Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮುಡಾ ಹಗರಣ ಆರೋಪ ಎದುರಿಸುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು ಬೀಸೋ ದೊಣ್ಣೆಯ ಏಟಿನಿಂದ ತಪ್ಪಿಸಿಕೊಳ್ಳುವ ಹಾಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಅದೇ ಸಿಬಿಐ ಮುಕ್ತ ಅನುಮತಿ ಅಧಿಸೂಚನೆ ವಾಪಾಸ್ಸಿಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸಂಪುಟದ ನಿರ್ಧಾರಗಳನ್ನು ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರಿಗೆ ಕಾನೂನ ಸಚಿವ ಹೆಚ್.ಕೆ ಪಾಟೀಲ್ ವಿವರಿಸಿದರು. ಮೂಡ ಪ್ರಕರಣದಲ್ಲಿಸರ್ಕಾರದ ರಕ್ಷಣಾ ನಡೆ ಎನ್ನುವಂತೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಬಿಐ ತನಿಖೆ ಭೀತಿಯಿಂದ ರಕ್ಣಣೆಗೆ ಸಂಪುಟ ಮುಂದಾಗಿದೆ. ಭವಿಷ್ಯದಲ್ಲಿ ಎದುರಾಗಬಹುದಾದ ಕಾನೂನು ಸಂಕಷ್ಟದಿಂದ ರಕ್ಷಣೆ ಪಡೆಯಲು ನಿರ್ಣಯ ಕೈಗೊಳ್ಳಲಾಗಿದೆ. ಸಿಬಿಐ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ಸಿಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಬಿಐ ಮುಕ್ತ ಅನುಮತಿ ಅಧಿಸೂಚನೆಯನ್ನು ವಾಪಸ್ ಪಡೆಯಲು ನಿರ್ಧಾರ ಕೈಗೊಳ್ಳಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಎಂಟ್ರಿಗೆ ಅವಕಾಶ ನೀಡಲಾಗಿತ್ತು. ನೇರವಾಗಿ ತನಿಖೆ ನಡೆಸಲು…
ಬೆಂಗಳೂರು: ಈ ಹಿಂದೆ ಸಿಬಿಐಗೆ ರಾಜ್ಯದಲ್ಲಿನ ಅಪರಾಧಗಳ ತನಿಖೆಯನ್ನು ಮುಕ್ತವಾಗಿ ನಡೆಸಲು ಅವಕಾಶ ನೀಡಲಾಗಿತ್ತು. ಈಗ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಹೊರ ಬರುತ್ತಿದ್ದಂತೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಸಿಬಿಐಗೆ ನೀಡಿದ್ದಂತ ಮುಕ್ತ ಅವಕಾಶವನ್ನು ಹಾಲಿ ಕಾಂಗ್ರೆಸ್ ಸರ್ಕಾರ ಹಿಂಪಡೆಯಲು ಮಹತ್ವದ ನಿರ್ಧಾರವನ್ನು ಇಂದಿನ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ಈ ಹಿಂದೆ ರಾಜ್ಯದಲ್ಲಿನ ಅಪರಾಧ ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐಗೆ ಮುಕ್ತ ಅವಕಾಶವನ್ನು ನೀಡಿ, ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಅಧಿಸೂಚನೆಯನ್ನು ಹಿಂಪಡೆಯಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದರು. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ಡಿಎಸ್ಪಿಇ) ಕಾಯ್ದೆ, 1946 ರ ಸೆಕ್ಷನ್ 6 ರ ಪ್ರಕಾರ, ಸಿಬಿಐ ತನಿಖೆ ನಡೆಸಲು ಆಯಾ ರಾಜ್ಯ ಸರ್ಕಾರಗಳಿಂದ ಒಪ್ಪಿಗೆ ಪಡೆಯಬೇಕು ಎಂದರು. ಭ್ರಷ್ಟಾಚಾರ ತಡೆ ಕಾಯ್ದೆಯ…
ಬಿಹಾರ: ‘ಜೀವಿಪುತ್ರಿಕಾ’ ಹಬ್ಬದ ಸಂದರ್ಭದಲ್ಲಿ ಬಿಹಾರದ 15 ಜಿಲ್ಲೆಗಳ ನದಿಗಳಲ್ಲಿ ಪವಿತ್ರ ಸ್ನಾನ ಮಾಡುವಾಗ 43 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಕಾಣೆಯಾಗಿದ್ದಾರೆ. ಹಬ್ಬದ ಆಚರಣೆಯ ಸಮಯದಲ್ಲಿ ಮುಳುಗಿ ಸಾವನ್ನಪ್ಪಿದ 37 ಮಕ್ಕಳು ಸೇರಿದಂತೆ ಸಾವುನೋವುಗಳು ಸಂಭವಿಸಿವೆ ಎಂದು ರಾಜ್ಯ ಸರ್ಕಾರ ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ. ‘ಜೀವಿಪುತ್ರಿಕಾ’ ಹಬ್ಬದ ಸಮಯದಲ್ಲಿ, ಮಹಿಳೆಯರು ತಮ್ಮ ಮಕ್ಕಳ ಯೋಗಕ್ಷೇಮಕ್ಕಾಗಿ ಉಪವಾಸ ಮಾಡುತ್ತಾರೆ. ಈ ಸಂದರ್ಭದಲ್ಲಿ ಪವಿತ್ರ ಗಂಗಾ ನದಿಯಲ್ಲಿ ಸ್ನಾನ ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವಂತ ಪದ್ಧತಿಯಾಗಿದೆ. ಇದೀಗ ಬಿಹಾರದಲ್ಲಿ ಪವಿತ್ರ ಗಂಗಾ ಸ್ನಾನದ ವೇಳೆಯಲ್ಲಿ ಘೋರ ದುರಂತವೇ ನಡೆದು 37 ಮಕ್ಕಳು ಸೇರಿದಂತೆ 43 ಮಂದಿ ಜಲಸಮಾಧಿಯಾಗಿದ್ದಾರೆ. https://kannadanewsnow.com/kannada/mysuru-police-have-detained-a-drone-that-flew-during-a-gun-toting-drill/ https://kannadanewsnow.com/kannada/former-tn-minister-senthil-balaji-granted-bail-by-sc-in-money-laundering-case/
ಮೈಸೂರು: ಜಿಲ್ಲೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ನಡೆಯುತ್ತಿವೆ. ಇಂದು ಕುಶಾಲತೋಪು ಸಿಡಿಸುವ ತಾಲೀಮಿನ ವೇಳೆ ಅನಾಮಧೇಯ ಡ್ರೋನ್ ಹಾರಿ ಬಂದಿತ್ತು. ಕೂಡಲೇ ಪೊಲೀಸರು ಅದನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರಲ್ಲಿ ದಸರಾ ಗಜಪಡೆ ಹಾಗು ಅಶ್ವಾರೋಹಿ ದಳದ ಸಮ್ಮುಖದಲ್ಲಿ ಕುಶಾಲತೋಪು ಸಿಡಿಸಲು ಸಿದ್ದತೆ ನಡೆಯುತ್ತಿದ್ದ ವೇಳೆ ಏಕಾಏಕಿ ಅನಾಮಧೇಯ ಡ್ರೋಣ್ ಒಂದು ಹಾರಿ ಬಂದಿದೆ. ನಿಯಂತ್ರಣ ಕಳೆದುಕೊಂಡು ಏಕಾಏಕಿ ನೆಲಕ್ಕೆ ಅಪ್ಪಳಿಸಿದ ಡ್ರೋಣ್ ಕಂಡು ಸ್ಥಳದಲ್ಲಿದ್ದಂತ ಪೊಲೀಸರು ಕ್ಷಣಕಾಲ ಗಲಿಬಿಲಿ ಗೊಂಡರು. ಅರಣ್ಯ ಇಲಾಖೆ ಸಿಬ್ಬಂದಿ ಏನಾದರೂ ಡ್ರೋಣ್ ಹಾರಿ ಬಿಟ್ಟಿದ್ದಾರಾ ಎಂದು ಪ್ರಶ್ನಿಸಿದಾಗ, ಇಲ್ಲ ಎಂಬ ಉತ್ತರ ಬಂದಾಗ ಕ್ಷಣಕಾಲ ಆತಂಕ ಸ್ಥಳದಲ್ಲಿ ಮನೆ ಮಾಡಿತ್ತು. ಸ್ಥಳದಲ್ಲಿದ್ಧ ಯಾರೊಬ್ನರೂ ಡ್ರೋಣ್ ಹಾರಿಸಿಲ್ಲ ಎಂಬುದು ಸ್ಪಷ್ಟವಾಯಿತು. ಆದರೂ ಡ್ರೋಣ್ ಎಲ್ಲಿಂದ ಹಾರಿಬಂತು ಎಂಬುದು ತಿಳಿಯದ ಆತಂಕದ ನಡುವೆಯೇ ಅದನ್ನು ಪೊಲೀಸರು ವಶಕ್ಕೆ ಪಡೆದರು. ಅಂದಹಾಗೇ ಮೈಸೂರು ಅರಮನೆಯ ಹೊರಭಾಗದ ವಸ್ತು ಪ್ರದರ್ಶನ ಆವರಣದಿಂದ ಡ್ರೋಣ್ ಅನ್ನು ಯಾರೋ ಹಾರಿಸಿರುವಂತ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೆಲ ದಿನಗಳ ಹಿಂದೆ ವಾರ್ತಾ ಇಲಾಖೆಯ ಜಾಹೀರಾತು ಪರಿಶೀಲನೆಗೆ ಸಮಿತಿಯನ್ನು ರಚಿಸುವಂತೆ ಟಿಪ್ಪಣಿ ಹೊರಡಿಸಿದ್ದರು. ಅವರ ಸೂಚನೆಯಂತೆ ಇದೀಗ ರಾಜ್ಯ ಸರ್ಕಾರದಿಂದ ನೂತನ ಜಾಹೀರಾತು ಪರಿಶೀಲನಾ ಸಮಿತಿಯನ್ನು ರಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಇಂದು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜೆಸಿಂತ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಜಾಹೀರಾತು ಪರಿಶೀಲನಾ ಸಮಿತಿಯ ಅಧ್ಯಕ್ಷರನ್ನಾಗಿ ರಮೇಶ್ ಬಾಬು ಅವರನ್ನು ನೇಮಕ ಮಾಡಲಾಗಿದೆ. ಸದಸ್ಯರನ್ನಾಗಿ ಎಂ.ರಾಮಚಂದ್ರಪ್ಪ, ನಹೀದ್ ಅತಾವುಲ್ಲಾ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ವಾರ್ತಾ ಇಲಾಖೆಯ ಆಯುಕ್ತರನ್ನು ನೇಮಿಸಿದೆ. ಹೀಗಿವೆ ಜಾಹೀರಾತು ಪರಿಶೀನಾ ಸಮಿತಿಯ ಮಾರ್ಗಸೂಚಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಿಯಮಿತವಾಗಿ ಬಿಡುಗಡೆಯಾಗಿರುವ ಜಾಹೀರಾತುಗಳು ಯಾವುದೇ ರೀತಿಯದ್ದಾಗಿದ್ದರೂ, ಪ್ರತಿ ತಿಂಗಳಿಗೆ ಒಮ್ಮ ಜಾಹೀರಾತು ಪರಿಶೀಲನಾ ಸಮಿತಿಯು ಸಭೆ ಸೇರಿ ಬಿಡುಗಡೆಯಾಗಿರುವ ಜಾಹೀರಾತುಗಳ ಬಗ್ಗೆ ಪರಿಶೀಲನೆ/ವಿಶ್ಲೇಷಣೆ ನಡೆಸುವುದು. ಮುದ್ರಣ, ವಿದ್ಯುನ್ಮಾನ ಮತ್ತು…
ಕಲಬುರಗಿ : ಮುಡಾ ಹಗರಣದ ಕುರಿತು ಬಿಜೆಪಿ ನಿಲುವು ಸ್ಪಷ್ಟವಿದೆ. ಈ ಹಗರಣ ಕೇವಲ 14 ನಿವೇಶನಗಳಿಗೆ ಸೀಮಿತವಲ್ಲ. ಒಂದೆಡೆ 14 ನಿವೇಶನಗಳಿದ್ದರೆ, ಇನ್ನೊಂದೆಡೆ 4 ರಿಂದ 5 ಸಾವಿರ ಕೋಟಿ ಬೆಲೆಬಾಳುವ ನಿವೇಶನಗಳು ರಿಯಲ್ ಎಸ್ಟೇಟ್, ದಲ್ಲಾಳಿಗಳ ಪಾಲಾಗಿದೆ. ಇದೆಲ್ಲವುಗಳ ಸಮಗ್ರ ತನಿಖೆ ಆಗಬೇಕೆಂದರೆ ಅದು ಸಿಬಿಐನಿಂದ ಮಾತ್ರ ಸಾಧ್ಯ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಇದೀಗ ವಿಶೇಷ ನ್ಯಾಯಾಲಯವು ಮುಡಾ ಹಗರಣದ ತನಿಖೆಗೆ ಸೂಚಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ಹೇಳಿದ ಮಾತನ್ನು ನೆನಪಿಸಿಕೊಳ್ಳಬೇಕು. ಮೈಸೂರಿನ ಲೋಕಾಯುಕ್ತ ಪೊಲೀಸರಿಂದ ತನಿಖೆ ಸಾಧ್ಯವೇ? ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿರುವ ಲೋಕಾಯುಕ್ತ ಪೊಲೀಸರು, ರಾಜ್ಯದಲ್ಲಿರುವ ಲೋಕಾಯುಕ್ತ ಪೊಲೀಸರಿಂದ ಯಾವುದೇ ರೀತಿ ನ್ಯಾಯಯುತ ತನಿಖೆ ನಡೆಸಲು ಅಸಾಧ್ಯ ಎಂದು ಹೇಳಿದ್ದರು. ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಾರೆ. ಬಿ ಜೆ ಪಿ ಸರ್ಕಾರ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುತ್ತಿದೆ ಅನ್ನೋ…
ಬೆಂಗಳೂರು: ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಜೈಲುಪಾಲಾಗಿದ್ದಾರೆ. ಅವರ ವಿರುದ್ಧ ಈಗ ಸಂತ್ರಸ್ತೆ ಮತ್ತೊಂದು ಸ್ಪೋಟಕ ಹೇಳಿಕೆ ಹೊರ ಹಾಕಿದ್ದಾರೆ. ಅದೇ ಶಾಕಿಂಗ್ ಎನ್ನುವಂತೆ ಮುನಿರತ್ನ ತಮ್ಮ ಮೇಲೆ ವಿಧಾನಸೌಧ, ವಿಕಾಸಸೌಧದಲ್ಲೂ ಅತ್ಯಾಚಾರ ಎಸಗಿರುವುದಾಗಿ ಹೇಳಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. ಆ ಸಂಬಂಧ ಕೇಸ್ ದಾಖಲಾಗಿ, ಮುನಿರತ್ನ ಜೈಲುಪಾಲಾಗಿದ್ದಾರೆ. ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವಂತ ಸಂತ್ರಸ್ತೆಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಪೊಲೀಸರ ಮುಂದೆ ವಿಚಾರಣೆಯ ವೇಳೆಯಲ್ಲಿ ಸಂತ್ರಸ್ತ ಮಹಿಳೆಯು ಬಿಜೆಪಿ ಶಾಸಕ ಮುನಿರತ್ನ ಅವರು ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿಯೂ ನನ್ನ ಮೇಲೆ ರೇಪ್ ಮಾಡಿದ್ದಾರೆ ಎಂಬುದಾಗಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ. 2020ರಿಂದ 2023ರವರೆಗೆ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ. ಮುನಿರತ್ನ ಸಚಿವರಾಗಿದ್ದಾಗ ಕಚೇರಿ ಕರೆಸಿಕೊಂಡಿದ್ದರು. ಇದೇ ಕಚೇರಿಯಲ್ಲಿ ನನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂಬುದಾಗಿ ಆರೋಪಿಸಿದ್ದಾರೆ. https://kannadanewsnow.com/kannada/party-stands-behind-cm-no-need-for-siddaramaiah-to-resign-dk-shivakumar/…
ಬೆಂಗಳೂರು : “ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದೆಹಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಈ ಮಾತು ಹೇಳುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ಕೋಳಿವಾಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕೆಪಿಸಿಸಿ ಅಧ್ಯಕ್ಷ ನಾನು, ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷರು ರೆಹಮಾನ್ ಖಾನ್. ಇಲ್ಲಿ ನಾನೇ ಹೇಳುತ್ತಿದ್ದೇನೆಲ್ಲ. ಅವರ ರಾಜೀನಾಮೆ ಪ್ರಶ್ನೆಯೇ ಉದ್ಭವ ಆಗುವುದಿಲ್ಲ ಅಂತ ಎಂದು ಹೇಳಿದರು. ನಮ್ಮ ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನವರು ರಾಜಕೀಯವಾಗಿ ಷಡ್ಯಂತ್ರ ರೂಪಿಸುತ್ತಿದ್ದು, ನಮ್ಮ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿರುವುದನ್ನು ಸಹಿಸಲು ವಿರೋಧ ಪಕ್ಷಗಳಿಂದ ಸಾಧ್ಯವಾಗುತ್ತಿಲ್ಲ” ಎಂದು ತಿಳಿಸಿದರು. “ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ. ಇಲ್ಲಿ ನಮ್ಮ ಸರ್ಕಾರ ಇರುವುದನ್ನು ಸಹಿಸಲು…
ಶಿವಮೊಗ್ಗ : ನಗರಾಭಿವೃದ್ಧಿ ಇಲಾಖೆಯ ಶಿವಮೊಗ್ಗ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ದಿ:23/09/2024ರ ಸರ್ಕಾರದ ಆದೇಶದಂತೆ ಜಾರಿಯಾಗಿರುತ್ತದೆ. 2024ರ ಅಕ್ಟೋಬರ್ 07 ರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕೆಂದು ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನಗರ ಪ್ರದೇಶಗಳಲ್ಲಿ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶವನ್ನು ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ, 2020 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ. ಇ-ಖಾತಾ ಸಂಯೋಜನೆಯಿಂದ ಸಾರ್ವಜನಿಕರು ಸ್ವತ್ತುಗಳ ನೋಂದಣಿ…
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ದುರ್ಬಲವಾಗಿದೆ. ಮುಡಾ ಹಗರಣದಲ್ಲಿ ಭಾಗಿಯಾಗಿರುವಂತ ಸಿಎಂ ಸಿದ್ಧರಾಮಯ್ಯ ಅವರನ್ನು ಕುರ್ಚಿಯಿಂದ ಕೆಳಗಿಳಿಸಲು ವಿಫಲವಾಗಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಇಂದು ಮಾತನಾಡಿದಂತ ಅವರು, ಕಾಂಗ್ರೆಸ್ಸಿಗರು ಮತ್ತು ಸಿದ್ದರಾಮಯ್ಯನವರು ಕರ್ನಾಟಕವನ್ನು ಎಟಿಎಂ ಮಾಡಿ ತಮ್ಮನ್ನು ತಾವು ಹಾಳು ಮಾಡಿಕೊಂಡರು ಎಂದು ನುಡಿದರು. ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಮೂಲಕ ರಾಷ್ಟ್ರದಲ್ಲಿ ಕರ್ನಾಟಕದ ಮಾನವನ್ನು ಹರಾಜು ಹಾಕುತ್ತಿದೆ ಎಂದು ಟೀಕಿಸಿದರು. ರಾಜೀನಾಮೆ ಕೊಡುವ ಮೂಲಕ ಅಲ್ಪಸ್ವಲ್ವ ಗೌರವವನ್ನು ಉಳಿಸಿಕೊಳ್ಳಿ ಎಂದು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಮೊನ್ನೆ ಹೈಕೋರ್ಟ್ ಆದೇಶ ಬಂದ ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನಿಮ್ಮ ರಾಜೀನಾಮೆ ಪಡೆದು ಪಕ್ಷದಿಂದ ಉಚ್ಚಾಟಿಸಬೇಕಿತ್ತು. ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ದುರ್ಬಲ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ತಿಳಿಸಿದರು. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಮೂಡ ಸೈಟ್ಗಳನ್ನು ಕೊಳ್ಳೆ ಹೊಡೆದ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಸಿದ್ದರಾಮಯ್ಯ ಅವರೇ…














