Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 2013ರಲ್ಲೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಸರ್ಕಾರಿ ಶಾಲಾ ಆವರಣದಲ್ಲಿ ಖಾಸಗಿ ಸಂಸ್ಥೆಗಳ ಕಾರ್ಯಕ್ರಮ ನಿಷೇಧ ಮಾಡಿ ಆದೇಶಿಸಲಾಗಿತ್ತು ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಗರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಶಾಲೆಗಳು, ಶಾಲೆಗಳ ಆವರಣಗಳು ಯಾವುದೇ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಗಳಿಂದ ಮುಕ್ತವಾಗಿರಬೇಕು, ಶಾಲೆಗಳು ಶಿಕ್ಷಣೇತರ ಚಟುವಟಿಕೆಗಳಿಂದ ಮುಕ್ತವಾಗಿರಬೇಕು. ಶಾಲೆಗಳ ಆವರಣವು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಿರಬೇಕು. ಈ ಆದೇಶವನ್ನು ಹೊರಡಿಸಿದ್ದು 2013ರಲ್ಲಿ ಬಿಜೆಪಿ ಸರ್ಕಾರ ಎಂದು ಹೇಳಿದ್ದಾರೆ. ಬಿಜೆಪಿ ಪಕ್ಷಕ್ಕೆ ತನ್ನದೇ ಸರ್ಕಾರ ಹೊರಡಿಸಿದ ಆದೇಶ, ತಾವೇ ರೂಪಿಸಿದ ನಿಯಮಗಳ ಬಗ್ಗೆ ಅರಿವಿಲ್ಲವೇ? ಅಥವಾ ಈ ಆದೇಶ ಆರ್ಎಸ್ಎಸ್ ಗೆ ಅನ್ವಯಿಸುವುದಿಲ್ಲವೇ? RSS ಸಂಘಟನೆಯು ಈ ದೇಶದ ಸಂವಿಧಾನ, ಕಾನೂನು, ನೀತಿ ನಿಯಮಗಳಿಗೆ ಅತೀತವಾಗಿದೆ ಎಂದು ಭಾವಿಸಿದೆಯೇ ಬಿಜೆಪಿ? ಎಂದು ಪ್ರಶ್ನಿಸಿದ್ದಾರೆ. ಈ ಆದೇಶ ಜಾರಿಯಲ್ಲಿದ್ದರೂ ಆರ್ಎಸ್ಎಸ್ ಎಂಬ ಸಂಘಟನೆಯು ಯಾವ ಅಂಜಿಕೆ ಇಲ್ಲದೆ ಶಾಲೆಗಳು ಹೆಡ್ಗೆವಾರ್ ಅವರ ವಂಶಸ್ಥರ ಆಸ್ತಿ…
ನವದೆಹಲಿ: ನೆಸ್ಲೆ ಮಾರಾಟ ಪ್ರಮಾಣವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವುದರಿಂದ ಸುಮಾರು 16,000 ಜನರು ನಿರುದ್ಯೋಗಿಗಳಾಗುತ್ತಾರೆ ಎಂದು ಸಿಇಒ ಫಿಲಿಪ್ ನವ್ರಾಟಿಲ್ ( CEO Philipp Navratil ) ಗುರುವಾರ ಹೇಳಿದ್ದಾರೆ. ವಿಶ್ವದ ಅತಿದೊಡ್ಡ ಪ್ಯಾಕೇಜ್ಡ್ ಆಹಾರ ಕಂಪನಿಯು ಕಾಫಿ ಮತ್ತು ಮಿಠಾಯಿಗಳಲ್ಲಿ ಬೆಲೆ ಏರಿಕೆಯಿಂದಾಗಿ ನಿರೀಕ್ಷೆಗಿಂತ ಉತ್ತಮ ಮಾರಾಟ ಬೆಳವಣಿಗೆಯನ್ನು ವರದಿ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ನೆಸ್ಲೆ ಹೆಚ್ಚು ಪರಿಣಾಮಕಾರಿಯಾಗಲು ಪ್ರಯತ್ನಿಸುತ್ತಿರುವಾಗ, ಉತ್ಪಾದನೆ ಮತ್ತು ಪೂರೈಕೆ ಸರಪಳಿಯಲ್ಲಿ ನಡೆಯುತ್ತಿರುವ ಉಪಕ್ರಮಗಳ ಭಾಗವಾಗಿ ಇನ್ನೂ 4,000 ಜನರ ಸಂಖ್ಯೆಯನ್ನು ಕಡಿಮೆ ಮಾಡುವುದರ ಜೊತೆಗೆ 12,000 ವೈಟ್ ಕಾಲರ್ ಉದ್ಯೋಗ ಕಡಿತವಾಗಲಿದೆ ಎಂದು ನವ್ರಾಟಿಲ್ ಹೇಳಿದ್ದಾರೆ. ನೆಸ್ಲೆ ಪ್ರಸ್ತುತ ಪ್ರಪಂಚದಾದ್ಯಂತ ಸುಮಾರು 277,000 ಜನರನ್ನು ನೇಮಿಸಿಕೊಂಡಿದೆ. ನೆಸ್ಲೆಸೊದ ಮಾಜಿ ಮುಖ್ಯಸ್ಥರಾದ ನವ್ರಾಟಿಲ್, ನೇರ ವರದಿಯೊಂದಿಗೆ ಬಹಿರಂಗಪಡಿಸದ ಸಂಬಂಧದ ಕಾರಣ ಸೆಪ್ಟೆಂಬರ್ನಲ್ಲಿ ಮುಖ್ಯ ಕಾರ್ಯನಿರ್ವಾಹಕ ಹುದ್ದೆಯಿಂದ ವಜಾಗೊಳಿಸಲಾದ ಲಾರೆಂಟ್ ಫ್ರೀಕ್ಸ್ ಅವರನ್ನು ಬದಲಾಯಿಸಿದರು. ನೆಸ್ಲೆ ಅಭೂತಪೂರ್ವ ನಿರ್ವಹಣಾ ಪ್ರಕ್ಷುಬ್ಧತೆಯ ಅವಧಿಯನ್ನು ಸಹಿಸಿಕೊಂಡಿದೆ, ಅಧ್ಯಕ್ಷ ಪಾಲ್…
ತುಮಕೂರು: ಇ-ಸ್ವತ್ತು ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 8,000 ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತೋವಿಂಕೆರೆಯ ಉದ್ಯಮಿ ಟಿ.ಕೆ ಮೊಹಮ್ಮದ್ ಎಂಬುವರು ಇ-ಸ್ವತ್ತಿಗಾಗಿ ಅರ್ಜಿಯನ್ನು ತೋವಿಂಕೆರೆ ಗ್ರಾಮ ಪಂಚಾಯ್ತಿಗೆ ಸಲ್ಲಿಸಿದ್ದರು. ಇ-ಸ್ವತ್ತು ಮಾಡಿಕೊಡೋದಕ್ಕೆ ತೋವಿಂಕೆರೆ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಸುಮಾ, ಬಿಲ್ ಕಲೆಕ್ಟರ್ ಮಾರುತಿ ರೂ.8,000 ಲಂಚ ನೀಡಲು ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆಯಲ್ಲಿ ತುಮಕೂರು ಲೋಕಾಯುಕ್ತ ಎಸ್ಪಿಗೆ ಟಿ.ಕೆ ಮೊಹಮ್ಮದ್ ದೂರು ನೀಡಿದ್ದರು. ಇಂದು ಇ-ಸ್ವತ್ತು ನೀಡಲು 8,000 ಲಂಚದ ಹಣವನ್ನು ತೋವಿಂಕೆರೆ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಸುಮಾ, ಬಿಲ್ ಕಲೆಕ್ಟರ್ ಮಾರುತಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಮೂಲಕ ರೆಡ್ ಹ್ಯಾಂಡ್ ಇಬ್ಬರನ್ನು ಹಿಡಿದಿದ್ದಾರೆ. ಈ ಸಂಬಂಧ 08/2025 ಯು/ಎಸ್ 7 (ಎ) ಪಿಸಿ ಆಕ್ಟ್ 1988 (ತಿದ್ದುಪಡಿ ಕಾಯ್ದೆ 2018) ರಂತೆ ಪ್ರಕರಣ ದಾಖಲಿಸಿಕೊಂಡು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಯನ್ನು…
ಶಿವಮೊಗ್ಗ : ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:21.10.2025 ರ ಮಂಗಳವಾರವೂ ಸಹ ತೆರೆದಿರುತ್ತದೆ. ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.. https://kannadanewsnow.com/kannada/ban-on-private-events-in-government-school-premises-in-the-state-order-issued-in-2013-letter-goes-viral/ https://kannadanewsnow.com/kannada/good-news-for-the-people-of-maddur-mandya-government-orders-upgrading-these-schools-to-karnataka-public-schools/
ಬೆಂಗಳೂರು: ಬೈಕ್ ಖರೀದಿಯ ಕೂಡಲೇ ಇಎಂಐ ಪಾವತಿ ಶುರುವಾಗುವುದು ಸಹಜ, ಆದರೆ, ಕ್ಲಾಸಿಕ್ ಲೆಜೆಂಡ್ಸ್ ತನ್ನ ಗ್ರಾಹಕರಿಗಾಗಿ “ರೈಡ್ ನೌ, ಪೇ ಇನ್ 2026” ಎಂಬ ವಿಶೇಷ ಕೊಡುಗೆ ಘೊಷಿಸಿದ್ದು, ಈ ವರ್ಷದಲ್ಲಿ ಬೈಕ್ ಖರೀದಿಸುವ ಗ್ರಾಹಕರು, 2026ರ ಪ್ರಾರಂಭದಿಂದ ಇಎಂಐ ಪಾವತಿಸುವ ಅವಕಾಶ ನೀಡಿದೆ. ಎಲ್ & ಟಿ ಫೈನಾನ್ಸ್ ಸಹಭಾಗಿತ್ವದಲ್ಲಿ ಈ ಕೊಡುಗೆ ಘೊಷಿಸಿದದ್ದು, ಕ್ಲಾಸಿಕ್ ಮೋಟಾರ್ ಬೈಕ್ ಖರೀದಿಯ ಕನಸು ಹೊಂದಿರುವವರು ಈ ಕೊಡುಗೆ ಪಡೆದುಕೊಳ್ಳಬಹುದು. ಕ್ಲಾಸಿಕ್ ಲೆಜೆಂಡ್ಸ್ ನ ಮುಖ್ಯ ವ್ಯವಹಾರ ಅಧಿಕಾರಿ ಶರದ್ ಅಗರವಾಲ್ ಮಾತನಾಡಿ, ಖರೀದಿದಾರರು ಈಗ ಅಗತ್ಯವಿರುವ ಡೌನ್ ಪೇಮೆಂಟ್ ನಂತರ ತಮ್ಮ ನೆಚ್ಚಿನ ಜಾವಾ, ಯೆಜ್ಡಿ ಅಥವಾ BSA ಮೋಟಾರ್ಸೈಕಲ್ನ ವಿತರಣೆಯನ್ನು ಪಡೆಯಬಹುದು. ಸಾಲ ವಿತರಣೆಯ ದಿನಾಂಕದ ನಂತರದ ಮೊದಲ ಎರಡು ತಿಂಗಳು, ಸಂಗ್ರಹವಾದ ಬಡ್ಡಿಯನ್ನು ಮಾತ್ರ ಪಾವತಿಸಬೇಕಾಗುತ್ತದೆ ಮತ್ತು ಯಾವುದೇ ಮೂಲ EMI ಬಾಕಿ ಇರುವುದಿಲ್ಲ. ಅಕ್ಟೋಬರ್ 2025 ರಲ್ಲಿ ಸಾಲವನ್ನು ವಿತರಿಸಿದರೆ, ಮೊದಲ ನಿಯಮಿತ EMI ಜನವರಿ…
ಪಲು: ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಗುರುವಾರ 6.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ತಿಳಿಸಿದೆ. ಭೂಕಂಪವು 70 ಕಿಮೀ (43.5 ಮೈಲುಗಳು) ಆಳದಲ್ಲಿ ಸಂಭವಿಸಿದೆ ಎಂದು ಅದು ಹೇಳಿದೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಹಾನಿ ಅಥವಾ ಯಾವುದೇ ರೀತಿಯ ಸಾವುನೋವು ವರದಿಯಾಗಿಲ್ಲ. ಯುಎಸ್ಜಿಎಸ್ ಪ್ರಕಾರ, 2.31 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 138.86 ಡಿಗ್ರಿ ಪೂರ್ವ ರೇಖಾಂಶದಲ್ಲಿ ಸಂಭವಿಸಿದ ಭೂಕಂಪದ ಕೇಂದ್ರಬಿಂದುವು ಅಬೆಪುರದಿಂದ ಸುಮಾರು 200 ಕಿ.ಮೀ ದೂರದಲ್ಲಿದೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ ಎಂದು ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ತಿಳಿಸಿದೆ. ಫಿಲಿಪೈನ್ಸ್ನ ದಕ್ಷಿಣ ಕರಾವಳಿಯಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿ ಕನಿಷ್ಠ ಏಳು ಜನರು ಸಾವನ್ನಪ್ಪಿದ ಮರುದಿನ ಇದು ಸಂಭವಿಸಿದೆ. ಭೂಕಂಪದ ನಂತರ, ಯುಎಸ್ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರವು ಫಿಲಿಪೈನ್ಸ್ನ ದಕ್ಷಿಣ ಮಿಂಡಾನಾವೊ ಪ್ರದೇಶ ಮತ್ತು ಇಂಡೋನೇಷ್ಯಾದ ಉತ್ತರ ಸುಲಾವೆಸಿಗೆ ಸುನಾಮಿ ಎಚ್ಚರಿಕೆಯನ್ನು ನೀಡಿತು. ಆದಾಗ್ಯೂ, ನಂತರ…
ಮಂಡ್ಯ: ಜಿಲ್ಲೆಯ ಮದ್ದೂರಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಒಂದೇ ಸೂರಿನಡಿಯಲ್ಲಿ ದ್ವಿತೀಯ ಪಿಯುಸಿಯವರೆಗೆ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮದ್ದೂರಲ್ಲಿ ಮೂರು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಿಸಲು ಸರ್ಕಾರ ಅನುಮತಿ ನೀಡಿ ಅಧಿಕೃತ ಆದೇಶ ಮಾಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಮದ್ದೂರು ಕ್ಷೇತ್ರ ಶಾಸಕ ಕೆ.ಎಂ ಉದಯ್ ಅವರು, ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಕೆಪಿಎಸ್ ಶಾಲೆಗಳನ್ನಾಗಿ ಉನ್ನತಿಕರಿಸುವಂತೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಗಿತ್ತು. ನಮ್ಮ ಮನವಿಗೆ ಪ್ರತಿಸ್ಪಂದಿಸಿರುವಂತ ಅವರು ಮದ್ದೂರು ತಾಲೂಕಿನ ಅಣ್ಣೂರು, ಮಲ್ಲನಕುಪ್ಪೆ ಹಾಗೂ ಕೆ.ಬೆಳ್ಳೂರು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಯನ್ನಾಗಿ ಉನ್ನತೀಕರಿಸಿ ಅಧಿಕೃತ ಆದೇಶ ಮಾಡಿದ್ದಾರೆ ಎಂದು ಹೇಳಿದ್ದಾರೆ. ಮದ್ದೂರು ತಾಲ್ಲೂಕಿನ ಮೂರು ಶಾಲೆಗಳನ್ನು ಕರ್ನಾಟಕ ಪಬ್ಲಿಕಾ ಶಾಲೆಗಳನ್ನಾಗಿ ಉನ್ನತೀಕರಿಸಿದ್ದಾರೆ. ಇದರಿಂದ ಈ ಶಾಲೆಗಳಲ್ಲಿ ಇನ್ಮುಂದೆ LKGಯಿಂದ ದ್ವಿತೀಯ ಪಿಯುಸಿವರೆಗೆ ಒಂದೆಡೆಯೇ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರೆಯುವಂತೆ ಆಗಲಿದೆ. ನಮ್ಮ ಮನವಿಗೆ ಸ್ಪಂದಿಸಿ ಮದ್ದೂರಿಗೆ…
ಬೆಂಗಳೂರು: ರಾಜ್ಯದ ಸರ್ಕಾರಿ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ( RSS) ಚಟುವಟಿಕೆ ನಿಷೇಧಿಸುವಂತೆ ಸಚಿವ ಪ್ರಿಯಾಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಬಿಜೆಪಿ, RSS ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲೇ, ನಿಷೇಧ ಮಾಡಿ ನೋಡಿ ಎಂಬುದಾಗಿ ಸವಾಲ್ ಹಾಕಿದ್ದರು. ಇದರ ನಡುವೆ ರಾಜ್ಯದ ಸರ್ಕಾರಿ ಶಾಲಾ ಆವರಣದಲ್ಲಿ ಖಾಸಗಿ ಕಾರ್ಯಕ್ರಮವನ್ನು ಬ್ಯಾನ್ ಮಾಡಲಾಗಿತ್ತು. 2013ರಲ್ಲಿಯೇ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ್ದಂತ ಆದೇಶ ಪತ್ರ ಈಗ ವೈರಲ್ ಆಗಿದೆ. ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಜೊತೆಗೆ ಸಚಿವ ಪ್ರಿಯಾಂಕ್ ಖರ್ಗೆಗೂ ಈ ಸಂಬಂಧ ಬೆದರಿಕೆ ಹಾಕಲಾಗಿತ್ತು. ಇದೀಗ ಬೆದರಿಕೆ ಹಾಕಿದಂತ ವ್ಯಕ್ತಿಯನ್ನು ಪತ್ತೆ ಹಚ್ಚಿರುವಂತ ಪೊಲೀಸರು, ಆತನ ವಿರುದ್ಧ ಎಫ್ಐಆರ್ ಕೂಡ ದಾಖಲಿಸಿದ್ದಾರೆ. ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಪತ್ರ ಬರೆದ ಸಚಿವ ಪ್ರಿಯಾಂಕ್…
ಪಲು: ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಗುರುವಾರ 6.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ತಿಳಿಸಿದೆ. ಭೂಕಂಪವು 70 ಕಿಮೀ (43.5 ಮೈಲುಗಳು) ಆಳದಲ್ಲಿ ಸಂಭವಿಸಿದೆ ಎಂದು ಅದು ಹೇಳಿದೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಹಾನಿ ಅಥವಾ ಯಾವುದೇ ರೀತಿಯ ಸಾವುನೋವು ವರದಿಯಾಗಿಲ್ಲ. ಯುಎಸ್ಜಿಎಸ್ ಪ್ರಕಾರ, 2.31 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 138.86 ಡಿಗ್ರಿ ಪೂರ್ವ ರೇಖಾಂಶದಲ್ಲಿ ಸಂಭವಿಸಿದ ಭೂಕಂಪದ ಕೇಂದ್ರಬಿಂದುವು ಅಬೆಪುರದಿಂದ ಸುಮಾರು 200 ಕಿ.ಮೀ ದೂರದಲ್ಲಿದೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ ಎಂದು ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ತಿಳಿಸಿದೆ.
ಶಿವಮೊಗ್ಗ: ರಾಜ್ಯ ಸರ್ಕಾರವು ಸಾಗರ ತಾಲ್ಲೂಕಿನ ಸಿರಿವಂತೆ, ತ್ಯಾಗರ್ತಿ, ಬ್ಯಾಕೋಡಿನಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲು ಅನುಮತಿಸಿದೆ. ಇದರಿಂದಾಗಿ ಎಲ್ ಕೆ ಜಿಯಿಂದ ದ್ವಿತೀಯ ಪಿಯುಸಿ ವರೆಗೆ ಒಂದೇ ಸೂರಿನಡಿ ಮಕ್ಕಳಿಗೆ ಶಿಕ್ಷಣ ದೊರಕಿಸಿಕೊಡುವಂತ ವ್ಯವಸ್ಥೆಯನ್ನು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಾಡಿದ್ದಾರೆ. ಈ ಮೂಲಕ ಸಾಗರ ತಾಲ್ಲೂಕಿನ ಜನತೆಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರಕ್ಕೂ ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರು ಮಾಡುವಂತೆ ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಮನವಿ ಮಾಡಿದ್ದರು. ಈ ಮನವಿಗೆ ಪುರಸ್ಕರಿಸಿರುವಂತ ಅವರು ಸಾಗರದ ಸಿರಿವಂತೆ, ತ್ಯಾಗರ್ತಿ, ಬ್ಯಾಕೋಡು ಶಾಲೆ ವ್ಯಾಪ್ತಿಯ ಐದು ಕಿಲೋಮೀಟರ್ ನ ಎಲ್ಲಾ LKGಯಿಂದ ದ್ವಿತೀಯ ಪಿಯುಸಿವರೆಗಿನ ಶಾಲೆಗಳನ್ನು ಸೇರಿಸಿ ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಿಸಲು ಅನುಮೋದನೆ ನೀಡಲಾಗಿದೆ. ಹೀಗಾಗಿ ಎಲ್ ಕೆ ಜಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೆಡೆಯೇ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರೆಯುವಂತೆ ಆಗಲಿದೆ.…














