Author: kannadanewsnow09

ಮೈಸೂರು: ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದರು. ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ಸೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಎಚ್ಚರಿಸಿದರು. ಒಟ್ಟಾರೆಯಾಗಿ ನಾನು ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗುವವನಲ್ಲ. ಇದೆಲ್ಲಾ ನೋಡುತ್ತಾ ಕೈ ಕಟ್ಟಿ ಕೂರುವವನಲ್ಲ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. https://kannadanewsnow.com/kannada/shocking-news-this-kind-of-meat-increases-your-risk-of-dementia-explosive-information-in-study/ https://kannadanewsnow.com/kannada/bengaluru-power-outages-in-these-areas-on-august-11/

Read More

ಬೆಂಗಳೂರು: ಜಿಲ್ಲೆಯಲ್ಲಿ ವಾರ್ಷಿಕ ನಿರ್ವಹಣಾ ಕೆಲಸವನ್ನು ಬೆಸ್ಕಾಂ (BESCOM) ಅಧಿಕಾರಿಗಳು ದಿನಾಂಕ 11-08-2024ರಂದು ಕೈಗೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆ.11ರಂದು ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut) ಉಂಟಾಗಲಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಸ್ಕಾಂ, 66/11 kV ಅಬ್ಬಿಗೆರೆ MUSS” 2 nd ರನ್ 11ಕೆವಿ 1000sqmm ಕೇಬಲ್ TR-1 ರಿಂದ ಬ್ಯಾಂಕ್-1 ಮತ್ತು TR-2 ರಿಂದ ಬ್ಯಾಂಕ್-2 ಗೆ ಐಸೊಲೇಟರ್ ಕೆಲಸ ಮತ್ತು ವಾರ್ಷಿಕ ನಿರ್ವಹಣೆಗಾಗಿ, 11kv ಬ್ರೇಕರ್, ಬಸ್ GOS ನಿರ್ವಹಣೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ದಿನಾಂಕ 11-08-2024ರಂದು ಬೆಳಗ್ಗೆ 10:00ಗಂಟೆಯಿಂದ ಸಂಜೆ 4:00ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಆಗಸ್ಟ್.11ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ರಾಘವೇಂದ್ರ ಲೇಔಟ್, ಕಮ್ಮಗೊಂಡನಹಳ್ಳಿ, ಧನಪಾಲ್ ಲೇಔಟ್, ಶೆಟ್ಟಿಹಳ್ಳಿ, ಲಕ್ಷ್ಮೀಪುರ ಕ್ರಾಸ್, ಲಕ್ಷ್ಮೀಪುರ ಗ್ರಾಮ, ಶ್ರೀರಾಮ್ ಸಮೀಕ್ಷಾ ಅಪಾರ್ಟ್‌ಮೆಂಟ್, ಸಿಂಗಾಪುರ, ಭದ್ರಸ್ವಾಮಿ ಲೇಔಟ್, ಸಿಂಗಾಪುರ ಗಾರ್ಡನ್, ಅಬ್ಬಿಗೆರೆ ಗ್ರಾಮ, ನಿಸರ್ಗ…

Read More

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿನಾ ಕಾರಣ ನೋಟಿಸ್ ನೀಡುವ ಮೂಲಕ ಪಕ್ಷಪಾತದಿಂದ ವರ್ತಿಸುತ್ತಿರುವ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಈ ಕೂಡಲೇ ರಾಷ್ಟ್ರಪತಿಗಳು ವಾಪಸ್ ಕರೆಸಿಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಒತ್ತಾಯಿಸಿದ್ದಾರೆ. ಮೈಸೂರಿನಲ್ಲಿಂದು ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರನ್ನು ಮತ್ತು ರಾಜಭವನವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇವರು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರ ಕೆಡವಲು ಪ್ರಯತ್ನ ಮಾಡುತ್ತಿದ್ದು, ಅವರು ಯಶಸ್ವಿಯಾಗುವುದಿಲ್ಲ ಎಂದರು. ಅಂತಹ ದುಸ್ಸಾಹಸಕ್ಕೆ ಬಿಜೆಪಿ ಅಥವಾ ಕೇಂದ್ರ ಸರ್ಕಾರ ಕೈಹಾಕಿದರೆ ಮುಂದಿನ ಪರಿಣಾಮಗಳಿಗೆ ಅವರೇ ಹೊಣೆ ಎಂದರು. ಕೇಂದ್ರದ ಎನ್.ಡಿ.ಎ. ಸರ್ಕಾರ ರಾಜ್ಯದ ಕಾಂಗ್ರೆಸ್ ಸರ್ಕಾರದ ಮೇಲೆ ಮತ್ತು 7 ಕೋಟಿ ಜನರ ಮೇಲೆ ಪ್ರಹಾರ ಮಾಡುತ್ತಿದೆ, ಮಲತಾಯಿ ಧೋರಣೆ ಅನುಸರಿಸುತ್ತಿದೆ ಮತ್ತು ಪಕ್ಷಪಾತ ಮಾಡುತ್ತಿದೆ ಎಂದು ಆರೋಪಿಸಿದರು. ಬರ ಪರಿಹಾರ, ನೆರೆ ಪರಿಹಾರ ಮತ್ತು ರಾಜ್ಯಕ್ಕೆ ಪಂಚವಾರ್ಷಿಕ ಯೋಜನೆಯಲ್ಲಿ ಬರಬೇಕಾದ ಅನುದಾನದಲ್ಲೂ…

Read More

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಕೀ ಉತ್ತರವನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆ-3 2024ರ ವಿಷಯವಾರು ಕೀ ಉತ್ತರಗಳನ್ನು ಮಂಡಳಿಯ ಜಾಲತಾಣ http://kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ ಅಂತ ತಿಳಿಸಿದೆ. ದಿನಾಂಕ 10-08-2024ರ ನಾಳೆಯವರೆಗೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಿಂದ ಸಂಬಂಧ ಪಟ್ಟಂತ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಂಜೆ 5.30ರೊಳಗಾಗಿ ಆಕ್ಷೇಪಣೆಗಳನ್ನು ಮಂಡಳಿಯ ಚಾಲತಾಣದ ಮೂಲಕ ಸಲ್ಲಿಸುವಂತೆ ಸೂಚಿಸಿದೆ. ಇನ್ನೂ ಮಂಡಳಿಯ ಜಾಲತಾಣಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳು ಆಗಸ್ಟ್.2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಕೀ ಉತ್ತರಗಳನ್ನು ಪರಿಶೀಲಿಸಬಹುದು. ಆಕ್ಷೇಪಣೆಯನ್ನು ಸಲ್ಲಿಸಬಹುದು ಅಂತ ಹೇಳಿದೆ. https://kannadanewsnow.com/kannada/shocking-news-this-kind-of-meat-increases-your-risk-of-dementia-explosive-information-in-study/ https://kannadanewsnow.com/kannada/earthquake-threat-with-mysterious-sound-in-landslide-hit-wayanad/

Read More

ವಯನಾಡ್: ಕೇರಳದ ಭೂಕುಸಿತ ಪೀಡಿತ ವಯನಾಡ್ ಜಿಲ್ಲೆಯ ಎಡಕ್ಕಲ್ ಪ್ರದೇಶದಲ್ಲಿ ವಾಸಿಸುವ ಜನರು ಶುಕ್ರವಾರ ಭೂಮಿಯ ಕೆಳಗೆ ಬರುವ ಶಬ್ದವನ್ನು ಕೇಳಿದ್ದಾರೆ ಎಂದು ದೂರಿದ್ದಾರೆ. ಸ್ಥಳೀಯ ನಿವಾಸಿಗಳು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದೊಡ್ಡ ಶಬ್ದವನ್ನು ಕೇಳಿದ್ದೇವೆ. ಅದರೊಂದಿಗೆ ಜರ್ಕ್ ತರಹದ ಶಬ್ದ ಕೂಡ ಕೇಳಿ ಬಂದಿತು. ಇದು ಸರ್ಕಾರಿ ಅಧಿಕಾರಿಗಳನ್ನು ತನಿಖೆ ಮಾಡಲು ಪ್ರೇರೇಪಿಸಿತು. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್ಡಿಎಂಎ) ಭೂಕಂಪನ ದಾಖಲೆಗಳನ್ನು ಪರಿಶೀಲಿಸುತ್ತಿದೆ ಮತ್ತು ಏನಾದರೂ ಅಸಂಗತವಾಗಿದೆಯೇ ಎಂದು ಕಂಡುಹಿಡಿಯಲು ಸ್ಥಳೀಯ ಬೇಹುಗಾರಿಕೆಗೆ ಪ್ರಯತ್ನಿಸುತ್ತಿದೆ ಎಂದು ಹೇಳಿದೆ. “ಸದ್ಯಕ್ಕೆ ಭೂಕಂಪನ ದಾಖಲೆಗಳು ಚಲನೆಯ ಯಾವುದೇ ಸೂಚನೆಗಳನ್ನು ತೋರಿಸುವುದಿಲ್ಲ” ಎಂದು ಅದು ಹೇಳಿದೆ. ಬೆಳಿಗ್ಗೆ 10:15 ರ ಸುಮಾರಿಗೆ ಶಬ್ದ ಕೇಳಿದೆ ಎಂದು ಪಂಚಾಯತ್ ವಾರ್ಡ್ ಸದಸ್ಯರೊಬ್ಬರು ಟಿವಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ್ದಾರೆ. ಪೀಡಿತ ಪ್ರದೇಶದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://kannadanewsnow.com/kannada/shivamogga-power-outages-in-these-areas-of-sagar-taluk-on-august-11/ https://kannadanewsnow.com/kannada/7090908057/

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಕೆಲ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಆಗಸ್ಟ್.11ರ ಭಾನುವಾರದಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮೆಸ್ಕಾಂನ ಸಾಗರ ತಾಲ್ಲೂಕು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕ: 11.08.2024 ರ ಭಾನುವಾರದಂದು 110/33/11 ಕೆ.ವಿ ಸಾಗರ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿದ್ದು ಸದರಿ ದಿನಾಂಕ 11.08.2024 ರಂದು ಸಾಗರ ಪಟ್ಟಣದ ಈ ಕೆಳಗಿನ ವ್ಯಾಪ್ತಿಯಲ್ಲಿ ಪವರ್ ಕಟ್ ಆಗಲಿದೆ ಅಂತ ತಿಳಿಸಿದೆ. ಆ.11ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಎಫ್-1 ಸಾಗರ ಟೌನ್, ಎನ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-15 ಆರ್.ಎಂ.ಸಿ, ಎಫ್-17 ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದದಿಂದ ವಿದ್ಯುತ್‌ ಸಂಪರ್ಕ ಪಡೆದಿರುವ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ ಎನ್ನುವಂತೆ ಇಬ್ಬರು ಮಕ್ಕಳೊಂದಿಗೆ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಂಪಕಾಪುರ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಚಂಪಕಾಪುರದ ನಿವಾಸಿಯಾಗಿದ್ದಂತ ರಾಜೇಶ್ ಎಂಬುವರ ಪತ್ನಿ ವಾಣಿ(32) ಎಂಬುವರು ತನ್ನ ಇಬ್ಬರು ಮಕ್ಕಳಾದಂತ ಸಮರ್ಥ(12) ಹಾಗೂ ಸಂಪದ(6) ಎಂಬುವರೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ರಾತ್ರಿಯಂದು ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ನಗರ ಠಾಣೆಯ ಪಿಎಸ್ಐ ರಮೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಾವಿಯಲ್ಲಿದ್ದಂತ ವಾಣಿ, ಸಮರ್ಥ ಹಾಗೂ ಸಂಪದ ಮೃತದೇಹವನ್ನು ಹೊರತೆಗೆಯಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸರ ತನಿಖೆಯ ಬಳಿಕ ಇಬ್ಬರು ಮಕ್ಕಳೊಂದಿಗೆ ಮಹಿಳೆಯು ಆತ್ಮಹತ್ಯೆ ಹಿಂದಿನ ಕಾರಣ ತಿಳಿದು ಬರಬೇಕಿದೆ. https://kannadanewsnow.com/kannada/applications-invited-for-medical-and-paramedical-posts/ https://kannadanewsnow.com/kannada/7090908057/

Read More

ಶಿವಮೊಗ್ಗ : 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 3 ಕ್ಲಿನಿಕ್‌ಗಳಲ್ಲಿ ಖಾಲಿಯಿರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಎಂಬಿಬಿಎಸ್ ವೈದ್ಯರ -2 ಹುದ್ದೆಗೆ ಎಂಬಿಬಿಎಸ್ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂರ‍್ನ್ಶಿಪ್ ಪೂರೈಸಿರಬೇಕು. ಕಿರಿಯ ಆರೋಗ್ಯ ಸಹಾಯಕ(ಆರೋಗ್ಯ ನಿರೀಕ್ಷಣಾಧಿಕಾರಿಗಳು)ರ-3 ಹುದ್ದೆಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಕರ್ನಾಟಕ ರಾಜ್ಯದ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದ್ದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಪಡೆದಿರಬೇಕು. ಅಥವಾ ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 3 ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು. ಅಥವಾ ಪಿಯುಸಿ (ವಿಜ್ಞಾನ) ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 2 ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು. ನೇಮಕಾತಿಯು ಮೇರಿಟ್ ಕಂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲಾಗುವುದು. ಆಸಕ್ತರು ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ. ವಿಭಾಗ, ಜಿಲ್ಲಾ ಆರೋಗ್ಯ…

Read More

ಬೆಂಗಳೂರು: ಆಗಸ್ಟ್.15ರಂದು ದೇಶಾಧ್ಯಂತ ಸ್ವಾತಂತ್ರೋಯತ್ಸವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ತಿರಂಗದ ರಾಷ್ಟ್ರ ಧ್ವಜವನ್ನು ದೇಶದ ಹೆಮ್ಮೆಯ ಪ್ರತೀಕವಾಗಿ ಬಳಕೆ ಮಾಡಲಾಗುತ್ತದೆ. ಆದರೇ ಈ ಧ್ವಜ ಪ್ಲಾಸ್ಟಿಕ್ ನಿಂದ ಮಾಡಿದ್ದಾಗಿರುವಂತಿಲ್ಲ. ಬದಲಾಗಿ ಬಟ್ಟೆಯ ಧ್ವಜವನ್ನು ಬಳಸುವುದು ಕಡ್ಡಾಯವಾಗಿದೆ. ಒಂದು ವೇಳೆ ಈ ನಿಯಮ ಮೀರಿ ಬಳಕೆ ಮಾಡಿದ್ರೇ, ಅಂತವರ ವಿರುದ್ಧ ಕೇಸ್ ಫಿಕ್ಸ್ ಎಂಬುದಾಗಿ ರಾಜ್ಯ ಸರ್ಕಾರ ಎಚ್ಚರಿಸಿದೆ. ಈ ಕುರಿತಂತೆ ಭಾರತ ಸರ್ಕಾರದ  ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಗೃಹ ಮಂತ್ರಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ನಿರ್ದೇಶನ ನೀಡಿದೆ. ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತ ಧ್ವಜ ಸಂಹಿತೆ 2002 ರಡಿ ಎಲ್ಲಾ  ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕ ಪ್ರಮುಖ ರಾಷ್ಟ್ರೀಯ ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳಲ್ಲಿ ಹಾಗೂ ಸ್ವಾತಂತ್ರ‍್ಯ ದಿನಾಚರಣೆಯ ದಿನ ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ಖಡಕ್ ಆದೇಶದಲ್ಲಿ ಸೂಚಿಸಿದೆ. ಒಂದು ವೇಳೆ ಈ…

Read More

ಬೆಂಗಳೂರು: ಮಾನಹಾನಿ ಹೇಳಿಕೆ ಸಂಬಂಧದ ಪ್ರಕರಣದಲ್ಲಿ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಕಾರ್ಕಳ ಅವರ ವಿರುದ್ಧ ವಿಚಾರಣಾ ನ್ಯಾಯಾಲಯ ಜಾರಿಗೊಳಿಸಿದ್ದಂತ ವಾರೆಂಟ್ ಗೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಮಾಜಿ ಸಚಿವ ಸುನೀಲ್ ಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ. ಮೇ.14, 2023ರಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಕಾರ್ಕಳ ಅವರು ಮಾನಹಾನಿ ಹೇಳಿಕೆಯನ್ನು ನೀಡಿದ್ದರು. ಈ ಸಂಬಂಧ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಸೆಪ್ಟೆಂಬರ್.7, 2023ರಂದು ಬೆಂಗಳೂರಿನ ಸಿಜೆಎಂ ಕೋರ್ಟ್ ಗೆ ಖಾಸಗಿ ದೂರು ದಾಖಲಿಸಿದ್ದರು. ಪ್ರಮೋದ್ ಮುತಾಲಿಕ್ ಸಲ್ಲಿಸಿದ್ದಂತ ಮಾನಹಾನಿ ಹೇಳಿಕೆಯ ಖಾಸಗಿ ದೂರನ್ನು ವಿಚಾರಣೆ ನಡೆಸಿದ್ದಂತ ನ್ಯಾಯಾಲಯವು, ಸುನೀಲ್ ಕುಮಾರ್ ಗೆ ವಾರಂಟ್ ಜಾರಿಗೊಳಿಸಿತ್ತು. ಇಂತಹ ವಿಚಾರಣಾ ನ್ಯಾಯಾಲಯದ ವಾರಂಟ್ ಪ್ರಶ್ನಿಸಿ ಸುನೀಲ್ ಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಆರಂಭದಲ್ಲಿ ವಾರಂಟ್ ಗೆ ತಡೆ ನೀಡಲು ನಿರಾಕರಿಸಿತು ಆದರೂ, ಪಕ್ಷವು ವಿಪ್ ಜಾರಿಗೊಳಿಸಿದ್ದರಿಂದ ವಿಚಾರಣೆಗೆ ವಿ.ಸುನೀಲ್…

Read More