Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ನವದೆಹಲಿ: ಭಾರತವು 2024 ರಲ್ಲಿ 84 ಇಂಟರ್ನೆಟ್ ಸ್ಥಗಿತಗಳಿಗೆ ಸಾಕ್ಷಿಯಾಗಿದೆ, ಇದು ವಿಶ್ವದ ಎರಡನೇ ಅತಿ ಹೆಚ್ಚು ಎಂದು ಡಿಜಿಟಲ್ ಹಕ್ಕುಗಳ ಸಂಸ್ಥೆ ಆಕ್ಸೆಸ್ ನೌ ವರದಿ ತಿಳಿಸಿದೆ. ದೇಶದಲ್ಲಿ ಮಿಲಿಟರಿ ಜುಂಟಾ ವಿಧಿಸಿದ ಇಂತಹ 85 ಬ್ಲಾಕ್ಔಟ್ಗಳನ್ನು ಕಂಡ ಮ್ಯಾನ್ಮಾರ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎಂದು ವರದಿ ತಿಳಿಸಿದೆ. ಆರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಇಂಟರ್ನೆಟ್ ಸ್ಥಗಿತವನ್ನು ಕಂಡ ದೇಶವೆಂದು ಹೆಸರಿಸಲಾಗಿಲ್ಲ ಎಂದು ವರದಿ ಹೇಳಿದೆ. “2023 ರಿಂದ (116 ಇಂಟರ್ನೆಟ್ ಸ್ಥಗಿತಗಳು) ಸ್ಥಗಿತಗಳಲ್ಲಿ ಸಾಧಾರಣ ಇಳಿಕೆಯ ಹೊರತಾಗಿಯೂ, ಭಾರತವು 2024 ರಲ್ಲಿ ಇನ್ನೂ 84 ಬಾರಿ ಇಂಟರ್ನೆಟ್ ಸ್ಥಗಿತಗೊಂಡಿದೆ. ಇದು ಆ ವರ್ಷ ಪ್ರಜಾಪ್ರಭುತ್ವದಲ್ಲಿ ಆದೇಶಿಸಿದ ಅತಿ ಹೆಚ್ಚು ಅಡೆತಡೆಗಳು ಎಂದು ಸೋಮವಾರ ಪ್ರಕಟವಾದ ವರದಿ ತಿಳಿಸಿದೆ. ಭಾರತದಲ್ಲಿ, 16 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ಥಗಿತವನ್ನು ಅನುಭವಿಸಿದವು. ಮಣಿಪುರ (21) ಅಗ್ರಸ್ಥಾನದಲ್ಲಿದ್ದರೆ, ಹರಿಯಾಣ (12) ಮತ್ತು ಜಮ್ಮು ಮತ್ತು ಕಾಶ್ಮೀರ…

Read More

ದಕ್ಷಿಣ ಕನ್ನಡ: ಜಿಲ್ಲೆಯ ಉಜಿರೆಯಲ್ಲಿನ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆ ಮಾಹಿತಿ ನೀಡಿದೆ. ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ (ತ್ರೀ ಫೇಸ್, ಸಿಂಗಲ್ ಫೇಸ್ ಇಂಡಕ್ಷನ್ ಮೋಟರ್ ಮತ್ತು ಸಬ್ಮರ್ಸಿಬಲ್ ಮೋಟರ್ ವೈಂಡಿಂಗ್, ಗೃಹೋಪಯೋಗಿ ಉಪಕರಣ ರಿಪೇರಿ ಮತ್ತು ಎಲ್ಲಾ ತರದ ಸ್ಟಾರ್ಟರ್ಸ್ ರಿಪೇರಿ ಮತ್ತು ಸರ್ವಿಸ್ ) ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ ಎಂದಿದೆ. ದಿನಾಂಕ: 05.03.2025 ರಿಂದ 03.04.2025ರ ವರೆಗೆ (30ದಿನ) ತರಬೇತಿ ನಡೆಯಲಿದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದಿದೆ. https://forms.gle/9LUE1UvHMAv21vRS7 ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9591044014, 9902594791 ಸಂಪರ್ಕಿಸಬಹುದು. ಇನ್ನೂ ರುಡ್ ಸೆಟ್ ಸಂಸ್ಥೆಯ ವೆಬ್‌ ಸೈಟ್‌ https://www.rudsetujire.com…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 19 ತಹಶೀಲ್ದಾರ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ದಕ್ಷಿಣ ಕನ್ನಡದ ಮುಲ್ಕಿ ತಾಲ್ಲೂಕು ಗ್ರೇಡ್-1 ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಅವರನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿಗೆ ವರ್ಗಾವಣೆ ಮಾಡಿದ್ದಾರೆ. ಶಿರಸಿಯ ಸಹಾಯಕ ಆಯುಕ್ತರ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಕೃಷ್ಣಾ ಕಾಮಕರ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿಗೆ ವರ್ಗಾವಣೆ ಮಾಡಿದ್ದಾರೆ. ಹಾಸನದ ಭೂಸ್ವಾಧೀನಾಧಿಕಾರಿಗಳ ಕಚೇರಿಯ ಗ್ರೇಡ್-1 ತಹಶೀಲ್ದಾರ್ ಗೋವಿಂದರಾಜು ಬಿಎಂ ಅವರನ್ನು ಚಿತ್ರದುರ್ಗ ತಾಲ್ಲೂಕಿಗೆ ವರ್ಗಾವಣೆ ಮಾಡಲಾಗಿದೆ. ಯಾದಗಿರಿಯ ಜಿಲ್ಲಾಧಿಕಾರಿಗಳ ಕಚೇರಿಯ ಗ್ರೇಡ್-1 ತಹಶೀಲ್ದಾರ್ ದುಂಡಪ್ಪ ಕೋಮಾರ ಅವರನ್ನು ಬೆಳಗಾವಿಯ ಖಾನಾಪುರ ತಾಲ್ಲೂಕಿಗೆ, ಶಿರಸಿ ತಾಲ್ಲೂಕು ಗ್ರೇಡ್-1 ತಹಶೀಲ್ದಾರ್ ಶ್ರೀಧರ ಮುಂದಲಮನಿ ಅವರನ್ನು ದಕ್ಷಿಣ ಕನ್ನಡದ ಮೂಡಬಿದಿರೆ ತಾಲ್ಲೂಕಿಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಹೀಗಿದೆ 19 ತಹಶೀಲ್ದಾರ್ ವರ್ಗಾವಣೆಯ ಪಟ್ಟಿ https://kannadanewsnow.com/kannada/election-slated-to-be-held-tomorrow-to-elect-president-and-vice-president-prohibitory-orders-imposed-in-and-around-cmc-premises/ https://kannadanewsnow.com/kannada/breaking-good-news-for-motorists-in-the-state-hsrp-number-plate-installation-extended-till-march-31/ https://kannadanewsnow.com/kannada/super-offer-for-those-who-have-this-rs-2-coin-money-will-rain-5-lakh-rupees-will-be-your-own/

Read More

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಗಾಗಿ ನಾಳೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರಸಭೆ ಆವರಣದ ಸುತ್ತಮುತ್ತಲ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಅವರು, ಈ ಕುರಿತಂತೆ ಆದೇಶ ಹೊರಡಿಸಿರುವಂತ ತಹಶೀಲ್ದಾರ್, ದಿನಾಂಕ 25-02-2025ರ ನಾಳೆ ಸಾಗರ ನಗರಸಭೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಚುನಾವಣಾ ಪ್ರಕ್ರಿಯೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಗರಸಭೆ ಅವರಣದಿಂದ 100 ಮೀಟರ್ ವ್ಯಾಪ್ತಿಯ ಒಳಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸುವಂತೆ ಚುನಾವಣಾಧಿಕಾರಿಗಳು ಕೋರಿದ್ದಾರೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ದಿನಾಂಕ 25-02-2025ರ ಮಂಗಳವಾರ ಬೆಳಿಗ್ಗೆ 9.30 ಗಂಟೆಯಿಂದ ದಿನಾಂಕ 25-02-2025ರ ಮಧ್ಯಾಹ್ನ 1.30ರವರೆಗೆ ಸಾಗರ ತಾಲ್ಲೂಕು ನಗರಸಭೆ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಬಿಎನ್ ಎಸ್ ಎಸ್ 2023ರ ಕಾಯ್ದೆ ಕಲಂ 163ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ನಿಷೇಧಾಜ್ಞೆ…

Read More

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ 2025-26ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ದಾಖಲಾತಿಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಥಮ ಪಿಯುಸಿಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾದ ನಂತ್ರ ಮೊದಲ ಕಾರ್ಯನಿರತ ದಿನದಿಂದ ದಾಖಲಾತಿ ಪ್ರಾರಂಭಗೊಳ್ಳಲಿದೆ. ದ್ವಿತೀಯ ಪಿಯುಸಿಗೆ ದಿನಾಂಕ 22-05-2025ರಿಂದ ದಾಖಲಾತಿ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಸಾಲಿನ ಶೈಕ್ಷಣಿಕ ಅವಧಿಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮೊದಲನೇ ಅವಧಿ ದಿನಾಂಕ 02-06-2025ರಿಂದ 21-09-2025ರವರೆಗೆ ನಡೆಯಲಿದೆ. ಎರಡನೇ ಅವಧಿಯು ದಿನಾಂಕ 08-10-2025ರಿಂದ 31-03-2026ರವರೆಗೆ ನಡೆಯಲಿದೆ. ಇನ್ನೂ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿದ್ಧಪಡಿಸಿಕೊಂಡ ವೇಳಾಪಟ್ಟಿಯಂತೆ ತರಗಳಿಗಳು ದಿನಾಂಕ 02-06-2025ರಿಂದ ಆರಂಭಗೊಳ್ಳಲಿದೆ. ಮಧ್ಯಂತರ ರಜೆಯು ದಿನಾಂಕ 22-09-2025ರಿಂದ ದಿನಾಂಕ 07-10-2025ರವರೆಗೆ ಇರಲಿದೆ. ಕೊನೆಯ ಕಾರ್ಯನಿರತ ದಿನ ದಿನಾಂಕ 31-03-2026 ಆಗಿದೆ. ಬೇಸಿಗೆ ರಜೆ ದಿನಾಂಕ 01-04-2026ರಿಂದ ಪ್ರಾರಂಭವಾಗಲಿದೆ. ದಿನಾಂಕ 16-06-2025ರಂದು ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳು ಪ್ರಾರಂಭವಾಗಲಿವೆ. ಪ್ರಥಮ…

Read More

ಚಿತ್ರದುರ್ಗ : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ, ಪ್ರಗತಿ ಸಾಧಿಸುವಲ್ಲಿ ನಿರ್ಲಕ್ಷ್ಯ ತೋರಿದ ಮೂವರು ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆ ವಿಧಿಸಿ ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕರ ವಸೂಲಾತಿ ಕುರಿತಂತೆ ಆಂದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾ ಪಂಚಾಯತಿ ವತಿಯಿಂದ ಈ ಹಿಂದೆಯೇ ಸೂಚನೆ ನೀಡಲಾಗಿತ್ತು. ಅಲ್ಲದೆ ಹಲವು ಸಭೆಗಳನ್ನು ಕೈಗೊಂಡು, ಪತ್ರಗಳ ಮೂಲಕ ಹಾಗೂ ವಿಡಿಯೋ ಸಂವಾದ ಮೂಲಕ ತಿಳಿಸಲಾಗಿತ್ತು. ಆದರೆ ಮೂವರು ಗ್ರಾ.ಪಂ. ಪಿಡಿಒ ಗಳು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆಂದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸಿರಲಿಲ್ಲ. ಚಳ್ಳಕೆರೆ ತಾಲ್ಲೂಕು ದೇವರೆಡ್ಡಿಹಳ್ಳಿ ಗ್ರಾ.ಪಂ. ಪಿಡಿಒ ವೇದವ್ಯಾಸಲು ಅವರು ಕರ ವಸೂಲಾತಿಯಲ್ಲಿ ಶೇ. 27.88 ರಷ್ಟು, ಹಿರೇಹಳ್ಳಿ ಗ್ರಾ.ಪಂ.…

Read More

ಚಿತ್ರದುರ್ಗ: ಕರ್ತವ್ಯಕ್ಕೆ ಗೈರಾದ ನರೇಗಾ ತಾಂತ್ರಿಕ ಸಹಾಯಕರ ಬಿಡುಗಡೆಗೊಳಿಸಿ ಚಿತ್ರದುರ್ಗ ಸಿಇಓ ಆದೇಶ ಹೊರಡಿಸಿದ್ದಾರೆ. ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಂಜಿತಾ ವಿ ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ. ಮೋನಿಷ ಅವರು ಕಳೆದ 2024 ರ ಜುಲೈ ತಿಂಗಳಿನಿಂದ ಈವರೆಗೂ ಯಾವುದೇ ಅನುಮತಿ ಇಲ್ಲದೆ ಗೈರು ಹಾಜರಾಗಿದ್ದು, ಹೀಗಾಗಿ ಇವರ ಸೇವೆ ಇಲಾಖೆಗೆ ಅಗತ್ಯವಿಲ್ಲವೆಂದು ಪರಿಗಣಿಸಿ, ಇಬ್ಬರನ್ನೂ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ. https://kannadanewsnow.com/kannada/ima-scam-compensation-for-those-who-lost-money-ahead-of-ramzan-says-minister-krishna-byre-gowda/ https://kannadanewsnow.com/kannada/breaking-good-news-for-motorists-in-the-state-hsrp-number-plate-installation-extended-till-march-31/

Read More

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ ಮರಾಠಿ ಯುವಕರ ಗೂಂಡಾಗಿರಿ ಮುಂದುವರೆದಿದೆ. ಕನ್ನಡ ಮಾತಾಡಿದ್ದಕ್ಕೆ ಕರವೇ ತಾಲ್ಲೂಕು ಉಪಾಧ್ಯಕ್ಷನ ಮೇಲೆ ರಕ್ತ ಬರುವಂತೆ ಹಲ್ಲೆಯನ್ನು ಬೆಳಗಾವಿಯಲ್ಲಿ ಮರಾಠಿ ಯುವಕರು ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಉಪಾಧ್ಯಕ್ಷ ಜಯವಂತ ನಿಡಗಲ್ಕರ್ ಮೇಲೆ ದಾಳಿಯನ್ನು ನಡೆಸಲಾಗಿದೆ. ಖಾನಾಪುರದ ಜಾಂಬೋಡಿ ಕ್ರಾಸ್ ಬಳಿಯಲ್ಲಿ ಈ ಘಟನೆ ನಡೆದಿದೆ. ಕನ್ನಡ ಮಾತನಾಡಿದ್ದಕ್ಕಾಗಿ ಕರವೇ ನಾರಾಯಣಗೌಡ ಬಣದ ಖಾನಾಪುರ ತಾಲ್ಲೂಕು ಉಪಾಧ್ಯಕ್ಷ ಜಯವಂತ ನಿಡಗಲ್ಕರ್ ಮೇಲೆ ರಕ್ತ ಬರುವಂತೆ ಹಲ್ಲೆಯನ್ನು ಮರಾಠಿ ಯುವಕರು ನಡೆಸಿದ್ದಾರೆ. ಕರವೇ ಉಪಾಧ್ಯಕ್ಷನ ಮೇಲೆ ಹಲ್ಲೆ ನಡೆಸಿದಂತ ಮರಾಠಿ ಪುಂಡರು, ಸ್ಥಳದಿಂದ ಪರಾರಿಯಾಗಿದ್ದಾರೆ. ಹಲ್ಲೆಗೆ ಒಳಗಾದಂತ ಜಯವಂತ ನಿಡಗಲ್ಕರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮತ್ತೊಂದೆಡೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ನಾಳೆ ಬೆಳಗಾವಿಗೆ ಮರಾಠಿ ಯುವಕರ ಪುಂಡಾಟ ಘಟನೆಯ ಸಂಬಂಧ ಭೇಟಿ ನೀಡಲಿದ್ದಾರೆ. ಇದೇ ಹೊತ್ತಿನಲ್ಲಿ ಅವರ ತಾಲ್ಲೂಕು ಕರವೇ ಉಪಾಧ್ಯಕ್ಷನ ಮೇಲೆ ಹಲ್ಲೆ…

Read More

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ ಮರಾಠಿ ಯುವಕರ ಗೂಂಡಾಗಿರಿ ಮುಂದುವರೆದಿದೆ. ಕನ್ನಡ ಮಾತನಾಡಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಉಪಾಧ್ಯಕ್ಷನ ಮೇಲೆಯೇ ರಕ್ತ ಬರುವಂತೆ ಹಲ್ಲೆ ಮಾಡಲಾಗಿದೆ. ಬೆಳಗಾವಿಯ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಉಪಾಧ್ಯಕ್ಷನ ಮೇಲೆಯೇ ಮರಾಠಿ ಯುವಕರು ಗೂಂಡಾಗಿರಿ ಮಾಡಿದ್ದಾರೆ. ಕನ್ನಡ ಮಾತನಾಡಿದ್ದಕ್ಕೆ ಕರವೇ ತಾಲ್ಲೂಕು ಉಪಾಧ್ಯಕ್ಷನ ಮೇಲೆ ಹಲ್ಲೆ ಮಾಡಲಾಗಿದೆ. ರಕ್ತ ಬರುವಂತೆ ಬೆಳಗಾವಿಯ ತಾಲ್ಲೂಕು ಕರವೇ ಉಪಾಧ್ಯಕ್ಷನ ಮೇಲೆ ಮರಾಠಿ ಯುವಕರು ಹಲ್ಲೆ ಮಾಡಿದ್ದಾರೆ. ಹೀಗಾಗಿ ಮತ್ತೆ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದಷ್ಟೇ ಕೆ ಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಕನ್ನಡ ಬರೋದಿಲ್ವ, ಕನ್ನಡ ಮಾತನಾಡು ಎಂದಿದ್ದಕ್ಕೆ ಬಸ್ ನಿಲ್ಲಿಸಿ ಯುವಕರು ಹಲ್ಲೆ ಮಾಡಿದ್ದರು. ಈ ಸಂಬಂಧ ಕೆಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/pm-modis-move-has-been-widely-appreciated-by-netizens/ https://kannadanewsnow.com/kannada/super-offer-for-those-who-have-this-rs-2-coin-money-will-rain-5-lakh-rupees-will-be-your-own/ https://kannadanewsnow.com/kannada/breaking-good-news-for-motorists-in-the-state-hsrp-number-plate-installation-extended-till-march-31/

Read More

ಭೋಪಾಲ್: ವಾರ್ಷಿಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭೋಪಾಲ್ ನಲ್ಲಿ ಪ್ರಾರಂಭವಾಗುವ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ವೇಳಾಪಟ್ಟಿಯನ್ನು ಬದಲಾಯಿಸಿದ್ದಾರೆ ಎಂದು ಅಧಿಕಾರಿಯೊಬ್ಬರು  ತಿಳಿಸಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಈ ನಡೆಗೆ ನೆಟ್ಟಿಗರು ಭಾರೀ ಮೆಚ್ಚುಗೆ, ಪ್ರಶಂಸೆ, ಶ್ಲಾಘನೆಯನ್ನು ವ್ಯಕ್ತ ಪಡಿಸಿದ್ದಾರೆ. ಫೆಬ್ರವರಿ 24ರ ಇಂದು ನಡೆಯಲಿರುವ ‘ಇನ್ವೆಸ್ಟ್ ಮಧ್ಯಪ್ರದೇಶ – ಜಾಗತಿಕ ಹೂಡಿಕೆದಾರರ ಶೃಂಗಸಭೆ -2025’ ಗೆ ಮೋದಿ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸೋದಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯವಾದ ಕಾರಣ ತಮ್ಮ ಪ್ರಯಾಣದ ವೇಳಾಪಟ್ಟಿಯನ್ನೇ ಬದಲಾಯಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಿ ತಮ್ಮ ಕಾರ್ಯಕ್ರಮವನ್ನು 15 ನಿಮಿಷಗಳವರೆಗೆ ವಿಸ್ತರಿಸಿದರು. ಬೆಳಿಗ್ಗೆ 9.45ಕ್ಕೆ ಹೊರಡಬೇಕಿದ್ದಂತ ವೇಳಾಪಟ್ಟಿಯನ್ನು ಬದಲಾಯಿಸಿ ಬೆಳಿಗ್ಗೆ 10 ಗಂಟೆಗೆ ಹೊರಟರು. ಈ ಕಾರಣದಿಂದಾಗಿ ಇಂದು ಭೂಪಾಲ್ ನಲ್ಲಿ ನಡೆಯುತ್ತಿದ್ದಂತ ವಾರ್ಷಿಕ ಪರೀಕ್ಷೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಸರಿಯಾದ ಸಮಯದಲ್ಲಿ ತಲುಪೋದಕ್ಕೆ ಸಾಧ್ಯವಾಯಿತು. ಒಂದು ವೇಳೆ ಮೋದಿ ಬೆಳಿಗ್ಗೆ…

Read More