Author: kannadanewsnow09

ಬೆಂಗಳೂರು: ಲೋಕಸಭಾ ಚುನಾವಣೆ ಮತದಾನದ ಬಳಿಕ ಚುನಾವಣೋತ್ತರ ಸಮೀಕ್ಷೆಯನ್ನು ನಿಷೇಧಿಸಿ ಚುನಾವಣಾ ಆಯೋಗವು ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದಂತ ಸೂರಳ್ ಕರ್ ವಿಕಾರ್ ಕಿಶೋರ್ ಅವರು ಎಲ್ಲಾ ಮಾಧ್ಯಮಗಳ ಸಂಪಾದಕರು, ವರದಿಗಾರರು, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ “126A Restriction on publication and dissemination of rrsult of exit polls, etc (1) no person shall conduct any exit poll and publish or publicise by means of the print or electronic media or disseminate in any other manner, whatsover, the result of any exit poll during such period, as may be notified by the Election Commission in this regard” ಮೇಲಿನ ಕಲಂನಲ್ಲಿ ಭಾರತ…

Read More

ನವದೆಹಲಿ: ಎಚ್ಡಿಎಫ್ಸಿ ಲೈಫ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ಗುರುವಾರ ತನ್ನ ನಾಲ್ಕನೇ ತ್ರೈಮಾಸಿಕದ ಸ್ವತಂತ್ರ ಲಾಭದಲ್ಲಿ (ಕ್ಯೂ 4 ಎಫ್ವೈ 24 ಪಿಎಟಿ) ಶೇಕಡಾ 14.76 ರಷ್ಟು ಏರಿಕೆ ಕಂಡು ಸುಮಾರು 412 ಕೋಟಿ ರೂ.ಗೆ ತಲುಪಿದೆ. ಖಾಸಗಿ ವಿಮಾದಾರರ ನಿವ್ವಳ ಪ್ರೀಮಿಯಂ ಆದಾಯವು 2024 ರ ನಾಲ್ಕನೇ ತ್ರೈಮಾಸಿಕದಲ್ಲಿ ಶೇಕಡಾ 5.46 ರಷ್ಟು ಏರಿಕೆಯಾಗಿ 20,488 ಕೋಟಿ ರೂ.ಗೆ ತಲುಪಿದೆ. ಎಚ್ಡಿಎಫ್ಸಿ ಲೈಫ್ ಪ್ರತಿ ಷೇರಿಗೆ 2 ರೂ.ಗಳ ಲಾಭಾಂಶವನ್ನು ಘೋಷಿಸಿದೆ. ಈ ಷೇರು ಕೊನೆಯದಾಗಿ ಶೇಕಡಾ 1.19 ರಷ್ಟು ಏರಿಕೆಯಾಗಿ 611.65 ರೂ.ಗೆ ತಲುಪಿದೆ. ಎಚ್ಡಿಎಫ್ಸಿ ಲೈಫ್ ಪ್ರಕಾರ, “ನಮ್ಮ ಹೊಸ ವ್ಯವಹಾರದ ಲಾಭವು ಶೇಕಡಾ 26.3 ರಷ್ಟಿದೆ. ಹೊಸ ವ್ಯವಹಾರದ ಮೌಲ್ಯವು 3,501 ಕೋಟಿ ರೂ.ಗಳಾಗಿದ್ದು, 2 ವರ್ಷಗಳ ಸಿಎಜಿಆರ್ ಅನ್ನು ಶೇಕಡಾ 14 ರಷ್ಟು ಸೂಚಿಸುತ್ತದೆ. ಎಂಬೆಡೆಡ್ ಮೌಲ್ಯವು 47,468 ಕೋಟಿ ರೂ.ಗಳಾಗಿದ್ದು, ಎಂಬೆಡೆಡ್ ಮೌಲ್ಯದ ಮೇಲೆ ಕಾರ್ಯಾಚರಣೆಯ ಆದಾಯವು ಶೇಕಡಾ 17.5 ರಷ್ಟಿದೆ. ನಾವು…

Read More

ತುಮಕೂರು: ಜಿಲ್ಲೆಯಲ್ಲಿ ರಾಮ ನವಮಿ ಪಾಲನಕ, ಮಜ್ಜಿಗೆ ಸೇವಿಸಿದಂತ 45ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿನ ಸುಬ್ರಹ್ಮಣ್ಯ ದೇವಸ್ಥಾನದ ರಾಮ ನವಮಿ ಪ್ರಯುಕ್ತ ಮಜ್ಜಿಗೆ, ಪಾನಕ, ಪಲಾರ ಮಾಡಲಾಗಿತ್ತು. ಇಂತಹ ದೇವರ ಪ್ರಸಾದ ಎಂಬುದಾಗಿ ನೀಡಿದಂತ ಪಾನಕ, ಮಜ್ಜಿಗೆಯನ್ನು ಹಂಚಲಾಗಿದೆ. ಹೀಗೆ ದೇವಸ್ಥಾನದಲ್ಲಿ ಹಂಚಿದಂತ ಮಜ್ಜಿಗೆ, ಪಾನಕ ಸೇವಿಸಿದಂತ 45ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಅವರಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಎಡೆಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಆಗಮಿಸಿ, ಪರಿಶೀಲನೆ ನಡೆಸಿ, ವಾಂತಿ, ಬೇಧಿಗೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚೋದಕ್ಕಾಗಿ ಪಾನಕ, ಮಜ್ಜಿಗೆಯ ಮಾದರಿಯನ್ನು ಸಂಗ್ರಹಿಸಿ ಕೊಂಡೊಯ್ತಿದ್ದಾರೆ ಎನ್ನಲಾಗಿದೆ. https://kannadanewsnow.com/kannada/breaking-sc-asks-ec-to-explain-evm-vvpat-verification-process/ https://kannadanewsnow.com/kannada/vote-for-congress-darshan-campaigns-for-star-chandru-in-mandya/

Read More

ನವದೆಹಲಿ: ಜಪಾನಿನ ಪ್ರಮುಖ ಉದ್ಯೋಗದಾತ ತೋಷಿಬಾ ಕಾರ್ಪೊರೇಷನ್ ಮಹತ್ವದ ಪುನರ್ರಚನೆ ಉಪಕ್ರಮವನ್ನು ಪ್ರಾರಂಭಿಸುತ್ತಿದೆ. ಇದು ಸುಮಾರು 5,000 ಉದ್ಯೋಗಗಳನ್ನು ಕಡಿತಗೊಳಿಸುತ್ತದೆ, ಇದು ಅದರ ದೇಶೀಯ ಉದ್ಯೋಗಿಗಳ ಸುಮಾರು 10% ರಷ್ಟಿದೆ. ಈ ಕ್ರಮವು ಕಾರ್ಯಾಚರಣೆಗಳನ್ನು ಸುಗಮಗೊಳಿಸುವ ಮತ್ತು ಮೂಲಸೌಕರ್ಯ ಮತ್ತು ಡಿಜಿಟಲ್ ತಂತ್ರಜ್ಞಾನದಂತಹ ಪ್ರಮುಖ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ ವಿಶಾಲ ಕಾರ್ಯತಂತ್ರದ ಭಾಗವಾಗಿದೆ. ಪುನರ್ರಚನೆ ಪ್ರಯತ್ನವು 100 ಬಿಲಿಯನ್ ಯೆನ್ ಒಂದು ಬಾರಿಯ ವೆಚ್ಚವನ್ನು ಭರಿಸುವ ನಿರೀಕ್ಷೆಯಿದೆ. ಇದು ಸುಮಾರು $ 650 ಮಿಲಿಯನ್ ಗೆ ಸಮಾನವಾಗಿದೆ. ಏಕೆ ಉದ್ಯೋಗ ಕಡಿತ? ಇಂತಹ ಗಣನೀಯ ಉದ್ಯೋಗ ಕಡಿತಗಳನ್ನು ಜಾರಿಗೆ ತರುವ ನಿರ್ಧಾರವು ನಡೆಯುತ್ತಿರುವ ಆರ್ಥಿಕ ಸವಾಲುಗಳಿಗೆ ತೋಷಿಬಾದ ಪ್ರತಿಕ್ರಿಯೆಯನ್ನು ಪ್ರತಿಬಿಂಬಿಸುತ್ತದೆ. ಅಕೌಂಟಿಂಗ್ ಅಕ್ರಮಗಳಿಗೆ ವಿಧಿಸಲಾದ ಗಮನಾರ್ಹ ದಂಡಗಳು ಮತ್ತು ಅದರ ಪರಮಾಣು ವಿದ್ಯುತ್ ಸ್ಥಾವರ ಉದ್ಯಮಗಳಿಂದ ಉಂಟಾಗುವ ನಷ್ಟವನ್ನು ಸರಿದೂಗಿಸಲು ಅದರ ಮೆಮೊರಿ ಚಿಪ್ ಘಟಕವನ್ನು ಮಾರಾಟ ಮಾಡುವ ಅವಶ್ಯಕತೆ ಸೇರಿದಂತೆ ವಿವಿಧ ಅಂಶಗಳಿಂದ ಈ ಸವಾಲುಗಳು ಉಲ್ಬಣಗೊಂಡಿವೆ. ಈ ಪುನರ್ರಚನೆಯು…

Read More

ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸಿಡಿದೆದ್ದಿರುವಂತ ದಿಂಗಾಲೇಶ್ವರಶ್ರೀಗಳು, ಇಂದು ಅಧಿಕರೃತವಾಗಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಮೆರವಣಿಗೆ ಇಲ್ಲದೇ ಸಾಂಕೇತಿಕವಾಗಿ ಧಾರವಾಡದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದಂತ ದಿಂಗಾಲೇಶ್ವರ ಶ್ರೀಗಳು, ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಕೇವಲ ನಾಲ್ವರು ಬೆಂಬಲಿಗರೊಂದಿಗೆ ಆಗಮಿಸಿ, ಧಾರವಾಡದ ಡಿಸಿ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ದಿಂಗಾಲೇಶ್ವರ ಶ್ರೀಗಳು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಬಳಿಕ ಮೆರವಣಿಗೆ ಸ್ಥಳಕ್ಕೆ ತೆರಳಿದಂತ ಅವರು, ಧಾರವಾಡದ ಕಾರ್ಪೋರೇಷನ್ ವೃತ್ತದಿಂದ ದಿಂಗಾಲೇಶ್ವರ ಶ್ರೀಗಳು ಮೆರವಣಿಗೆಯಲ್ಲಿ ಆಗಮಿಸಿದರು. ಮೆರವಣಿಗೆ ಮೂಲಕ ಮತ್ತೆ ಡಿಸಿ ಕಚೇರಿಗೆ ಆಗಮಿಸಿ ನಾಮಪತ್ರವನ್ನು ಸಲ್ಲಿಕೆ ಮಾಡಿದರು. 15 ನಿಮಿಷ ನಡೆದು, ಆನಂತ್ರ ಮೆರವಣಿಗೆಯಲ್ಲಿ ಸಾಗಿ ಬಂದ ಅವರೊಂದಿಗೆ 200ಕ್ಕೂ ಹೆಚ್ಚು ಬೆಂಬಲಿಗರು ಇದ್ದರು. ಈ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ದಿಂಗಾಲೇಶ್ವರಶ್ರೀಗಳು ನಾಮಪತ್ರವನ್ನು ಸಲ್ಲಿಸಿದರು. https://kannadanewsnow.com/kannada/over-45-people-fall-ill-after-consuming-ram-navami-buttermilk-in-tumkur-hospitalised/ https://kannadanewsnow.com/kannada/breaking-sc-asks-ec-to-explain-evm-vvpat-verification-process/

Read More

ತುಮಕೂರು: ಜಿಲ್ಲೆಯಲ್ಲಿ ನಿನ್ನೆ ರಾಮನವಮಿ ಪ್ರಯುಕ್ತ ಮಾಡಲಾಗಿದ್ದಂತ ಮಜ್ಜಿಗೆ ಸೇವಿಸಿದಂತ 45ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ರಾಮನವಮಿ ಪ್ರಯುಕ್ತ ಮಜ್ಜಿಗೆ, ಪಾನಕ, ಪಲ್ಲಾರ ಮಾಡಲಾಗಿತ್ತು. ನಿನ್ನೆ ಸಂಜೆ ದೇವಸ್ಥಾನದ ಮುಂದೆ ನೆರೆದಿದ್ದಂತ ಗೊಲ್ಲರಹಟ್ಟಿಯ ಜನತೆಗೆ ಮಜ್ಜಿಗೆಯನ್ನು ವಿತರಿಸಲಾಗಿತ್ತು. ರಾಮನವಮಿ ಪ್ರಯುಕ್ತ ನೀಡಲಾಗಿದ್ದಂತ ಮಜ್ಜಿಗೆ ಸೇವಿಸಿದಂತ 45ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದೀಗ ಅನೇಕರು ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದು, ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/good-news-for-farmers-in-the-state-5-days-of-rain-accompanied-by-thunder-lightning-from-today/ https://kannadanewsnow.com/kannada/breaking-sc-asks-ec-to-explain-evm-vvpat-verification-process/

Read More

ಬೆಂಗಳೂರು: ಬಿರು ಬಿಸಿಲಿನಿಂದ ತತ್ತರಿಸಿರೋ ಜನತೆಗೆ, ಬೆಳೆ ಒಳಗುತ್ತಿರೋ ಆತಂಕದಲ್ಲಿರೋ ರೈತರಿಗೆ ಸಂತಸದ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ. ಅದೇ ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು ರಾಜ್ಯಾಧ್ಯಂತ ಅಲ್ಲಲ್ಲಿ ಚದುರಿದಂತೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ. ಏಪ್ರಿಲ್.18ರ ಇಂದಿನಿಂದ ಏಪ್ರಿಲ್.22ರವರೆಗೆ ಸಾಧಾರಣ ಮಳೆಯಾಗಲಿದೆ. ಏಪ್ರಿಲ್.21ರಂದು ಮಾತ್ರ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದೂ, ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ತಿಳಿಸಿದೆ. ಇಂದು ಶಿವಮೊಗ್ಗ, ದಾವಣಗೆರೆ, ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗೋ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. https://kannadanewsnow.com/kannada/breaking-sc-asks-ec-to-explain-evm-vvpat-verification-process/ https://kannadanewsnow.com/kannada/vote-for-congress-darshan-campaigns-for-star-chandru-in-mandya/

Read More

ಮಂಡ್ಯ: ಸುಮಲತಾ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದು, ಕಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕಣದಲ್ಲಿದ್ದಾರೆ. ಇದೀಗ ಹಿಂದೆ ಸುಮಲತಾ ಬೆನ್ನಿಗೆ ನಿಂತಿದ್ದಂತ ಡಿ ಬಾಸ್, ಈಗ ಅವರ ಪರ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಜೊತೆ ನಿಂತು ಪ್ರಚಾರ ಮಾಡದೇ, ಅವರ ವಿರುದ್ಧದ ಅಭ್ಯರ್ಥಿ ಕಾಂಗ್ರೆಸ್ ಪಕ್ಷದ ಸ್ಟಾರ್ ಚಂದ್ರು ಪರ ಅಬ್ಬರದ ಪ್ರಚಾರಕ್ಕೆ ಇಳಿದಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ಹಲಗೂರಿನಲ್ಲಿ ನಟ ದರ್ಶನ್ ಅವರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಮತ ಯಾಚನೆ ಮಾಡಿದ್ರು. ಈ ವೇಳೆ ಮಾತನಾಡಿದಂತ ಅವರು, ನಾನು ಯಾವುದೇ ಪಕ್ಷದ ಪರವಾಗಿ ಇಲ್ಲಿಗೆ ಬಂದಿಲ್ಲ. ನಾನು ಸ್ಟಾರ್ ಚಂದ್ರು ಪರ ಮತಯಾಚಿಸಲು ಇಲ್ಲಿಗೆ ಬಂದಿದ್ದೀನಿ ಅಷ್ಟೇ ಎಂದರು. ಸುಮಲತಾ ಟಿಕೆಟ್ ಸಿಕ್ಕಿಲ್ಲ ಎಂದರೇ ಪ್ರಚಾರಕ್ಕೆ ಬನ್ನಿ ಎಂದು ಶಾಸಕ ಉದಯ್ ಕೇಳಿದ್ರು. ಆ ಕಾರಣಕ್ಕಾಗಿ ವ್ಯಕ್ತಿಯ ಪರವಾಗಿ ಈ ಪ್ರಚಾರಕ್ಕೆ ಬಂದಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರಸ್ವಾಮಿ…

Read More

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ, ಟಿಪ್ಪು ಸಿದ್ಧಾಂತ ಇರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಗಳು, ಇಸ್ಲಾಮಿಕ್ ಕಾರ್ಯಕರ್ತರು ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರಿಂದ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ಅವಹೇಳನ, ಧಮ್ಕಿ, ಭಯೋತ್ಪಾದನಾ ಚಟುವಟಿಕೆ, ಬಾಂಬ್ ಹಾಕುವ ಘಟನೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಗಂಭೀರ ವಿಚಾರ ಮತ್ತು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು. ನಿನ್ನೆ ವಿದ್ಯಾರಣ್ಯಪುರದಲ್ಲಿ ರಾಮನವಮಿ ಇತ್ತು. ರಾಮ ಈ ದೇಶದ ಆದರ್ಶ ಪುರುಷ. ಶ್ರೀರಾಮ ಮಂದಿರವೂ ನಿರ್ಮಾಣವಾಗಿದೆ. ಇಂಥ ಸಂದರ್ಭದಲ್ಲಿ “ಜೈ ಶ್ರೀರಾಮ್” ಎಂದು ಕೂಗಿದ್ದನ್ನು ಆಕ್ಷೇಪಿಸಿ ಮುಸ್ಲಿಂ ಗೂಂಡಾಗಳು ಅವರ ಮೇಲೆ ಹಲ್ಲೆ ನಡೆಸಿ “ಅಲ್ಲಾ ಹೋ ಅಕ್ಬರ್” ಕೂಗಬೇಕು ಎಂದು ಧಮ್ಕಿ ಹಾಕಿ ಹಲ್ಲೆ ಮಾಡಿ ಕೊಲೆ ಬೆದರಿಕೆ…

Read More

ಕಲಬುರಗಿ‌ : ಅಫಜಲ್ ಪುರ ಕ್ಷೇತ್ರ ಪ್ರಮುಖ ಕ್ಷೇತ್ರವಾಗಿದೆ. ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಇಲ್ಲಿಂದ ಆಯ್ಕೆಯಾಗಿ ಹೋಗಿದ್ದಾರೆ. ತಮ್ಮನ್ನು ಆಯ್ಕೆ ಮಾಡಿ ಕಳಿಸಿದರೆ ಸೇವೆ ಮಾಡುವುದಾಗಿ ಕಲಬುರಗಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಹೇಳಿದರು. ಅಫಜಲ್ ಪುರ ಮತಕ್ಷೇತ್ರದ ಗೊಬ್ಬೂರು ( ಬಿ ) ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಕನಸಿದ್ದು. ಕಳೆದ ಐದು ವರ್ಷದಲ್ಲಿ ಅಭಿವೃದ್ದಿ ಕಾರ್ಯಗಳು ನಡೆದಿರಲಿಲ್ಲ. ನನ್ನನ್ನು ಆಯ್ಕೆ ಮಾಡಿ ಕಳಿಸಿದರೆ ಜಿಲ್ಲೆಯ ಅಭಿವೃದ್ದಿಗೆ ದುಡಿಯುವುದಾಗಿ ಅವರು ಹೇಳಿದರು‌. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 5.28 ಲಕ್ಷ ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ, ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ, ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತಿಯೊಬ್ಬರಿಗೆ ಅಕ್ಕಿ ಖರೀದಿಸಲು ರೂ 178 ರೂ ಹಣ ನೇರವಾಗಿ ಹಾಕಲಾಗುತ್ತಿದೆ. 19.12 ಲಕ್ಷ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ಹೋಗುತ್ತಿದೆ. ಯುವನಿಧಿ ಯೋಜನೆಯಡಿಯಲ್ಲಿ 20,000 ಯುವಕರಿಗೆ ತಲಾ ರೂ 1500 ರಿಂದ ರೂ 3000…

Read More