Author: kannadanewsnow09

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ ಪಟ್ಟಣದ ಶಾಲೆಯೊಂದರಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಅಕ್ಷಯ್ ಶಿಂಧೆ ಅವರನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ. ಥಾಣೆ ಅಪರಾಧ ವಿಭಾಗವು ಆರೋಪಿ ಅಕ್ಷಯ್ ಶಿಂಧೆ ಅವರ ಪತ್ನಿ ಸಲ್ಲಿಸಿದ ಹೊಸ ಪ್ರಕರಣದಲ್ಲಿ ಪ್ರೊಡಕ್ಷನ್ ವಾರಂಟ್ ಆಧಾರದ ಮೇಲೆ ಸಂಜೆ 5: 30 ಕ್ಕೆ ತಲೋಜಾ ಜೈಲಿನಿಂದ ವಶಕ್ಕೆ ತೆಗೆದುಕೊಂಡಿದೆ. ಆತನನ್ನು ತನಿಖೆಗಾಗಿ ಥಾಣೆಗೆ ಕರೆದೊಯ್ಯಲಾಗುತ್ತಿತ್ತು. ವಾಹನವು ಮುಂಬ್ರಾ ಬೈಪಾಸ್ ಬಳಿ ತಲುಪಿದಾಗ, ಶಿಂಧೆ ವಾಹನದಲ್ಲಿದ್ದ ಅಧಿಕಾರಿಯೊಬ್ಬರ ರಿವಾಲ್ವರ್ ಅನ್ನು ಕಸಿದುಕೊಂಡು ಎರಡು ಮೂರು ಸುತ್ತು ಗುಂಡು ಹಾರಿಸಿ ಅಧಿಕಾರಿಯನ್ನು ಗಾಯಗೊಳಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಇನ್ನೊಬ್ಬ ಅಧಿಕಾರಿ ಶಿಂಧೆ ಅವರ ಮೇಲೆ ಗುಂಡು ಹಾರಿಸಿದರು, ಅವರು ಮಾರಣಾಂತಿಕವಾಗಿ ಗಾಯಗೊಂಡರು. ಬದ್ಲಾಪುರ ಲೈಂಗಿಕ ದೌರ್ಜನ್ಯ ಭಯಾನಕ ಕಳೆದ ತಿಂಗಳು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ ಪಟ್ಟಣದ ಶಾಲೆಯ ಶೌಚಾಲಯದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಶಿಂಧೆ ಲೈಂಗಿಕ ದೌರ್ಜನ್ಯ ಎಸಗಿದ ನಂತರ ಬೀದಿಗಳಲ್ಲಿ…

Read More

ಬೆಂಗಳೂರು: ವಿಧಾನಸಭೆ ಸದಸ್ಯತ್ವದಿಂದ ಕೆ.ಮುನಿರತ್ನ ರವರನ್ನು ಅಮಾನತುಗೊಳಿಸಬೇಕೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಶ್ರೀ ಎಚ್.ಕೆ ಪಾಟೀಲ ರವರು ವಿಧಾನಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ.ಖಾದರ ಅವರಿಗೆ ಪತ್ರ ಬರೆದಿದ್ದಾರೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನೈತಿಕ ಅಧ:ಪತನಕ್ಕೆ ಕಾರಣವಾದ ಅತ್ಯಂತ ಹೇಯವಾದ, ಅಸಭ್ಯವಾದ ಭಾಷೆ ಬಳಸಿ ಕೀಳು ಅಭಿರುಚಿ ಪ್ರದರ್ಶಿಸಿದ ಈ ಘಟನೆ ಕ್ಷಮಾರ್ಹವಲ್ಲ ಎಂದು ಕಾನೂನು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ವಿಧಾನಸಭೆಯ ಸದಸ್ಯರಿಗೆ ನೈತಿಕ ಮೌಲ್ಯಗಳ ನಿಯಂತ್ರಣ ಹೇರುವ “ನೀತಿ-ನಿರೂಪಣಾ ಸಮಿತಿ” (Ethics Committee of State Legislature) ಎಂದೆಂದಿಗಿಂತಲೂ ಇಂದು ರಚಿಸಬೇಕಾದ ಅತೀ ಅವಶ್ಯಕತೆ ಇದೆ. ಸದನದ ಒಳಗೆ ಹಾಗೂ ಹೊರಗೆ ಅಸಭ್ಯವಾಗಿ ವರ್ತಿಸುವ ಸದಸ್ಯರ ವರ್ತನೆಯನ್ನು ಮೌಲ್ಯಗಳನ್ನು ಗಾಳಿಗೆ ತೂರುವ ನಡತೆಗಳನ್ನು ನಿಯಂತ್ರಿಸುವ ನಿಯಮಗಳನ್ನು ತಕ್ಷಣ ರಚಿಸಬೇಕು. ಸಂವಿಧಾನದತ್ತವಾಗಿ ಸಭಾಧ್ಯಕ್ಷರಿಗೆ ಪ್ರದತ್ತವಾಗಿರುವ ಪರಾಮಾಧಿಕಾರವನ್ನು ಚಲಾಯಿಸಿ ವಿಶೇಷ ಅಪರೂಪದ ಕ್ರಮ ಕೈಗೊಳ್ಳುವ ಮೂಲಕ ವಿಧಾನಸಭೆ ಸದಸ್ಯರಾದ ಶ್ರೀ ಕೆ.ಮುನಿರತ್ನ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಬೇಕು ಮತ್ತು…

Read More

ಬೆಂಗಳೂರು: ಈ ಬಾರಿ 21 ದಿನಗಳ ಕಾಲ ದಸರಾ ವಿದ್ಯುತ್ ದೀಪಾಲಂಕಾರ ಆಯೋಜನೆ ಮಾಡಲಾಗುತ್ತಿದೆ. ದಸರಾ ಮುಗಿದ ಬಳಿಕವೂ ಹತ್ತು ದಿನ ವಿದ್ಯುತ್ ದೀಪಾಲಂಕಾರ ವಿಸ್ತರಣೆ ಮಾಡಲಾಗಿದೆ. ಇಂದು ಮೈಸೂರಿನಲ್ಲಿ ಪೋಸ್ಟರ್ ಬಿಡುಗಡೆ ಬಳಿಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹಾದೇವಪ್ಪ ಮಾಹಿತಿ ನೀಡಿದಂತ ಅವರು, ಮೈಸೂರು ನಗರದ ಸುತ್ತಮುತ್ತ 130 ಕಿ ಮೀ ವಿದ್ಯುತ್ ದೀಪಾಲಂಕಾರಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ವಿದ್ಯುತ್ ರಥ ಸ್ಥಬ್ದಚಿತ್ರ ಸಾಗಲಿದೆ ಎಂದರು. ಅಕ್ಟೊಬರ್ 6, 7, 11, 12 ರಂದು ಡ್ರೋನ್ ಶೋ ಅಯೋಜನೆ ಮಾಡಲಾಗಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ 4 ದಿನಗಳ ಕಾಲ ಡ್ರೋನ್ ಶೋ ಆಯೋಜಿಸಲಾಗಿದೆ ಎಂದರು. ಮೈಸೂರಿನ ಹಲವು ವೃತ್ತಗಳಲ್ಲಿ ಪ್ರಜಾಪ್ರಭುತ್ವ ಸಾಗಿ ಬಂದ ಹಾದಿ, ತಾಯಿ ಭುವನೇಶ್ವರಿ, ಸೋಮನಾಥೆಶ್ವರ ದೇವಾಲಯ, ಸಂವಿಧಾನ ಪ್ರಸ್ತಾವನೆ, ಮೈಸೂರಿನ ಅರಸರಾದ ಮುಮ್ಮಡಿ ಕೃಷ್ಣರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್, ರಾಣಿ ಕೆಂಪನಂಜಮ್ಮಣಿ, ಜಯಚಾಮರಾಜೇಂದ್ರ ಒಡೆಯರ್, ಶ್ರೀಕಂಠದತ್ತ ನರಸಿಂಹ…

Read More

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಸಂದರ್ಭದಲ್ಲಿ ಈ ಬಾರಿ ಎಂಟು ದಿನಗಳ ಕಾಲ ಯುವ ಸಂಭ್ರಮ ಆಯೋಜನೆಗೆ ತೀರ್ಮಾನಿಸಲಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹಾದೇವಪ್ಪ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮಾನಸಗಂಗೋತ್ರಿಯ ಬಯಲು ರಂಗಂಮದಿರದಲ್ಲಿ ಈ ಬಾರಿ ಎಂಟು ದಿನಗಳ ಕಾಲ ಯುವ ಸಂಭ್ರಮ ಅನಾವರಣಗೊಳಿಸಲಾಗುತ್ತಿದೆ. ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 1 ರವರೆಗೆ ನಡೆಯುವ ಯುವ ಸಂಭ್ರಮ ನಡೆಯಲಿದೆ ಎಂದರು. ಸೆಪ್ಟೆಂಬರ್ 24 ರಂದು ಸ್ಯಾಂಡಲ್ ಹುಡ್ ನ ಖ್ಯಾತ ನಟ ನಟಿಯರಾದ ಶ್ರೀಮುರುಳಿ ಮತ್ತು ರುಕ್ಮಿಣಿ ವಸಂತ್ ಯುವ ಸಂಭ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಯುವ ಸಂಭ್ರಮದಲ್ಲಿ ಭಾಗಿಯಾಗಲು 470 ಕಾಲೇಜುಗಳ ವಿದ್ಯಾರ್ಥಿಗಳು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು. ಈ ಮೊದಲು ಏಳು ದಿನಗಳ ಕಾಲ ಯುವ ಸಂಭ್ರಮ ಆಯೋಜಿಸಲು ಚಿಂತಿಸಲಾಗಿತ್ತು. 7 ದಿನಗಳ ಕಾಲ ನಡೆದರೆ 350 ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಸಿಗಲಿದೆ. ಹಾಗಾಗಿ ಎಲ್ಲಾ ಕಾಲೇಜುಗಳಿಗೂ ಅವಕಾಶ ಸಿಗಲೆಂದು ಒಂದು…

Read More

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಗೋಲ್ಡ್ ಕಾರ್ಡ್ ಸೇರಿದಂತೆ ವಿವಿಧ ಪಾಸುಗಳನ್ನು ಆನ್ ಲೈನ್ ಮೂಲಕ ಮಾರಾಟ ಮಾಡಲಾಗುತ್ತಿದೆ. ಸೆಪ್ಟೆಂಬರ್.26ರಿಂದ ದಸರಾ ಟಿಕೆಟ್ ಮಾರಾಟ ಆರಂಭಗೊಳ್ಳಲಿದೆ. ಈ ಕುರಿತಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆನ್ ಲೈನ್ ಮುಖಾಂತರ ದಸರಾ ಗೋಲ್ಡ್ ಕಾರ್ಡ್ ಹಾಗು ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ಸಿಗಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 5 ದಿನಗಳ ಕಾಲ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 26 ರಿಂದ 30 ರವರೆಗೂ ಮಾರಾಟಕ್ಕೆ ಅವಕಾಶ ನೀಡಲಾಗಿದೆ ಎಂದರು. ಹೀಗಿದೆ ಮೈಸೂರು ದಸರಾ ಗೋಲ್ಡ್ ಕಾರ್ಡ್ ಸೇರಿ ಇತರೆ ಟಿಕೆಟ್ ದರಪಟ್ಟಿ ಪ್ರತಿನಿತ್ಯ 1000 ದಿಂದ 1500 ಗೋಲ್ಡ್ ಕಾರ್ಡ್ ಗಳು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್.26ರಿಂದ 30ರವರೆಗೆ ಒಟ್ಟು ಐದು ದಿನಗಳ ಕಾಲ ಆನ್ ಲೈನ್ ಮೂಲಕ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಒಂದು ದಸರಾ ಗೋಲ್ಡ್ ಕಾರ್ಡ್ ಗೆ 6500 ರೂಪಾಯಿ…

Read More

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ವಿವಿದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 50 ಜನ ಪುರುಷರು ಮತ್ತು 50 ಜನ ಮಹಿಳೆಯರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಂಬಂಧ ಕಲೆ, ಸಾಹಿತ್ಯ ಜಾನಪದ, ಕೃಷಿ-ಪರಿಸರ, ವಿಜ್ಞಾನ-ತಂತ್ರಜ್ಞಾನ ಕ್ರೀಡೆ ಮುಂತಾದ ವಿವಿಧ ಕ್ಷೇತ್ರಗಳಲ್ಲಿ 10 ರಿಂದ 15 ವರ್ಷಗಳ ಗಣನೀಯ ಸೇವೆ ಸಲ್ಲಿಸಿರುವ 50 ವರ್ಷ ಮೇಲ್ಪಟ್ಟ ಸಾಧಕರು ತಮ್ಮ ಹೆಸರು, ವಿಳಾಸ ಜನ್ಮ ದಿನಾಂಕ ಸಾಧನೆಯ ಕುರಿತು 500 ಶಬ್ದಗಳ ಸಂಕ್ಷಿಪ್ತ ಕಿರು ಪರಿಚಯವನ್ನು ಕಳುಹಿಸಿ ಕೊಡಲು ಮನವಿ ಮಾಡಲಾಗಿದೆ. ಸುವರ್ಣ ಮಹೋತ್ಸವ ಪ್ರಶಸ್ತಿಗಾಗಿ ಅರ್ಜಿಯನ್ನು, ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡ ಭವನ ಜೆ.ಸಿ. ರಸ್ತೆ, ಬೆಂಗಳೂರು ರವರಿಗೆ ಅಕ್ಟೋಬರ್ 05 ರ ಒಳಗಾಗಿ ಮನವಿಗಳನ್ನು ಸಲ್ಲಿಸಬಹುದಾಗಿದೆ ಅಂದೇ ಕೊನೆಯ ದಿನಾಂಕವಾಗಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/good-news-for-people-of-bengaluru-cauvery-water-to-flow-to-houses-in-110-villages-by-vijayadashami/ https://kannadanewsnow.com/kannada/breaking-bengaluru-couple-arrested-with-drugs-worth-over-rs-1-crore/ https://kannadanewsnow.com/kannada/breaking-mahalakshmis-killer-lived-in-bengaluru-will-be-arrested-soon-commissioner-b-dayanand/

Read More

ನಿಮ್ಮ ಗಂಡನ ಜೀವನದಲ್ಲಿ ಏನಾದರೂ ಪರಿಹರಿಸಲಾಗದ ಸಮಸ್ಯೆ ಇದೆಯೇ? ಕೆಲಸದಲ್ಲಿ ಸಮಸ್ಯೆಗಳಿದ್ದರೆ, ವ್ಯವಹಾರದಲ್ಲಿ ಸಮಸ್ಯೆಗಳಿದ್ದರೆ, ಆರ್ಥಿಕ ಸಮಸ್ಯೆಗಳಿದ್ದರೆ, ಸಾಲದ ಸಮಸ್ಯೆಗಳಿದ್ದರೆ, ಶಾಂತಿಯುತವಾಗಿ ಬದುಕಲು ಸಾಧ್ಯವಾಗದಿದ್ದರೆ, ಅವರಿಗೆ ಈ ಪೂಜೆಯನ್ನು ಮಾಡಿ. ನಿಮ್ಮ ಪತಿಗೆ ಇರುವ ಒಂದು ದೊಡ್ಡ ಸಮಸ್ಯೆ ಕನಿಷ್ಠ 11 ದಿನಗಳಲ್ಲಿ ಗುಣವಾಗುತ್ತದೆ. ಅದು ಕಾರ್ಯರೂಪಕ್ಕೆ ಬರದಿದ್ದರೆ, ಸಮಸ್ಯೆಯನ್ನು ಪರಿಹರಿಸಲು ದೇವರು ನಿಮಗೆ ಕೆಲವು ರೀತಿಯ ಉಚಿತ ಸಮಯವನ್ನು ತೋರಿಸುತ್ತಾನೆ. ಗಂಡನ ಶ್ರೇಯೋಭಿವೃದ್ಧಿಗಾಗಿ ಹೆಂಡತಿ ಮಾಡಬೇಕಾದ ಆಧ್ಯಾತ್ಮಿಕ ಪೂಜೆ ಯಾವುದು? ಕಂಡುಹಿಡಿಯಲು ಪೋಸ್ಟ್ ಅನ್ನು ಓದುತ್ತಲೇ ಇರೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…

Read More

ಹಾರೋಹಳ್ಳಿ/ತೊರೆಕಾಡನಹಳ್ಳಿ : “ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳ ಜನರಿಗೆ ಕುಡಿಯಲು ನೀರು ಪೂರೈಸುವ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆಯನ್ನು ಪಿತೃ ಪಕ್ಷದ ನಂತರ ವಿಜಯ ದಶಮಿ ವೇಳೆಗೆ ನೆರವೇರಿಸುವ ಆಲೋಚನೆಯಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರಾಮನಗರ ಜಿಲ್ಲೆ ಹಾರೋಹಳ್ಳಿಯ ಕಾವೇರಿ ನೀರು ಪಂಪಿಂಗ್ ಸ್ಟೇಷನ್ ಬಳಿ ಮಾಧ್ಯಮ ಪ್ರತಿಕ್ರಿಯೆ ಹಾಗೂ ಮಂಡ್ಯ ಜಿಲ್ಲೆ ಮಳವಳ್ಳಿಯ ತೊರೆಕಾಡನಹಳ್ಳಿಯ ನೀರು ಶುದ್ಧೀಕರಣ ಮತ್ತು ಪಂಪಿಂಗ್ ಸ್ಟೇಷನ್ ಕಚೇರಿಯಲ್ಲಿ ನಡೆದ ಮಾಧ್ಯಮ ಗೋಷ್ಟಿಯಲ್ಲಿ ಸೋಮವಾರ ಮಾತನಾಡಿದರು. “ಬೆಂಗಳೂರು ಜನರಿಗೆ ಟ್ಯಾಂಕರ್ ಮೂಲಕ ನೀರು ಕೊಡುವುದನ್ನು ತಪ್ಪಿಸಿ ಮನೆ, ಮನೆಗೂ ಕುಡಿಯುವ ನೀರು ಹರಿಸುವುದು ನಮ್ಮ ಸಂಕಲ್ಪ. ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರಿರುವ 110 ಹಳ್ಳಿಗಳಿಗೆ ಕಾವೇರಿ ನೀರು ನೀಡಬೇಕು ಎಂದು ಕಾಂಗ್ರೆಸ್ ಸರ್ಕಾರ ಈ ಯೋಜನೆ ಆರಂಭಿಸಿತ್ತು. ಈ ಯೋಜನೆ ಜಾರಿಗೆ ಇದ್ದ ಅಡಚಣೆಗಳನ್ನು ಹಂತ, ಹಂತವಾಗಿ ನಿವಾರಿಸಲಾಗಿದೆ. ಅನೇಕ ಕಡೆಗಳಲ್ಲಿ…

Read More

ನವದೆಹಲಿ: ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಕ್ಲೇಡ್ 1 ಪ್ರಕರಣ ವರದಿಯಾಗಿದೆ. ಹೀಗಾಗಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿರುವುದಾಗಿ ಮೂಲಗಳು ತಿಳಿಸಿವೆ. ಭಾರತವು ಸೋಮವಾರ ಎಂಪೋಕ್ಸ್ನ ಕ್ಲೇಡ್ 1 ಬಿ ತಳಿಯ ಮೊದಲ ಪ್ರಕರಣವನ್ನು ವರದಿ ಮಾಡಿದೆ. ರೋಗಿಯು ಕೇರಳದ ಮಲಪ್ಪುರಂ ಮೂಲದವರು. ಅವರು ದುಬೈನಿಂದ ಮರಳಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಪ್ರಕಾರ, ಎಂಪೋಕ್ಸ್ ವೈರಸ್ನ ಎರಡು ವಿಭಿನ್ನ ತಳಿಗಳಿವೆ – ಕ್ಲೇಡ್ 1 ಮತ್ತು ಕ್ಲೇಡ್ 2. ಡಬ್ಲ್ಯುಎಚ್ಒ ಕ್ಲೇಡ್ 1 ಬಿ ಸ್ಟ್ರೈನ್ ಅನ್ನು ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿತು. ಈ ತಿಂಗಳ ಆರಂಭದಲ್ಲಿ, ಕ್ಲೇಡ್ 2 ನ ಮೊದಲ ಎಂಪೋಕ್ಸ್ ಪ್ರಕರಣ ಭಾರತದಲ್ಲಿ ದೃಢಪಟ್ಟಿತು. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಕ್ಲೇಡ್ 2 ಸ್ಟ್ರೈನ್ ಪ್ರಸ್ತುತ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯ ಭಾಗವಲ್ಲ. ಈ ಹಿಂದೆ, ಜುಲೈ 2022 ರಿಂದ ಭಾರತದಲ್ಲಿ ವರದಿಯಾದ 30 ಪ್ರಕರಣಗಳು ಕ್ಲೇಡ್ 2 ಸ್ಟ್ರೈನ್ನಿಂದ ಉಂಟಾಗಿವೆ. https://kannadanewsnow.com/kannada/muda-scam-against-cm-siddaramaiah-hc-to-pronounce-verdict-at-12-noon-tomorrow/…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ನಂತ್ರ, ನಾಳೆ ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ತೀರ್ಪನ್ನು ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದ್ದಾರೆ. ಈ ಮೂಲಕ ಮುಡಾ ಹಗರಣದ ಸಿಎಂ ಭವಿಷ್ಯ ನಾಳೆ ನಿರ್ಧಾರವಾಗಲಿದೆ. https://kannadanewsnow.com/kannada/maharashtra-govt-approves-proposal-to-name-pune-airport-after-jagadguru-sant-tukaram-maharaj/ https://kannadanewsnow.com/kannada/breaking-bengaluru-couple-arrested-with-drugs-worth-over-rs-1-crore/ https://kannadanewsnow.com/kannada/breaking-mahalakshmis-killer-lived-in-bengaluru-will-be-arrested-soon-commissioner-b-dayanand/

Read More