಧುವನ್ನೇ ನೋಡೋಣ. ಅವರ…
ಬೆಂಗಳೂರು: ಬಿಜೆಪಿ ಹೈಕಮಾಂಡ್ ನಿಂದ ಇಂದು ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟಿಸಲಾಗಿದೆ. ಕಗ್ಗಂಟಾಗಿದ್ದಂತ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಈ ಕುರಿತಂತೆ ಬಿಜೆಪಿಯಿಂದ ಇಂದು ಅಭ್ಯರ್ಥಿಗಳ 7ನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ಪಟ್ಟಿಯಲ್ಲಿ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರಕ್ಕೆ ನವನೀತ್ ರಾಣಾಗೆ ಟಿಕೆಟ್ ನೀಡಲಾಗಿದೆ. ಕರ್ನಾಟಕದ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ. ಅಂದಹಾಗೇ ಕೇಂದ್ರ ಸಚಿವ ಎ ನಾರಾಯಣಸ್ವಾಮಿಗೆ ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ಮಿಸ್ ಆಗಿದೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಎ.ನಾರಾಯಣಸ್ವಾಮಿಗೆ ಶಾಕ್ ನೀಡಲಾಗಿದೆ. ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರಕ್ಕೆ ನವನೀತ್ ರಾಣಾಗೆ ಟಿಕೆಟ್ ನೀಡಲಾಗಿದೆ. ಕರ್ನಾಟಕದ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ. ಆಂಧ್ರಪ್ರದೇಶದ ಇಟ್ ಚೆರ್ಲಾ ಕ್ಷೇತ್ರಕ್ಕೆ ಎನ್ ಈಶ್ವರ್ ರಾವ್, ವಿಶಾಕಪಟ್ನಂ ನಾರ್ಥ್ ಗೆ ಪಿ ವಿಷ್ಣು…
ಬೆಂಗಳೂರು: ಬಿಜೆಪಿ ಹೈಕಮಾಂಡ್ ನಿಂದ ಇಂದು ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟಿಸಲಾಗಿದೆ. ಕಗ್ಗಂಟಾಗಿದ್ದಂತ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಈ ಕುರಿತಂತೆ ಬಿಜೆಪಿಯಿಂದ ಇಂದು ಅಭ್ಯರ್ಥಿಗಳ 7ನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ಪಟ್ಟಿಯಲ್ಲಿ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರಕ್ಕೆ ನವನೀತ್ ರಾಣಾಗೆ ಟಿಕೆಟ್ ನೀಡಲಾಗಿದೆ. ಕರ್ನಾಟಕದ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ. ಅಂದಹಾಗೇ ಕೇಂದ್ರ ಸಚಿವ ಎ ನಾರಾಯಣಸ್ವಾಮಿಗೆ ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ಮಿಸ್ ಆಗಿದೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಎ.ನಾರಾಯಣಸ್ವಾಮಿಗೆ ಶಾಕ್ ನೀಡಲಾಗಿದೆ. https://kannadanewsnow.com/kannada/lok-sabha-elections-nominations-to-be-accepted-from-these-places-in-bengaluru-from-tomorrow/ https://kannadanewsnow.com/kannada/bjp-jds-unite-out-of-fear-in-karnataka-people-should-defeat-them-siddaramaiah/
ಮಂಡ್ಯ: ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಗೆ ನೀಡಿರುವ ಕೊಡುಗೆಯಾದರು ಏನು? ಎಂದು ಶಾಸಕ ಕೆ.ಎಂ.ಉದಯ್ ಪ್ರಶ್ನಿಸಿದರು. ಮದ್ದೂರು ತಾಲೂಕಿನ ಕದಲೂರು ಗ್ರಾಮದ ತಮ್ಮ ಸ್ವಗೃಹದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಜನತೆಯ ಆಶೀರ್ವಾದದಿಂದ ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು ಆದರೆ, ಜಿಲ್ಲೆಗೆ ಅವರು ಯಾವುದೇ ಶಾಶ್ವತ ಯೋಜನೆಗಳನ್ನು ನೀಡಿಲ್ಲ ಎಂದು ಕಿಡಿಕಾರಿದರು. ಕಳೆದ ಲೋಕಸಭಾ ಚುನಾವಣೆ ವೇಳೆ ತಮ್ಮ ಪುತ್ರನನ್ನು ಕಣಕ್ಕಿಳಿಸಲು ಮಂಡ್ಯ ಜಿಲ್ಲೆಗೆ 8 ಸಾವಿರ ಕೋಟಿ ರೂಪಾಯಿ ಬಜೆಟ್ ಮಂಡನೆ ಮಾಡಿದ್ದರು. ಚುನಾವಣೆಯಲ್ಲಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸೋತರು ಎಂಬ ಕಾರಣಕ್ಕೆ 8 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡದೆ ಜಿಲ್ಲೆಯ ಜನತೆಗೆ ದ್ರೋಹ ಬಗೆದು ಪಲಾಯನ ಮಾಡಿದ ಕುಮಾರಸ್ವಾಮಿ ಅವರು 5 ವರ್ಷಗಳ ನಂತರ ಈಗ ನಾನೇ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಂದು ಕಣಕ್ಕಿಳಿಯಲು ಸಿದ್ದರಾಗಿದ್ದಿರಿ. ಯಾವ ಮುಖ ಇಟ್ಟುಕೊಂಡು ಜನತೆಯ ಬಳಿ ಮತ ಕೇಳಲು…