Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು : ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಮತ್ತೊಂದು ತೋಳ ಐದು ಮರಿಗಳಿಗೆ ಜನ್ಮ ನೀಡಿದ್ದು, ಸಂರಕ್ಷಿತ ತೋಳ ಧಾಮದಲ್ಲಿ ಅಳಿವಿನಂಚಿನಲ್ಲಿರುವ ಬೂದು ತೋಳ (ಇಂಡಿಯನ್ ಗ್ರೇ ಉಲ್ಫ್)ದ ಸಂತತಿಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಾಧ್ಯಮ ಹೇಳಿಕೆಯಲ್ಲಿ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿರುವ ಸುಮಾರು 332 ಹೆಕ್ಟರ್ ಬಂಕಾಪೂರ ತೋಳ ಧಾಮದ ಸಂರಕ್ಷಣೆಗೆ ಅರಣ್ಯ ಇಲಾಖೆ ಕಾಳಜಿ ವಹಿಸಿದ್ದು, ಇದು ವನ್ಯಜೀವಿಗಳಿಗೆ ಸುರಕ್ಷಿತ ತಾಣವಾಗಿದೆ. ತೋಳಗಳ ಸಂತತಿಯಲ್ಲಿ ಹೆಚ್ಚಳಕ್ಕೂ ಇದೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಕಳೆದ ತಿಂಗಳು ಇದೇ ಕುರುಚಲು ಕಾಡಿನಲ್ಲಿ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿತ್ತು, ಈಗ ಮತ್ತೊಂದು ತೋಳ ಐದು ಮರಿಗೆ ಜನ್ಮಕೊಟ್ಟಿದೆ. ನೈಸರ್ಗಿಕ ಗುಹೆಗಳು, ಬೆಟ್ಟ ಗುಡ್ಡಗಳನ್ನೂ ಹೊಂದಿರುವ ಈ ಧಾಮದಲ್ಲಿ, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿಯೇ ಮೊದಲಾದ ಹಲವು ವನ್ಯಜೀವಿಗಳಿವೆ. ಕಳ್ಳಬೇಟೆ ತಡೆಗೂ ಇಲಾಖೆ ಕಟ್ಟು ನಿಟ್ಟಿನ ಕ್ರಮ…
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಫೆಬ್ರವರಿ 14 ರಂದು ಮುಂಬರುವ ಚಾಂಪಿಯನ್ಸ್ ಟ್ರೋಫಿಗಾಗಿ ದಾಖಲೆಯ ಒಟ್ಟು 6.9 ಮಿಲಿಯನ್ ಡಾಲರ್ ಬಹುಮಾನವನ್ನು ಘೋಷಿಸಿದೆ. ಇದು 2017 ರಲ್ಲಿ ಯುಕೆಯಲ್ಲಿ ನಡೆದ ಎಂಟು ತಂಡಗಳ ಈವೆಂಟ್ನ ಹಿಂದಿನ ಆವೃತ್ತಿಗೆ ಹೋಲಿಸಿದರೆ ಒಟ್ಟು 4.5 ಮಿಲಿಯನ್ ಡಾಲರ್ ಬಹುಮಾನದ ಮೊತ್ತಕ್ಕಿಂತ ಶೇಕಡಾ 53 ರಷ್ಟು ಹೆಚ್ಚಾಗಿದೆ. ಪಂದ್ಯಾವಳಿಯ ವಿಜೇತರು 2.24 ಮಿಲಿಯನ್ ಡಾಲರ್ (ಅಂದಾಜು 19.45 ಕೋಟಿ ರೂ.) ಬಹುಮಾನ ಮೊತ್ತದೊಂದಿಗೆ ಹೊರನಡೆಯಲಿದ್ದು, ರನ್ನರ್ ಅಪ್ ತಂಡವು 2025 ರ ಚಾಂಪಿಯನ್ಸ್ ಟ್ರೋಫಿಯ ಆವೃತ್ತಿಯಲ್ಲಿ 1.12 ಮಿಲಿಯನ್ ಡಾಲರ್ (ಅಂದಾಜು 9.73 ಕೋಟಿ ರೂ.) ಗಳಿಸಲಿದೆ. ಐಸಿಸಿ ಪುರುಷರ ಟಿ 20 ವಿಶ್ವಕಪ್ಗೆ ಸಮನಾಗಿದೆ, ಅಲ್ಲಿ ಚಾಂಪಿಯನ್ಶಿಪ್ ವಿಜೇತ ತಂಡವು 2.45 ಮಿಲಿಯನ್ ಡಾಲರ್ ಭಾರಿ ವೇತನವನ್ನು ಪಡೆದುಕೊಂಡಿದೆ. ಆದಾಗ್ಯೂ, ಐಸಿಸಿ ಪುರುಷರ ಟಿ 20 ವಿಶ್ವಕಪ್ನ 2024 ರ ಆವೃತ್ತಿಯ ಬಹುಮಾನದ ಪಾಟ್ ಚಾಂಪಿಯನ್ಸ್ ಟ್ರೋಫಿಯ ಸುಮಾರು 80-90 ಪ್ರತಿಶತದಷ್ಟು 11.25…
ಬೆಂಗಳೂರು: ರಾಜ್ಯದ 43 ಕಡೆಗಳಲ್ಲಿ ಸ್ವಯಂ ಚಾಲಿತ ಡ್ರೈವಿಂಗ್ ಟೆಸ್ಟ್ ಟ್ರ್ಯಾಕ್ ಸ್ಥಾಪನೆ ಮಾಡುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ರಾಜ್ಯದ 43 ಕಡೆಗಳಲ್ಲಿ ನೂತನ ಸ್ವಯಂಚಾಲಿತ ಡ್ರೈವಿಂಗ್ ಟೆಸ್ಟ್ ಟ್ರ್ಯಾಕ್ ಮತ್ತು 11 ಕಡೆ ಸ್ವಯಂಚಾಲಿತ ಟೆಸ್ಟಿಂಗ್ ಕೇಂದ್ರಗಳನ್ನು ಈ ವರ್ಷಾಂತ್ಯದೊಳಗೆ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1890029455525220529 https://kannadanewsnow.com/kannada/entrance-exam-for-class-6-of-residential-schools-to-be-held-on-february-15/ https://kannadanewsnow.com/kannada/here-are-the-highlights-of-the-state-governments-ordinance/
ಚಿತ್ರದುರ್ಗ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಿಗೆ 06 ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು ಪ್ರವೇಶ ಪರೀಕ್ಷೆ ಫೆ. 15 ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಅಧಿಕಾರಿಗಳು ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಸೂಚನೆ ನೀಡಿದರು. ವಸತಿ ಶಾಲೆಗಳಲ್ಲಿ ಬರುವ ಶೈಕ್ಷಣಿಕ ವರ್ಷಕ್ಕೆ 06 ನೇ ತರಗತಿ ದಾಖಲಿಗೆ ಪ್ರವೇಶ ಪರೀಕ್ಷೆ ನಡೆಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿ ರನ್ನ,…
ಮ್ಯೂನಿಚ್: ಮ್ಯೂನಿಚ್ ಡೌನ್ಟೌನ್ ಬಳಿ ಗುರುವಾರ ಚಾಲಕನು ಜನರ ಗುಂಪಿಗೆ ವಾಹನವನ್ನು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 28 ಜನರು ಗಾಯಗೊಂಡಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ ಕೇಂದ್ರ ರೈಲು ನಿಲ್ದಾಣದ ಬಳಿ ದೊಡ್ಡ ಪ್ರಮಾಣದ ಪೊಲೀಸ್ ಕಾರ್ಯಾಚರಣೆಗೆ ಕಾರಣವಾಯಿತು. ಘಟನೆ ನಡೆದ ಸ್ವಲ್ಪ ಸಮಯದ ನಂತರ ಶಂಕಿತ 24 ವರ್ಷದ ಅಫ್ಘಾನ್ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಜರ್ಮನ್ ಮಾಧ್ಯಮಗಳು ವರದಿ ಮಾಡಿವೆ. ಹಿಂದಿನ ಮಾದಕವಸ್ತು ಮತ್ತು ಕಳ್ಳತನ ಸಂಬಂಧಿತ ಅಪರಾಧಗಳಿಗೆ ಸಂಬಂಧಿಸಿದಂತೆ ತಾನು ಪೊಲೀಸರಿಗೆ ಪರಿಚಿತನಾಗಿದ್ದೇನೆ ಎಂದು ಬವೇರಿಯನ್ ಆಂತರಿಕ ಸಚಿವರು ನಂತರ ದೃಢಪಡಿಸಿದರು.
ಬೆಂಗಳೂರು: ಕರ್ನಾಟಕದಲ್ಲಿ ಜಮೀನಿನ ಬೆಲೆ ತಾರಕಕ್ಕೇರಿದ್ದು, ಕೈಗಾರಿಕಾ ಹೂಡಿಕೆಗೆ ಇದು ಸವಾಲಾಗಿದೆ. ಇಂಥ ಪರಿಸ್ಥಿತಿಯಲ್ಲಿ ಜಮೀನನ್ನು ಖರೀದಿಸುವುದು ಕಷ್ಟವಾಗಿದೆ. ಎಷ್ಟೋ ಸಲ ಯೋಜನೆಯ ಹೂಡಿಕೆಗಿಂತ ಇದರ ವೆಚ್ಚವೇ ಜಾಸ್ತಿಯಾಗುತ್ತಿದೆ ಎನ್ನುವ ಉದ್ಯಮಿಗಳ ಕಳವಳ ಅರ್ಥವಾಗುತ್ತದೆ. ರಾಜ್ಯ ಸರಕಾರ ಇದನ್ನು ಬಗೆಹರಿಸಿದರೆ, ಕೇಂದ್ರ ಸರಕಾರವು ಕ್ಲಸ್ಟರ್ ಮಾದರಿಯಲ್ಲಿ ಕೈಗಾರಿಕಾ ಬೆಳವಣಿಗೆಗೆ ಸಂಪೂರ್ಣ ಸಹಕಾರ ಕೊಡಲಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಮಧ್ಯಮ, ಸಣ್ಣ ಹಾಗೂ ಸೂಕ್ಷ್ಮ ಕೈಗಾರಿಕಾ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಜಾಗತಿಕ ಹೂಡಿಕದಾರರ ಸಮಾವೇಶದಲ್ಲಿ ಅವರು ಗುರುವಾರ ರಾಜ್ಯದ 30ಕ್ಕೂ ಹೆಚ್ಚು ಸಾಧಕ ಎಂಎಸ್ಎಂಇ ಉದ್ಯಮಿಗಳಿಗೆ `ಎಸ್ಎಂಇ ಕನೆಕ್ಟ್ ಪುರಸ್ಕಾರ’ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರು ಕರ್ನಾಟಕದಲ್ಲಿ ಹೆಚ್ಚು ಹೂಡಿಕೆ ಮಾಡುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಯುಕ್ತ ಅರಬ್ ಸಂಸ್ಥಾನದ ಸೌದಿ ಅರೇಬಿಯಾ, ದೋಹಾ, ದುಬೈ ಮುಂತಾದವುಗಳೊಂದಿಗೆ ಮಾಡಿಕೊಂಡ 820 ಕೋಟಿ ರೂ. ಹೂಡಿಕೆ, ಕೆಎಲ್ಇ ಸೊಸೈಟಿ ಶಿವಶಕ್ತಿ ಶುಗರ್ಸ್ ಕಾರ್ಖಾನೆಗೆ ಮಾಡುತ್ತಿರುವ 1,000 ಕೋಟಿ ರೂ.…
ಮಂಡ್ಯ : ರೈತರು ತಮ್ಮ ಪಾಲಿನ ಹಕ್ಕಗಳನ್ನು ಪಡೆದು ಕೊಳ್ಳಲು ಅವರಿಗೆ ಶಕ್ತಿ ತುಂಬುತ್ತಾ, ಜೀವಿತಾವಧಿವರೆಗೂ ರೈತರ ಅಭಿವೃದ್ಧಿಗಾಗಿ ಹೋರಾಟ ಮಾಡಿದ ಧೀಮಂತ ರೈತನಾಯಕ ದಿ.ಪ್ರೊ.ನಂಜುಂಡಸ್ವಾಮಿ ಅವರು ಎಂದು ರೈತ ಚೈತನ್ಯ ಕೇಂದ್ರದ ಅಧ್ಯಕ್ಷ ನ.ಲಿ.ಕೃಷ್ಣ ಹೇಳಿದರು. ಮದ್ದೂರು ಪಟ್ಟಣದ ತಾಲೂಕು ರೈತ ಸಂಘ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಕನ್ನಡ ಸಾಹಿತ್ಯ ಪರಿಷತ್, ಸಂವಿಧಾನ ಸಂರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಪ್ರೊ.ನಂಜುಂಡಸ್ವಾಮಿ ಅವರ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಯಂತೋತ್ಸವ ಕಾರ್ಯಕ್ರಮವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಯವರನ್ನು ಹೇಗೆ ನೆನಪಿಸಿಕೊಳ್ಳುತ್ತೇವೆೆಯೋ ಆದೇ ರೀತಿ ಅವಿದ್ಯಾವಂತ ರೈತ ಸಮುದಾಯದಲ್ಲಿ ಕಾನೂನು ಅರಿವುಮೂಡಿಸಿ ತಮ್ಮ ಶಾಸನ ಬದ್ಧ ಹಕ್ಕುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ರೈತ ಸಂಘದ ಮೂಲಕ ಹೋರಾಟದ ಕಿಚ್ಚುಹೊತ್ತಿಸಿದ ಮಹಾನ್ ನಾಯಕ ಪ್ರೊ.ನಂಜುಂಡಸ್ವಾಮಿ ಅವರನ್ನು ಪ್ರತಿಯೊಬ್ಬ…
ಬೆಂಗಳೂರು: ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಪ್ರದೇಶದ 21.68 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿರುತ್ತದೆ. ಅದರಂತೆ ಇತ್ತೀಚೆಗೆ ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ (ಜರಗನಹಳ್ಳಿ ಸರ್ವೆ 7) ರ ಕೆರೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಕೆರೆಯ ಸರ್ವೆ ಕಾರ್ಯ ನಡೆಸಿ 21.68 ಗುಂಟೆ ಶೆಡ್ ಖಾಲಿ ಜಾಗ ಹಾಗೂ ರಸ್ತೆಯಿಂದ ಆಕ್ರಮಿತವಾಗಿದ್ದ ಪ್ರದೇಶವು ಒತ್ತುವರಿಯಾಗಿರುವುದಾಗಿ ತಿಳಿಸಿರುತ್ತಾರೆ. ಮುಂದುವರಿದು, ಕೆರೆಗಳು ವಿಭಾಗದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ರವರುಗಳು 21.68 ಗುಂಟೆ ಪ್ರದೇಶದ ಒತ್ತುವರಿಯನ್ನು ತೆರವುಗೊಳಿಸಿ ಈ ಪ್ರದೇಶಕ್ಕೆ ತಂತಿ ಬೇಲಿಯನ್ನು ಅಳವಡಿಸಲಾಗಿರುತ್ತದೆ. ಈ ಒತ್ತುವರಿ ಪ್ರದೇಶದ ಮಾರುಕಟ್ಟೆ ಮೌಲ್ಯವು ಸುಮಾರು 20 ಕೋಟಿಗಳಾಗಿರುತ್ತದೆಂದು ತಿಳಿದುಬಂದಿರುತ್ತದೆ. https://kannadanewsnow.com/kannada/good-news-for-the-people-of-bengaluru-bmtc-buses-to-ply-on-this-new-route-3/ https://kannadanewsnow.com/kannada/here-are-the-highlights-of-the-state-governments-ordinance/ https://kannadanewsnow.com/kannada/felling-of-trees-at-kanthanahalli-in-soraba-probe-report-ready-action-to-be-taken-against-culprits/
ಬೆಂಗಳೂರು: ನಗರದ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭಗೊಳಿಸಲಾಗುತ್ತಿದೆ. ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಗರದ ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮಾರ್ಗಗಳನ್ನು ದಿನಾಂಕ: 17.02.2025 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ : ಕ್ರ ಸಂ. ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ ಸಂಖ್ಯೆ ಸುತ್ತುವಳಿ ಸಂಖ್ಯೆ 1 MF-4B ಕಾಡುಗೋಡಿ ಬೆಳ್ಳಿಕೆರೆ ವೈಟ್ಫೀಲ್ಡ್, ವರ್ತೂರು, ಮುತ್ಸಂದ್ರ 2 19 ಬಿಡುವ ವೇಳೆ ಕಾಡುಗೋಡಿ ಬೆಳ್ಳಿಕೆರೆ 0805, 0900, 1000, 1115, 1210, 1330, 1425, 1545, 1645 0800, 0900, 1000, 1115, 1210, 1330, 1425, 1550, 1645, 1740 ಕ್ರ ಸಂ. ಮಾರ್ಗ ಸಂಖ್ಯೆ ಎಲ್ಲಿಂದ…
ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ ಸ್ವಾಮಿಯ ಒಂದು ಮಂತ್ರವನ್ನು ಹೇಳಿಕೊಂಡು ದೈನದಿನ ಕೆಲಸಗಳಿಗೆ ಹೋಗುವುದರಿಂದ ಯಾವುದೇ ರೀತಿಯಾದಂತಹ ನಷ್ಟ, ತೋಂದರೆ,ವ್ಯವಾಹರದ ಅಡೆತಡೆ,ಹಾಗೂ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ನಿಮ್ಮ ಜೀವನದಲ್ಲಿ ಅತಿ ಹೆಚ್ಚು ಕಷ್ಟಗಳನ್ನು ಅನುಭವಿಸುತ್ತಿದ್ದರೆ. ಜೀವನದಲ್ಲಿ ಏಳಿಗೆಯನ್ನು ಕಾಣಲು ಸಾಧ್ಯವಾಗುತ್ತಿಲ್ಲ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ನಾವು ಸೋತಿದ್ದೇವೆ…














