Author: kannadanewsnow09

ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಮದಲ್ಲಿ ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನು ಶ್ರೀನಿವಾಸ ಗೌಡ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರಾಯಚೂರಿನಲ್ಲಿ ಕುಂಬವೊಂದರಿಂದ ಬಿಗ್ ಬಾಸ್ ಕನ್ನಡ ಖ್ಯಾತಿ ಸೋನು ಶ್ರೀನಿವಾಸಗೌಡ ಅವರು ಹೆಣ್ಣುಮಗುವೊಂದನ್ನು ದತ್ತು ಪಡೆದಿದ್ದರು. ಆದ್ರೇ ಇದಕ್ಕೆ ಕಾನೂನು ಪಾಲನೆ ಮಾಡಿರಲಿಲ್ಲ. ಹೀಗಾಗಿ ಅವರ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ದೂರು ನೀಡಲಾಗಿತ್ತು. ಪೊಲೀಸರಿಗೆ ನೀಡಿದಂತ ದೂರು ಆಧರಿಸಿ ಅವರನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ತಮ್ಮ ವಶಕ್ಕೆ ಪಡೆದಿದ್ದಂತ ಪೊಲೀಸರು ಪ್ರಕರಣ ಸಂಬಂಧ ನಿನ್ನೆ ರಾಯಚೂರಿಗೆ ಕರೆದೊಯ್ದು ಸ್ಥಳ ಮಹಜರು ಕೂಡ ನಡೆಸಿದ್ದರು. ಇಂದು ಪೊಲೀಸರ ಕಷ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಾಲಾಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. https://kannadanewsnow.com/kannada/good-news-for-inter-caste-marriages-state-govt-to-provide-incentives-of-up-to-rs-2-lakh/ https://kannadanewsnow.com/kannada/indias-richest-people-cross-1300-for-the-first-time-by-more-than-75/

Read More

ಬೆಂಗಳೂರು: ನಿನ್ನೆ ಕಾರ್ಯಕ್ರಮವೊಂದರಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಕುಂಕುಮ ಹಣೆಗೆ ಇಟ್ಕೊಳ್ಳೋದಕ್ಕೆ ನಿರಾಕರಿಸಿದ್ದರು. ಸೋ ಆರ್.ಅಶೋಕ್ ಗೆ ಕುಂಕುಮ ಎಂದರೆ ಅಲರ್ಜಿ, ಅಸಹ್ಯವೇ ಎಂಬುದಾಗಿ ಕಾಂಗ್ರೆಸ್ ಪ್ರಶ್ನಿಸಿದೆ. ಈ ಕುರಿತು ಎಕ್ಸ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ಪಕ್ಷವು, ಆರ್.ಅಶೋಕ್  ಅವರಿಗೆ ಕುಂಕುಮ ಎಂದರೆ ಅಲರ್ಜಿಯೇ, ಅಸಹ್ಯವೇ? ಕುಂಕುಮ ಹಚ್ಚಲು ಬಂದರೆ ಹೌಹಾರಿ ನಿರಾಕರಿಸುವ ಅಶೋಕ್ ಅವರ ಮೂಲಕ ಬಿಜೆಪಿಯವರ ಬೂಟಾಟಿಕೆಯ ಹುಸಿ ಧಾರ್ಮಿಕತೆ ನಾಟಕ ಬಯಲಾಗಿದೆ ಎಂದಿದೆ. ಕೇಸರಿ ಶಾಲು, ಕುಂಕುಮ ಮುಂತಾದವುಗಳು ಬಿಜೆಪಿಗರ ಯುವ ಸಮುದಾಯವನ್ನು ದಿಕ್ಕು ತಪ್ಪಿಸುವ ಟೂಲ್ ಕಿಟ್ ಹೊರತು ಬಿಜೆಪಿಗರ ಅಸಲಿ ಆಚರಣೆಯಲ್ಲ ಎಂಬುದಾಗಿ ಕಿಡಿಕಾರಿದೆ. ಬೊಮ್ಮಾಯಿಯವರು ಕುಂಕುಮಾವನ್ನು ಉಜ್ಜಿ ಉಜ್ಜಿ ಅಳಿಸಿಕೊಂಡರೆ, ಅಶೋಕ್ ಅವರು ಹಚ್ಚಿಕೊಳ್ಳಲು ನಿರಾಕರಿಸುತ್ತಾರೆ, ನಿಮ್ಮ ನಾಯಕರಿಗೆ ಕುಂಕುಮಕ್ಕಿಂತ ಮೇಕಪ್ ಮುಖ್ಯವೇ ಬಿಜೆಪಿ? ಎಂದು ಪ್ರಶ್ನಿಸಿದೆ. https://twitter.com/INCKarnataka/status/1772159213524951405 https://kannadanewsnow.com/kannada/good-news-for-inter-caste-marriages-state-govt-to-provide-incentives-of-up-to-rs-2-lakh/ https://kannadanewsnow.com/kannada/indias-richest-people-cross-1300-for-the-first-time-by-more-than-75/

Read More

ನವದೆಹಲಿ: ಹೆಲ್ತ್‌ ಕೇರ್‌ ಗ್ಲೋಬಲ್ ಎಂಟರ್ಪ್ರೈಸಸ್ ಲಿಮಿಟೆಡ್, ಭಾರತದ ಅತಿದೊಡ್ಡ ಕ್ಯಾನ್ಸರ್ ಆರೈಕೆ ಜಾಲ, ಎಚ್‌ಸಿಜಿ ಕೇರ್ ಆಪ್‌ ಅನ್ನು ಪ್ರಾರಂಭಿಸಿದೆ. ಇದು ಆಂಕೊಲಾಜಿ ಆರೈಕೆ ವಿಭಾಗದಲ್ಲಿ ಇದು ಈ ರೀತಿಯ ಮೊದಲ ಪ್ರಯತ್ನ. ವೈಯಕ್ತಿಕ ಕ್ಯಾನ್ಸರ್ ಆರೈಕೆಯನ್ನು ಸುಲಭವಾಗಿ, ನಿರಂತರವಾಗಿ ಮತ್ತು ಪೂರ್ವಭಾವಿಯಾಗಿ ಕ್ಯಾನ್ಸರ್ ರೋಗಿಗಳಿಗೆ, ಅವರು ಎಲ್ಲಿದ್ದರೂ ಸುಲಭವಾಗಿ ಲಭ್ಯವಾಗುವಂತೆ ಮಾಡಲು ಈ ಅಪ್ಲಿಕೇಶನ್ ಅನ್ನು ವಿನ್ಯಾಸಗೊಳಿಸಲಾಗಿದೆ. ಎಚ್‌ಸಿಜಿ ಕೇರ್ ಅಪ್ಲಿಕೇಶನ್ ಒಂದು ಡ್ಯಾಶ್‌ ಬೋರ್ಡ್‌ ನಲ್ಲಿ ಕ್ಯಾನ್ಸರ್ ಆರೈಕೆಯಲ್ಲಿ ಸಮಗ್ರ ಡಿಜಿಟಲ್ ಸೇವೆಗಳನ್ನು ಒದಗಿಸುತ್ತದೆ. ಇದು ಕ್ಯಾನ್ಸರ್ ಇರುವವರಿಗೆ ವೈದ್ಯರ ನೇಮಕಾತಿಗಳನ್ನು ಕಾಯ್ದಿರಿಸಲು, ಎಚ್‌ಸಿಜಿ ಸಂಸ್ಥೆಗಳಲ್ಲಿ ತಮ್ಮ ಆಯ್ಕೆಯ ಯಾವುದೇ ಆಸ್ಪತ್ರೆ ಅಥವಾ ಡೇ ಕೇರ್‌ ಕೇಂದ್ರವನ್ನು ಆಯ್ಕೆ ಮಾಡಲು ಅನುವು ಮಾಡಿಕೊಡುತ್ತದೆ. ಅವರು ಮತ್ತು ಅವರ ಕುಟುಂಬಗಳು ತಮ್ಮ ವೈದ್ಯಕೀಯ ವರದಿಗಳನ್ನು ಹಂಚಿಕೊಳ್ಳಬಹುದು. ಕ್ಯಾನ್ಸರ್ ತಜ್ಞರನ್ನು ಸಂಪರ್ಕಿಸಬಹುದು ಮತ್ತು ಅವರ ಸ್ಮಾರ್ಟ್‌ ಫೋನ್‌ ಗಳಲ್ಲಿ ವೀಡಿಯೊ ಕರೆ ಮೂಲಕ ಅವರೊಂದಿಗೆ ವರ್ಚುವಲ್ ಸಂವಹನ ನಡೆಸಬಹುದು. ಇದು…

Read More

ಮಾಸ್ಕೋ: ಇಸ್ಲಾಮಿಕ್ ಸ್ಟೇಟ್ ಹೇಳಿಕೊಂಡ ದಾಳಿಯ ನಂತರ ರಷ್ಯಾ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಿದ್ದರಿಂದ ಮಾಸ್ಕೋದಲ್ಲಿ ನಡೆದ ಕನ್ಸರ್ಟ್ ಹಾಲ್ ದಾಳಿಯ ಎಲ್ಲಾ ನಾಲ್ವರು ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಸುದ್ದಿ ಸಂಸ್ಥೆ ಎಎಫ್ಪಿ ವರದಿಯ ಪ್ರಕಾರ, ಎಲ್ಲಾ ನಾಲ್ವರು ಶಂಕಿತರ ವಿರುದ್ಧ ಭಯೋತ್ಪಾದನೆ ಆರೋಪ ಹೊರಿಸಲಾಗಿದ್ದು, ಜೀವಾವಧಿ ಶಿಕ್ಷೆಯನ್ನು ಎದುರಿಸುತ್ತಿದ್ದಾರೆ ಎಂದು ಮಾಸ್ಕೋದ ಬಾಸ್ಮನ್ನಿ ಜಿಲ್ಲಾ ನ್ಯಾಯಾಲಯ ತಿಳಿಸಿದೆ. ಅವರ ಬಂಧನವನ್ನು ಮೇ.22ರವರೆಗೆ ನಿಗದಿಪಡಿಸಲಾಗಿದೆ ಆದರೆ ಅವರ ವಿಚಾರಣೆಯ ದಿನಾಂಕವನ್ನು ಅವಲಂಬಿಸಿ ವಿಸ್ತರಿಸಬಹುದು. ಎಎಫ್ಪಿ ವರದಿಯ ಪ್ರಕಾರ, ಇಬ್ಬರು ಪ್ರತಿವಾದಿಗಳು ತಪ್ಪೊಪ್ಪಿಕೊಂಡಿದ್ದಾರೆ ಮತ್ತು ಅವರಲ್ಲಿ ಒಬ್ಬರು ತಜಕಿಸ್ತಾನದವರಾಗಿದ್ದು, “ಸಂಪೂರ್ಣವಾಗಿ ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ” ಎಂದು ನ್ಯಾಯಾಲಯ ಹೇಳಿದೆ. ಮಾಸ್ಕೋದ ಉತ್ತರ ಉಪನಗರ ಕ್ರಾಸ್ನೊಗೊರ್ಸ್ಕ್ನ ಕ್ರೋಕಸ್ ಸಿಟಿ ಹಾಲ್ನಲ್ಲಿ ಬಂದೂಕುಧಾರಿಗಳು ಗುಂಡು ಹಾರಿಸಿದ ನಂತರ ಶುಕ್ರವಾರ ನಡೆದ ದಾಳಿಯಲ್ಲಿ ಈವರೆಗೆ 137 ಜನರು ಸಾವನ್ನಪ್ಪಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು “ಅನಾಗರಿಕ ಭಯೋತ್ಪಾದಕ ದಾಳಿಗೆ” ಕಾರಣರಾದವರನ್ನು ಶಿಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಉಕ್ರೇನ್ ಗೆ…

Read More

ತಿರುವನಂತಪುರಂ: ಕೇರಳದ ಉಳಿದ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಯನಾಡ್ ಕ್ಷೇತ್ರದಲ್ಲಿ ತನ್ನ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದೆ. ಶ್ರೀ ಶಂಕರ ಸಂಸ್ಕೃತ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಕೆ.ಎಸ್.ರಾಧಾಕೃಷ್ಣನ್ ಮತ್ತು ನಟ ಜಿ.ಕೃಷ್ಣಕುಮಾರ್ ಕ್ರಮವಾಗಿ ಎರ್ನಾಕುಲಂ ಮತ್ತು ಕೊಲ್ಲಂ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷ ಭಾನುವಾರ ಪ್ರಕಟಿಸಿದೆ. https://twitter.com/surendranbjp/status/1771937671893639346 ಸರ್ಕಾರಿ ಕಾಲೇಜಿನ ಮಾಜಿ ಪ್ರಾಂಶುಪಾಲ ಟಿ.ಎನ್.ಸರಸು ಅವರು ಉತ್ತರ ಪಾಲಕ್ಕಾಡ್ ಜಿಲ್ಲೆಯ ಅಲತೂರ್ ನಿಂದ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಸಿಪಿಐ (ಎಂ) ನೇತೃತ್ವದ ಎಲ್ಡಿಎಫ್ ಪ್ರಾಬಲ್ಯ ಹೊಂದಿರುವ ದಶಕಗಳಷ್ಟು ಹಳೆಯ ದ್ವಿಪಕ್ಷೀಯ ರಾಜಕೀಯವನ್ನು ಮುರಿಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಪಕ್ಷವು ಈ ಹಿಂದೆ 12 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಅದರ ಮಿತ್ರ ಪಕ್ಷ ಬಿಡಿಜೆಎಸ್ ರಾಜ್ಯದಲ್ಲಿ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಸಾಂಪ್ರದಾಯಿಕ ಕಾಂಗ್ರೆಸ್ ಭದ್ರಕೋಟೆಯಾದ ವಯನಾಡ್ನಲ್ಲಿ ಸುರೇಂದ್ರನ್ ಅವರ ಅನಿರೀಕ್ಷಿತ ಉಮೇದುವಾರಿಕೆಯೊಂದಿಗೆ, ರಾಹುಲ್ ಗಾಂಧಿ ವಿರುದ್ಧ ಪ್ರಬಲ…

Read More

ಬೆಂಗಳೂರು: ರಾಜ್ಯ ಸರ್ಕಾರದ ಯೋಜನೆಗಳಿಗೆ ಅವರೇ ಹಣ ಹೊಂದಿಸಿಕೊಳ್ಳಬೇಕು, ಕೇಂದ್ರ ಸರ್ಕಾರವನ್ನು ಕೇಳಬಾರದು ಎನ್ನುವ ನಿರ್ಮಲಾ ಸೀತಾರಾಮನ್ ಅವರ ಯಜಮಾನಿಕೆಯ ಧೋರಣೆ ಅತ್ಯಂತ ಖಂಡನೀಯ, ಈ ಹೇಳಿಕೆ ಆರುವರೆ ಕೋಟಿ ಕನ್ನಡಿಗರಿಗೆ ತೋರಿರುವ ಅಗೌರವ ಮತ್ತು ಮಾಡಿರುವ ಅವಮಾನ ಎಂದು ತಿಳಿದುಕೊಳ್ಳಬೇಕಾಗುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಶತಾಯಗತಾಯ ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಸೃಷ್ಟಿಸಿ ಬಡವರಿಗೆ ನೀಡಲಾಗಿರುವ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವಂತೆ ಮಾಡಬೇಕೆಂಬ ದುರಾಲೋಚನೆ ಕೇಂದ್ರ ಸರ್ಕಾರಕ್ಕೆ ಇದೆ ಎನ್ನುವುದು ಕನ್ನಡಿಗರಿಗೆ ಈಗ ಅರ್ಥವಾಗಿದೆ. ಇದಕ್ಕೆ ತಕ್ಕ ಉತ್ತರವನ್ನು ರಾಜ್ಯದ ಮತದಾರರು ಲೋಕಸಭಾ ಚುನಾವಣೆಯಲ್ಲಿ ನೀಡಲಿದ್ದಾರೆ. ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರೇ, ನಾವು ನಮ್ಮ ಗ್ಯಾರಂಟಿ ಯೋಜನೆಗಳಿಗೆ ವಿಶೇಷವಾದ ಅನುದಾನ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಬೇಡಿಕೊಳ್ಳುತ್ತಿಲ್ಲ, ಈ ಯೋಜನೆಗಳಿಗೆ ಬೇಕಿರುವ ಅನುದಾನವನ್ನು ಬಜೆಟ್ ನಲ್ಲೇ ಮೀಸಲಿಟ್ಟಿದ್ದೇವೆ ಎಂದಿದ್ದಾರೆ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿರುದ್ದ ಸಿಡಿದೆದ್ದಿರುವ ಕನ್ನಡಿಗರ ಕೂಗಿಗೆ ರಾಜ್ಯ ಸರ್ಕಾರ…

Read More

ಬೆಂಗಳೂರು: ನಗರದಲ್ಲಿ ನೀರಿನ ಆಹಾಕಾರ ಎದ್ದಿದೆ. ನೀರಿನ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ನೀರಿನ ಸಮಸ್ಯೆಯಿಂದಾಗಿ ಪೋಲು ಮಾಡೋದಕ್ಕೆ ತಡೆಯೋ ಸಲುವಾಗಿ ದಂಡದ ಕಠಿಣ ಕಾನೂನು ಜಾರಿಗೊಳಿಸಲಾಗಿತ್ತು. ಇದನ್ನು ಮೀರಿ, ಪೋಲು ಮಾಡಿದಂತ ಸಿಲಿಕಾನ್ ಸಿಟಿ ಜನತೆಗೆ 1.10 ಲಕ್ಷ ದಂಡವನ್ನು ವಿಧಿಸಿದೆ. ಬೆಂಗಳೂರಲ್ಲಿ ನೀರು ಪೋಲು ಮಾಡುವುದನ್ನು ತಡೆಗಟ್ಟೋದಕ್ಕಾಗಿ ಕುಡಿಯುವ ನೀರು ಹೊರತಾಗಿ ಬೇರೆ ಯಾವುದೇ ಕೆಲಸಕ್ಕೆ ನೀರು ಬಳಸದಂತೆ ಜಲಮಂಡಳಿ ಎಚ್ಚರಿಕೆ ನೀಡಿತ್ತು. ವಾಹನ ತೊಳೆಯೋದಕ್ಕೆ, ಗಿಡಗಳಿಗೆ ನೀರು ಹಾಕೋದು ಸೇರಿದಂತೆ ವಿವಿಧ ಕಾರಣಗಳಿಗೆ ಅನಗತ್ಯವಾಗಿ ನೀರು ಪೋಲು ಮಾಡದಂತೆ ಖಡಕ್ ಸೂಚನೆ ನೀಡಿತ್ತು. ಜಲ ಮಂಡಳಿಯ ಎಚ್ಚರಿಕೆಯನ್ನು ಮೀರಿದಂತ ಬೆಂಗಳೂರು ಮಂದಿಯಲ್ಲಿ ಕೆಲವರು ಗಿಡಗಳಿಗೆ ನೀರು ಹಾಕಿದವರು, ರಸ್ತೆಗೆ ಸುರಿದವರು, ವಾಹನ ತೊಳೆಯೋದಕ್ಕೆ ಬಳಸಿದವರಿಗೆ ದಂಡದ ಬಿಸಿಯನ್ನು ಮುಟ್ಟಿಸಿದೆ. ನೀರು ಪೋಲು ಮಾಡಿದವರಿಗೆ 5000 ದಂಡ ಹಾಕೋದಾಗಿ ಆದೇಶಿಸಿದಂತ ಜಲಮಂಡಳಿಯು, ಅದರಂತೆ ಬೆಂಗಳೂರಲ್ಲಿ ವಿವಿಧ ವಲಯಗಳಲ್ಲಿ ದಂಡದ ರೂಪದಲ್ಲಿ ರೂ.1.10 ಲಕ್ಷವನ್ನು ವಸೂಲಿ ಮಾಡಿದೆ. https://kannadanewsnow.com/kannada/this-is-the-job-of-a-traffic-policeman-read-this-news-you-are-guaranteed-to-say-hats-off/…

Read More

ಮುಂಬೈ : ಭಾರತೀಯ ನೌಕಾಪಡೆಯಿಂದ ಬಂಧಿಸಲ್ಪಟ್ಟ 35 ಸೊಮಾಲಿಯಾ ಕಡಲ್ಗಳ್ಳರನ್ನು ಮುಂಬೈ ನ್ಯಾಯಾಲಯವು ಭಾನುವಾರ 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್ಎಸ್ ಕೋಲ್ಕತಾ ಮಾರ್ಚ್ 15 ರಂದು ಪ್ರಾರಂಭವಾದ 40 ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ನಂತರ ಕಡಲ್ಗಳ್ಳರನ್ನು ಬಂಧಿಸಿತ್ತು. ಭಾರತೀಯ ಯುದ್ಧನೌಕೆ ಐಎನ್ಎಸ್ ಕೋಲ್ಕತಾ ಮಾರ್ಚ್ 16 ರಂದು ಎಲ್ಲಾ 35 ಕಡಲ್ಗಳ್ಳರನ್ನು ಯಶಸ್ವಿಯಾಗಿ ಮೂಲೆಗುಂಪು ಮಾಡಿ ಶರಣಾಗುವಂತೆ ಒತ್ತಾಯಿಸಿತು. ಕಡಲ್ಗಳ್ಳರ ಹಡಗಿನಿಂದ 17 ಸಿಬ್ಬಂದಿಯನ್ನು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಸ್ಥಳಾಂತರಿಸುವುದನ್ನು ಖಚಿತಪಡಿಸಿದೆ ಎಂದು ಭಾರತೀಯ ನೌಕಾಪಡೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಕಳೆದ 40 ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ, ಐಎನ್ಎಸ್ ಕೋಲ್ಕತ್ತಾ ಭಾರತೀಯ ಕರಾವಳಿಯ ತೀರದಿಂದ ಸುಮಾರು 2600 ಕಿ.ಮೀ ದೂರದಲ್ಲಿ ಚಲಿಸುತ್ತಿದ್ದ ದಾಳಿಗೊಳಗಾದ ಕಡಲ್ಗಳ್ಳರ ಹಡಗು ರುಯೆನ್ ಅನ್ನು ತಡೆದಿದೆ. ಮಾಪನಾಂಕಿತ ಕ್ರಮಗಳ ಮೂಲಕ ಕಡಲ್ಗಳ್ಳರ ಹಡಗನ್ನು ನಿಲ್ಲಿಸುವಂತೆ ಒತ್ತಾಯಿಸಿದೆ. ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸುವ ಮತ್ತು ತೊಂದರೆಗೀಡಾದ ಹಡಗಿನ ಸಂಪೂರ್ಣ ನಿಯಂತ್ರಣವನ್ನು…

Read More

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಬಾರಿ ಉತ್ತರ ಕನ್ನಡ ಜಿಲ್ಲೆಯಿಂದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಮಿಸ್ ಆಗಿದ್ದು, ವಿಶ್ವೇಶ್ವರ ಹೆಗೆಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ. ಉಜಿಯಾರ್ಪುರದಿಂದ ನಿತ್ಯಾನಂದ ರೈ, ಬೇಗುಸರಾಯ್ನಿಂದ ಗಿರಿರಾಜ್ ಸಿಂಗ್, ಪಾಟ್ನಾ ಸಾಹಿಬ್ನಿಂದ ರವಿಶಂಕರ್ ಪ್ರಸಾದ್, ಮಂಡಿಯಿಂದ ಕಂಗನಾ ರನೌತ್, ಕುರುಕ್ಷೇತ್ರದಿಂದ ನವೀನ್ ಜಿಂದಾಲ್, ದುಮ್ಕಾದಿಂದ ಸೀತಾ ಸೊರೆನ್, ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಚಿಕ್ಕಬಳ್ಳಾಪುರದಿಂದ ಕೆ ಸುಧಾಕರನ್, ಸಂಬಲ್ಪುರದಿಂದ ಧರ್ಮೇಂದ್ರ ಪ್ರಧಾನ್, ಬಾಲಸೋರ್ನಿಂದ ಪ್ರತಾಪ್ ಸಾರಂಗಿ, ಪುರಿಯಿಂದ ಸಂಬಿತ್ ಪಾತ್ರಾ, ಭುವನೇಶ್ವರದಿಂದ ಅರುಣ್ ಸಾರಂಗಿ, ಭುವನೇಶ್ವರದಿಂದ ಅರುಣ್ ಸಾರಂಗಿ ಕಣದಲ್ಲಿದ್ದಾರೆ. ಜುನಾಗಢದಿಂದ ರಾಜೇಶ್ ಚುಡಾಸಮಾ, ಮೆಹ್ಸಾನಾದಿಂದ ಹರಿ ಪಟೇಲ್, ಸಬರ್ಕಾಂತದಿಂದ ಶಭನಾ ಬೆನ್ ಬರಿಯಾ, ವಡೋದರಾದಿಂದ ಡಾ.ಹೇಮಂಗ್ ಜಿಶಿ, ಅಮ್ರೇಲಿಯಿಂದ ಭರತ್ ಭಾಯ್ ಸುತಾರಿಯಾ, ಸುರೇಂದ್ರನಗರದಿಂದ ಚಂದುಭಾಯ್…

Read More

ನವದೆಹಲಿ: ಬಿಜೆಪಿಯಿಂದ ಲೋಕಸಭಾ ಚುನಾವಣೆ ಐದನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಐದನೇ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮಾಜಿ ಸಚಿವ ಕೆ ಸುಧಾಕರ್ ಅವರಿಗೆ ಟಿಕೆಟ್ ನೀಡಲಾಗಿದೆ. ಆದ್ರೇ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಲೋಕಸಭಾ ಚುನಾವಣೆಗೆ ಈ ಬಾರಿ ಟಿಕೆಟ್ ಮಿಸ್ ಆಗಿದೆ. ಈ ಕುರಿತಂತೆ ಇಂದು ಬಿಜೆಪಿ ಹೈಕಮಾಂಡ್ 5ನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ರಾಜಾ ಅಮರೇಶ್ವರ ನಾಯಕಗೆ ಟಿಕೆಟ್ ನೀಡಲಾಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಡಾ.ಕೆ ಸುಧಾಕರ್ ಅವರಿಗೆ ಟಿಕೆಟ್ ನೀಡಿದ್ರೇ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿಗೆ, ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡಲಾಗಿದೆ. https://kannadanewsnow.com/kannada/this-is-the-job-of-a-traffic-policeman-read-this-news-you-are-guaranteed-to-say-hats-off/ https://kannadanewsnow.com/kannada/former-congress-mp-naveen-jindal-announces-resignation-joins-bjp/

Read More